AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ಕೆಲಸಕ್ಕೆ ತಕ್ಕ ಪ್ರೋತ್ಸಾಹ ದೊರೆಯುವುದು

Horoscope ಜುಲೈ 19, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ಕೆಲಸಕ್ಕೆ ತಕ್ಕ ಪ್ರೋತ್ಸಾಹ ದೊರೆಯುವುದು
ದಿನ ಭವಿಷ್ಯ
TV9 Web
| Edited By: ಆಯೇಷಾ ಬಾನು|

Updated on: Jul 19, 2021 | 6:30 AM

Share

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಆಷಾಢ ಮಾಸ, ಗ್ರೀಷ್ಮ ಋತು, ಶುಕ್ಲಪಕ್ಷ, ದಶಮಿ ತಿಥಿ, ಸೋಮವಾರ, ಜುಲೈ 19, 2021. ವಿಶಾಖ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 7.28 ರಿಂದ ಇಂದು ಬೆಳಿಗ್ಗೆ 9.05 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.51. ಸೂರ್ಯಾಸ್ತ: ಸಂಜೆ 6.53

ತಾ.19-07-2021 ರ ಸೋಮವಾರದ ರಾಶಿಭವಿಷ್ಯ,

ಮೇಷ: ಕೆಲಸಕ್ಕೆ ತಕ್ಕ ಪ್ರೋತ್ಸಾಹ ದೊರೆಯುವುದು. ಶಾಂತಿ, ನೆಮ್ಮದಿಯುಕ್ತ ಜೀವನ ಇರುವುದು. ನಡೆಯುತ್ತಿರುವ ದಾರಿ ಸರಿಯಾಗಿ ಇರುವುದರಿಂದ ಗುರಿ ಮುಟ್ಟುವುದು ನಿಶ್ಚಿತ. ಆರ್ಥಿಕ ಸ್ಥಿತಿ ಉತ್ತಮವಾಗಿ ಇರುವುದು. ಶುಭ ಸಂಖ್ಯೆ: 2

ವೃಷಭ: ಹೊಟ್ಟೆಕಿಚ್ಚು ಮಾಡುವವರಿಗೆ ತಕ್ಕ ಶಾಸ್ತಿಯಾಗಲಿದೆ. ಶತ್ರುಗಳು ತಾವಾಗಿಯೇ ದೂರಸರಿಯುವರು. ಜನರೊಂದಿಗೆ ಉತ್ತಮ ಬಾಂಧವ್ಯ ವೃದ್ಧಿಯಾಗುವುದು. ಯುಕ್ತಿಯಿಂದ ಕಾರ್ಯಸಾಧಿಸುವಿರಿ. ಶುಭ ಸಂಖ್ಯೆ: 8

ಮಿಥುನ: ವ್ಯಾಪಾರದಲ್ಲಿ ಅಭಿವೃದ್ಧಿಯಾಗುವುದು. ಆರ್ಥಿಕ ಸಂಕಷ್ಟಗಳು ಪರಿಹಾರವಾಗುವವು. ಮಹಿಳೆಯರಿಗೆ ಹೆಚ್ಚಿನ ಉನ್ನತಿ ಕಂಡುಬರುವುದು. ಅನಾವಶ್ಯಕ ಖರ್ಚಿನ ಸಾಧ್ಯತೆ ಇದೆ. ಶುಭ ಸಂಖ್ಯೆ: 3

ಕಟಕ: ಸ್ವಪ್ರತಿಷ್ಟೆ ಬಿಟ್ಟು ಬಲ್ಲವರ ಸಹಾಯ ಪಡೆಯಿರಿ. ಮರೆತು ಹೋದ ವಸ್ತು ಲಾಭದಾಯಕವಾಗಿ ಪರಿಣಮಿಸುವುದು. ಹಳೆಯ ಮಿತ್ರರ ಒಡನಾಟ ಸಂತಸ ತರುವದು. ಆರ್ಥಿಕ ಸ್ಥಿತಿಯಲ್ಲಿ ಬೆಳವಣಿಗೆ ಇರುವುದು. ಶುಭ ಸಂಖ್ಯೆ: 7

ಸಿಂಹ: ಸಹೋದರರು, ಮಿತ್ರರು ಬೆನ್ನೆಲುಬಾಗಿ ನಿಲ್ಲುವರು. ಧೈರ್ಯಪ್ರವೃತ್ತಿಯು ಉತ್ತಮ ಫಲಕೊಡುವುದು. ಹಳೆಯ ಬಾಕಿ ವಸೂಲಾಗುವುದು. ವ್ಯಾಜ್ಯಗಳು ಅಂತ್ಯಕಾಣುವವು. ಗ್ರಹ ಸೌಖ್ಯವಿರುವುದು. ಶುಭ ಸಂಖ್ಯೆ: 4

ಕನ್ಯಾ: ಪ್ರಮುಖ ಯೋಜನೆಗಳ ಜವಾಬ್ದಾರಿ ಹೆಚ್ಚುವುದು. ಆರ್ಥಿಕ ಅಭಿವೃದ್ಧಿ ಕಂಡುಬರುವುದು. ಸ್ನೇಹಿತರ ಭಿನ್ನಾಭಿಪ್ರಾಯ ಬಗೆಹರಿಯುವುದು. ಶತೃಗಳೂ ಸೌಮ್ಯರಾಗುವ ಕಾಲ ಇರುವುದರಿಂದ ಅಪೇಕ್ಷಿತ ಕಾರ್ಯವನ್ನು ಸಾಧಿಸುವಿರಿ. ಶುಭ ಸಂಖ್ಯೆ: 6

ತುಲಾ: ಅಪೇಕ್ಷಿತ ಸ್ಥಾನಮಾನಗಳು ದೊರೆಯುವವು. ಮಹತ್ವದ ಕಾರ್ಯ ಸಾಧನೆಯಾಗುವ ಲಕ್ಷಣಗಳಿವೆ. ಮನೆಯಲ್ಲಿ ಕೌಟುಂಬಿಕ ಭಿನ್ನಾಭಿಪ್ರಾಯ ಇದ್ದರೂ ನೆಮ್ಮದಿಗೆ ಭಂಗವಿಲ್ಲ. ಆದಾಯಕ್ಕಿಂತ ಅಧಿಕ ಖರ್ಚು ಇರುವುದು. ಶುಭ ಸಂಖ್ಯೆ: 5

ವೃಶ್ಚಿಕ: ಹೊಟ್ಟೆಕಿಚ್ಚಿನ ಜನರಿಂದ ತೊಂದರೆ ಆಗುವ ಸಾಧ್ಯತೆ ಇದೆ. ಅತಿಯಾಗಿ ಹೇಳಿಕೊಳ್ಳುವದು ಅಮಾಮಾನಕ್ಕೆ ಕಾರಣವಾಗದಂತೆ ವರ್ತಿಸಿರಿ. ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ಲಾಭ ನಿರೀಕ್ಷೆ ಇರುವುದು. ಕೈಗೊಂಡ ಕಾರ್ಯ ಯಶ ಕಾಣುವುದು. ಶುಭ ಸಂಖ್ಯೆ: 1

ಧನು: ಕೆಲಸದಲ್ಲಿ ವಿಘ್ನ ಉಂಟಾಗುವ ಸಾಧ್ಯತೆ ಇರುವುದು. ಎಚ್ಚರಿಕೆವಹಿಸಿರಿ. ಜಾರಿಕೊಳ್ಳುವ ಸ್ವಭಾವದಿಂದ ಉದ್ಯೋಗದಲ್ಲಿ ಕಿರಿಕಿರಿ ಕಂಡುಬರುವದು. ಗೊಂದಲಕ್ಕೆ ಒಳಗಾಗದೇ ಮುನ್ನುಗ್ಗಿರಿ. ಕೊಟ್ಟಸಾಲ ಪಾವತಿಯಾಗುವುದು. ಶುಭ ಸಂಖ್ಯೆ: 9

ಮಕರ: ವ್ಯಾಪಾರದಲ್ಲಿ ಪ್ರಗತಿ ಇರುವುದು. ವೈವಾಹಿಕ ತೊಂದರೆಗಳು ಪರಿಹಾರವಾಗುವವು. ಸಂಕುಚಿತ ಭಾವನೆ ಅಥವಾ ಸಂದೇಹಗಳಿಂದ ದೂರವಿರಿ. ಮನೆಯಲ್ಲಿ ಸಂತಸದ ವಾತಾವರಣ ಇರುವುದು. ಶುಭ ಸಂಖ್ಯೆ: 2

ಕುಂಭ: ನಿರೀಕ್ಷಿತ ಸರ್ವಕಾರ್ಯಗಳು ನೆರವೆರುತ್ತದೆ. ಆರ್ಥಿಕ ಮಟ್ಟವೂ ಏರಿ, ಸ್ಥಿರಪ್ರಾಪ್ತಿ, ಸಂಸಾರಸುಖ ಸಂಭ್ರಮಗಳಿರುತ್ತದೆ. ಶುಭ ಕಾರ್ಯ ಪ್ರಯತ್ನ ಫಲಕೊಡುತ್ತದೆ. ಶುಭ ಸಂಖ್ಯೆ: 8

ಮೀನ: ಆರೋಗ್ಯಪೂರ್ಣತೆ, ಪ್ರಸನ್ನತೆ ಇರುವದು. ಎಲ್ಲ ಕಾರ್ಯಗಳೂ ತಮ್ಮ ಮನಸ್ಸಿನಂತೆ ನಡೆಯುವವು. ಧನಲಾಭ, ಧಾರ್ಮಿಕ ಕಾರ್ಯ, ದೇವತಾ ಕ್ಷೇತ್ರ ದರ್ಶನ ಯೋಗವಿರುವದು. ವ್ಯಾಪಾರ ಸಾಧಾರಣ. ಶುಭ ಸಂಖ್ಯೆ: 3

Dina Bhavishya

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ