AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ಜಿಪುಣತನದಿಂದ ತೊಂದರೆಯಾಗುವ ಸಾಧ್ಯತೆ ಇದೆ

Horoscope ಜುಲೈ 17, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ಜಿಪುಣತನದಿಂದ ತೊಂದರೆಯಾಗುವ ಸಾಧ್ಯತೆ ಇದೆ
ದಿನ ಭವಿಷ್ಯ
TV9 Web
| Updated By: Skanda|

Updated on: Jul 17, 2021 | 6:30 AM

Share

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯಣ, ಆಷಾಢ ಮಾಸ, ಗ್ರೀಷ್ಮ ಋತು, ಶುಕ್ಲಪಕ್ಷ, ಅಷ್ಟಮಿ ತಿಥಿ, ಶನಿವಾರ, ಜುಲೈ 17, 2021. ಚಿತ್ತೆ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 9.05 ರಿಂದ ಇಂದು ಬೆಳಿಗ್ಗೆ 10.42 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.50. ಸೂರ್ಯಾಸ್ತ: ಸಂಜೆ 6.53

ತಾ.17-07-2021 ರ ಶನಿವಾರದ ರಾಶಿಭವಿಷ್ಯ,

ಮೇಷ: ಗಂಭೀರ ಆರೋಪದಿಂದ ಮುಕ್ತರಾಗುವಿರಿ. ಅನುಕೂಲಕರ ವಾತಾವರಣ ಇರುವುದರಿಂದ ಇನ್ನೂ ಹೆಚ್ಚಿನ ವ್ಯವಹಾರಿಕ ಸುಧಾರಣೆ ಮಾಡಲು ಪ್ರಯತ್ನಿಸಿರಿ. ಆರೋಗ್ಯದ ಸೂಕ್ತ ಕಾಳಜಿ ವಹಿಸಿರಿ. ಶುಭ ಸಂಖ್ಯೆ: 9

ವೃಷಭ: ಜಿಪುಣತನದಿಂದ ತೊಂದರೆಯಾಗುವ ಸಾಧ್ಯತೆ ಇದೆ. ಸಹೋದರ ಸಂಬಂಧದಲ್ಲಿ ಭಿನ್ನಾಭಿಪ್ರಾಯ ಬರುವ ಸಾಧ್ಯತೆ ಇದೆ. ಪರಸ್ಪರ ದೋಷಾರೋಪ ಬೇಡ. ಮಿತ್ರರ ಸಹಾಯ ದೊರೆಯುವುದು. ಶುಭ ಸಂಖ್ಯೆ: 1

ಮಿಥುನ: ಮುಲಾಜಿಲ್ಲದ ಧೋರಣೆಯಿಂದ ವ್ಯವಹಾರದಲ್ಲಿ ನಷ್ಟ ಸಾಧ್ಯತೆ ಇರುವುದು. ಗಂಭೀರವಾದ ಪ್ರಮಾದವನ್ನು ಸಮರ್ಥಿಸುವುದರಿಂದ ಅಪವಾದಕ್ಕೆ ಗುರಿಯಾಗುವ ಸಂಭವವಿದೆ. ಹಿರಿಯರ ಸಲಹೆ ಪಡೆಯಿರಿ. ಶುಭ ಸಂಖ್ಯೆ: 8

ಕಟಕ: ಚಂಚಲಚಿತ್ತದಿಂದ ಕಾರ್ಯಹಾನಿಯಾಗುವ ಲಕ್ಷಣಗಳಿವೆ. ಆಸ್ತಿ ಸಂಬಂಧಿತ ಕ್ರಯವಿಕ್ರಯ ವ್ಯವಹಾರಗಳು ಕುದುರುವವು. ಅನವಶ್ಯಕ ಮಾತಿನಿಂದ ಇಕ್ಕಟ್ಟಿಗೆ ಸಿಕ್ಕಿಕೊಳ್ಳುವ ಸಾಧ್ಯತೆ ಇದೆ. ತಜ್ಞರ ಸಹಾಯ ಪಡೆಯಿರಿ. ಶುಭ ಸಂಖ್ಯೆ: 2

ಸಿಂಹ: ಜವಾಬ್ದಾರಿಯ ನಿಮಿತ್ತ ದೂರ ಪ್ರಯಾಣದ ಸಾಧ್ಯತೆ ಇದೆ. ಉದ್ಯೋಗದಲ್ಲಿ ಪ್ರಗತಿ ಇರುವುದು. ಅಹಂಭಾವದಿಂದ ಕಠಿಣ ಪರಿಸ್ಥಿತಿಯನ್ನು ಎದುರಿಸುವ ಪ್ರಸಂಗವಿದೆ ಎಚ್ಚರಿಕೆ ವಹಿಸಿರಿ. ನಮೃತೆಗೆ ಯೋಗ್ಯ ಸಮ್ಮಾನ ದೊರೆಯುವುದು. ಶುಭ ಸಂಖ್ಯೆ: 7

ಕನ್ಯಾ: ಹೊಸ ವಿಚಾರಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸುವಿರಿ. ಕಠಿಣ ಪರಿಸ್ಥಿತಿಯಲ್ಲಿಯೂ ದುರ್ಲಭ ಸಾಧನೆ ಮಾಡುವಿರಿ. ಪರಿವಾರದಲ್ಲಿ ಸಂತಸವಿರುವದು. ಕೇಡುಬಯಸುವ ಜನರಿಗೆ ಅಂಜದೇ ಮುಂದುವರಿಯಿರಿ. ಶುಭ ಸಂಖ್ಯೆ: 3

ತುಲಾ: ಭಾವುಕತೆಯಿಂದ ಕಾರ್ಯಸಾಧಿಸಲು ಪ್ರಯತ್ನಿಸುವಿರಿ. ಪರಾವಲಂಬಿ ವ್ಯವಹಾರದಲ್ಲಿ ಹೂಡಿಕೆ ಬೇಡ. ಸಂಶಯಿತ ನಡೆಯಿಂದ ಮನಸ್ತಾಪ. ಸಣ್ಣಪುಟ್ಟ ಕೆಲಸಗಳೂ ವಿಳಂಬವಾಗುವ ಸಾಧ್ಯತೆ ಇದೆ. ಅಭದ್ರತೆ ಕಾಡುವುದು. ಶುಭ ಸಂಖ್ಯೆ: 5

ವೃಶ್ಚಿಕ: ಪರಾವಲಂಬಿ ವ್ಯವಹಾರದಲ್ಲಿ ಹೂಡಿಕೆ ಬೇಡ. ಅತಿಯಾದ ಆತ್ಮವಿಶ್ವಾಸ ಪ್ರಗತಿಗೆ ಮಾರಕವಾಗುವ ಲಕ್ಷಣವಿದೆ. ಗಣ್ಯರ ಒಡನಾಟದಿಂದ ಮಹತ್ವದ ಕಾರ್ಯಗಳು ಸಿದ್ಧಿಸುವವು. ಅಪೇಕ್ಷಿತ ಧನಸಹಾಯ ದೊರೆಯುವುದು. ಶುಭ ಸಂಖ್ಯೆ: 4

ಧನು: ಲೇವಾದೇವಿ ವ್ಯವಹಾರದಲ್ಲಿ ಅನಿರೀಕ್ಷಿತ ಏರಿಕೆ ಕಂಡುಬರುವುದು. ಸಂಗಡಿಗರು ಸಹಕಾರ ತೋರುವುದರಿಂದ ನಿರಾತಂಕ ಜೀವನ ಇರುವುದು. ಮಾಡುವ ಕಾರ್ಯಗಳಲ್ಲಿ ಯಶಸ್ಸು ದೊರೆಯುವುದು. ಆರ್ಥಿಕ ಸಂಕಷ್ಟ ದೂರಾಗುವುದು. ಶುಭ ಸಂಖ್ಯೆ: 9

ಮಕರ: ಗಣ್ಯರೊಂದಿಗೆ ವ್ಯವಹಾರಿಕ ಬಾಂಧವ್ಯ ವೃದ್ಧಿಯಾಗುವುದು. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸಯೋಗವಿದೆ. ಶುಭ ಸಂಖ್ಯೆ: 2

ಕುಂಭ: ಆಶೆ ಆಕಾಂಕ್ಷೆಗಳ ಈಡೇರಿಕೆಗಾಗಿ ಪ್ರಯತ್ನಿಸುವಿರಿ. ಅಪೇಕ್ಷಿತ ಧನಸಹಾಯ ದೊರೆಯುವುದು. ಸಹೋದರ ಸಹಕಾರ ತೋರುವುದರಿಂದ ನಿರಾತಂಕವಾಗಿ ಕಾರ್ಯ ಪೂರ್ಣವಾಗುವುದು. ಮನೆಯಲ್ಲಿ ಸಂತಸದ ವಾತಾವರಣ ಇರುವುದು. ಶುಭ ಸಂಖ್ಯೆ: 1

ಮೀನ: ಕಾಯಕದಲ್ಲಿ ಯಶಸ್ಸು, ಕೀರ್ತಿ, ಧನಲಾಭ, ಉದ್ಯೋಗ ಪ್ರಾಪ್ತಿಯ ಯೋಗವಿದೆ. ಮೊದಲು ಕಷ್ಟ ನಂತರದಲ್ಲಿ ಉತ್ತಮವಾದ ಫಲ ದೊರೆಯುವುದು. ಗುರುಬಲ ವೃದ್ಧಿಸುವುದು. ವೈವಾಹಿಕ ಮಾತುಕತೆಗೆ ಕಾಲಕೂಡಿ ಬರುವುದು. ಶುಭ ಸಂಖ್ಯೆ: 3

Dina Bhavishya

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?