AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today – ದಿನ ಭವಿಷ್ಯ: ಈ ರಾಶಿಯವರಿಗೆ ಪ್ರತಿಯೊಂದು ಕೆಲಸದಲ್ಲಿಯೂ ವಿಳಂಬ ಉಂಟಾಗಲಿದೆ

Horoscope ಜೂನ್ 17, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today - ದಿನ ಭವಿಷ್ಯ: ಈ ರಾಶಿಯವರಿಗೆ ಪ್ರತಿಯೊಂದು ಕೆಲಸದಲ್ಲಿಯೂ ವಿಳಂಬ ಉಂಟಾಗಲಿದೆ
ದಿನ ಭವಿಷ್ಯ
TV9 Web
| Edited By: |

Updated on: Jun 17, 2021 | 6:30 AM

Share

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ಉತ್ತರಾಯಣ, ಜ್ಯೇಷ್ಠ ಮಾಸ, ಗ್ರೀಷ್ಮ ಋತು, ಶುಕ್ಲಪಕ್ಷ, ಸಪ್ತಮಿ ತಿಥಿ, ಗುರುವಾರ, ಜೂನ್ 17, 2021. ಪುಬ್ಬೆ ನಕ್ಷತ್ರ, ರಾಹುಕಾಲ: ಇಂದು ಮಧ್ಯಾಹ್ನ 1.54 ರಿಂದ ಇಂದು ಸಂಜೆ 3.32 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.41. ಸೂರ್ಯಾಸ್ತ: ಸಂಜೆ 6.51

ತಾ.17-06-2021 ರ ಗುರುವಾರದ ರಾಶಿಭವಿಷ್ಯ

ಮೇಷ: ಪ್ರತಿಯೊಂದು ಕೆಲಸದಲ್ಲಿಯೂ ವಿಳಂಬ ಉಂಟಾಗುವ ಸಾಧ್ಯತೆ ಇದೆ. ಅನಗತ್ಯ ಖರ್ಚುಗಳು ಹೆಚ್ಚಾಗುವವು. ವೃಥಾ ತಿರುಗಾಟ ಇರುವುದು ಆದರೂ ಕೀರ್ತಿದಾಯಕ ಫಲವಿದೆ. ಶುಭ ಸಂಖ್ಯೆ: 2

ವೃಷಭ: ಶುಭಫಲಗಳು ಕಂಡುಬರುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸಯೋಗವಿದೆ. ಕೌಟುಂಬಿಕ ಸಮಸ್ಯೆಗಳು ದೂರಾಗುವವು. ಕೊಟ್ಟಸಾಲ ಪಾವತಿಯಾಗುವುದು. ಶುಭ ಸಂಖ್ಯೆ: 4

ಮಿಥುನ: ವ್ಯಾಪಾರದಲ್ಲಿ ಅದೃಷ್ಟಲಾಭವಿದೆ. ವಿದ್ಯಾರ್ಥಿಗಳ ಮನೋಭಿಲಾಷೆ ಈಡೇರುವುದು. ಮನೆಯ ಜವಾಬ್ದಾರಿಗಳು ಹೆಚ್ಚುವವು. ಹಿರಿಯರ ಆರೋಗ್ಯದಲ್ಲಿ ಏರುಪೇರಾಗುವ ಸಂಭವವಿದೆ. ಶುಭ ಸಂಖ್ಯೆ: 9

ಕಟಕ: ಮಹಿಳೆಯರ ಇಷ್ಟಾರ್ಥ ಸಿದ್ಧಿಸುವುದು. ಕೂಡಿಟ್ಟ ಹಣ ಉಪಯೋಗವಾಗುವ ಸಂಭವವಿದೆ. ಸರಕಾರಿ ಕೆಲಸಗಳು ನಿರ್ವಿಘ್ನವಾಗಿ ಆಗುವವು. ನ್ಯಾಯಾಲಯದಲ್ಲಿ ಜಯ ದೊರೆಯುವುದು. ವಿದ್ಯೆಯಲ್ಲಿ ಸಾಧನೆ ಇರುವುದು. ಶುಭ ಸಂಖ್ಯೆ: 1

ಸಿಂಹ: ಕುಟುಂಬದಲ್ಲಿ ವಾದ ಬೇಡ. ಉತ್ತಮ ಸಾಧನೆಯಿಂದ ಬಂಧುವರ್ಗದ ಪ್ರಶಂಸೆಗೆ ಪಾತ್ರರಾಗುವಿರಿ. ವ್ಯವಹಾರದಲ್ಲಿಯ ಚತುರತೆ ಒಳ್ಳೆಯ ಆದಾಯವನ್ನು ತಂದು ಕೊಡುವುದು. ಸಮತೋಲಿತ ಜೀವನವಿರುವುದು. ಶುಭ ಸಂಖ್ಯೆ: 5

ಕನ್ಯಾ: ಸಹೋದರರು, ಮಿತ್ರರು ಬೆನ್ನೆಲುಬಾಗಿ ನಿಲ್ಲುವರು. ಧೈರ್ಯಪ್ರವೃತ್ತಿಯು ಉತ್ತಮ ಫಲಕೊಡುವುದು. ಹಳೆಯ ಬಾಕಿ ವಸೂಲಾಗುವದು. ವ್ಯಾಜ್ಯಗಳು ಅಂತ್ಯಕಾಣುವವು. ಗೃಹ ಸೌಖ್ಯವಿರುವುದು. ಶುಭ ಸಂಖ್ಯೆ: 7

ತುಲಾ: ಗಣ್ಯರೊಂದಿಗೆ ವ್ಯವಹಾರಿಕ ಬಾಂಧವ್ಯ ವೃದ್ಧಿಯಾಗುವುದು. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸಯೋಗವಿದೆ. ಶುಭ ಸಂಖ್ಯೆ: 6

ವೃಶ್ಚಿಕ: ವಿಶೇಷ ರೀತಿಯ ಕಾರ್ಯ ಒದಗಿ ಬಂದು ಸಂತಸ ಉಂಟಾಗುತ್ತದೆ. ಸ್ಥಾನಮಾನಗಳಿಗೂ ಕೊರತೆ ಇಲ್ಲ. ವಿಶೇಷ ವಸ್ತು ಸಂಗ್ರಹ. ಅನಾರೋಗ್ಯ ತೋರಿಬಂದು ಕಿರಿಕಿರಿ ಎನಿಸಬಹುದು. ಶುಭ ಸಂಖ್ಯೆ: 8

ಧನು: ಹಲವು ರೀತಿಯಿಂದ ಧನಾಗಮನವಿದ್ದು ಐಶ್ವರ್ಯ ವೃದ್ಧಿ, ಸಂಸಾರ ಸುಖ. ಅಪೇಕ್ಷಿತ ವಸ್ತು, ಪ್ರಾಪ್ತಿ, ಮಿತ್ರಾಗಮನ, ವಿಶೇಷ ಸಂತೋಷದ ಪ್ರಸಂಗಗಳು ಒದಗಿ ಬಂದು ಸಂಭ್ರಮವೆನಿಸುತ್ತದೆ. ಶುಭ ಸಂಖ್ಯೆ: 4

ಮಕರ: ಅಪರಿಮಿತ ಖರ್ಚು ತೋರಿದರೂ ಅಡಚಣೆಯಾಗುವ ಸಂಭವವಿಲ್ಲದೆ. ಸ್ಥಾನಮಾನಗಳೂ ಭದ್ರವಾಗಿ ಸಾಂಸಾರಿಕ ದೃಷ್ಟಿಯಲ್ಲೂ ಸುಖದಾಯಕ, ವಿಶೇಷ ಪ್ರಯತ್ನದಿಂದ ವ್ಯವಹಾರ ಸಿದ್ಧಿ ಇರುವುದು. ಶುಭ ಸಂಖ್ಯೆ: 1

ಕುಂಭ: ವ್ಯಯಕ್ತಿಕ ಧನಲಾಭ, ಶುಭ ಸಮಾರಂಭ, ಸರಕಾರಿ ಕೆಲಸಗಳು ಆಗುವವು. ಉದ್ಯೋಗದಲ್ಲಿ ಉನ್ನತಿ ಇರುವುದು. ವ್ಯಾಪಾರದಲ್ಲಿ ಹಣಹೂಡಿಕೆಗೆ ಉತ್ತಮ. ಮಹಿಳೆಯರು, ವಿದ್ಯಾರ್ಥಿಗಳಿಗೆ ಸಂತೋಷ ಇರುವುದು. ಶುಭ ಸಂಖ್ಯೆ: 3

ಮೀನ: ಸ್ವೀಕೃತ ಕಾರ್ಯವು ಫಲಪ್ರದವಾಗಿ ಗೌರವ ಆದರಗಳು ಪ್ರಾಪ್ತವಾಗುವವು. ಈ ಸಮಯದಲ್ಲಿ ಉತ್ತಮ ಧನಾರ್ಜನೆಯಾಗುವುದು ವಿದೇಶ ಪ್ರಯಾಣ, ಪ್ರೇಮ ಸಂಭಾಷಣೆ, ದೇವ ಬ್ರ್ರಾಹ್ಮಣ, ಧರ್ಮಕಾರ್ಯಗಳು ನಡೆಯುವವು. ಸ್ಥಿರಾಸ್ತಿಗೆ ಸಂಬಂಧಿಸಿದ ವ್ಯಾಜ್ಯ ಪರಿಹಾರವಾಗುವವು. ಶುಭ ಸಂಖ್ಯೆ: 9

Dina Bhavishya

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?