AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ಆದಾಯ ಹೆಚ್ಚುವುದು, ವ್ಯವಹಾರಿಕ ಏಳ್ಗೆ ಇರುವುದು

Horoscope ಅಕ್ಟೋಬರ್ 13, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ಆದಾಯ ಹೆಚ್ಚುವುದು, ವ್ಯವಹಾರಿಕ ಏಳ್ಗೆ ಇರುವುದು
ದಿನ ಭವಿಷ್ಯ
TV9 Web
| Edited By: |

Updated on:Oct 13, 2021 | 6:43 AM

Share

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಆಶ್ವಯುಜ ಮಾಸ, ಶರದೃತು, ಶುಕ್ಲಪಕ್ಷ, ಅಷ್ಟಮಿ ತಿಥಿ, ಬುಧವಾರ, ಅಕ್ಟೋಬರ್ 13, 2021. ಪೂರ್ವಾಷಾಢ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 12.02 ರಿಂದ ಇಂದು ಮಧ್ಯಾಹ್ನ 1.30 ರ ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.08. ಸೂರ್ಯಾಸ್ತ: ಸಂಜೆ 5.56

ತಾ.13-10-2021 ರ ಬುಧವಾರದ ರಾಶಿಭವಿಷ್ಯ.

ಮೇಷ: ಸತತ ಪ್ರಯತ್ನಕ್ಕೆ ಫಲ ಇದ್ದೇ ಇರುತ್ತದೆ. ವೃತ್ತಿಕೌಶಲ್ಯದಿಂದ ಅಸಾಧ್ಯವಾದ ಕಾರ್ಯವನ್ನೂ ಸಾಧಿಸುವಿರಿ. ಧನಮೂಲಗಳು ಹೆಚ್ಚಾಗುವವು. ಆರ್ಥಿಕ ಸ್ಥಿತಿ ಸುಧಾರಿಸುವ ಉಪಾಯ ಕಂಡುಬರುವದು. ಶುಭ ಸಂಖ್ಯೆ: 9

ವೃಷಭ: ಆತುರತೆಯ ನಿರ್ಣಯಗಳು ಅಪಾಯ ತರಬಹುದು. ಆತ್ಮೀಯರೊಂದಿಗೆ ಮನಸ್ತಾಪವಾಗುವ ಯೋಗವಿದೆ. ಅರ್ಧಕ್ಕೆನಿಂತ ಕೆಲಸಗಳು ಮುಂದುವರೆಯುವುದು. ಸ್ವಸಾಮಥ್ರ್ಯದಿಂದ ಕಠಿಣ ಪರಿಸ್ಥಿತಿಯನ್ನು ನಿಭಾಯಿಸುವಿರಿ. ಶುಭ ಸಂಖ್ಯೆ: 1

ಮಿಥುನ: ದೂರಾಲೋಚನೆ ಮಾಡಿ ಕಾರ್ಯ ನಿರ್ವಹಿಸಿರಿ. ವೃತ್ತಿಪರೆತೆಯಿಂದ ಕಾರ್ಯ ಕೈಗೂಡುವುದು. ಪರಿವಾರದೊಂದಿಗೆ ದೂರ ಪ್ರವಾಸದ ಯೋಗವಿದೆ. ನೆಮ್ಮದಿಯ ಜೀವನ ಇರುವುದು. ಉದ್ಯೋಗವನ್ನು ವಿಸ್ತರಿಸುವ ಕಾಲ ಇರುವುದು. ಶುಭ ಸಂಖ್ಯೆ: 4

ಕಟಕ: ಆರೋಗ್ಯದಲ್ಲಿ ವ್ಯತ್ಯಾಸವಾಗುವ ಸಾಧ್ಯತೆಗಳಿವೆ. ವ್ಯವಹಾರದಲ್ಲಿ ಮಂದಗತಿ ಇರುವುದು. ವ್ಯಾಪಾರದಲ್ಲಿ ಜಾಗರೂಕತೆ ಅವಶ್ಯ. ಹಾನಿ ತಡೆಗಟ್ಟುವ ಪ್ರಯತ್ನಕ್ಕೆ ಫಲ ದೊರೆಯಲಿದೆ. ವಿದ್ಯಾರ್ಥಿಗಳಿಗೆ ಶುಭಫಲವಿದೆ. ಶುಭ ಸಂಖ್ಯೆ: 8

ಸಿಂಹ: ಯೋಜನಾಬದ್ಧ ಕೆಲಸಗಳೂ ಕೂಡ ಮುಂದೂಡುವ ಪ್ರಸಂಗವಿದೆ. ಆಪ್ತವಲಯದಲ್ಲಿ ಸಮಾಲೋಚಿಸಿರಿ. ಅನಿವಾರ್ಯ ಕರ್ತವ್ಯಗಳಿಗೆ ಸಮಯ ಹೊಂದಾಣಿಕೆ ಮಾಡುವ ಸಾಧ್ಯತೆ ಇದೆ. ಆರ್ಥಕ ಸಂಕಷ್ಟಗಳು ಎದುರಾಗುವವು. ಶುಭ ಸಂಖ್ಯೆ: 3

ಕನ್ಯಾ: ಆತ್ಮೀಯರೇ ವಿರೋಧಿಗಳಂತೆ ವರ್ತಿಸುವರು. ಮಾಡದ ತಪ್ಪಿಗೆ ಕ್ಷಮೆಕೇಳುವ ಪ್ರಸಂಗ ಇರುವದರಿಂದ ವ್ಯವಹಾರಗಳಲ್ಲಿ ಎಚ್ಚರಿಕೆ ಇರಲಿ. ಮನಸ್ಸಿನಲ್ಲಿ ಸಂಕಲ್ಪಿಸಿದ ಕಾರ್ಯವು ನಿಧಾನವಾಗಿ ನೆರವೇರಿ ಲಾಭದಾಯಕವಾಗುವುದು. ಶುಭ ಸಂಖ್ಯೆ: 2

ತುಲಾ: ವೃತ್ತಿಪರೆತೆಯಿಂದ ಕಾರ್ಯ ಕೈಗೂಡುವುದು. ಪರಿವಾರದೊಂದಿಗೆ ದೂರ ಪ್ರವಾಸದ ಯೋಗವಿದೆ. ಉತ್ತಮವಾದ ಸಮಯ ಇರುವುದರಿಂದ ಮನೆಯಲ್ಲಿ ಸಂಭ್ರಮದ ವಾತಾವರಣ ಇರುವುದು. ಶುಭ ಸಂಖ್ಯೆ: 7

ವೃಶ್ಚಿಕ: ಅಪರಿಮಿತ ಖರ್ಚು ತೋರಿದರೂ ಅಡಚಣೆಯಾಗುವ ಸಂಭವವಿಲ್ಲದೆ. ಸ್ಥಾನಮಾನಗಳೂ ಭದ್ರವಾಗಿ ಸಾಂಸಾರಿಕ ದೃಷ್ಟಿಯಲ್ಲೂ ಸುಖದಾಯಕ, ವಿಶೆಷ ಪ್ರಯತ್ನದಿಂದ ವ್ಯವಹಾರ ಸಿದ್ಧಿ ಇರುವುದು. ಶುಭ ಸಂಖ್ಯೆ: 4

ಧನು: ಆದಾಯ ಹೆಚ್ಚುವುದು. ವ್ಯವಹಾರಿಕ ಏಳ್ಗೆ ಇರುವುದು. ಅತಿಯಾದ ಆತ್ಮವಿಶ್ವಾಸ, ಆಲಸ್ಯದಿಂದ ಬಹುವಿಧವಾದ ಕಷ್ಟನಷ್ಟಗಳ ಅನುಭವವಾಗುವುದು. ಶಾಂತಚಿತ್ತರಾಗಿ ವ್ಯವಹರಿಸಿರಿ. ಕೆಲಸದಲ್ಲಿ ಹೆಚ್ಚಿನ ಬದ್ಧತೆ ತೋರಿಸುವ ಅವಶ್ಯಕತೆ ಕಂಡುಬರುವುದು. ಶುಭ ಸಂಖ್ಯೆ: 5

ಮಕರ: ನಿಮ್ಮ ಮನೆಬಾಗಿಲಲ್ಲಿ ಅದೃಷ್ಟ ಲಕ್ಷ್ಮೀ ಒಲಿದು ಬರುತ್ತಾಳೆ. ಆರೋಗ್ಯ ಸುಧಾರಣೆಯಾಗುವುದು. ಸ್ಥಿತಿಗಳು ಅನುಕೂಲಕರವಾಗಿ ಮುಂದವರೆಯುವುದು. ಗ್ರಹಸುಖ ಯೋಗವು ಇದೆ. ಮನೋಚಿಂತಿತ ಕನಸು ನನಸಾಗಲಿದೆ. ಶುಭ ಸಂಖ್ಯೆ: 2

ಕುಂಭ: ಸ್ವೀಕೃತ ಕಾರ್ಯವು ಫಲಪ್ರದವಾಗಿ ಗೌರವ ಆದರಗಳು ಪ್ರಾಪ್ತವಾಗುವವು. ಈ ಸಮಯದಲ್ಲಿ ಉತ್ತಮ ಧನಾರ್ಜನೆ ಯಾಗುವುದು ವಿದೇಶಪ್ರಯಾಣ, ಪ್ರೇಮಸಂಭಾಷಣೆ, ದೇವ ಬ್ರ್ರಾಹ್ಮಣ, ಧರ್ಮಕಾರ್ಯಗಳು ನಡೆಯುವವು. ಸ್ಥಿರಾಸ್ತಿಗೆ ಸಂಬಂಧಿಸಿದ ವ್ಯಾಜ್ಯ ಪರಿಹಾರವಾಗುವವು. ಶುಭ ಸಂಖ್ಯೆ: 8

ಮೀನ: ಏಕಾಂಗಿತನದ ಬೇಸರ ಪರಿಸರದಿಂದ ಹೊರಬಂದು ಹೊಸಬರೊಂದಿಗೆ ಬಾಳುವ ಸಂಕಲ್ಪ. ನಿರಾಕರಿಸಿದ್ದ ಜವಾಬ್ದಾರಿ ಪುನ: ಸುಪರ್ದಿಗೆ ಬಂದು ಮೆಚ್ಚುಗೆಯಾಗಿ ನಿಭಾವಣೆ. ಬಾಳ ಸಂಗಾತಿ ಜತೆಗಿನ ಚಿಕ್ಕ ಪುಟ್ಟ ಚರ್ಚೆಗಳೇ ಮುಂದೆ ವಿರಸಕ್ಕೆ ದಾರಿಯಾದೀತು. ಶುಭ ಸಂಖ್ಯೆ: 3

Dina Bhavishya

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಸಂಪರ್ಕ ಸಂಖ್ಯೆ: 9972848937

Published On - 6:42 am, Wed, 13 October 21

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ