Horoscope Today 14 March: ಹೋಳಿ ಹಬ್ಬದಂದು ಯಾವೆಲ್ಲಾ ರಾಶಿಯವರಿಗೆ ಕಲರ್ಫುಲ್ ತಿಳಿಯಿರಿ
ಶಾಲಿವಾಹನ ಶಕವರ್ಷ 1947ರ ಉತ್ತರಾಯಣ, ಶಿಶಿರ ಋತುವಿನ ಫಾಲ್ಗುಣ ಮಾಸ ಶುಕ್ಲ ಪಕ್ಷದ ಪೂರ್ಣಿಮಾ ತಿಥಿ, ಶುಕ್ರವಾರ ವ್ಯಕ್ತಿತ್ವದ ವಿಕಾಸ, ಅಪರಿಚಿತರ ಸಹವಾಸ, ಮುಖದಲ್ಲಿ ಮಂದಹಾಸ, ಗೊತ್ತಿಲ್ಲದ ಕಾರ್ಯದಲ್ಲಿ ಸಾಹಸ. ಹೋಳಿ ಹಬ್ಬದ ಈ ದಿನದಂದು ಯಾವ ರಾಶಿಗೆ ಏನು ಕಾದಿದೆ ತಿಳಿಯಿರಿ.

ಬೆಂಗಳೂರು, ಮಾರ್ಚ್ 14: ನಿತ್ಯ ಪಂಚಾಗ: ಶಾಲಿವಾಹನ ಶಕೆ ೧೯೪೭ರ ಕ್ರೋಧೀ ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಸೌರ ಮಾಸ : ಕುಂಭ ಮಾಸ, ಮಹಾನಕ್ಷತ್ರ : ಪೂರ್ವಾಭಾದ್ರಾ, ಮಾಸ : ಫಾಲ್ಗುಣ, ಪಕ್ಷ : ಶುಕ್ಲ, ವಾರ : ಶುಕ್ರ, ತಿಥಿ : ಪೂರ್ಣಿಮಾ, ನಿತ್ಯನಕ್ಷತ್ರ : ಉತ್ತರಾಫಲ್ಗುಣೀ, ಯೋಗ : ಶೂಲಿ ಕರಣ : ಭದ್ರ, ಸೂರ್ಯೋದಯ – 06 – 42 am, ಸೂರ್ಯಾಸ್ತ – 06 – 41 pm, ಇಂದಿನ ಶುಭಾಶುಭಕಾಲ : ರಾಹು ಕಾಲ 11:12 – 12:42, ಯಮಘಂಡ ಕಾಲ 15:42 – 17:12, ಗುಳಿಕ ಕಾಲ 08:12 – 09:42.
ಮೇಷ ರಾಶಿ: ನಿಮ್ಮ ವಿಕಾಸಕ್ಕೆ ಬೇಕಾದ ದಾರಿಯನ್ನು ಹುಡುಕುವಿರಿ. ಮಕ್ಕಳಿಂದ ಏನನ್ನಾದರೂ ನಿರೀಕ್ಷಿಸಬಹುದು. ವೇಷಭೂಷಣದಿಂದ ನೀವು ದೊಡ್ಡ ವ್ಯಕ್ತಿಗಳಂತೆ ಕಾಣಿಸಿಬಹುದು. ಕಲಹವನ್ನು ಮಾಡುವಾಗ ವಿವೇಚನೆ ಇರಲಿ. ಬಂಧುಗಳ ಆಗಮನವಾಗಲಿದೆ. ಇಂದಿನ ಪ್ರಯಾಣದಲ್ಲಿ ಅಡೆತಡೆಗಳಿದ್ದರೂ ಅದನ್ನು ಲೆಕ್ಕಿಸದೇ ಮುನ್ನಡೆಯುವಿರಿ. ಹೊಂದಾಣಿಕೆ ಕಷ್ಟವಾದರೂ ಅನಿವಾರ್ಯವಾಗಬಹುದು. ಶರೀರದಲ್ಲಿ ಅಸಮತೋಲನವು ಇರಲಿದೆ. ಇಂದು ಉಪಾಯದಿಂದ ಕೆಲಸವನ್ನು ಮಾಡುವುದು ಉತ್ತಮ. ಸ್ನೇಹಿತರ ವಿವಾಹ ಸಮಾರಂಭದಲ್ಲಿ ಖುದ್ದಾಗಿ ಭಾಗಿಯಾಗುವಿರಿ. ನಿಮ್ಮ ಅನುಪಸ್ಥಿತಿಯಲ್ಲಿ ಕಾರ್ಯಗಳು ಆಗುವುದು. ಸಂಗಾತಿಯ ಮಾತಿನಂತೆ ಇಂದು ನಡೆದುಕೊಳ್ಳಬೇಕಾಗುವುದು. ನಿಮ್ಮ ಬೇಡಿಕೆಯನ್ನು ಮೇಲಧಿಕಾರಿಗೆ ತಿಳಿಸುವ ವ್ಯವಸ್ಥೆಯನ್ನು ಮಾಡಿಕೊಳ್ಳುವಿರಿ. ವ್ಯಾಪಾರವು ಮಧ್ಯಮಗತಿಯಲ್ಲಿ ಇರುವುದು. ನಿಮ್ಮದಾದ ನಿಯಮವನ್ನು ಬಿಡಲು ನೀವು ತಯಾರಿರುವುದಿಲ್ಲ. ಕೆಲವರ ಮನೋಗತವನ್ನು ಅರಿತುಕೊಳ್ಳುವಿರಿ. ಹಿರಿಯರ ಜೊತೆ ವರ್ತನೆಗಳು ಬಿಗುಮಾನದಿಂದ ಇರಲಿದೆ.
ವೃಷಭ ರಾಶಿ: ಯಂತ್ರಗಳು ಅನಿರೀಕ್ಷಿತ ದುರಸ್ತಿಗೆ ಬರಬಹುದು. ನಿಮ್ಮ ಶತ್ರುಗಳನ್ನು ನಿಗ್ರಹಿಸಲು ಸಮಯದ ಪ್ರತೀಕ್ಷೆಯಲ್ಲಿಬಿರುವಿರಿ. ಅನಿರೀಕ್ಷಿತವಾಗಿ ಬರುವ ಉದ್ಯೋಗಾವಕಾಶ ನಿಮ್ಮದಾಗಿಸುವತ್ತ ಪ್ರಯತ್ನಶೀಲರಾಗುವಿರಿ. ಪಿತ್ರಾರ್ಜಿತ ಆಸ್ತಿಗೆ ಸೂಕ್ತ ವ್ಯವಸ್ಥೆಯನ್ನು ಮಾಡುವಿರಿ. ದಾಂಪತ್ಯದಲ್ಲಿ ಮನಸ್ತಾಪವನ್ನು ಶಾಂತಗೊಳಿಸಿಕೊಳ್ಳುವುದು ಒಳ್ಳೆಯದು. ಜವಾಬ್ದಾರಿಯನ್ನು ಒಪ್ಪಿಕೊಳ್ಳುವುದಿಲ್ಲ. ಸಂಗಾತಿಯ ಕಾರಣದಿಂದ ನಿಮಗೆ ಬೇಸರವಾಗುವುದು. ಸಕಾಲಕ್ಕೆ ಭೋಜನವನ್ನು ಸ್ವೀಕರಿಸುವುದು ಸೂಕ್ತ. ಕೆಲವರು ನಿಮ್ಮ ದಾರಿ ತಪ್ಪಿಸಬಹುದು. ಮಿತ್ರರ ಸಹಾನುಭೂತಿಯು ನಿಮಗೆ ಉತ್ಸಾಹವನ್ನು ಕೊಡುವುದು. ದಿನದ ಆದಾಯ ಇದ್ದವರಿಗೆ ಶುಭ. ಉತ್ತಮವಾದ ಉಡುಗೊರೆಯೊಂದು ನಿಮ್ಮ ಕೈ ಸೇರಬಹುದು. ಪ್ರಮುಖ ಅಂಶಗಳು ದೂರಾಗಿ ಅಪ್ರಧಾನಾಂಶಗಳೇ ಮುನ್ನೆಲೆಗೆ ಬರುವುದು. ಅತಿಯಾದ ನಿರೀಕ್ಷೆಯನ್ನು ಇಟ್ಟುಕೊಂಡು ಹತಾಶರಾಗುವಿರಿ. ಮನೆಯ ಕೆಲಸದಲ್ಲಿ ಅಧಿಕ ಸಮಯವನ್ನು ಕಳೆಯುವಿರಿ. ವ್ಯತ್ಯಾಸವನ್ನು ಸರಿದೂಗಿಸವ ಕಲೆ ಬರಬಹುದು.
ಮಿಥುನ ರಾಶಿ: ಸಾಲವನ್ನು ಹಿಂದಿರುಗಿಸಲು ಕೊಟ್ಟ ಸಮಯಾವಕಾಶ ಮುಗಿಯುವುದು. ನಿಮ್ಮ ಅನಿರೀಕ್ಷಿತ ಲಾಭದಿಂದ ಅಹಂಕಾರ ಬರುವ ಸಾಧ್ಯತೆ ಇದೆ. ಮಿತ್ರರ ಸಹಕಾರವನ್ನು ನೀವು ಅಪೇಕ್ಷಿಸುವುದಿಲ್ಲ. ಕಳ್ಳತನದ ಭೀತಿಯಲ್ಲಿ ಇರುವಿರಿ. ಇತರ ಅನುಭವವೂ ನಿಮಗೆ ಪಾಠವಾಗುವುದು. ಹಠದ ಸ್ವಭಾವದಿಂದ ಹೊರಬನ್ನಿ. ನಿಮ್ಮ ಸ್ವೇಚ್ಛಾಚಾರವು ಮನೆಯವರಿಗೆ ಇಷ್ಟವಾಗದು. ನ್ಯಾಯಕ್ಕೆ ಸಮ್ಮತವಾದ ಕಾರ್ಯವನ್ನು ಮಾಡಿ. ಹಿರಿಯರನ್ನು ನೋಡಿಕೊಳ್ಳುವ ಜವಾಬ್ದಾರಿ ಬರಬಹುದು. ಅನಿರೀಕ್ಷಿತ ಧನಾಗಮನದಿಂದ ಸಂತೋಷವು ಇಮ್ಮಡಿಯಾಗಬಹುದು. ವೈದ್ಯರಿಗೆ ಹೆಚ್ಚಿನ ಅವಕಾಶವು ಸಿಗಬಹುದು. ನಿಮಗೆ ಸಿಕ್ಕ ಜವಾಬ್ದಾರಿಯಿಂದ ಬೀಗುವಿರಿ. ಕೂಡಿ ಬಾಳುವ ಬಗ್ಗೆಯೇ ಹೆಚ್ಚು ಒಲವು ತೋರಿಸುವಿರಿ. ಹೊಸ ಪರಿಚಯವು ಅತಿಯಾಗಿ ಆಪ್ತವಾಗಬಹುದು. ಯಾರ ಜೊತೆಗೂ ನೇರವಾದ ಮಾತುಗಳನ್ನು ಆಡದೇ ಕುಹಕವಾಡುವಿರಿ. ಇನ್ನೊಬ್ಬರ ಗೌಪ್ಯತೆಯನ್ನು ಬಿಚ್ಚಿಡುವುದು ಸಂತೋಷದ ವಿಚಾರವಾಗುವುದು. ನಿಮ್ಮ ಬಗ್ಗೆ ನೀವೇ ಹೇಳಕೊಳ್ಳುವುದು ಜಂಭವೆನಿಸುವುದು. ನಿಮ್ಮ ಚಿಂತನೆಗಳು ನಿಮಗೆ ಮಾತ್ರ ಸರಿ ಎನಿಸುವುದು.
ಕರ್ಕಾಟಕ ರಾಶಿ: ನೀವು ಅಂದುಕೊಂಡ ತಿರುವು ಬರಲು ಇನ್ನೂ ಬಹಳ ದೂರ ಸಾಗಬೇಕಿದೆ. ಇಂದು ಸಾಧಿಸಬೇಕೆಂದುಕೊಂಡ ವ್ಯವಹಾರದಲ್ಲಿ ಅಡೆತಡೆಗಳು ಬರಬಹುದು. ಪ್ರೀತಿಯ ಭಾವನೆಗಳಿಗೆ ಪೆಟ್ಟುಬೀಳುವ ಸಾಧ್ಯತೆ ಇದೆ. ಉದ್ಯೋಗ ನಷ್ಟದ ಭೀತಿಯು ಇರಬಹುದು. ಎಂದೋ ಪಡೆದ ಸಾಲದ ಮರುಪಾವತಿಯನ್ನು ಮಾಡಬೇಕಾಗಿಬರಬಹುದು. ಶತ್ರುಬಾಧೆಯನ್ನು ನಿವಾರಿಸಿಕೊಳ್ಳಲು ಕಷ್ಟವಾದೀತು. ನಿಮ್ಮನ್ನು ನಿಂದಿಸುವವರಿಗೆ ಉತ್ತರವನ್ನು ಕೊಡುವ ಯೋಚನೆಯಲ್ಲಿಯೇ ಇರುವಿರಿ. ಧನಾಗಮನದ ನಿರೀಕ್ಷೆಯಲ್ಲಿ ಇರುವಿರಿ. ಭಾವುಕರಾಗುವ ಸಂದರ್ಭವು ಬರಬಹುದು. ನಿರಂತರ ಕಾರ್ಯದಿಂದ ವಿಶ್ರಾಂತಿಯನ್ನು ಪಡೆಯುವಿರಿ. ನಿಮ್ಮ ಬಗ್ಗೆ ಇರುವ ಭಾವವನ್ನು ಬದಲಿಸಬೇಕಿದೆ. ಕೆಲಸದ ಸಮಯವು ವ್ಯತ್ಯಾಸವಾಗಿದ್ದು ನಿಮಗೆ ಹೊಂದಿಕೊಳ್ಳುವುದು ಕಷ್ಟವಾದೀತು. ನಿಮ್ಮ ಮೇಲೆ ಸಹಾನುಭೂತಿ ಇರಬಹುದು. ಕೊಡು ಕೊಳ್ಳುವುದರಲ್ಲಿ ಸಮಾನತೆ ಇರಲಿ. ವಿದೇಶೀ ವ್ಯಾಪಾರದಿಂದ ಆದಾಯವು ಹೆಚ್ಚಾಗಬಹುದು. ನಿಮ್ಮ ಅಜ್ಞಾನವನ್ನು ನೀವೇ ತೋರಿಸಿಕೊಳ್ಳುವಿರಿ. ಕೆಲವು ಸಮಸ್ಯೆಯನ್ನು ನೀವಾಗಿಯೇ ತಂದುಕೊಳ್ಳುವಿರಿ.
ಸಿಂಹ ರಾಶಿ: ಅಧಿಕ ಉಪಯೋಗದಿಂದ ವಸ್ತುಗಳು ಹಾಳಾಗುವುವು. ನಿಮಗೆ ಇಂದು ಸಿಗುವ ಅನಿರೀಕ್ಷಿತವಾದ ಉತ್ತಮ ಅವಕಾಶದಿಂದ ಸಂತೋಷವಾಗುವುದು. ತಂದೆ ಮತ್ತು ತಾಯಿಯರ ವಿಚಾರದಲ್ಲಿ ನಿಮಗೆ ಕರುಣೆ ಅತಿಯಾಗಿರುವುದು. ಪ್ರಯತ್ನಿಸುವ ಕಾರ್ಯವು ಯಶಸ್ಸಿನ ಕಡೆಗೆ ಸಾಗುತ್ತಿದೆಯೇ ಎನ್ನುವುದು ಗಮನಿಸಿ. ಯಾವುದೇ ಪೂರ್ವನಿರ್ಧಾರವಿಲ್ಲದೇ ವಿದೇಶ ಪ್ರಯಾಣ ಮಾಡುವಿರಿ. ಅಪಾತ್ರರಿಗೆ ನಿಮ್ಮ ವಸ್ತುವನ್ನು ಗೊತ್ತಿಲ್ಲದೇ ಕೊಡುವಿರಿ. ಇಂತಹ ದಾನದಿಂದ ಪ್ರಯೋಜನವಾಗದು. ಅಮೇಧ್ಯವಾದ ಆಹಾರವನ್ನು ಸೇವಿಸುವ ಸಂದರ್ಭವು ಬರಬಹುದು. ರಕ್ಷಣೆಯ ಜವಾಬ್ದಾರಿ ಇದ್ದವರಿಗೆ ಒತ್ತಡವಿರುವುದು. ಮಕ್ಕಳಲ್ಲಿ ಪ್ರೀತಿಯನ್ನು ತೋರುವಿರಿ. ಸುಳ್ಳು ಮಾತಿನಿಂದಾಗಿ ನಂಬಿಕೆಯನ್ನು ಕಳೆದುಕೊಳ್ಳಬಹುದು. ಅಪರಿಚಿತರಿಗೆ ಮಾಡಿದ ಸಹಾಯವು ದುರುಪಯೋಗವಾಗುವುದು. ದೂರದ ಸ್ಥಳಕ್ಕೆ ಉದ್ಯೋಗಕ್ಕೆ ಹೋಗಲು ಮನೆಯಿಂದ ನಕಾರಾತ್ಮಕ ಸೂಚನೆ ಬರಬಹುದು. ಯಾರನ್ನೂ ಅವಲಂಬಿಸದೇ ನಡೆಯಬೇಕು ಎನ್ನುವ ಹಠವು ಬರುವುದು.
ಕನ್ಯಾ ರಾಶಿ: ಇಂದು ರೋಗಬಾಧೆಯಿಂದ ಹೊರಬರುವುದು ಕಷ್ಟವಾದೀತು. ಉದ್ಯೋಗಸ್ಥ ಮಹಿಳೆಯರು ಅನಾರೋಗ್ಯದದಿಂದ ಉದ್ಯಮವನ್ನು ಬಿಡಬಹುದು. ವಾಹನವನ್ನು ಖರೀದಿಸುವ ಯೋಚನೆಯು ದಟ್ಟವಾಗಿ ಇರಬಹುದು. ಆಹಾರ ವ್ಯವಸ್ಥೆಯನ್ನು ಮಾಡುವವರಿಗೆ ಹೆಚ್ಚಿನ ಪ್ರಯತ್ನವನ್ನು ಮಾಡಬೇಕಾಗಿಬರಬಹುದು. ಸಹೋದ್ಯೋಗಿಗೆ ಸಹಾಯ ಮಾಡುವ ಸ್ಥಿತಿಯು ನಿಮಗೆ ಬರಬಹುದು. ಆಗಬೇಕಾದ ಕಾರ್ಯಗಳು ಒತ್ತಡ ಇಲ್ಲದೇ ಆಗುವುದು. ವಿಶ್ವಾಸದಿಂದ ಕೊಟ್ಟ ಸಾಲಕ್ಕೆ ಬೆಲೆ ಇರಲಿ. ಯಾರ ಬಲವಂತಕ್ಕೂ ಮಣಿಯುವುದಿಲ್ಲ. ಮುಳ್ಳನ್ನು ಮುಳ್ಳಿನಿಂದ ತೆಗೆಯಬೇಕು ಎನ್ನುವುದು ನಿಜವಾದರೂ, ಅದಕ್ಕೂ ವಿಧಾನವಿದೆ ಎನ್ನುವುದನ್ನು ನೆನಪಿಟ್ಟುಕೊಳ್ಳಬೇಕು. ರತ್ನ ವ್ಯಾಪಾರದಲ್ಲಿ ಹಿನ್ನಡೆಯಾಗಬಹುದು. ಇಂದಿನ ಸಮಯವನ್ನು ವ್ಯರ್ಥಮಾಡಿಕೊಂಡು ಬೇಸರಿಸುವಿರಿ. ನಿಮ್ಮ ಸ್ವಭಾವವು ಇತರರಿಗೆ ಅಸಹಜತೆಯಂತೆ ಕಾಣಿಸಬಹುದು. ಯಾರ ಮೇಲೂ ಹಿಡಿತ ಸಾಧಿಸುವ ಪ್ರಯತ್ನವು ಬೇಡ. ಸಮಯ ಮಾತ್ರ ವ್ಯರ್ಥವಾಗಬಹುದು.
ತುಲಾ ರಾಶಿ: ನಿಮ್ಮ ಕೌಶಲವನ್ನು ಇತರರು ಪಡೆಯಲು ಇಚ್ಛಿಸುವರು. ಇಂದು ನಿಮ್ಮ ಆಸ್ತಿಗೆ ಸಂಬಂಧಿಸಿದ ವಿಚಾರದಲ್ಲಿ ನಿಮ್ಮಂತೆ ಮಾಡಿಕೊಳ್ಳುವ ಬಗ್ಗೆ ಅನುಭವಿಗಳ ಜೊತೆ ಚರ್ಚಿಸುವಿರಿ. ನ್ಯಾಯಾಲಯಕ್ಕೆ ಬೇಕಾದ ಮಾಹಿತಿಯನ್ನು ಸಂಗ್ರಹಿಸುವಿರಿ. ನಿಮ್ಮ ವಿದ್ಯೆಗೆ ಯೋಗ್ಯವಾದ ಅವಕಾಶಗಳು ಅನಿರ್ಬಂಧಿತವಾಗಿ ಸಿಗಬಹುದು. ದಾಯದಿ ಕಲಹವು ನಿಮ್ಮನ್ನು ಹಿಮ್ಮೆಟ್ಟಿಸೀತು. ಮನಸ್ಸಿನ ಸ್ಥಿರತೆಯನ್ನು ಕಾಪಾಡಿಕೊಳ್ಳಲು ಇಂದು ಕಷ್ಟವಾದೀತು. ಕೆಲವು ವ್ಯಕ್ತಿಗಳಿಂದ ನೀವು ದೂರವಿರಲು ಇಚ್ಛಿಸುವಿರಿ. ನಿಮ್ಮ ಅಸಹಕಾರದಿಂದ ಮಕ್ಕಳಿಗೆ ಬೇಸರವಾದೀತು. ಅಯಾಚಿತ ಭಾಗ್ಯದಿಂದ ಖುಷಿಯಾಗಲಿದೆ. ಮನೆಯವರ ಕೆಲವರ ಮಾತು ನಿಮ್ಮನ್ನು ಕಾಡಬಹುದು. ಯೋಜಿತ ಕಾರ್ಯಗಳು ಸಮಯಕ್ಕೆ ಸರಿಯಾಗಿ ಮುಗಿಯಲಿದ್ದು ನೆಮ್ಮದಿ ಇರುವುದು. ವ್ಯಾಪಾರದಲ್ಲಿ ಜನರ ಆಕರ್ಷಣೆಯನ್ನು ಮಾಡುವ ಕಲೆ ಸಿದ್ಧಿಸಿದೆ. ಗತ್ತಿನಿಂದ ಮಾತನಾಡುವುದನ್ನು ನಿಲ್ಲಿಸಿ. ನಿಮ್ಮ ಅಸಮಾಧಾನವನ್ನು ಅಸ್ಥಾನದಲ್ಲಿ ಹೊರಹಾಕಿ ಮುಜುಗರಕ್ಕೆ ಒಳಗಾಗುವಿರಿ.
ವೃಶ್ಚಿಕ ರಾಶಿ: ಸ್ನೇಹಕ್ಕೆ ಶರಣಾಗುವುದು ಅನಿವಾರ್ಯ. ಆಕಸ್ಮಿಕವಾಗಿ ದೂರ ಪ್ರಯಾಣವನ್ನು ಮಾಡಬೇಕಾಗಿದ್ದು, ಅಂದುಕೊಂಡಿದ್ದು ಸಾಧಿಸುವಿರಿ. ಉದ್ಯೋಗ ಭಡ್ತಿಯನ್ನು ನಿರೀಕ್ಷಿಸಬಹುದು. ಕೇಳಿ ಬಂದವರಿಗೆ ಆರ್ಥಿಕ ಸಹಕಾರವನ್ನು ನೀಡುವಿರಿ. ಗೃಹನಿರ್ಮಾಣದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ತೋರುವಿರಿ. ನಿಮ್ಮ ಉದ್ಯಮಕ್ಕೆ ಹೂಡಕೆ ಬರಬಹುದು. ನೆರೆಹೊರೆಯರ ಮಾತು ನಿಮಗೆ ಬೇಸರ ತರಿಸಿ, ಪ್ರತಿಯಾಗಿ ಏನನ್ನಾದರೂ ಹೇಳಲು ಹೋಗುವಿರಿ. ನಿಮ್ಮ ಉದ್ವೇಗದ ಮನಸ್ಸನ್ನು ಇತರರಿಗೆ ತೋರಿಸುವಿರಿ. ಮೇಲಧಿಕಾರಿಗಳು ನಿಮ್ಮ ಕಾರ್ಯಕ್ಕೆ ತೊಂದರೆ ಕೊಡಬಹುದು. ಮಕ್ಕಳಿಗೆ ಜವಾಬ್ದಾರಿಯನ್ನು ಕೊಡಲು ಹಿಂಜರಿಯುವಿರಿ. ಕಷ್ಟವಾದರೂ ಸಾಲದ ಮರುಪಾವತಿಯನ್ನು ಮಾಡವಿರಿ. ನೆರೆಹೊರೆಯರ ಕಷ್ಟವನ್ನು ಆಲಿಸುವಿರಿ. ಮನಸ್ಸಿಗೆ ಬೇರಸವಾಗುವ ಸಂಗತಿಯು ಹತ್ತಿರ ಬಂದಾಗ ಅದನ್ನು ದೂರವಿಡಲು ಪ್ರಯತ್ನಿಸಿ. ನಿಮಗೆ ಖುಷಿ ಕೊಡುವ ಸಂಗತಿಯ ಕಡೆಗೆ ಗಮನಹರಿಸಿ. ಕೆಲವರಿಂದ ಸಹಾಯವನ್ನು ನಿರೀಕ್ಷಿಸದೇ ಇದ್ದರೂ ಸಹಕಾರ ದೊರೆತೀತು.
ಧನು ರಾಶಿ: ಪೂರ್ಣಕಾಲಿಕ ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ. ವ್ಯವಹಾರದಲ್ಲಿ ಯಾವುದೇ ಅಳುಕನ್ನು ಇಟ್ಟುಕೊಳ್ಳದೇ ಎಲ್ಲವನ್ನೂ ಸರಿಯಾಗಿ ಅರಿತುಕೊಳ್ಳಿ. ನಿಮ್ಮ ಸಿಕ್ಕ ಅಧಿಕಾರಕ್ಕೆ ನಿಮಗೆ ಗೌರವ ಪ್ರಾಪ್ತಿಯಾಗುವುದು. ಭೂವ್ಯವಹಾರದಲ್ಲಿ ಸಣ್ಣ ಪ್ರಗತಿಯು ಇರಲಿದೆ. ಮಕ್ಕಳ ಜೀವನದಲ್ಲಿ ಬದಲಾವಣೆಯನ್ನು ನೀವು ಗಮನಿಸಿ ಅದಕ್ಕೆ ಬೇಕಾದ ಮಾರ್ಗದರ್ಶನ ಮಾಡುವಿರಿ. ಉದ್ಧಟತನದ ಮಾತುಗಳಿಂದ ನಿಮ್ಮ ಸ್ವಭಾವವು ಸ್ಪಷ್ಟವಾಗುವುದು. ಪುಣ್ಯಸ್ಥಳಗಳನ್ನು ಕುಟುಂಬ ಜೊತೆ ಹೋಗಿ ದರ್ಶನ ಮಾಡುವಿರಿ. ಸಹಾಯವನ್ನು ದುರುಪಯೋಗ ಮಾಡಿಕೊಳ್ಳಬಹುದಿ. ಅತಿಯಾದ ದೇಹದಂಡನೆಯಿಂದ ನಿಮಗೆ ಆಯಾಸವಾಗಲಿದೆ. ಕೊಟ್ಟ ಹಣವನ್ನು ನೀವು ಪುನಃ ಕೇಳುವಿರಿ. ನಿಮ್ಮಿಂದ ಸಹಾಯವನ್ನು ಪಡೆದ ಹಿರಿಯರು ಆಶೀರ್ವದಿಸುವರು. ಇದರಿಂದ ಸಂತೋಷ. ಸ್ನೇಹಿತರ ಸಹವಾಸದಿಂದ ದುರಭ್ಯಾಸವನ್ನುಕಲಿಯವಿರಿ. ವಿದ್ಯಾಭ್ಯಾಸದ ಕಾರಣಕ್ಕೆ ಹಣವನ್ನು ಪಡೆದು ಅನ್ಯ ಕಾರ್ಯಕ್ಕೆ ಬಳಸಿಕೊಳ್ಳುವಿರಿ. ಸುಲಭ ದಾರಿಯನ್ನು ಆಯ್ಕೆ ಮಾಡಿಕೊಳ್ಳುವುದು ಸೂಕ್ತ.
ಮಕರ ರಾಶಿ: ನಿಮ್ಮ ಪ್ರತಿಭೆಗೆ ತಕ್ಕ ಪುರಸ್ಕಾರ. ಸಣ್ಣ ವ್ಯಾಪಾರಿಗಳು ಆರ್ಥಿಕತೆಯಲ್ಲಿ ಚೇತರಿಕೆಯನ್ನು ಕಾಣಬಹುದು. ಉದ್ಯೋಗದಲ್ಲಿ ಬೆಳವಣಿಗೆಯ ನಿರೀಕ್ಷೆಯಲ್ಲಿ ಇರುವಿರಿ. ಇಂದು ನಿಮ್ಮ ಯೋಜನೆಗೆ ಕುಟುಂಬದ ಸಹಮತವು ಇರುವುದು. ಶತ್ರುಗಳಿಂದ ತಪ್ಪಿಸಿಕೊಳ್ಳುವುದು ಕಷ್ಟವಾದೀತು. ನಿರೀಕ್ಷಿತ ಗೌರವವು ನಿಮಗೆ ಸಿಗಲಿದೆ. ಸಾಮಾಜಿಕ ಕ್ಷೇತ್ರದಲ್ಲಿ ಒತ್ತಡ. ಇಂದಿನ ಕೆಲವು ಮಾತುಗಳನ್ನು ನೀವು ನಿರ್ಲಕ್ಷಿಸುವಿರಿ. ಹೆಣ್ಣು ಮಕ್ಕಳಿಂದ ನಿಮಗೆ ಯಶಸ್ಸು ಪ್ರಾಪ್ತಿ. ಕಛೇರಿಯ ವ್ಯವಹಾರದಲ್ಲಿ ನಿಮಗೆ ಕೋಪ ಬರಬಹುದು. ಹಳೆಯ ಸ್ನೇಹಿತೆಯ ಸಖ್ಯವಾಗಬಹುದು. ಮಕ್ಕಳ ಭವಿಷ್ಯವನ್ನು ಗಮನದಲ್ಲಿ ಇಟ್ಟುಕೊಂಡು ವ್ಯವಹರಿಸುವುದು ಉತ್ತಮ. ನಿಮ್ಮ ಮೇಲಿನ ಪ್ರೀತಿಯು ಅಧಿಕವಾಗುವುದು. ಹೊಸ ಉದ್ಯೋಗದ ಅಭಿವೃದ್ಧಿಗೆ ದೇವರಲ್ಲಿ ಶರಣಾಗುವಿದರಿ. ಪ್ರಯತ್ನಗಳು ಆರಂಭವಾಗಲಿದೆ. ಪಿತ್ರಾರ್ಜಿತ ಆಸ್ತಿಯು ತಾನಾಗಿಯೇ ಬರಬಹುದು. ವಿದ್ಯಾಭ್ಯಾಸದಲ್ಲಿ ಆಸಕ್ತಿ ಬರುವಂತೆ ಮಾಡುವ ಹೊಣೆಗಾರಿಕೆ ಇರಲಿದೆ.
ಕುಂಭ ರಾಶಿ: ಮನೆಯ ನಿರ್ವಹಣೆಯಲ್ಲಿ ಗೊಂದಲ. ಶುಭ ಕಾರ್ಯದಿಂದ ಬಯಸಿದ್ದನ್ನು ಪಡೆಯಲು ಇಚ್ಛಿಸುವಿರಿ. ಸಹೋದರರ ಜೊತೆ ಪಾಲುದಾರಿಕೆಯಿಂದ ಉತ್ತಮಲಾಭವಿದೆ. ದಾಯಾದಿಗಳ ಜೊತೆ ಕಿರಿಕಿರಿ ಇದ್ದರೂ ಅದನ್ನು ಬೆಳೆಸಿಕೊಳ್ಳುವುದು ಬೇಡ. ಹೊಸ ಉದ್ಯಮಕ್ಕೆ ಒಬ್ಬೊಬ್ಬರದರು ಒಂದೊಂದು ಅಭಿಪ್ರಾಯ. ಆಸ್ತಿಗೆ ಸಂಬಂಧಿಸಿದ ಪತ್ರ ವ್ಯವಹಾರವನ್ನು ಜೋಪಾನ ಮಾಡಿಕೊಳ್ಳಿ. ಅಪರೂಪದ ಬಂಧುಗಳ ಸಮಾಗಮವಾಗಲಿದ್ದು, ಸಂತೋಷವಾಗಲಿದೆ. ದೇವಾಲಯಕ್ಕೆ ಹೋಗಿ ನೆಮ್ಮದಿಯನ್ನು ಪಡೆದುಕೊಳ್ಳುವಿರಿ. ನೀವು ಎಣಿಸಿದಂತೆ ಆಗಿದ್ದು, ನಿಮಗೂ ಅಚ್ಚರಿಯಾದೀತು. ಸಂಗಾತಿಯ ಅನಪೇಕ್ಷಿತ ಆಸೆಗಳನ್ನು ದೂರ ಮಾಡುವಿರಿ. ನಿಮ್ಮ ಮಾತುಗಳು ಕಠೋರವಾಗಿ ಇರುವುದು. ಏನನ್ನೋ ಸಾಧಿಸಲು ಹೋಗಿ ಮತ್ತೇನನ್ನೋ ಮಾಡಿಕೊಳ್ಳುವಿರಿ. ವಾಹನದಿಂದ ಬಿದ್ದು ಗಾಯವಾಗುವ ಸಾಧ್ಯತೆ ಇದೆ. ನಿಮಗೆ ಬೇಕಾದ ವಾತಾವರಣದಲ್ಲಿ ಇರುವುದು ಇಷ್ಟವಾಗುವುದು. ನಿಮ್ಮ ಕನಸನ್ನು ಸಕಾರ ಮಾಡಿಕೊಳ್ಳಲು ಪ್ರಗತಿಯಲ್ಲಿ ಇರುವಿರಿ.
ಮೀನ ರಾಶಿ: ತಂತ್ರಜ್ಞಾನದಲ್ಲಿ ಮಹಿಳೆಯರ ಸ್ಥಾನ ಹೆಚ್ಚಾಗುವುದು. ಇಂದು ನಿಮಗೆ ಸ್ಥಿರಾಸ್ತಿ ಹಾಗೂ ವಾಹನದಿಂದ ಲಾಭವಾಗುವ ಸಂಭವವು ಹೆಚ್ಚು. ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಯಲ್ಲಿ ತೊಡಗುವುದನ್ನು ಕಡಿಮೆ ಮಾಡಬೇಕು. ವ್ಯಾಪಾರದಲ್ಲಿ ಪ್ರಾಮಾಣಿಕತೆಯನ್ನು ಉಳಿಸಿಕೊಳ್ಳಿ. ಕೃಷಿಕರಿಗೆ ಆದಾಯದ ಆತಂಕ ಇರುವುದು. ಸಂತೋಷಕ್ಕೆ ಅಡ್ಡಿಯಾಗುವ ಕಾರ್ಯವನ್ನು ಮಾಡಿಕೊಂಡು ಪಶ್ಚಾತ್ತಾಪ ಪಡುವಿರಿ. ಅಜಾಗರೂಕತೆಯಿಂದ ನಿಮ್ಮ ವಸ್ತುವು ಇನ್ನೊಬ್ಬರ ಪಾಲಾಗಬಹುದು. ಕಳೆದ ವಿಚಾರವನ್ನು ಮತ್ತೆ ಮತ್ತೆ ನೆನಪಿಸಿಕೊಂಡು ದುಃಖಿಸುವಿರಿ. ದೈವಭಕ್ತಿಯಲ್ಲಿ ಅಪರಿಚಿತ ಕರೆಗಳು ನಿಮ್ಮನ್ನು ಪೀಡಿಸಬಹುದು. ಉದ್ಯೋಗದಲ್ಲಿ ಖುಷಿಪಡುವುದನ್ಬು ಕಲಿಯಬೇಕು. ಇನ್ನೊಬ್ಬರ ಜವಾಬ್ದಾರಿಯನ್ನು ನೀವು ಕಸಿದುಕೊಳ್ಳುವ ಆಲೋಚನೆ ಮಾಡುವಿರಿ. ಅನ್ಯ ಕಾರ್ಯದಿಂದ ನಿಮ್ಮ ಮುಖ್ಯ ಕಾರ್ಯದಲ್ಲಿ ವೇಗವು ಕಡಿಮೆ ಆಗಬಹುದು. ನೂತನ ವಾಹನವನ್ನು ಖರೀದಿಸುವ ಆಲೋಚನೆ ಇರುವುದು. ಸ್ನೇಹಿತರ ಸಂಪಾದನೆಯ ದಾರಿಯನ್ನು ಹಾಕಿಕೊಡುವಿರಿ.
-ಲೋಹಿತ ಹೆಬ್ಬಾರ್ – 8762924271 (what’s app only)
Published On - 12:02 am, Fri, 14 March 25