AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today 24 May: ಈ ರಾಶಿಯವರು‌ ಕೇಳಿದ್ದನ್ನು ತಮ್ಮೊಳಗೆ ಇಟ್ಟುಕೊಳ್ಳಲಾರರು

ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ವಸಂತ ಋತುವಿನ ವೈಶಾಖ ಮಾಸ ಕೃಷ್ಣ ಪಕ್ಷದ ದ್ವಾದಶೀ ತಿಥಿ, ಶನಿವಾರ ಸಂಕಲ್ಪ ತಕ್ಕಂತೆ ಕಾರ್ಯ, ವಿರೋಧಕ್ಕೆ ಯೋಗ್ಯ ತಿರಸ್ಕಾರ, ದಾನದಿಂದ‌ ಕೀರ್ತಿ ಇದು ಇಂದಿನ ಭವಿಷ್ಯ. ಇಂದಿನ ದಿನ ಭವಿಷ್ಯದಲ್ಲಿ ಯಾವ ರಾಶಿಗೆ ಯಾವ ಫಲ ಎನ್ನುವುದನ್ನು ತಿಳಿದುಕೊಳ್ಳಿ.

Horoscope Today 24 May: ಈ ರಾಶಿಯವರು‌ ಕೇಳಿದ್ದನ್ನು ತಮ್ಮೊಳಗೆ ಇಟ್ಟುಕೊಳ್ಳಲಾರರು
ಜ್ಯೋತಿಷ್ಯ
Follow us
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ವಿವೇಕ ಬಿರಾದಾರ

Updated on: May 24, 2025 | 1:33 AM

ನಿತ್ಯ ಪಂಚಾಂಗ: ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು: ವಸಂತ, ಸೌರ ಮಾಸ: ವೃಷಭ, ಮಹಾನಕ್ಷತ್ರ: ಕೃತ್ತಿಕಾ, ಮಾಸ: ವೈಶಾಖ, ಪಕ್ಷ: ಕೃಷ್ಣ, ವಾರ: ಶನಿವಾರ, ತಿಥಿ: ದ್ವಾದಶೀ, ನಿತ್ಯನಕ್ಷತ್ರ: ಅಶ್ವಿನೀ, ಯೋಗ : ಆಯುಷ್ಮಾನ್, ಕರಣ: ಕೌಲವ, ಸೂರ್ಯೋದಯ – 06 : 04 am, ಸೂರ್ಯಾಸ್ತ – 06 : 54 pm, ಇಂದಿನ ಶುಭಾಶುಭಕಾಲ: ರಾಹು ಕಾಲ 09:17 – 10:53, ಯಮಘಂಡ ಕಾಲ 14:06 – 15:42, ಗುಳಿಕ ಕಾಲ 06:04 – 07:41

ಮೇಷ ರಾಶಿ: ನಿಮ್ಮೊಳಗೇ ಸಾತ್ತ್ವಿಕ‌ಪ ಪ್ರೇರಣೆಯಾಗುವ ಸಾಧ್ಯತೆ ಇದೆ. ಇಂದು ನೀವು ಪ್ರತಿಕೂಲಸ್ಥಿತಿಯನ್ನು ಎದುರಿಸಲು ಮಾನಸಿಕವಾಗಿ ಸಿದ್ಧರಿರಬೇಕಾಗುವುದು. ಹಿತಶತ್ರಗಳು ಸೋಲನ್ನು ಒಪ್ಪಿದರೂ ಇನ್ನೊಂದು ರೀತಿಯಲ್ಲಿ ಗೆಲ್ಲುವ ಯೋಜನೆ ಮಾಡುವರು. ಗಳಿಸಿಕೊಂಡ‌ ಭಾವಕ್ಕಿಂತ ಉಳಿಸಿಕೊಂಡ ಭಾವವೇ ಮೇಲು. ನಿಮ್ಮ ಸಂಕೀರ್ಣವಾದ ಕಾರ್ಯವು ಮುಕ್ತಾಗೊಳ್ಳುವುದು. ದಿನದ ಆರಂಭದಲ್ಲಿ ಉತ್ಸಾಹದಿಂದ ಮಾಡುವ ಪ್ರಯತ್ನಗಳು ಫಲವನ್ನು ಕೊಡುವುವು. ಆಯ್ಕೆಗಳು ಇಂದು ತಪ್ಪಾಗುವುದು. ಸರಿಯಾದುದನ್ನು ಬೇರೆಯವರಿಂದ ಕೇಳಿ ಪಡೆಯಿರಿ. ನಿಮಲ್ಲಿ ಅಲ್ಪವಾದರೂ ಉಪಕಾರ ಮನೋಭಾವ ಜಾಗರೂಕವಾಗಲಿದೆ. ಕಛೇರಿಯ ಕಾರ್ಯವು ಇಂದು ಅಧಿಕವಾಗಿ ಇರಲಿದೆ. ಸ್ಥಿರವಾದ ಬುದ್ಧಿಯನ್ನು ಬೆಳೆಸಿಕೊಳ್ಳುವ ಅನಿವಾರ್ಯತೆ ಬರಬಹುದು. ಉಪಾಯದಿಂದ ನಿಮ್ಮ ಸ್ಥಾನವನ್ನು ಸ್ಥಿರವಾಗಿಸಿಕೊಳ್ಳಿ. ನಿಮ್ಮ ಮನಸ್ಸಿಗೆ ಬಾರದೇ ಯಾವುದನ್ನೂ ಒಪ್ಪಿಕೊಳ್ಳಲಾರಿರಿ. ಸಂತೋಷದ ದಿನಗಳ ನಿರೀಕ್ಷೆಯು ಹೆಚ್ಚಾಗುವುದು.

ವೃಷಭ ರಾಶಿ: ತಂತ್ರಜ್ಞಾನದ ಜೊತೆ ಹೊಂದಾಣಿಕೆ ಸಾಧ್ಯವಾಗದು. ಅಪರಿಚಿತ ಕೆಲಸಗಳಿಂದ‌ ಬೇಸರ. ಇಂದು ನೀವು ಸಂಸಾರದ ಸುಖವನ್ನು ಆನಂದಿಸುವಿರಿ. ನಿಮ್ಮ ಜ್ಞಾನವನ್ನು ಪ್ರದರ್ಶಿಸುವ ಅವಕಾಶ ಸಿಗಬಹುದು. ಹೆಚ್ಚಿನ ಶ್ರದ್ಧೆ ಮತ್ತು ತಿಳುವಳಿಕೆಯಿಂದ ನೀವು ಪ್ರಯೋಜನ ಪಡೆಯುತ್ತೀರಿ. ಇಂದು ನಿಮ್ಮ ಆರೋಗ್ಯದಲ್ಲಿ ವ್ಯತ್ಯಾಸವಾಗುವ ಸಾಧ್ಯತೆ ಇದೆ. ಸ್ನೇಹವನ್ನು ಉಳಿಸಿಕೊಳ್ಳಲಾಗದು. ಕಲಿಕೆಯ ವಿಚಾರದಲ್ಲಿ ನೀವು ಎಂದಿಗಿಂತ ಹೆಚ್ಚು ಪ್ರಯತ್ನಶೀಲರು. ವಿವೇಚನೆ ಹೆಚ್ಚಲಿದೆ. ಯಾರೊಬ್ಬರ ಸಲಹೆ ಫಲ ನೀಡಲಿದೆ. ಕಾಲುಗಳು ಮತ್ತು ಸ್ನಾಯುಗಳಲ್ಲಿ ನೋವು ಇರುತ್ತದೆ. ಅವಶ್ಯಕ ಇರುವಷ್ಟೇ ಮಾತನಾಡಿ. ನಿಮ್ಮ ಜವಾಬ್ದಾರಿಗಳನ್ನು ನೀವು ಕಳೆದುಕೊಂಡು ನಿಶ್ಚಿಂತೆಯಿಂದ ಇರುವಿರಿ. ಭವಿಷ್ಯವು ಅನಿಶ್ಚಿತ ಎನಿಸಬಹುದು. ನಿಮ್ಮದೇ ವಸ್ತುವನ್ನು ಗುರುತಿಸಲಾರದಷ್ಟು ಮರೆವು ನಿಮ್ಮದಾಗಿದೆ. ಪ್ರವಾಸವನ್ನು ಹೆಚ್ಚು ಮಾಡುವ ವಿಚಾರದಲ್ಲಿ ಆಸಕ್ತಿಯು ಇರುವುದು. ಯಾರ ಜೊತೆಯೂ ಕೆಟ್ಟವರಾಗಲು ಇಷ್ಟವಾಗದು.

ಮಿಥುನ ರಾಶಿ: ಪರರಿಗೆ ಘಾಸಿ ಮಾಡಿ ನೀವು ಹಾಯಾಗಿರಲಾಗದು. ಇಂದು ಮಹತ್ತ್ವ ಕಾಮಗಾರಿಗಳು ನಿಮ್ಮ ಪಾಲಿಗೆ ಸಿಗಲಿದೆ. ಆರ್ಥಿಕವಾಗಿ ಅನೇಕ ಲಾಭಗಳು ಆಗಲಿವೆ. ಜನರೊಂದಿಗೆ ವ್ಯವಹರಿಸುವಾಗ ಜಾಗರೂಕರಾಗಿರಿ. ಹಿರಿಯರೊಂದಿಗೆ ಆತ್ಮೀಯತೆ ಬೆಳೆಯಲಿದೆ. ಕುಟುಂಬದ ಸೆಳೆತದಿಂದ ವಿದ್ಯಾಭ್ಯಾಸ ಹಾಳಾಗುವುದು. ವ್ಯಾಪಾರವನ್ನು ಬೆಳಗಿಸಲು ಅನೇಕ ಅವಕಾಶಗಳಿವೆ. ಆದರೆ ನಿಮ್ಮ ನಿರ್ಲಕ್ಷ್ಯವು ಕೆಲಸವನ್ನು ಹಾಳು ಮಾಡಬಹುದು. ಸತ್ಯವನ್ನು ಮಾತನಾಡುವುದು ಬಹಳಷ್ಟು ಮಾಡುತ್ತದೆ. ಮನಸ್ಸಿನ ಚಂಚಲತೆಯನ್ನು ನಿಯಂತ್ರಿಸುವುದು ಅವಶ್ಯಕ. ಧಾರ್ಮಿಕ ಕಾರ್ಯವನ್ನು ಮಾಡುವ ಮನಸ್ಸಾಗುವುದು. ಗಳಿಸಿದ ಹಣವನ್ನು ಸದ್ವಿನಿಯೋಗಕ್ಕೆ ಕೊಡುವಿರಿ. ಸಮಯಕ್ಕೆ ಸರಿಯಾದ ಸಲಹೆಯನ್ನು ಯಾರಿಂದಲಾದರೂ ಪಡೆಯುವಿರಿ. ಕುಟುಂದ ಜೊತೆ ಸಮಯ ಕಳೆಯುವುದು ಇಂದು ಸಾಧ್ಯವಾಗದು. ಹಳೆಯ ರೋಗಗಳಿಂದ ನೀವು ಮುಕ್ತರಾದಂತೆ ತೋರುವುದು. ನಿಮ್ಮ ಸಿಟ್ಟನ್ನು ಇಂದು ತೋರಿಸುವುದು ಬೇಡ.

ಕರ್ಕಾಟಕ ರಾಶಿ: ದೀರ್ಘಕಾಲದ ಯೋಜನೆಯನ್ನು ಹಾಕಿಕೊಳ್ಳುವುದು ಬೇಡ. ನಿಮ್ಮ ಹಳೆಯ ಸಂಬಂಧಗಳು ಪುನಃ ಹತ್ತಿರವಾಗಲು ಕಾರಣವಿರುವುದು. ನೀವು ತಕ್ಷಣ ಪ್ರತಿಕ್ರಿಯಿಸದಿರುವುದು ಒಳ್ಳೆಯದು.‌ ಅನಗತ್ಯ ಧೈರ್ಯವನ್ನು ತೋರಿಸುವುದನ್ನು ತಪ್ಪಿಸುವುದು ಸೂಕ್ತ. ನಿಮ್ಮ ವಸ್ತುಗಳನ್ನು ಜೋಪಾನ‌‌ ಮಾಡಿಕೊಳ್ಳಬೇಕು. ನೀವು ಈ ಹಿಂದೆ ಮಾಡಿದ ಹೂಡಿಕೆಗಳು ನಿಮಗೆ ಪ್ರಯೋಜನವನ್ನು ನೀಡಲಿದೆ. ಅನುಭವಿ ಜನರನ್ನು ಸಂಪರ್ಕಿಸಲಾಗುವುದು. ಯಾರದೋ ಸಂಬಂಧವನ್ನು ಬೆಳೆಸುವುದು ಬೇಡ. ಅಕ್ರಮ ವಿಚಾರಗಳಿಂದ ನಿಮಗೆ ತೊಂದರೆಯಾಗುವುದು. ಆಸ್ತಿಯ ವಿಚಾರ ಪುನಃ ಬೆಳಕಿಗೆ ಬಂದು ಸಣ್ಣ ಕಲಹದಲ್ಲಿ ಮುಕ್ತಾಯವಾದೀತು. ವಂಚನೆಗೆ ಗೊತ್ತಾಗದಂತೆ ಸಿಕ್ಕಿಕೊಳ್ಳಬೇಕಾದೀತು. ನಿಮ್ಮ ಸ್ಥಾನಕ್ಕೆ ಯೋಗ್ಯವಾದ ಮಾತು ಇರಲಿ.‌ ಮನೋಬಲವನ್ನು ಹೆಚ್ಚಿಸಿಕೊಳ್ಳಬೇಕಾಗವುದು. ಯಾರ ಸಲಹೆ ಪಡೆಯದೇ ಮನಸ್ಸಿಗೆ ಬಂದಂತೆ ವ್ಯವಹರಿಸುವುದನ್ನು ಬಿಡಿ. ಸಂಗಾತಿಯ ಆರೋಗ್ಯವು ಹದ ತಪ್ಪುವುದು. ಬಹಳ ದಿನಗಳ ಅನಂತರ ತಪ್ಪಿನ ಅರಿವಾಗಬಹುದು.

ಸಿಂಹ ರಾಶಿ: ಆದಾಯದ ರಹಸ್ಯವನ್ನು ಯಾರಾದರೂ ಭೇದಿಸಬಹುದು. ನಿಮ್ಮ ಮಾತಿನಿಂದ ಜನರು ಪ್ರಭಾವಿತರಾಗಬಹುದು. ನಿಮಗೆ ಆದಾಯದ ಹೊಸ ಮಾರ್ಗಗಳು ಕಂಡುಬರಬಹುದು. ಈ ಸಮಯದಲ್ಲಿ ದೊಡ್ಡ ಅವಕಾಶದ ಹುಡುಕಾಟವು ಪೂರ್ಣಗೊಳ್ಳುತ್ತದೆ. ಸಂಗಾತಿಯನ್ನು ಅಮೂಲ್ಯ ವಸ್ತುಗಳಿಂದ ಸುಮ್ಮನಾಗಿಸುವಿರಿ. ಆರಂಭದಲ್ಲಿ, ಕೆಲವು ಕೆಲಸಗಳನ್ನು ಯೋಚಿಸದೆ ಮಾಡಲಾಗುತ್ತದೆ ಮತ್ತು ಕೆಲವು ಪ್ರಜ್ಞಾಪೂರ್ವಕವಾಗಿ ಮುಂದುವರಿಯುತ್ತದೆ. ಇದು ಗುರಿಯ ಸಾಧನೆಗೆ ಅಥವಾ ಅನುಭವದ ಅನನ್ಯ ಕೊಡುಗೆಗೆ ಕಾರಣವಾಗುತ್ತದೆ. ಮಕ್ಕಳು ನಿಮ್ಮ ಜೊತೆ ಕಾಲವನ್ನು ಕಳೆಯಬಯಸುವರು. ದುರಭ್ಯಾಸಗಳನ್ನು ಬುದ್ಧಿಪೂರ್ವಕವಾಗಿ ಬಿಡದಲಲೇಬೇಕಾಗುವುದು. ನಿಮ್ಮ ಮಾತು ಸಂಗಾತಿಯನ್ನು ಮೌನಿಯನ್ನಾಗಿ‌ ಮಾಡುವುದು. ನೀವು ಮನೆಯ ಜವಾಬ್ದಾರಿಗಳನ್ನು ವಹಿಸಿಕೊಳ್ಳಬೇಕಾದೀತು. ಅತಿಯಾದ ಮಾತಿನಿಂದ ಇತರರಿಗೆ ಕಷ್ಟವಾದೀತು. ಮನೆಯ ಕಾರ್ಯವು ನಿಮಗೆ ತೃಪ್ತಿ ಕೊಡುವುದು. ಕೃತಜ್ಞತೆಯನ್ನು ಇಟ್ಟುಕೊಳ್ಳುವುದು ಕಷ್ಟವಾದರೂ ಬೇಕು.

ಕನ್ಯಾ ರಾಶಿ: ಹೋಲಿಕೆಯಿಂದ ನಿಮ್ಮ ಮನಸ್ಸಿಗೆ ಘಾಸಿಯಾಹಬಹುದು. ಇಂದು ನಿಮ್ಮ ಆರ್ಥಿಕವಾದ ಏರಿಳಿತಗಳು ಹೆಚ್ಚಿರುವುದು. ಸಮಾಜದಲ್ಲಿ ನಿಮ್ಮ ಗೌರವವು ಹೆಚ್ಚಾಗುತ್ತದೆ. ಸಹೋದ್ಯೋಗಿಗಳಿಂದ ಸಂಪೂರ್ಣ ಬೆಂಬಲ ಸಿಗಲಿದೆ. ದಾನ ಮಾಡುವ ಮನೋಭಾವವು ಹೆಚ್ಚಾಗುತ್ತದೆ. ಅಭ್ಯಾಸವನ್ನು ಸೃಜನಾತ್ಮಕವಾಗಿ ಮಾಡಿಕೊಳ್ಳುವಿರಿ. ನೀವು ಇಂದು ಮಂಗಲಕಾರ್ಯವನ್ನು ಯೋಜಿಸುವಿರಿ. ಕೆಲವು ನಕಾರಾತ್ಮಕ ಸುದ್ದಿಗಳಿಂದಾಗಿ ನಿಮ್ಮ ಮನಸ್ಸು ಚಿಂತಿತವಾಗಬಹುದು. ನೀವು ಸಂತಾನದ ಸಂತೋಷವನ್ನು ಹೊಂದಿರುತ್ತೀರಿ. ಇಂದಿನ ವಹಿವಾಟು ತಕ್ಕಮಟ್ಟಿಗೆ ಇರಲಿದೆ. ಇನ್ನೊಬ್ಬರನ್ನು ಕಂಡು ಕೊರಗುವುದು ಬೇಡ. ನಿಮ್ಮ‌ ತಪ್ಪನ್ನು ಒಪ್ಪಿಕೊಂಡು ಹೊಂದಾಣಿಕೆ ಮಾಡಿಕೊಳ್ಳುವಿರಿ. ವಿದೇಶೀಯ ವಸ್ತುಗಳು ನಿಮಗೆ ಸಿಗಬಹುದು. ನಿಮ್ಮ‌ ಆಲೋಚನೆಗಳನ್ನು ಇನ್ನೊಬ್ಬರ ಮೇಲೆ ಹೇರುವುದು ಬೇಡ. ಚಾಂಚಲ್ಯದ ಕಾರಣ ಉದ್ಯೋಗದಲ್ಲಿಯೂ ಸರಿಯಾದ ಏಕಾಗ್ರತೆಯಿಂದ ಕೆಲಸವನ್ನು ಮಾಡಲಾಗದು. ಸಾಮಾಜಿಕವಾಗಿ ಕಾರ್ಯಗಳಿಗೆ ನಿಮ್ಮ ಹಣವನ್ನೇ ಬಳಸುವಿರಿ.

ತುಲಾ ರಾಶಿ: ವಿಪತ್ತುಗಳನ್ನು ದಕ್ಷತೆಯಿಂದ ಎದುರಿಸಬೇಕಾಗುವುದು. ನಿಮ್ಮ ಮೇಲೆ ನಿಮಗೆ ಪೂರ್ಣಾವಾದ ನಂಬಿಕೆ ಇಡುವ ಮೂಲಕ ಯಶಸ್ಸು ಸಾಧಿಸಬಹುದು. ನಿಮ್ಮಲ್ಲಿರುವ ಗುಣಗಳು ಪ್ರಶಂಸೆಗೆ ಪಾತ್ರವಾಗಲಿದೆ. ಎಂದೊಕ ಮಾಡಿಕೊಂಡ ವಿದೇಶದ ಸಂಪರ್ಕಗಳು ಇಂದು ಪ್ರಯೋಜನವಾಗಲಿದೆ. ಶಿಕ್ಷಣದ ಬಗ್ಗೆ ನಿಮಗಿರುವ ಆಸಕದತಿ ಮತ್ತಷ್ಟು ಅಧಿಕವಾಗಬಹುದು. ಸೂಕ್ತ ಸಮಯಕ್ಕೆ ಚಿಕಿತ್ಸೆಯಿಂದ ಆರೋಗ್ಯ ಚೆನ್ನಾಗಿ ಆಗುವುದು. ಮಕ್ಕಳ ಚಿಂತೆಯಿಂದ ಎಲ್ಲ ಸಂತೋಷಗಳು ಮರೆಯಾಗಲಿವೆ. ಯಾರ ನಕಾರಾತ್ಮಕ ವಿಚಾರವೂ ನಿಮಗೆ ಏನೂ ಮಾಡದು. ಅನವಶ್ಯಕವಾದ ಸಮಸ್ಯೆಗಳು ನಿಮ್ಮನ್ನು ಕಾಡಿಯಾವು. ಪ್ರತಿಕೂಲ ಸಂದರ್ಭಗಳಲ್ಲಿ ನಿಮ್ಮ ಆತ್ಮವಿಶ್ವಾಸವನ್ನು ಉಳಿಸಿಕೊಳ್ಳುವಿರಿ. ಅವ್ಯಕ್ತವಾದ ನೆಮ್ಮದಿಯಿಂದ ಬೀಗಬಹುದು. ಕಿರಿಯರಿಂದ ಆಕಸ್ಮಿಕವಾಗಿ ಗೌರವಕ್ಕೆ ಪಾತ್ರರಾಗುವಿರಿ. ಎಂದೋ ಆದ ಬೇಸರವನ್ನು ಸ್ನೇಹಿತನ ಮುಂದೆ ಇಂದು ಪ್ರಕಟಿಸುವಿರಿ. ಅಸಹಜ ಮಾತುಗಳಿಗೆ ಸ್ಪಂದನೆ ಸಿಗದು. ವಿದ್ಯಾಭ್ಯಾಸದ ಹಿನ್ನಡೆಯು ನಿಮಗೆ ಗೊತ್ತಾಗದು.

ವೃಶ್ಚಿಕ ರಾಶಿ: ನಾಯಕರಾಗಿ ಹೊಸ ಯೋಜನೆಯನ್ನು ಆರಂಭಿಸುವಿರಿ. ಇಂದು ನೀವು ಅನನೂಕುಲ ಸ್ಥಿತಿಯಿಂದ ಹೊರ ಬರುವಿರಿ. ವಿರೋಧಿಗಳ ಸಂಚಿಗೆ ಬಲಿಯಾಗುವ ಸಾಧ್ಯತೆ ಇದೆ. ಸರಿಯಾದ ದಾರಿಯಿಂದ ಮಾತ್ರ ಗೆಲುವು ಸಿಗಲಿದೆ. ಅದರಿಂದ ತೃಪ್ತಿಯೂ ಆಗಲಿದೆ. ಸರ್ಕಾರಿ ಕೆಲಸಗಳು ವಿಳಂಬವಾಗುವುದು. ಅಹಂಕಾರದಿಂದ ಪರರ ಸಲಹೆಯನ್ನು ಸ್ವೀಕರಿಸಲಾರಿರಿ. ನೆಚ್ಚಿನ ಕಲಾವಿದರ ಭೇಟಿಯಾಗಲಿದೆ. ಆಪ್ತರಿಂದ ಉಡುಗೊರೆ ಸಿಗಲಿದೆ. ಸ್ವಲ್ಪ ಆಲಸ್ಯವು ನಿಮ್ಮ ಕೆಲಸವನ್ನು ಹಿಂದಿಕ್ಕುವುದು. ಸ್ವತಂತ್ರವಾಗಿ ಆಲೋಚನೆಗಳನ್ನು ಬೆಳೆಸಿಕೊಳ್ಳುವುದು ಉತ್ತಮ. ನಿಮ್ಮವರ ಅಹಸಜ ವರ್ತನೆ ನಿಮಗೆ ಬೇಸರ ತರಿಸೀತು. ಪ್ರೀತಿಯ ಸೆಳೆತದಿಂದ ಹೊರಬರಲಾಗದು. ಭೂಮಿಯ ಲಾಭವು ಆಗಲಿದ್ದು ಅನೇಕ‌ ದಿನದ ಚಿಂತೆಗಳು ದೂರಾಗುವುದು. ಅಧಿಕ ಆದಾಯಕ್ಕಾಗಿ ಉದ್ಯೋಗವನ್ನು ನೀವು ತ್ಯಾಗಮಾಡುವಿರಿ. ಮಾನಸಿಕ ಅಸಮತೋಲನವನ್ನು ಸರಿ ಮಾಡಿಕೊಳ್ಳುವಿರಿ. ಬಿರುಸು ನುಡಿಯಿಂದ ನಿಮಗೆ ಆಗಬೇಕಾದ ಕಾರ್ಯವು ಆಗದು. ಮಾತಿಗೆ ಸಂಬಂಧಿಸದಂತೆ ದೋಷವು ನಿಮಗೆ ಕಾಣಲಿಕ್ಕೆ ಸಿಗುವುದು.

ಧನು ರಾಶಿ: ಗೃಹನಿರ್ಮಾಣದಲ್ಲಿ ಹಣಕಾಸಿನ ಕೊರತೆ ಇರುವುದು. ಇಂದು ಭೋಗದ ವಸ್ತುಗಳಿಂದ ಖುಷಿ ಪಡುವಿರಿ. ಮಾನಸಿಕ ಸ್ಥಿರತೆಯನ್ನು ಕಾಪಾಡಿಕೊಂಡು ಮುಂದುವರಿಯಿರಿ. ನಿಮ್ಮ ಇಂದಿನ ಲೆಕ್ಕಾಚಾರ ಸರಿಯಾಗಲಿದೆ. ಸಹನೆಯ ನಿಮ್ಮ ಗುಣದಿಂದ ಸಾಕಷ್ಟು ಅನುಕೂಲವನ್ನು‌ ಮಾಡಲಿದೆ. ಆರೋಗ್ಯದಲ್ಲಿ ಸುಧಾರಣೆ ತಂದುಕೊಳ್ಳುವಿರಿ. ಹೊಸತನ್ನು ಕಲಿಯಬೇಕು ಎನದನುವ ತುಡಿತ ಇರಲಿದೆ. ಬಹುದಿನಗಳಿಂದ ಯೋಚಿಸುತ್ತಿದ್ದ ಮಹತ್ವದ ಕಾರ್ಯವೊಂದಕ್ಕೆ ಚಾಲನೆ ನೀಡುವಿರಿ. ಹಿರಿಯರ ಸಲಹೆಯಿಂದ ಪ್ರಯೋಜನವಾಗಲಿದೆ. ಮಾನಸಿಕ ಅಸಮತೋಲನವನ್ನು ಕಾಯ್ದುಕೊಳ್ಳಲು ಸವಾಲಾಗಬಹುದು. ವಾಹನ ಖರೀದಿಗೆ ಆಲೋಚನೆ ಇರಲಿದ್ದು ಸಾಲ ಮಾಡಬೇಕಗಬಹುದು. ನಿಮ್ಮ ವೇಗದ ಮನಸ್ಸನ್ನು ನಿಯಂತ್ರಿಸಬೇಕಾಗುವುದು. ಇಂದು ಮಾಡುವ ಎಲ್ಲ ಕಾರ್ಯಗಳನ್ನೂ ಪೂರ್ಣ ಮಾಡಲಾರಿರಿ. ಇಷ್ಟವಿಲ್ಲದ ವ್ಯಕ್ತಿಗಳ ಜೊತೆ ಇರಲು ಕಸಿವಿಸಿ ಆದೀತು. ಮನೆಯವರ ಸಣ್ಣ ತಪ್ಪುಗಳನ್ನು ನೀವು ಸಹಿಸಲಾರಿರಿ. ವ್ಯಾಪಾರದಲ್ಲಿ ನೀವು ಹಿಂದುಳಿಯುವಿರಿ.

ಮಕರ ರಾಶಿ: ಅಚ್ಚುಕಟ್ಟಾದ ಮಾತಿನಿಂದ ವ್ಯವಹಾರದಲ್ಲಿ ನಂಬಿಕೆ ಹೆಚ್ಚಾಗುವುದು. ಇಂದು ನಿಮ್ಮ ಖರ್ಚು ಅಧಿಕವಾದರೂ ಒಳ್ಳೆಯ ಕಾರ್ಯಕ್ಕೆ ಆಗುತ್ತದೆ. ಬೇಡದ ವಿಷಯಕ್ಕೆ ಚಿಂತೆ ಹೆಚ್ಚಾಗುವುದು. ಹೊಸ ಭರವಸೆಗಳು ಸಂತೋಷವನ್ನು ತರುತ್ತವೆ. ಭೂಮಿಯ ವ್ಯವಹಾರವನ್ನು ಮಾಡಲಿದ್ದೀರಿ. ಭೇಟಿಯಾಗುವ ವ್ಯಕ್ತಿಗಳಿಂದ ನಿಮ್ಮ ಉದ್ಯಮಕ್ಕೆ ಸಹಕಾರಿ. ಸೇವೆ ಮತ್ತು ದಾನದಲ್ಲಿ ಆಸಕ್ತಿ ಹೆಚ್ಚಾಗುತ್ತದೆ. ಹೊಸ ಸಂಪರ್ಕಗಳು ಪ್ರಯೋಜನಕಾರಿಯಾಗಲಿವೆ. ವಿದೇಶದ ಸಂಪರ್ಕವನ್ನು ಮಾಡಲು ಅವಕಾಶ ಸಿಗಲಿದೆ. ಇದಕ್ಕೆ ಸಂಗಾತಿಯೂ ನಿಮ್ಮನ್ನು ಬೆಂಬಲಿಸುವರು. ಆಲೋಚನೆಗಳು ನಿಧಾನಗತಿಯಲ್ಲಿ ಇರಲಿವೆ. ವಿದ್ಯಾರ್ಥಿಗಳು ಸಹವಾಸದೋಷದಿಂದ ಕೆಡುವ ಸಾಧ್ಯತೆ ಇದೆ. ಯಾರ ಮಾತನ್ನೂ ಕೇಳುವ ಸಾವಧಾನತೆ ಇರೆದು. ಸಂಗಾತಿಯ ಮೇಲೆ ಅನುಮಾನವನ್ನು ನಿಮ್ಮ ರೀತಿಯಲ್ಲಿ ವ್ಯಕ್ತಪಡಿಸುವಿರಿ. ನಿಮ್ಮವರ ಪ್ರೀತಿಯು ನಿಮಗೆ ಕಡಿಮೆ ಆದಂತೆ ಅನ್ನಿಸುವುದು. ಕೃಷಿಯಲ್ಲಿ ಉಪಯುಕ್ತ ಯೋಜನೆಯನ್ನು ಹಾಕಿಕೊಳ್ಳುವಿರಿ. ಮಕ್ಕಳ ಬಗ್ಗೆ ಇರುವ ನಿಮ್ಮ ಚಿಂತೆ ನಿವಾರಣೆ ಆಗುವುದು. ಪ್ರಯಾಣವನ್ನು ಆನಂದಿಸುವಿರಿ. ಬಂಧುಗಳ ಭೇಟಿಯನ್ನು ಮಾಡಲಾಗದು.

ಕುಂಭ ರಾಶಿ: ನಿಮ್ಮ ಮಾನಸಿಕತೆಗೆ ಭಂಗ‌ ಬಂದರೆ ನಿಮಗೆ ಸಹಿಸಲಾಗದು. ನಿಮ್ಮ ಬಯಕೆಗಳನ್ನು ಪೂರೈಸಿಕೊಳ್ಳಲು ಆಗದು. ಉದ್ಯಮದಲ್ಲಿ ಹೊಸ ಸಾಧ್ಯತೆಗಳು ಸೃಷ್ಟಿಯಾಗುವುದು. ನಿಮ್ಮ ಜಾಣ್ಮೆಯಿಂದ ಆದಾಯದ ಪೂರ್ಣಲಾಭವನ್ನು ಮಾಡಿಕೊಳ್ಳುವಿರಿ. ಮನೆಯಲ್ಲಿ ಸಂತೋಷದ ವಾತಾವರಣವು ಇರುತ್ತದೆ. ಸಹೋದರನ ನಡವಳಿಕೆಯಿಂದ ಮನಸ್ಸಿಗೆ ಬೇಸರವಾಗಬಹುದು. ಆರ್ಥಿಕ ಯೋಗವಿದೆ. ತರಾತುರಿಯಲ್ಲಿ ಮಾಡಿದ ಕೆಲಸವು ಹಾನಿಯನ್ನುಂಟು ಮಾಡುತ್ತದೆ. ಮಗುವಿನ ನಡವಳಿಕೆಯು ನೋವನ್ನು ಉಂಟುಮಾಡುತ್ತದೆ. ಭೂಮಿಯ ಖರೀದಿಯಲ್ಲಿ ದುಡುಕುವುದು ಬೇಡ. ನಿಮ್ಮ ಪಿತ್ರಾರ್ಜಿತ ಆಸ್ತಿಯು ನಷ್ಟವಾಗಬಹುದು. ಹಣಕಾಸಿನ ಒತ್ತಡವು ಕಡಿಮೆ ಆಗಲಿದೆ. ಅನಂತರ ನೀವೂ ಹಗುರಾಗಬಹುದು. ಅನಾರೋಗ್ಯದ ಕಾರಣದಿಂದ ನೀವು ಇಂದಿನ ಪ್ರಯಾಣವನ್ನು ನಿಲ್ಲಿಸುವಿರಿ. ಕಳ್ಳತನದ ಭೀತಿಯಿಂದ ವಸ್ತುಗಳನ್ನು ಜೋಪಾನ ಮಾಡಿಕೊಳ್ಳುವಿರಿ. ನಿಮಗೆ ಇರವುದು‌. ಸಜ್ಜನರಿಗೆ ಕೆಲವು ಅಪವಾದದ ಮಾತುಗಳು ಬರಬಹುದು. ಮತ್ಯಾರಿಗೋ ನೀವು ಸಮಯವನ್ನು ಕೊಡಬೇಕಾಗಬಹುದು.

ಮೀನ ರಾಶಿ: ಯಾರ ಜೊತೆಗೂ ನೇರವಾಗಿ ಸ್ಪರ್ಧಿಸಲು ಇಚ್ಛೆ ಇರದು. ನಿರೀಕ್ಷಿಸದ ಸಹಾಯ ಪರಿಚಿತರಿಂದ ಲಭ್ಯ. ನೀವು ಪ್ರಮುಖ ವ್ಯಕ್ತಿಯ ಸಂಬಂಧವನ್ನು ಬೆಳೆಸುವಿರಿ. ಅದೇ ನಿಮ್ಮ ಸಂಪತ್ತಿನ ಮೂಲವಾಗುತ್ತದೆ. ತ್ವರಿತ ನಿರ್ಣಯದಿಂದ ನಿಂದನೆ. ಸೃಜನಶೀಲತಯಿಂದ ನಿಮ್ಮ ಮನಸ್ಸು ಅರಳುವುದು. ನಿಮ್ಮ ಪ್ರತಿಭೆಯಿಂದ ನೀವು ಅದ್ಭುತಗಳನ್ನು ಮಾಡಲು ಸಾಧ್ಯವಾಗುತ್ತದೆ. ಹಿರಿಯರ ಅನುಭವದಿಂದ ಪ್ರಯೋಜನ ಪಡೆಯುವಿರಿ. ಅನಗತ್ಯ ವಾದಗಳನ್ನು ಮಾಡಿ, ಕುಟುಂಬದ ಸದಸ್ಯರನ್ನು ನೋಯಿಸುವಿರಿ. ಸೋಮಾರಿತನದಿಂದ ಸಮಯವು ವ್ಯರ್ಥವಾಗಲಿದೆ. ಚಂಚಲವಾದ ಮನಸ್ಸನ್ನು ನಿಗ್ರಹಿಸಲು ಪ್ರಯತ್ನಿಸಿ. ನಿಮ್ಮ ಪ್ರಯತ್ನಗಳು ಸಫಲವಾಗಬಹುದು. ಅಗೌರವವನ್ನು ಕೊಟ್ಟಂತೆ ನಿಮಗೆ ಅನ್ನಿಸುವುದು. ಅದನ್ನು ನಿರ್ಲಕ್ಷಿಸಿ ಬೇಕಾದ ಕಡೆಯಲ್ಲಿ ತೊಡಗಿಸಿ. ಸ್ನೇಹಿತರ ಜೊತೆ ಮನಸ್ತಾಪವು ಬರಬಹುದು. ವ್ಯಾಪಾರದ ಏರಿಳಿತಗಳು ನಿಮ್ಮ ಗಮನಕ್ಕೆ ಬಾರದೇ ಹೋಗಬಹುದು. ಆಪ್ತರು ನಿಮ್ಮಿಂದ ಕಾರಣಾಂತರಗಳಿಂದ ದೂರಾಗಬಹುದು. ಇನ್ನೊಬ್ಬರನ್ನು ರಿಪೇರಿ ಮಾಡಲು ಹೋಗಿ ಸಮಯ ಹಾಳಾದೀತು. ಮಕ್ಕಳು ನಡತೆಯನ್ನು ಗಮನಿಸುವುದು ಉತ್ತಮ.

-ಲೋಹಿತ ಹೆಬ್ಬಾರ್-8762924271 (what’s app only)

ಯುವತಿಯೇ ಮೊದಲು ತನಗೆ ಹೊಡೆದಿದ್ದು ಎನ್ನುತ್ತಾನೆ ರ‍್ಯಾಪಿಡೋ ರೈಡರ್
ಯುವತಿಯೇ ಮೊದಲು ತನಗೆ ಹೊಡೆದಿದ್ದು ಎನ್ನುತ್ತಾನೆ ರ‍್ಯಾಪಿಡೋ ರೈಡರ್
ಯುವತಿ ಮೇಲೆ ರ‍್ಯಾಪಿಡೊ ಚಾಲಕ ಹಲ್ಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್‌..!
ಯುವತಿ ಮೇಲೆ ರ‍್ಯಾಪಿಡೊ ಚಾಲಕ ಹಲ್ಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್‌..!
ಇಂದ್ರಯಾಣಿ ಸೇತುವೆ ಶಿಥಿಲವಾಗಿತ್ತು; ಸಿಎಂ ಫಡ್ನವೀಸ್
ಇಂದ್ರಯಾಣಿ ಸೇತುವೆ ಶಿಥಿಲವಾಗಿತ್ತು; ಸಿಎಂ ಫಡ್ನವೀಸ್
ನಮ್ಮ ಸರ್ಕಾರ ಕೇವಲ ಒಂದು ತಿಂಗಳಲ್ಲಿ ಗ್ಯಾರಂಟಿ ಯೋಜನೆ ಜಾರಿಮಾಡಿತು: ಸಚಿವ
ನಮ್ಮ ಸರ್ಕಾರ ಕೇವಲ ಒಂದು ತಿಂಗಳಲ್ಲಿ ಗ್ಯಾರಂಟಿ ಯೋಜನೆ ಜಾರಿಮಾಡಿತು: ಸಚಿವ
ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಮಾಡುತ್ತೇವೆ ಅಂತ ಕೇಂದ್ರ ಹೇಳಿಲ್ಲ: ಸಿಎಂ
ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಮಾಡುತ್ತೇವೆ ಅಂತ ಕೇಂದ್ರ ಹೇಳಿಲ್ಲ: ಸಿಎಂ
ಮಸೀದಿ ನೆಲಸಮ ಮಾಡುವ ವೇಳೆ ಸ್ಫೋಟ, ಮೂವರಿಗೆ ಗಾಯ
ಮಸೀದಿ ನೆಲಸಮ ಮಾಡುವ ವೇಳೆ ಸ್ಫೋಟ, ಮೂವರಿಗೆ ಗಾಯ
ಕುಮಾರಸ್ವಾಮಿಯವರು ಚೆನ್ನಾಗಿರಲಿ, ಆರೋಗ್ಯವಾಗಿರಲಿ: ಶಿವಕುಮಾರ್
ಕುಮಾರಸ್ವಾಮಿಯವರು ಚೆನ್ನಾಗಿರಲಿ, ಆರೋಗ್ಯವಾಗಿರಲಿ: ಶಿವಕುಮಾರ್
6,6,6,6,6:: ಬಿರುಗಾಳಿ ಬ್ಯಾಟಿಂಗ್​ನೊಂದಿಗೆ ಪಂದ್ಯ ಗೆಲ್ಲಿಸಿದ ಬೌಲರ್..!
6,6,6,6,6:: ಬಿರುಗಾಳಿ ಬ್ಯಾಟಿಂಗ್​ನೊಂದಿಗೆ ಪಂದ್ಯ ಗೆಲ್ಲಿಸಿದ ಬೌಲರ್..!
‘ಎಸ್​ಪಿಬಿ ರೀತಿಯೇ ಮತ್ತೋರ್ವ ಗಾಯಕನಿದ್ದಾನೆ ಎಂದರು..’; ಜಗ್ಗೇಶ್
‘ಎಸ್​ಪಿಬಿ ರೀತಿಯೇ ಮತ್ತೋರ್ವ ಗಾಯಕನಿದ್ದಾನೆ ಎಂದರು..’; ಜಗ್ಗೇಶ್
ಅಕ್ರಮ ಕಟ್ಟಡಗಳ ವಿರುದ್ಧ ಬಿಬಿಎಂಪಿ ಸಮರ: ಹಲವೆಡೆ ಕಟ್ಟಡಗಳ ತೆರವು
ಅಕ್ರಮ ಕಟ್ಟಡಗಳ ವಿರುದ್ಧ ಬಿಬಿಎಂಪಿ ಸಮರ: ಹಲವೆಡೆ ಕಟ್ಟಡಗಳ ತೆರವು