AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ಉದರಬೇನೆ ಬರುವ ಸಾಧ್ಯತೆ ಇದೆ ಆರೋಗ್ಯದ ಕಾಳಜಿವಹಿಸಿ

Horoscope ಜೂನ್ 21, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ಉದರಬೇನೆ ಬರುವ ಸಾಧ್ಯತೆ ಇದೆ ಆರೋಗ್ಯದ ಕಾಳಜಿವಹಿಸಿ
ದಿನ ಭವಿಷ್ಯ
TV9 Web
| Edited By: ಆಯೇಷಾ ಬಾನು|

Updated on: Jun 21, 2021 | 6:28 AM

Share

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ಉತ್ತರಾಯಣ, ಜ್ಯೇಷ್ಠ ಮಾಸ, ಗ್ರೀಷ್ಮ ಋತು, ಶುಕ್ಲಪಕ್ಷ, ಏಕಾದಶಿ ತಿಥಿ, ಸೋಮವಾರ, ಜೂನ್ 21, 2021. ಸ್ವಾತಿ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 7.20 ರಿಂದ ಇಂದು ಬೆಳಿಗ್ಗೆ 8.58 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.42. ಸೂರ್ಯಾಸ್ತ: ಸಂಜೆ 6.52

ತಾ.21-06-2021 ರ ಸೋಮವಾರದ ರಾಶಿಭವಿಷ್ಯ:

ಮೇಷ: ಉದರಬೇನೆ ಬರುವ ಸಾಧ್ಯತೆ ಇದೆ ಆರೋಗ್ಯದ ಕಾಳಜಿವಹಿಸಿ. ಬಂಧುಮಿತ್ರರ ಭೇಟಿ, ಮನೆಯಲ್ಲಿ ಮಂಗಲಕಾರ್ಯ ಜರುಗುವ ಯೋಗವಿದೆ. ಕೋರ್ಟ್ನಲ್ಲಿರುವ ವ್ಯಾಜ್ಯಗಳು ಕೊನೆಗೊಳ್ಳುವವು. ಶುಭ ಸಂಖ್ಯೆ: 4

ವೃಷಭ: ಹೊಟ್ಟೆಕಿಚ್ಚು ಮಾಡುವವರಿಗೆ ತಕ್ಕ ಶಾಸ್ತಿಯಾಗಲಿದೆ. ಶತ್ರುಗಳು ತಾವಾಗಿಯೇ ದೂರಸರಿಯುವರು. ಜನರೊಂದಿಗೆ ಉತ್ತಮ ಬಾಂಧವ್ಯ ವೃದ್ಧಿಯಾಗುವುದು. ಯುಕ್ತಿಯಿಂದ ಕಾರ್ಯಸಾಧಿಸುವಿರಿ. ಶುಭ ಸಂಖ್ಯೆ: 9

ಮಿಥುನ: ಉದ್ಯೋಗ ಪ್ರಾಪ್ತಿ, ಉದ್ಯಮದಲ್ಲಿ ಪ್ರಗತಿ ಇರುವುದು. ಹಳೆಯ ಸಾಲ ತೀರುವುದು. ಅನೇಕ ಮೂಲಗಳಿಂದ ಧನಪ್ರಾಪ್ತಿಯ ಯೋಗವಿದೆ. ಬಂಧುವರ್ಗದಲ್ಲಿಯ ಅಸಮಾಧಾನಗಳು ಪರಿಹಾರವಾಗುವವು. ಶುಭ ಸಂಖ್ಯೆ: 1

ಕಟಕ: ಮುಲಾಜಿಲ್ಲದ ಧೋರಣೆಯಿಂದ ವ್ಯವಹಾರದಲ್ಲಿ ನಷ್ಟ ಸಾಧ್ಯತೆ ಇರುವುದು. ಗಂಭೀರವಾದ ಪ್ರಮಾದವನ್ನು ಸಮರ್ಥಿಸುವುದರಿಂದ ಅಪವಾದಕ್ಕೆ ಗುರಿಯಾಗುವ ಸಂಭವವಿದೆ. ಹಿರಿಯರ ಸಲಹೆ ಪಡೆಯಿರಿ. ಶುಭ ಸಂಖ್ಯೆ:5

ಸಿಂಹ: ಅತಿಯಾದ ಮಾತು ಅಪಾಯಕ್ಕೆ ಕಾರಣ. ಆಲಸ್ಯದಿಂದ ಕಾರ್ಯಹಾನಿಯಾಗುವ ಸಾಧ್ಯತೆ ಇದೆ. ಆಸ್ತಿ ವ್ಯವಹಾರಗಳಲ್ಲಿ ತಜ್ಞರ ಸಹಾಯ ಪಡೆಯಿರಿ. ನೌಕರರಿಗೆ ಅಪೇಕ್ಷಿತ ಸ್ಥಾನಕ್ಕೆ ವರ್ಗಾವಣೆಯ ಆಗುವ ಯೋಗವಿದೆ. ಶುಭ ಸಂಖ್ಯೆ: 8

ಕನ್ಯಾ: ವ್ಯವಹಾರಿಕ ಅಭಿವೃದ್ಧಿ ಇರುವುದು. ನಿಂತ ಕೆಲಸಗಳು ಮುಂದುವರೆಯುವವು. ಕಠಿಣ ಪರಿಶ್ರಮದಿಂದ ಕೆಲಸ ಕೈಗೂಡುವುದು. ಹಾನಿಯ ಪ್ರಮಾಣ ಕಡಿಮೆಯಾಗುವುದು. ಶುಭ ಸಂಖ್ಯೆ: 2

ತುಲಾ: ವಿಶ್ರಾಂತಿ ಇಲ್ಲದ ದುಡಿಮೆ ಬೇಸರ ತರುವುದು. ಜವಾಬ್ದಾರಿಗಳ ಹಂಚಿಕೆ ಮಾಡುವ ಪ್ರಮೇಯ ಉಂಟಾಗುವುದು. ಮಿತಿ ಮೀರಿದ ಆಲೋಚನೆಗಳು ದಿಕ್ಕು ತಪ್ಪಿಸುವ ಸಾಧ್ಯತೆ ಇದೆ. ಆರ್ಥಿಕ ಲಾಭ ಇಲ್ಲದಿದ್ದರೂ ಹಾನಿ ಇರುವುದಿಲ್ಲ. ಶುಭ ಸಂಖ್ಯೆ: 7

ವೃಶ್ಚಿಕ: ಹೊಟ್ಟೆಕಿಚ್ಚಿನ ಜನರಿಂದ ತೊಂದರೆ ಆಗುವ ಸಾಧ್ಯತೆ ಇದೆ. ಅತಿಯಾಗಿ ಹೇಳಿಕೊಳ್ಳುವುದು ಅವಮಾನಕ್ಕೆ ಕಾರಣವಾಗದಂತೆ ವರ್ತಿಸಿರಿ. ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ಲಾಭ ನಿರೀಕ್ಷೆ ಇರುವುದು. ಕೈಗೊಂಡ ಕಾರ್ಯ ಯಶ ಕಾಣುವುದು. ಶುಭ ಸಂಖ್ಯೆ: 3

ಧನು: ದಿನನಿತ್ಯದ ಕೆಲಸಕ್ಕೂ ವಿನಾಕಾರಣ ಅಡೆತಡೆ ಕಂಡುಬರುವ ಲಕ್ಷಣವಿದೆ. ಬಂಧುವರ್ಗದಲ್ಲಿ ನಕಾರಾತ್ಮಕ ಚಿಂತನೆ ಇರುವುದು. ಸಂಕಷ್ಟಗಳ ಪರಿಹಾರಕ್ಕಾಗಿ ಅಲೆದಾಡಬೇಕಾದ ಸಂಭವವಿದೆ. ಶುಭ ಸಂಖ್ಯೆ: 6

ಮಕರ: ಲೇವಾದೇವಿ ವ್ಯವಹಾರದಲ್ಲಿ ಅನಿರೀಕ್ಷಿತ ಏರಿಕೆ ಕಂಡುಬರುವುದು. ಸಂಗಡಿಗರು ಸಹಕಾರ ತೋರುವುದರಿಂದ ನಿರಾತಂಕ ಜೀವನ ಇರುವುದು. ಮಾಡುವ ಕಾರ್ಯಗಳಲ್ಲಿ ಯಶಸ್ಸು ದೊರೆಯುವುದು. ಆರ್ಥಿಕ ಸಂಕಷ್ಟ ದೂರಾಗುವುದು. ಶುಭ ಸಂಖ್ಯೆ: 1

ಕುಂಭ: ವಿಶೇಷ ರೀತಿಯ ಕಾರ್ಯ ಒದಗಿ ಬಂದು ಸಂತಸ ಉಂಟಾಗುತ್ತದೆ. ಸ್ಥಾನಮಾನಗಳಿಗೂ ಕೊರತೆ ಇಲ್ಲ. ವಿಶೇಷ ವಸ್ತು ಸಂಗ್ರಹ. ಅನಾರೋಗ್ಯ್ಗ ತೋರಿಬಂದು ಕಿರಿಕಿರಿ ಎನಿಸಬಹುದು. ಶುಭ ಸಂಖ್ಯೆ: 7

ಮೀನ: ಹಲವು ರೀತಿಯಿಂದ ಧನಾಗಮನವಿದ್ದು ಐಶ್ವರ್ಯವೃದ್ಧಿ, ಸಂಸಾರ ಸುಖ. ಅಪೇಕ್ಷಿತ ವಸ್ತು, ಪ್ರಾಪ್ತಿ, ಮಿತ್ರಾಗಮನ, ವಿಶೇಷ ಸಂತೋಷ ಪ್ರಸಂಗಗಳು ಒದಗಿ ಬಂದು ಸಂಭ್ರಮವೆನಿಸುತ್ತದೆ. ಶುಭ ಸಂಖ್ಯೆ: 5

Dina Bhavishya

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

Follow Us
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?