AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ಆತ್ಮೀಯರೊಂದಿಗೆ ಮನಸ್ತಾಪವಾಗುವ ಸಾಧ್ಯತೆ ಇದೆ

Horoscope ಸೆಪ್ಟೆಂಬರ್ 23, 2021ರ ನಿತ್ಯ ಪಂಚಾಂಗ ಮತ್ತು ದ್ವಾದಶ ರಾಶಿಗಳ ದಿನ ಭವಿಷ್ಯ.

Horoscope Today- ದಿನ ಭವಿಷ್ಯ; ಈ ರಾಶಿಯವರಿಗೆ ಆತ್ಮೀಯರೊಂದಿಗೆ ಮನಸ್ತಾಪವಾಗುವ ಸಾಧ್ಯತೆ ಇದೆ
ದಿನ ಭವಿಷ್ಯ
TV9 Web
| Edited By: |

Updated on: Sep 23, 2021 | 7:04 AM

Share

ನಿತ್ಯ ಪಂಚಾಂಗ: ಪ್ಲವನಾಮ ಸಂವತ್ಸರ, ದಕ್ಷಿಣಾಯನ, ಭಾದ್ರಪದ ಮಾಸ, ವರ್ಷ ಋತು, ಕೃಷ್ಣಪಕ್ಷ, ಬಿದಿಗೆ ತಿಥಿ, ಗುರುವಾರ, ಸೆಪ್ಟೆಂಬರ್ 23, 2021. ರೇವತಿ ನಕ್ಷತ್ರ, ರಾಹುಕಾಲ: ಇಂದು ಮಧ್ಯಾಹ್ನ 1.39 ರಿಂದ ಇಂದು ಸಂಜೆ 3.09ರ ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.05. ಸೂರ್ಯಾಸ್ತ: ಸಂಜೆ 6.12

ತಾ.23-09-2021 ರ ಗುರುವಾರದ ರಾಶಿಭವಿಷ್ಯ,

ಮೇಷ: ಕೆಲಸದಲ್ಲಿ ಅಭಿವೃದ್ಧಿ ಇದೆ. ಹಣಕಾಸಿನ ವ್ಯವಹಾರವನ್ನು ತಾಳ್ಮೆಯಿಂದ ನಿಭಾಯಿಸಿ. ಮನೆಯಲ್ಲಿ ಸಂಭ್ರಮದ ವಾತಾವರಣ ಇರುವುದು. ಮಂಗಳ ಕಾರ್ಯ ಜರುಗುವವು. ಶುಭ ಸಂಖ್ಯೆ: 5

ವೃಷಭ: ಯೋಜನೆಗಳಿಗೆ ಪೂರ್ವ ತಯಾರಿ ಮಾಡುವ ಅಗತ್ಯತೆ ಕಂಡುಬರುವುದು. ಹಣಕಾಸಿನ ವಿಷಯದಲ್ಲಿ ಬಂಧುಗಳೊಂದಿಗೆ ಮನಸ್ತಾಪವಾಗುವ ಸಾಧ್ಯತೆ ಇದೆ. ಸಹಾನುಭೂತಿಗೆ ಮಣಿಯದೆ ಇರುವುದು ಒಳಿತು. ಶುಭ ಸಂಖ್ಯೆ: 1

ಮಿಥುನ: ಸಮಾಧಾನಕರ ಜೀವನವಿದೆ. ಅಧಿಕಾರಿಗಳ ಸಹಕಾರ ದೊರೆಯುವುದು. ಮನೆ ಕಟ್ಟುವ ಆಸೆ ಕೈಗೂಡುವ ಸಮಯ. ಬಂಧುಮಿತ್ರರ ಹಾರೈಕೆ ತಮ್ಮೊಂದಿಗಿದೆ. ದೂರಪ್ರಯಾಣ ಯೋಗವಿದೆ. ಶುಭ ಸಂಖ್ಯೆ: 9

ಕಟಕ: ಆತ್ಮೀಯರೊಂದಿಗೆ ಮನಸ್ತಾಪವಾಗುವ ಯೋಗವಿದೆ. ಸ್ವಂತ ಉದ್ಯಮಿಗಳು ಹಾನಿ ತಪ್ಪಿಸುವ ಉಪಾಯ ಮಾಡಿ. ವ್ಯಾಪಾರದ ವಿಷಯದಲ್ಲಿ ಮೋಸವಾಗುವ ಸಾಧ್ಯತೆ ಇದೆ. ಸಾಲಗಾರರು ಸಹಕಾರ ತೋರುವರು. ಶುಭ ಸಂಖ್ಯೆ: 2

ಸಿಂಹ: ನಿಶ್ಚಿತ ಆರ್ಥಿಕ ಸ್ಥಿತಿ ಇರುವುದರಿಂದ ಹೆಚ್ಚಿನ ತೊಂದರೆ ಇಲ್ಲದಿದ್ದರೂ ಅಲ್ಪ ಹಾನಿಯ ಸಂಭವವಿದೆ. ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸುವಿರಿ. ಕೌಟುಂಬಿಕ ಕಾರ್ಯಗಳನ್ನು ನಿರ್ಲಕ್ಷಿಸ ಬೇಡಿ. ಶುಭ ಸಂಖ್ಯೆ: 3

ಕನ್ಯಾ: ನೆನೆಗುದಿಗೆ ಬಿದ್ದ ಕೆಲಸಗಳಿಗೆ ಚಾಲನೆ ದೊರೆಯುವುದು. ಮಾನಸಿಕ ಉತ್ಸಾಹ ಕಂಡುಬರುವುದು. ಆತ್ಮೀಯರಿಗೆ ಉನ್ನತ ಅಧಿಕಾರ ದೊರೆಯುವುದು. ಕಾರಣಾಂತರ ಅಧಿಕ ಖರ್ಚುಬರಬಹುದು. ಶುಭ ಸಂಖ್ಯೆ: 8

ತುಲಾ: ಭವಿಷ್ಯತ್ತಿನ ಉಪೇಕ್ಷೆ ಮಾಡದೇ ಉಳಿತಾಯಕ್ಕೆ ಗಮನಹರಿಸಿರಿ. ಆಪತ್ತುಗಳ ಪರಿಹಾರಕ್ಕಾಗಿ ವ್ಯಥಾ ತಿರುಗಾಟದ ಸಂಭವವಿದೆ. ಹಿರಿಯರ ಸಲಹೆಗೆ ತಕ್ಕಂತೆ ಮುಂದುವರೆಯಿರಿ. ಶುಭ ಸಂಖ್ಯೆ: 7

ವೃಶ್ಚಿಕ: ಒಂದೇ ಮನಸಿನ ಕ್ರೀಯಾಶೀಲವಾದ ಬದುಕು ಸಾಧನೆಗೆ ಕಾರಣವಾಗುವುದು. ಅಡೆತಡೆಗಳ ನಿವಾರಣೆಯಾಗುವುದು. ನಿಶ್ಚಿತ ಅವಧಿಯ ಪರೀಕ್ಷೆಗಳು ಎದುರಾದರೂ ಬಲಗುಂದುವುದಿಲ್ಲ. ಹಿರಿಯರ ಸಲಹೆ ದೊರೆಯುವುದು. ಶುಭ ಸಂಖ್ಯೆ: 4

ಧನು: ಹಿರಿಯರಿಗೆ ಅನಾರೋಗ್ಯ ಸಂಭವ. ಉದ್ಯೋಗ ಸಂಬಂಧಿತ ಸಮಸ್ಯೆಗಳು ಎದುರಾಗುವವು. ಉದ್ಯೋಗ ಬದಲಿ ಮಾಡುವುದು ಸದ್ಯಕ್ಕೆ ಬೇಡ. ಹಣಕಾಸಿನ ವಿಷಯದಲ್ಲಿ ಬಂಧುಗಳು ಸಹಕಾರ ತೋರುವರು. ಶುಭ ಸಂಖ್ಯೆ: 6

ಮಕರ: ಅನವಶ್ಯಕ ಅಲೆದಾಟದ ಸಾದ್ಯತೆ ಇದೆ. ಕರ್ತವ್ಯಕ್ಕೆ ಚ್ಯುತಿಯಾಗದಂತೆ ನಡೆದುಕೊಳ್ಳಲು ಪ್ರಯತ್ನ ಮಾಡುವಿರಿ. ಹಿತಶತ್ರುಗಳಿಂದ ತೊಂದರೆಯಾಗುವ ಸಾಧ್ಯತೆ ಇದೆ. ಆರ್ಥಿಕಬಲ ಕುಗ್ಗುವ ಸಂಭವವಿದೆ. ವ್ಯವಹಾರಗಳಲ್ಲಿ ಎಚ್ಚರಿಕೆ ಇರಲಿ. ಶುಭ ಸಂಖ್ಯೆ: 3

ಕುಂಭ: ಶುಭ ಕರ್ಮ ಸಂಪ್ರಾಪ್ತಿಯಿದ್ದು, ಗುರುವರ್ಗ ಸಂತೋಷ, ಸಂಸಾರ ಸುಖ. ನೂತನ ಮಿತ್ರಭೇಟಿ, ಅರ್ಥಾರ್ಜನೆಯು ಉತ್ತಮವಿದೆ. ಆದರೂ ಗೃಹಕಲಹ, ಬಂಧು ಜನರಲ್ಲಿ ಅಸಮಾಧಾನ ಕಂಡುಬರುವುದು. ಶುಭ ಸಂಖ್ಯೆ: 5

ಮೀನ: ಹಣಕಾಸಿನ ವ್ಯವಹಾರದಲ್ಲಿ ಧ್ಯರ್ಯದಿಂದ ಕಾರ್ಯ ಸಾಧನೆ. ಅಪೇಕ್ಷಸದ ಲಾಭ ಸಂಭವ. ಗಡಿಬಿಡಿಯ ವಾತಾವತರಣ, ಬಿಡುವಿಲ್ಲದ ಕಾರ್ಯ, ಮಿತ್ರರೊಂದಿಗೆ ಜಟಾಪಟಿ ಸಂಭವ, ದೀಪದಾನ ಮಾಡಿರಿ. ಶುಭ ಸಂಖ್ಯೆ: 1

Dina Bhavishya

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಹೊರಗೆ ಬಂದಮೇಲೆ ಬಿಗ್ ಬಾಸ್ ಬಗ್ಗೆ ವಿಡಿಯೋ ಮಾಡಲು ನಿರ್ಧರಿಸಿದ ರಘು
ಹೊರಗೆ ಬಂದಮೇಲೆ ಬಿಗ್ ಬಾಸ್ ಬಗ್ಗೆ ವಿಡಿಯೋ ಮಾಡಲು ನಿರ್ಧರಿಸಿದ ರಘು
ಆರ್​ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
ಆರ್​ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ