AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today – ದಿನ ಭವಿಷ್ಯ; ಈ ರಾಶಿಯವರು ಹೊಸ ಆಸ್ತಿ ಖರೀದಿ ಅಥವಾ ಹೊಸ ಹೂಡಿಕೆ ಈಗ ಮಾಡಬೇಡಿ

Horoscope ಜುಲೈ 24, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today - ದಿನ ಭವಿಷ್ಯ; ಈ ರಾಶಿಯವರು ಹೊಸ ಆಸ್ತಿ ಖರೀದಿ ಅಥವಾ ಹೊಸ ಹೂಡಿಕೆ ಈಗ ಮಾಡಬೇಡಿ
ದಿನ ಭವಿಷ್ಯ
TV9 Web
| Edited By: |

Updated on:Jul 24, 2021 | 6:30 AM

Share

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯಣ, ಆಷಾಢ ಮಾಸ, ಗ್ರೀಷ್ಮ ಋತು, ಶುಕ್ಲಪಕ್ಷ, ಹುಣ್ಣಿಮೆ ತಿಥಿ, ಶನಿವಾರ, ಜುಲೈ 24, 2021. ಉತ್ತರಾಷಾಢ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 9.07 ರಿಂದ ಇಂದು ಬೆಳಿಗ್ಗೆ 10.44 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.52. ಸೂರ್ಯಾಸ್ತ: ಸಂಜೆ 6.52

ತಾ.24-07-2021 ರ ಶನಿವಾರದ ರಾಶಿಭವಿಷ್ಯ.

ಮೇಷ: ಸಮಾಧಾನಕರ ಜೀವನವಿದೆ. ಅಧಿಕಾರಿಗಳ ಸಹಕಾರ ದೊರೆಯುವುದು. ಮನೆ ಕಟ್ಟುವ ಆಸೆ ಕೈಗೂಡುವ ಸಮಯ. ಬಂಧುಮಿತ್ರರ ಹಾರೈಕೆ ತಮ್ಮೊಂದಿಗಿದೆ. ದೂರಪ್ರಯಾಣ ಯೋಗವಿದೆ. ಶುಭ ಸಂಖ್ಯೆ: 6

ವೃಷಭ: ಹೊಸ ಆಸ್ತಿ ಖರೀದಿ ಅಥವಾ ಹೊಸ ಹೂಡಿಕೆ ಈಗ ಬೇಡ. ಕಂಟಕದಿಂದ ಪಾರಾಗುವ ಯೋಗವಿದೆ. ಒಳ್ಳೆಯ ಸ್ವಭಾವ ಇರುವುದರಿಂದ ಉದ್ಯೋಗದಲ್ಲಿ ಹೆಚ್ಚಿನ ಬಡ್ತಿಯಾಗುವ ಕಾಲ. ಆಸಕ್ತಿಗೆ ತಕ್ಕಂತೆ ಅವಕಾಶಗಳು ದೊರಕುವವು. ಶುಭ ಸಂಖ್ಯೆ: 9

ಮಿಥುನ: ಕೆಲಸದಲ್ಲಿ ತಾಳ್ಮೆ ಇರಲಿ. ಅನಿರ್ದಿಷ್ಟ ಉದ್ಯೋಗ, ಕೆಲಸದ ವಿಷಯದಲ್ಲಿ ಗೊಂದಲ ಮೂಡುವ ಸಾಧ್ಯತೆ ಇದೆ. ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸ ಬೇಡಿ. ವ್ಯಾಪಾರಿಗಳಿಗೆ ಆರ್ಥಿಕ ತೊಂದರೆ ಆಗುವ ಯೋಗವಿದೆ. ಶುಭ ಸಂಖ್ಯೆ: 2

ಕಟಕ: ಸರಳತೆ ದುರುಪಯೋಗವಾಗದಂತೆ ನೋಡಿಕೊಳ್ಳಿ. ಉದ್ಯೋಗದಲ್ಲಿಯ ಕುಂದು ಕೊರತೆಗಳನ್ನು ನಿಭಾಯಿಸುವಿರಿ. ಮಹತ್ವದ ಅಧಿಕಾರ ದೊರೆಯುವ ಯೋಗವಿದೆ. ವ್ಯಾಪಾರದಲ್ಲಿ ಹೆಚ್ಚಿನ ಹಣ ಹೂಡಿಕೆ ಈಗ ಬೇಡ. ಶುಭ ಸಂಖ್ಯೆ: 8

ಸಿಂಹ: ಅಭದ್ರತೆ ಕಾಡುವ ಸಂಭವವಿದೆ. ಸ್ಥಾನಚ್ಯುತಿಯಾಗುವ ಸಾಧ್ಯತೆ ಇದೆ. ಸಹೋದರರಲ್ಲಿ ಕಲಹ. ಸ್ಥಿರಾಸ್ತಿಯು ಹಾನಿಯಾಗುವ ಯೋಗವಿದೆ. ಕೃಷಿಕರಿಗೆ ಹಾಗೂ ವ್ಯಾಪಾರಿಗಳಿಗೆ ಆರ್ಥಿಕ ಸಂಕಷ್ಟ ಇರುವುದು. ಶುಭ ಸಂಖ್ಯೆ: 3

ಕನ್ಯಾ: ಮಹತ್ವಾಕಾಂಕ್ಷೆಗೆ ಪೂರಕವಾದ ವಾತಾವರಣ ಇರುವುದು. ಬಂಧುಮಿತ್ರರ ಸಹಕಾರ ದೊರೆಯುವುದು. ಉದ್ಯೋಗದಲ್ಲಿ ಪ್ರಗತಿ ಕಂಡುಬರುವುದು. ಮನೆಯಲ್ಲಿ ಸಂತಸ ಮೂಡುವುದು. ಶುಭಕಾರ್ಯಗಳು ಜರುಗುವವು. ಶುಭ ಸಂಖ್ಯೆ: 1

ತುಲಾ: ಸಹನೆಗೆ ತಕ್ಕ ಫಲ ದೊರೆಯುವುದು. ಬಹು ದಿನದ ಕನಸು ನನಸಾಗುವ ಕಾಲವಿದೆ. ಕೊರ್ಟಿನಲ್ಲಿದ್ದ ವ್ಯಾಜ್ಯಗಳಲ್ಲಿ ಜಯ ದೊರೆಯುವುದು. ಸಂತಾನಫಲದ ಅಪೇಕ್ಷೆ ಈಡೇರುವುದು. ಆರ್ಥಿಕ ವ್ಯವಹಾರಗಳ ಅದೃಷ್ಟ ಲಾಭತರುವವು. ಶುಭ ಸಂಖ್ಯೆ: 7

ವೃಶ್ಚಿಕ: ವ್ಯಾಪಾರದಲ್ಲಿ ಪ್ರಗತಿ ಇರುವುದು. ವೈವಾಹಿಕ ತೊಂದರೆಗಳು ಪರಿಹಾರವಾಗುವವು. ಸಂಕುಚಿತ ಭಾವನೆ ಅಥವಾ ಸಂದೇಹಗಳಿಂದ ದೂರವಿರಿ. ಮನೆಯಲ್ಲಿ ಸಂತಸದ ವಾತಾವರಣ ಇರುವುದು. ಶುಭ ಸಂಖ್ಯೆ: 4

ಧನು: ಧನಾರ್ಜನೆಯ ಮಾರ್ಗವು ಶ್ರೇಷ್ಠ ಮಟ್ಟದಲ್ಲಿದ್ದು, ಐಶ್ವರ್ಯ ಸಮೃದ್ಧಿಯಾಗುತ್ತದೆ. ಸಂಸಾರಿಕ ದೃಷ್ಟಿಯಲ್ಲೂ ಸುಖ, ಸಂಭ್ರಮಗಳಿದ್ದು ತೃಪ್ತಿ ಲಭಿಸಿದರೂ ಶತ್ರುಜನರ ಪೀಡೆ ಅಧಿಕವಾಗುತ್ತದೆ. ಅನಿವಾರ್ಯ ಪ್ರವಾಸ ಸಾಧ್ಯತೆ ಇದೆ. ಶುಭ ಸಂಖ್ಯೆ: 5

ಮಕರ: ವಿಶೇಷ ರೀತಿಯ ಕಾರ್ಯ ಒದಗಿ ಬಂದು ಸಂತಸ ಉಂಟಾಗುತ್ತದೆ. ಸ್ಥಾನಮಾನಗಳಿಗೂ ಕೊರತೆ ಇಲ್ಲ. ವಿಶೇಷ ವಸ್ತು ಸಂಗ್ರಹ. ಅನಾರೋಗ್ಯ್ಗ ತೋರಿಬಂದು ಕಿರಿಕಿರಿ ಎನಿಸಬಹುದು. ಶುಭ ಸಂಖ್ಯೆ: 2

ಕುಂಭ: ಹಲವು ರೀತಿಯಿಂದ ಧನಾಗಮನವಿದ್ದು ಐಶ್ವರ್ಯವೃದ್ಧಿ, ಸಂಸಾರ ಸುಖ. ಅಪೇಕ್ಷಿತ ವಸ್ತು, ಪ್ರಾಪ್ತಿ, ಮಿತ್ರಾಗಮನ, ವಿಶೇಷ ಸಂತೋಷ ಪ್ರಸಂಗಗಳು ಒದಗಿ ಬಂದು ಸಂಭ್ರಮವೆನಿಸುತ್ತದೆ. ಶುಭ ಸಂಖ್ಯೆ: 5

ಮೀನ: ಹೊಸ ಯೋಜನೆಗಳು ಬೇಡ.ಸ್ಥಳಾಂತರ, ವರ್ಗಾವಣೆ, ಮನೆ ಬದಲಿ, ಅಧಿಕಾರಿ ವರ್ಗದವರಿಂದ ಕಿರಿಕಿರಿ ಇರುವುದು. ಕೊಟ್ಟ ಸಾಲ ಮರುಪಾವತಿ ಆಗಲಾರದು,ವ್ಯಾಪಾರಿಗಳಿಗೆ ವ್ಯವಹಾರಿಕ ತೊಂದರೆ ಆಗುವ ಸಾಧ್ಯತೆ ಇದೆ. ಶುಭ ಸಂಖ್ಯೆ: 3

Dina Bhavishya

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

(Horoscope Today Know Your Rashi Bhavishya 2021 July 24 Basavaraj Guruji Prediction)

Published On - 6:30 am, Sat, 24 July 21

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ