AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today- ದಿನ ಭವಿಷ್ಯ; ಈ ರಾಶಿಯವರ ಬುದ್ಧಿ ಚಂಚಲವಾಗಿ ಹಿಡಿದ ಕಾರ್ಯ ಅರ್ಧಕ್ಕೆ ನಿಲ್ಲುವ ಸಂಭವವಿದೆ

Horoscope ಅಕ್ಟೋಬರ್ 04, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today- ದಿನ ಭವಿಷ್ಯ; ಈ ರಾಶಿಯವರ ಬುದ್ಧಿ ಚಂಚಲವಾಗಿ ಹಿಡಿದ ಕಾರ್ಯ ಅರ್ಧಕ್ಕೆ ನಿಲ್ಲುವ ಸಂಭವವಿದೆ
ದಿನ ಭವಿಷ್ಯ
TV9 Web
| Edited By: |

Updated on: Oct 04, 2021 | 6:32 AM

Share

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಭಾದ್ರಪದ ಮಾಸ, ವರ್ಷ ಋತು, ಕೃಷ್ಣಪಕ್ಷ, ತ್ರಯೋದಶಿ ತಿಥಿ, ಸೋಮವಾರ, ಅಕ್ಟೋಬರ್ 04, 2021. ಪುಬ್ಬೆ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 7.35 ರಿಂದ ಇಂದು ಬೆಳಿಗ್ಗೆ 9.04ರ ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.06. ಸೂರ್ಯಾಸ್ತ: ಸಂಜೆ 6.03

ತಾ.04-10-2021 ರ ಸೋಮವಾರದ ರಾಶಿಭವಿಷ್ಯ.

ಮೇಷ: ಬುದ್ಧಿ ಚಂಚಲವಾಗಿ ಹಿಡಿದ ಕಾರ್ಯ ಅರ್ಧಕ್ಕೆ ನಿಲ್ಲುವ ಸಂಭವವಿದೆ. ಅಕಾಲಿಕ ಒತ್ತಡಗಳಿಂದ ಕಾರ್ಯಹಾನಿ. ಉನ್ನತ ಅಧಿಕಾರಿಗಳಿಂದ ತೊಂದರೆ ಉಂಟಾಗುವುದು. ಆತ್ಮವಿಶ್ವಾಸದಿಂದ ಮುಂದುವರೆಯಿರಿ. ಶುಭ ಸಂಖ್ಯೆ: 6

ವೃಷಭ: ಕೆಲಸಕ್ಕೆ ತಕ್ಕ ಪ್ರೋತ್ಸಾಹ ದೊರೆಯುವುದು. ಶಾಂತಿ, ನೆಮ್ಮದಿಯುಕ್ತ ಜೀವನ ಇರುವುದು. ನಡೆಯುತ್ತಿರುವ ದಾರಿ ಸರಿಯಾಗಿ ಇರುವುದರಿಂದ ಗುರಿ ಮುಟ್ಟುವುದು ನಿಶ್ಚಿತ. ಆರ್ಥಿಕ ಸ್ಥಿತಿ ಉತ್ತಮವಾಗಿ ಇರುವುದು. ಶುಭ ಸಂಖ್ಯೆ: 9

ಮಿಥುನ: ಕಾಯಕನಿಷ್ಠೆ ನಿಮಗೇ ಹೊರೆಯಾಗದಂತೆ ನೋಡಿಕೊಳ್ಳಿರಿ. ನಿರಂತರ ದುಡಿಮೆಯಿಂದ ಅನಾರೋಗ್ಯ ಅಥವಾ ಮಾನಸಿಕ ಕಿರಿಕಿರಿ ಆಗುವ ಸಂಭವವಿದೆ. ಹಣಕಾಸಿನಿನ ವ್ಯವಹಾರದಲ್ಲಿ ಎಚ್ಚರಿಕೆವಹಿಸಿರಿ. ಶುಭ ಸಂಖ್ಯೆ: 1

ಕಟಕ: ವ್ಯಾಪಾರದಲ್ಲಿ ಅಭಿವೃದ್ಧಿಯಾಗುವದು. ಆರ್ಥಿಕ ಸಂಕಷ್ಟಗಳು ಪರಿಹಾರವಾಗುವವು. ಮಹಿಳೆಯರಿಗೆ ಹೆಚ್ಚಿನ ಉನ್ನತಿ ಕಂಡುಬರುವದು.ಅನಾವಶ್ಯಕ ಖರ್ಚಿನ ಸಾಧ್ಯತೆ ಇದೆ. ಶುಭ ಸಂಖ್ಯೆ: 8

ಸಿಂಹ: ಅಗೌರವ ಆಗುವ ಸಂಭವ ಇರುವುದರಿಂದ ಸೂಕ್ಷ್ಮವಾಗಿರುವದು ಉತ್ತಮ. ಅನಪೇಕ್ಷಿತರಿಗೆ ಉಪಕಾರ ಮಾಡುವುದು ಸರಿಯಲ್ಲ. ಮಕ್ಕಳ ಚಿಂತೆ ಇರುವುದು. ವಧುವರರಿಗೆ ಮದುವೆಯ ಯೋಗ ಕೂಡಿಬರುವುದು. ಶುಭ ಸಂಖ್ಯೆ: 2

ಕನ್ಯಾ: ಆರೋಗ್ಯಕ್ಕೆ ಸಂಬಂಧಿಸಿದ ವಿಪತ್ತಿನಿಂದ ಪಾರಾಗುವಿರಿ. ಕಷ್ಟದ ಸಮಯದಲ್ಲಿಯೂ ಸಂಯಮ ಕಳೆದುಕೊಳ್ಳದೇ ಮುಂದುವರೆಯುವಿರಿ. ಉದ್ಯೋಗದಲ್ಲಿ ವರ್ಗಾವಣೆಯ ಯೋಗವಿದೆ. ಆರ್ಥಿಕಬಲ ಕುಗ್ಗುವ ಸಂಭವವಿದೆ. ಶುಭ ಸಂಖ್ಯೆ: 5

ತುಲಾ: ಮಾನಸಮ್ಮಾನಗಳು ದೊರೆಯುವವು. ಕಂಕಣಬಲ ಕೂಡಿಬರುವುದು. ಮನೋಭಿಲಾಷೆಗಳು ಈಡೇರುವವು. ಆದರೆ ಉದ್ಯೋಗದಲ್ಲಿ ನಿರಾಸಕ್ತಿಯನ್ನು ಇರುವುದು ಮತ್ತು ವ್ಯವಹಾರದಲ್ಲಿ ಅಸಮಾಧಾನ ಕಂಡುಬರುವುದು. ಶುಭ ಸಂಖ್ಯೆ: 7

ವೃಶ್ಚಿಕ: ಮನಸ್ಸು ಚಂಚಲವಾಗಿ ಮಾಡುವ ಕಾರ್ಯ ಅರ್ಧಕ್ಕೆ ನಿಲ್ಲುವ ಸಂಭವವಿದೆ. ಕಷ್ಟಕಾಲದಲ್ಲಿಯೂ ಪರೋಪಕಾರದ ಬುದ್ಧಿ ತೋರುವಿರಿ. ಸಹಕಾರಿ ವಲಯದದಲ್ಲಿ ಅಪೇಕ್ಷಿತ ಲಾಭ ದೊರೆಯುವದು. ವಿದೇಶ ಪ್ರಯಾಣದ ಯೋಗವಿದೆ. ಶುಭ ಸಂಖ್ಯೆ: 3

ಧನು: ವೃತ್ತಿಪರೆತೆಯಿಂದ ಕಾರ್ಯ ಕೈಗೂಡುವುದು. ಪರಿವಾರದೊಂದಿಗೆ ದೂರ ಪ್ರವಾಸದ ಯೋಗವಿದೆ. ಉತ್ತಮವಾದ ಸಮಯ ಇರುವದರಿಂದ ಮನೆಯಲ್ಲಿ ಸಂಭ್ರಮದ ವಾತಾವರಣ ಇರುವುದು. ಶುಭ ಸಂಖ್ಯೆ: 9

ಮಕರ: ಸಜ್ಜನರಲ್ಲಿ ಮನಸ್ತಾಪ. ದೇಹಾರೋಗ್ಯವೂ ಸರಿಯಿರದೆ ತಾಪದಾಯಕವಾಗುತ್ತದೆ. ಆದರೆ ಶ್ರೇಷ್ಠ ಜನರಿಂದ ಪುರಸ್ಕಾರ. ಸಾಂಸಾರಿಕ ದೃಷ್ಟಿಯಲ್ಲೂ ತೃಪ್ತಿದಾಯಕವಿದ್ದು ನೆಮ್ಮದಿ ಉಂಟಾಗುತ್ತದೆ. ಶುಭ ಸಂಖ್ಯೆ: 3

ಕುಂಭ: ವ್ಯವಹಾರಿಕ ಏಳ್ಗೆ ಇರುವುದು. ದೂರ ಪ್ರಯಾಣದ ಸಂಭವ. ಗುಪ್ತ ಧನ, ಲಾಟರಿ, ವ್ಯಾಪಾರದಲ್ಲಿ ಬೆಲೆಗಳ ಹೆಚ್ಚಳದಿಂದ ಲಾಭ. ವಿವಿಧ ಸೌಭಾಗ್ಯಪ್ರಾಪ್ತಿ. ಅನಾವಶ್ಯಕ ಮಾತು, ಸಿಟ್ಟು, ಅಹಂಕಾರದಿಂದ ಹಾಗೂ ಅಗ್ನಿ, ವಿದ್ಯುತ್, ವಾಹನ, ಮಶಿನರಿಗಳಿಂದ ತೊಂದರೆ. ಶುಭ ಸಂಖ್ಯೆ: 5

ಮೀನ: ದೂರ ಪ್ರಯಾಣದ ಅವಶ್ಯಕತೆ ಕಂಡುಬರುವುದು. ಗುಪ್ತ ಧನ, ಲಾಟರಿ, ವ್ಯಾಪಾರದಲ್ಲಿ ಬೆಲೆಗಳ ಹೆಚ್ಚಳದಿಂದ ಲಾಭ. ಅನೇಕ ರೀತಿಯ ಸೌಭಾಗ್ಯಗಳು ದೊರೆಯುವವು. ಅನಾವಶ್ಯಕ ಮಾತು, ಸಿಟ್ಟು, ಅಹಂಕಾರದಿಂದ ಹಾಗೂ ಅಗ್ನಿ, ವಿದ್ಯುತ್, ಮಶಿನರಿಗಳಿಂದ ತೊಂದರೆ ಸಾಧ್ಯತೆ. ಶುಭ ಸಂಖ್ಯೆ: 6

Dina Bhavishya

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಸಂಪರ್ಕ ಸಂಖ್ಯೆ: 9972848937

ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್