AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today – ದಿನ ಭವಿಷ್ಯ; ಈ ರಾಶಿಯವರಿಗೆ ನಿರೀಕ್ಷಿತ ಸರ್ವಕಾರ್ಯಗಳು ನೆರವೇರುತ್ತವೆ

Horoscope ಜೂನ್ 11, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today - ದಿನ ಭವಿಷ್ಯ; ಈ ರಾಶಿಯವರಿಗೆ ನಿರೀಕ್ಷಿತ ಸರ್ವಕಾರ್ಯಗಳು ನೆರವೇರುತ್ತವೆ
ದಿನ ಭವಿಷ್ಯ
TV9 Web
| Updated By: Skanda|

Updated on: Jun 11, 2021 | 6:30 AM

Share

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ಉತ್ತರಾಯಣ, ಜ್ಯೇಷ್ಠ ಮಾಸ, ಗ್ರೀಷ್ಮ ಋತು, ಶುಕ್ಲಪಕ್ಷ, ಪಾಡ್ಯ ತಿಥಿ, ಶುಕ್ರವಾರ, ಜೂನ್ 11, 2021. ಮೃಗಶಿರ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 10.36 ರಿಂದ ಇಂದು ಬೆಳಿಗ್ಗೆ 12.14 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.41. ಸೂರ್ಯಾಸ್ತ: ಸಂಜೆ 6.50

ತಾ.11-06-2021 ರ ಶುಕ್ರವಾರದ ರಾಶಿಭವಿಷ್ಯ

ಮೇಷ: ಗುರಿಸಾಧನೆಗೆ ಇದು ಸೂಕ್ತ ಸಮಯ. ಪ್ರಯತ್ನಿಸಿದ ಕಾರ್ಯಗಳು ಕೈಗೂಡುವವು. ವಿದ್ಯಾರ್ಥಿಗಳಿಗೆ ಉನ್ನತ ಪ್ರಶಸ್ತಿ ದೊರಕುವ ಸಾಧ್ಯತೆ ಇರುವುದು. ಶುಭ ಸಂಖ್ಯೆ: 4

ವೃಷಭ: ಹಳೆಯ ಸಾಲ ಮರುಪಾವತಿಯಾಗುವುದು. ಬೇಡವಾದ ಕಾರ್ಯಕ್ರಮದಲ್ಲಿ ಭಾಗಿಯಾಗುವ ಸಂಭವವಿದೆ. ಆತುರತೆಯ ನಿರ್ಣಯಗಳು ಅಪಾಯ ತರಬಹುದು. ಅತೀ ವಿಶ್ವಾಸಿಕರೇ ಎದುರಾಡುವ ಸಂಭವವಿದೆ. ಶುಭ ಸಂಖ್ಯೆ: 5

ಮಿಥುನ: ಅನೇಕ ರೀತಿಯ ಲಾಭ ದೊರೆಯುವ ಸಾಧ್ಯತೆ ಇದೆ. ಆದರ್ಶ ವ್ಯಕ್ತಿತ್ವದಿಂದ ಜನ ಮನ್ನಣೆಗೆ ಪಾತ್ರರಾಗುವಿರಿ. ಎಲ್ಲ ಕೆಲಸಗಳೂ ಸಕಾಲದಲ್ಲಿ ಪೂರ್ಣವಾಗುವವು. ಕೌಟುಂಬಿಕ ವಿವಾದ ಕೊನೆಗೊಳ್ಳುವುದು. ಶುಭ ಸಂಖ್ಯೆ: 3

ಕಟಕ: ನೆನೆಗುದಿಗೆ ಬಿದ್ದ ಕೆಲಸಗಳಿಗೆ ಚಾಲನೆ ದೊರೆಯುವುದು. ಮಾನಸಿಕ ಉತ್ಸಾಹ ಕಂಡುಬರುವುದು. ಆತ್ಮೀಯರಿಗೆ ಉನ್ನತ ಅಧಿಕಾರ ದೊರೆಯುವುದು. ಕಾರಣಾಂತರ ಅಧಿಕ ಖರ್ಚು ಬರಬಹುದು. ಶುಭ ಸಂಖ್ಯೆ: 9

ಸಿಂಹ: ಸರಳತೆ ದುರುಪಯೋಗವಾಗದಂತೆ ನೋಡಿಕೊಳ್ಳಿ. ಉದ್ಯೋಗದಲ್ಲಿಯ ಕುಂದು ಕೊರತೆಗಳನ್ನು ನಿಭಾಯಿಸುವಿರಿ. ಮಹತ್ವದ ಅಧಿಕಾರ ದೊರೆಯುವ ಯೋಗವಿದೆ. ವ್ಯಾಪಾರದಲ್ಲಿ ಹೆಚ್ಚಿನ ಹಣ ಹೂಡಿಕೆ ಈಗ ಬೇಡ. ಶುಭ ಸಂಖ್ಯೆ: 6

ಕನ್ಯಾ: ಭಾವುಕತೆಯಿಂದ ಕಾರ್ಯಸಾಧಿಸಲು ಪ್ರಯತ್ನಿಸುವಿರಿ. ಪರಾವಲಂಬಿ ವ್ಯವಹಾರದಲ್ಲಿ ಹೂಡಿಕೆ ಬೇಡ. ಸಂಶಯದ ನಡೆಯಿಂದ ಮನಸ್ತಾಪ. ಸಣ್ಣಪುಟ್ಟ ಕೆಲಸಗಳೂ ವಿಳಂಬವಾಗುವ ಸಾಧ್ಯತೆ ಇದೆ. ಅಭದ್ರತೆ ಕಾಡುವುದು. ಶುಭ ಸಂಖ್ಯೆ: 8

ತುಲಾ: ಗಣ್ಯರೊಂದಿಗೆ ವ್ಯವಹಾರಿಕ ಬಾಂಧವ್ಯ ವೃದ್ಧಿಯಾಗುವುದು. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸಯೋಗವಿದೆ. ಶುಭ ಸಂಖ್ಯೆ: 4

ವೃಶ್ಚಿಕ: ತಾಪತ್ರಯಗಳೆಲ್ಲ ದೂರವಾಗಿದ್ದು ಆರ್ಥಿಕ ಸ್ಥಿತಿ ಸುಧಾರಣೆಯಾಗುತ್ತದೆ. ವ್ಯಾಪಾರಾದಿ ಉದ್ಯಮಗಳು ಇಷ್ಟದಂತೆ ನಡೆಯುತ್ತದೆ. ಕೆಲವೊಮ್ಮೆ ಸಣ್ಣ ವಿಷಯಗಳಿಗೂ ಭಯ ತೋರಿದರೂ ಹಾನಿಯಿಲ್ಲ. ಶುಭ ಸಂಖ್ಯೆ: 7

ಧನು: ವಿಶೇಷ ರೀತಿಯ ಕಾರ್ಯ ಒದಗಿ ಬಂದು ಸಂತಸ ಉಂಟಾಗುತ್ತದೆ. ಸ್ಥಾನಮಾನಗಳಿಗೂ ಕೊರತೆ ಇಲ್ಲ. ವಿಶೇಷ ವಸ್ತು ಸಂಗ್ರಹ. ಅನಾರೋಗ್ಯ ತೋರಿಬಂದು ಕಿರಿಕಿರಿ ಎನಿಸಬಹುದು. ಶುಭ ಸಂಖ್ಯೆ: 5

ಮಕರ: ನಿರೀಕ್ಷಿತ ಸರ್ವಕಾರ್ಯಗಳು ನೆರವೆರುತ್ತದೆ. ಆರ್ಥಿಕ ಮಟ್ಟವೂ ಏರಿ, ಸ್ಥಿರಪ್ರಾಪ್ತಿ, ಸಂಸಾರಸುಖ ಸಂಭ್ರಮಗಳಿರುತ್ತವೆ. ಶುಭ ಕಾರ್ಯ ಪ್ರಯತ್ನ ಫಲಕೊಡುತ್ತದೆ. ಶುಭ ಸಂಖ್ಯೆ: 2

ಕುಂಭ: ಕೆಲಸ ಹೆಚ್ಚಿನ ಬದ್ಧತೆ ತೋರಿಸುವ ಅವಶ್ಯಕತೆ ಕಂಡುಬರುವುದು. ಕಾಯಕದಲ್ಲಿ ಯಶಸ್ಸು, ಕೀರ್ತಿ, ಧನಲಾಭ, ಉದ್ಯೋಗ ಪ್ರಾಪ್ತಿಯ ಯೋಗವಿದೆ. ವೈವಾಹಿಕ ಮಾತುಕತೆಗೆ ಕಾಲಕೂಡಿ ಬರುವುದು. ವಾದ-ವಿವಾದ, ಹಠಸಾಧನೆ ಬೇಡ. ಶುಭ ಸಂಖ್ಯೆ: 7

ಮೀನ: ವಾದ-ವಿವಾದ, ಹಠಸಾಧನೆ, ತಪ್ಪುಗಳ ಸಮರ್ಥನೆ, ಮತ್ತೊಬ್ಬರ ಮೇಲೆ ದೋಷಾರೋಪಣೆ ಬೇಡ. ಆಯಾಸದಿಂದ ಕೂಡಿದ ಕೆಲಸ ಇರುವದು. ಅಧಿಕಾರ ಪ್ರಾಪ್ತಿಗಾಗಿ ಅಲೆದಾಟ ಸಂಭವ. ನಿರೀಕ್ಷಿತ ಆದಾಯಕ್ಕೆ ತೊಂದರೆ ಇಲ್ಲ. ಶುಭ ಸಂಖ್ಯೆ: 9

Dina Bhavishya

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

ರಿಸೆಪ್ಷನಿಸ್ಟ್​​ಗೆ ಒದ್ದು, ಕೂದಲು ಎಳೆದಾಡಿದ ರೋಗಿಯ ವಿಡಿಯೋ ವೈರಲ್
ರಿಸೆಪ್ಷನಿಸ್ಟ್​​ಗೆ ಒದ್ದು, ಕೂದಲು ಎಳೆದಾಡಿದ ರೋಗಿಯ ವಿಡಿಯೋ ವೈರಲ್
ಸಂಸತ್ತಿನಲ್ಲಿ ವಿರೋಧಪಕ್ಷ ವಿನಾಕಾರಣ ಗದ್ದಲವೆಬ್ಬಿಸುತ್ತಿದೆ: ಸೋಮಣ್ಣ
ಸಂಸತ್ತಿನಲ್ಲಿ ವಿರೋಧಪಕ್ಷ ವಿನಾಕಾರಣ ಗದ್ದಲವೆಬ್ಬಿಸುತ್ತಿದೆ: ಸೋಮಣ್ಣ
ಜೈಲಿನಲ್ಲಿ ಇರುವ ಕೈದಿಗೆ ಹಾಡುವ ಅವಕಾಶ ನೀಡಿದ ಕೆ. ಕಲ್ಯಾಣ್
ಜೈಲಿನಲ್ಲಿ ಇರುವ ಕೈದಿಗೆ ಹಾಡುವ ಅವಕಾಶ ನೀಡಿದ ಕೆ. ಕಲ್ಯಾಣ್
ಮಚ್ಚಿನೊಂದಿಗೆ ಆರೋಪಿ ನ್ಯಾಯಾಲಯ ಪ್ರವೇಶಿಸಿದ್ದು ಪೊಲೀಸರ ಕರ್ತವ್ಯಲೋಪ
ಮಚ್ಚಿನೊಂದಿಗೆ ಆರೋಪಿ ನ್ಯಾಯಾಲಯ ಪ್ರವೇಶಿಸಿದ್ದು ಪೊಲೀಸರ ಕರ್ತವ್ಯಲೋಪ
‘ಜೂನಿಯರ್’ ಸಿನಿಮಾದ ಯಶಸ್ಸು, ನಿರ್ದೇಶಕ ರಾಧಾಕೃಷ್ಣ ಹೇಳಿದ್ದೇನು?
‘ಜೂನಿಯರ್’ ಸಿನಿಮಾದ ಯಶಸ್ಸು, ನಿರ್ದೇಶಕ ರಾಧಾಕೃಷ್ಣ ಹೇಳಿದ್ದೇನು?
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ