AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today – ದಿನ ಭವಿಷ್ಯ; ಈ ರಾಶಿಯವರಿಗೆ ವ್ಯವಹಾರದಲ್ಲಿ ಹಾನಿ ಕಂಡುಬರುವುದು

Horoscope ಜುಲೈ 28, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today - ದಿನ ಭವಿಷ್ಯ; ಈ ರಾಶಿಯವರಿಗೆ ವ್ಯವಹಾರದಲ್ಲಿ ಹಾನಿ ಕಂಡುಬರುವುದು
ದಿನ ಭವಿಷ್ಯ
TV9 Web
| Edited By: |

Updated on: Jul 28, 2021 | 6:30 AM

Share

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಆಷಾಢ ಮಾಸ, ಗ್ರೀಷ್ಮ ಋತು, ಕೃಷ್ಣಪಕ್ಷ, ಪಂಚಮಿ ತಿಥಿ, ಬುಧವಾರ, ಜುಲೈ 28, 2021. ಪೂರ್ವಾಭಾದ್ರೆ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 12.22 ರಿಂದ ಇಂದು ಮಧ್ಯಾಹ್ನ 1.59 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.54. ಸೂರ್ಯಾಸ್ತ: ಸಂಜೆ 6.51

ತಾ.28-07-2021 ರ ಬುಧವಾರದ ರಾಶಿಭವಿಷ್ಯ

ಮೇಷ: ಮಾತಿನಂತೆಯೇ ಎಲ್ಲವೂ ನಡೆಯುವುದಿಲ್ಲ. ಕೆಲಸದಲ್ಲಿ ತೊಂದರೆ ಇದ್ದರೂ ನಿಭಾಯಿಸುವಲ್ಲಿ ಸಫಲರಾಗುವಿರಿ. ಉದಯೋನ್ಮುಖ ಪ್ರತಿಭೆಗಳಿಗೆ ಅವಕಾಶ ದೊರೆಯುವುದು. ಲಾಭದಾಯಕ ಹುದ್ದೆ ದೊರೆಯುವುದು. ಶುಭ ಸಂಖ್ಯೆ: 7

ವೃಷಭ: ವ್ಯವಹಾರದಲ್ಲಿ ಹಾನಿ ಕಂಡುಬರುವುದು. ಮಂದಗತಿಯ ಕೆಲಸದಿಂದ ಮನಸ್ಸಿಗೆ ಅಸಮಾಧಾನ ಉಂಟಾಗುವ ಸಂಭವವಿದೆ. ಸಹೋದರರು, ಮಿತ್ರರು ಬೆನ್ನೆಲುಬಾಗಿ ನಿಲ್ಲುವರು. ಧೈರ್ಯದಿಂದ ಮಾಡುವ ಕಾರ್ಯ ಉತ್ತಮ ಫಲಕೊಡುವುದು. ಶುಭ ಸಂಖ್ಯೆ: 3

ಮಿಥುನ: ಅತಿಯಾದ ಆತ್ಮವಿಶ್ವಾಸ ಪ್ರಗತಿಗೆ ಮಾರಕವಾಗುವ ಲಕ್ಷಣವಿದೆ. ವ್ಯವಹಾರದಲ್ಲಿ ಅಡೆತಡೆಗಳು ಕಂಡುಬರುವವು. ಅನಿವಾರ್ಯ ಕೆಲಸಗಳಗೆ ಅಲೆದಾಟ ಕಂಡುಬರುವುದು. ಆರ್ಥಿಕ ಸ್ಥಿತಿ ಉತ್ತಮವಾಗಿ ಇರುವುದು. ಶುಭ ಸಂಖ್ಯೆ: 9

ಕಟಕ: ಎಲ್ಲವನ್ನು ಹಗುರವಾಗಿ ಕಾಣುವುದರಿಂದ ಸಣ್ಣ ವಿಷಯವೂ ದೊಡ್ಡ ಸಮಸ್ಯೆಯಾಗುವುದು. ಹಣಕಾಸಿನ ತೊಂದರೆಗಳು ಕಂಡುಬರುವವು. ಮಹತ್ವದ ಕೆಲಸಗಳು ಅರ್ಧಕ್ಕೆ ನಿಲ್ಲುವ ಸಾಧ್ಯತೆ ಇದೆ. ಎಚ್ಚರಿಕೆ ವಹಿಸಿರಿ. ಶುಭ ಸಂಖ್ಯೆ: 4

ಸಿಂಹ: ಆಸ್ತಿ ಖರೀದಿ ಅಥವಾ ಹೊಸ ವ್ಯವಹಾರ ಆರಂಭಕ್ಕೂ ಮೊದಲು ಆತ್ಮೀಯರೊಂದಿಗೆ ಸಮಾಲೋಚನೆ ಮಾಡಿ ಮುಂದುವರಿಯಿರಿ. ಅಡೆತಡೆಗಳ ಮಧ್ಯದಲ್ಲಿಯೂ ನಿರೀಕ್ಷಿತ ಕಾರ್ಯಗಳು ಪೂರ್ಣವಾಗುವವು. ಶುಭ ಸಂಖ್ಯೆ: 1

ಕನ್ಯಾ: ಭಾವುಕತೆಯಿಂದ ಕಾರ್ಯಸಾಧಿಸಲು ಪ್ರಯತ್ನಿಸುವಿರಿ. ಪರಾವಲಂಬಿ ವ್ಯವಹಾರದಲ್ಲಿ ಹೂಡಿಕೆ ಬೇಡ. ಸಂಶಯಿತ ನಡೆಯಿಂದ ಮನಸ್ತಾಪ. ಸಣ್ಣಪುಟ್ಟ ಕೆಲಸಗಳೂ ವಿಳಂಬವಾಗುವ ಸಾಧ್ಯತೆ ಇದೆ. ಅಭದ್ರತೆ ಕಾಡುವುದು. ಶುಭ ಸಂಖ್ಯೆ: 6

ತುಲಾ: ವೃತ್ತಿಪರತೆಯಿಂದ ಕಾರ್ಯ ಕೈಗೂಡುವುದು. ಪರಿವಾರದೊಂದಿಗೆ ದೂರ ಪ್ರವಾಸದ ಯೋಗವಿದೆ. ಉತ್ತಮವಾದ ಸಮಯ ಇರುವುದರಿಂದ ಮನೆಯಲ್ಲಿ ಸಂಭ್ರಮದ ವಾತಾವರಣ ಇರುವುದು. ಶುಭ ಸಂಖ್ಯೆ: 7

ವೃಶ್ಚಿಕ: ಮಹತ್ವದ ಕಾರ್ಯ ಸಾಧನೆಯಾಗುವ ಲಕ್ಷಣಗಳಿವೆ. ಮನೆಯಲ್ಲಿ ಕೌಟುಂಬಿಕ ಭಿನ್ನಾಭಿಪ್ರಾಯ ಇದ್ದರೂ ನೆಮ್ಮದಿಗೆ ಕೊರತೆ ಇಲ್ಲ. ವ್ಯವಹಾರ ಚತುರತೆಯಿಂದ ದೊಡ್ಡ ಕೆಲಸವನ್ನೂ ಸಹಜವಾಗಿ ಮಾಡುವಿರಿ. ಶುಭ ಸಂಖ್ಯೆ: 3

ಧನು: ಹಿರಿಯರ ಮಾರ್ಗದರ್ಶನ ದೊರೆಯಲಿದೆ. ಆತ್ಮೀಯರೊಂದಿಗೆ ವಾದವಿವಾದ ಮಾಡಬೇಡಿ. ಮದುವೆಯ ಮಾತುಕತೆ ಕೈಗೂಡುವ ಸಾಧ್ಯತೆ ಇದೆ. ವ್ಯವಹಾರಿಕ ಜಾಣತನದಿಂದ ಲಾಭವಾಗಲಿದೆ. ಮನೆಯಲ್ಲಿ ಸಂತಸ ಕಂಡುಬರುವುದು. ಶುಭ ಸಂಖ್ಯೆ: 2

ಮಕರ: ಅತಿಯಾದ ಆತ್ಮವಿಶ್ವಾಸ, ಆಲಸ್ಯದಿಂದ ಬಹುವಿಧವಾದ ಕಷ್ಟನಷ್ಟಗಳ ಅನುಭವವಾಗುವುದು. ಸಹನೆಯಿಂದ ವ್ಯವಹರಿಸಿರಿ. ಗುರುಬಲ ವೃದ್ಧಿಸುವುದು. ಮದುವೆಯ ಸಂಭ್ರಮದ ವಾತಾವರಣ ಕಂಡುಬರುವುದು. ಹಿರಿಯರ ಮಾತಿನಂತೆ ನಡಯುವುದು ಉತ್ತಮ. ಶುಭ ಸಂಖ್ಯೆ: 8

ಕುಂಭ: ಮನೆ, ನಿವೇಶನ, ಆಸ್ತಿ ಖರೀದಿ ಯೋಗವಿದೆ. ವ್ಯವಹಾರದಲ್ಲಿ ಜಾಗ್ರತೆ ಇರಲಿ. ವ್ಯಾಪಾರ ಉತ್ತಮವಾಗಿರುವುದು. ಉತ್ಸಾಹ ಮೂಡುವುದು. ದೋಷ ಪರಿಹಾರಕ್ಕೆ ಜಲದಾನ ಮಾಡಿರಿ. ಶುಭ ಸಂಖ್ಯೆ: 4

ಮೀನ: ಅಲ್ಪ ತೃಪ್ತಿ, ವ್ಯಾಪಾರದಲ್ಲಿ ನಿರಾಸಕ್ತಿ, ಅಪೇಕ್ಷಿತ ಕೆಲಸಗಳು ನೆರವೇರುವವು, ಧನಲಾಭ, ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಹಿರಿಯರಿಗೆ ಕೀರ್ತಿದಾಯಕ. ಆಲಸ್ಯದಿಂದ ತೊಂದರೆ ಇರುವುದು ಗುರುಸ್ತೋತ್ರ ಪಾರಾಯಣ ಮಾಡಿರಿ. ಶುಭ ಸಂಖ್ಯೆ: 7

Dina Bhavishya

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
Video: ಕೇರಳದ ಚೆಂಡೆ ಬಾರಿಸಿದ ಪ್ರಧಾನಿ ಮೋದಿ
ನಿಧಿ ಸಿಕ್ಕ ಜಾಗದಲ್ಲಿ ಮತ್ತೆ ಉತ್ಖನನ? ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ!
ನಿಧಿ ಸಿಕ್ಕ ಜಾಗದಲ್ಲಿ ಮತ್ತೆ ಉತ್ಖನನ? ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ!