Horoscope Today – ದಿನ ಭವಿಷ್ಯ; ಈ ರಾಶಿಯವರಿಗೆ ಅಂತಃಶತ್ರುಗಳ ಕಾಟ ಹೆಚ್ಚಾಗುವ ಲಕ್ಷಣವಿದೆ

Horoscope ಮೇ 21, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today - ದಿನ ಭವಿಷ್ಯ; ಈ ರಾಶಿಯವರಿಗೆ ಅಂತಃಶತ್ರುಗಳ ಕಾಟ ಹೆಚ್ಚಾಗುವ ಲಕ್ಷಣವಿದೆ
ದಿನ ಭವಿಷ್ಯ
ಆಯೇಷಾ ಬಾನು Edited By:

Updated on: May 21, 2021 | 6:33 AM

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಶುಕ್ಲಪಕ್ಷ, ನವಮಿ ತಿಥಿ, ಶುಕ್ರವಾರ, ಮೇ 21, 2021. ಪುಬ್ಬೆ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 10.34 ರಿಂದ ಇಂದು ಬೆಳಿಗ್ಗೆ 12.11 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.42. ಸೂರ್ಯಾಸ್ತ: ಸಂಜೆ 6.42.

ತಾ.21-05-2021 ರ ಶುಕ್ರವಾರದ ರಾಶಿಭವಿಷ್ಯ

ಮೇಷ: ಆಸ್ತಿ ಖರೀದಿ ಅಥವಾ ಮಾರಾಟದ ವ್ಯವಹಾರಗಳು ಕುದುರುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಯೋಗ್ಯತೆ ಮೀರಿ ದುಡಿಯುವ ಕಾರ್ಯಭಾರವಿರುವುದು. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗದ ಯೋಗವಿದೆ. ಶುಭ ಸಂಖ್ಯೆ: 5

ವೃಷಭ: ವಿವಿಧ ಮೂಲಗಳಿಂದ ಸಹಾಯ ದೊರೆಯುವುದು. ಉದ್ಯೋಗದಲ್ಲಿ ಅಭಿವೃದ್ಧಿ ಇರುವುದು. ಸಾಮಾಜಿಕ ಕಾರ್ಯಗಳಲ್ಲಿ ಭಾಗವಹಿಸುವಿರಿ. ಲೆಕ್ಕಾಚಾರ ತಪ್ಪದಂತೆ ಎಚ್ಚರವಹಿಸಿರಿ. ಮನೆಯಲ್ಲಿ ಮಂಗಳಕಾರ್ಯ ಜರುಗುವುದು. ಶುಭ ಸಂಖ್ಯೆ: 1

ಮಿಥುನ: ಅಂತಃಶತ್ರುಗಳ ಕಾಟ ಹೆಚ್ಚಾಗುವ ಲಕ್ಷಣವಿದೆ. ಹಳೆಯ ಸಮಸ್ಯೆಗಳು ಮತ್ತೆ ಎದುರಾಗುವ ಸಂಭವವಿದೆ. ಚಂಚಲತೆ ಬೇಡ, ಹಿಡಿದ ಕಾರ್ಯವನ್ನು ಪೂರ್ಣಗೊಳಿಸಿ. ಆರ್ಥಿಕ ಲಾಭವಿದೆ ಆದರೆ ವಿದ್ಯೆಯಲ್ಲಿ ಹಿನ್ನಡೆ ಕಂಡುಬರುವುದು. ಶುಭ ಸಂಖ್ಯೆ: 7

ಕಟಕ: ಅತಿಯಾದ ಆತ್ಮವಿಶ್ವಾಸ ಪ್ರಗತಿಗೆ ಮಾರಕವಾಗುವ ಲಕ್ಷಣವಿದೆ. ವ್ಯವಹಾರದಲ್ಲಿ ಅಡೆತಡೆಗಳು ಕಂಡುಬರುವವು. ಅನಿವಾರ್ಯ ಕೆಲಸಗಳಗೆ ಅಲೆದಾಟ ಕಂಡುಬರುವುದು. ಆರ್ಥಿಕ ಸ್ಥಿತಿ ಉತ್ತಮವಾಗಿ ಇರುವುದು. ಶುಭ ಸಂಖ್ಯೆ: 9

ಸಿಂಹ: ಆಸ್ತಿ ಖರೀದಿ ಅಥವಾ ಹೊಸ ವ್ಯವಹಾರ ಆರಂಭಕ್ಕೂ ಮೊದಲು ಆತ್ಮೀಯರೊಂದಿಗೆ ಸಮಾಲೋಚನೆ ಮಾಡಿ ಮುಂದುವರಿಯಿರಿ. ಅಡೆತಡೆಗಳ ಮಧ್ಯದಲ್ಲಿಯೂ ನಿರೀಕ್ಷಿತ ಕಾರ್ಯಗಳು ಪೂರ್ಣವಾಗುವವು. ಶುಭ ಸಂಖ್ಯೆ: 3

ಕನ್ಯಾ: ಸಂಗಡಿಗರು ಸಹಕಾರ ತೋರುವುದರಿಂದ ನಿರಾತಂಕ ಜೀವನ ಇರುವುದು. ಆಶೆ ಆಕಾಂಕ್ಷಗಳ ಈಡೇರಿಕೆಗಾಗಿ ಪ್ರಯತ್ನಿಸುವಿರಿ. ಅಪೇಕ್ಷಿತ ಧನಸಹಾಯ ದೊರೆಯುವುದು. ಉನ್ನತ ಶಿಕ್ಷಣದ ಕನಸು ಈಡೇರುವುದು. ಶುಭ ಸಂಖ್ಯೆ: 6

ತುಲಾ: ಮನಸ್ಸು ಚಂಚಲವಾಗಿ ಮಾಡುವ ಕಾರ್ಯ ಅರ್ಧಕ್ಕೆ ನಿಲ್ಲುವ ಸಂಭವವಿದೆ. ಕಷ್ಟಕಾಲದಲ್ಲಿಯೂ ಪರೋಪಕಾರದ ಬುದ್ಧಿ ತೋರುವಿರಿ. ಸಹಕಾರಿ ವಲಯದದಲ್ಲಿ ಅಪೇಕ್ಷಿತ ಲಾಭ ದೊರೆಯುವುದು. ವಿದೇಶ ಪ್ರಯಾಣದ ಯೋಗವಿದೆ. ಶುಭ ಸಂಖ್ಯೆ: 8

ವೃಶ್ಚಿಕ: ದೈಹಿಕ ಸಮಸ್ಯೆಗಳು ಉಲ್ಬಣವಾಗಿ ಕೆಲಸಕ್ಕೆ ತೊಂದರೆ ಉಂಟುಮಾಡುವ ಸಾಧ್ಯತೆ ಇದೆ. ಮನೆಯಲ್ಲಿ ಕಾರ್ಯ ವಿರೋಧ ಇರುವುದು. ಹಣಕಾಸಿನ ವಿಷಯದಲ್ಲಿ ಎಚ್ಚರಿಕೆಯ ನಡೆ ಅಗತ್ಯ. ಮಾತಿಗಿಂತ ಕೃತಿಗೆ ಮಹತ್ವ ಕೊಡಿ. ಶುಭ ಸಂಖ್ಯೆ: 2

ಧನು: ತಪ್ಪುಗಳನ್ನು ಸಮರ್ಥಿಸುವುದರಿಂದ ಅಪವಾದಕ್ಕೆ ಗುರಿಯಾಗುವ ಸಂಭವವಿದೆ. ಅಧಿಕಾರಿಗಳ ಕಿರಿಕಿರಿಗೆ ಮಣಿಯದೇ ಧೈರ್ಯದಿಂದ ಕೆಲಸ ನಿರ್ವಹಿಸಿರಿ. ಮತ್ತೊಬ್ಬರ ಮೇಲೆ ಅತಿಯಾದ ವಿಶ್ವಾಸ ಪ್ರಗತಿಗೆ ಮಾರಕವಾಗುವ ಲಕ್ಷಣವಿದೆ. ಶುಭ ಸಂಖ್ಯೆ: 4

ಮಕರ: ಆಶೆ ಆಕಾಂಕ್ಷಗಳ ಈಡೇರಿಕೆಗಾಗಿ ಪ್ರಯತ್ನಿಸುವಿರಿ. ಅಪೇಕ್ಷಿತ ಧನಸಹಾಯ ದೊರೆಯುವುದು. ಸಹೋದರ ಸಹಕಾರ ತೋರುವುದರಿಂದ ನಿರಾತಂಕವಾಗಿ ಕಾರ್ಯ ಪೂರ್ಣವಾಗುವುದು. ಮನೆಯಲ್ಲಿ ಸಂತಸದ ವಾತಾವರಣ ಇರುವುದು. ಶುಭ ಸಂಖ್ಯೆ: 5

ಕುಂಭ: ಅಲ್ಪ ತ್ರಾಸದಾಯಕ. ಗಡಿಬಿಡಿಯ ವಾತಾವರಣ, ಆರೋಗ್ಯದಲ್ಲಿ ಏರುಪೇರು ಸಂಭವ. ಮಹತ್ವದ ಕೆಲಸಗಳನ್ನು ಮುಂದೂಡುವುದು ಒಳ್ಳೆಯದು. ಮಂಗಳಕಾರ್ಯ, ಹೆಸರು, ಕಡಲೆ ದಾನ ಮಾಡಿರಿ. ಶುಭ ಸಂಖ್ಯೆ: 2

ಮೀನ: ದೂರ ಪ್ರಯಾಣದ ಅವಶ್ಯಕತೆ ಕಂಡುಬರುವುದು. ಗುಪ್ತ ಧನ, ಲಾಟರಿ, ವ್ಯಾಪಾರದಲ್ಲಿ ಬೆಲೆಗಳ ಹೆಚ್ಚಳದಿಂದ ಲಾಭ. ಅನೇಕ ರೀತಿಯ ಸೌಭಾಗ್ಯಗಳು ದೊರೆಯುವವು. ಅನಾವಶ್ಯಕ ಮಾತು, ಸಿಟ್ಟು, ಅಹಂಕಾರದಿಂದ ಹಾಗೂ ಅಗ್ನಿ, ವಿದ್ಯುತ್, ಮಶಿನರಿಗಳಿಂದ ತೊಂದರೆ ಸಾಧ್ಯತೆ. ಶುಭ ಸಂಖ್ಯೆ: 6

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Follow Us