AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ಒಂದೇ ಮನಸಿನ ಕ್ರೀಯಾಶೀಲವಾದ ಬದುಕು ಸಾಧನೆಗೆ ಕಾರಣವಾಗುವುದು

Horoscope ಜುಲೈ 06, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ಒಂದೇ ಮನಸಿನ ಕ್ರೀಯಾಶೀಲವಾದ ಬದುಕು ಸಾಧನೆಗೆ ಕಾರಣವಾಗುವುದು
ದಿನ ಭವಿಷ್ಯ
TV9 Web
| Edited By: |

Updated on:Jul 06, 2021 | 2:22 PM

Share

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ಉತ್ತರಾಯಣ, ಜ್ಯೇಷ್ಠ ಮಾಸ, ಗ್ರೀಷ್ಮ ಋತು, ಕೃಷ್ಣಪಕ್ಷ, ದ್ವಾದಶಿ ತಿಥಿ, ಮಂಗಳವಾರ, ಜುಲೈ 06, 2021. ಕೃತ್ತಿಕೆ ನಕ್ಷತ್ರ, ರಾಹುಕಾಲ: ಇಂದು ಸಂಜೆ 3.36 ರಿಂದ ಇಂದು ಸಂಜೆ 5. 14 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.46. ಸೂರ್ಯಾಸ್ತ: ಸಂಜೆ 6.54

ತಾ.06-07-2021 ರ ಮಂಗಳವಾರದ ರಾಶಿಭವಿಷ್ಯ

ಮೇಷ: ಗೊಂದಲಕ್ಕೆ ಒಳಗಾಗದೇ ಮುನ್ನುಗ್ಗಿರಿ. ಕೆಲಸದಲ್ಲಿ ಸ್ಪಷ್ಟತೆ ಇರಲಿ. ಅಲ್ಪಧನಲಾಭವಾದರೂ ಹಳೆಯ ಸಾಲ ತೀರುವುದು. ಹಿರಿಯರ ಆರೋಗ್ಯದಲ್ಲಿ ಏರುಪೇರಾಗುವ ಸಾಧ್ಯತೆ ಇದೆ. ಶುಭ ಸಂಖ್ಯೆ: 1

ವೃಷಭ: ಒಂದೇ ಮನಸಿನ ಕ್ರೀಯಾಶೀಲವಾದ ಬದುಕು ಸಾಧನೆಗೆ ಕಾರಣವಾಗುವುದು. ಅಡೆತಡೆಗಳ ನಿವಾರಣೆಯಾಗುವುದು. ನಿಶ್ಚಿತ ಅವಧಿಯ ಪರೀಕ್ಷೆಗಳು ಎದುರಾದರೂ ಬಲಗುಂದುವುದಿಲ್ಲ. ಹಿರಿಯರ ಸಲಹೆ ದೊರೆಯುವುದು. ಶುಭ ಸಂಖ್ಯೆ: 9

ಮಿಥುನ: ಶಾಂತಚಿತ್ತರಾಗಿ ಕೆಲಸ ನಿರ್ವಹಿಸಿರಿ. ಹೊಸ ವ್ಯಾಪಾರ, ಉದ್ಯೋಗದ ಅವಕಾಶಗಳು ಕೂಡಿ ಬರುವವು. ಹಳೆಯ ಸಮಸ್ಯೆಗಳು ಪರಿಹಾರವಾಗುವವು. ಶುಭಕಾರ್ಯದಲ್ಲಿ ಪಾಲ್ಗೊಳ್ಳುವಿರಿ. ಶುಭ ಸಂಖ್ಯೆ: 6

ಕಟಕ: ಪ್ರಾಮಾಣಿಕ ಪ್ರಯತ್ನಕ್ಕೆ ತಕ್ಕಂತೆ ಕೆಲಸಗಳು ಕೈಗೂಡುವವು. ಮಾತು ಕೇಳದ ಜನರಿಂದ ದೂರವಿರಿ. ಲೇವಾದೇವಿ ವ್ಯವಹಾರದಲ್ಲಿ ಅನಿರೀಕ್ಷಿತ ಏರಿಕೆ ಕಂಡುಬರುವುದು. ಆಸ್ತಿ ಖರೀದಿ ಯೋಗವಿದೆ ಪ್ರಯತ್ನಿಸಿ. ಶುಭ ಸಂಖ್ಯೆ: 2

ಸಿಂಹ: ಶತ್ರುಗಳ ಉಪಟಳವು ಆಗಾಗ ಕಂಡುಬಂದರೂ ಧೈರ್ಯದಿಂದ ಕಾರ್ಯ ಸಾಧಿಸುವಿರಿ. ಇಷ್ಟಸಿದ್ಧಿಯ ಕಾಲ ಇರುವುದರಿಂದ ಅನೇಕ ರೀತಿಯ ಭೋಗಭಾಗ್ಯಗಳು ಕೂಡಿಬರಲಿವೆ. ಸಾಂಸಾರಿಕ ಸಮಸ್ಯೆಗಳು ಪರಿಹಾರವಾಗುವವು. ಶುಭ ಸಂಖ್ಯೆ: 8

ಕನ್ಯಾ: ವಿವಿಧ ಮೂಲಗಳಿಂದ ಸಹಾಯ ದೊರೆಯುವುದು. ಉದ್ಯೋಗದಲ್ಲಿ ಅಭಿವೃದ್ಧಿ ಇರುವುದು. ಸಾಮಾಜಿಕ ಕಾರ್ಯಗಳಲ್ಲಿ ಭಾಗವಹಿಸುವಿರಿ. ಲೆಕ್ಕಾಚಾರ ತಪ್ಪದಂತೆ ಎಚ್ಚರವಹಿಸಿರಿ. ಮನೆಯಲ್ಲಿ ಮಂಗಲಕಾರ್ಯ ಜರುಗುವುದು. ಶುಭ ಸಂಖ್ಯೆ: 3

ತುಲಾ: ಹಿರಿಯರ ಮಾರ್ಗದರ್ಶನ ದೊರೆಯಲಿದೆ. ಆತ್ಮೀಯರೊಂದಿಗೆ ವಾದವಿವಾದ ಮಾಡಬೇಡಿ. ಮದುವೆಯ ಮಾತುಕತೆ ಕೈಗೂಡುವ ಸಾಧ್ಯತೆ ಇದೆ. ವ್ಯವಹಾರಿಕ ಜಾಣತನದಿಂದ ಲಾಭವಾಗಲಿದೆ. ಮನೆಯಲ್ಲಿ ಸಂತಸ ಕಂಡುಬರುವದು. ಶುಭ ಸಂಖ್ಯೆ: 6

ವೃಶ್ಚಿಕ: ಆಶೆ ಆಕಾಂಕ್ಷಗಳ ಈಡೇರಿಕೆಗಾಗಿ ಪ್ರಯತ್ನಿಸುವಿರಿ. ಅಪೇಕ್ಷಿತ ಧನಸಹಾಯ ದೊರೆಯುವದು. ಸಹೋದರ ಸಹಕಾರ ತೋರುವದರಿಂದ ನಿರಾತಂಕವಾಗಿ ಕಾರ್ಯ ಪೂರ್ಣವಾಗುವದು. ಮನೆಯಲ್ಲಿ ಸಂತಸದ ವಾತಾವರಣ ಇರುವದು. ಶುಭ ಸಂಖ್ಯೆ: 4

ಧನು: ಕೈಹಾಕಿದ ಕೆಲಸಗಳು ನಿರಾತಂಕವಾಗಿ ಮುಂದುವರೆಯುವವು. ಉತ್ತಮವಾದ ಸಮಯ ಇರುವದರಿಂದ ಮನೆಯಲ್ಲಿ ಸಂಭ್ರಮದ ವಾತಾವರಣ ಇರುವುದು. ಹೊಸ ಯೋಜನೆಗಳಿಗೆ ಚಾಲನೆ ದೊರೆಯುವುದು. ಶುಭ ಸಂಖ್ಯೆ: 7

ಮಕರ: ಉದ್ಯೋಗ ಬದಲಿ ಮಾಡುವದು ಸದ್ಯ ಬೇಡ.ಹಣದ ಕೊರತೆ ಇರಲಾರದು. ಮಾಡುವ ಕಾರ್ಯಗಳಲ್ಲಿ ಯಶಸ್ಸು ದೊರೆಯುವದು. ಪಿತ್ರಾರ್ಜಿತ ಆಸ್ತಿ ದೊರೆಯುವ ಯೋಗವಿದೆ. ತಂದೆತಾಯಿಯ ವಿಷಯದಲ್ಲಿ ಚಿಂತೆ ಇರುವದು. ಶುಭ ಸಂಖ್ಯೆ: 5

ಕುಂಭ: ಬುದ್ಧಿ ಚಂಚಲವಾಗಿ ಹಿಡಿದ ಕಾರ್ಯ ಅರ್ದಕ್ಕೆ ನಿಲ್ಲುವ ಸಂಭವವಿದೆ. ಅಕಾಲಿಕ ಒತ್ತಡಗಳಿಂದ ಕಾರ್ಯಹಾನಿ. ಉನ್ನತ ಅಧಿಕಾರಿಗಳಿಂದ ತೊಂದರೆ ಉಂಟಾಗುವದು. ಆತ್ಮವಿಶ್ವಾಸದಿಂದ ಮುಂದುವರೆಯಿರಿ. ಶುಭ ಸಂಖ್ಯೆ: 3

ಮೀನ: ಅತಿಯಾದ ಮಾತು ಅಪಾಯಕ್ಕೆ ಕಾರಣ. ಆಲಸ್ಯದಿಂದ ಕಾರ್ಯಹಾನಿಯಾಗುವ ಸಾಧ್ಯತೆ ಇದೆ. ಆಸ್ತಿ ವ್ಯವಹಾರಗಳಲ್ಲಿ ತಜ್ಞರ ಸಹಾಯ ಪಡೆಯಿರಿ. ನೌಕರರಿಗೆ ಅಪೇಕ್ಷಿತ ಸ್ಥಾನಕ್ಕೆ ವರ್ಗಾವಣೆಯ ಆಗುವ ಯೋಗವಿದೆ. ಶುಭ ಸಂಖ್ಯೆ: 9

Dina Bhavishya

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

Published On - 6:45 am, Tue, 6 July 21

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ