AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ಒಳ್ಳೆ ಕಾಲ ಆರಂಭ, ದೀರ್ಘಕಾಲದ ಸಮಸ್ಯೆಗಳಿಗೆ ಪರಿಹಾರ ದೊರೆಯುವುದು

Horoscope ಜೂನ್ 28, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ಒಳ್ಳೆ ಕಾಲ ಆರಂಭ, ದೀರ್ಘಕಾಲದ ಸಮಸ್ಯೆಗಳಿಗೆ ಪರಿಹಾರ ದೊರೆಯುವುದು
ದಿನ ಭವಿಷ್ಯ
TV9 Web
| Edited By: ಆಯೇಷಾ ಬಾನು|

Updated on: Jun 28, 2021 | 6:31 AM

Share

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ಉತ್ತರಾಯಣ, ಜ್ಯೇಷ್ಠ ಮಾಸ, ಗ್ರೀಷ್ಮ ಋತು, ಕೃಷ್ಣಪಕ್ಷ, ಚೌತಿ ತಿಥಿ, ಸೋಮವಾರ, ಜೂನ್ 28, 2021. ಧನಿಷ್ಥೆ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 7.22 ರಿಂದ ಇಂದು ಬೆಳಿಗ್ಗೆ 9.00 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.44. ಸೂರ್ಯಾಸ್ತ: ಸಂಜೆ 6.54

ತಾ.28-06-2021 ರ ಸೋಮವಾರದ ರಾಶಿಭವಿಷ್ಯ.

ಮೇಷ: ಮನಸ್ಸು ಹಿಡಿತದಲ್ಲಿರಲಿ. ಎಷ್ಟು ಪ್ರಯತ್ನಿಸಿದರೂ ಸಮಸ್ಯೆಗಳಿಗೆ ಪರಿಹಾರ ದೊರೆಯದೇ ಕ್ಲೇಷ ಉಂಟಾಗುವುದು. ತೋರಿಕೆಯ ಸ್ವಭಾವದಿಂದ ದೃಷ್ಟಿದೋಷ ಆಗುವ ಸಾಧ್ಯತೆ ಇದೆ. ಶುಭ ಸಂಖ್ಯೆ: 5

ವೃಷಭ: ಯಾವದೇ ಅಡೆತಡೆ ಇಲ್ಲದ ನಿರಾತಂಕ ಜೀವನ ಇರುವುದು. ಸಾಮಾಜಿಕ ಕಾರ್ಯಗಳಿಂದ ಗೌರವಾದರಗಳು ದೊರೆಯುವವು. ಆಶೆಗೆ ತಕ್ಕಂತೆ ಫಲಗಳು ಕೈಗೂಡುವವು. ಬಂಧುಗಳಲ್ಲಿ ಮನಸ್ತಾಪ ಕಂಡುಬರುವುದು. ಶುಭ ಸಂಖ್ಯೆ: 9

ಮಿಥುನ: ಗಂಭೀರ ಆರೋಪದಿಂದ ಮುಕ್ತರಾಗುವಿರಿ. ಅನುಕೂಲಕರ ವಾತಾವರಣ ಇರುವುದರಿಂದ ಇನ್ನೂ ಹೆಚ್ಚಿನ ವ್ಯವಹಾರಿಕ ಸುಧಾರಣೆ ಮಾಡಲು ಪ್ರಯತ್ನಿಸಿರಿ.ಆರೋಗ್ಯದ ಸೂಕ್ತ ಕಾಳಜಿ ವಹಿಸಿರಿ. ಶುಭ ಸಂಖ್ಯೆ: 4

ಕಟಕ: ವ್ಯವಹಾರದಲ್ಲಿ ಹಾನಿ ಕಂಡುಬರುವುದು. ಮಂದಗತಿಯ ಕೆಲಸದಿಂದ ಮನಸ್ಸಿಗೆ ಅಸಮಾಧಾನ ಉಂಟಾಗುವ ಸಂಭವವಿದೆ. ಸಹೋದರರು, ಮಿತ್ರರು ಬೆನ್ನೆಲುಬಾಗಿ ನಿಲ್ಲುವರು. ಧೈರ್ಯದಿಂದ ಮಾಡುವ ಕಾರ್ಯ ಉತ್ತಮ ಫಲಕೊಡುವುದು. ಶುಭ ಸಂಖ್ಯೆ: 8

ಸಿಂಹ: ದೀರ್ಘಕಾಲದ ಸಮಸ್ಯೆಗಳಿಗೆ ಪರಿಹಾರ ದೊರೆಯುವುದು. ಕೋರ್ಟ್ನಲ್ಲಿ ಇರುವ ನ್ಯಾಯ ಬಗೆಹರಿಯುವುದು. ಆರ್ಥಿಕ ಸುಧಾರಣೆ ಕಂಡುಬರುವುದು. ಉದ್ಯೋಗದ ಬಗ್ಗೆ ಆತ್ಮಸಂತೃಪ್ತಿ ಇರುವುದು. ವಿದ್ಯಾಭ್ಯಾಸದಲ್ಲಿ ನಿರಾಸಕ್ತಿ ಕಂಡುಬರುವುದು. ಶುಭ ಸಂಖ್ಯೆ: 3

ಕನ್ಯಾ: ಅಂತಃಶತ್ರುಗಳ ಕಾಟ ಹೆಚ್ಚಾಗುವ ಲಕ್ಷಣವಿದೆ. ಹಳೆಯ ಸಮಸ್ಯೆಗಳು ಮತ್ತೆ ಎದುರಾಗುವ ಸಂಭವವಿದೆ.ಚಂಚಲತೆ ಬೇಡ, ಹಿಡಿದ ಕಾರ್ಯವನ್ನು ಪೂರ್ಣಗೊಳಿಸಿ. ಆರ್ಥಿಕ ಲಾಭವಿದೆ ಆದರೆ ವಿದ್ಯೆಯಲ್ಲಿ ಹಿನ್ನಡೆ ಕಂಡುಬರುವುದು. ಶುಭ ಸಂಖ್ಯೆ: 7

ತುಲಾ: ಧನಮೂಲಗಳು ಹೆಚ್ಚಾಗುವವು. ಆರ್ಥಿಕ ಸ್ಥಿತಿ ಸುಧಾರಿಸುವ ಉಪಾಯ ಕಂಡುಬರುವದು. ಜನರೊಂದಿಗೆ ಉತ್ತಮ ಬಾಂಧವ್ಯ ವೃದ್ಧಿಯಾಗುವದು. ಯುಕ್ತಿಯಿಂದ ಕಾರ್ಯಸಾಧಿಸುವಿರಿ. ನೆಮ್ಮದಿಯ ವಾತಾವರಣ ಇರುವುದು. ಶುಭ ಸಂಖ್ಯೆ: 2

ವೃಶ್ಚಿಕ: ಮಹತ್ವದ ಕಾರ್ಯ ಕಲಾಪಗಳಲ್ಲಿ ಭಾಗವಹಿಸುವ ಯೋಗವಿದೆ. ವಿವಿಧ ಮೂಲಗಳಿಂದ ಸಹಾಯ ದೊರೆಯುವುದು. ಸ್ವಸಾಮಥ್ರ್ಯದಿಂದ ಕಠಿಣ ಪರಿಸ್ಥಿತಿಯನ್ನು ನಿಭಾಯಿಸುವಿರಿ. ಅನಾವಶ್ಯಕ ಖರ್ಚಿನ ಸಾಧ್ಯತೆ ಇದೆ. ಶುಭ ಸಂಖ್ಯೆ: 6

ಧನು: ವ್ಯಾಪಾರದಲ್ಲಿ ಪ್ರಗತಿ ಇರುವುದು. ವೈವಾಹಿಕ ತೊಂದರೆಗಳು ಪರಿಹಾರವಾಗುವವು. ಸಂಕುಚಿತ ಭಾವನೆ ಅಥವಾ ಸಂದೇಹಗಳಿಂದ ದೂರವಿರಿ. ಮನೆಯಲ್ಲಿ ಸಂತಸದ ವಾತಾವರಣ ಇರುವುದು. ಶುಭ ಸಂಖ್ಯೆ: 1

ಮಕರ: ಮನೆ, ನಿವೇಶನ, ಆಸ್ತಿ ಖರೀದಿ ಯೋಗವಿದೆ. ವ್ಯವಹಾರದಲ್ಲಿ ಜಾಗ್ರತೆ ಇರಲಿ. ವ್ಯಾಪಾರ ಉತ್ತಮವಾಗಿರುವದು. ಉತ್ಸಾಹ ಮೂಡುವುದು. ದೋಷ ಪರಿಹಾರಕ್ಕೆ ಜಲದಾನ ಮಾಡಿರಿ. ಶುಭ ಸಂಖ್ಯೆ: 5

ಕುಂಭ: ಅಲ್ಪ ತ್ರಾಸದಾಯಕ. ಗಡಿಬಿಡಿಯ ವಾತಾವರಣ, ಆರೋಗ್ಯದಲ್ಲಿ ಏರುಪೇರು ಸಂಭವ. ಮಹತ್ವದ ಕೆಲಸಗಳನ್ನು ಮುಂದೂಡುವದು ಒಳ್ಳೆಯದು. ಮಂಗಲಕಾರ್ಯ, ಹೆಸರು, ಕಡಲೆ ದಾನ ಮಾಡಿರಿ. ಶುಭ ಸಂಖ್ಯೆ: 9

ಮೀನ: ನಿಮ್ಮ ಮನೆಬಾಗಿಲಲ್ಲಿ ಅದೃಷ್ಟ ಲಕ್ಷ್ಮೀ ಒಲಿದು ಬರುತ್ತಾಳೆ. ಆರೋಗ್ಯ ಸುಧಾರಣೆಯಾಗುವುದು. ಸ್ಥಿತಿಗಳು ಅನುಕೂಲಕರವಾಗಿ ಮುಂದವರೆಯುವುದು. ಗ್ರಹಸುಖ ಯೋಗವು ಇದೆ. ಮನೋಚಿಂತಿತ ಕನಸು ನನಸಾಗಲಿದೆ. ಶುಭ ಸಂಖ್ಯೆ: 4

Dina Bhavishya

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

Follow Us
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳು
ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳು
ಮಳೆ ಆರ್ಭಟ: ಭಾಗಮಂಡಲದಲ್ಲಿ ಸ್ನಾನಘಟ್ಟ, ತ್ರಿವೇಣಿ ಸಂಗಮ ಮುಳುಗಡೆ
ಮಳೆ ಆರ್ಭಟ: ಭಾಗಮಂಡಲದಲ್ಲಿ ಸ್ನಾನಘಟ್ಟ, ತ್ರಿವೇಣಿ ಸಂಗಮ ಮುಳುಗಡೆ