AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ವ್ಯವಹಾರದಲ್ಲಿ ಹಾನಿ ಕಂಡುಬರುವುದು

Horoscope ಸೆಪ್ಟೆಂಬರ್ 20, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ವ್ಯವಹಾರದಲ್ಲಿ ಹಾನಿ ಕಂಡುಬರುವುದು
ದಿನ ಭವಿಷ್ಯ
TV9 Web
| Edited By: |

Updated on:Sep 20, 2021 | 6:33 AM

Share

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಭಾದ್ರಪದ ಮಾಸ, ವರ್ಷ ಋತು, ಶುಕ್ಲಪಕ್ಷ, ಹುಣ್ಣಿಮೆ ತಿಥಿ, ಸೋಮವಾರ, ಸೆಪ್ಟೆಂಬರ್ 20, 2021. ಪೂರ್ವಾಭಾದ್ರೆ ನಕ್ಷತ್ರ, ರಾಹುಕಾಲ: ಇಂದು ಬೆಳಿಗ್ಗೆ 7.35 ರಿಂದ ಇಂದು ಬೆಳಿಗ್ಗೆ 9.06ರ ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.04. ಸೂರ್ಯಾಸ್ತ: ಸಂಜೆ 6.14

ತಾ.20-09-2021 ರ ಸೋಮವಾರದ ರಾಶಿಭವಿಷ್ಯ. ಪಿತೃ ಪಕ್ಷ ಪ್ರಾರಂಭ, ಶುಭಂಭವತು

ಮೇಷ: ಪೂರ್ಣವಿಶ್ವಾಸ ಇಲ್ಲದ ಅಥವಾ ತಿಳಿಯದ ಕೆಲಸದಲ್ಲಿ ಹಣವ್ಯಯ ಮಾಡಬೇಡಿ. ಹಣಕಾಸಿನ ವ್ಯವಹಾರದಲ್ಲಿ ಸ್ವಲ್ಪ ಎಚ್ಚರಿಕೆ ಇರಲಿ. ದಿನದ ಕೆಲಸ ಬೇಸರ ಉಂಟುಮಾಡುವ ಸಾಧ್ಯತೆ ಇದೆ. ಶುಭ ಸಂಖ್ಯೆ: 5

ವೃಷಭ: ಪರಿವಾರದಲ್ಲಿ ಹೊಸಕಳೆ ಬರುವುದು. ಕುಟುಂಬದಲ್ಲಿ ಸೌಖ್ಯ ಇರುವುದು. ಮಹತ್ವದ ಕೆಲಸಕ್ಕೆ ವಿಘ್ನ ಬರುವ ಸಾಧ್ಯತೆ ಇದೆ ಎಚ್ಚರಿಕೆವಹಿಸಿರಿ. ವ್ಯವಹಾರಗಳು ಲಾಭದಾಯಕವಾಗಿ ಇರುವವು. ಶುಭ ಸಂಖ್ಯೆ: 9

ಮಿಥುನ: ಧನಮದಕ್ಕಿಂತ ವಿದ್ಯಾಮದ ಅಪಾಯಕಾರಿ ಆದ್ದರಿಂದ ತೊಂದರೆ ಆಗುವ ಸಾಧ್ಯತೆ ಇದೆ ವಿನಯದಿಂದ ವರ್ತಿಸಿರಿ. ಅಕಾಲಿಕ ಒತ್ತಡಗಳಿಂದ ಕಾರ್ಯಹಾನಿ. ಪ್ರೇಮಿಗಳಿಗೆ ಅಪೇಕ್ಷೆಯಂತೆ ಕಂಕಣಬಲ ಕೂಡಿಬರುವುದು. ಶುಭ ಸಂಖ್ಯೆ: 7

ಕಟಕ: ವ್ಯವಹಾರದಲ್ಲಿ ಹಾನಿ ಕಂಡುಬರುವುದು. ಮಂದಗತಿಯ ಕೆಲಸದಿಂದ ಮನಸ್ಸಿಗೆ ಅಸಮಾಧಾನ ಉಂಟಾಗುವ ಸಂಭವವಿದೆ. ಸಹೋದರರು, ಮಿತ್ರರು ಬೆನ್ನೆಲುಬಾಗಿ ನಿಲ್ಲುವರು. ಧೈರ್ಯದಿಂದ ಮಾಡುವ ಕಾರ್ಯ ಉತ್ತಮ ಫಲಕೊಡುವುದು. ಶುಭ ಸಂಖ್ಯೆ: 1

ಸಿಂಹ: ಕೆಲಸಗಳು ನಿಧಾನಗತಿಯಲ್ಲಿ ಸಾಗುವವು ಸೂಕ್ಷ್ಮತೆಯಿಂದ ವ್ಯವಹರಿಸಿರಿ. ಮಹತ್ವದ ಕಾರ್ಯ ಕಲಾಪಗಳಲ್ಲಿ ಭಾಗವಹಿಸುವ ಯೋಗವಿದೆ. ಮನೋಚಿಂತಿತ ಕಾರ್ಯ ಕೈಗೂಡುವದು. ಹಳೆಯ ಸಾಲ ತೀರುವುದು. ಶುಭ ಸಂಖ್ಯೆ: 8

ಕನ್ಯಾ: ಅನೇಕ ರೀತಿಯ ಲಾಭ ದೊರೆಯುವ ಸಾಧ್ಯತೆ ಇದೆ. ಆದರ್ಶ ವ್ಯಕ್ತಿತ್ವದಿಂದ ಜನ ಮನ್ನಣೆಗೆ ಪಾತ್ರರಾಗುವಿರಿ. ಎಲ್ಲ ಕೆಲಸಗಳೂ ಸಕಾಲದಲ್ಲಿ ಪೂರ್ಣವಾಗುವವು. ಕೌಟುಂಬಿಕ ವಿವಾದ ಕೊನೆಗೊಳ್ಳುವುದು. ಶುಭ ಸಂಖ್ಯೆ: 3

ತುಲಾ: ಮುಲಾಜಿಲ್ಲದ ಧೋರಣೆಯಿಂದ ವ್ಯವಹಾರದಲ್ಲಿ ನಷ್ಟ ಸಾಧ್ಯತೆ ಇರುವುದು. ಗಂಭೀರವಾದ ಪ್ರಮಾದವನ್ನು ಸಮರ್ಥಿಸುವುದರಿಂದ ಅಪವಾದಕ್ಕೆ ಗುರಿಯಾಗುವ ಸಂಭವವಿದೆ. ಹಿರಿಯರ ಸಲಹೆ ಪಡೆಯಿರಿ. ಶುಭ ಸಂಖ್ಯೆ: 6

ವೃಶ್ಚಿಕ: ಕ್ಷಮಾಗುಣ ಇರಲಿ, ಪರಸ್ಪರ ದೋಷಾರೋಪ ಮಾಡುವುದರಿಂದ ಕಾರ್ಯಹಾನಿಯ ಸಂಭವವಿದೆ. ವ್ಯವಹಾರದಲ್ಲಿ ಸಮತೋಲನ ಕಾಯ್ದುಕೊಳ್ಳುವಿರಿ. ದೊಡ್ಡಮೊತ್ತದ ಹಣಹೂಡಿಕೆ ಈಗ ಬೇಡ. ಶುಭ ಸಂಖ್ಯೆ: 8

ಧನು: ಭಾವುಕತೆಯಿಂದ ಕಾರ್ಯಸಾಧಿಸಲು ಪ್ರಯತ್ನಿಸುವಿರಿ. ಪರಾವಲಂಬಿ ವ್ಯವಹಾರದಲ್ಲಿ ಹೂಡಿಕೆ ಬೇಡ. ಸಂಶಯಿತ ನಡೆಯಿಂದ ಮನಸ್ತಾಪ. ಸಣ್ಣಪುಟ್ಟ ಕೆಲಸಗಳೂ ವಿಳಂಬವಾಗುವ ಸಾಧ್ಯತೆ ಇದೆ. ಅಭದ್ರತೆ ಕಾಡುವುದು. ಶುಭ ಸಂಖ್ಯೆ: 4

ಮಕರ: ಆತ್ಮೀಯರೇ ವಿರೋಧಿಗಳಂತೆ ವರ್ತಿಸುವರು. ಮಾಡದ ತಪ್ಪಿಗೆ ಕ್ಷಮೆಕೇಳುವ ಪ್ರಸಂಗ ಇರುವುದರಿಂದ ವ್ಯವಹಾರಗಳಲ್ಲಿ ಎಚ್ಚರಿಕೆ ಇರಲಿ. ಮನಸ್ಸಿನಲ್ಲಿ ಸಂಕಲ್ಪಿಸಿದ ಕಾರ್ಯವು ನಿಧಾನವಾಗಿ ನೆರವೇರಿ ಲಾಭದಾಯಕವಾಗುವುದು. ಶುಭ ಸಂಖ್ಯೆ: 9

ಕುಂಭ: ದಿನೇ ದಿನೇ ಅಭಿವೃದ್ಧಿ ತೋರಿ ವ್ಯವಹಾರಗಳೆಲ್ಲಾ ಇಷ್ಟದಂತೆ ನಡೆಯುತ್ತದೆ. ಹಲವು ರೀತಿಯಿಂದ ಧನಾಗಮನ ತೋರಿಬರುತ್ತದೆ. ಐಶ್ವರ್ಯ, ಮುಟ್ಟಿದ್ದು ಚಿನ್ನವಾಗುವ ಕಾಲ. ಸ್ಥಿರಾಸ್ತಿ ಪ್ರಾಪ್ತಿ. ಅಲ್ಪ ಅನಾರೋಗ್ಯ ತೋರಿದರೂ ಕ್ಷಣಿಕವೆನ್ನಬಹುದು. ಶುಭ ಸಂಖ್ಯೆ: 2

ಮೀನ: ಮಿತ್ರರ ಧೋರಣೆಯಿಂದ ವ್ಯವಹಾರಿಕ ಅಭಿವೃದ್ಧಿ ಕಂಡು ಬರುವುದು. ಕುಟುಂಬದ ಜವಾಬ್ದಾರಿ ಹೆಚ್ಚುವುದು. ಮಕ್ಕಳ ವಿದ್ಯಾಬ್ಯಾಸ ಹಾಗೂ ಆರೋಗ್ಯದ ಚಿಂತೆ ಕಂಡುಬರುವುದು. ನಿರ್ಲಕ್ಷತೆ, ಕೆಲಸ ಮುಂದೂಡುವ ಸ್ವಭಾವದಿಂದ ಹಾನಿ ಸಂಭವ. ಶುಭ ಸಂಖ್ಯೆ: 1

Dina Bhavishya

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

Published On - 6:32 am, Mon, 20 September 21

ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್