AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today- ದಿನ ಭವಿಷ್ಯ; ಮೇಷ ರಾಶಿಯವರಿಗೆ ಅವಕಾಶಗಳು ಕಾದಿವೆ, ಗುರಿಸಾಧನೆಗೆ ಇದು ಸೂಕ್ತ ಸಮಯ

Horoscope ಅಕ್ಟೋಬರ್ 21, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today- ದಿನ ಭವಿಷ್ಯ; ಮೇಷ ರಾಶಿಯವರಿಗೆ ಅವಕಾಶಗಳು ಕಾದಿವೆ, ಗುರಿಸಾಧನೆಗೆ ಇದು ಸೂಕ್ತ ಸಮಯ
ದಿನ ಭವಿಷ್ಯ
TV9 Web
| Edited By: |

Updated on: Oct 21, 2021 | 6:37 AM

Share

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಆಶ್ವಯುಜ ಮಾಸ, ಶರದೃತು, ಶುಕ್ಲಪಕ್ಷ, ಪಾಡ್ಯ ತಿಥಿ, ಗುರುವಾರ, ಅಕ್ಟೋಬರ್ 21, 2021. ಅಶ್ವಿನಿ ನಕ್ಷತ್ರ, ರಾಹುಕಾಲ: ಇಂದು ಮಧ್ಯಾಹ್ನ 1.27 ರಿಂದ ಇಂದು ಮಧ್ಯಾಹ್ನ 2.54 ರ ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.10. ಸೂರ್ಯಾಸ್ತ: ಸಂಜೆ 5.50

ತಾ.21-10-2021 ರ ಗುರುವಾರದ ರಾಶಿ ಭವಿಷ್ಯ.

ಮೇಷ: ಅವಕಾಶಗಳು ಕಾದಿವೆ. ಗುರಿಸಾಧನೆಗೆ ಇದು ಸೂಕ್ತ ಸಮಯ. ಪ್ರಯತ್ನಿಸಿದ ಕಾರ್ಯಗಳು ಕೈಗೂಡುವವು. ವಿದ್ಯಾರ್ಥಿಗಳಿಗೆ ಉನ್ನತ ಪ್ರಶಸ್ತಿ ದೊರಕುವ ಸಾಧ್ಯತೆ ಇರುವುದು. ಶುಭ ಸಂಖ್ಯೆ: 7

ವೃಷಭ: ಕೆಲಸದಲ್ಲಿ ಅಭಿವೃದ್ಧಿ ಇದೆ. ಹಣಕಾಸಿನ ವ್ಯವಹಾರವನ್ನು ತಾಳ್ಮೆಯಿಂದ ನಿಭಾಯಿಸಿ. ಮನೆಯಲ್ಲಿ ಸಂಭ್ರಮದ ವಾತಾವರಣ ಇರುವುದು. ಮಂಗಲ ಕಾರ್ಯ ಜರುಗುವವು. ಶುಭ ಸಂಖ್ಯೆ: 1

ಮಿಥುನ: ಮನೆಯಲ್ಲಿ ಅಸಮಾಧಾನ ಇರುವುದು. ಕೂಡಿಟ್ಟ ಹಣ ಹಾನಿಯಾಗುವ ಸಂಭವವಿದೆ. ಅಣ್ಣತಮ್ಮಂದಿರಲ್ಲಿ ಸಹಕಾರ ಅತ್ಯಂತ ಅವಶ್ಯಕ. ತೋಟಗಾರಿಕೆ ಫಲಪ್ರದವಾಗಲಿದೆ. ವ್ಯಾಪಾರ ವೃದ್ಧಿಯಾಗುವುದು. ಶುಭ ಸಂಖ್ಯೆ: 9

ಕಟಕ: ಅಗೌರವ ಆಗುವ ಸಂಭವ ಇರುವುದರಿಂದ ಸೂಕ್ಷ್ಮವಾಗಿರುವುದು ಉತ್ತಮ. ಅನಪೇಕ್ಷಿತರಿಗೆ ಉಪಕಾರ ಮಾಡುವುದು ಸರಿಯಲ್ಲ. ಮಕ್ಕಳ ಚಿಂತೆ ಇರುವದು. ವಧುವರರಿಗೆ ಮದುವೆಯ ಯೋಗ ಕೂಡಿಬರುವುದು. ಶುಭ ಸಂಖ್ಯೆ: 9

ಸಿಂಹ: ಮುಲಾಜಿಲ್ಲದ ಧೋರಣೆಯಿಂದ ವ್ಯವಹಾರದಲ್ಲಿ ನಷ್ಟ ಸಾಧ್ಯತೆ ಇರುವದು. ಗಂಭೀರವಾದ ಪ್ರಮಾದವನ್ನು ಸಮರ್ಥಿಸುವದರಿಂದ ಅಪವಾದಕ್ಕೆ ಗುರಿಯಾಗುವ ಸಂಭವವಿದೆ. ಹಿರಿಯರ ಸಲಹೆ ಪಡೆಯಿರಿ. ಶುಭ ಸಂಖ್ಯೆ: 4

ಕನ್ಯಾ: ಜವಾಬ್ದಾರಿಯ ನಿಮಿತ್ತ ದೂರ ಪ್ರಯಾಣದ ಸಾಧ್ಯತೆ ಇದೆ. ಉದ್ಯೋಗದಲ್ಲಿ ಪ್ರಗತಿ ಇರುವದು. ಅಹಂಭಾವದಿಂದ ಕಠಿಣ ಪರಿಸ್ಥಿತಿಯನ್ನು ಎದುರಿಸುವ ಪ್ರಸಂಗವಿದೆ ಎಚ್ಚರಿಕೆ ವಹಿಸಿರಿ. ನಮೃತೆಗೆ ಯೋಗ್ಯ ಸಮ್ಮಾನ ದೊರೆಯುವುದು. ಶುಭ ಸಂಖ್ಯೆ: 6

ತುಲಾ: ಹೊಸ ವಿಚಾರಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸುವಿರಿ. ಕಠಿಣ ಪರಿಸ್ಥಿತಿಯಲ್ಲಿಯೂ ದುರ್ಲಭ ಸಾಧನೆ ಮಾಡುವಿರಿ. ಪರಿವಾರದಲ್ಲಿ ಸಂತಸವಿರುವದು. ಕೇಡುಬಯಸುವ ಜನರಿಗೆ ಅಂಜದೇ ಮುಂದುವರಿಯಿರಿ. ಶುಭ ಸಂಖ್ಯೆ: 3

ವೃಶ್ಚಿಕ: ಪ್ರಮುಖ ಯೋಜನೆಗಳ ಜವಾಬ್ದಾರಿ ಹೆಚ್ಚುವದು. ಆರ್ಥಿಕ ಅಭಿವೃದ್ಧಿ ಕಂಡುಬರುವದು. ಸ್ನೇಹಿತರ ಭಿನ್ನಾಭಿಪ್ರಾಯ ಬಗೆಹರಿಯುವದು. ಶತೃಗಳೂ ಸೌಮ್ಯರಾಗುವ ಕಾಲ ಇರುವದರಿಂದ ಅಪೇಕ್ಷಿತ ಕಾರ್ಯವನ್ನು ಸಾಧಿಸುವಿರಿ. ಶುಭ ಸಂಖ್ಯೆ: 8

ಧನು: ಹೊಸ ಆಲೋಚನೆಯೊಂದು ಕಾರ್ಯರೂಪಕ್ಕೆ ಬರುವದು. ಸಹವರ್ತಿಗಳ ಅಸಹಕಾರ ಇದ್ದರೂ ತೊಂದರೆ ಆಗಲಾರದು. ಅನಪೇಕ್ಷಿತ ಸ್ಥಾನ ಬದಲಾವಣೆ ಆಗುವ ಸಾಧ್ಯತೆ ಇದೆ. ಸರಿಯಾದ ಧ್ಯೇಯದಿಂದ ಸಮಾಧಾನ ಇರುವುದು. ಶುಭ ಸಂಖ್ಯೆ: 2

ಮಕರ: ಧನಾರ್ಜನೆಯ ಮಾರ್ಗವು ಶ್ರೇಷ್ಠ ಮಟ್ಟದಲ್ಲಿದ್ದು, ಐಶ್ವರ್ಯ ಸಮೃದ್ಧಿಯಾಗುತ್ತದೆ. ಸಂಸಾರಿಕ ದೃಷ್ಟಿಯಲ್ಲೂ ಸುಖ, ಸಂಭ್ರಮಗಳಿದ್ದು ತೃಪ್ತಿ ಲಭಿಸಿದರೂ ಶತ್ರುಜನರ ಪೀಡೆ ಅಧಿಕವಾಗುತ್ತದೆ. ಅನಿವಾರ್ಯ ಪ್ರವಾಸ ಸಾಧ್ಯತೆ ಇದೆ. ಶುಭ ಸಂಖ್ಯೆ: 5

ಕುಂಭ: ಕಾಯಕದಲ್ಲಿ ಯಶಸ್ಸು, ಕೀರ್ತಿ, ಧನಲಾಭ, ಉದ್ಯೋಗ ಪ್ರಾಪ್ತಿಯ ಯೋಗವಿದೆ. ಮೊದಲು ಕಷ್ಟ ನಂತರದಲ್ಲಿ ಉತ್ತಮವಾದ ಫಲ ದೊರೆಯುವುದು. ಗುರುಬಲ ವೃದ್ಧಿಸುವದು. ವೈವಾಹಿಕ ಮಾತುಕತೆಗೆ ಕಾಲಕೂಡಿ ಬರುವುದು. ಶುಭ ಸಂಖ್ಯೆ: 7

ಮೀನ: ಮಹತ್ತರ ಯೋಜನೆಗಳು ಕಾರ್ಯಗತವಾಗಲು ಪ್ರಾಜ್ಞರ ಮಾರ್ಗದರ್ಶನ. ಜೀವನದ ಏಳಿಗೆಗೆ ಚಿಂತನೆ. ಕೆಲಸದ ನಡುವೆ ಮತ್ತೊಂದು ಕಾರ್ಯ ವಹಿಸಿಕೊಳ್ಳಲು ಚೈತನ್ಯ. ಮಹಿಳೆಯರು ಪಶ್ಚಾತಾಪಕ್ಕೆ ಅವಕಾವಿಲ್ಲದಂತೆ ನಡೆದುಕೊಳ್ಳುವುದು ಒಳಿತು. ಶುಭ ಸಂಖ್ಯೆ: 3

Dina Bhavishya

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಸಂಪರ್ಕ ಸಂಖ್ಯೆ: 9972848937

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ