AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today – ದಿನ ಭವಿಷ್ಯ; ಈ ರಾಶಿಯವರಿಗೆ ಒಳಿತು ತರಲಿದೆ ಈ ಭಾನುವಾರ

ಪ್ಲವನಾಮ ಸಂವತ್ಸರ, ಉತ್ತರಾಯಣ, ಜ್ಯೇಷ್ಠ ಮಾಸ, ಗ್ರೀಷ್ಮ ಋತು, ಕೃಷ್ಣಪಕ್ಷ, ದಶಮಿ ತಿಥಿ, ಭಾನುವಾರ, ಜುಲೈ 04, 2021 ಭವಿಷ್ಯ.

Horoscope Today - ದಿನ ಭವಿಷ್ಯ; ಈ ರಾಶಿಯವರಿಗೆ ಒಳಿತು ತರಲಿದೆ ಈ ಭಾನುವಾರ
ರಾಶಿ ಭವಿಷ್ಯ
TV9 Web
| Edited By: ಆಯೇಷಾ ಬಾನು|

Updated on: Jul 04, 2021 | 6:21 AM

Share

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ಉತ್ತರಾಯಣ, ಜ್ಯೇಷ್ಠ ಮಾಸ, ಗ್ರೀಷ್ಮ ಋತು, ಕೃಷ್ಣಪಕ್ಷ, ದಶಮಿ ತಿಥಿ, ಭಾನುವಾರ, ಜುಲೈ 04, 2021. ಅಶ್ವಿನಿ ನಕ್ಷತ್ರ, ರಾಹುಕಾಲ: ಇಂದು ಸಂಜೆ 5:15ಇಂದ ಇಂದು ರಾತ್ರಿ 6:53 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.46. ಸೂರ್ಯಾಸ್ತ: ಸಂಜೆ 6.54

ತಾ.04-07-2021 ರ ಭಾನುವಾರದ ರಾಶಿಭವಿಷ್ಯ.

ಮೇಷ: ಕೆಲಸದಲ್ಲಿ ಅಭಿವೃದ್ಧಿ ಇದೆ. ಹಣಕಾಸಿನ ವ್ಯವಹಾರವನ್ನು ತಾಳ್ಮೆಯಿಂದ ನಿಭಾಯಿಸಿ. ಮನೆಯಲ್ಲಿ ಸಂಭ್ರಮದ ವಾತಾವರಣ ಇರುವುದು. ಮಂಗಲ ಕಾರ್ಯ ಜರುಗುವವು. ಶುಭ ಸಂಖ್ಯೆ: 5

ವೃಷಭ: ಗಂಭೀರ ಆರೋಪದಿಂದ ಮುಕ್ತರಾಗುವಿರಿ. ಅನುಕೂಲಕರ ವಾತಾವರಣ ಇರುವುದರಿಂದ ಇನ್ನೂ ಹೆಚ್ಚಿನ ವ್ಯವಹಾರಿಕ ಸುಧಾರಣೆ ಮಾಡಲು ಪ್ರಯತ್ನಿಸಿರಿ. ಆರೋಗ್ಯದ ಸೂಕ್ತ ಕಾಳಜಿ ವಹಿಸಿರಿ. ಶುಭ ಸಂಖ್ಯೆ: 9

ಮಿಥುನ:ಉದ್ಯೋಗ ಸಂಬಂಧಿತ ಸಮಸ್ಯೆಗಳು ಎದುರಾಗುವವು. ಅನವಶ್ಯಕ ಭಯ ಅಗತ್ಯವಿಲ್ಲ, ನಿಮ್ಮ ಸೇವೆ ಫಲ ನೀಡುವದು. ಸಂಕಷ್ಟದ ಮಧ್ಯೆಯೂ ಸಂತೋಷದ ದಿನಗಳಿವೆ. ಆಗಂತುಕರೊಂದಿಗೆ ಜಾಗೃತೆ ಅಗತ್ಯ. ಶುಭ ಸಂಖ್ಯೆ: 2

ಕಟಕ: ಸ್ವಪ್ರತಿಷ್ಟೆ ಬಿಟ್ಟು ಬಲ್ಲವರ ಸಹಾಯ ಪಡೆಯಿರಿ. ಮರೆತು ಹೋದ ವಸ್ತು ಲಾಭದಾಯಕವಾಗಿ ಪರಿಣಮಿಸುವದು. ಹಳೆಯ ಮಿತ್ರರ ಒಡನಾಟ ಸಂತಸ ತರುವದು. ಆರ್ಥಿಕ ಸ್ಥಿತಿಯಲ್ಲಿ ಬೆಳವಣಿಗೆ ಇರುವದು. 6

ಸಿಂಹ: ನೆನೆಗುದಿಗೆ ಬಿದ್ದ ಕೆಲಸಗಳಿಗೆ ಚಾಲನೆ ದೊರೆಯುವದು. ಮಾನಸಿಕ ಉತ್ಸಾಹ ಕಂಡುಬರುವದು. ಆತ್ಮೀಯರಿಗೆ ಉನ್ನತ ಅಧಿಕಾರ ದೊರೆಯುವದು. ಕಾರಣಾಂತರ ಅಧಿಕ ಖರ್ಚುಬರಬಹುದು. ಶುಭ ಸಂಖ್ಯೆ: 7

ಕನ್ಯಾ: ಪೂರ್ವತಯಾರಿ ಇಲ್ಲದ ಕೆಲಸವನ್ನೂ ಸಕಾಲಕ್ಕೆ ಮುಗಿಸುವಿರಿ. ಅನಿಯಮಿತ ಬದುಕು ಇರುವುದು. ಮೇಲಧಿಕಾರಿಗಳ ಒತ್ತಡ ಬೇಸರ ತರುವದು. ಕಾರ್ಯಕ್ಷೇತ್ರದಲ್ಲಿ ಗೌರವ ಪ್ರಾಪ್ತಿಯಾಗುವದು. ಶ್ರಮಕ್ಕೆ ತಕ್ಕ ಲಾಭ ದೊರೆಯುವದು. ಶುಭ ಸಂಖ್ಯೆ: 1

ತುಲಾ: ಎಲ್ಲವನ್ನು ಹಗುರವಾಗಿ ಕಾಣುವದರಿಂದ ಸಣ್ಣ ವಿಷಯವೂ ದೊಡ್ಡ ಸಮಸ್ಯೆಯಾಗುವದು. ಹಣಕಾಸಿನ ತೊಂದರೆಗಳು ಕಂಡುಬರುವವು. ಮಹತ್ವದ ಕೆಲಸಗಳು ಅರ್ಧಕ್ಕೆ ನಿಲ್ಲುವ ಸಾಧ್ಯತೆ ಇದೆ. ಎಚ್ಚರಿಕೆ ವಹಿಸಿರಿ. ಶುಭ ಸಂಖ್ಯೆ: 3

ವೃಶ್ಚಿಕ: ಉದಾಸೀನತೆಯಿಂದ ಕಾರ್ಯಹಾನಿ ಸಂಭವ. ಅನುಮಾನಗಳು ಮೂಡಿ ಕೈಗೊಂಡ ಕಾರ್ಯಕ್ಕೆ ವಿಘ್ನ ಉಂಟಾಗುವ ಸಂಭವವಿದೆ. ಸಾಮಾಜಿಕ ಗೌರವನ್ನು ಉಳಿಸಿಕೊಳ್ಳುವಲ್ಲಿ ಸಫಲರಾಗುವಿರಿ. ಶುಭ ಸಂಖ್ಯೆ: 8

ಧನು: ವಿಶ್ರಾಂತಿ ಇಲ್ಲದ ದುಡಿಮೆ ಬೇಸರ ತರುವದು. ಜವಾಬ್ದಾರಿಗಳ ಹಂಚಿಕೆ ಮಾಡುವ ಪ್ರಮೇಯ ಉಂಟಾಗುವದು. ಮಿತಿ ಮೀರಿದ ಆಲೋಚನೆಗಳು ದಿಕ್ಕು ತಪ್ಪಿಸುವ ಸಾಧ್ಯತೆ ಇದೆ. ಆರ್ಥಿಕ ಲಾಭ ಇಲ್ಲದಿದ್ದರೂ ಹಾನಿ ಇರುವದಿಲ್ಲ. ಶುಭ ಸಂಖ್ಯೆ:4

ಮಕರ: ಅನವಶ್ಯಕ ಅಲೆದಾಟದ ಸಾದ್ಯತೆ ಇದೆ. ಕರ್ತವ್ಯಕ್ಕೆ ಚ್ಯುತಿಯಾಗದಂತೆ ನಡೆದುಕೊಳ್ಳಲು ಪ್ರಯತ್ನ ಮಾಡುವಿರಿ. ಹಿತಶತ್ರುಗಳಿಂದ ತೊಂದರೆಯಾಗುವ ಸಾಧ್ಯತೆÉ ಇದೆ. ಆರ್ಥಿಕಬಲ ಕುಗ್ಗುವ ಸಂಭವವಿದೆ. ವ್ಯವಹಾರಗಳಲ್ಲಿ ಎಚ್ಚರಿಕೆ ಇರಲಿ. 6

ಕುಂಭ: ಅನಾವಶ್ಯಕ ತಿರುಗಾಟ, ನೌಕರಿಯಲ್ಲಿ ಕಿರಿಕಿರಿ, ಸ್ಥಾನಪಲ್ಲಟ ಸಾಧ್ಯತೆ, ಬಡ್ತಿಯೋಗ, ವ್ಯಾಪಾರಿಗಳಿಗೆ ಸ್ಥಳದ ವಿಚಾರವಾಗಿ ಚಿಂತೆ ಇರುವದು. ಮಹಿಳೆಯರು, ವಿದ್ಯಾರ್ಥಿಗಳಿಗೆ ಸಂತೋಷ ಇರುವದು. ತರಕಾರಿ ದಾನ ಮಾಡಿರಿ. ಶುಭ ಸಂಖ್ಯೆ: 2

ಮೀನ: ಆರಂಭದಲ್ಲಿ ಹರ್ಷ, ಉತ್ಸಾಹ ಇರುವದು ಕೊನೆಗೆ ಮನೋವ್ಯಥೆ. ಮನೆಯಲ್ಲಿ ಸಂತೋಷದ ವಾತಾವರಣ ಇರುವದು. ಗ್ರಹೋಪಯೋಗಿ ವಸ್ತುಗಳ ಖರೀದಿ, ಮನೆ ರಿಪೇರಿ ಮೊದಲಾದ ಕೆಲಸಗಳಾಗುವವು. ಶ್ರೀಲಕ್ಷ್ಮೀಸ್ತೋತ್ರ ಪಠಿಸಿರಿ. ಶುಭ ಸಂಖ್ಯೆ: 3

Dina Bhavishya

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

Follow Us
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!