Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today 12 March : ಮಾತಿನಿಂದ ಬಾಂಧವ್ಯ ಹಾಳು, ಇಂದು ಮೌನವೇ ಲೇಸು

ಶಾಲಿವಾಹನ ಶಕವರ್ಷ 1947ರ ಉತ್ತರಾಯಣ, ಶಿಶಿರ ಋತುವಿನ ಫಾಲ್ಗುಣ ಮಾಸ ಶುಕ್ಲ ಪಕ್ಷದ ದ್ವಾದಶೀ ತಿಥಿ, ಬುಧವಾರ ಅಪ್ರಾಮಾಣಿಕತೆ, ಪ್ರೀತಿಪಾತ್ರರು ದೂರ, ದುರಭ್ಯಾಸ, ನಿರುದ್ಯೋಗದಿಂದ ದುಃಖ ಇವೆಲ್ಲ ಈ ದಿನದ್ದು. ಇಂದಿನ ದಿನ ಭವಿಷ್ಯದಲ್ಲಿ ಯಾವ ರಾಶಿಗೆ ಏನು ಫಲ? ನಿಮ್ಮ ದಿನ ಭವಿಷ್ಯ ತಿಳಿದುಕೊಳ್ಳಿ.

Horoscope Today 12 March : ಮಾತಿನಿಂದ ಬಾಂಧವ್ಯ ಹಾಳು, ಇಂದು ಮೌನವೇ ಲೇಸು
Follow us
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ರಮೇಶ್ ಬಿ. ಜವಳಗೇರಾ

Updated on: Mar 12, 2025 | 1:10 AM

ಪಂಚಾಂಗ: ಶಾಲಿವಾಹನ ಶಕೆ 1947ರ ಕ್ರೋಧೀ ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಸೌರ ಮಾಸ : ಕುಂಭ ಮಾಸ, ಮಹಾನಕ್ಷತ್ರ : ಪೂರ್ವಾಭಾದ್ರಾ, ಮಾಸ : ಫಾಲ್ಗುಣ, ಪಕ್ಷ : ಶುಕ್ಲ, ವಾರ : ಬುಧ, ತಿಥಿ : ತ್ರಯೋದಶೀ, ನಿತ್ಯನಕ್ಷತ್ರ : ಮಘಾ, ಯೋಗ : ಸುಕರ್ಮ, ಕರಣ : ತೈತಿಲ, ಸೂರ್ಯೋದಯ – 06 – 43 am, ಸೂರ್ಯಾಸ್ತ – 06 – 41 pm, ಇಂದಿನ ಶುಭಾಶುಭಕಾಲ : ರಾಹು ಕಾಲ 12:42 – 14:12, ಯಮಘಂಡ ಕಾಲ 08:13 – 09:43, ಗುಳಿಕ ಕಾಲ 11:13 – 12:42

ಮೇಷ ರಾಶಿ: : ಇಂದಿನ ವೃತ್ತಿಯು ಕಲಹದಿಂದ ಆರಂಭವಾಗಬಹುದು. ಇಂದು ನಿದ್ರಾಭಂಗದಿಂದ ಬಹಳ‌ ಕಷ್ಟಪಡಬೇಕಾದೀತು. ಗುರುಸೇವೆಯನ್ನು ಮಾಡುವ ಅವಕಾಶದಿಂದ ವಂಚಿತರಾಗುವುದು ಬೇಡ. ನಿಮ್ಮ ಪ್ರಾಮಾಣಿಕತೆಗೆ ಪ್ರಶಂಸೆಯು ಸಿಗುವುದು. ಹೇಳಿದಷ್ಟು ಸುಲಭವಾಗಿ ಏನನ್ನೂ ಮಾಡಲಾಗದು. ವಾಹನ ಚಾಲನೆಯಲ್ಲಿ ಕಿರಿಕಿರಿ. ಇಷ್ಟಪಟ್ಟವರನ್ನು ದೂರ ಮಾಡಿಕೊಳ್ಳುವಿರಿ. ಅನ್ಯರ ವಿಚಾರದಲ್ಲಿ ನಿಮಗೆ ಆಸಕ್ತಿಯು ಕಡಿಮೆ ಆಗುವುದು. ಸರ್ಕಾರದ ಕೆಲಸಕ್ಕಾಗಿ ಅಧಿಕ ಓಡಾಟವಾಗುವುದು. ಆರ್ಥಿಕ ನೆರವನ್ನು ಯಾರಿಂದಲಾದರೂ ನೀವು ಬಯಸುವಿರಿ. ಸಮಾಧನ ಚಿತ್ತದಿಂದ ಇರಬೇಕು ಎಂದು ಅನಿಸಿದರೂ ಅದನ್ನು ಕಾರ್ಯರೂಪಕ್ಕೆ ತರಲಾಗದು. ಅನಿರೀಕ್ಷಿತ ಘಟನೆಯಿಂದ‌ ಸ್ತಬ್ಧವಾಗುವಿರಿ. ವ್ಯವಹಾರದ ವಿಷಯದಲ್ಲಿ ನಿಮಗೆ ಯಾವುದೇ ಔದಾರ್ಯ ಬೇಡ. ನಿಮ್ಮ ಸ್ವಭಾವದಿಂದ ದಾಂಪತ್ಯದಲ್ಲಿ ಕೆಲವು ಮಾತುಗಳು ಕೇಳಿಬರಬಹುದು. ಸಹೋದರನ ಪ್ರೀತಿಯಿಂದ ಸಂತೋಷಪಡುವಿರಿ. ಬೇಕಾದವರ ಪ್ರೀತಿ ಸಿಗದೇ ಬೇಸರ.

ವೃಷಭ ರಾಶಿ: ನಿಮ್ಮ ಇಂದಿನ ಚಟುವಟಿಕೆಗಳನ್ನು ಸಮಯಕ್ಕೆ ತಕ್ಕಂತೆ ಬದಲಿಸುವಿರಿ. ಮಾತನ್ನು ಉಳಿಸಿಕೊಳ್ಳಲು ಸೋಲುಬಹುದು. ಚೋರ ಭಯವು ನೀವು ಹೊರಗೆ ಹೋದಾಗ‌ಕಾಡಬಹುದು. ಕೇಳಿದಷ್ಟಕ್ಕೆ ಮಾತ್ರ ಉತ್ತರಿಸುವಿರಿ. ನಿಮ್ಮ ಪುಟ್ಟ ಪ್ರಪಂಚದಿಂದ ಹೊರಬರಲು ತಯಾರಾಗುವಿರಿ‌. ಸ್ವಾರ್ಥಕ್ಕಾಗಿ ಯಾರನ್ನೂ ಕಳೆದುಕೊಳ್ಳುವಿರಿ. ವಿದ್ಯಾರ್ಥಿಗಳಿಗೆ ವೈದ್ಯಕೀಯ ವೃತ್ತಿಯ ಬಗ್ಗೆ ಆಸಕ್ತಿ ಅಧಿಕವಾಗುವುದು. ವೃತ್ತಿಪರ ವ್ಯವಹಾರಗಳು ಲಾಭದಾಯಕ. ಬಂಧುಗಳ ನಕಾರಾತ್ಮಕ ಮಾತುಗಳಿಂದ ನಿಮಗೆ ಬೇಸರವಾದೀತು. ಆಡಿದ ಮಾತಿಗೆ ಕ್ಷಮೆಯನ್ನು ಕೇಳಬೇಕಾದೀತು. ನಿಮ್ಮ‌ ಸುರಕ್ಷತೆಯಲ್ಲಿ ನೀವಿರುವುದು ಉತ್ತಮ. ಕಛೇರಿಯಲ್ಲಿ ಸರಿಯಾದ ಕೆಲಸವನ್ನು ಮಾಡಲು ಸಾಧ್ಯವಾಗದೇ ಹೋಗಬಹುದು. ನಿಮ್ಮ ಗೌಪ್ಯ ವಿಚಾರವನ್ನು ಮುಚ್ಚಿಡಲು ಪ್ರಯತ್ನಿಸುವಿರಿ. ಹಳೆಯ ಹೂಡಿಕೆಯಿಂದ‌ ಲಾಭವು ಸಿಗಲಿದೆ. ಯಾವುದೂ ಕರಗತ ಆಗದೇ ಪ್ರದರ್ಶನಕ್ಕೆ ಒಪ್ಪಿಗೆ ಕೊಡುವುದು ಬೇಡ. ಶುದ್ಧತೆಯ ಬಗ್ಗೆ ಕಾಳಜಿ ಅಧಿಕವಾಗಿರುವುದು.

ಮಿಥುನ ರಾಶಿ: ಕೇಳಿದ ವಿಚಾರವನ್ನೇ ಮತ್ತೆ ಮತ್ತೆ ಕೇಳಬೇಕಾಗಬಹುದು. ಧಾರ್ಮಿಕ ಆಚರಣೆಯಲ್ಲಿ ಆಸಕ್ತಿ ಹೆಚ್ಚಿದ್ದು, ಬೇಕಾದ ಕಾರ್ಯವನ್ನು ಮಾಡುವಿರಿ. ಕಲಹವನ್ನು ಸಂಧಾನದ ಮೂಲಕ ಸರಿಮಾಡಿಕೊಳ್ಳುವ ಪ್ರಯತ್ನ ಫಲಿಸುವುದು. ಅತಿಯಾದ ಮಾತು ನಿಮಗೆ ತೊಂದರೆಯನ್ನು ಕೊಟ್ಟೀತು. ಉದ್ಯೋಗದಲ್ಲಿ ಭಡ್ತಿಗಾಗಿ ಕಾಯುತ್ತಿದ್ದು ಇಂದು ಸಿಗಬಹುದು. ಸ್ನೇಹಿತರಿಂದ ನಿಮಗೆ ಬಹುಮಾನ ಸಿಗಬಹುದು. ದೂರದ ಊರಿಗೆ‌ ಒಬ್ಬರೇ ವಾಹನ ಚಲಾಯಿಸುವಿರಿ. ಆಭರಣಗಳನ್ನು ಖರೀದಿಸಲು ಹಣವನ್ನು ಖರ್ಚು ಮಾಡುವ ಅವಕಾಶ ಎದುರಾಗಬಹುದು. ವ್ಯಾಪಾರದಲ್ಲಿ‌ ಮಧ್ಯವರ್ತಿಗಳಿಂದ ನಿಮ್ಮ ವ್ಯಾಪಾರವು ಕುಂಠಿತವಾಗುವುದು. ಯಾರೋ ಹೆಣೆದ ಮೋಸದ ಜಾಲಕ್ಕೆ ಸಿಕ್ಕಬಹುದು. ಆಭರಣ ಖರೀದಿಯಿಂದ ಮುಂದಕ್ಕೆ ಬಳಕೆಯಾಗಬಹುದು. ಉತ್ತಮ‌ ಆಹಾರವನ್ನು ಪಡೆಯಲು ಯತ್ನಿಸಿ.‌ ಅಪ್ರಸ್ತುತ ಆಲೋಚನೆಗೆ ಬ್ರೇಕ್ ಹಾಕಿಕೊಂಡಷ್ಟು ಒಳ್ಳೆಯದು. ಕಲಾವಿದರು ಅವಕಾಶದ ನಿರೀಕ್ಷೆಯಲ್ಲಿ ಇರುವರು. ಹಳೆಯ ಪ್ರೇಮಿಯ ಭೇಟಿಯಾಗಿ ಮುಜುಗರಕ್ಕೆ ಸಿಕ್ಕಿಕೊಳ್ಳಬಹುದು. ಸ್ಥಿತಿವಂತರ ಜೊತೆ ಮಾತನಾಡಲು ಇಷ್ಟವಾಗದು.

ಕರ್ಕಾಟಕ ರಾಶಿ: ಸರಿಯಾದ ನೆಲೆಯನ್ನು ಕಂಡುಕೊಳ್ಳುವಲ್ಲಿ ಯಶಸ್ಸು ಸಿಗಲಿದೆ. ವಿದ್ಯಾಭ್ಯಾಸಕ್ಕೆ ಪ್ರೇಮವು ತೊಂದರೆ ಕೊಟ್ಟೀತು. ಬಂಧುಗಳ ಆಗಮನದಿಂದ ಸಂತೋಷಗೊಳ್ಳುವಿರಿ.‌ ಹಣಕಾಸಿನ ಹರಿವು ಸರಿಯಾದ ಮಾರ್ಗದಲ್ಲಿ ಬರವಂತೆ ನೋಡಿಕೊಳ್ಳಿ. ಯಾರ ಬಳಿಯೂ ಸಹಾಯ ಹಸ್ತವನ್ನು ಚಾಚದೇ ಸ್ವಂತ ಬಲದ ಮೇಲೆ ಬರುವ ಆಸೆ ಇರಲಿದೆ. ಪರಿಚಿತರ ಜೊತೆ ಸಾಮಾಜಿಕ ಚಟುವಟಿಕೆಯಲ್ಲಿ ಭಾಗಿ. ನಿಮ್ಮ ನಿಷ್ಕಾಳಜಿಯಿಂದ ಅನಾಯಾಸವಾಗಿ ಬರುವ ಆದಾಯವು ಸಿಗದೇ ಹೋಗುವುದು. ಸಂಗಾತಿಯಿಂದ ಅವಮಾನವಾಗುವುದು. ಸಹೋದರನಿಂದ ಉಡುಗೊರೆಯು ಸಿಗಬಹುದು.‌ ಚಂಚಲ ಸ್ವಭಾವವು ತಾನಾಗಿಯೇ ಕಡಿಮೆಯಾಗಿದ್ದು ಅಚ್ಚರಿ ಆಗಬಹುದು. ವಿರೋಧದ ನಡುವೆ ಗೆಲುವು ಸಂತೋಷವನ್ನು ಹೆಚ್ಚು ಮಾಡುಬುದು. ವೃತ್ತಿಯಲ್ಲಿ ಬಂದ ಮಾತಿನಿಂದ ನೀವು ಉದ್ವೇಗಗೊಳ್ಳುವ ಅವಶ್ಯಕತೆ ಇರುವುದಿಲ್ಲ. ಕೆಲವರ ವಿಚಾರದಲ್ಲಿ ನಿಮ್ಮ ದೃಷ್ಟಿಯನ್ನು ಬದಲಿಸಿಕೊಳ್ಳುವುದೇ ಯೋಗ್ಯವಾದುದು. ನಿಮಗೆ ಮೇಲಧಿಕಾರಿಗಳ ಬಗ್ಗೆ ಸದ್ಭಾವವು ಇರದು.‌

ಸಿಂಹ ರಾಶಿ: ನಿಮ್ಮ ನಿರ್ಧಾರಗಳಿಗೆ ಸ್ನೇಹಿತರ ಬೆಂಬಲವಿದೆ‌ ಯಾರನ್ನಾದರೂ ಪ್ರಶಂಸಿಸುವ ಮನಸ್ಸಾಗುವುದು. ನಿಯಮಿತ ಆಹಾರದಿಂದ ನಿಮಗೆ ಸೌಖ್ಯವು ಸಿಗಬಹುದು. ನೂತನ ವಾಹನದಿಂದ ಅಹ್ಲಾದಕರವಾಗಿ ಇರುವಿರಿ. ಅಲ್ಪ ಕಾಲ ಮನೆಯಿಂದ ದೂರ ಉಳಿಯವಿರಿ. ಸಂಗಾತಿಯ ಸಣ್ಣ ಮಾತೂ ನಿಮಗೆ ದೋಷವಾಗಿ ಕಾಣಬಹುದು. ಸಣ್ಣ ಆರೋಗ್ಯದ ತೊಂದರೆಯೂ ನಿಮ್ಮ‌ ಮನಸ್ಸಿಗೆ ಕಿರಿಕಿರಿಯನ್ನು ಉಂಟುಮಾಡುವುದು. ಕಾರ್ಯದಲ್ಲಿ ವೇಗವು ಕುಂಠಿತವಾಗುವುದು. ಸರ್ಕಾರದ ಸೌಲಭ್ಯವು ನಿಮಗೆ ಸಿಗದೇ ಹೋಗಬಹುದು. ನಿಮ್ಮ ಕೆಲಸವು ಸಂದೇಹಕ್ಕೆ ಆಸ್ಪದ ಕೊಡುವುದು ಬೇಡ. ಮಕ್ಕಳ ವಿದೇಶ ಪ್ರವಾಸವು ಖುಷಿಕೊಡದು. ಯಶಸ್ಸನ್ನು ಪಡೆಯುವ ಹಂಬಲವಿರಲಿದೆ. ನೀವು ನೋಡಿದ್ದೇ ಸತ್ಯ ಎಂದು ತಿಳಿದುಕೊಳ್ಳುವುದು ಬೇಡ. ಉತ್ತಮ ವಸ್ತುವಿನ ದಾನದಿಂದ ಯಶಸ್ಸು ಪ್ರಾಪ್ತವಾಗುವುದು. ಇಂದು ಯಾರಿಗೂ ನಿಮ್ಮ ಅವಶ್ಯಕತೆ ಇಲ್ಲದೇ ಹೋಗಬಹುದು. ಸರಳತೆಯು ನಿಮ್ಮ ಸ್ವಭಾವವಾಗಿರಲಿ.

ಕನ್ಯಾ ರಾಶಿ: :ಸರಿಯಾದ ವ್ಯಾಪಾರವಾಗದೇ ಕಷ್ಟವಾದೀತು. ಹಳೆಯ ವಸ್ತುಗಳನ್ನು ಮಾರಾಟ ಮಾಡಿ ಬೇಕಾದುದನ್ನು ಖರೀದಿಸುವ ಅನಿವಾರ್ಯತೆ ಬರಬಹುದು. ನಿಮ್ಮ ಅಹಂಕಾರವು ಹತಾಶೆಯನ್ನು ತರಿಸೀತು. ಶತ್ರುಗಳ ಕಾರಣದಿಂದ ಖರ್ಚುನ್ನು ಮಾಡಬೇಕಾದ ಸ್ಥಿತಿಯು ಬರಲಿದೆ. ಮನಸ್ಸಿಗೆ ಬೇಕಾದ ನೆಮ್ಮದಿಯಿಂದ ಹುಡುಕಾಟದಲ್ಲಿ ಇರುವಿರಿ. ಧಾರ್ಮಿಕ ಕ್ಷೇತ್ರದ ಭೇಟಿಕೊಡುವಿರಿ. ಅಕಾಲದಲ್ಲಿ ಸೇವಿಸಿದ ಆಹಾರದಿಂದ ನಿಮಗೆ ಆರೋಗ್ಯವು ಹಾಳಾಗುವುದು. ನಿಮ್ಮ ಮಾತುಗಳು ಪಾಲನೆಯಗದೇ ಇರಬಹುದು. ಮನೆಯಲ್ಲಿ ನೌಕರರ ಕಾರಣಕ್ಕೆ ಸಿಟ್ಟಾಗುವಿರಿ. ಹೊಸ ಸಂಬಂಧದ ಕಡೆ ನಿಮ್ಮ ಚಿತ್ತವು ಇರಲಿದೆ. ಸಾಲದಿಂದ ನಿಮ್ಮ ಮನಸ್ಸು ಕುಗ್ಗುವುದು. ನಿರಂತರ ಕೆಲಸವನ್ನು ಮಾಡುವುದು ಇಷ್ಟವಾಗಲಿದೆ. ಸಂಗಾತಿಯ ಭಾವನೆಗೆ ಬೆಲೆ ಕೊಟ್ಟು ಸಂತೋಷಪಡಿಸುವಿರಿ. ವೈವಾಹಿಕ ಸಂಬಂಧವನ್ನು ಸರಿಯಾಗಿ ಇಟ್ಟುಕೊಳ್ಳಿ. ಉದ್ಯಮದಲ್ಲಿ ನಿರಂತರ ಸಂಪರ್ಕವಿರಲಿ. ಹಣಕಾಸಿನ ಉಳಿತಾಯದ ಬಗ್ಗೆ ಅಧಿಕ ಗಮನ ಕೊಡುವಿರಿ.

ತುಲಾ ರಾಶಿ: :ಮನೆಯ ನಿರ್ಮಾಣಕ್ಕೆ ಯೋಜನೆಗಿಂತ ಅಧಿಕ ಖರ್ಚು. ನಿಮ್ಮ ಉದ್ಯಮವನ್ನು ವಿಸ್ತರಿಸುವ ಬಗ್ಗೆ ಚಿಂತನೆ ನಡೆಸುವಿರಿ. ಸಾಹಸದಿಂದ ಇಂದಿನ‌ ಕೆಲಸವನ್ನು ಪೂರ್ಣಮಾಡುವಿರಿ. ಸ್ತ್ರೀಯರ ಉಪಸ್ಥಿತಿಯು ನಿಮಗೆ ಬಲವನ್ನು ತಂದುಕೊಡುವುದು. ಆರ್ಥಿಕತೆಯ ಬಲಕ್ಕಾಗಿ ಗೊತ್ತಿಲ್ಲದ ಕಾರ್ಯವನ್ನೂ ಮಾಡುವಿರಿ. ವಿದೇಶದ ಮಿತ್ರರ ಸಹಾಯದಿಂದ ನೀವು ಉದ್ಯಮವು ವಿಸ್ತಾರವಾಗಬಹುದು. ಆಗುತ್ತದೆ ಎಂದು ಏನನ್ನಾದರೂ ಮಾಡುವುದು ಉಚಿತವಾಗದು. ಅಧಿಕ ಓಡಾಟದಿಂದ ನೀವು ಆಯಾಸಗೊಳ್ಳುವಿರಿ. ಇಂದು ಹಣದ ಹರಿವು ಅಲ್ಪವಾಗಿ ಇರುವುದು. ಆಪ್ತರನ್ನು ಕಳೆದುಕೊಂಡು ಬೇಸರಿಸುವಿರಿ. ವ್ಯಾಪಾರದ ನಷ್ಟವನ್ನು ನಿಮಗೆ ಅರಗಿಸಿಕೊಳ್ಳಲಾಗದು. ನಿದ್ರೆಯು ಕಡಿಮೆಯಾದ ಕಾರಣ ಕಾರ್ಯದಲ್ಲಿ ಉತ್ಸಾಹ ಕಡಿಮೆ ಇರಲಿದೆ‌. ಬೇಕಾದಷ್ಟು ಅವಕಾಶಗಳನ್ನು ಬಿಡುವುದು ನಿಮಗೆ ಅಭ್ಯಾಸಬಾಗಬಹುದು. ಪ್ರೇಮಿಯ ಜೊತೆ ಹರಟೆ ಹೊಡೆಯುತ್ತ ದಿನವನ್ನು ಕಳೆಯುವಿರಿ. ಅತಿಥಿಗಲನ್ನು ಮನೆಗೆ ಆಹ್ವಾನಿಸುವಿರಿ. ಕೆಲವರ ಕಣ್ತಪ್ಪಿಸಿ ಓಡಾಡುವಿರಿ.

ವೃಶ್ಚಿಕ ರಾಶಿ: ಸರಕುಗಳ ಆಮದಿನಲ್ಲಿ ತೊಂದರೆ. ನೀವು ಮಧ್ಯಸ್ತಿಕೆ ವಹಿಸಬೇಕಾದ ಸ್ಥಿತಿ ಉಂಟಾದೀತು. ಇಂದು ನೀವು ತುರ್ತು ಪ್ರಯಾಣವನ್ನು ಮಾಡಬೇಕಾಗಬಹುದು. ಕಛೇರಿಯ ಕಲಹದಲ್ಲಿ ಭಾಗಿಯಾಗದೇ ನಿಮ್ಮಷ್ಟಕ್ಕೇ ಇದ್ದು ಬಿಡಿ. ತಂದೆಗೆ ಬೇಕಾದ ಧನಸಹಾಯವನ್ನು ನೀವು ಮಾಡುವಿರಿ. ಬಂದ ಹಣವನ್ನು ಸಂಗ್ರಹಿಸಲು ಪ್ರಯತ್ನಿಸಿ. ಇಲ್ಲವಾದರೆ ಸಂಪತ್ತನ್ನು ಉಳಿಸಿಕೊಳ್ಳುವುದು ಕಷ್ಟವಾದೀತು. ಅಸಾಧ್ಯವನ್ನು ಸಾಧಿಸುವ ಹಠವು ಬೇಡವಾದೀತು. ಭೂಮಿಯಿಂದ ಆದಾಯ ಸಿಗುಂತೆ ಕಾರ್ಯ. ಒಡಹುಟ್ಟಿದವರ ಜೊತೆ ಅನಗತ್ಯ ಮಾತುಗಳು ಬರಬಹುದು. ಅಸ್ವಾಭಾವಿಕ ಬೆಳವಣಿಗೆಯು ನಿಮಗೆ ಬೇಸರವನ್ನು ತರಿಸೀತು. ಉದ್ಯಮದಲ್ಲಿ ಹಿನ್ನಡೆಯಾಗುವುದು ನಿಮಗೆ ಮೊದಲೇ ಗೊತ್ತಿದ್ದೂ ಪ್ರಯತ್ನಿಸುವಿರಿ. ಸಂಸ್ಥೆಯ ಮುಖ್ಯಸ್ಥರಾಗಲು ಆಹ್ವಾನವು ಬರಬಹುದು. ಉದ್ಯೋಗದಲ್ಲಿ ಚಂಚಲತೆ ಇರುವುದು. ಅನಪೇಕ್ಷಿಯ ವಿಚಾರವನ್ನು ಪ್ರಸ್ತಾಪಿಸಿಕೊಂಡು ಕಾಲಹರಣ ಮಾಡುವಿರಿ. ಆಪ್ತರಿಂದ ನಿಮಗಾಗದವರ ಬಗ್ಗೆ ಮಾಹಿತಿಯನ್ನು ಪಡೆಯುವಿರಿ.

ಧನು ರಾಶಿ: ನಿಮ್ಮ ದೃಷ್ಟಿಗೆ ಸರಿ ಎನಿಸಿದ್ದನ್ನಾದರೂ ಮಾಡಿ. ನಿಮ್ಮ ವ್ಯಕ್ತಿತ್ವವನ್ನು ಸುಧಾರಿಸಿಕೊಳ್ಳುವ ಕಡೆ ಗಮನಹರಿಸುವಿರಿ. ಹಳೆಯ ಅಭ್ಯಾಸವನ್ನು ಬಿಟ್ಟು ಹೊಸತನ್ನು ರೂಢಿಸಿಕೊಳ್ಳುವಿರಿ. ಸಾಲಗಾರದಿಂದ ವಂಚನೆ ಆಗುವ ಸಾಧ್ಯತೆ ಇದೆ. ಮಾತನ್ನು ಉಳಿಸಿಕೊಳ್ಳಲು ಪ್ರಯತ್ನಿಸಿ. ಪ್ರೇಮವು ನಿಮಗೆ ಬೇಕಾದಂತೆ ತಿರುವು ಪಡೆಯಬಹುದು. ನಿಮ್ಮನ್ನು ದುರುಪಯೋಗ ಮಾಡಿಕೊಳ್ಳುವ ಸಂಭವಿದೆ.‌ ಸಿಟ್ಟನ್ನು ವೃತ್ತಿಯಲ್ಲಿ ತೋರಿಸುವುದು ಬೇಡ. ನೀವು ಆಯ್ಕೆ ಆಗಿದ್ದು ಯಾವುದಕ್ಕೋ ಕೆಲಸವು ಮತ್ಯಾವುದೋ ಆಗಲಿದೆ. ಅನಾರೋಗ್ಯವು ಚಿಕಿತ್ಸೆಯಾಗಿ ಪರಿಣಮಿಸಬಹುದು. ಉತ್ತಮ ಭೂಮಿಯ ಲಾಭವನ್ನು ಪಡೆಯುವಿರಿ. ವಿವಾಹದ ಉತ್ತಮ ಕುಲವು ತಪ್ಪಿಹೋಗಬಹುದಹ. ಕೆಲವರ ಸಹವಾಸವು ನಿಮಗೆ ಇಷ್ಟವಾಗದೇ ಇರಬಹುದು. ಅಪಾಯಯಕ್ಕೆ ಸಿಕ್ಕಿಕೊಳ್ಳುವ ಸಂಭವವಿತ್ತು. ಧನವ್ಯಯವನ್ನು ನಿಮ್ಮ ಜಾಣ್ಮೆಯಿಂದ ತಪ್ಪಿಸಿಕೊಳ್ಳುವಿರಿ‌. ಸ್ತ್ರೀಯರಿಂದ‌ ಕೆಲವು ಸಮಸ್ಯೆಯು ಬರಲಿದೆ. ಆಗಬೇಕೆಂದುಕೊಂಡ ಕಾರ್ಯವನ್ನು ಪೂರ್ಣ ಮಾಡಲಾಗದು.‌

ಮಕರ ರಾಶಿ: ಮಂಗಲಕಾರ್ಯಕ್ಕೆ ಸಿದ್ಧತೆ ನಡೆಸುವಿರಿ. ಹಣಕಾಸಿನ ಉದ್ಯಮದಲ್ಲಿ ಕೆಲವು ಅಡಚಣೆಗಳು ಉಂಟಾಗಬಹುದು. ಎಲ್ಲಿಗೇ ಹೋದರೂ ನಿಮಗೆ ಹಿತವೆನಿಸದು. ಬಿಡಿಸಲಾಗದಷ್ಟು ಆಪ್ತವಾದ ಸಂಬಂಧವು ದೂರವಾಗಬಹುದು. ಇಂದು ಪ್ರಯಾಣದ ಆಯಾಸವು ಇರಲಿದೆ. ಶತ್ರುಗಳನ್ನು ಕ್ಷಮಿಸಿ, ಅವರ ಮೇಲೆ ನಿಮ್ಮ ದೃಷ್ಟಿಯು ಬೇಕಾಗುವುದು. ಉದ್ಯೋಗವನ್ನು ಬಿಟ್ಟು ಬೇರೆಯದನ್ನು ಯೋಚಿಸಲಾಗದು. ಪಾಲುದಾರಿಕೆಯಲ್ಲಿ ನಿಮ್ಮದೇ ಅಧಿಕವಾಗಿರುವುದು. ಶತ್ರುವಿನ ಮೇಲೆ ಸೇಡು ತೀರಿಸಿಕೊಳ್ಳಲು ಅಧಿಕ ಖರ್ಚನ್ನು ಮಾಡಬೇಕಾದೀತು. ಉದ್ಯಮಿಗಳಿಗೆ ನೌಕರರ ಕಲಹವನ್ನು ಸರಿ ಮಾಡುವುದೇ ಹೆಚ್ಚಾಗುವುದು. ಚರಾಸ್ತಿಯ ಬಗ್ಗೆ ಪೂರ್ಣ ಮಾಹಿತಿ ಇರದು. ಸ್ನೇಹಿತರ ಸಹಕಾರದಿಂದ ಸ್ಥಿರಾಸ್ತಿಯನ್ನು ಖರೀದಿಸುವಿರಿ. ಪ್ರೀತಿಯಲ್ಲಿ ನಿಮಗೆ ಮೋಸವಾಗುವುದು. ಉದ್ಯಮಕ್ಕೆ ಬೇಕಾದ ವಿವರಗಳನ್ನು ಅನುಭವಿಗಳಿಂದ ಪಡೆಯಿರಿ. ಸ್ನೇಹಿತನ ವಿವಾಹ ಸಮಾರಂಭದಲ್ಲಿ ಪಾಲ್ಗೊಳ್ಳುವಿರಿ. ಹೊಸ ಸಂಶೋಧನೆಯ ಬಗ್ಗೆ ಆಸಕ್ತಿ ಇರುವುದು. ‌ಅವಕಾಶಗಳನ್ನು ಹುಡುಕುವಿರಿ.

ಕುಂಭ ರಾಶಿ: ನಿಮ್ಮವರ ರಕ್ಷಣೆಯ ಬಗ್ಗೆ ಅಧಿಕ ಗಮನವಿರುವುದು. ಮುಖ್ಯಸ್ಥರ ಅನುಪಸ್ಥಿತಿಯಲ್ಲಿ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕಾಗುವುದು. ಸರ್ಕಾರದ ಉದ್ಯೋಗಸ್ಥರು ಕೆಲವರ ಒತ್ತಡಕ್ಕೆ ಸಿಕ್ಕಿಕೊಳ್ಳಬೇಕಾಗುವುದು. ನಿಮ್ಮ‌ ಸಮ್ಮುಖದಲ್ಲಿ ಕುಟುಂಬದ ಸಮಸ್ಯೆಗಳು ಬಗೆಹರಿಯಬಹುದು. ಅನಿರೀಕ್ಷಿತವಾಗಿ ದೊರೆತವರು ನಿಮ್ಮ ಉದ್ಯಮದ ಭಾಗವಾಗಬಹುದು. ಆಸ್ತಿಯ ವಿಚಾರ ಬಂದಾಗ ಮೌನ ತಾಳುವಿರಿ. ಬಹಳ ದಿನಗಳ ಅನಂತರ ಸಾರ್ವಜನಿಕ ಕಾರ್ಯಗಳಲ್ಲಿ ತೊಡಗಿಕೊಳ್ಳುವಿರಿ. ನಿಮ್ಮನ್ನು ನೀವೇ ರೂಪಿಸಿಕೊಳ್ಳುವ ಅನಿವಾರ್ಯತೆ ಬರಬಹುದು. ನಿರುದ್ಯೋಗದ ಸ್ಥಿತಿಯು ದಾಯಾದಿಗಳಿಗೆ ಸಂತಸವಗುವುದು. ಸಕಾರಾತ್ಮಕ ಆಲೋಚನೆಗಳನ್ನು ನೀವು ಆಪ್ತರ ಜೊತೆ ಹಂಚಿಕೊಳ್ಳುವಿರಿ. ಆಪತ್ತಿಗೆ ಪ್ರತಿಯಾಗಿ ಆಪತ್ತು ಕೊಡಬಾರದು. ಕಳೆದುಕೊಂಡ ಹಣವನ್ನು ಪಡೆಯಲು ಛಲ ಬರಬಹುದು.‌ ನಿಮ್ಮ ಯೋಜನೆಗೆ ಬೆನ್ನೆಲುಬಾಗಿ ನಿಲ್ಲುವವರು ಬೇಕಾಗಿದ್ದರೆ. ಮಕ್ಕಳ ವಿಚಾರದಲ್ಲಿ ಅಧಿಕ ಖರ್ಚನ್ನು ಇಂದು ಮಾಡಬೇಕಾಗಬಹುದು.

ಮೀನ ರಾಶಿ: ಇಂದು ಪ್ರಯತ್ನ ವಿಫಲವಾದರೂ ಉತ್ಸಾಹದಲ್ಲಿ ಇರುವಿರಿ. ನಿಮ್ಮ ವೃತ್ತಿಯಲ್ಲಿ ಕೆಲವು ಮಾರ್ಪಾಡುಗಳು ಆದ ಕಾರಣ ವೃತ್ತಿಯನ್ನು ಬದಲಿಸುವ ಯೋಚನೆ ಬರಲಿದೆ. ವ್ಯಾಪಾರಸ್ಥರು ಅಧಿಕ ಖರ್ಚಿನ‌ ಕಾರಣ ಯಾವುದೇ ಕೆಲಸಕ್ಕೂ ಮುಂದಾಗಲಾರರು. ಬೋಧನ ಕಲೆಯನ್ನು ಸಿದ್ಧಿಸಿಕೊಳ್ಳುವಿರಿ. ಮಕ್ಕಳ‌ ಜೊತೆ ಸಾಮರಸ್ಯದ ಮಾತನಾಡಿ. ಸಾಲದ ಮರುಪಾವತಿಗೆ ಸೂಕ್ತ ಕ್ರಮದ ಅಗತ್ಯವಿರಲಿದೆ. ಯಾವ ಬದಲಾವಣೆಯನ್ನೂ ಸ್ವೀಕರಿಸುವ ಮನೋಭಾವ ಬರಬಹುದು. ಆಲಸ್ಯದಿಂದ ಕಛೇರಿಯ ಕೆಲಸಗಳು ವಿಳಂಬವಾಗುವುದು. ನಿಮ್ಮ ಬಗ್ಗೆ ಪ್ರಶಂಸೆಯ ನುಡಿಗಳು ಕೇಳಿಬರಬಹುದು. ವಿದ್ಯಾರ್ಥಿಗಳಿಗೆ ಓದಲು ಸಮಯವನ್ನು ಇಂದು ಹೊಂದಿಕೆಯಾಗದು. ವೈಷಮ್ಯವನ್ನು ಎಲ್ಲರೆದುರು ಪ್ರದರ್ಶಿಸುವುದು ಬೇಡ. ಪೂರಕ ವಾತಾವರಣದಲ್ಲಿ ಕೊರತೆ ಇರುವುದು. ಯಾರಿಂದಲಾದರೂ ಪ್ರಶಂಸೆಯನ್ನು ಬಯಸುವಿರಿ. ಸುಮ್ಮನೇ ಆಪ್ತರ ಮೇಲೆ‌ ಸಂಶಯವನ್ನು ಇಟ್ಟುಕೊಳ್ಳುವುದು ಬೇಡ. ಹೂಡಿಕೆಯ ವಿಚಾರದಲ್ಲಿ ಇಂದು ಸಕಾರಾತ್ಮಕ ಆಲೋಚನೆಯು ಇರದು. ಉದ್ವೇಗದಲ್ಲಿ ಇದ್ದರೂ ಸಮಾಧಾನದಲ್ಲಿ ಇದ್ದಂತೆ ತೋರುವಿರಿ.‌

-ಲೋಹಿತ ಹೆಬ್ಬಾರ್ – 8762924271 (what’s app only)