AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today – ದಿನ ಭವಿಷ್ಯ; ಈ ರಾಶಿಯವರಿಗೆ ಒಳಿತು ತರಲಿದೆ ಈ ಭಾನುವಾರ

ಪ್ಲವನಾಮ ಸಂವತ್ಸರ, ಉತ್ತರಾಯಣ, ಜ್ಯೇಷ್ಠ ಮಾಸ, ಗ್ರೀಷ್ಮ ಋತು, ಕೃಷ್ಣಪಕ್ಷ, ದಶಮಿ ತಿಥಿ, ಭಾನುವಾರ, ಜುಲೈ 04, 2021 ಭವಿಷ್ಯ.

Horoscope Today - ದಿನ ಭವಿಷ್ಯ; ಈ ರಾಶಿಯವರಿಗೆ ಒಳಿತು ತರಲಿದೆ ಈ ಭಾನುವಾರ
ರಾಶಿ ಭವಿಷ್ಯ
TV9 Web
| Edited By: ಆಯೇಷಾ ಬಾನು|

Updated on: Jul 04, 2021 | 6:21 AM

Share

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ಉತ್ತರಾಯಣ, ಜ್ಯೇಷ್ಠ ಮಾಸ, ಗ್ರೀಷ್ಮ ಋತು, ಕೃಷ್ಣಪಕ್ಷ, ದಶಮಿ ತಿಥಿ, ಭಾನುವಾರ, ಜುಲೈ 04, 2021. ಅಶ್ವಿನಿ ನಕ್ಷತ್ರ, ರಾಹುಕಾಲ: ಇಂದು ಸಂಜೆ 5:15ಇಂದ ಇಂದು ರಾತ್ರಿ 6:53 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.46. ಸೂರ್ಯಾಸ್ತ: ಸಂಜೆ 6.54

ತಾ.04-07-2021 ರ ಭಾನುವಾರದ ರಾಶಿಭವಿಷ್ಯ.

ಮೇಷ: ಕೆಲಸದಲ್ಲಿ ಅಭಿವೃದ್ಧಿ ಇದೆ. ಹಣಕಾಸಿನ ವ್ಯವಹಾರವನ್ನು ತಾಳ್ಮೆಯಿಂದ ನಿಭಾಯಿಸಿ. ಮನೆಯಲ್ಲಿ ಸಂಭ್ರಮದ ವಾತಾವರಣ ಇರುವುದು. ಮಂಗಲ ಕಾರ್ಯ ಜರುಗುವವು. ಶುಭ ಸಂಖ್ಯೆ: 5

ವೃಷಭ: ಗಂಭೀರ ಆರೋಪದಿಂದ ಮುಕ್ತರಾಗುವಿರಿ. ಅನುಕೂಲಕರ ವಾತಾವರಣ ಇರುವುದರಿಂದ ಇನ್ನೂ ಹೆಚ್ಚಿನ ವ್ಯವಹಾರಿಕ ಸುಧಾರಣೆ ಮಾಡಲು ಪ್ರಯತ್ನಿಸಿರಿ. ಆರೋಗ್ಯದ ಸೂಕ್ತ ಕಾಳಜಿ ವಹಿಸಿರಿ. ಶುಭ ಸಂಖ್ಯೆ: 9

ಮಿಥುನ:ಉದ್ಯೋಗ ಸಂಬಂಧಿತ ಸಮಸ್ಯೆಗಳು ಎದುರಾಗುವವು. ಅನವಶ್ಯಕ ಭಯ ಅಗತ್ಯವಿಲ್ಲ, ನಿಮ್ಮ ಸೇವೆ ಫಲ ನೀಡುವದು. ಸಂಕಷ್ಟದ ಮಧ್ಯೆಯೂ ಸಂತೋಷದ ದಿನಗಳಿವೆ. ಆಗಂತುಕರೊಂದಿಗೆ ಜಾಗೃತೆ ಅಗತ್ಯ. ಶುಭ ಸಂಖ್ಯೆ: 2

ಕಟಕ: ಸ್ವಪ್ರತಿಷ್ಟೆ ಬಿಟ್ಟು ಬಲ್ಲವರ ಸಹಾಯ ಪಡೆಯಿರಿ. ಮರೆತು ಹೋದ ವಸ್ತು ಲಾಭದಾಯಕವಾಗಿ ಪರಿಣಮಿಸುವದು. ಹಳೆಯ ಮಿತ್ರರ ಒಡನಾಟ ಸಂತಸ ತರುವದು. ಆರ್ಥಿಕ ಸ್ಥಿತಿಯಲ್ಲಿ ಬೆಳವಣಿಗೆ ಇರುವದು. 6

ಸಿಂಹ: ನೆನೆಗುದಿಗೆ ಬಿದ್ದ ಕೆಲಸಗಳಿಗೆ ಚಾಲನೆ ದೊರೆಯುವದು. ಮಾನಸಿಕ ಉತ್ಸಾಹ ಕಂಡುಬರುವದು. ಆತ್ಮೀಯರಿಗೆ ಉನ್ನತ ಅಧಿಕಾರ ದೊರೆಯುವದು. ಕಾರಣಾಂತರ ಅಧಿಕ ಖರ್ಚುಬರಬಹುದು. ಶುಭ ಸಂಖ್ಯೆ: 7

ಕನ್ಯಾ: ಪೂರ್ವತಯಾರಿ ಇಲ್ಲದ ಕೆಲಸವನ್ನೂ ಸಕಾಲಕ್ಕೆ ಮುಗಿಸುವಿರಿ. ಅನಿಯಮಿತ ಬದುಕು ಇರುವುದು. ಮೇಲಧಿಕಾರಿಗಳ ಒತ್ತಡ ಬೇಸರ ತರುವದು. ಕಾರ್ಯಕ್ಷೇತ್ರದಲ್ಲಿ ಗೌರವ ಪ್ರಾಪ್ತಿಯಾಗುವದು. ಶ್ರಮಕ್ಕೆ ತಕ್ಕ ಲಾಭ ದೊರೆಯುವದು. ಶುಭ ಸಂಖ್ಯೆ: 1

ತುಲಾ: ಎಲ್ಲವನ್ನು ಹಗುರವಾಗಿ ಕಾಣುವದರಿಂದ ಸಣ್ಣ ವಿಷಯವೂ ದೊಡ್ಡ ಸಮಸ್ಯೆಯಾಗುವದು. ಹಣಕಾಸಿನ ತೊಂದರೆಗಳು ಕಂಡುಬರುವವು. ಮಹತ್ವದ ಕೆಲಸಗಳು ಅರ್ಧಕ್ಕೆ ನಿಲ್ಲುವ ಸಾಧ್ಯತೆ ಇದೆ. ಎಚ್ಚರಿಕೆ ವಹಿಸಿರಿ. ಶುಭ ಸಂಖ್ಯೆ: 3

ವೃಶ್ಚಿಕ: ಉದಾಸೀನತೆಯಿಂದ ಕಾರ್ಯಹಾನಿ ಸಂಭವ. ಅನುಮಾನಗಳು ಮೂಡಿ ಕೈಗೊಂಡ ಕಾರ್ಯಕ್ಕೆ ವಿಘ್ನ ಉಂಟಾಗುವ ಸಂಭವವಿದೆ. ಸಾಮಾಜಿಕ ಗೌರವನ್ನು ಉಳಿಸಿಕೊಳ್ಳುವಲ್ಲಿ ಸಫಲರಾಗುವಿರಿ. ಶುಭ ಸಂಖ್ಯೆ: 8

ಧನು: ವಿಶ್ರಾಂತಿ ಇಲ್ಲದ ದುಡಿಮೆ ಬೇಸರ ತರುವದು. ಜವಾಬ್ದಾರಿಗಳ ಹಂಚಿಕೆ ಮಾಡುವ ಪ್ರಮೇಯ ಉಂಟಾಗುವದು. ಮಿತಿ ಮೀರಿದ ಆಲೋಚನೆಗಳು ದಿಕ್ಕು ತಪ್ಪಿಸುವ ಸಾಧ್ಯತೆ ಇದೆ. ಆರ್ಥಿಕ ಲಾಭ ಇಲ್ಲದಿದ್ದರೂ ಹಾನಿ ಇರುವದಿಲ್ಲ. ಶುಭ ಸಂಖ್ಯೆ:4

ಮಕರ: ಅನವಶ್ಯಕ ಅಲೆದಾಟದ ಸಾದ್ಯತೆ ಇದೆ. ಕರ್ತವ್ಯಕ್ಕೆ ಚ್ಯುತಿಯಾಗದಂತೆ ನಡೆದುಕೊಳ್ಳಲು ಪ್ರಯತ್ನ ಮಾಡುವಿರಿ. ಹಿತಶತ್ರುಗಳಿಂದ ತೊಂದರೆಯಾಗುವ ಸಾಧ್ಯತೆÉ ಇದೆ. ಆರ್ಥಿಕಬಲ ಕುಗ್ಗುವ ಸಂಭವವಿದೆ. ವ್ಯವಹಾರಗಳಲ್ಲಿ ಎಚ್ಚರಿಕೆ ಇರಲಿ. 6

ಕುಂಭ: ಅನಾವಶ್ಯಕ ತಿರುಗಾಟ, ನೌಕರಿಯಲ್ಲಿ ಕಿರಿಕಿರಿ, ಸ್ಥಾನಪಲ್ಲಟ ಸಾಧ್ಯತೆ, ಬಡ್ತಿಯೋಗ, ವ್ಯಾಪಾರಿಗಳಿಗೆ ಸ್ಥಳದ ವಿಚಾರವಾಗಿ ಚಿಂತೆ ಇರುವದು. ಮಹಿಳೆಯರು, ವಿದ್ಯಾರ್ಥಿಗಳಿಗೆ ಸಂತೋಷ ಇರುವದು. ತರಕಾರಿ ದಾನ ಮಾಡಿರಿ. ಶುಭ ಸಂಖ್ಯೆ: 2

ಮೀನ: ಆರಂಭದಲ್ಲಿ ಹರ್ಷ, ಉತ್ಸಾಹ ಇರುವದು ಕೊನೆಗೆ ಮನೋವ್ಯಥೆ. ಮನೆಯಲ್ಲಿ ಸಂತೋಷದ ವಾತಾವರಣ ಇರುವದು. ಗ್ರಹೋಪಯೋಗಿ ವಸ್ತುಗಳ ಖರೀದಿ, ಮನೆ ರಿಪೇರಿ ಮೊದಲಾದ ಕೆಲಸಗಳಾಗುವವು. ಶ್ರೀಲಕ್ಷ್ಮೀಸ್ತೋತ್ರ ಪಠಿಸಿರಿ. ಶುಭ ಸಂಖ್ಯೆ: 3

Dina Bhavishya

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್