Horoscope Today 22 March: ಈ ರಾಶಿಯವರು ಪ್ರೀತಿಯಲ್ಲಿ ಸಫಲತೆ ಕಾಣುವರು
ಶಾಲಿವಾಹನ ಶಕವರ್ಷ 1947ರ ಉತ್ತರಾಯಣ, ಶಿಶಿರ ಋತುವಿನ ಫಾಲ್ಗುಣ ಮಾಸ ಕೃಷ್ಣ ಪಕ್ಷದ ಅಷ್ಟಮೀ ತಿಥಿ, ಶನಿವಾರ ಮಂದಗತಿಯಲ್ಲಿ ಕಾರ್ಯ, ಸಣ್ಣ ಆಲಸ್ಯ, ಪ್ರತಿಷ್ಠೆಯ ಕಲಹ. ಯಾವ ಅಹಿತಕರ ಘಟನೆಯೂ ನಿಮ್ಮ ಮನಸ್ಸನ್ನು ಕೆಡಿಸದು. ನಿಮ್ಮ ಕಠಿಣ ಪರಿಶ್ರಮವು ನೆನಪಿಗೆ ಬರಬಹುದು. ಇಂದಿನ ವಿಶೇಷ.

ಬೆಂಗಳೂರು, ಮಾರ್ಚ್ 22, ನಿತ್ಯ ಪಂಚಾಗ: ಶಾಲಿವಾಹನ ಶಕೆ ೧೯೪೭ರ ಕ್ರೋಧೀ ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಸೌರ ಮಾಸ : ಮೀನ ಮಾಸ, ಮಹಾನಕ್ಷತ್ರ : ಉತ್ತರಾಭಾದ್ರ, ಮಾಸ : ಫಾಲ್ಗುಣ, ಪಕ್ಷ : ಕೃಷ್ಣ, ವಾರ : ಶನಿ, ತಿಥಿ : ಅಷ್ಟಮೀ, ನಿತ್ಯನಕ್ಷತ್ರ : ಪೂರ್ವಾಷಾಢ, ಯೋಗ : ವ್ಯತಿಪಾತ್, ಕರಣ : ಬಾಲವ, ಸೂರ್ಯೋದಯ – 06 – 36 am, ಸೂರ್ಯಾಸ್ತ – 06 – 42 pm, ಇಂದಿನ ಶುಭಾಶುಭಕಾಲ : ರಾಹು ಕಾಲ 09:38 – 11:09, ಯಮಘಂಡ ಕಾಲ 14:10 – 15:41, ಗುಳಿಕ ಕಾಲ 06:37 – 08:07.
ಮೇಷ ರಾಶಿ: ಯಾವ ಅಹಿತಕರ ಘಟನೆಯೂ ನಿಮ್ಮ ಮನಸ್ಸನ್ನು ಕೆಡಿಸದು. ನಿಮ್ಮ ಕಠಿಣ ಪರಿಶ್ರಮವು ನೆನಪಿಗೆ ಬರಬಹುದು. ಭಡ್ತಿಯ ನಿರೀಕ್ಷೆಯಲ್ಲಿಯೇ ಇರುವಿರಿ. ಸ್ವತಂತ್ರವಾದ ನಿರ್ಧಾರವು ನಿಮಗೆ ಪೂರಕವೂ ಆಗಿ, ನೆಮ್ಮದಿಯನ್ನು ಕೊಡುವುದು. ಆದಾಯದ ಮೂಲವು ಗೌಪ್ಯವಾಗಿ ಇಟ್ಟುಕೊಳ್ಳಿ. ನಿಮ್ಮ ಶಾಂತ ಮನಸ್ಸಿನಿಂದ ಸಂಕಷ್ಟವನ್ನು ಎದುರಿಸುವಿರಿ. ಉದ್ಯೋಗಿಗಳ ಆದಾಯದಲ್ಲಿ ಅಲ್ಪ ಏರಿಕೆ. ಪಾಲುದಾರಿಕೆಯಲ್ಲಿ ತಾಳ್ಮೆಯನ್ನು ಕಳೆದುಕೊಳ್ಳುವಿರಿ. ಆಸ್ತಿ ಖರೀದಿ ವಿಚಾರದಲ್ಲಿ ಎಚ್ಚರಿಕೆ ಇರಲಿ. ಆಚಾತುರ್ಯದಿಂದ ಏನನ್ನೂ ಮಾಡಲು ಹೋಗುವುದು ಬೇಡ. ದಿನದ ಕಾರ್ಯವನ್ನು ನೀವು ಅವಲೋಕಿಸಿಕೊಂಡು ಹೆಜ್ಜೆ ಇಡುವುದು ಉತ್ತಮ. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಸಂದೇಹ ಬರಬಹುದು. ಅಂದುಕೊಂಡಿದ್ದರ ಕಡೆಗೆ ಗಮನ ಹರಿಸಲು ಸಾಧ್ಯವಾಗದು. ನಿಮ್ಮ ಅಭಿಮಾನಕ್ಕೆ ಘಾಸಿಯಾದೀತು. ಅದನ್ನು ಪ್ರಕಟಿಸಲು ಸಮಯದ ನಿರೀಕ್ಷೆಯಲ್ಲಿ ಇರಿ. ನಿಮ್ಮ ಆಪ್ತರ ಜೊತೆ ಕೆಲವು ರಹಸ್ಯವನ್ನು ಹೇಳಿಕೊಳ್ಳುವಿರಿ. ಅಗಬೇಕಾದ ಕಾರ್ಯಕ್ಕೆ ಒತ್ತಡವನ್ನು ಹೇರಿ ಮಾಡಿಸಿಕೊಳ್ಳುವಿರಿ. ಇಂದು ಮಾಡುವ ಕೆಲಸದಲ್ಲಿ ಶ್ರದ್ಧೆ ಅವಶ್ಯ ಬೇಕು.
ವೃಷಭ ರಾಶಿ: ತಾಯಿಗೆ ಸಂತೋಷವಾಗುವ ಉಡುಗೊರೆ ನಿಮ್ಮಿಂದ ಸಿಗಲಿದೆ. ಇಂದು ಕಿರಿಕಿರಿಯ ವಾತಾವರಣವು ಇರಲಿದ್ದು, ಎಲ್ಲವೂ ಸಮಸ್ಯೆಯಂತೆ ತೋರೀತು. ಆರ್ಥಿಕತೆಯ ಬಗ್ಗೆ ಅತಿಯಾದ ಚಿಂತನೆಯನ್ನು ಮಾಡುವಿರಿ. ನಿಮ್ಮದಾದ ಸ್ವಂತ ಉದ್ಯೋಗವನ್ನು ಬೆಳೆಸುವ ಕಡೆ ನಿಮ್ಮ ಗಮನವಿರಲಿ. ಇಂದಿನ ಗುರಿಯನ್ನು ಬೇಗ ತಲುಪುವಿರಿ. ಮಕ್ಕಳ ವಿಚಾರಕ್ಕೆ ವಾದಗಳು ಆಡಬಹುದು. ನಿಮ್ಮನ್ನು ವೈಭವೀಕರಿಸಿವುದರಲ್ಲಿ ಅರ್ಥವಿಲ್ಲ. ನಿಮ್ಮ ವಿರುದ್ಧ ತಂತ್ರಗಳು ನಡೆಯಲಿದ್ದು ನಿಮಗೆ ಗೊತ್ತಾಗದು. ಕೋಪವನ್ನು ಸಣ್ಣ ಸಾಧನವಾಗಿಸಿಕೊಂಡು ಕೆಲಸವನ್ನು ಸಾಧಿಸುವಿರಿ. ಅನಿರೀಕ್ಷಿತ ಘಟನೆಯು ನಿಮ್ಮನ್ನು ಬೆಚ್ಚಿಬೀಳಿಸುವುದು. ಹೊಸ ವ್ಯಕ್ತಿಯ ಪರಿಚಯು ನಿಮ್ಮ ಬೇಸರವನ್ನು ದೂರ ಮಾಡೀತು. ನಿಮ್ಮರ ಬಗ್ಗೆ ನಿಮಗೆ ಸಕಾರಾತ್ಮಕ ಭಾವವು ಇರದು. ಹಳೆಯ ಸಾಲಗಳಿಗೆ ನೀವೇ ಮುಕ್ತಿ ಕೊಡಿಸುವಿರಿ. ನಿಶ್ಚಯಾತ್ಮಕ ಬುದ್ಧಿಯು ಇರದು.
ಮಿಥುನ ರಾಶಿ: ಶಕ್ತಿಯನ್ನು ಮೀರಿ ಯಾವ ಕಾರ್ಯಕ್ಕೂ ಕೈಹಾಕುವುದು ಬೇಡ. ನಿಮ್ಮ ಮಕ್ಕಳ ಬಗೆಯ ವ್ಯಾಮೋಹವು ಅವರನ್ನು ಕೆಟ್ಟದ್ದಕ್ಕೆ ತಳ್ಳಬಹುದು. ಇಂದು ನೀವು ಸಾತ್ತ್ವಿಕರಂತೆ ತೋರುವಿರಿ. ಇಷ್ಟವಾಗದವರು ನಿಮ್ಮೆದುರಿಗೆ ಬರುವಾಗ ಕಣ್ತಪ್ಪಿಸಿಕೊಳ್ಳುವಿರಿ. ಬಾಯಿ ಚಪಲದ ಅಧಿಕವಾಗಿ ಏನನ್ನಾದರೂ ತಿಂದು, ಆರೋಗ್ಯ ಕೆಡುವುದು. ಸ್ವಂತ ವಾಹನದಲ್ಲಿ ಒಂಟಿಯಾಗಿ ಓಡಾಡುವಾಗ ಎಚ್ಚರಿಕೆ ಇರಲಿ. ನಿಮ್ಮ ಆಸಕ್ತಿಯ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡು ಅತ್ತ ಕಡೆ ಹೆಚ್ಚು ಪ್ರಯತ್ನಿಸಿ. ಮಿತ್ರರ ಸಹಯೋಗದಿಂದ ಭೂಮಿಯ ಖರೀದಿಯನ್ನು ಮಾಡುವಿರಿ. ಹಿಂದೆ ಮಾಡಿದ ಕಾರ್ಯಕ್ಕಾಗಿ ಇಂದು ಒಳ್ಳೆಯ ಫಲವು ದೊರೆಕಿದ ಸಂತೋಷದಲ್ಲಿ ಇರುವಿರಿ. ಕಳೆದುಕೊಂಡಿದ್ದನ್ನು ಮರಳಿ ಪಡೆಯುವ ಬಗ್ಗೆ ಯತ್ನವು ಪ್ರಬಲವಾಗಿ ಇರುವುದು. ವ್ಯಯದಷ್ಟೇ ಆದಾಯ ಸಿಕ್ಕರೆ ಖರ್ಚು ಮಾಡಿ. ಮನೆಯವರನ್ನು ಕರೆದುಕೊಂಡು ಪ್ರಯಾಣ ಮಾಡುವಿರಿ. ಆಸ್ತಿಯ ದಾಖಲೆಗಳನ್ನು ಅಧಿಕಾರಿಗಳು ವಿಚಾರಿಸಬಹುದು.
ಕರ್ಕಾಟಕ ರಾಶಿ: ದೈವದ ಕೃಪಯೊಂದೇ ನಿಮ್ಮ ಛಿದ್ರವಾದ ಮನಸ್ಸನ್ನು ಸರಿಮಾಡುವುದು. ನಿಮ್ಮ ವ್ಯಾಪಾರಕ್ಕೆ ಹೊಸ ದಿಕ್ಕನ್ನು ಕೊಡಬೇಕಾದೀತು. ತಂತ್ರಜ್ಞರು ತಮ್ಮ ಕಾರ್ಯವನ್ನು ವಿಸ್ತರಿಸಲು ಹಂಬಲಿಸಬಹುದು. ಉನ್ನತ ಮಟ್ಟದವರ ಜೊತೆ ಸಭೆಯಲ್ಲಿ ಭಾಗವಹಿಸುವಿರಿ. ಗೆಲುವಿಗಾಗಿ ಮಾಡುವ ಹೋರಾಟದ ಫಲ ನಿಮಗೆ ಆರಂಭದಲ್ಲಿಯೇ ಗೊತ್ತಾಗಲಿದೆ. ನಿಮ್ಮ ಅವ್ಯಕ್ತ ಭೀತಿಯನ್ನು ನೀವು ಹೊರಹಾಕದಿದ್ದರೂ ಅರಿವಿಗೆ ಬರುವುದು. ಬಂಧುಗಳ ಆರೋಗ್ಯದ ವಿಚಾರಣೆಗೆ ತಿರುಗಾಟ ಮಾಡಬೇಕಾಗುವುದು. ನಿಮ್ಮ ಬಗ್ಗೆ ಹಗುರಾದ ಭಾವವು ಬರಬಹುದು. ಮನೆಯಲ್ಲಿ ಧಾರ್ಮಿಕ ಕಾರ್ಯಗಳಿಂದ ಶಾಂತಿ ಲಭಿಸುವುದು. ಮಕ್ಕಳ ಬಗ್ಗೆ ಅನವಶ್ಯಕ ಅನುಮಾನ ಹಾಗೂ ಅಪವಾದವನ್ನು ಮಾಡುವ ಸನ್ನಿವೇಶವು ಬರಬಹುದು. ಓದುವ ಹವ್ಯಾಸವನ್ನು ಹೆಚ್ಚಿಸಿಕೊಳ್ಳುವಿರಿ. ಬೇಸರದ ಮಾತುಗಳು ಆಪ್ತರ ಮೇಲೆ ಪರಿಣಾಮ ಬೀರುವುದು. ಸಂಬಂಧದಲ್ಲಿ ಮಿತವಾದ ಬಂಧವಿರಲಿ. ಅಗತ್ಯದ ಖರ್ಚುಗಷ್ಟೇ ಪ್ರಾಧಾನ್ಯವಿರಲಿ.
ಸಿಂಹ ರಾಶಿ: ಉಚಿತವಾಗಿ ಬಂದಿರುವುದೆಲ್ಲ ಯೋಗ್ಯವಲ್ಲ. ಪರಿಶೀಲಿಸಿ ನಿಮ್ಮದಾಗಿಸಿಕೊಳ್ಳಿ. ಇಂದು ನಿಮ್ಮ ಸಂಗಾತಿಗೆ ಸಹಕಾರವನ್ನು ನೀಡುವಿರಿ. ಸಾಮಾಜಿಕ ಕಾರ್ಯವು ನಿಮಗೆ ಪ್ರಶಂಸೆಯನ್ನು ಕೊಟ್ಟೀತು. ಉತ್ತಮ ಆರ್ಥಿಕತೆಗಾಗಿ ನೀವು ವಿದೇಶದ ವ್ಯಾಪಾರದಲ್ಲಿ ಆಸಕ್ತಿ ಬರಬಹುದು. ನಿಮ್ಮದಲ್ಲದ ವೃತ್ತಿಯಲ್ಲಿ ಸೇರಿಕೊಂಡು ತೊಳಲಾಟ ನಡೆಸುವಿರಿ. ಸತತ ಪ್ರಯತ್ನದಿಂದ ಆದಾಯ ಹಾಗೂ ಖರ್ಚನ್ನು ಸರಿಯಾಗಿ ತೂಗಿಸಲು ತಿಳಿಯುವಿರಿ. ಇಂದಿನ ಕೆಲಸದಲ್ಲಿ ಕೆಲವು ತೊಂದರೆಗಳು ಕಾಣಿಸಿಕೊಂಡರೂ ಅದನ್ನು ಲೆಕ್ಕಿಸದೇ ಮುಂದೆ ಸಾಗುವಿರಿ. ಆದಾಯದ ಭಾಗವನ್ನು ದಾನ ಮಾಡುವ ಆಸೆ ಬರಬಹುದು. ಅಪರಿಚಿತ ಪತ್ರದಿಂದ ಆತಂಕಗೊಳ್ಳುವಿರಿ. ಗೆಳೆಯರ ಮಾತನ್ನು ಗೌರವಿಸಿದ್ದು ಅವರಿಗೆ ಸಂತೋಷವಾಗಲಿದೆ. ಬಂಧುಗಳು ನಿಮ್ಮ ಹತ್ತಿರ ಆರ್ಥಿಕ ಸಹಾಯವನ್ನು ಕೇಳಿಕೊಂಡು ಬರಬಹುದು. ಹಿರಿಯರ ಸೇವೆಯಿಂದ ಸಂತೋಷಪಡುವಿರಿ. ಮನಸ್ಸಿನ ಕಿರಿಕಿರಿಯಿಂದ ಕೋಪವು ಬರಬಹುದು.
ಕನ್ಯಾ ರಾಶಿ: ನಿಮ್ಮ ತಪ್ಪಿಗೆ ಕೇವಲ ಪಶ್ಚಾತ್ತಾಪ ಒಂದೇ ಸಾಲದು. ಸರಿಯಾಗಲು ಬೇಕಾದ ವ್ಯವಸ್ಥೆಯನ್ನೂ ಮಾಡುವುದು ಸೂಕ್ತ. ಇಂದಿನ ದಿನ ವಾದ, ವಿವಾದಗಳಿಂದಲೇ ಇರುವುದು. ಕಛೇರಿಯಲ್ಲಿ ನಿಮಗೆ ಅಸಂಬದ್ಧ ಆಲೋಚನೆಗಳು ಬರಬಹುದು. ಸಹೋದರಿಯ ಜೊತೆ ಮನಸ್ತಾಪ ಮಾಡಿಕೊಳ್ಳುವಿರಿ. ಗೃಹನಿರ್ಮಾಣವು ನೀವಂದುಕೊಂಡಷ್ಟು ಸರಳವಾಗಿ ಇರದು. ತಂದೆ ತಾಯಿಯರ ಸೇವೆಯ ಬಗ್ಗೆ ಅಭಿಮಾನ ಬರುವುದು. ಉತ್ತಮ ದಿನದ ನಿರೀಕ್ಷೆಯಲ್ಲಿ ಇರುವ ನಿಮಗೆ ಬೇಸರವಾದೀತು. ಇನ್ನೊಬ್ಬರ ಸಂಧಾನಕ್ಕೆ ಮಧ್ಯಸ್ತಿಕೆಯನ್ನು ವಹಿಸುವಿರಿ. ಕಛೇರಿಯ ವ್ಯವಹಾರವು ನಿಮಗೆ ಸರಿ ಕಾಣಿಸದು. ಉದ್ಯೊಇಗದ ಸ್ಥಳದಲ್ಲಿ ವಸ್ತುವನ್ನು ಕಳೆದುಕೊಳ್ಳುವಿರಿ. ಹೇಳದೇ ಮೌನದಿಂದ ಇರುವಿರಿ. ಬಿಗುಮಾನವನ್ನು ಬಿಟ್ಟು ಎಲ್ಲರ ಜೊತೆ ಬೆರೆಯುವ ಅಭ್ಯಾಸವು ಬೇಕಾಗುವುದು. ನೆಮ್ಮದಿಗಾಗಿ ಚಡಪಡಿಸುವಿರಿ. ಒತ್ತಡವು ನಿಮಗೆ ಯಾವ ವ್ಯವಹಾರಕ್ಕೂ ಆಸಕ್ತಿ ಇರದಂತೆ ಮಾಡುವುದು. ಯಾರ ಮಾತನ್ನೂ ಕೇಳುವ ತಾಳ್ಮೆ ಇರದು. ನಿಮ್ಮ ಮಾತನ್ನು ಕೇಳಲು ಆಸಕ್ತಿ ಇರದು. ಇಂದು ಮೇಲೆ ಆರ್ಥಿಕ ಉಳಿತಾಯಕ್ಕೆ ಹೆಚ್ಚಿನ ಗಮನ ನೀಡಿ.
ತುಲಾ ರಾಶಿ: ಪ್ರೀತಿಯು ಸಫಲವಾಗಲಿದೆ ಎಂಬ ಕನಸು ಕಾಣುವುದು ಬೇಡ. ಭಾವನೆಯನ್ನು ಹಾಗೂ ಮನಃಸ್ಥಿತಿಯನ್ನು ಅರಿತು ಮುಂದುವರಿಯುವುದು ಉತ್ತಮ. ಇಂದು ಅನಿರೀಕ್ಷಿತ ಧನಾಗಮನವು ಆಗಲಿದ್ದು, ಅದನ್ನು ಸತ್ಕಾರ್ಯಕ್ಕೆ ನೀಡುವಿರಿ. ಕಲಾವಿದರಿಗೆ ಖುಷಿಯ ವಾತಾವರಣವು ಇರಲಿದೆ. ನಿಮ್ಮ ಆಲೋಚನೆಯು ವಾಸ್ತವಕ್ಕಿಂತ ಭಿನ್ನವಾಗಿ ಕಾಣಿಸುವುದು. ಕೆಟ್ಟ ಆಲೋಚನೆಯಿಂದ ದೂರವಿರುವುದು ಸುಖ. ಋಜು ಮಾರ್ಗದಲ್ಲಿ ಇರುವ ನಿಮಗೆ ದಾರಿತಪ್ಪಿಸುವ ಜನರು ಎದುರಾಗಬಹುದು. ರಾಜಕೀಯದಲ್ಲಿ ನಿಮಗೆ ಆಸಕ್ತಿಯು ಇದ್ದರೂ ಪ್ರವೇಶಕ್ಕೆ ಮಾರ್ಗವನ್ನು ಹುಡುಕುವಿರಿ. ಹಿರಿಯರಿಗೆ ಅಗೌರವದಿಂದ ಮಾತನಾಡಿ, ಅನಂತರ ಪಶ್ಚಾತ್ತಾಪಪಡುವಿರಿ. ತೀರ್ಥಯಾತ್ರೆಯ ಸಂದರ್ಭವು ಬರಬಹುದು. ಹಣಕಾಸಿನ ಕೊರತೆಯಿಂದ ಯಾವದೋ ಕಾರ್ಯವನ್ನು ಮಾಡುವಿರಿ. ಪರೋಕ್ಷವಾಗಿ ನಿಮ್ಮವರನ್ನು ದ್ವೇಷಿಸುವಿರಿ. ಮಕ್ಕಳ ಮೇಲೆ ನಿಮ್ಮ ಮೋಹವು ಅತಿಯಾಗಿದ್ದು ಅದು ಬಂಧನವೂ ಆಗಬಹುದು. ಅಸಾಮಾನ್ಯ ಕಾರ್ಯವನ್ನು ಮಾಡಲು ಬಹಳ ಉತ್ಸಾಹವಿರುವುದು. ಸಾಹಸದಲ್ಲಿ ವಿವೇಚನೆ ಇರಲಿ.
ವೃಶ್ಚಿಕ ರಾಶಿ: ಅನಯಾಸದ ಗೆಲುವಿನಿಂದ ನಿಮಗೆ ಸಂತಸ. ಇಂದು ಪ್ರೇಮದಲ್ಲಿ ಇರುವವರಿಗೆ ಪರಸ್ಪರ ಭೇಟಿಯ ಅವಕಾಶವು ಇತಬಹುದು. ವಿವಾಹ ಸಮಾರಂಭದಲ್ಲಿ ಭಾಗಿಯಾಗುವಿರಿ. ಹೂಡಿಕೆಯಲ್ಲಿ ಇಂದು ಲಾಭ ಸಿಗದೇಹೋಗಬಹುದು. ಇಂದಿನ ನಿಮ್ಮ ಮಾತಿನಿಂದ ದ್ವೇಷವನ್ನು ಸಾಧಿಸಬಹುದು. ನಿಮಗೆ ನಕಾರಾತ್ಮಕ ಹಣೆಪಟ್ಟಿಯು ನಿಮಗೆ ಬೀಳಬಹುದು, ಎಚ್ಚರವಿರಲಿ. ಬಹಳ ದಿನಗಳಿಂದ ಉಳಿದಿದ್ದ ಕಾರ್ಯವು ಪೂರ್ಣವಾಗಬಹುದು. ಗೊಂದಲದಲ್ಲಿರುವ ವಿದ್ಯಾರ್ಥಿಗಳಿಗೆ ಸುಖಾಂತ್ಯ ಸಿಗುವುದು. ವಿದ್ಯಾದಾನವನ್ನು ಮಾಡಿದವರನ್ನು ಗೌರವಿಸುವಿರಿ. ಓಡಾಟದ ಸಮಯದಲ್ಲಿ ನಿಮ್ಮ ವಸ್ತುವು ಕಾಣೆಯಾಗಿದ್ದು ನಿಮಗೆ ಗೊತ್ತಾಗದು. ಕಳೆದುಕೊಂಡ ವಸ್ತುವಿನ ಮೌಲ್ಯವು ನಿಮಗೆ ಗೊತ್ತಾಗದೇ ಹೋಗುವುದು. ಅಪರಿಚಿತರು ನಿಮ್ಮಿಂದ ಧನವನ್ನು ಪಡೆಯುವರು. ಅತಿಯಾದ ನಿರೀಕ್ಷೆಯು ಇಂದು ನಿಮ್ಮ ಮನಸ್ಸನ್ನು ಕೆಡಸಬಹುದು. ಮನೆಗೆ ಬಂದ ಅತಿಥಿಯನ್ನು ಸತ್ಕರಿಸುವಿರಿ. ವಾಹನದಿಂದ ಬಿದ್ದು ಗಾಯವನ್ನು ಮಾಡಿಕೊಳ್ಳುವ ಸಾಧ್ಯತೆ ಇದೆ.
ಧನು ರಾಶಿ: ಆರ್ಥಿಕ ಒತ್ತಡದಿಂದ ಆರೋಗ್ಯ ಕೆಡುವುದು, ಸಣ್ಣ ಚಿಕತ್ಸೆಯನ್ನೂ ಪಡೆಯಬೇಕಾಗಬಹುದು. ಹೊಸ ಕೆಲಸದಲ್ಲಿ ತೊಡಗಿದವರಿಗೆ ಭಯವು ಕಾಡಬಹುದು. ಧೈರ್ಯದಿಂದ ಮುನ್ನಡೆಯಲು ಅನುಭವಿಗಳ ಸಲಹೆಯು ಅವಶ್ಯಕ. ತಂದೆಯ ಆರೋಗ್ಯದ ಬಗ್ಗೆ ಕಾಳಜಿ ಇರಲಿ. ಸರ್ಕಾರಿ ಕೆಲಸಗಳಲ್ಲಿ ಕೆಲಸ ಮಾಡುವವರಿಗೆ ದಿನವು ಉತ್ತಮ. ಗೃಹೋಪಯೋಗಿ ವಸ್ತುಗಳನ್ನು ಜಾಣ್ಮೆಯಿಂದ ಮಾರಾಟ ಮಾಡಿದರೆ ನಿಮಗೆ ಲಾಭವಾಗುವುದು. ವಿರೋಧಿಗಳು ನಿಮ್ಮ ಹತ್ತಿರ ಬರಲು ಹೆದರುವರು. ನಿಮ್ಮ ಗೌರವಕ್ಕೆ ಸಂಗಾತಿಯಿಂದ ತೊಂದರೆಯಾಗಬಹುದು. ನಿಮಗೆ ಸಿಕ್ಕ ಆದರದಿಂದ ಉತ್ಸಾಹವು ಬರಲಿದೆ. ಪ್ರೀತಿಯ ಬಗ್ಗೆ ನಿಶ್ಚಿತತೆ ಇರದು. ಮನಸ್ಸು ದ್ವಂದ್ವದಲ್ಲಿ ನಿಲ್ಲುವುದು. ನಿಮಗೆ ಅನೇಕ ಕಾರ್ಯಗಳು ಇರುವುದರಿಂದ ಸಮಯವನ್ನು ಹೊಂದಿಸಿಕೊಳ್ಳಲು ಅನಿವಾರ್ಯವಾಗುವುದು. ಇಂದು ಬೆಳಗಿನ ವಾಯುವಿಹಾರದಿಂದ ಆರೋಗ್ಯವು ಕೆಡಬಹುದು. ಪುಣ್ಯ ಸ್ಥಳದಲ್ಲಿ ಸಮಯವನ್ನು ಕಳೆಯುವುದು ಇಷ್ಡವಸದೀತು. ನಿಮ್ಮ ಸೋಲನ್ನು ನೀವು ಸಹಜವಾಗಿ ಒಪ್ಪಿಕೊಳ್ಳಲಾರಿರಿ.
ಮಕರ ರಾಶಿ: ದೈಹಿಕ ಅಸಮತೋಲನದಿಂದ ಸ್ತ್ರೀಯರಿಗೆ ಸಂಕಟ. ಇಂದು ಕೆಲವು ಚಿಂತೆಗಳಿಂದ ತೊಂದರೆಗಳು ನಿಮ್ಮನ್ನು ಬಿಟ್ಟುಹೋಗದು. ಹೊರಗಿನಿಂದ ಹಣವನ್ನು ಅನಿವಾರ್ಯವಾಗಿ ಪಡೆಯಬೇಕಾಗಬಹುದು. ನಿಮ್ಮ ಶಿಕ್ಷಣವನ್ನು ಸರಿಯಾಗಿ ಬಳಸಿಕೊಳ್ಳುವಿರಿ. ಕಾನೂನಾತ್ಮಕ ಹೋರಾಟದ ತಂತ್ರವನ್ನು ಬದಲಿಸುವಿರಿ. ನಿಮ್ಮ ಮಾತು ಅಹಂಕಾರದಂತೆ ತೋರಬಹುದು. ವ್ಯಾಪಾರದಲ್ಲಿ ಸಾಧಾರಣ ಆದಾಯವು ಇದ್ದು ನಿಮಗೆ ಸಮಾಧಾನ ಇರದು. ವಾಹನ ಖರೀದಿಯಲ್ಲಿ ಮೋಸವಾಗುವುದು. ಮಕ್ಕಳ ಪ್ರಗತಿಯು ನಿಮಗೆ ಸಂತೋಷವನ್ನು ಕೊಡುವುದು. ಕಛೇರಿಯ ಕೆಲಸಗಳು ಒತ್ತಡದಿಂದ ಇರಲಿದೆ. ಇಂದು ಸಮಯಕ್ಕೆ ಸರಿಯಾಗಿ ಎಲ್ಲಿಗೂ ತಲುಪಲಾಗದು. ದೂರದೃಷ್ಟಿಯು ನಿಮ್ಮ ಚಿಂತನೆಗೆ ಇರಲಿ. ಸ್ವಂತ ಉದ್ಯಮದಲ್ಲಿ ನೀವು ನಷ್ಟವನ್ನು ಅನುಭವಿಸುವಿರಿ. ಉದ್ಯೋಗಕ್ಕೆ ಸಮಯವನ್ನು ಕೊಡಲಾಗದು. ಒತ್ತಡವು ಅಧಿಕವಿರಿಲಿ. ಹತ್ತಾರು ಜವಾಬ್ದಾರಿಗಳನ್ನು ವಹಿಸಿಕೊಳ್ಳುವಿರಿ.
ಕುಂಭ ರಾಶಿ: ವ್ಯಾವಹಾರಿಕ ವಿಚಾರದಲ್ಲಿ ಸ್ಪರ್ಧೆಗೆ ಇಳಿಯುವುದು ಇಷ್ಟವಾಗದು. ಇಂದು ನಿಮಗೆ ಸ್ನೇಹಿತರ ಬೆಂಬಲವು ಸಿಗಲಿದ್ದು, ಉಳಿಸಿಕೊಂಡ ಕಾರ್ಯಗಳನ್ನು ಪೂರ್ಣ ಮಾಡಿಕೊಳ್ಳುವಿರಿ. ವೈವಾಹಿಕ ಜೀವನದಿಂದ ಶತ್ರುಗಳು ಅಧಿಕವಾಗಿ ಆಗಬಹುದು. ಇಂದು ಕೇವಲ ಓಡಾಟವೇ ಆಗಲಿದೆ. ಎಣಿಸಿಕೊಂಡ ಕಾರ್ಯವು ಆಗದೇ ಇರಬಹುದು. ಮಕ್ಕಳಿಗಾಗಿ ಖರ್ಚು ಮಾಡುವ ಅನಿವಾರ್ಯತೆ ಬರಬಹುದು. ಪ್ರಾಮಾಣಿಕತೆಗೆ ಯೋಗ್ಯವಾದ ಯಶಸ್ಸನ್ನು ಪಡೆಯುವಿರಿ. ಅಂದುಕೊಂಡ ಕಾರ್ಯಗಳು ಸುಗಮವಾಗಿ ಸಾಗಲಿದ್ದು ನೆಮ್ಮದಿ ಇರುವುದು. ಸುಳ್ಳು ಹೇಳಿ ನಿಮ್ಮಿಂದ ಕಾರ್ಯವನ್ನು ಮಾಡಿಸಿಕೊಂಡಾರು. ಇಂದು ಬರುವ ಸಂದರ್ಭವನ್ನು ನೀವು ಸ್ವಾಗತಿಸಿ. ಸಿಟ್ಟಿನ ಮೇಲೆ ನಿಯಂತ್ರಣ ಬೇಕಾಗುವುದು. ನಿಮ್ಮ ಮೇಲೆ ಜವಾಬ್ದಾರಿಗಳು ಅಧಿಕವಾಗಲಿದ್ದು, ಚಿಂತೆಯು ಕಾಡಬಹುದು. ನಿಮ್ಮ ಮೇಲಿಟ್ಟ ನಂಬಿಕೆಯನ್ನು ನೀವು ಹುಸಿಗೊಳಿಸುವಿರಿ. ಉದ್ಯೋಗವು ನಿಮಗೆ ಸಾಕೆನಿಸಿ ಕೈ ಬಿಡಬಹುದು. ಸ್ವಂತಿಕೆಯನ್ನು ಮೆರೆಯುವ ಸಾಧ್ಯತೆ ಇದೆ. ಮಕ್ಕಳ ಬಗ್ಗೆ ನಿಮಗೆ ಪ್ರೀತಿ ಹೆಚ್ಚಾದೀತು.
ಮೀನ ರಾಶಿ: ಆರ್ಥಿಕ ಅಧಿಕಾರಿಗಳ ಸ್ಥಳಾಂತರ ಸಾಧ್ಯತೆ. ಇಂದು ನಿಮ್ಮ ಕಾರ್ಯವು ನಿರ್ವಿಘ್ನವಾಗಿ ನಡೆದು, ಸಂತಸವಾಗಲಿದೆ. ವೈವಾಹಿಕ ಜೀವನವು ಉತ್ತಮವಾಗಿರಲಿದ್ದು, ಸಂಗಾತಿಯ ಜೊತೆ ಬಾಧವ್ಯವು ರಸವತ್ತಾಗಿ ಇರಲಿದೆ. ಸಾಲವನ್ನು ಹಿಂಪಡೆಯುವುದು ನಿಮಗೆ ಬಹಳ ಕಷ್ಟದ ಸಂಗತಿ. ನಿಮಗೆ ಅಂದಾಜು ಸಿಗದೇ ಇಂದಿನ ಹಣವು ಅಧಿಕವಾಗಿ ಖರ್ಚಾಗಬಹುದು. ಯಾರ ಸಣ್ಣತನವನ್ನೂ ನೀವು ಸಹಿಸಿಕೊಳ್ಳಲಾರಿರಿ. ಯಾವುದಾದರೂ ಒಪ್ಪಂದವನ್ನು ಮಾಡಿಕೊಳ್ಳುವಾಗ ಸ್ವಲ್ಪ ಚಿಂತನೆ ಮಾಡುವುದು ಅವಶ್ಯಕ. ರಾಜಕಾರಣದಲ್ಲಿ ಮಾತು ಹಿಡಿತದಲ್ಲಿ ಇದ್ದರೆ ಒಳಳ್ಳೆಯದು. ಸಾರ್ವಜನಿಕವಾಗಿ ಆಡಿದ ಮಾತಿನಿಂದ ಸಂಕಟ. ವಾಹನದ ಉದ್ಯೋಗವನ್ನು ಮಾಡುತ್ತಿದ್ದರೆ ಲಾಭ ಗಳಿಸುವ ಸಾಧ್ಯತೆ ಇದೆ. ಇಂದು ನಿಮಗೆ ವೃತ್ತಿಯಲ್ಲಿ ಸಹಾಕಾರವು ಸಿಗದೇ ತೊಂದರೆಪಡುವಿರಿ. ಧಾರ್ಮಿಕ ಕಾರ್ಯದಿಂದ ನೆಮ್ಮದಿ ಸಿಗಲಿದೆ. ನಿಮ್ಮ ಹಾಸ್ಯವನ್ನು ಗಂಭೀರವಾಗಿ ತೆಗೆದುಕೊಳ್ಳಬಹುದು. ನಿಮ್ಮ ಮನಸ್ಸು ಯಾವುದರಲ್ಲಿಯೂ ಸ್ಥಿರವಾಗಿ ಇರದೇ ಬಹಳ ಚಂಚಲವಾಗಿ ಇರುವುದು.
-ಲೋಹಿತ ಹೆಬ್ಬಾರ್-8762924271 (what’s app only)