AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ಬುದ್ಧಿ ಚಂಚಲವಾಗಿ ಹಿಡಿದ ಕಾರ್ಯ ಅರ್ಧಕ್ಕೆ ನಿಲ್ಲುವ ಸಂಭವವಿದೆ

Horoscope ಜೂನ್ 26, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ಬುದ್ಧಿ ಚಂಚಲವಾಗಿ ಹಿಡಿದ ಕಾರ್ಯ ಅರ್ಧಕ್ಕೆ ನಿಲ್ಲುವ ಸಂಭವವಿದೆ
ದಿನ ಭವಿಷ್ಯ
TV9 Web
| Edited By: |

Updated on: Jun 26, 2021 | 6:30 AM

Share

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ಉತ್ತರಾಯಣ, ಜ್ಯೇಷ್ಠ ಮಾಸ, ಗ್ರೀಷ್ಮ ಋತು, ಕೃಷ್ಣಪಕ್ಷ, ಬಿದಿಗೆ ತಿಥಿ, ಶನಿವಾರ, ಜೂನ್ 26, 2021. ಉತ್ತರಾಷಾಢ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 9.00 ರಿಂದ ಇಂದು ಬೆಳಿಗ್ಗೆ 10.38 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.43. ಸೂರ್ಯಾಸ್ತ: ಸಂಜೆ 6.53

ತಾ.26-06-2021 ರ ಶನಿವಾರದ ರಾಶಿಭವಿಷ್ಯ, ಪಂಚಾಂಗ.

ಮೇಷ: ಶಾಂತಚಿತ್ತರಾಗಿ ಕೆಲಸ ನಿರ್ವಹಿಸಿರಿ. ಹೊಸ ವ್ಯಾಪಾರ, ಉದ್ಯೋಗದ ಅವಕಾಶಗಳು ಕೂಡಿ ಬರುವವು. ಹಳೆಯ ಸಮಸ್ಯೆಗಳು ಪರಿಹಾರವಾಗುವವು. ಶುಭಕಾರ್ಯದಲ್ಲಿ ಪಾಲ್ಗೊಳ್ಳುವಿರಿ. ಶುಭ ಸಂಖ್ಯೆ: 6

ವೃಷಭ: ಬುದ್ಧಿ ಚಂಚಲವಾಗಿ ಹಿಡಿದ ಕಾರ್ಯ ಅರ್ಧಕ್ಕೆ ನಿಲ್ಲುವ ಸಂಭವವಿದೆ. ಅಕಾಲಿಕ ಒತ್ತಡಗಳಿಂದ ಕಾರ್ಯಹಾನಿ. ಉನ್ನತ ಅಧಿಕಾರಿಗಳಿಂದ ತೊಂದರೆ ಉಂಟಾಗುವುದು. ಆತ್ಮವಿಶ್ವಾಸದಿಂದ ಮುಂದುವರೆಯಿರಿ. ಶುಭ ಸಂಖ್ಯೆ: 9

ಮಿಥುನ: ಆತ್ಮೀಯರೊಂದಿಗೆ ಮನಸ್ತಾಪವಾಗುವ ಯೋಗವಿದೆ. ಸ್ವಂತ ಉದ್ಯಮಿಗಳು ಹಾನಿ ತಪ್ಪಿಸುವ ಉಪಾಯ ಮಾಡಿ. ವ್ಯಾಪಾರದ ವಿಷಯದಲ್ಲಿ ಮೋಸವಾಗುವ ಸಾಧ್ಯತೆ ಇದೆ. ಸಾಲಗಾರರು ಸಹಕಾರ ತೋರುವರು. ಶುಭ ಸಂಖ್ಯೆ: 1

ಕಟಕ: ಒಳ್ಳೆಯ ಮಾತುಗಳಿಂದ ಸಂಬಂಧ ಸುಧಾರಿಸುವುದು. ಸ್ನೇಹಿತರಲ್ಲಿಯ ಮನಸ್ತಾಪ ದೂರಾಗುವುದು. ಶಕ್ಯತಾ ಮೀರಿ ದುಡಿಯುವ ಕಾರ್ಯಭಾರವಿರುವವುದು. ಉದ್ಯೋಗದ ಹೊರತಾಗಿ ಬೇರೆ ಕೆಲಸಕ್ಕೂ ಗಮನಹರಿಸಿ. ಶುಭ ಸಂಖ್ಯೆ: 8

ಸಿಂಹ: ಹಾನಿ ತಪ್ಪಿಸಲು ಪ್ರಯತ್ನಿಸುವಿರಿ. ಕಠಿಣ ಆತಂಕದಿಂದ ಪಾರಾಗುವಿರಿ. ಅಧಿಕಾರಿಗಳ ಉಪದ್ರವಕ್ಕೆ ಮಣಿಯದೇ ಡಿಟ್ಟತನದಿಂದ ಕೆಲಸ ನಿರ್ವಹಿಸಿ. ವ್ಯಾಪಾರ ವೃದ್ಧಿಯಾಗುವುದು. ಆರ್ಥಿಕ ಸಂಕಷ್ಟ ದೂರಾಗುವುದು. ಶುಭ ಸಂಖ್ಯೆ: 5

ಕನ್ಯಾ: ಯೋಜನಾಬದ್ಧ ಕೆಲಸಗಳೂ ಕೂಡ ಮುಂದೂಡುವ ಪ್ರಸಂಗವಿದೆ. ಆಪ್ತವಲಯದಲ್ಲಿ ಸಮಾಲೋಚಿಸಿರಿ. ಅನಿವಾರ್ಯ ಕರ್ತವ್ಯಗಳಿಗೆ ಸಮಯ ಹೊಂದಾಣಿಕೆ ಮಾಡುವ ಸಾಧ್ಯತೆ ಇದೆ. ಆರ್ಥಿಕ ಸಂಕಷ್ಟಗಳು ಎದುರಾಗುವವು. ಶುಭ ಸಂಖ್ಯೆ: 2

ತುಲಾ: ಕುಟುಂಬದಲ್ಲಿ ಮನಸ್ತಾಪ ಕಂಡುಬರುವುದು. ಗೌಪ್ಯ ವ್ಯವಹಾರಗಳನ್ನು ಸರಿದೂಗಿಸಲು ಸಾಧ್ಯವಾಗದೇ ಪರಿತಪಿಸುವಿರಿ. ಆಸಕ್ತಿ ಆಪತ್ತು ತರುವ ಸಂಭವವಿದೆ. ಮಹತ್ವದ ನಿರ್ಧಾರಗಳಿಗೆ ಇದು ಸೂಕ್ತ ಕಾಲವಲ್ಲ. ಹಣಹೂಡಿಕೆ ಈಗ ಬೇಡ. ಶುಭ ಸಂಖ್ಯೆ: 7

ವೃಶ್ಚಿಕ: ಹಣಕಾಸಿನ ವಿಷಯದಲ್ಲಿ ಬಂಧುಗಳೊಂದಿಗೆ ಮನಸ್ತಾಪವಾಗುವ ಸಾಧ್ಯತೆ ಇದೆ. ಸಹಾನುಭೂತಿಗೆ ಮಣಿಯದೆ ಇರುವುದು ಒಳಿತು. ಉನ್ನತ ಅಧಿಕಾರಿಗಳಿಂದ ತೊಂದರೆ ಉಂಟಾಗುವುದು. ಆತ್ಮವಿಶ್ವಾಸದಿಂದ ಮುಂದುವರೆಯಿರಿ. ಶುಭ ಸಂಖ್ಯೆ: 4

ಧನು: ಅನಿರೀಕ್ಷಿತ ಸಂಚಾರ ಒದಗಿಬಂದರೂ ತೃಪ್ತಿದಾಯಕವೆನ್ನಬಹುದು. ವ್ಯಾಪಾರಾದಿ ಉದ್ಯಮಗಳಲ್ಲಿ ಅಪೇಕ್ಷಿಸಿದಂತೆ ಪ್ರಗತಿ. ಲಾಭ ತೋರಿಬರುತ್ತದೆ. ಹೊಸದಾದ ಆಲೋಚನಾ ಸಿದ್ಧಿ. ವಿಪರೀತ ಖರ್ಚು. ಶುಭ ಸಂಖ್ಯೆ: 3

ಮಕರ: ನಿಧಾನವಾಗಿ ಕಾರ್ಯಸಿದ್ಧಿಯಾಗುವುದು. ಮಕ್ಕಳಲ್ಲಿ ಹೊಸಹುರುಪು ಕಂಡು ಬರುವುದು. ವ್ಯಾಪಾರಿಗಳಿಗೆ ಮಧ್ಯಮಫಲ. ಸೀಮಿತ ಆದಾಯ, ಸೀಮಿತ ಕಾರ್ಯಗಳಿಂದ ಬೇಸರ ಇರುವುದು. ಮಂದಗತಿಯ ಕೆಲಸಗಳು ನಿರಾಸೆ ಮೂಡಿಸುವ ಸಾಧ್ಯತೆ ಇದೆ. ಶಾಂತಚಿತ್ತರಾಗಿ ವ್ಯವಹರಿಸಿರಿ. ಶುಭ ಸಂಖ್ಯೆ: 8

ಕುಂಭ: ಯಶಸ್ಸು. ಶ್ರಮಕ್ಕೆ ತಕ್ಕ ಲಾಭ, ಕೀರ್ತಿ, ಕೃಷಿಯಲ್ಲಿ ಉತ್ತಮ ಸಾಧನೆ, ಮನೆಯಲ್ಲಿ ಮಂಗಳಕಾರ್ಯ, ಬುಧ, ಮಂಗಳ ಯೋಗ ಶುಭದಾಯಕ ಆದರೂ ಕಿರಿಕಿರಿ ಸಂಭವ. ಪರಿಹಾರಕ್ಕಾಗಿ ಅನ್ನದಾನ ಮಾಡಿರಿ. ಶುಭ ಸಂಖ್ಯೆ: 1

ಮೀನ: ಬಹುಜನರ ಪ್ರಶಂಸೆಗೆ ಪಾತ್ರವಾಗುವ ಆಡಳಿತಾತ್ಮಕ ನಿರ್ಧಾರ. ಇದ್ದಕ್ಕಿದಂತೆ ಶುಭಕರ ಒಲವು. ಸಲ್ಲುವ ವಿಚಾರದಲ್ಲಿ ಕುಟುಂಬದ ಒಗ್ಗಟ್ಟು ವೃದ್ಧಿ. ಆರ್ಥಿಕಾನೂಕೂಲದಿಂದ ಸರಳ ವ್ಯವಹಾರ. ಹೆಂಗಳೆಯರದು ಮೌನವಾದ ಕೆಲಸ. ಆದರೆ ಪರಿಣಾಮ ಜಾಸ್ತಿ. ಶುಭ ಸಂಖ್ಯೆ: 5

Dina Bhavishya

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!