AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ಮಂದಗತಿಯ ಕೆಲಸದಿಂದ ಮನಸ್ಸಿಗೆ ಅಸಮಾಧಾನ ಸಂಭವ

Horoscope ಸೆಪ್ಟೆಂಬರ್ 15, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ಮಂದಗತಿಯ ಕೆಲಸದಿಂದ ಮನಸ್ಸಿಗೆ ಅಸಮಾಧಾನ ಸಂಭವ
ದಿನ ಭವಿಷ್ಯ
TV9 Web
| Edited By: |

Updated on:Sep 15, 2021 | 6:42 AM

Share

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಭಾದ್ರಪದ ಮಾಸ, ವರ್ಷ ಋತು, ಶುಕ್ಲಪಕ್ಷ, ನವಮಿ ತಿಥಿ, ಬುಧವಾರ, ಸೆಪ್ಟೆಂಬರ್ 15, 2021. ಮೂಲ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 12.10 ರಿಂದ ಇಂದು ಮಧ್ಯಾಹ್ನ 1.41ರ ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.04. ಸೂರ್ಯಾಸ್ತ: ಸಂಜೆ 6.18

ತಾ.15-09-2021 ರ ಬುಧವಾರದ ರಾಶಿಭವಿಷ್ಯ.

ಮೇಷ: ಶುಭಫಲಗಳು ಕಂಡುಬರುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸಯೋಗವಿದೆ. ಕೌಟುಂಬಿಕ ಸಮಸ್ಯೆಗಳು ದೂರಾಗುವವು. ಕೊಟ್ಟಸಾಲ ಪಾವತಿಯಾಗುವುದು. ಶುಭ ಸಂಖ್ಯೆ: 5

ವೃಷಭ: ಶಾಂತಚಿತ್ತರಾಗಿ ಕೆಲಸ ನಿರ್ವಹಿಸಿರಿ. ಹೊಸ ವ್ಯಾಪಾರ, ಉದ್ಯೋಗದ ಅವಕಾಶಗಳು ಕೂಡಿ ಬರುವವು. ಹಳೆಯ ಸಮಸ್ಯೆಗಳು ಪರಿಹಾರವಾಗುವವು. ಶುಭಕಾರ್ಯದಲ್ಲಿ ಪಾಲ್ಗೊಳ್ಳುವಿರಿ. ಶುಭ ಸಂಖ್ಯೆ: 2

ಮಿಥುನ: ವ್ಯಾಪಾರದಲ್ಲಿ ಅದೃಷ್ಟಲಾಭವಿದೆ. ವಿದ್ಯಾರ್ಥಿಗಳ ಮನೋಭಿಲಾಷೆ ಈಡೇರುವುದು. ಮನೆಯ ಜವಾಬ್ದಾರಿಗಳು ಹೆಚ್ಚುವವು. ಹಿರಿಯರ ಆರೋಗ್ಯದಲ್ಲಿ ಏರುಪೇರಾಗುವ ಸಂಭವವಿದೆ. ಶುಭ ಸಂಖ್ಯೆ: 9

ಕಟಕ: ಹಿರಿಯರಿಗೆ ಅನಾರೋಗ್ಯ ಸಂಭವ. ಉದ್ಯೋಗ ಸಂಬಂಧಿತ ಸಮಸ್ಯೆಗಳು ಎದುರಾಗುವವು. ಉದ್ಯೋಗ ಬದಲಿ ಮಾಡುವುದು ಸದ್ಯಕ್ಕೆ ಬೇಡ. ಹಣಕಾಸಿನ ವಿಷಯದಲ್ಲಿ ಬಂಧುಗಳು ಸಹಕಾರ ತೋರುವರು. ಶುಭ ಸಂಖ್ಯೆ: 1

ಸಿಂಹ: ಗಂಭೀರ ಆರೋಪದಿಂದ ಮುಕ್ತರಾಗುವಿರಿ. ಅನುಕೂಲಕರ ವಾತಾವರಣ ಇರುವುದರಿಂದ ಇನ್ನೂ ಹೆಚ್ಚಿನ ವ್ಯವಹಾರಿಕ ಸುಧಾರಣೆ ಮಾಡಲು ಪ್ರಯತ್ನಿಸಿರಿ. ಆರೋಗ್ಯದ ಸೂಕ್ತ ಕಾಳಜಿ ವಹಿಸಿರಿ. ಶುಭ ಸಂಖ್ಯೆ: 8

ಕನ್ಯಾ: ವ್ಯವಹಾರದಲ್ಲಿ ಹಾನಿ ಕಂಡುಬರುವುದು. ಮಂದಗತಿಯ ಕೆಲಸದಿಂದ ಮನಸ್ಸಿಗೆ ಅಸಮಾಧಾನ ಉಂಟಾಗುವ ಸಂಭವವಿದೆ. ಸಹೋದರರು, ಮಿತ್ರರು ಬೆನ್ನೆಲುಬಾಗಿ ನಿಲ್ಲುವರು. ಧೈರ್ಯದಿಂದ ಮಾಡುವ ಕಾರ್ಯ ಉತ್ತಮ ಫಲಕೊಡುವುದು. ಶುಭ ಸಂಖ್ಯೆ: 3

ತುಲಾ: ಆಸ್ತಿ ವಿಷಯಕ್ಕೆ ಸಂಬಂಧಿಸಿದಂತೆ ತೊಂದರೆಯಾಗುವ ಸಂಭವವಿದೆ. ಆದಾಯ ಉತ್ತಮವಾಗಿರುವುದು. ನೌಕರಿಯಲ್ಲಿ ಅಸಹಕಾರ ಎದುರಿಸಬೇಕಾಗುವುದು. ಗ್ರಹಸೌಖ್ಯವಿದ್ದರೂ ಮಾನಸಿಕ ನೆಮ್ಮದಿ ಇರಲಾರದು. ಶುಭ ಸಂಖ್ಯೆ: 6

ವೃಶ್ಚಿಕ: ಅನೇಕ ರೀತಿಯ ಲಾಭ ದೊರೆಯುವ ಸಾಧ್ಯತೆ ಇದೆ. ಆದರ್ಶ ವ್ಯಕ್ತಿತ್ವದಿಂದ ಜನ ಮನ್ನಣೆಗೆ ಪಾತ್ರರಾಗುವಿರಿ. ಎಲ್ಲ ಕೆಲಸಗಳೂ ಸಕಾಲದಲ್ಲಿ ಪೂರ್ಣವಾಗುವವು. ಕೌಟುಂಬಿಕ ವಿವಾದ ಕೊನೆಗೊಳ್ಳುವುದು. ಶುಭ ಸಂಖ್ಯೆ: 4

ಧನು: ಭಾವುಕತೆಯಿಂದ ಕಾರ್ಯಸಾಧಿಸಲು ಪ್ರಯತ್ನಿಸುವಿರಿ. ಪರಾವಲಂಬಿ ವ್ಯವಹಾರದಲ್ಲಿ ಹೂಡಿಕೆ ಬೇಡ. ಸಂಶಯಿತ ನಡೆಯಿಂದ ಮನಸ್ತಾಪ. ಸಣ್ಣಪುಟ್ಟ ಕೆಲಸಗಳೂ ವಿಳಂಬವಾಗುವ ಸಾಧ್ಯತೆ ಇದೆ. ಅಭದ್ರತೆ ಕಾಡುವುದು. ಶುಭ ಸಂಖ್ಯೆ: 7

ಮಕರ: ವ್ಯವಹಾರದಲ್ಲಿ ಹಾನಿ ಕಂಡುಬರುವುದು. ಮಂದಗತಿಯ ಕೆಲಸದಿಂದ ಮನಸ್ಸಿಗೆ ಅಸಮಾಧಾನ ಉಂಟಾಗುವ ಸಂಭವವಿದೆ. ಸಹೋದರರು, ಮಿತ್ರರು ಬೆನ್ನೆಲುಬಾಗಿ ನಿಲ್ಲುವರು. ಧೈರ್ಯದಿಂದ ಮಾಡುವ ಕಾರ್ಯ ಉತ್ತಮ ಫಲಕೊಡುವುದು. ಶುಭ ಸಂಖ್ಯೆ: 9

ಕುಂಭ: ತಾಪತ್ರಯಗಳೆಲ್ಲ ದೂರವಾಗಿದ್ದು ಆರ್ಥಿಕ ಸ್ಥಿತಿ ಸುಧಾರಣೆಯಾಗುತ್ತದೆ. ವ್ಯಾಪಾರಾದಿ ಉದ್ಯಮಗಳು ಇಷ್ಟದಂತೆ ನಡೆಯುತ್ತದೆ. ಕೆಲವೊಮ್ಮೆ ಸಣ್ಣ ವಿಷಯಗಳಿಗೂ ಭಯ ತೋರಿದರೂ ಹಾನಿಯಿಲ್ಲ. ಶುಭ ಸಂಖ್ಯೆ: 3

ಮೀನ: ಧನಾರ್ಜನೆಯ ಮಾರ್ಗವು ಶ್ರೇಷ್ಠ ಮಟ್ಟದಲ್ಲಿದ್ದು, ಐಶ್ವರ್ಯ ಸಮೃದ್ಧಿಯಾಗುತ್ತದೆ. ಸಂಸಾರಿಕ ದೃಷ್ಟಿಯಲ್ಲೂ ಸುಖ, ಸಂಭ್ರಮಗಳಿದ್ದು ತೃಪ್ತಿ ಲಭಿಸಿದರೂ ಶತ್ರುಜನರ ಪೀಡೆ ಅಧಿಕವಾಗುತ್ತದೆ. ಅನಿವಾರ್ಯ ಪ್ರವಾಸ ಸಾಧ್ಯತೆ ಇದೆ. ಶುಭ ಸಂಖ್ಯೆ: 3

Dina Bhavishya

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

Published On - 6:38 am, Wed, 15 September 21

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?