Horoscope Today 29 March: ಇಂದಿನ ಆರ್ಥಿಕ ಪರಿಸ್ಥಿತಿ ಉತ್ತಮವಾಗಿರುತ್ತದೆ
ಶಾಲಿವಾಹನ ಶಕವರ್ಷ 1947ರ ಉತ್ತರಾಯಣ, ಶಿಶಿರ ಋತುವಿನ ಫಾಲ್ಗುಣ ಮಾಸ ಕೃಷ್ಣ ಪಕ್ಷದ ಅಮಾವಾಸ್ಯಾ ತಿಥಿ, ಶನಿವಾರ ಪ್ರಾಮುಖ್ಯ ಬದಲಾವಣೆ, ಬೆಳವಣಿಗೆಗೆ ಅಡ್ಡಿ, ಆರ್ಥಿಕ ಆತಂಕ, ಪರರ ಬಗ್ಗೆ ಅಸೂಯೆ ಇವೆಲ್ಲ ಈ ದಿನ 29-3-25ರ ದಿನ ಭವಿಷ್ಯದಲ್ಲಿ ಯಾವ ರಾಶಿಗೆ ಯಾವ ಫಲ ಎನ್ನುವುದನ್ನು ತಿಳಿದುಕೊಳ್ಳಿ.

ಶಾಲಿವಾಹನ ಶಕೆ ೧೯೪೭ರ ಕ್ರೋಧೀ ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಸೌರ ಮಾಸ : ಮೀನ ಮಾಸ, ಮಹಾನಕ್ಷತ್ರ: ಉತ್ತರಾಭಾದ್ರ, ಮಾಸ : ಫಾಲ್ಗುಣ, ಪಕ್ಷ : ಕೃಷ್ಣ, ವಾರ : ಶುಕ್ರ, ತಿಥಿ : ಅಮಾವಾಸ್ಯಾ, ನಿತ್ಯನಕ್ಷತ್ರ : ಉತ್ತರಾಭಾದ್ರ, ಯೋಗ : ಬ್ರಹ್ಮ, ಕರಣ : ಶಕುನಿ, ಸೂರ್ಯೋದಯ – 06 – 31 am, ಸೂರ್ಯಾಸ್ತ – 06 – 43 pm, ಇಂದಿನ ಶುಭಾಶುಭಕಾಲ : ರಾಹು ಕಾಲ 09:34 – 11:06, ಯಮಘಂಡ ಕಾಲ 14:09 – 15:40, ಗುಳಿಕ ಕಾಲ 06:32 – 08:03
ಮೇಷ ರಾಶಿ: ನೀವು ಇಂದು ಒತ್ತಡ ತಂದು ಯೋಜನೆಯನ್ನು ನಿಮ್ಮದಾಗಿಸಿಕೊಳ್ಳುವಿರಿ. ಹೇಳಿಕೊಳ್ಳದೇ ಇದ್ದರೆ ಯಾರೂ ಏನನ್ನೂ ಮಾಡಲಾರರು ಎನ್ನುವು ಗೊತ್ತಾಗಲಿದೆ. ಇಂದು ನಿಮ್ಮ ಬಹುಕಾಲದಿಂದ ಬಾಕಿ ಉಳಿದಿದ್ದ ವಿವಾದ ಬಗೆಹರಿಯಲಿದೆ. ನಿಮ್ಮ ಆನಂದದ ವ್ಯಕ್ತಿತ್ವದಿಂದಾಗಿ ಇತರರು ನಿಮ್ಮೊಂದಿಗೆ ಸಂಬಂಧವನ್ನು ಬೆಳೆಸಲು ಪ್ರಯತ್ನಿಸುತ್ತಾರೆ. ನೀವು ಜಾಣ್ಮೆಯಿಂದ ವರ್ತಿಸಬೇಕಾದೀತು. ಮನೆಯಿಂದ ದೂರ ಇರಬೇಕಾದೀತು. ಸಾಮಾಜಿಕ ಗೌರವದಿಂದ ನಿಮ್ಮ ನೈತಿಕವಾದ ಸ್ಥೈರ್ಯ ಹೆಚ್ಚುತ್ತದೆ. ನಿಮ್ಮ ಮನೆಗೆ ಇಂದು ಅತಿಥಿಗಳ ಅನಿರೀಕ್ಷಿತ ಆಗಮನವಾಗಬಹುದು. ವ್ಯಾಪಾರಸ್ಥರು ಯಾವುದಾರೂ ಸಮಸ್ಯೆಯಲ್ಲಿ ಸಿಕ್ಕಿಕೊಳ್ಳಬಹುದು. ಸಜ್ಜನರ ಸಹವಾಸವನ್ನು ಹೆಚ್ಚು ಇಷ್ಟಪಡುವಿರಿ. ಇಂದಿನ ಆರ್ಥಿಕ ಪರಿಸ್ಥಿತಿ ಉತ್ತಮವಾಗಿರುವುದು. ಅಗತ್ಯಕ್ಕಿಂತ ಹೆಚ್ಚು ಖರ್ಚು ಬೇಡ. ಪ್ರೀತಿಪಾತ್ರರು ನಿಮಗೆ ಬೇಕಾದ ಸಹಕಾರ ಮಾಡುವರು. ಆಗಿದಹೋದ ವಿಚಾರವನ್ನು ಸಂಗಾತಿಯ ಜೊತೆ ಚರ್ವಿತಚರ್ವಣ ಮಾಡುವಿರಿ. ಗೊತ್ತಿಲ್ಲದ ಕೆಲಸವನ್ನು ಒಪ್ಪಿಕೊಂಡು ಸಂಕಷ್ಟದಲ್ಲಿ ಸಿಕ್ಕಿಕೊಳ್ಳುವಿರಿ.
ವೃಷಭ ರಾಶಿ: ಅಲ್ಪ ಆಯಾಸ ಎನಿಸಿದರೂ ವಿಶ್ರಾಂತಿ ಪಡೆಯುವಿರಿ. ಇಂದು ನಿಮ್ಮ ಬುದ್ಧಿವಂತಿಕೆಯ ಕಾರಣಕ್ಕೆ ನಿಮ್ಮ ಗೌರವವು ಹೆಚ್ಚಾಗುತ್ತದೆ. ನೀವು ಸೀಮಿತವಾಗಿ, ಅಗತ್ಯಕ್ಕೆ ಅನುಗುಣವಾಗಿ ಮಾತ್ರ ಖರ್ಚು ಮಾಡಬೇಕು. ನೀವು ಕುಟುಂಬ ಸದಸ್ಯರಿಂದ ಒತ್ತಡವನ್ನು ಎದುರಿಸಬಹುದು. ಗೊತ್ತಿಲ್ಲದೇ ಯಾರ ಬಗ್ಗೆಯೂ ಮಾತನಾಡುವುದು ಬೇಡ. ಹಣದ ಬಗ್ಗೆ ವಾದಗಳು ಇರಬಹುದು. ನೀವು ಲೌಕಿಕ ಭೋಗಗಳಿಂದ ಮತ್ತು ಸೇವಕರಿಂದ ಎಲ್ಲ ರೀತಿಯ ಸಂತೋಷ ಮತ್ತು ಲಾಭವನ್ನು ಪಡೆಯುತ್ತೀರಿ. ಬೇಡವೆಂಬ ವಿಷಯಕ್ಕೆ ಮನಸ್ಸು ಮತ್ತೆ ಮತ್ತೆ ಹೋಗುವುದು. ಅನೇಕ ವಿಚಾರಗಳ ಬಗ್ಗೆ ಒಟ್ಟಿಗೇ ಚಿಂತಿಸುವುದು ಕಷ್ಟವಾದೀತು. ಬಂಧುಗಳ ಆಗಮನದಿಂದ ಹೆಚ್ಚು ಸಂತೋಷವು ಇರುವುದು. ಉತ್ತಮ ವಿದ್ಯೆಯ ಕಾರಣ ಉತ್ತಮ ಆದಾಯದ ಕೆಲಸವೂ ಸಿಗಲಿದೆ. ನಿಮ್ಮ ಆರ್ಥಿಕ ಸ್ಥಿತಿ ಆರೋಗ್ಯದ ಕಡೆ ಸ್ವಲ್ಪ ಹೆಚ್ಚು ಗಮನವಿರಲಿ. ನಿಮ್ಮ ಕೆಲಸವು ಕೇವಲ ಸುತ್ತಾಟದಲ್ಲಿಯೇ ಮುಕ್ತಾಯವಾಗುವುದು. ಅಪ್ರಯೋಜಕ ವಿಚಾರದ ಬಗ್ಗೆ ಚಿಂತೆ ಮಾಡುವಿರಿ.
ಮಿಥುನ ರಾಶಿ: ನೀವು ಕಲಿತ ವಿದ್ಯೆಯಿಂದ ಅಲ್ಪ ಆದಾಯವನ್ನು ಕಂಡುಕೊಳ್ಳುವಿರಿ. ಇಂದು ಬೇಡವೆಂದರೂ ಮಾಡಬೇಕಾಗುವ ಅನಗತ್ಯ ಖರ್ಚುಗಳು ಮುನ್ನೆಲೆಗೆ ಬರುತ್ತವೆ. ನಿಮ್ಮ ಸಂಬಂಧಿಕರಿಂದ ನೀವು ಗೌರವವನ್ನು ಪಡೆಯುತ್ತೀರಿ. ಅಧಿಕಾರಿಗಳಿಂದ ಕ್ರಮ ತೆಗೆದುಕೊಳ್ಳಬಹುದು. ವಾಹನ ಚಾಲನೆಯಿಂದ ಆಯಾಸವಾಗುವುದು. ನಿಮ್ಮನ್ನು ಇತರರು ನೋಡುವರು. ರಾಜಕಾರಣಿಗಳು ಕಾರ್ಯಕ್ರಮದ ಒತ್ತಡದಲ್ಲಿ ಇರುವರು. ಮಾನಸಿಕ ಒತ್ತಡದಿಂದ ಬೇರೆ ಕೆಲಸದಲ್ಲಿ ತೊಡಗಿಕೊಳ್ಳುವಿರಿ. ನೀವು ಇಂದಿನ ವ್ಯಾಪಾರದಲ್ಲಿ ಲಾಭವನ್ನೂ ಪಡೆಯುತ್ತೀರಿ. ನಿಮ್ಮ ಬಾಕಿ ಕೆಲಸಗಳು ಪೂರ್ಣಗೊಳ್ಳುತ್ತವೆ. ಮಹಿಳೆಯರು ಸ್ವಂತ ಉದ್ಯಮವನ್ನು ಆರಂಭಿಸುವ ನಿರ್ಧಾರಕ್ಕೆ ಬರಬಹುದು. ನಿಮ್ಮ ಬೆಳವಣಿಗೆಯು ನಿಮಗೆ ಸಮಾಧಾನ ತರದೇ ಇದ್ದೀತು. ಹಳೆಯ ವಿಚಾರವನ್ನು ವಿರೋಧಿಗಳು ಪುನಃ ಮೇಲಕ್ಕೆ ತಂದು ಕಲಹ ಮಾಡಬಹುದು. ನಿಮ್ಮ ಬಗ್ಗೆ ಪ್ರಶಂಸೆಯ ಮಾತುಗಳನ್ನು ನೀವು ಕೇಳಲು ಸಂಕೋಚಪಡುವಿರಿ. ಅವಕಾಶವನ್ನು ಬಿಟ್ಟು ನೀವು ದೊಡ್ಡವರಾಗುವುದು ಬೇಡ. ಕೆಟ್ಟ ಮಾತುಗಳನ್ನು ಇನ್ನೊಬ್ಬರ ಬಗ್ಗೆ ತಪ್ಪಿ ಆಡುವಿರಿ.
ಕರ್ಕಾಟಕ ರಾಶಿ: ಉದ್ಯಮವನ್ನು ಹಾಗಯೇ ಭಾವಿಸಿ. ಅಲ್ಲಿ ಸಡಿಲಿಕೆಯಾದರೆ ಬೆಳವಣಿಗೆ ಕಷ್ಟ. ಇಂದು ನಿಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳುವ ಪ್ರಯತ್ನದಲ್ಲಿ ಇರುವಿರಿ. ಪರೋಪಕಾರದ ಬಗ್ಗೆ ಆಸಕ್ತಿಯು ಮೂಡಬಹುದು. ಧಾರ್ಮಿಕ ವಿಧಿವಿಧಾನಗಳಲ್ಲಿ ಆಸಕ್ತಿ ವಹಿಸಿ ಸಂಪೂರ್ಣ ಸಹಕಾರ ನೀಡುವಿರಿ. ಭೂ ವ್ಯವಹಾರದಿಂದ ಸೋಲು. ಅದೃಷ್ಟದಿಂದಲೂ ನೀವು ಸಂಪೂರ್ಣ ಬೆಂಬಲವನ್ನು ಪಡೆಯುತ್ತೀರಿ, ನಿಮ್ಮ ಆರ್ಥಿಕ ಪರಿಸ್ಥಿತಿ ಮೊದಲಿಗಿಂತ ಉತ್ತಮವಾಗಿರುತ್ತದೆ. ಇಂದು ನಿಮ್ಮ ಜೀವನಕ್ಕೆ ಸಂಬಂಧಿಸಿದ ಕೆಲವು ನಿರ್ಧಾರವನ್ನು ತೆಗೆದುಕೊಳ್ಳಬೇಕಾದೀತು. ನಿಮ್ಮ ಆಹಾರದ ಮೇಲೆ ನಿಯಂತ್ರಣವನ್ನು ಇಟ್ಟುಕೊಂಡು ವ್ಯಾಯಾಮವನ್ನು ಮಾಡಿ. ನಿಮ್ಮ ಇಂದಿನ ಎಲ್ಲ ಕೆಲಸಗಳೂ ಬಹಳ ವಿಳಂಬವಾಗಿ ಆಗುವುದು. ನಿಮ್ಮನ್ನು ನಂಬಿದವರಿಗೆ ನೀವು ಮೋಸ ಮಾಡುವುದು ಬೇಡ. ನಿಮ್ಮ ಸಂಗಾತಿಯ ಮನಃಸ್ಥಿತಿಯು ಬದಲಾಗಿದ್ದು ನಿಮಗೆ ಸಮಸ್ಯೆಯಾಗುವುದು.
ಸಿಂಹ ರಾಶಿ: ಕಷ್ಟಗಳಿಗೆ ಅತಿಯಾಗಿ ತಲೆ ಹಾಕಿದರೆ ಅದು ಮುಗಿಯದು. ಎಷ್ಟು ಬೇಕೋ ಅಷ್ಟನ್ನು ಮಾಡಿ ಮುನ್ನಡೆಯಿರಿ. ಇಂದು ನೀವು ಕೆಲಸದಲ್ಲಿ ಆಸಕ್ತಿ ಹೊಂದಿದರೂ ಅಂದುಕೊಂಡಿದ್ದನ್ನು ಸಾಧಿಸಲು ಆಗದು. ವ್ಯಾಪಾರ ಬೆಳವಣಿಗೆಗೆ ಮಾಡಿದ ಪ್ರಯತ್ನಗಳು ಫಲಪ್ರದವಾಗುವುದಿಲ್ಲ. ಭವಿಷ್ಯದಲ್ಲಿ ನೀವು ಒಳ್ಳೆಯ ಫಲಿತಾಂಶವನ್ನು ಪಡೆಯುವಿರಿ. ಪರರ ಒಳಿತನ್ನು ನೋಡಿ ಅಸೂಯೆ ಬೇಡ. ಬರುವ ಕಾಲದ ವರೆಗೆ ತಾಳ್ಮೆ ಬೇಕು. ಬೇಡದ ಮಾತುಗಳನ್ನು ನೀವು ಎಲ್ಲರೆದುರು ಪ್ರಸ್ತಾಪಿಸುವಿರಿ. ಆದಾಯದ ಮೂಲವನ್ನು ಹೆಚ್ಚು ಮಾಡಿಕೊಳ್ಳಲು ಓಡಾಡಬೇಕಾದೀತು. ನಿಮಗೆ ಆಗುವ ಸಹಾಯವನ್ನು ಮಾಡಿ. ನೂತನ ದಾಂಪತ್ಯವು ಮಂದಗತಿಯಲ್ಲಿ ಸಾಗುವುದು. ನೀವು ಗೌರವವನ್ನು ಪಡೆಯುತ್ತೀರಿ. ನೀವು ತಾಳ್ಮೆಯಿಂದ ಮಾಡುವ ಯಾವುದೇ ಕೆಲಸವನ್ನು ನೀವು ಯಶಸ್ವಿಯಾಗಿ ಪೂರ್ಣಮಾಡುವಿರಿ. ಧಾರ್ಮಿಕ ಕಾರ್ಯಗಳಿಗೆ ದೂರಪ್ರಯಾಣವನ್ನು ಮಾಡುವಿರಿ. ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ. ಕಛೇರಿಯಲ್ಲಿ ಕಾರ್ಯಗಳು ಒತ್ತಡದಿಂದ ಇದ್ದು ಕೆಲವು ತಪ್ಪು ಆಗಬಹುದು.
ಕನ್ಯಾ ರಾಶಿ: ನೀವು ಅಧಿಕೃತ ಮುದ್ರೆಯ ಕೆಲಸವನ್ನು ಮಾತ್ರ ಮಾಡುವಿರಿ. ಇಲ್ಲವಾದರೆ ನಿಮ್ಮ ಕಾರ್ಯವನ್ನು ಬದಲಾಯಿಸುವರು. ಇಂದು ನಿಮ್ಮ ಕರ್ತವ್ಯದ ಕಡೆ ಗಮನ ಹೆಚ್ಚಿರಲಿದೆ. ನೀವು ಸ್ವಂತ ಕೆಲಸಕ್ಕಾಗಿ ಸಾಕಷ್ಟು ಓಡಾಟ ಹಾಗೂ ಖರ್ಚನ್ನು ಮಾಡಬೇಕಾದೀತು. ನೀವು ನಿಮ್ಮ ಗುರುವಿನ ಬಗ್ಗೆ ಸಂಪೂರ್ಣ ಭಕ್ತಿ ಮತ್ತು ನಿಷ್ಠೆಯನ್ನು ಇಟ್ಟುಕೊಳ್ಳುವಿರಿ. ಮೇಲಧಿಕಾರಿಗಳ ಜೊತೆ ಮಾತನಾಡಿ ಆದಾಯವನ್ನು ಹೆಚ್ಚು ಮಾಡಿಕೊಳ್ಳಬಹುದು. ಪರೀಕ್ಷೆಯ ಫಲಿತಾಂಶವು ನಿಮಗೆ ಸಂತೋಷವನ್ನು ಕೊಡುವುದು. ನಿಮ್ಮ ಅಸಂಬದ್ಧ ಯೋಚನೆಗಳನ್ನು ಕಡಿಮೆ ಮಾಡಿಕೊಳ್ಳಿ. ಭೂಮಿಯ ವಿಚಾರದಲ್ಲಿ ನಷ್ಟವಾಗಿ ತೊಂದರೆ ಪಡುವಿರಿ. ಮನಸ್ಸಿನ ನಿಯಂತ್ರಣದಲ್ಲಿ ನಿಮಗೆ ಕಷ್ಟವಾದೀತು. ಕುಟುಂಬದ ತೊಡಕುಗಳನ್ನು ಸೂಕ್ಷ್ಮವಾಗಿ ಪರಿಹರಿಸಿಕೊಳ್ಳಿ. ನೀವು ಹೊಸ ಕೆಲಸದಲ್ಲಿ ಹೂಡಿಕೆ ಮಾಡಬೇಕಾದರೆ, ನೀವು ಲಾಭವನ್ನು ಪಡೆಯುತ್ತೀರಿ ಮತ್ತು ನಿಮ್ಮ ವ್ಯವಹಾರದಲ್ಲಿ ಉತ್ತಮ ಲಾಭವಿದೆ. ಆಪ್ತರು ನಿಮಗೆ ದುಷ್ಕೃತ್ಯಕ್ಕೆ ಪ್ರೇರಣೆ ಕೊಡಬಹುದು.