AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nitya Bhavishya: ಮೀನ ರಾಶಿಯವರಿಗೆ ಅನಿಶ್ಚಯವಾಗಿದ್ದ ವಿವಾಹವು ಇಂದು ನಿಶ್ಚಯವಾಗಲಿದೆ

2023 ಫೆಬ್ರವರಿ 16 ಗುರುವಾರ ನಿಮ್ಮ ರಾಶಿ ಫಲ ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

Nitya Bhavishya: ಮೀನ ರಾಶಿಯವರಿಗೆ ಅನಿಶ್ಚಯವಾಗಿದ್ದ ವಿವಾಹವು ಇಂದು ನಿಶ್ಚಯವಾಗಲಿದೆ
ಮೀನ ರಾಶಿ
TV9 Web
| Edited By: |

Updated on:Feb 16, 2023 | 6:31 AM

Share

ಕೈ ಉಜ್ಜಿಕೊಂಡು ಬೆಳಗ್ಗೆ ಏಳುವಾಗಲಿಂದ ಮತ್ತೆ ಹಾಸಿಗೆಗೆ ಹೋಗುವವರೆಗೂ ದಿನ ಚನ್ನಾಗಿರಬೇಕೆಂದರೆ ನಮ್ಮ ರಾಶಿ ಭವಿಷ್ಯ (Horoscope Today) ಚೆನ್ನಾಗಿರಬೇಕು. ಚಂದ್ರ, ಸೂರ್ಯನ ಸಂಚಾರ ಚನ್ನಾಗಿರಬೇಕು. ಹಾಗಾದ್ರೆ 2023 ಫೆಬ್ರವರಿ 16 ಗುರುವಾರ ನಿಮ್ಮ ರಾಶಿ ಫಲ (Nitya Bhavishya) ಹೇಗಿದೆ? ಇಂದು ಯಾವ ರಾಶಿಯವರಿಗೆ ಶುಭ? ನಿಮ್ಮ ರಾಶಿಗೆ ಏನು ಫಲವಿದೆ? ಎಂಬ ನಿಮ್ಮ ಎಲ್ಲಾ ಪ್ರಶ್ನೆಗಳಿಗೆ ಉತ್ತರ ತಿಳಿದುಕೊಳ್ಳಿ.

ನಿತ್ಯ ಪಂಚಾಂಗ: ಶಾಲಿವಾಹನ ಶಕೆ 1945, ಶುಭಕೃತ್ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಮಕರಮಾಸ, ಮಹಾನಕ್ಷತ್ರ: ಧನಿಷ್ಠಾ, ಮಾಸ:ಮಾಘ, ಪಕ್ಷ:ಕೃಷ್ಣ, ವಾರ:ಗುರು, ತಿಥಿ:ಏಕಾದಶೀ, ನಿತ್ಯನಕ್ಷತ್ರ:ಮೂಲಾ, ಯೋಗ:ಹರ್ಷಣ, ಕರಣ:ಬವ, ಸೂರ್ಯೋದಯ ಬೆಳಗ್ಗೆ 06 ಗಂಟೆ, 57 ನಿಮಿಷ. ಸೂರ್ಯಾಸ್ತ ಸಂಜೆ 06 ಗಂಟೆ 36 ನಿಮಿಷಕ್ಕೆ. ರಾಹು ಕಾಲ 12:47 – 14:14, ಯಮಘಂಡ ಕಾಲ 08:25 ರಿಂದ 09:52, ಗುಳಿಕ ಕಾಲ 11:20 ರಿಂದ 12:47.

ಮೇಷ: ಉದ್ಯೋಗದಲ್ಲಿ ಅನುಕೂಲಕರವಾದ ವಾತವರಣವಿದ್ದು ಹಲವು ರೀತಿಯ ಲಾಭವನ್ನು ಪಡೆಯುವಿರಿ. ಅವುಗಳ ಕುರಿತು ಅತಿಯಾಗಿ ಆಲೋಚಿಸಿದಷ್ಟೂ ಸಮಸ್ಯೆಗಳು ಹಾಗೇ ಇರುತ್ತವೆ. ಹಣದ ವಿಚಾರವಾಗಿ ಸಣ್ಣ ಕಲಹಗಳು ಸಂಗಾತಿಯ ನಡುವೆ ನಡೆಯಬಹುದು. ವಾಹನದಿಂದ ಅಪಘಾತವಾಗುವ ಸಾಧ್ಯತೆ. ವೃತ್ತಿಯಲ್ಲಿ ನಿಮಗೆ ಸಂತೋಷದ ವಾತಾವರಣವು ಇರಲಿದೆ. ಸಮಾರಂಭಗಳಿಗೆ ಹೋಗಿ ಆಪ್ತರೊಂದಿಗೆ ಸಮಾಲೋಚನೆ ನಡೆಸಲಿದ್ದೀರಿ. ಆಲಸ್ಯವು ಹೆಚ್ಚಿರುವುದು.

ವೃಷಭ: ಮನೆಯ ಪೂರ್ವಾರ್ಜಿತ ಆಸ್ತಿಗಳು ನಷ್ಟವಾಗಬಹುದು. ಉದ್ಯೋಗದಲ್ಲಿ ಹೆಚ್ಚು ಬದಲಾವಣೆಯಾಗುವ ಸಾಧ್ಯತೆ ಇದೆ. ಸ್ನೇಹಿತರ ಬೆಂಬಲವು ನಿಮ್ಮ ಕಾರ್ಯಕ್ಕೆ ಬಲವನ್ನು ತುಂಬಲಿದೆ. ಮಾನಸಿಕ ಒತ್ತಡವು ಆರೋಗ್ಯದ ಮೇಲೆ ಪ್ರಭಾವವನ್ನು ಬೀರಬಹುದು. ಯಾರಿಗೂ ಸಲಹೆಯನ್ನು ಕೊಡಲು ಇಂದು ಹೋಗಬೇಡಿ. ನಿಮ್ಮನ್ನೇ ಗುರಿಯಾಗಿಸಿಯಾರು. ವಸ್ತುಗಳ ಖರೀದಿಯಿಂದ ಉಂಟಾದ ಧನದ ವ್ಯಯವು ನಿಮ್ಮಲ್ಲಿ ಆತಂಕವನ್ನು ಉಂಟುಮಾಡಲಿದೆ. ದೂರದ ಪ್ರಯಾಣ ಸುಖಕರವಲ್ಲ. ಭೂಮಿಯ ವ್ಯವಹಾರದಲ್ಲಿ ನಷ್ಟವಾಗಬಹುದು.

ಮಿಥುನ: ಆರ್ಥಿಕವಾಗಿ ಸಬಲರಾಗಲು ನಿಮಗೆ ಕೆಲವು ಸೌಲಭ್ಯಗಳು ಸಿಗಲಿದೆ. ಅದನ್ನು ಬಳಸಿಕೊಳ್ಳುವಿರಿ. ಕೂಡಿಟ್ಟ ಹಣದಿಂದ ನಿಮಗೆ ಇಂದು ಲಾಭವಾಗುವ ಸಾಧ್ಯತೆ ಇದೆ. ಅನಾರೋಗ್ಯವು ನಿಮ್ಮ ಮಾನಸಿಕ ನೆಮ್ಮದಿಯನ್ನು ಹಾಳುಮಾಡಬಹುದು. ಶತ್ರುಗಳು ನಿಮ್ಮ ಏಳ್ಗೆಯನ್ನು ಸಹಿಲಾಗದೆ ತೊಂದರೆ ಕೊಟ್ಟಾರು. ನಿಮ್ಮ ಆಲೋಚನೆಗಳನ್ನು ಸಕಾರಾತ್ಮಕ ಮಾರ್ಗದಲ್ಲಿ ಹೋಗುವಂತೆ ನೋಡಿಕೊಳ್ಳಿ. ಮಾತನ್ನು ಯೋಗ್ಯವಾಗಿ, ಯೋಗ್ಯಸ್ಥಾನದಲ್ಲಿ ಆಡಿರಿ. ಬಲವಂತದಿಂದ ಯಾವ ಕಾರ್ಯವನ್ನೂ ಮಾಡಲು ಹೋಗದೇ ಇರುವುದು ಉತ್ತಮ.

ಕರ್ಕ: ಸ್ವಂತ ಉದ್ಯೋಗವನ್ನು ಮಾಡುತ್ತಿದ್ದರೆ ಲಾಭವನ್ನು ಗಳಿಸುವಿರಿ. ಹೆಸರು ಗಳಿಸುವ ಹಂಬಲವನ್ನು ಹೊಂದಿದ್ದೀರಿ. ಯಾರನ್ನೂ ಅಪಮಾನ ಮಾಡಲು ಹೋಗಬೇಡಿ. ಅದು ನಿಮಗೆ ಮುಳುವಾದೀತು. ಉದ್ವೇಗದ ಮಾತುಗಳು ನಿಮ್ಮ ಮಾನಸಿಕ ಸ್ಥಿತಿಯನ್ನು ತೋರಿಸುತ್ತದೆ. ಆರ್ಥಿಕವಾದ ದುರ್ಬಲತೆ ನಿಮ್ಮನ್ನು ಕಾಡಬಹುದು. ಅನಿರೀಕ್ಷಿತ ಸುದ್ದಿಯನ್ನು ನೀವು ಕೇಳಬೇಕಾಗಬಹುದು. ಧಾರ್ಮಿಕ ಕಾರ್ಯಗಳ ಕಡೆಗೆ ಒಲವು ಇರಲಿದೆ. ಕುಟುಂಬದವರ ಜೊತೆ ಪ್ರೀತಿಯಿಂದ ಮಾತನಾಡಿ.

ಸಿಂಹ: ವಾಹನ ಖರೀದಿಯ ಕುರಿತು ಆಲೋಚನೆ ಮಾಡುವಿರಿ. ಮನಸ್ಸು ಹಾಗು ದೇಹವು ವಿಶ್ರಾಂತಿಯನ್ನು ಬಯಸಲಿದೆ. ಮನೆಯಲ್ಲಿ ನಡೆಯುವ ಕಲಹದಿಂದ ನೀವು ಬೇಸರಗೊಳ್ಳಬಹುದು. ನಿಮ್ಮ ಮಾತನ್ನೇ ಎಲ್ಲರೂ ಪಾಲಿಸಬೇಕು ಎನ್ನುವ ನಿಮ್ಮ ಧೋರಣೆಯನ್ನು ಬದಲಿಸಿಕೊಳ್ಳುವುದು ಉತ್ತಮ. ಅನಿವಾರ್ಯದ ಪ್ರಯಾಣವು ನಿಮ್ಮನ್ನು ಹೈರಾಣ ಮಾಡುವುದು. ಆರ್ಥಿಕವಾದ ಹೂಡಿಕೆಯತ್ತ ನಿಮ್ಮ ಗಮನ ಹರಿಸುವಿರಿ. ವಿದ್ಯುದುಪಕರಣಗಳಿಂದ ನಷ್ಟವಾಗವಾಗಲಿದೆ.

ಕನ್ಯಾ: ಕುಟುಂಬದಲ್ಲಿ ಕಲಹವೇರ್ಪಡಬಹುದು. ಬಹಳ ಸೂಕ್ಷ್ಮವಾಗಿ ನಿಭಾಯಿಸಿ. ಇಲ್ಲವಾದರೆ ನ್ಯಾಯಾಲಯದವರೆಗೂ ಹೋಗಬಹುದು. ದುಃಖಿಸುವ ಅಗತ್ಯವಿಲ್ಲ. ಅವನ ಸೃಷ್ಟಿಯಲ್ಲಿ ಎಲ್ಲವೂ ಸಹಜವೇ. ತಂದೆಯಿಂದ ಧನಸಹಾಯವಾಗಲಿದೆ. ಬ್ಯಾಂಕ್ ಉದ್ಯೋಗಿಗಳಿಗೆ ಶುಭಸುದ್ದಿಯು ಸಿಗಲಿದೆ‌. ಸಂಗಾತಿಯ ಅನ್ವೇಷಣೆಯಲ್ಲಿ ನೀವು ತೊಡಗಿಕೊಳ್ಳುವಿರಿ. ಯಾರ ಮೇಲಾದರೂ ಪ್ರೀತಿಯು ಉಂಟಾಗಬಹುದು. ಈ ಕುರಿತು ಪೂರ್ವಾಪರ ಜ್ಞಾನವು ನಿಮ್ಮಲ್ಲಿ ಇರಲಿ. ಪ್ರೇಮಿಗಳ ನಡುವೆ ಬಿರುಕು ಉಂಟಾಗಬಹುದು.

ತುಲಾ: ಸಂಗಾತಿಯ ಮನಸ್ಸನ್ನು ಓಲೈಸಲು ಸಾಹಸಪಡಬೇಕಾದೀತು. ಆರ್ಥಿಕತೆಯಲ್ಲಿ ಸ್ವಲ್ಪ ಮುನ್ನಡೆ ಸಾಧಿಸಬಹುದಾಗಿದೆ‌. ವ್ಯಸನಗಳಿಗೆ ತುತ್ತಾಗುವ ಸಾಧ್ಯತೆ ಇದೆ. ಸಾಲವನ್ನು ಮಾಡುವ ಸ್ಥಿತಿಯು ಅನಿರೀಕ್ಷಿತವಾಗಿ ಎದುರಾಗಬಹುದು. ವ್ಯರ್ಥವಾದ ಸುತ್ತಾಟವು ನಿಮಗೆ ಬೇಸರ ತರಿಸಬಹುದು. ಅಪರಿಚಿತ ವ್ಯಕ್ತಿಗಳ ಮೋಸ ಹೋಗಿ ಗಳಿಕೆ ಭರದಲ್ಲಿ ಸೂಕ್ತವಾದ ಕಾರ್ಯಗಳನ್ನು ಆಯ್ಕೆ ಮಾಡಿಕೊಳ್ಳಿ. ವಿದ್ಯಾರ್ಥಿಗಳು ಅಭ್ಯಾಸದಲ್ಲಿ ತೊಡಗಲು ಶ್ರಮವನ್ನು ವಹಿಸಬೇಕು. ಚಂಚಲವಾದ ಮನಸ್ಸು ನಿಮ್ಮನ್ನು ಓದಲು ಬಿಡದು. ಅನಾಮಧೇಯ ಕರೆಗಳಿಂದ ತೊಂದರೆಯಾಗಬಹುದು‌

ವೃಶ್ಚಿಕ: ನಿಮ್ಮ ಅಲಕ್ಷ್ಯದಿಂದಲೇ ನಿಮಗೆ ತೊಂದರೆಯಾಗಬಹುದು. ಧನವು ನಷ್ಟವಾಗುವ ಸ್ಥಿತಿ ಬರಲಿದೆ. ಅನಿರೀಕ್ಷಿತ ಬಂಧುಗಳ ಆಗಮನದಿಂದ ನಿಮ್ಮ ಯೋಜಿತವಾದ ಕಾರ್ಯಗಳು ಸಲೀಸಾಗಿ ಸಾಗದು. ನಿಮ್ಮ ಲಾಭಕ್ಕೆ ಇದರಿಂದಾಗಿ ಸ್ವಲ್ಪ ತೊಂದರೆಯಾಗಬಹುದು. ಕೈಗೆ ಸಿಕ್ಕ ತುತ್ತು ಬಾಯಿಗೆ ಬರಲಿಲ್ಲ ಎನ್ನುವಂತೆ ಆಗುವುದು. ನಿಮ್ಮವರ ಅನಾರೋಗ್ಯದ ನಿಮಿತ್ತ ಆಸ್ಪತ್ರೆಗೆ ಅಲೆದಾಟವಾಗಬಹುದು. ಬಂಗಾರವನ್ನು ಖರೀದಿಸಲು ಮುಂದಾಗುವಿರಿ. ಸ್ವಂತ ಉದ್ಯೋಗದಿಂದ ಕೆಲವು ತೊಂದರೆಗಳನ್ನು ಅನುಭವಿಸಬೇಕಾಗಿಬರಬಹುದು.

ಧನುಸ್ಸು: ನಿಮ್ಮ ಕೆಲವು ರಹಸ್ಯಗಳು ಬಯಲಾದೀತು. ವಿದ್ಯಾರ್ಥಿಗಳು ಓದಿನಲ್ಲಿ ಮುನ್ನಡೆವರು. ಎತ್ತರದ ಯಾವುದಾರೂ ಪ್ರದೇಶಕ್ಕೆ ಹೋಗಬೇಕು ಎಂದು ಅನ್ನಿಸಬಹುದು. ಉದ್ಯೋಗದ ಸ್ಥಳದಲ್ಲಿ ಶಿಸ್ತಿನ ಕೆಲಸಕ್ಕೆ ಪ್ರಶಂಸೆ ಸಿಗಲಿದೆ. ಪ್ರಭಾವೀ ನಾಯಕರ ಭೇಟಿಯಿಂದ ನಿಮ್ಮ‌ ಮುಂದಿನ ಯೋಜನೆಗೆ ಸಹಕರಿಯಾಗಬಹುದು. ಮಕ್ಕಳ ನಡತೆಯಿಂದ ನಿಮ್ಮ ಮೇಲೆ ಆಪಾದನೆಗಳು ಬರಬಹುದು. ಮಕ್ಕಳ ಕುರಿತು ಚಿಂತೆಯಾಗಬಹುದು. ಆಧ್ಯಾತ್ಮದಲ್ಲಿ ಮನಸ್ಸಿಡಲು ಬಯಸುವಿರಿ.

ಮಕರ: ಸಂಗಾತಿಯ ನಡವಳಿಕೆಗಳು ಬೇಸರವನ್ನು ತರಿಸಬಹುದು. ಪ್ರಯತ್ನಕ್ಕೆ ತಕ್ಕ ಫಲವು ಅಗಿದೇ ಬೇರಸಪಡಬೇಕಾದೀತು. ನಿಮ್ಮ ವಿದ್ಯಾಭ್ಯಾಸದ ಬಗ್ಗೆ ಕೀಳರಿಮೆ ಬರಬಹುದು. ಉತ್ತಮವಾದ ವಿದ್ಯಾಭ್ಯಾಸವನ್ನು ಮಾಡಲು ಮನಸ್ಸು ಮಾಡುವಿರಿ. ಸ್ನೇಹಿತರ ವರ್ತನೆಯು ನಿಮಗೆ ವಿಚಿತ್ರವೆನಿಸಬಹುದು. ಒಂಟಿಯಾಗಿ ದೂರದ ಪ್ರಯಾಣವನ್ನು ಮಾಡಲು ಇಚ್ಛಿಸುವಿರಿ. ನಟರಿಗೆ ಉತ್ತಮವಾದ ಅವಕಾಶಗಳು ಬರಲಿವೆ. ಹೊಸದಾದ ವಾಹನವನ್ನು ಖರೀದಿಸುವಿರಿ. ಪ್ರಭಾವೀವ್ಯಕ್ತಿಗಳು ನಿಮ್ಮನ್ನು ಭೇಟಿಯಾಗಲು ಬರಬಹುದು. ರಹಸ್ಯವನ್ನು ಕಾಪಾಡಿಕೊಳ್ಳಲು ಬಯಸುವಿರಿ.

ಕುಂಭ: ದಾಯಾದಿಗಳಿಂದ ಸಮಸ್ಯೆಯು ಉದ್ಭವಿಸುವುದು. ಯೋಜಿತ ಕಾರ್ಯಕ್ಕೆ ಬಿಡದೇ ಮುನ್ನುಗ್ಗುವ ಸ್ವಭಾವ ಇರಲಿ. ನಿಮ್ಮ ಅಂತಶ್ಶಕ್ತಿಯೇ ನಿಮ್ಮ ನಿಜವಾದ ಬಲವಾದುದರಿಂದ ಯಾವ ಸಮಸ್ಯೆಗಳನ್ನೂ ನಿರಾತಂಕವಾಗಿ ಎದುರಿಸುವಿರಿ. ಹೊಸತನವನ್ನು ರೂಢಿಸಿಕೊಳ್ಳುವ ನಿಮ್ಮ ಆಸಕ್ತಿಯನ್ನು ಕಂಡ ಜನರಿಂದ ಮೆಚ್ಚುಗೆಯನ್ನು ಗಳಿಸುವಿರಿ. ಸೌಂದರ್ಯಪ್ರಜ್ಞೆಯು ನಿಮಗೆ ವರದಾನವೆಂದೇ ತಿಳಿಯುತ್ತದೆ. ಬೆನ್ನು ನೀವು ನಿಮ್ಮನ್ನು ಕಾಡಬಹುದು. ಅತಿಯಾದ ನಿರ್ಲಕ್ಷ್ಯ ಬೇಡ.

ಮೀನ: ತಂದೆಯಿಂದ ಸಹಕಾರ ದೊರೆಯಬಹುದು. ದೂರದ ಊರಿಗೆ ಪ್ರಯಾಣಹೊಗುವ ಸಾಧ್ಯತೆ ಇದೆ. ನಿಮ್ಮ ಬಿಡುವಿಲ್ಲದ ಕಾರ್ಯಗಳ ನಡುವೆಯೂ ಕುಟುಂಬದ ಕುರಿತು ನಿಮಗೆ ಕಾಳಜಿ ಇರಲಿದೆ. ಅನಿಶ್ಚಯವಾಗಿದ್ದ ನಿಮ್ಮ ವಿವಾಹವು ಇಂದು ನಿಶ್ಚಯವಾಗಲಿದೆ. ಆಪ್ತರ ಭೇಟಿ ನಿಮ್ಮ ಮನಸ್ಸನ್ನು ಹಗುರಗೊಳಿಸುವುದು. ನಿದ್ರಾಹೀನತೆಯಿಂದ ಆರೋಗ್ಯವು ಹಾಳಾಗಬಹುದು. ಸ್ನೇಹಿತರೊಂದಿಗೆ ಪ್ರಯಾಣವನ್ನು ಮಾಡುವಿರಿ. ಸ್ತ್ರೀಯರಿಂದ ಅಪಮಾನವಾಗಬಹುದು. ಸಂಪತ್ತಿನ ನಿರೀಕ್ಷೆಯಲ್ಲಿ ನೀವಿರುವಿರಿ.

-ಲೋಹಿತಶರ್ಮಾ, ಇಡುವಾಣಿ

Published On - 6:31 am, Thu, 16 February 23

ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಔಷಧಿ ಖರೀದಿಲಿ ಭಾರಿ ಭ್ರಷ್ಟಾಚಾರ: ಕಮಿಷನ್ ಬೇಡಿಕೆಯ ಸ್ಫೋಟಕ ಆಡಿಯೋ ಇಲ್ಲಿದೆ
ಔಷಧಿ ಖರೀದಿಲಿ ಭಾರಿ ಭ್ರಷ್ಟಾಚಾರ: ಕಮಿಷನ್ ಬೇಡಿಕೆಯ ಸ್ಫೋಟಕ ಆಡಿಯೋ ಇಲ್ಲಿದೆ