AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today – ದಿನ ಭವಿಷ್ಯ; ಈ ರಾಶಿಯವರಿಗೆ ಅತಿಯಾದ ಮಾತು ಅಪಾಯಕ್ಕೆ ಕಾರಣವಾಗಲಿದೆ

Horoscope ಜೂನ್ 01, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today - ದಿನ ಭವಿಷ್ಯ; ಈ ರಾಶಿಯವರಿಗೆ ಅತಿಯಾದ ಮಾತು ಅಪಾಯಕ್ಕೆ ಕಾರಣವಾಗಲಿದೆ
ದಿನ ಭವಿಷ್ಯ
ಆಯೇಷಾ ಬಾನು
ಆಯೇಷಾ ಬಾನು| Edited By: |

Updated on: Jun 01, 2021 | 6:34 AM

Share

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಕೃಷ್ಣಪಕ್ಷ, ಸಪ್ತಮಿ ತಿಥಿ, ಮಂಗಳವಾರ, ಜೂನ್ 01, 2021. ಧನಿಷ್ಠಾ ನಕ್ಷತ್ರ, ರಾಹುಕಾಲ: ಇಂದು ಸಂಜೆ 3.29 ರಿಂದ ಇಂದು ಸಂಜೆ 5.07 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.40. ಸೂರ್ಯಾಸ್ತ: ಸಂಜೆ 6.46.

ತಾ.01-06-2021 ರ ಮಂಗಳವಾರದ ರಾಶಿಭವಿಷ್ಯ

ಮೇಷ: ಪೂರ್ಣವಿಶ್ವಾಸ ಇಲ್ಲದ ಅಥವಾ ತಿಳಿಯದ ಕೆಲಸದಲ್ಲಿ ಹಣವ್ಯಯ ಮಾಡಬೇಡಿ. ಹಣಕಾಸಿನ ವ್ಯವಹಾರದಲ್ಲಿ ಸ್ವಲ್ಪ ಎಚ್ಚರಿಕೆ ಇರಲಿ. ದಿನದ ಕೆಲಸ ಬೇಸರ ಉಂಟುಮಾಡುವ ಸಾಧ್ಯತೆ ಇದೆ. ಶುಭ ಸಂಖ್ಯೆ: 7

ವೃಷಭ: ಹೊಟ್ಟೆಕಿಚ್ಚು ಮಾಡುವವರಿಗೆ ತಕ್ಕ ಶಾಸ್ತಿಯಾಗಲಿದೆ. ಶತ್ರುಗಳು ತಾವಾಗಿಯೇ ದೂರಸರಿಯುವರು. ಜನರೊಂದಿಗೆ ಉತ್ತಮ ಬಾಂಧವ್ಯ ವೃದ್ಧಿಯಾಗುವದು. ಯುಕ್ತಿಯಿಂದ ಕಾರ್ಯಸಾಧಿಸುವಿರಿ. ಶುಭ ಸಂಖ್ಯೆ: 3

ಮಿಥುನ: ಧನಮದಕ್ಕಿಂತ ವಿದ್ಯಾಮದ ಅಪಾಯಕಾರಿ ಆದರಿಂದ ತೊಂದರೆ ಆಗುವ ಸಾಧ್ಯತೆ ಇದೆ ವಿನಯದಿಂದ ವರ್ತಿಸಿರಿ. ಅಕಾಲಿಕ ಒತ್ತಡಗಳಿಂದ ಕಾರ್ಯಹಾನಿ. ಪ್ರೇಮಿಗಳಿಗೆ ಅಪೇಕ್ಷೆಯಂತೆ ಕಂಕಣಬಲ ಕೂಡಿಬರುವುದು. ಶುಭ ಸಂಖ್ಯೆ: 8

ಕಟಕ: ಕೃಷಿಮೂಲದ ಲಾಭ ದೊರೆಯುವುದು. ಸಹೋದ್ಯೋಗಿಗಳ ಸಹಾಯ ಅಪೇಕ್ಷಿಸದೆ ಸ್ವಂತಬಲದಿಂದ ಕೆಲಸ ನಿರ್ವಹಿಸಿರಿ. ಕೈಗೊಂಡ ಕಾರ್ಯಗಳು ಯಶಸ್ವಿಯಾಗುವವು. ನೌಕರರಿಗೆ ಕಿರಿಕಿರಿಯಾಗುವ ಸಂಭವವಿದೆ. ಶುಭ ಸಂಖ್ಯೆ: 4

ಸಿಂಹ: ವಿನಯಪೂರ್ವಕ ಕಾರ್ಯ ಸಾಧಿಸುವಿರಿ. ಧಾರ್ಮಿಕ ಕಾರ್ಯದಲ್ಲಿ ಭಾಗಿಯಾಗುವಿರಿ.ವಿವಿಧ ಮೂಲದಿಂದ ಧನಪ್ರಾಪ್ತಿ ಯೋಗವಿದೆ. ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಯೋಗವಿದೆ. ವಾಹನ ಖರೀದಿ ಯೋಗವಿರುವದು. ಶುಭ ಸಂಖ್ಯೆ: 9

ಕನ್ಯಾ: ಅತಿಯಾದ ಮಾತು ಅಪಾಯಕ್ಕೆ ಕಾರಣ. ಆಲಸ್ಯದಿಂದ ಕಾರ್ಯಹಾನಿಯಾಗುವ ಸಾಧ್ಯತೆ ಇದೆ. ಆಸ್ತಿ ವ್ಯವಹಾರಗಳಲ್ಲಿ ತಜ್ಞರ ಸಹಾಯ ಪಡೆಯಿರಿ. ನೌಕರರಿಗೆ ಅಪೇಕ್ಷಿತ ಸ್ಥಾನಕ್ಕೆ ವರ್ಗಾವಣೆಯ ಆಗುವ ಯೋಗವಿದೆ. ಶುಭ ಸಂಖ್ಯೆ: 2

ತುಲಾ: ಉನ್ನತ ಹುದ್ದೆ ದೊರೆಯುವ ಸಾಧ್ಯತೆ ಇದೆ. ಸಾಧನೆಗೆ ಸೂಕ್ತ ಅವಕಾಶ ದೊರೆಯುವದು. ಹಣಕಾಸಿನ ತೊಂದರೆಗಳು ಪರಿಹಾರವಾಗುವವು. ವ್ಯವಹಾರಗಳಲ್ಲಿ ಗೌಪ್ಯತೆ ಇರಲಿ. ಹಿತಶತ್ರುಗಳಿಂದ ತೊಂದರೆಯಾಗುವ ಸಧ್ಯತೆ ಇದೆ. ಶುಭ ಸಂಖ್ಯೆ: 6

ವೃಶ್ಚಿಕ: ಬಂಧುವರ್ಗದಲ್ಲಿ ನಕಾರಾತ್ಮಕ ಚಿಂತನೆ ಇರುವದು. ಸತತ ಪ್ರಯತ್ನವಿಲ್ಲದೇ ಫಲ ದೊರೆಯಲಾರದು. ದಿನನಿತ್ಯದ ಕೆಲಸಕ್ಕೂ ವಿನಾಕಾರಣ ಅಡೆತಡೆ ಕಂಡುಬರುವ ಲಕ್ಷಣವಿದೆ. ಬುದ್ದಿಯಿಂದ ತಾಳ್ಮೆಕಳೆದುಕೊಳ್ಳದೇ ಮುಂದುವರೆಯಿರಿ. ಶುಭ ಸಂಖ್ಯೆ: 4

ಧನು: ಹಣಕಾಸಿನ ವಿಷಯದಲ್ಲಿ ಬಂಧುಗಳೊಂದಿಗೆ ಮನಸ್ತಾಪವಾಗುವ ಸಾಧ್ಯತೆ ಇದೆ. ಸಹಾನುಭೂತಿಗೆ ಮಣಿಯದೆ ಇರುವದು ಒಳಿತು. ಉನ್ನತ ಅಧಿಕಾರಿಗಳಿಂದ ತೊಂದರೆ ಉಂಟಾಗುವದು. ಆತ್ಮವಿಶ್ವಾಸದಿಂದ ಮುಂದುವರೆಯಿರಿ. ಶುಭ ಸಂಖ್ಯೆ: 5

ಮಕರ: ವೃತ್ತಿಪರೆತೆಯಿಂದ ಕಾರ್ಯ ಕೈಗೂಡುವುದು. ಪರಿವಾರದೊಂದಿಗೆ ದೂರ ಪ್ರವಾಸದ ಯೋಗವಿದೆ. ಉತ್ತಮವಾದ ಸಮಯ ಇರುವದರಿಂದ ಮನೆಯಲ್ಲಿ ಸಂಭ್ರಮದ ವಾತಾವರಣ ಇರುವುದು. ಶುಭ ಸಂಖ್ಯೆ: 7

ಕುಂಭ: ಮನಸ್ಸು ಚಂಚಲವಾಗಿ ಮಾಡುವ ಕಾರ್ಯ ಅರ್ದಕ್ಕೆ ನಿಲ್ಲುವ ಸಂಭವವಿದೆ. ಕಷ್ಟಕಾಲದಲ್ಲಿಯೂ ಪರೋಪಕಾರದ ಬುದ್ಧಿ ತೋರುವಿರಿ. ಸಹಕಾರಿ ವಲಯದದಲ್ಲಿ ಅಪೇಕ್ಷಿತ ಲಾಭ ದೊರೆಯುವುದು. ವಿದೇಶ ಪ್ರಯಾಣದ ಯೋಗವಿದೆ. ಶುಭ ಸಂಖ್ಯೆ: 9

ಮೀನ: ಬಹುಜನರ ಪ್ರಶಂಸೆಗೆ ಪಾತ್ರವಾಗುವ ಆಡಳಿತಾತ್ಮಕ ನಿರ್ಧಾರ. ಇದ್ದಕ್ಕಿದಂತೆ ಶುಭಕರ ಒಲವು. ಸಲ್ಲುವ ವಿಚಾರದಲ್ಲಿ ಕುಟುಂಬದ ಒಗ್ಗಟ್ಟು ವೃದ್ಧಿ. ಆರ್ಥಿಕಾನೂಕೂಲದಿಂದ ಸರಳ ವ್ಯವಹಾರ. ಹೆಂಗಳೆಯರದು ಮೌನವಾದ ಕೆಲಸ. ಆದರೆ ಪರಿಣಾಮ ಜಾಸ್ತಿ. ಶುಭ ಸಂಖ್ಯೆ: 3

Dina Bhavishya

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ