Horoscope Today- ದಿನ ಭವಿಷ್ಯ; ಈ ರಾಶಿಯವರು ದೋಷ ಪರಿಹಾರಕ್ಕೆ ಜಲದಾನ ಮಾಡಬೇಕು

Horoscope ಮೇ 25, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today- ದಿನ ಭವಿಷ್ಯ; ಈ ರಾಶಿಯವರು ದೋಷ ಪರಿಹಾರಕ್ಕೆ ಜಲದಾನ ಮಾಡಬೇಕು
ದಿನ ಭವಿಷ್ಯ
ಆಯೇಷಾ ಬಾನು

Updated on: May 25, 2021 | 6:33 AM

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಶುಕ್ಲಪಕ್ಷ, ಚತುರ್ದಶಿ ತಿಥಿ, ಮಂಗಳವಾರ, ಮೇ 25, 2021. ಸ್ವಾತಿ ನಕ್ಷತ್ರ, ರಾಹುಕಾಲ: ಇಂದು ಸಂಜೆ 3.28 ರಿಂದ ಇಂದು ಸಂಜೆ 5.05 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.41. ಸೂರ್ಯಾಸ್ತ: ಸಂಜೆ 6.44.

ತಾ.25-05-2021 ರ ಮಂಗಳವಾರದ ರಾಶಿಭವಿಷ್ಯ

ಮೇಷ: ಮಾತಿನಂತೆ ನಡೆದುಕೊಳ್ಳುವ ಪ್ರಯತ್ನ ಮಾಡುವಿರಿ. ಹಿರಿಯರೊಂದಿಗೆ ಮನಸ್ತಾಪ ಉಂಟಾಗುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಕೆಲಸ ನಿರ್ವಹಿಲು ಆಗದಂತಹ ಸ್ಥಿತಿ ಬರಬಹುದು. ಎಚ್ಚರಿಕೆವಹಿಸಿರಿ. ಶುಭ ಸಂಖ್ಯೆ: 6

ವೃಷಭ: ಹಳೆಯ ಸಾಲ ಮರುಪಾವತಿಯಾಗುದು. ಬೇಡವಾದ ಕಾರ್ಯಕ್ರಮದಲ್ಲಿ ಭಾಗಿಯಾಗುವ ಸಂಭವವಿದೆ. ಆತುರತೆಯ ನಿರ್ಣಯಗಳು ಅಪಾಯ ತರಬಹುದು. ಅತೀ ವಿಶ್ವಾಸಿಕರೇ ಎದುರಾಡುವ ಸಂಭವವಿದೆ. ಶುಭ ಸಂಖ್ಯೆ: 2

ಮಿಥುನ: ಜವಾಬ್ದಾರಿಯ ನಿಮಿತ್ತ ದೂರ ಪ್ರಯಾಣದ ಸಾಧ್ಯತೆ ಇದೆ. ಉದ್ಯೋಗದಲ್ಲಿ ಪ್ರಗತಿ ಇರುವದು. ಅಹಂಭಾವದಿಂದ ಕಠಿಣ ಪರಿಸ್ಥಿತಿಯನ್ನು ಎದುರಿಸುವ ಪ್ರಸಂಗವಿದೆ ಎಚ್ಚರಿಕೆ ವಹಿಸಿರಿ. ನಮೃತೆಗೆ ಯೋಗ್ಯ ಸಮ್ಮಾನ ದೊರೆಯುವುದು. ಶುಭ ಸಂಖ್ಯೆ: 8

ಕಟಕ: ಸಹೋದರರು, ಮಿತ್ರರು ಬೆನ್ನೆಲುಬಾಗಿ ನಿಲ್ಲುವರು. ಧೈರ್ಯಪ್ರವೃತ್ತಿಯು ಉತ್ತಮ ಫಲಕೊಡುವದು. ಹಳೆಯ ಬಾಕಿ ವಸೂಲಾಗುವದು. ವ್ಯಾಜ್ಯಗಳು ಅಂತ್ಯಕಾಣುವವು. ಗ್ರಹ ಸೌಖ್ಯವಿರುವುದು. ಶುಭ ಸಂಖ್ಯೆ: 9

ಸಿಂಹ: ಎಲ್ಲವನ್ನು ಹಗುರವಾಗಿ ಕಾಣುವದರಿಂದ ಸಣ್ಣ ವಿಷಯವೂ ದೊಡ್ಡ ಸಮಸ್ಯೆಯಾಗುವದು. ಹಣಕಾಸಿನ ತೊಂದರೆಗಳು ಕಂಡುಬರುವವು. ಮಹತ್ವದ ಕೆಲಸಗಳು ಅರ್ಧಕ್ಕೆ ನಿಲ್ಲುವ ಸಾಧ್ಯತೆ ಇದೆ. ಎಚ್ಚರಿಕೆ ವಹಿಸಿರಿ. ಶುಭ ಸಂಖ್ಯೆ: 1

ಕನ್ಯಾ: ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸಯೋಗವಿದೆ. ಕೊಟ್ಟಸಾಲ ಮರುಪಾವತಿಯಾಗುವದು. ಶುಭ ಸಂಖ್ಯೆ: 4

ತುಲಾ: ಕೈಹಾಕಿದ ಕೆಲಸಗಳು ನಿರಾತಂಕವಾಗಿ ಮುಂದುವರೆಯುವವು. ಉತ್ತಮವಾದ ಸಮಯ ಇರುವದರಿಂದ ಮನೆಯಲ್ಲಿ ಸಂಭ್ರಮದ ವಾತಾವರಣ ಇರುವದು. ಹೊಸ ಯೋಜನೆಗಳಿಗೆ ಚಾಲನೆ ದೊರೆಯುವದು. ಶುಭ ಸಂಖ್ಯೆ: 5

ವೃಶ್ಚಿಕ: ಲೇವಾದೇವಿ ವ್ಯವಹಾರದಲ್ಲಿ ಅನಿರೀಕ್ಷಿತ ಏರಿಕೆ ಕಂಡುಬರುವದು. ಸಂಗಡಿಗರು ಸಹಕಾರ ತೋರುವದರಿಂದ ನಿರಾತಂಕ ಜೀವನ ಇರುವದು. ಮಾಡುವ ಕಾರ್ಯಗಳಲ್ಲಿ ಯಶಸ್ಸು ದೊರೆಯುವದು. ಆರ್ಥಿಕ ಸಂಕಷ್ಟ ದೂರಾಗುವದು. ಶುಭ ಸಂಖ್ಯೆ: 7

ಧನು: ಮನೆ, ನಿವೇಶನ, ಆಸ್ತಿ ಖರೀದಿ ಯೋಗವಿದೆ. ವ್ಯವಹಾರದಲ್ಲಿ ಜಾಗ್ರತೆ ಇರಲಿ. ವ್ಯಾಪಾರ ಉತ್ತಮವಾಗಿರುವದು. ಉತ್ಸಾಹ ಮೂಡುವದು. ದೋಷ ಪರಿಹಾರಕ್ಕೆ ಜಲದಾನ ಮಾಡಿರಿ. ಶುಭ ಸಂಖ್ಯೆ: 3

ಮಕರ: ಭಾವುಕತೆಯಿಂದ ಕಾರ್ಯಸಾಧಿಸಲು ಪ್ರಯತ್ನಿಸುವಿರಿ. ಪರಾವಲಂಬಿ ವ್ಯವಹಾರದಲ್ಲಿ ಹೂಡಿಕೆ ಬೇಡ. ಸಂಶಯಿತ ನಡೆಯಿಂದ ಮನಸ್ತಾಪ. ಸಣ್ಣಪುಟ್ಟ ಕೆಲಸಗಳೂ ವಿಳಂಬವಾಗುವ ಸಾಧ್ಯತೆ ಇದೆ. ಅಭದ್ರತೆ ಕಾಡುವದು. ಶುಭ ಸಂಖ್ಯೆ: 6

ಕುಂಭ: ಒಳ್ಳೆಯ ಮಾತುಗಳಂದ ಸಂಬಂಧ ಸುಧಾರಿಸುವದು. ಸ್ನೇಹಿತರಲ್ಲಿಯ ಮನಸ್ತಾಪ ದೂರಾಗುವದು. ಶಕ್ಯತಾ ಮೀರಿ ದುಡಿಯುವ ಕಾರ್ಯಭಾರವಿರುವದು. ಉದ್ಯೋಗದ ಹೊರತಾಗಿ ಬೇರೆ ಕೆಲಸಕ್ಕೂ ಗಮನಹರಿಸಿ. ಶುಭ ಸಂಖ್ಯೆ: 9

ಮೀನ: ದಿಟ್ಟತನ, ಮನೋಸ್ಥೈರ್ಯ, ನೇರ,ನಿಷ್ಟುರ ನಡೆಗಳಿಗೆ ಉತ್ತಮ ಫಲಪಾಪ್ತವಾಗುವುದು. ನಿಮ್ಮ ನಿರ್ಧಾರಗಳು ಪರಿವರ್ತನೆಗೆ ಕಾರಣವಾಗುವವು. ಅವಿವಾಹಿತರಿಗೆ ವಿವಾಹ ಯೋಗ ಕೂಡಿ ಬರುವದು. ಶುಭ ಸಂಖ್ಯೆ: 1

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Follow Us