ದಿನ ಭವಿಷ್ಯ: ಈ ರಾಶಿಯವರ ಇಂದಿನ ತಪ್ಪು ಗ್ರಹಿಕೆಯಿಂದ ಕೆಲಸಗಳು ಅಸ್ತವ್ಯಸ್ತವಾಗಬಹುದು

| Updated By: ರಮೇಶ್ ಬಿ. ಜವಳಗೇರಾ

Updated on: Mar 19, 2025 | 2:45 AM

ಶಾಲಿವಾಹನ ಶಕವರ್ಷ 1947ರ ಉತ್ತರಾಯಣ, ಶಿಶಿರ ಋತುವಿನ ಫಾಲ್ಗುಣ ಮಾಸ ಕೃಷ್ಣ ಪಕ್ಷದ ಪಂಚಮೀ ತಿಥಿ, ಬುಧವಾರ ತಿಳಿದು ಮಾತನಾಡುವುದು, ಉಳಿದಿದ್ದರಲ್ಲಿ ತೃಪ್ತಿ, ಕಳೆದು ಹೋದುರಕ್ಕೆ ಬೇಸರ ಈ ದಿನದ್ದು. ಹಾಗಾದ್ರೆ, ಯಾವ ರಾಶಿಯವರಿಗೆ ಶುಭ? ಯಾವ ರಾಶಿಗೆ ಅಶುಭ? ಇಂದಿನ ದಿನ ಭವಿಷ್ಯ ಇಲ್ಲಿದೆ ನೋಡಿ.

ದಿನ ಭವಿಷ್ಯ: ಈ ರಾಶಿಯವರ ಇಂದಿನ ತಪ್ಪು ಗ್ರಹಿಕೆಯಿಂದ ಕೆಲಸಗಳು ಅಸ್ತವ್ಯಸ್ತವಾಗಬಹುದು
Follow us on

ನಿತ್ಯ ಪಂಚಾಗ: ಶಾಲಿವಾಹನ ಶಕೆ 1947ರ ಕ್ರೋಧೀ ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಸೌರ ಮಾಸ : ಮೀನ ಮಾಸ, ಮಹಾನಕ್ಷತ್ರ : ಉತ್ತರಾಭಾದ್ರ, ಮಾಸ : ಫಾಲ್ಗುಣ, ಪಕ್ಷ : ಕೃಷ್ಣ, ವಾರ : ಬುಧ, ತಿಥಿ : ಪಂಚಮೀ, ನಿತ್ಯನಕ್ಷತ್ರ : ಅನುರಾಧಾ, ಯೋಗ : ಹರ್ಷಣ, ಕರಣ : ಕೌಲವ, ಸೂರ್ಯೋದಯ – 06 – 39 am, ಸೂರ್ಯಾಸ್ತ – 06 – 42 pm, ಇಂದಿನ ಶುಭಾಶುಭಕಾಲ : ರಾಹು ಕಾಲ 12:40 – 14:11, ಯಮಘಂಡ ಕಾಲ 08:09 – 09:40, ಗುಳಿಕ ಕಾಲ 11:10 – 12:40

ತುಲಾ ರಾಶಿ: ಇಂದಿನ ತಪ್ಪು ಗ್ರಹಿಕೆಯಿಂದ ನಿಮ್ಮ ಕೆಲಸಗಳು ಅಸ್ತವ್ಯಸ್ತವಾಗಬಹುದು. ಒಂದೇ ಕೆಲಸವನ್ನು ಮತ್ತೆ ಮತ್ತೆ ಮಾಡಬೇಕಾದೀತು. ಸಾಮಾಜಿಕ ಕಾರ್ಯಗಳಿಂದ ಹೊಸ ದಿಕ್ಕು ತೆರೆದುಕೊಳ್ಳಬಹುದು. ಅಂದುಕೊಂಡಿದ್ದನ್ನು ಸಾಧಿಸಲು ಸರಿಯಾದ ಮಾರ್ಗವು ಕಂಡುಕೊಳ್ಳುವ ಅನಿವಾರ್ಯತೆ ಸೃಷ್ಟಿ. ದೇವರ ಮೇಲೆ ನಂಬಿಕೆ ಇಟ್ಟ ಕಾರಣ ನಿಮ್ಮ ಮನೋರಥವು ಪೂರ್ತಿಯಾಗಿದ್ದು ನಿಮಗೆ ಅತಿಶಯ ಸಂತೋಷವಾಗಲಿದೆ. ಆತ್ಮೀಯರಿಂದ ಯಾವುದನ್ನೂ ಪಡೆಯುವುದು ಬೇಡ. ಇನ್ನೊಬ್ಬರ ಭಾವನೆಗಳನ್ನು ಸರಿಯಾಗಿ ಅರ್ಥೈಸಿಕೊಳ್ಳಲಾರಿರಿ. ಭೂಮಿಯನ್ನು ಖರೀದಿಸುವ ಸಂದರ್ಭ ಬಂದರೂ ಪೂರ್ತಿ ಹಣವನ್ನು ಸೇರಿಸಲು ಆಗದು. ಯಾರ ಬಳಿಯೂ ಕೆಲಸವಿಲ್ಲ ಎಂದು ಹೇಳಬೇಡಿ. ನಿಮ್ಮ ಘನತೆಗೆ ಯಾರಿಂದಲಾದರೂ ಧಕ್ಕೆ ಬರುವುದು. ಸಮಯಪಾಲನೆಗೆ ಎಲ್ಲರೂ ಪ್ರಶಂಸಿಸುವರು. ನೀವು ಕಾರ್ಯಕ್ಕೆ ಸಂಬಂಧಪಟ್ಟಂತೆ ನಿಮ್ಮದೇ ಆದ ಚೌಕಟ್ಟನ್ನು ರಚಿಸಿಕೊಳ್ಳುವುದು ಕ್ಷೇಮ.‌ ಇಲ್ಲವಾದರೆ ಎಲ್ಲವೂ ನಿಮ್ಮ ಬುಡಕ್ಕೇ ಬರುವುದು. ವಿಷಮಸ್ಥಿತಿಯನ್ನು ಎದುರಿಸಲಾರಿರಿ.

ವೃಶ್ಚಿಕ ರಾಶಿ: ನಿಮ್ಮ‌ ನಿರ್ಧಾರಗಳನ್ನು ಬೇರೆ ಯಾರಾದರೂ ಬದಲಿಸಬಹುದು. ಇದು ನಿಮ್ಮ ಅಪಕ್ವತೆಯನ್ನು ತಿಳಿಸಿಬಹುದು. ಉದ್ಯಮದಲ್ಲಿ ಚಿಂತಿತ ಲಾಭ ಕಾಣದೇ ಮನಸ್ಸು ಕುಗ್ಗಬಹುದು. ಉತ್ಸಾಹದಿಂದ ಇರಲು ನಿಮಗೆ ದಾರಿ ಕಡಿಮೆ‌ ಇರಬಹುದು. ಬಾಕಿ ಇರುವ ಕೆಲಸಗಳು ಪೂರ್ಣಗೊಳ್ಳಿಸುವಿರಿ. ನಿಮ್ಮ ವೃತ್ತಿಜೀವನದಲ್ಲಿ ಹೊಸತನ್ನು ಸಾಧಿಸಲು ಅವಕಾಶ ಸಿಗುತ್ತದೆ. ನೀವು ಹೊಸ ಉದ್ಯೋಗದಲ್ಲಿ ಕಾಯುತ್ತಿದ್ದರೆ ಈ ಸಮಯ ನಿಮಗೆ ಶುಭವಾಗಿದೆ. ಇಷ್ಟವಿಲ್ಲದಿದ್ದರೂ ಉದ್ಯೋಗಕ್ಕೆ ತೆರಳಬೇಕಾದೀತು. ಮೇಲಧಿಕಾರಿಗಳ ಮಾತು ಕಿರಿಕಿರಿ ಎನಿಸಬಹುದು. ಉದ್ಯೋಗವನ್ನು ಬದಲಿಸುವ ಮೊದಲು ಸ್ನೇಹಿತರ ಸಲಹೆಯನ್ನು ಪಡೆಯುವಿರಿ. ಸಣ್ಣ ಕೆಲಸವಾದರೂ ಶ್ರದ್ಧೆಯಿಂದ ಮಾಡುವಿರಿ. ಯಾವುದೋ ಗುಂಗಿನಲ್ಲಿ ಇಂದಿನ ಕೆಲಸವನ್ನೆಲ್ಲ ಹಾಳುಮಾಡಿಕೊಳ್ಳುವಿರಿ. ಪರೀಕ್ಷೆಗೆ ಬೇಕಾದ ಸಿದ್ಧತೆಯನ್ನು ನಡೆಸಿ. ಸ್ವಾರ್ಥದಿಂದ ನಿಮಗೇ ತೊಂದರೆಯಾಗುವುದು ಎಂದು ಮನವರಿಕೆ ಆಗುವುದು. ದೂರದಲ್ಲಿ ಇರುವ ನಿಮಗೆ ಕುಟುಂಬದ ವಾರ್ತೆಯು ಖಷಿಯನ್ನು ಕೊಡುವುದು. ಅಪರೂಪದ ಪ್ರೀತಿಗೆ ಶರಣಾಗುವಿರಿ.

ಧನು ರಾಶಿ: ನಿಮ್ಮ ಕುಶಲ ಕರ್ಮಕ್ಕೆ ಪ್ರಶಂಸೆ ಸಿಗಲಿದೆ. ಹಣ ವ್ಯಯವನ್ನು ಅಧಿಕ ಮಾಡುವುದು ಬೇಡ. ದೇವರ ಕಾರ್ಯದಲ್ಲಿ ಮಗ್ನರಾಗುವಿರಿ. ವ್ಯಾಪಾರದಲ್ಲಿ ಲಾಭವನ್ನು ಕಂಡು ಏನಾದರೂ ಯೋಜನೆಯನ್ನು ಮಾಡಿ ಕಷ್ಟಕ್ಕೆ ಸಿಲುಕಿಕೊಳ್ಳುವಿರಿ. ಅಪರಿಚಿತರ ಬಗ್ಗೆ ಭಯವಿರುವುದು. ಸೃಜನಶೀಲ ಪ್ರಯತ್ನಗಳು ಫಲ ನೀಡುತ್ತವೆ. ಮಾತಿನ ಪ್ರಭಾವದಿಂದ ಎಲ್ಲಾ ಕೆಲಸಗಳು ಪೂರ್ಣಗೊಳ್ಳುತ್ತವೆ. ಆಒ್ತರು ಬಟ್ಟೆ ಇತ್ಯಾದಿಗಳನ್ನು ಉಡುಗೊರೆಯಾಗಿ ಪಡೆಯುವಿರಿ. ಆಮದು ವ್ಯವಹಾರವನ್ನು ಇಂದು ಕಡಿಮೆ ಮಾಡಿಕೊಳ್ಳುವಿರಿ. ಉದ್ಯಮದಲ್ಲಿ ಕೆಲವು ಮಾರ್ಪಾಡಿನ ಅವಶ್ಯಕತೆ ಇರಲಿದೆ. ಪ್ರಶಂಸೆಯಿಂದ ಅಹಂಕಾರವು ಬರುವುದು. ‌ಮಿತ್ರರಿಗೆ ವಂಚಿಸುವ ಆಲೋಚನೆ ಬರಲಿದೆ. ಯಂತ್ರಗಳನ್ನು ಬಳಸಿಕೊಂಡು ಸಣ್ಣ ಉದ್ಯೋಗವನ್ನು ಆರಂಭಿಸುವಿರಿ. ವಿದೇಶದಲ್ಲಿ ಜೀವನಕ್ಕೆ ಕುತ್ತು ಬರುವ ಸಾಧ್ಯತೆ ಇದೆ. ಪ್ರವಚನಕಾರರಿಗೆ ಉತ್ತಮ ಅವಕಾಶಗಳು ಲಭ್ಯವಿರಲಿದೆ. ನಿಮ್ಮ ದೌರ್ಬಲ್ಯಗಳನ್ನು ಎಲ್ಲರೆದುರು ಪ್ರಕಟಪಡಿಸುವುದು ಬೇಡ.

ಮಕರ ರಾಶಿ: ನಿಮ್ಮ ಮಾತಿಗೆ ಆಕರ್ಷಿತರಾಗಬಹುದು. ತಂತ್ರದಿಂದ ಶತ್ರುವನ್ನು ಗೆಲ್ಲುವಿರಿ. ವ್ಯವಹಾರವನ್ನು ಮಾಡಲು ಓಡಾಟ ಹೆಚ್ಚಾಗಬಹುದು. ಅನಿರೀಕ್ಷಿತ ಧನವ್ಯಯದಿಂದ ಆತಂಕವು ಆಗಲಿದೆ. ರಾಜಕೀಯದಿಂದ ನಿಮಗೆ ಪ್ರೇರಣೆ ಸಿಗುವುದು. ನೀವು ಮಾತಿನಿಂದ ಮಂತ್ರ ಮುಗ್ಧರನ್ನಾಗಿ ಮಾಡುವಿರಿ. ಆರ್ಥಿಕ ಲಾಭದಿಂದ ನೀವು ಸಂತೋಷ ಇರುವುದು ನಿಮ್ಮ ಮುಖದಲ್ಲಿ ಕಾಣಿಸುವುದು. ನಿಮ್ಮನ್ನು ಬಲವಾದ ಕಾರಣದಿಂದ ಒಪ್ಪಿಕೊಳ್ಳಬಹುದು. ಹಳೆಯ ವಾಹನವನ್ನು ನೀವು ಖರೀದಿಸುವಿರಿ. ವಿದ್ಯಾರ್ಥಿಗಳು ಓದಿನ ಸಮಯವನ್ನು ಬದಲಿಸಿಕೊಳ್ಳುವುದು ಸೂಕ್ತ. ಸಾಲ ಮಾಡುವಾಗ ನಿಮ್ಮ ಆದಾಯವನ್ನು ಗಮನದಲ್ಲಿ ಇಟ್ಟುಕೊಳ್ಳುವುದು ಒಳ್ಳೆಯದು. ತಾಯಿಯ ಆರೋಗ್ಯದಲ್ಲಿ ಆದ ವ್ಯತ್ಯಾಸದಿಂದ ಚಿಂತೆಗೆ ಒಳಗಾಗುವಿರಿ. ಉದ್ಯಮಕ್ಕೆ ಪ್ರಭಾವಿಗಳ ಕೃಪಾಕಟಾಕ್ಷ ಬೇಕು. ಅಪರಿಚಿತ ಜನರ ಭೇಟಿಯಿಂದ ಭವಿಷ್ಯಕ್ಕೆ ಅನೇಕ ಲಾಭವು ಆಗಲಿದೆ. ಅನಪೇಕ್ಷಿತ ಮಾತುಗಳನ್ನು ಹೆಚ್ಚಾಗ ಆಡುವಿರಿ.

ಕುಂಭ ರಾಶಿ: ಇಂದು ನೀವು ವಿವಾದಗಳಿಗೆ ಸಮಯವನ್ನು ಹೆಚ್ಚು ಕೊಡುವಿರಿ. ಸಲ್ಲದ ಆಸೆಗಳನ್ನು ಬೆಳಿಸಿಕೊಳ್ಳುವಿರಿ. ನಿಮ್ಮ ಭೂಮಿಯನ್ನು ಪಡೆದುಕೊಳ್ಳಲು ಸಾಹಸ ಮಾಡಬೇಕಾಗುವುದು. ಅಧ್ಯಾತ್ಮದಲ್ಲಿ ಉಂಟಾದ ಪ್ರಗತಿಯಿಂದ ನಿಮ್ಮಲ್ಲಿ ಹಲವು ಪರಿವರ್ತನೆ ತರಲಿದೆ. ನಿಮ್ಮ ನೆಮ್ಮದಿಗೆ ಸಂಗಾತಿಯು ಭಂಗವನ್ನು ಉಂಟುಮಾಡಬಹುದು. ನಿಮಗೆ ಗೊತ್ತೇ ಅಗದಂತೆ ವಂಚನೆಯಲ್ಲಿ ಸಿಕ್ಕಿಬೀಳುವಿರಿ. ಅರೋಗ್ಯದ ಸುಧಾರಣೆಗೆ ವೈದ್ಯರ ಸಲಹೆ ಅವಶ್ಯಕ. ಎಲ್ಲರ ಮೇಲೂ ವಿನಾ ಕಾರಣ ಕೋಪ‌ ಮಾಡಿಕೊಳ್ಳುವಿರಿ. ಪರರ ವಸ್ತುವನ್ನು ಬಳಸಿ, ಸರಿಯಾಗಿ ಹಿಂದಿರುಗಿಸಿ. ಹಸಿವು ಹೆಚ್ಚಾಗಿ ಸಂಕಟಪಡುವಿರಿ. ರಾಜಕೀಯವನ್ನು ಬಂಧುಗಳ ನಡುವೆಯೂ ಮಾಡುವಿರಿ. ಆಸಕ್ತಿ ಇಲ್ಲದೇ ಇದ್ದರೂ ಕರ್ತವ್ಯದಲ್ಲಿ ಲೋಪವಿರಬಾರದು. ಮನಸ್ಸು ಚಂಚಲದಿಂದ ಯಾರ ಮಾತನ್ನೂ ಕೇಳುವ ಮನಃಸ್ಥಿತಿಯಲ್ಲಿ ಇರಲಾರಿರಿ. ನೆಚ್ಚಿನ ವ್ಯಕ್ತಿಗಳ ಬಗ್ಗೆ ಪ್ರೀತಿ ಅಧಿಕವಾಗಬಹುದು.

ಮೀನ ರಾಶಿ: ಇಂದು ಮಾಡುವ ಕಾರ್ಯದಲ್ಲಿ ಪ್ರಾಮಾಣಿಕತೆ ಇರಲಿ. ಇಷ್ಟ ಬಂದ ಕಡೆ ನೀವು ಸುತ್ತಾಡುವಿರಿ. ಹೊಸ ಅನ್ವೇಷಣೆಯನ್ನು ನೀವು ಇಷ್ಟಪಡುವಿರಿ. ಆರ್ಥಿಕ ಸಂಕಟವನ್ನು ಸ್ನೇಹಿತರ ಸಹಾಯವನ್ನು ಪಡೆದು ಸರಿಮಾಡಿಕೊಳ್ಳುವಿರಿ. ಸಂಬಂಧಗಳಲ್ಲಿ ಸಕಾರಾತ್ಮಕ ಬದಲಾವಣೆಯನ್ನು ಇಂದು ಕಾಣುವಿರಿ. ಕೆಲವು ಪ್ರಮುಖ ಕೆಲಸಗಳು ಪೂರ್ಣಗೊಳ್ಳುವ ನಿರೀಕ್ಷೆಯಲ್ಲಿದ್ದವರಿಗೆ ಯಶಸ್ಸು ಸಿಗುವ ಸಾಧ್ಯತೆಯಿದೆ. ನಿಮ್ಮ ಆರೋಗ್ಯದ ಸ್ಥಿತಿಯನ್ನು ಬಹಳ ಗಂಭೀರವಾಗಿ ನೋಡಿಕೊಳ್ಳಬೇಕು. ನಿಮ್ಮ ಜೊತೆಗಿರುವವರೇ ನಿಮ್ಮ ವಸ್ತುವನ್ನು ಅಪಹರಿಸುವರು. ನಿಮ್ಮ‌ ಮಾತಿನ ಮೇಲೆ‌ ನಿಯಂತ್ರಣವಿರಲಿ. ನಿಮ್ಮ ವೃತ್ತಿಯು ನಿಮಗೆ ಗೌರವವನ್ನು ಕೊಡಿಸುವುದು. ಸರಳತೆಯನ್ನು ರೂಢಿಸಿಕೊಳ್ಳುವುದು ಉತ್ತಮ ಸ್ವಭಾವವೆನಿಸಬಹುದು. ನಿಮ್ಮ ವಸ್ತುವು ಕಳ್ಳರಿಂದ ಅಪಹರಣ ಆಗುತಗತದೆವೆಂಬ ಭಯವು ಇರುವುದು. ಇನ್ನೊಬ್ಬರ ಬಳಿ‌ ಇರುವ ನಿಮ್ಮ‌ ವಸ್ತುವನ್ನು ಬಹಳ‌ ಪ್ರಯತ್ನದಿಂದ ಪಡೆಯುವಿರಿ. ಬಂಧುಗಳಿಗಾಗಿ ಸಾಲ ಮಾಡುವ ಹಾಗೆ ಅಸದ ಆಗಬಹುದು. ಕೃಷಿಯಲ್ಲಿ ಆದ ಪ್ರಗತಿಯಿಂದ ಸಂತೋಷವಾಗುವುದು. ಉತ್ಸಾಹವು ಹೆಚ್ಚಾಗುದು.