AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope ದಿನ ಭವಿಷ್ಯ -ಯುಗಾದಿ ಹಬ್ಬದಂದು ಈ ರಾಶಿಯವರಿಗೆ ಶುಭವಾಗಲಿದೆ

ಶಾರ್ವರಿನಾಮ ಸಂವತ್ಸರ, ಉತ್ತರಾಯಣ, ಚೈತ್ರ  ಮಾಸ, ಶಿಶಿರ ಋತು, ಕೃಷ್ಣಪಕ್ಷ, ಪಾಡ್ಯ ತಿಥಿ, ಮಂಗಳವಾರ, ಏಪ್ರಿಲ್ 13, 2021. ಅಶ್ವಿನಿ ನಕ್ಷತ್ರದ ದಿನ ಭವಿಷ್ಯ.

Horoscope ದಿನ ಭವಿಷ್ಯ -ಯುಗಾದಿ ಹಬ್ಬದಂದು ಈ ರಾಶಿಯವರಿಗೆ ಶುಭವಾಗಲಿದೆ
ರಾಶಿ ಭವಿಷ್ಯ
ರಾಜೇಶ್ ದುಗ್ಗುಮನೆ
| Edited By: |

Updated on: Apr 13, 2021 | 6:27 AM

Share

ನಿತ್ಯ ಪಂಚಾಂಗ: ಶಾರ್ವರಿನಾಮ ಸಂವತ್ಸರ, ಉತ್ತರಾಯಣ, ಚೈತ್ರ  ಮಾಸ, ಶಿಶಿರ ಋತು, ಕೃಷ್ಣಪಕ್ಷ, ಪಾಡ್ಯ ತಿಥಿ, ಮಂಗಳವಾರ, ಏಪ್ರಿಲ್ 13, 2021. ಅಶ್ವಿನಿ ನಕ್ಷತ್ರ, ರಾಹುಕಾಲ: ಇಂದು ಸಂಜೆ 3 :23 ರಿಂದ ಇಂದು ಸಂಜೆ 4 ಗಂ: 56 ತನಕ. ಬೆಂಗಳೂರು ಸೂರ್ಯೋದಯ: ಬೆಳಿಗ್ಗೆ 6.01. ಸೂರ್ಯಾಸ್ತ: ಸಂಜೆ 6.31.

ತಾ.13-04-2021 ರ ಮಂಗಳವಾರದ ರಾಶಿಭವಿಷ್ಯ

ಮೇಷ: ಸಮಾಧಾನಕರ ಜೀವನವಿದೆ. ಅಧಿಕಾರಿಗಳ ಸಹಕಾರ ದೊರೆಯುವದು. ಮನೆ ಕಟ್ಟುವ ಆಸೆ ಕೈಗೂಡುವ ಸಮಯ. ಬಂಧುಮಿತ್ರರ ಹಾರೈಕೆ ತಮ್ಮೊಂದಿಗಿದೆ. ದೂರಪ್ರಯಾಣ ಯೋಗವಿದೆ. ಶುಭಸಂಖ್ಯೆ: 6

ವೃಷಭ: ಆಸ್ತಿ ಖರೀದಿ ಅಥವಾ ಮಾರಾಟದ ವ್ಯವಹಾರಗಳು ಕುದುರುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಯೋಗ್ಯತಾ ಮೀರಿ ದುಡಿಯುವ ಕಾರ್ಯಭಾರವಿರುವದು. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗದ ಯೋಗವಿದೆ. ಶುಭಸಂಖ್ಯೆ: 1

ಮಿಥುನ: ಬರುವ ಕಷ್ಟಗಳನ್ನು ಎದುರಿಸಿ ಸಫಲತೆಯನ್ನು ಹೊಂದುವಿರಿ. ಭಾಗ್ಯವೃದ್ಧಿಯಾಗುವ ಯೋಗವಿದೆ.ವ್ಯವಹಾರದಲ್ಲಿಯ ಅಡಚಣೆಗಳು ದೂರಾಗುವವು. ಮನೆಯ ಜವಾಬ್ದಾರಿಗಳು ಹೆಚ್ಚುವ ಸಂಭವವಿದೆ. ಶುಭಸಂಖ್ಯೆ: 9

ಕರ್ಕ: ಸಾಲಗಾರರ ತೊಂದರೆ ಇರುವದು. ಅನಾರೋಗ್ಯ, ವ್ಯವಹಾರದಲ್ಲಿ ಹಾನಿ ಕಂಡುಬರುವದು. ನಿಧಾನಗತಿಯ ಕೆಲಸದಿಂದ ಮನೋಕ್ಷೋಭೆ ಉಂಟಾಗುವ ಸಂಭವವಿದೆ. ಶುಭಸಂಖ್ಯೆ: 3

ಸಿಂಹ: ಆಸ್ತಿ ಖರೀದಿ ಅಥವಾ ಹೊಸ ವ್ಯವಹಾರ ಆರಂಭಕ್ಕೂ ಮೊದಲು ಆತ್ಮೀಯರೊಂದಿಗೆ ಸಮಾಲೋಚನೆ ಮಾಡಿ ಮುಂದುವರಿಯಿರಿ. ಅಡೆತಡೆಗಳ ಮಧ್ಯದಲ್ಲಿಯೂ ನಿರೀಕ್ಷಿತ ಕಾರ್ಯಗಳು ಪೂರ್ಣವಾಗುವವು. ಶುಭಸಂಖ್ಯೆ: 5

ಕನ್ಯಾ: ಪ್ರಾಮಾಣಿಕ ಪ್ರಯತ್ನಕ್ಕೆ ತಕ್ಕಂತೆ ಕೆಲಸಗಳು ಕೈಗೂಡುವವು. ಮಾತು ಕೇಳದ ಜನರಿಂದ ದೂರವಿರಿ. ಲೇವಾದೇವಿ ವ್ಯವಹಾರದಲ್ಲಿ ಅನಿರೀಕ್ಷಿತ ಏರಿಕೆ ಕಂಡುಬರುವದು. ಆಸ್ತಿ ಖರೀದಿ ಯೋಗವಿದೆ ಪ್ರಯತ್ನಿಸಿ. ಶುಭಸಂಖ್ಯೆ: 8

ತುಲಾ: ದಿನನಿತ್ಯದ ಕೆಲಸಕ್ಕೂ ವಿನಾಕಾರಣ ಅಡೆತಡೆ ಕಂಡುಬರುವ ಲಕ್ಷಣವಿದೆ. ಬಂಧುವರ್ಗದಲ್ಲಿ ನಕಾರಾತ್ಮಕ ಚಿಂತನೆ ಇರುವದು. ಸಂಕಷ್ಟಗಳ ಪರಿಹಾರಕ್ಕಾಗಿ ಅಲೆದಾಡಬೇಕಾದ ಸಂಭವವಿದೆ. ಶುಭಸಂಖ್ಯೆ: 7

ವೃಶ್ಚಿಕ: ಗಣ್ಯರೊಂದಿಗೆ ವ್ಯವಹಾರಿಕ ಬಾಂಧವ್ಯ ವೃದ್ಧಿಯಾಗುವದು. ಸಾಮಾಜಿಕ ಕ್ಷೇತ್ರದಲ್ಲಿ ಮಾನ ಸಮ್ಮಾನಗಳು ದೊರೆಯುವವು. ನೌಕರರ ತೊಂದರೆಗಳು ನಿವಾರಣೆಯಾಗುವವು. ಔದ್ಯೋಗಿಕ ಪ್ರವಾಸಯೋಗವಿದೆ. ಶುಭಸಂಖ್ಯೆ:2

ಧನು: ವ್ಯಾಪಾರದಲ್ಲಿ ಪ್ರಗತಿ ಇರುವದು. ವೈವಾಹಿಕ ತೊಂದರೆಗಳು ಪರಿಹಾರವಾಗುವವು. ಸಂಕುಚಿತ ಭಾವನೆ ಅಥವಾ ಸಂದೇಹಗಳಿಂದ ದೂರವಿರಿ. ಮನೆಯಲ್ಲಿ ಸಂತಸದ ವಾತಾವರಣ ಇರುವದು.ಶುಭಸಂಖ್ಯೆ: 4

ಮಕರ: ವ್ಯವಹಾರಿಕ ಏಳ್ಗೆ ಇರುವದು. ದೂರ ಪ್ರಯಾಣದ ಸಂಭವ. ಗುಪ್ತ ಧನ, ಲಾಟರಿ, ವ್ಯಾಪಾರದಲ್ಲಿ ಬೆಲೆಗಳ ಹೆಚ್ಚಳದಿಂದ ಲಾಭ.ವಿವಿಧ ಸೌಭಾಗ್ಯಪ್ರಾಪ್ತಿ..ಅನಾವಶ್ಯಕ ಮಾತು, ಸಿಟ್ಟು, ಅಹಂಕಾರದಿಂದ ಹಾಗೂ ಅಗ್ನಿ, ವಿದ್ಯುತ್,ವಾಹನ,ಮಶಿನರಿಗಳಿಂದ ತೊಂದರೆ. ಶುಭಸಂಖ್ಯೆ:5

ಕುಂಭ: ಕೆಲಸ ಹೆಚ್ಚಿನ ಬದ್ಧತೆ ತೋರಿಸುವ ಅವಶ್ಯಕತೆ ಕಂಡುಬರುವದು. ಕಾಯಕದಲ್ಲಿ ಯಶಸ್ಸು, ಕೀರ್ತಿ, ಧನಲಾಭ, ಉದ್ಯೋಗ ಪ್ರಾಪ್ತಿಯ ಯೋಗವಿದೆ. ವೈವಾಹಿಕ ಮಾತುಕತೆಗೆ ಕಾಲಕೂಡಿ ಬರುವದು. ವಾದ-ವಿವಾದ, ಹಠಸಾಧನೆ ಬೇಡ. ಶುಭಸಂಖ್ಯೆ: 3

ಮೀನ: ಆಗುವುದೆಲ್ಲ ಒಳಿತೆಂಬ ಭಾವನೆ. ಕೌಟುಂಬಿಕ ಸಮಸ್ಯೆಗಳಿಗೆ ಪರಿಹಾರದ ನೆಲೆ ದೊರಕಿ ಹರ್ಷ. ಮಹಿಳೆಯರಿಗೆ ಮನೆಯಲ್ಲಿನ ಆಂತರಿಕ ವಿರಸ ನೀಗಿ ಸೌಹಾರ್ದತೆ. ನೂತನ ವಿವಾದ ಹುಟ್ಟುಹಾಕದ ಹಾಗೆ ತಾಳ್ಮೆಯಡಿ ವರ್ತನೆ. ಶುಭಸಂಖ್ಯೆ: 3

ಡಾ.ಬಸವರಾಜ ಗುರೂಜಿ ವೈದಿಕ ಜ್ಯೋತಿಷಿ. ಸಂಪರ್ಕ ಸಂಖ್ಯೆ: 9972848937

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ