AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today – ದಿನ ಭವಿಷ್ಯ; ಈ ರಾಶಿಯವರ ಮನೆಯಲ್ಲಿ ಅಸಮಾಧಾನ ಇರುವುದು

Horoscope ಜೂನ್ 14, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today - ದಿನ ಭವಿಷ್ಯ; ಈ ರಾಶಿಯವರ ಮನೆಯಲ್ಲಿ ಅಸಮಾಧಾನ ಇರುವುದು
ದಿನ ಭವಿಷ್ಯ
TV9 Web
| Edited By: |

Updated on: Jun 14, 2021 | 6:30 AM

Share

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ಉತ್ತರಾಯಣ, ಜ್ಯೇಷ್ಠ ಮಾಸ, ಗ್ರೀಷ್ಮ ಋತು, ಶುಕ್ಲಪಕ್ಷ, ಚೌತಿ ತಿಥಿ, ಸೋಮವಾರ, ಜೂನ್ 14, 2021. ಪುಷ್ಯ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 7.19 ರಿಂದ ಇಂದು ಬೆಳಿಗ್ಗೆ 8.57 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.41. ಸೂರ್ಯಾಸ್ತ: ಸಂಜೆ 6.51

ತಾ.14-06-2021 ರ ಸೋಮವಾರದ ರಾಶಿಭವಿಷ್ಯ:

ಮೇಷ: ಮನೆಯಲ್ಲಿ ಅಸಮಾಧಾನ ಇರುವುದು. ಕೂಡಿಟ್ಟ ಹಣ ಹಾನಿಯಾಗುವ ಸಂಭವವಿದೆ. ಅಣ್ಣತಮ್ಮಂದಿರಲ್ಲಿ ಸಹಕಾರ ಅತ್ಯಂತ ಅವಶ್ಯಕ. ತೋಟಗಾರಿಕೆ ಫಲಪ್ರದವಾಗಲಿದೆ. ವ್ಯಾಪಾರ ವೃದ್ಧಿಯಾಗುವುದು. ಶುಭ ಸಂಖ್ಯೆ: 5

ವೃಷಭ: ಮದುವೆಯ ಮಾತುಕತೆಗಳಲ್ಲಿ ಸಫಲತೆ ಇದೆ. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ಉದ್ಯೋಗದ ಸ್ಥಾನ ಬದಲಾವಣೆಯ ವಿಚಾರವಾಗಿ ಚಿಂತೆ ಇರುವುದು. ಶುಭ ಸಂಖ್ಯೆ: 9

ಮಿಥುನ: ನಿಶ್ಚಿತ ಆರ್ಥಿಕ ಸ್ಥಿತಿ ಇರುವುದರಿಂದ ಹೆಚ್ಚಿನ ತೊಂದರೆ ಇಲ್ಲದಿದ್ದರೂ ಅಲ್ಪ ಹಾನಿಯ ಸಂಭವವಿದೆ. ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸುವಿರಿ. ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸ ಬೇಡಿ. ಶುಭ ಸಂಖ್ಯೆ: 1

ಕಟಕ: ಬಂಧುವರ್ಗದಲ್ಲಿ ನಕಾರಾತ್ಮಕ ಚಿಂತನೆ ಇರುವುದು. ಸತತ ಪ್ರಯತ್ನವಿಲ್ಲದೇ ಫಲ ದೊರೆಯಲಾರದು. ದಿನನಿತ್ಯದ ಕೆಲಸಕ್ಕೂ ವಿನಾಕಾರಣ ಅಡೆತಡೆ ಕಂಡುಬರುವ ಲಕ್ಷಣವಿದೆ. ಬುದ್ದಿಯಿಂದ ತಾಳ್ಮೆ ಕಳೆದುಕೊಳ್ಳದೇ ಮುಂದುವರೆಯಿರಿ. ಶುಭ ಸಂಖ್ಯೆ: 4

ಸಿಂಹ: ಭವಿಷ್ಯತ್ತಿನ ಉಪೇಕ್ಷೆ ಮಾಡದೇ ಉಳಿತಾಯಕ್ಕೆ ಗಮನಹರಿಸಿರಿ. ಆಪತ್ತುಗಳ ಪರಿಹಾರಕ್ಕಾಗಿ ವ್ಯಥಾ ತಿರುಗಾಟದ ಸಂಭವವಿದೆ. ಹಿರಿಯರ ಸಲಹೆಗೆ ತಕ್ಕಂತೆ ಮುಂದುವರೆಯಿರಿ. ಶುಭ ಸಂಖ್ಯೆ: 8

ಕನ್ಯಾ: ಸಂಕುಚಿತ ಭಾವನೆ ಅಥವಾ ಸಂದೇಹಗಳಿಂದ ದೂರವಿರಿ. ಕೆಲಸದಲ್ಲಿ ಸ್ಪಷ್ಟತೆ ಇರಲಿ. ಅಲ್ಪಧನಲಾಭವಾದರೂ ಹಳೆಯ ಸಾಲ ತೀರುವುದು. ವ್ಯಾಪಾರದಲ್ಲಿ ಅಭಿವೃದ್ಧಿಯಾಗುವುದು. ವಿವಾಹ ಅಪೇಕ್ಷಿತರಿಗೆ ಕಂಕಣಬಲ ಕೂಡಿಬರುವುದು. ಶುಭ ಸಂಖ್ಯೆ: 3

ತುಲಾ: ಭಾಗ್ಯವೃದ್ಧಿಯಾಗುವ ಯೋಗವಿದೆ. ವ್ಯವಹಾರದಲ್ಲಿಯ ಅಡಚಣೆಗಳು ದೂರಾಗುವವು. ಮನೆಯ ಜವಾಬ್ದಾರಿಗಳು ಹೆಚ್ಚುವ ಸಂಭವವಿದೆ. ಬರುವ ಸಂಕಷ್ಟಗಳನ್ನು ಎದುರಿಸಿ ಕಾರ್ಯ ಸಾಧಿಸುವಿರಿ. ಶುಭ ಸಂಖ್ಯೆ: 7

ವೃಶ್ಚಿಕ: ಮನಸ್ಸು ಚಂಚಲವಾಗಿ ಮಾಡುವ ಕಾರ್ಯ ಅರ್ಧಕ್ಕೆ ನಿಲ್ಲುವ ಸಂಭವವಿದೆ. ಕಷ್ಟಕಾಲದಲ್ಲಿಯೂ ಪರೋಪಕಾರದ ಬುದ್ಧಿ ತೋರುವಿರಿ. ಸಹಕಾರಿ ವಲಯದದಲ್ಲಿ ಅಪೇಕ್ಷಿತ ಲಾಭ ದೊರೆಯುವುದು. ವಿದೇಶ ಪ್ರಯಾಣದ ಯೋಗವಿದೆ. ಶುಭ ಸಂಖ್ಯೆ: 5

ಧನು: ವಾದ-ವಿವಾದ, ಹಠಸಾಧನೆ, ತಪ್ಪುಗಳ ಸಮರ್ಥನೆ, ಮತ್ತೊಬ್ಬರ ಮೇಲೆ ದೋಷಾರೋಪಣೆ ಬೇಡ. ಆಯಾಸದಿಂದ ಕೂಡಿದ ಕೆಲಸ ಇರುವುದು. ಅಧಿಕಾರ ಪ್ರಾಪ್ತಿಗಾಗಿ ಅಲೆದಾಟ ಸಂಭವ. ನಿರೀಕ್ಷಿತ ಆದಾಯಕ್ಕೆ ತೊಂದರೆ ಇಲ್ಲ. ಶುಭ ಸಂಖ್ಯೆ: 2

ಮಕರ: ಮಿತ್ರರ ಸಕಾರಾತ್ಮಕ ಧೋರಣೆಯಿಂದ ವ್ಯವಹಾರಿಕ ಅಭಿವೃದ್ಧಿ ಕಂಡುಬರುವುದು. ಕುಟುಂಬದ ಜವಾಬ್ದಾರಿ ಹೆಚ್ಚುವುದು. ಮಕ್ಕಳ ವಿದ್ಯಾಭ್ಯಾಸ ಹಾಗೂ ಆರೋಗ್ಯದ ಚಿಂತೆ ಕಂಡುಬರುವುದು. ನಿರ್ಲಕ್ಷತೆ, ಕೆಲಸ ಮುಂದೂಡುವ ಸ್ವಭಾವದಿಂದ ಹಾನಿ ಸಂಭವ. ಶುಭ ಸಂಖ್ಯೆ: 6

ಕುಂಭ: ಸ್ವೀಕೃತ ಕಾರ್ಯವು ಫಲಪ್ರದವಾಗಿ ಗೌರವ ಆದರಗಳು ಪ್ರಾಪ್ತವಾಗುವವು. ಈ ಸಮಯದಲ್ಲಿ ಉತ್ತಮ ಧನಾರ್ಜನೆಯಾಗುವುದು ವಿದೇಶ ಪ್ರಯಾಣ, ಪ್ರೇಮ ಸಂಭಾಷಣೆ, ದೇವ ಬ್ರ್ರಾಹ್ಮಣ, ಧರ್ಮಕಾರ್ಯಗಳು ನಡೆಯುವವು. ಸ್ಥಿರಾಸ್ತಿಗೆ ಸಂಬಂಧಿಸಿದ ವ್ಯಾಜ್ಯ ಪರಿಹಾರವಾಗುವವು. ಶುಭ ಸಂಖ್ಯೆ: 3

ಮೀನ: ಬಹುಜನರ ಪ್ರಶಂಸೆಗೆ ಪಾತ್ರವಾಗುವ ಆಡಳಿತಾತ್ಮಕ ನಿರ್ಧಾರ. ಇದ್ದಕ್ಕಿದಂತೆ ಶುಭಕರ ಒಲವು. ಸಲ್ಲುವ ವಿಚಾರದಲ್ಲಿ ಕುಟುಂಬದ ಒಗ್ಗಟ್ಟು ವೃದ್ಧಿ. ಆರ್ಥಿಕಾನೂಕೂಲದಿಂದ ಸರಳ ವ್ಯವಹಾರ. ಹೆಂಗಳೆಯರದು ಮೌನವಾದ ಕೆಲಸ. ಆದರೆ ಪರಿಣಾಮ ಜಾಸ್ತಿ. ಶುಭ ಸಂಖ್ಯೆ: 9

Dina Bhavishya

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ