ನಿತ್ಯ ಪಂಚಾಗ: ಶಾಲಿವಾಹನ ಶಕೆ 1947ರ ಕ್ರೋಧೀ ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಸೌರ ಮಾಸ : ಮೀನ ಮಾಸ, ಮಹಾನಕ್ಷತ್ರ : ಉತ್ತರಾಭಾದ್ರ, ಮಾಸ : ಫಾಲ್ಗುಣ, ಪಕ್ಷ : ಕೃಷ್ಣ, ವಾರ : ಬುಧ, ತಿಥಿ : ಪಂಚಮೀ, ನಿತ್ಯನಕ್ಷತ್ರ : ಅನುರಾಧಾ, ಯೋಗ : ಹರ್ಷಣ, ಕರಣ : ಕೌಲವ, ಸೂರ್ಯೋದಯ – 06 – 39 am, ಸೂರ್ಯಾಸ್ತ – 06 – 42 pm, ಇಂದಿನ ಶುಭಾಶುಭಕಾಲ : ರಾಹು ಕಾಲ 12:40 – 14:11, ಯಮಘಂಡ ಕಾಲ 08:09 – 09:40, ಗುಳಿಕ ಕಾಲ 11:10 – 12:40
ಮೇಷ ರಾಶಿ: :ನಿಮಗಿರುವ ಕುತೂಹಲವನ್ನು ಯಾರಾದರೂ ತಣಿಸಿಯಾರು. ನಿಮ್ಮ ಯೋಜನೆಯನ್ನು ಕಾರ್ಯರೂಪಕ್ಕೆ ತರಲು ಸಣ್ಣ ಅಡಚಣೆಯಾದೀತು. ನಿಮ್ಮ ದೀರ್ಘ ಕಾಲದ ಆರ್ಥಿಕತೆಯ ಕೊರಗು ಕ್ಷೀಣಿಸಬಹುದು. ವಿದ್ಯಾರ್ಥಿಗಳು ಪರೀಕ್ಷೆಯ ಭಯವನ್ನು ಕಳೆದುಕೊಳ್ಳುವುದು ಉತ್ತಮ. ಬಂಧುಗಳ ಆರೋಗ್ಯದ ಆರೈಕೆಯನ್ನು ನೀವು ಮಾಡಬೇಕಾದೀತು. ನಿಕಟವರ್ತಿಗಳ ಮಾತನ್ನು ನಗಣ್ಯ ಮಾಡುವಿರಿ. ಅದೃಷ್ಟ ಇದ್ದರೂ ನಿಮ್ಮನ್ನು ನಂಬಿಯೇ ಕೆಲಸ ಮಾಡಿ. ಅವಾಚ್ಯ ಮಾತುಗಳಿಂದ ನಿಮ್ಮನ್ನು ಯಾರಾದರೂ ನಿಂದಿಸಬಹುದು. ಗೊತ್ತಿಲ್ಲದೇ ನಿಮ್ಮದಲ್ಲದ ವಸ್ತುವನ್ನು ತೆಗೆದುಕೊಳ್ಳುವಿರಿ. ಸಮಸ್ಯೆಯ ಕುರಿತೇ ಹೆಚ್ಚು ಆಲೋಚನೆಯಲ್ಲಿ ಮಗ್ನರಾಗುವುದು ಬೇಡ. ಮರೆವು ನಿಮಗೆ ವರದಂತೆ ಕಾಣಿಸೀತು. ಒಡೆದ ಬಾಂಧವ್ಯವನ್ನು ಸೇರಿಸುವ ಪ್ರಯತ್ನ ಅಪೂರ್ಣವಾಗಲಿದೆ. ಯಾವುದೇ ಜವಾಬ್ದಾರಿಯನ್ನು ದೂರದಿಂದಲೇ ತಳ್ಳಿಹಾಕುವಿರಿ. ಸುಬ್ರಹ್ಮಣ್ಯನ ಉಪಾಸನೆಯು ಸಂತಸಪ್ರದವಾಗಲಿದೆ.
ವೃಷಭ ರಾಶಿ: ಇಂದಿನ ಕಾರ್ಯದ ಹೊರೆಯನ್ನು ಹೊತ್ತು ಹೆಚ್ಚು ಓಡಾಟ ಮಾಡುವಿರಿ. ಇತರರನ್ನು ಹೋಲಿಸಿಕೊಂಡು ನಿಮ್ಮನ್ನು ನೀವು ಸಮಾಧಾನ ಮಾಡಿಕೊಳ್ಳುವಿರಿ. ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದ್ದು ಸ್ಥಿರಾಸ್ತಿಯನ್ನು ಮಾರಾಟ ಮಾಡಲೂ ನಿಮಗೆ ಕಷ್ಟವಾದೀತು. ಮನೆಯಲ್ಲಿ ಧಾರ್ಮಿಕ ಕಾರ್ಯವನ್ನು ನಡೆಸಬಹುದು. ನೀವು ಯಾವುದೇ ಹೊಸ ಕೆಲಸವನ್ನು ಪ್ರಾರಂಭಿಸಲು ಯೋಜಿಸುತ್ತಿದ್ದರೆ ಸಮಯ ಹಾಗೂ ಸ್ಥಳಗಳೂ ಮುಖ್ಯ. ನಿಮ್ಮ ಕಠಿಣ ಪರಿಶ್ರಮದ ಪೂರ್ಣ ಫಲಿತಾಂಶಗಳನ್ನು ಪಡೆಯುವ ಸಾಧ್ಯತೆಯಿದೆ. ಗುರಿಯ ಬಗ್ಗೆ ಇರುವ ದೃಢತೆಯು ಸಡಿಲವಾದೀತು. ಇಂದು ಏನಾದರೂ ಆಗುತ್ತದೆ ಎಂಬ ಅಪಾಯವು ಇರಲಿದೆ. ವೃತ್ತಿಯ ಏಕತಾನತೆಯಿಂದ ಹೊರಬರಲು ಬಯಸುವಿರಿ. ಆಪ್ತರು ಕಾರಣಾಂತರಗಳಿಂದ ದೂರಾಗಬಹುದು. ಸಕಾರಾತ್ಮಕ ಆಲೋಚನೆಯನ್ನು ನೀವು ಹೆಚ್ಚು ಮಾಡಿಕೊಳ್ಳುವಿರಿ. ಯಾರನ್ನೂ ಮೆಚ್ಚುವ ನಿಮ್ಮ ಗುಣವು ಶ್ಲಾಘ್ಯವೇ. ಬಂಧುಗಳ ಮನೆಯಲ್ಲಿ ನೀವು ಇಂದು ಅನಿರೀಕ್ಷಿತವಾಗಿ ಭೋಜನ ಮಾಡುವಿರಿ. ನಿಂದಕರ ಬಗ್ಗೆ ನಿಮ್ಮ ಮಾತುಗಳು ಇರದು.
ಮಿಥುನ ರಾಶಿ: ಇಂದು ಬಂಧುಗಳು ನಿಮ್ಮನ್ನು ಭೇಟಿಯಾಗಲು ಬರಬಹುದು. ನಿಮ್ಮ ಬಗ್ಗೆ ನೀವೇ ಹೇಳಿಕೊಳ್ಳಬೇಕಾದೀತು. ನೈತಿಕ ಹೊಣೆಗಾರಿಕೆ ನಿಮ್ಮ ಮೇಲೆ ಬರಬಹುದು. ನಿಮ್ಮ ದಾಂಪತ್ಯದಲ್ಲಿ ಪರಸ್ಪರ ನೆರವಾಗುವಿಕೆ ಇರಲಿದ್ದು, ಸಂತೋಷವಾಗಲಿದೆ. ನಿಮ್ಮನ್ನು ಸಂತೋಷಪಡಿಸಿದವರಿಗೆ ಕೃತಜ್ಞತೆಯನ್ನು ತಿಳಿಸಿ. ಮಕ್ಕಳ ಕುರಿತು ನಿಮಗೆ ಅಭಿಮಾನ ಹೆಚ್ಚಾಗುವುದು. ಪ್ರಯಾಣವು ಹಿತವಾಗದೇ ಇರುವುದು. ನಿಮಗೆ ಬೇಕಾದುದನ್ನು ಕೇಳಿ ಪಡೆಯುವಿರಿ. ವೃತ್ತಿಯ ಸ್ಥಳದಲ್ಲಿ ನಿಮ್ಮನ್ನು ಗುರುತಿಸುವರು. ದ್ವೇಷಕ್ಕೆ ಸರಿಯಾದ ಕಾರಣವಿರಲಿ. ಇಂದು ಒತ್ತಡವಿಲ್ಲದೇ ಕಾರ್ಯವನ್ನು ಮುಗಿಸುವಿರಿ. ದುರಭ್ಯಾಸವನ್ನು ರೂಢಿಸಿಕೊಂಡಿದ್ದು ಅರಿವಿಗೆ ಬರುವುದು. ಆತ್ಮವಿಶ್ವಾಸದ ಕೊರತೆಯನ್ನು ನೀಗಿಸಿಕೊಳ್ಳುವುದು ಮುಖ್ಯವಾಗುವುದು. ನಿಮ್ಮ ಸಾಮಾಜಿಕ ಕಾರ್ಯಕ್ಕೆ ಬೆಂಬಲವನ್ನು ಅಪೇಕ್ಷಿಸುವಿರಿ. ಮಕ್ಕಳ ಕಾಳಜಿಯು ಅತಿಯಾಗುವುದು. ನಿಮ್ಮ ಬಳಿ ಇರುವುದನ್ನು ಜೋಪಾನಮಾಡಿಕೊಳ್ಳುವುದು ಸೂಕ್ತ. ಮಹಾವಿಷ್ಣುವಿನ ಉಪಾಸನೆಯು ನಿಮ್ಮ ಈ ದಿನವನ್ನು ಸಾರ್ಥಕ ಮಾಡಿಸೀತು.
ಕರ್ಕಾಟಕ ರಾಶಿ: ಇಂದು ನೀವು ಯಾರಿಂದಲಾದರೂ ಸಹಾಯವನ್ನು ಪಡೆಯುವಿರಿ. ಕಾರ್ಯಸ್ಥಳದ ಬದಲಾವಣೆ ಇರಲಿದೆ. ಅಧಿಕಾರವು ಸುಮಶಯ್ಯೆಯಾಗಿರದು. ಕೆಲವು ವಿಚಾರಕ್ಕೆ ಬುದ್ಧಿಯು ಸೂಚಿಸದೇ ಇರಬಹುದು. ಶೈಕ್ಷಣಿಕ ಕೆಲಸದಲ್ಲಿ ಯಶಸ್ಸು ಸಿಗುತ್ತದೆ. ಅಲ್ಪವಾದರೂ ಸಂತೋಷದಿಂದ ಪರರಿಗೆ ಕೊಡಿ. ಸಾಮಾಜಿಕ ಕಾರ್ಯಗಳಲ್ಲಿ ನಿಮಗೆ ಗೌರವ ಹೆಚ್ಚಾಗುವುದು. ಸ್ನೇಹಿತರ ಸಹಾಯದಿಂದ ವ್ಯವಹಾರ ಬೆಳೆಯುತ್ತದೆ. ಬೇರೆಯವರ ವಿಷಯದಲ್ಲಿ ಮೂಗು ತೂರಿಸುವುದು ಬೇಡ. ನಿಮ್ಮ ಶ್ರಮಕ್ಕೆ ಯೋಗ್ಯ ವರಮಾನ ಇಲ್ಲ ಎನಿಸಬಹುದು. ಸಾಲ ಕೊಟ್ಟವರಿಂದ ನಿಮಗೆ ಕಿರಿಕಿರಿ ಎನಿಸಬಹುದು. ಸಾಧ್ಯವಾದಷ್ಟು ಸಾಲವನ್ನು ಹಿಂದಿರುಗಿಸಿ. ಕುಟುಂಬವರ ಜೊತೆ ಸಮಯವನ್ನು ಕಳೆಯುವುದು ಆಗದು. ಸ್ವಾರ್ಥವಿದ್ದಷ್ಟು ದುಃಖ ಅಧಿಕವಾಗಲಿದೆ. ಕಾನೂನಿನ ಚೌಕಟ್ಟಿನಲ್ಲಿ ನಿಮ್ಮ ನಡೆವಳಿಕೆ ಇರಲಿ. ಕಾರಣಾಂತರಗಳಿಂದ ನಿಮ್ಮ ಜೀವನದ ಮಾರ್ಗವು ಬದಲಾಗುವುದು. ನಿಮಗೆ ಇಂದು ವಾದದಲ್ಲಿ ಸೋಲಾಗಬಹುದು, ಮುಗ್ಗರಿಸಿ ಬೀಳುವುದು ಬೇಡ.
ಸಿಂಹ ರಾಶಿ: ನಿಮ್ಮ ಸಹಾಯವು ಇಂದು ಯಾವುದಾದರೊಂದು ರೀತಿಯಲ್ಲಿ ಹಿಂದಿರುಗಬಹುದು. ಯಂತ್ರಗಳ ವ್ಯಾಪಾರದಲ್ಲಿ ಅಧಿಕ ಲಾಭವನ್ನು ಕಾಣುವಿರಿ. ಪುಣ್ಯ ಸ್ಥಳಗಳ ದರ್ಶನವನ್ನು ಮಾಡುವಿರಿ. ರಾಜಕೀಯ ಪ್ರೇರಿತದಿಂದ ನಿಮ್ಮ ಬಗ್ಗೆ ಸುಳ್ಳು ಸುದ್ದಿಗಳು ಬರಬಹುದು. ನೀವು ಯಾವುದೇ ಸಮಸ್ಯೆಯಲ್ಲಿ ಮುಳುಗಿದ್ದರೆ, ಇಂದು ಅದಕ್ಕೆ ಪರಿಹಾರ ಸಿಗುವ ಸಾಧ್ಯತೆಯಿದೆ. ಉದ್ಯೋಗದಲ್ಲಿ ಪ್ರಗತಿಯಿಂದ ಲಾಭ ಸಿಗುವುದು. ಕುಟುಂಬ ಜೀವನವನ್ನು ಬಹಳ ಆನಂದಿಸುವಿರಿ. ಪ್ರಭಾವೀ ಜನರು ನಿಮ್ಮನ್ನು ಅಸ್ತ್ರವನ್ನಾಗಿ ಮಾಡಿಕೊಂಡು ಕಾರ್ಯವನ್ನು ಸಾಧಿಸಿಕೊಳ್ಳುವರು. ಪ್ರೇಮಿಗಳು ವಿವಾಹಕ್ಕೆ ಮುಂದಡಿ ಇಡಬಹುದು. ಏಕಾಂಗಿ ಎಂಬ ಭಾವವು ನಿಮ್ಮನ್ನು ಅತಿಯಾಗಿ ಕಾಡಬಹುದು. ನಿಂದನೆಯನ್ನು ಗಂಭೀರವಾಗಿ ತೆಗೆದುಕೊಳ್ಳುವುದು ಬೇಡ. ರಕ್ಷಣೆಯ ಸ್ಥಾನದಲ್ಲಿ ಇರುವವರಿಗೆ ಭಯವಿರುವುದು. ಸಂಕಟವನ್ನು ಪರಿಹರಿಸಿಕೊಳ್ಳುವ ಮಾರ್ಗವು ವಿಳಂಬವಾಗಿ ಸಿಗುವುದು. ಪರರ ವಸ್ತುವನ್ನು ಅವರಿಗೆ ಹಿಂತಿರುಗಿಸಲು ನಿಮಗೆ ಆಗದೇ ಹೋಗುವುದು.
ಕನ್ಯಾ ರಾಶಿ: ಅಪೂರ್ಣವಾದ ಕೆಲಸಗಳಿಂದ ಚಿಂತೆ ಹೆಚ್ಚಾದೀತು. ಉನ್ನತವಾದ ಆಲೋಚನೆಗಳು ನಿಮ್ಮನ್ನು ದಡ ಸೇರಿಸುವುದು. ಹಳೆಯ ವಸ್ತುಗಳನ್ನು ಮಾರಾಟ ಮಾಡಬೇಕಾದೀತು. ಸ್ತ್ರೀಯರು ಸಂಗಾತಿಯ ಜೊತೆ ಮನಸ್ತಾಪವನ್ನು ಮಾಡಿಕೊಳ್ಳುವರು. ನಿಮ್ಮ ಕೋಪವನ್ನು ಒಂದಿಷ್ಟು ಸಮಯದಲ್ಲಾದರೂ ನಿಯಂತ್ರಣದಲ್ಲಿಡಿ. ಕೆಲಸದಲ್ಲಿ ನಿಮಗೆ ಬೆಂಬಲ ಸಿಗುತ್ತದೆ. ಅನಗತ್ಯವಾಗಿ ಓಡಾಡುವುದರಿಂದ ಮನಸ್ಸು ತೊಂದರೆಗೊಳಗಾಗಬಹುದು. ಪ್ರಯಾಣವು ಅವಸರವಸರವಾಗಿ ಇರುವುದು. ಸ್ವಾಭಿಮಾನವನ್ನು ಬಿಟ್ಟು ಇರುವುದು ಅಸಾಧ್ಯ ಎನಿಸಬಹುದು. ತೊಂದರೆ ಕೊಡುವವರಿಂದ ತಪ್ಪಿಸಿಕೊಳ್ಳಲು ನೋಡುವಿರಿ. ಎಲ್ಲದಕ್ಕೂ ಅನಾರೋಗ್ಯವು ನೆಪವಾಗಬಹುದು. ಸ್ತ್ರೀಯರಿಗೆ ಸಹಾಯ ಮಾಡಲು ಹೋಗಿ ಹಾಸ್ಯಕ್ಕೆ ಒಳಗಾಗುವಿರಿ. ಹೂಡಿಕೆಯನ್ನು ಮಾಡುವುದು ನಿಮಗೆ ಅನಿವಾರ್ಯವಾಗಬಹುದು. ನೌಕರರಿಗೆ ಕೆಲಸವನ್ನು ಹೇಳುವ ರೀತಿಯಲ್ಲಿ ಹೇಳಿ, ಮಾಡಿಸಿಕೊಳ್ಳಿ. ನಿಮ್ಮ ದಿವಸದ ವ್ಯವಸ್ಥೆಯನ್ನು ಕ್ರಮಬದ್ಧ ಮಾಡಿಕೊಳ್ಳಿ. ಮಾತಿನಿಂದ ಅಳೆದ ನಿಮ್ಮ ಮಾಪನವು ಸರಿಯಾಗದೇ ಇರುವುದು.