AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today- ದಿನ ಭವಿಷ್ಯ; ಈ ರಾಶಿಯವರು ಗಂಭೀರ ಆರೋಪದಿಂದ ಮುಕ್ತರಾಗಲಿದ್ದಾರೆ

Horoscope ಸೆಪ್ಟೆಂಬರ್ 16, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today- ದಿನ ಭವಿಷ್ಯ; ಈ ರಾಶಿಯವರು ಗಂಭೀರ ಆರೋಪದಿಂದ ಮುಕ್ತರಾಗಲಿದ್ದಾರೆ
ದಿನ ಭವಿಷ್ಯ
TV9 Web
| Edited By: |

Updated on: Sep 16, 2021 | 6:23 AM

Share

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಭಾದ್ರಪದ ಮಾಸ, ವರ್ಷ ಋತು, ಶುಕ್ಲಪಕ್ಷ, ದಶಮಿ ತಿಥಿ, ಗುರುವಾರ, ಸೆಪ್ಟೆಂಬರ್ 16, 2021. ಉತ್ತರಾಷಾಢ ನಕ್ಷತ್ರ, ರಾಹುಕಾಲ: ಇಂದು ಮಧ್ಯಾಹ್ನ 1.42 ರಿಂದ ಇಂದು ಸಂಜೆ 3.13ರ ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.04. ಸೂರ್ಯಾಸ್ತ: ಸಂಜೆ 6.18

ತಾ.16-09-2021 ರ ಗುರುವಾರದ ರಾಶಿಭವಿಷ್ಯ, ಮೇಷ: ಕಾರ್ಯಸಿದ್ದಿ, ಮನಃಶಾಂತಿ ಇದೆ. ಗಂಭೀರ ಆರೋಪದಿಂದ ಮುಕ್ತರಾಗುವಿರಿ. ಅನುಕೂಲಕರ ವಾತಾವರಣ ಇರುವುದರಿಂದ ಇನ್ನೂ ಹೆಚ್ಚಿನ ವ್ಯವಹಾರಿಕ ಸುಧಾರಣೆ ಮಾಡಲು ಪ್ರಯತ್ನಿಸಿರಿ. ಆರೋಗ್ಯದ ಸೂಕ್ತ ಕಾಳಜಿ ವಹಿಸಿರಿ. ಶುಭ ಸಂಖ್ಯೆ: 9

ವೃಷಭ: ಜಿಪುಣತನದಿಂದ ತೊಂದರೆಯಾಗುವ ಸಾಧ್ಯತೆ ಇದೆ. ಸಹೋದರ ಸಂಬಂಧದಲ್ಲಿ ಭಿನ್ನಾಭಿಪ್ರಾಯ ಬರುವ ಸಾಧ್ಯತೆ ಇದೆ. ಪರಸ್ಪರ ದೋಷಾರೋಪ ಬೇಡ. ಮಿತ್ರರ ಸಹಾಯ ದೊರೆಯುವುದು. ಶುಭ ಸಂಖ್ಯೆ: 1

ಮಿಥುನ: ಮುಲಾಜಿಲ್ಲದ ಧೋರಣೆಯಿಂದ ವ್ಯವಹಾರದಲ್ಲಿ ನಷ್ಟ ಸಾಧ್ಯತೆ ಇರುವುದು. ಗಂಭೀರವಾದ ಪ್ರಮಾದವನ್ನು ಸಮರ್ಥಿಸುವುದರಿಂದ ಅಪವಾದಕ್ಕೆ ಗುರಿಯಾಗುವ ಸಂಭವವಿದೆ. ಹಿರಿಯರ ಸಲಹೆ ಪಡೆಯಿರಿ. ಶುಭ ಸಂಖ್ಯೆ: 8

ಕಟಕ: ಚಂಚಲಚಿತ್ತದಿಂದ ಕಾರ್ಯಹಾನಿಯಾಗುವ ಲಕ್ಷಣಗಳಿವೆ. ಆಸ್ತಿ ಸಂಬಂದಿತ ಕ್ರಯವಿಕ್ರಯ ವ್ಯವಹಾರಗಳು ಕುದುರುವವು. ಅನವಶ್ಯಕ ಮಾತಿನಿಂದ ಇಕ್ಕಟ್ಟಿಗೆ ಸಿಕ್ಕಿಕೊಳ್ಳುವ ಸಾಧ್ಯತೆ ಇದೆ. ತಜ್ಞರ ಸಹಾಯ ಪಡೆಯಿರಿ. ಶುಭ ಸಂಖ್ಯೆ: 2

ಸಿಂಹ: ಜವಾಬ್ದಾರಿಯ ನಿಮಿತ್ತ ದೂರ ಪ್ರಯಾಣದ ಸಾಧ್ಯತೆ ಇದೆ. ಉದ್ಯೋಗದಲ್ಲಿ ಪ್ರಗತಿ ಇರುವುದು. ಅಹಂಭಾವದಿಂದ ಕಠಿಣ ಪರಿಸ್ಥಿತಿಯನ್ನು ಎದುರಿಸುವ ಪ್ರಸಂಗವಿದೆ ಎಚ್ಚರಿಕೆ ವಹಿಸಿರಿ. ನಮೃತೆಗೆ ಯೋಗ್ಯ ಸಮ್ಮಾನ ದೊರೆಯುವುದು. ಶುಭ ಸಂಖ್ಯೆ: 7

ಕನ್ಯಾ: ಹೊಸ ವಿಚಾರಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸುವಿರಿ. ಕಠಿಣ ಪರಿಸ್ಥಿತಿಯಲ್ಲಿಯೂ ದುರ್ಲಭ ಸಾಧನೆ ಮಾಡುವಿರಿ. ಪರಿವಾರದಲ್ಲಿ ಸಂತಸವಿರುವದು. ಕೇಡುಬಯಸುವ ಜನರಿಗೆ ಅಂಜದೇ ಮುಂದುವರಿಯಿರಿ. ಶುಭ ಸಂಖ್ಯೆ: 3

ತುಲಾ: ಭಾವುಕತೆಯಿಂದ ಕಾರ್ಯಸಾಧಿಸಲು ಪ್ರಯತ್ನಿಸುವಿರಿ. ಪರಾವಲಂಬಿ ವ್ಯವಹಾರದಲ್ಲಿ ಹೂಡಿಕೆ ಬೇಡ. ಸಂಶಯಿತ ನಡೆಯಿಂದ ಮನಸ್ತಾಪ. ಸಣ್ಣಪುಟ್ಟ ಕೆಲಸಗಳೂ ವಿಳಂಬವಾಗುವ ಸಾಧ್ಯತೆ ಇದೆ. ಅಭದ್ರತೆ ಕಾಡುವುದು. ಶುಭ ಸಂಖ್ಯೆ: 5

ವೃಶ್ಚಿಕ: ಪರಾವಲಂಬಿ ವ್ಯವಹಾರದಲ್ಲಿ ಹೂಡಿಕೆ ಬೇಡ. ಅತಿಯಾದ ಆತ್ಮವಿಶ್ವಾಸ ಪ್ರಗತಿಗೆ ಮಾರಕವಾಗುವ ಲಕ್ಷಣವಿದೆ. ಗಣ್ಯರ ಒಡನಾಟದಿಂದ ಮಹತ್ವದ ಕಾರ್ಯಗಳು ಸಿದ್ಧಿಸುವವು. ಅಪೇಕ್ಷಿತ ಧನಸಹಾಯ ದೊರೆಯುವುದು. ಶುಭ ಸಂಖ್ಯೆ: 4

ಧನು: ಲೇವಾದೇವಿ ವ್ಯವಹಾರದಲ್ಲಿ ಅನಿರೀಕ್ಷಿತ ಏರಿಕೆ ಕಂಡುಬರುವುದು. ಸಂಗಡಿಗರು ಸಹಕಾರ ತೋರುವದರಿಂದ ನಿರಾತಂಕ ಜೀವನ ಇರುವದು. ಮಾಡುವ ಕಾರ್ಯಗಳಲ್ಲಿ ಯಶಸ್ಸು ದೊರೆಯುವದು. ಆರ್ಥಿಕ ಸಂಕಷ್ಟ ದೂರಾಗುವುದು. ಶುಭ ಸಂಖ್ಯೆ: 9

ಮಕರ: ಗಣ್ಯರೊಂದಿಗೆ ವ್ಯವಹಾರಿಕ ಬಾಂಧವ್ಯ ವೃದ್ಧಿಯಾಗುವುದು. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸಯೋಗವಿದೆ. ಶುಭ ಸಂಖ್ಯೆ: 2

ಕುಂಭ: ಆಶೆ ಆಕಾಂಕ್ಷಗಳ ಈಡೇರಿಕೆಗಾಗಿ ಪ್ರಯತ್ನಿಸುವಿರಿ. ಅಪೇಕ್ಷಿತ ಧನಸಹಾಯ ದೊರೆಯುವುದು. ಸಹೋದರ ಸಹಕಾರ ತೋರುವದರಿಂದ ನಿರಾತಂಕವಾಗಿ ಕಾರ್ಯ ಪೂರ್ಣವಾಗುವುದು. ಮನೆಯಲ್ಲಿ ಸಂತಸದ ವಾತಾವರಣ ಇರುವುದು. ಶುಭ ಸಂಖ್ಯೆ: 1

ಮೀನ: ಕಾಯಕದಲ್ಲಿ ಯಶಸ್ಸು, ಕೀರ್ತಿ, ಧನಲಾಭ, ಉದ್ಯೋಗ ಪ್ರಾಪ್ತಿಯ ಯೋಗವಿದೆ. ಮೊದಲು ಕಷ್ಟ ನಂತರದಲ್ಲಿ ಉತ್ತಮವಾದ ಫಲ ದೊರೆಯುವದು. ಗುರುಬಲ ವೃದ್ಧಿಸುವುದು. ವೈವಾಹಿಕ ಮಾತುಕತೆಗೆ ಕಾಲಕೂಡಿ ಬರುವುದು. ಶುಭ ಸಂಖ್ಯೆ: 3

Dina Bhavishya

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು