AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today- ದಿನ ಭವಿಷ್ಯ; ಶುಭ ಶುಕ್ರವಾರದ ಭವಿಷ್ಯ.. ಯಾರಿಗೆ ಶುಭ, ಯಾರಿಗೆ ಅಶುಭ

Horoscope ಮೇ 28, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today- ದಿನ ಭವಿಷ್ಯ; ಶುಭ ಶುಕ್ರವಾರದ ಭವಿಷ್ಯ.. ಯಾರಿಗೆ ಶುಭ, ಯಾರಿಗೆ ಅಶುಭ
ದಿನ ಭವಿಷ್ಯ
ಆಯೇಷಾ ಬಾನು
ಆಯೇಷಾ ಬಾನು|

Updated on: May 28, 2021 | 6:39 AM

Share

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಕೃಷ್ಣಪಕ್ಷ, ಬಿದಿಗೆ ತಿಥಿ, ಶುಕ್ರವಾರ, ಮೇ 28, 2021. ಮೂಲ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 10.35 ರಿಂದ ಇಂದು ಬೆಳಿಗ್ಗೆ 12.13 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 5.41. ಸೂರ್ಯಾಸ್ತ: ಸಂಜೆ 6.45.

ತಾ.28-05-2021 ರ ಶುಕ್ರವಾರದ ರಾಶಿಭವಿಷ್ಯ.

ಮೇಷ: ದೂರಾಲೋಚನೆಯಿಂದ ಕಾರ್ಯದಲ್ಲಿ ಯಶಸ್ಸು. ಆಸ್ತಿ ಖರೀದಿ ಸಾಧ್ಯ. ವೈವಾಹಿಕ ಚಿಂತೆ ಇರುವದು. ಧಾರ್ಮಿಕ ಸಮಾರಂಭಗಳಲ್ಲಿ ಭಾಗಿಯಾಗುವ ಯೋಗವಿದೆ. ಧಾರ್ಮಿಕ ಕ್ಷೇತ್ರಗಳ ದರ್ಶನ ಯೋಗವಿದೆ. ಶುಭ ಸಂಖ್ಯೆ: 4

ವೃಷಭ: ಉದ್ಯೋಗ ಸಂಬಂಧಿತ ಸಮಸ್ಯೆಗಳು ಎದುರಾಗುವವು. ಅನವಶ್ಯಕ ಭಯ ಅಗತ್ಯವಿಲ್ಲ, ನಿಮ್ಮ ಸೇವೆ ಫಲ ನೀಡುವುದು. ಸಂಕಷ್ಟದ ಮಧ್ಯೆಯೂ ಸಂತೋಷದ ದಿನಗಳಿವೆ. ಆಗಂತುಕರೊಂದಿಗೆ ಜಾಗೃತೆ ಅಗತ್ಯ. ಶುಭ ಸಂಖ್ಯೆ: 1

ಮಿಥುನ: ಹೊಸ ಕೆಲಸವನ್ನು ಒಪ್ಪಿಕೊಳ್ಳುವ ಮೊದಲು ವಿಚಾರಮಾಡಿ ಮುಂದುವರೆಯಿರಿ. ಉದ್ಯೋಗದ ಸ್ಥಾನ ಬದಲಾವಣೆಯ ಯೋಗವಿದೆ. ಆಮಿಷಕ್ಕೆ ಒಳಗಾಗಿ ಮೋಸಹೋಗುವ ಸಂಭವವಿದೆ. ಎಚ್ಚರಿಕೆ ವಹಿಸಿರಿ. ಶುಭ ಸಂಖ್ಯೆ: 9

ಕಟಕ: ಅತಿಯಾದ ಆತ್ಮವಿಶ್ವಾಸ ಪ್ರಗತಿಗೆ ಮಾರಕವಾಗುವ ಲಕ್ಷಣವಿದೆ. ವ್ಯವಹಾರದಲ್ಲಿ ಅಡೆತಡೆಗಳು ಕಂಡುಬರುವವು. ಅನಿವಾರ್ಯ ಕೆಲಸಗಳಗೆ ಅಲೆದಾಟ ಕಂಡುಬರುವುದು. ಆರ್ಥಿಕ ಸ್ಥಿತಿ ಉತ್ತಮವಾಗಿ ಇರುವುದು. ಶುಭ ಸಂಖ್ಯೆ: 6

ಸಿಂಹ: ಅನಿಸಿಕೆಗಿಂತ ವಾಸ್ತವ ಬೇರೆ ಇರುವುದರಿಂದ ತಕ್ಕ ಬದಲಾವಣೆ ಮಾಡಿಕೊಳ್ಳುವಿರಿ. ನಡತೆಯಲ್ಲ ಸೂಕ್ಷತೆ ಇರಲಿ. ವ್ಯವಹಾರವನ್ನು ಪೂರ್ಣವಾಗಿ ಆಲೋಚಿಸಿ ಮಾಡುವುದು ಒಳ್ಳೆಯದು. ಧನಹಾನಿಯ ಸಂಭವವಿದೆ. ಶುಭ ಸಂಖ್ಯೆ: 7

ಕನ್ಯಾ: ಮನಸ್ಸು ಚಂಚಲವಾಗಿ ಮಾಡುವ ಕಾರ್ಯ ಅರ್ಧಕ್ಕೆ ನಿಲ್ಲುವ ಸಂಭವವಿದೆ. ಕಷ್ಟಕಾಲದಲ್ಲಿಯೂ ಪರೋಪಕಾರದ ಬುದ್ಧಿ ತೋರುವಿರಿ. ಸಹಕಾರಿ ವಲಯದದಲ್ಲಿ ಅಪೇಕ್ಷಿತ ಲಾಭ ದೊರೆಯುವದು. ವಿದೇಶ ಪ್ರಯಾಣದ ಯೋಗವಿದೆ. ಶುಭ ಸಂಖ್ಯೆ: 8

ತುಲಾ: ಆತ್ಮೀಯರೇ ವಿರೋಧಿಗಳಂತೆ ವರ್ತಿಸುವರು. ಮಾಡದ ತಪ್ಪಿಗೆ ಕ್ಷಮೆಕೇಳುವ ಪ್ರಸಂಗ ಇರುವುದರಿಂದ ವ್ಯವಹಾರಗಳಲ್ಲಿ ಎಚ್ಚರಿಕೆ ಇರಲಿ. ಮನಸ್ಸಿನಲ್ಲಿ ಸಂಕಲ್ಪಿಸಿದ ಕಾರ್ಯವು ನಿಧಾನವಾಗಿ ನೆರವೇರಿ ಲಾಭದಾಯಕವಾಗುವುದು. ಶುಭ ಸಂಖ್ಯೆ: 3

ವೃಶ್ಚಿಕ: ಧನಮೂಲಗಳು ಹೆಚ್ಚಾಗುವವು. ಆರ್ಥಿಕ ಸ್ಥಿತಿ ಸುಧಾರಿಸುವ ಉಪಾಯ ಕಂಡುಬರುವುದು. ಜನರೊಂದಿಗೆ ಉತ್ತಮ ಬಾಂಧವ್ಯ ವೃದ್ಧಿಯಾಗುವುದು. ಯುಕ್ತಿಯಿಂದ ಕಾರ್ಯಸಾಧಿಸುವಿರಿ. ನೆಮ್ಮದಿಯ ವಾತಾವರಣ ಇರುವುದು. ಶುಭ ಸಂಖ್ಯೆ: 2

ಧನು: ಲೇವಾದೇವಿ ವ್ಯವಹಾರದಲ್ಲಿ ಅನಿರೀಕ್ಷಿತ ಏರಿಕೆ ಕಂಡುಬರುವುದು. ಸಂಗಡಿಗರು ಸಹಕಾರ ತೋರುವುದರಿಂದ ನಿರಾತಂಕ ಜೀವನ ಇರುವುದು. ಮಾಡುವ ಕಾರ್ಯಗಳಲ್ಲಿ ಯಶಸ್ಸು ದೊರೆಯುವುದು. ಆರ್ಥಿಕ ಸಂಕಷ್ಟ ದೂರಾಗುವದು. ಶುಭ ಸಂಖ್ಯೆ: 5

ಮಕರ: ದೂರ ಪ್ರಯಾಣದ ಅವಶ್ಯಕತೆ ಕಂಡುಬರುವುದು. ಗುಪ್ತ ಧನ, ಲಾಟರಿ, ವ್ಯಾಪಾರದಲ್ಲಿ ಬೆಲೆಗಳ ಹೆಚ್ಚಳದಿಂದ ಲಾಭ. ಅನೇಕ ರೀತಿಯ ಸೌಭಾಗ್ಯಗಳು ದೊರೆಯುವವು. ಅನಾವಶ್ಯಕ ಮಾತು, ಸಿಟ್ಟು, ಅಹಂಕಾರದಿಂದ ಹಾಗೂ ಅಗ್ನಿ, ವಿದ್ಯುತ್, ಮಶಿನರಿಗಳಿಂದ ತೊಂದರೆ ಸಾಧ್ಯತೆ. ಶುಭ ಸಂಖ್ಯೆ: 9

ಕುಂಭ: ಕಾಯಕದಲ್ಲಿ ಯಶಸ್ಸು, ಕೀರ್ತಿ, ಧನಲಾಭ, ಉದ್ಯೋಗ ಪ್ರಾಪ್ತಿಯ ಯೋಗವಿದೆ. ಮೊದಲು ಕಷ್ಟ ನಂತರದಲ್ಲಿ ಉತ್ತಮವಾದ ಫಲ ದೊರೆಯುವುದು. ಗುರುಬಲ ವೃದ್ಧಿಸುವದು. ವೈವಾಹಿಕ ಮಾತುಕತೆಗೆ ಕಾಲಕೂಡಿ ಬರುವುದು. ಶುಭ ಸಂಖ್ಯೆ: 4

ಮೀನ: ನಿಮ್ಮ ಮನೆಬಾಗಿಲಲ್ಲಿ ಅದೃಷ್ಟ ಲಕ್ಷ್ಮೀ ಒಲಿದು ಬರುತ್ತಾಳೆ. ಆರೋಗ್ಯ ಸುಧಾರಣೆಯಾಗುವುದು. ಸ್ಥಿತಿಗಳು ಅನುಕೂಲಕರವಾಗಿ ಮುಂದವರೆಯುವುದು. ಗ್ರಹಸುಖ ಯೋಗವು ಇದೆ. ಮನೋಚಿಂತಿತ ಕನಸು ನನಸಾಗಲಿದೆ. ಶುಭ ಸಂಖ್ಯೆ: 5

Dina Bhavishya

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ