AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today- ದಿನ ಭವಿಷ್ಯ: ಈ ರಾಶಿಯ ಪ್ರೇಮಿಗಳಿಗೆ ಅಪೇಕ್ಷೆಯಂತೆ ಕಂಕಣಬಲ ಕೂಡಿಬರುವದು

Horoscope ನವೆಂಬರ್ 18, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today- ದಿನ ಭವಿಷ್ಯ: ಈ ರಾಶಿಯ ಪ್ರೇಮಿಗಳಿಗೆ ಅಪೇಕ್ಷೆಯಂತೆ ಕಂಕಣಬಲ ಕೂಡಿಬರುವದು
Horoscope Today
TV9 Web
| Updated By: Vinay Bhat|

Updated on: Nov 18, 2021 | 6:39 AM

Share

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಕಾರ್ತಿಕ ಮಾಸ, ಶರದೃತು, ಶುಕ್ಲಪಕ್ಷ, ಚತುರ್ದಶಿ ತಿಥಿ, ಗುರುವಾರ, ನವೆಂಬರ್ 18, 2021. ಭರಣಿ ನಕ್ಷತ್ರ, ರಾಹುಕಾಲ: ಇಂದು ಮಧ್ಯಾಹ್ನ 1 ಗಂಟೆ 25 ನಿಮಿಷದಿಂದ ಮಧ್ಯಾಹ್ನ 2 ಗಂಟೆ 49 ನಿಮಿಷದವರೆಗೆ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6:22 ನಿಮಿಷ. ಸೂರ್ಯಾಸ್ತ: ಸಂಜೆ 5:39 ನಿಮಿಷ.

ತಾ.18-11-2021 ರ ಬುಧವಾರದ ರಾಶಿಭವಿಷ್ಯ

ಮೇಷ: ಮದುವೆಯ ಮಾತುಕತೆಗಳಲ್ಲಿ ಸಫಲತೆ ಇದೆ. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ಕೆಲಸದಲ್ಲಿ ವಿಘ್ನ ಉಂಟಾಗುವ ಸಾಧ್ಯತೆ ಇರುವದು. ಎಚ್ಚರಿಕೆವಹಿಸಿರಿ. ಶುಭಸಂಖ್ಯೆ: 6

ವೃಷಭ: ಯಾವದೇ ಅಡೆತಡೆ ಇಲ್ಲದ ನಿರಾತಂಕ ಜೀವನ ಇರುವದು. ಸಾಮಜಿಕ ಕಾರ್ಯಗಳಿಂದ ಗೌರವಾದರಗಳು ದೊರೆಯುವವು. ಆಶೆಗೆ ತಕ್ಕಂತೆ ಫಲಗಳು ಕೈಗೂಡುವವು. ಬಂಧುಗಳಲ್ಲಿ ಮನಸ್ತಾಪ ಕಂಡುಬರುವದು. ಶುಭಸಂಖ್ಯೆ: 1

ಮಿಥುನ: ಧನಮದಕ್ಕಿಂತ ವಿದ್ಯಾಮದ ಅಪಾಯಕಾರಿ ಆದರಿಂದ ತೊಂದರೆ ಆಗುವ ಸಾಧ್ಯತೆ ಇದೆ ವಿನಯದಿಂದ ವರ್ತಿಸಿರಿ. ಅಕಾಲಿಕ ಒತ್ತಡಗಳಿಂದ ಕಾರ್ಯಹಾನಿ. ಪ್ರೇಮಿಗಳಿಗೆ ಅಪೇಕ್ಷೆಯಂತೆ ಕಂಕಣಬಲ ಕೂಡಿಬರುವದು. ಶುಭಸಂಖ್ಯೆ: 9

ಕರ್ಕ: ವ್ಯವಹಾರದಲ್ಲಿ ಹಾನಿ ಕಂಡುಬರುವದು. ಮಂದಗತಿಯ ಕೆಲಸದಿಂದ ಮನಸ್ಸಿಗೆ ಅಸಮಾಧಾನ ಉಂಟಾಗುವ ಸಂಭವವಿದೆ. ಸಹೋದರರು, ಮಿತ್ರರು ಬೆನ್ನೆಲುಬಾಗಿ ನಿಲ್ಲುವರು. ಧೈರ್ಯದಿಂದ ಮಾಡುವ ಕಾರ್ಯ ಉತ್ತಮ ಫಲಕೊಡುವದು. ಶುಭಸಂಖ್ಯೆ: 2

ಸಿಂಹ: ಆತ್ಮೀಯರೇ ವಿರೋಧಿಗಳಂತೆ ವರ್ತಿಸುವರು. ಮಾಡದ ತಪ್ಪಿಗೆ ಕ್ಷಮೆಕೇಳುವ ಪ್ರಸಂಗ ಇರುವದರಿಂದ ವ್ಯವಹಾರಗಳಲ್ಲಿ ಎಚ್ಚರಿಕೆ ಇರಲಿ. ಮನಸ್ಸಿನಲ್ಲಿ ಸಂಕಲ್ಪಿಸಿದ ಕಾರ್ಯವು ನಿಧಾನವಾಗಿ ನೆರವೇರಿ ಲಾಭದಾಯಕವಾಗುವದು. ಶುಭಸಂಖ್ಯೆ: 4

ಕನ್ಯಾ: ಹೊಸ ಯೋಜನೆಗೆ ಸಂಬಂಧಿಸಿದಂತೆ ಬಂಧುಗಳೊಂದಿಗೆ ಮನಸ್ತಾಪವಾಗುವ ಸಾಧ್ಯತೆ ಇದೆ. ಕೆಲಸದಲ್ಲಿ ತೊಂದರೆ ಇದ್ದರೂ ನಿಭಾಯಿಸುವಲ್ಲಿ ಸಫಲರಾಗುವಿರಿ. ಬುದ್ಧಿ ಚಂಚಲವಾಗಿ ಹಿಡಿದ ಕಾರ್ಯ ಅರ್ದಕ್ಕೆ ನಿಲ್ಲುವ ಸಂಭವವಿದೆ. ಶುಭಸಂಖ್ಯೆ: 7

ತುಲಾ: ನಿಶ್ಚಿತ ಆರ್ಥಿಕ ಸ್ಥಿತಿ ಇರುವದರಿಂದ ಹೆಚ್ಚಿನ ತೊಂದರೆ ಇಲ್ಲದಿದ್ದರೂ ಅಲ್ಪ ಹಾನಿಯ ಸಂಭವವಿದೆ. ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸುವಿರಿ. ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸ ಬೇಡಿ. ಶುಭಸಂಖ್ಯೆ: 9

ವೃಶ್ಚಿಕ: ವ್ಯಥಾ ಚಿಂತೆ, ತಪ್ಪು ಕಲ್ಪನೆ, ನಿಷ್ಟುರ ಮಾತುಗಳನ್ನು ಕೇಳುವ ಸಂಭವ, ಜನ್ಮಸ್ಥ ಶುಕ್ರ ಇರುವದರಿಂದ ಆರ್ಥಿಕ ಸುಭದ್ರತೆ ಇರುವದು. ವಿದ್ಯಾರ್ಥಿಗಳಿಗೆ ಪರಿಶ್ರಮ ಅವಶ್ಯಕ. ಮನೆಯಲ್ಲಿ ಸಂತೋಷವಿರುವದು. ಗೋಸೇವೆಯಿಂದ ಕಷ್ಟಪರಿಹಾರ. ಶುಭಸಂಖ್ಯೆ: 6

ಧನು: ಅಲ್ಪ ತ್ರಾಸದಾಯಕ. ಗಡಿಬಿಡಿಯ ವಾತಾವರಣ, ಆರೋಗ್ಯದಲ್ಲಿ ಏರುಪೇರು ಸಂಭವ. ಮಹತ್ವದ ಕೆಲಸಗಳನ್ನು ಮುಂದೂಡುವದು ಒಳ್ಳೆಯದು. ಮಂಗಲಕಾರ್ಯ, ಹೆಸರು, ಕಡಲೆ ದಾನ ಮಾಡಿರಿ. ಶುಭಸಂಖ್ಯೆ: 3

ಮಕರ: ಮಹತ್ತರ ಯೋಜನೆಗಳು ಕಾರ್ಯಗತವಾಗಲು ಪ್ರಾಜ್ಞರ ಮಾರ್ಗದರ್ಶನ. ಜೀವನದ ಏಳಿಗೆಗೆ ಚಿಂತನೆ. ಕೆಲಸದ ನಡುವೆ ಮತ್ತೊಂದು ಕಾರ್ಯ ವಹಿಸಿಕೊಳ್ಳಲು ಚೈತನ್ಯ. ಮಹಿಳೆಯರು ಪಶ್ಚಾತಾಪಕ್ಕೆ ಅವಕಾವಿಲ್ಲದಂತೆ ನಡೆದುಕೊಳ್ಳುವುದು ಒಳಿತು. ಶುಭಸಂಖ್ಯೆ: 8

ಕುಂಭ: ಬಹುಜನರ ಪ್ರಶಂಸೆಗೆ ಪಾತ್ರವಾಗುವ ಆಡಳಿತಾತ್ಮಕ ನಿರ್ಧಾರ. ಇದ್ದಕ್ಕಿದಂತೆ ಶುಭಕರ ಒಲವು. ಸಲ್ಲುವ ವಿಚಾರದಲ್ಲಿ ಕುಟುಂಬದ ಒಗ್ಗಟ್ಟು ವೃದ್ಧಿ. ಆರ್ಥಿಕಾನೂಕೂಲದಿಂದ ಸರಳ ವ್ಯವಹಾರ. ಹೆಂಗಳೆಯರದು ಮೌನವಾದ ಕೆಲಸ. ಆದರೆ ಪರಿಣಾಮ ಜಾಸ್ತಿ. ಶುಭಸಂಖ್ಯೆ: 2

ಮೀನ: ಆಗುವುದೆಲ್ಲ ಒಳಿತೆಂಬ ಭಾವನೆ. ಕೌಟುಂಬಿಕ ಸಮಸ್ಯೆಗಳಿಗೆ ಪರಿಹಾರದ ನೆಲೆ ದೊರಕಿ ಹರ್ಷ. ಮಹಿಳೆಯರಿಗೆ ಮನೆಯಲ್ಲಿನ ಆಂತರಿಕ ವಿರಸ ನೀಗಿ ಸೌಹಾರ್ದತೆ. ನೂತನ ವಿವಾದ ಹುಟ್ಟುಹಾಕದ ಹಾಗೆ ತಾಳ್ಮೆಯಡಿ ವರ್ತನೆ. ಶುಭಸಂಖ್ಯೆ: 5

Basavaraj Guruji

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಸಂಪರ್ಕ ಸಂಖ್ಯೆ: 9972848937

ಟೀಂ ಇಂಡಿಯಾಕ್ಕೆ ಗೌತಮ್ ಗಂಭೀರ್ ಮನೆಯಲ್ಲಿ ಆತಿಥ್ಯ
ಟೀಂ ಇಂಡಿಯಾಕ್ಕೆ ಗೌತಮ್ ಗಂಭೀರ್ ಮನೆಯಲ್ಲಿ ಆತಿಥ್ಯ
ಜನರನ್ನು ಕಂಗಾಲಾಗಿಸಿದ ಬೃಹತ್ ಹೆಬ್ಬಾವನ್ನು ಹಿಡಿದ ಟ್ರಾಫಿಕ್ ಪೊಲೀಸ್!
ಜನರನ್ನು ಕಂಗಾಲಾಗಿಸಿದ ಬೃಹತ್ ಹೆಬ್ಬಾವನ್ನು ಹಿಡಿದ ಟ್ರಾಫಿಕ್ ಪೊಲೀಸ್!
ವರ್ಷಕ್ಕೊಮ್ಮೆ ಮಾತ್ರ ಏಕೆ ಭಕ್ತರಿಗೆ ಹಾಸನಾಂಬೆ ದರ್ಶನ? ಇಲ್ಲಿದೆ ನೋಡಿ ಕಾರಣ
ವರ್ಷಕ್ಕೊಮ್ಮೆ ಮಾತ್ರ ಏಕೆ ಭಕ್ತರಿಗೆ ಹಾಸನಾಂಬೆ ದರ್ಶನ? ಇಲ್ಲಿದೆ ನೋಡಿ ಕಾರಣ
ಕಾನ್ಪುರದಲ್ಲಿ 2 ಸ್ಕೂಟರ್‌ಗಳಲ್ಲಿ ಸ್ಫೋಟ; 6 ಜನರಿಗೆ ಗಾಯ
ಕಾನ್ಪುರದಲ್ಲಿ 2 ಸ್ಕೂಟರ್‌ಗಳಲ್ಲಿ ಸ್ಫೋಟ; 6 ಜನರಿಗೆ ಗಾಯ
ಚಾಕುವಿನಿಂದ ಇರಿದು ಪತ್ನಿ ಹತ್ಯೆಗೈದ ಪತಿ: ಅಪ್ಪನ ಅಸಲಿ ಬಣ್ಣ ಬಿಚ್ಚಿಟ್ಟ ಮಗ
ಚಾಕುವಿನಿಂದ ಇರಿದು ಪತ್ನಿ ಹತ್ಯೆಗೈದ ಪತಿ: ಅಪ್ಪನ ಅಸಲಿ ಬಣ್ಣ ಬಿಚ್ಚಿಟ್ಟ ಮಗ
ಅಮಿತ್ ಶಾ ಅವರನ್ನು ನಂಬಬೇಡಿ; ಮೋದಿಗೆ ಸಿಎಂ ಮಮತಾ ಬ್ಯಾನರ್ಜಿ ಎಚ್ಚರಿಕೆ
ಅಮಿತ್ ಶಾ ಅವರನ್ನು ನಂಬಬೇಡಿ; ಮೋದಿಗೆ ಸಿಎಂ ಮಮತಾ ಬ್ಯಾನರ್ಜಿ ಎಚ್ಚರಿಕೆ
ಬಿಗ್ ಬಾಸ್ ಸ್ಥಗಿತ ಆಗಲು ಜಾಲಿವುಡ್ ಸ್ಟುಡಿಯೋ ಮಾಡಿದ ಮುಖ್ಯ ತಪ್ಪು ಏನು?
ಬಿಗ್ ಬಾಸ್ ಸ್ಥಗಿತ ಆಗಲು ಜಾಲಿವುಡ್ ಸ್ಟುಡಿಯೋ ಮಾಡಿದ ಮುಖ್ಯ ತಪ್ಪು ಏನು?
ಲಿಂಗಾಯತ ಪ್ರತ್ಯೇಕ ಧರ್ಮ ಬೇಡಿಕೆ: ಸಚಿವ ದರ್ಶನಾಪುರ ಏನಂದ್ರು?
ಲಿಂಗಾಯತ ಪ್ರತ್ಯೇಕ ಧರ್ಮ ಬೇಡಿಕೆ: ಸಚಿವ ದರ್ಶನಾಪುರ ಏನಂದ್ರು?
ಸಿಸಿ , ಓಸಿ ಪಡೆಯದೇ ಮನೆ ಕಟ್ಟಿದವರಿಗೆ ಗುಡ್ ನ್ಯೂಸ್
ಸಿಸಿ , ಓಸಿ ಪಡೆಯದೇ ಮನೆ ಕಟ್ಟಿದವರಿಗೆ ಗುಡ್ ನ್ಯೂಸ್
BBK: ಕನ್ನಡಪರ ಹೋರಾಟಗಾರರಿಂದ 15 ಲಕ್ಷ ರೂ. ಡಿಮ್ಯಾಂಡ್; ಸಂಬರಗಿ ಆರೋಪ
BBK: ಕನ್ನಡಪರ ಹೋರಾಟಗಾರರಿಂದ 15 ಲಕ್ಷ ರೂ. ಡಿಮ್ಯಾಂಡ್; ಸಂಬರಗಿ ಆರೋಪ