ನಿತ್ಯ ಭವಿಷ್ಯ : ಇಂದು ಈ ರಾಶಿಯವರು ಮಾತಿಗೆ ಬೆಲೆ ಕೊಡಬೇಕೆಂದು ಬಯಸುವರು

Horoscope Today 26 May : ಇಂದು, ಮೇ 26 ರ ನಿತ್ಯ ಭವಿಷ್ಯದಲ್ಲಿ ನಿಮ್ಮ ರಾಶಿ ಭವಿಷ್ಯವನ್ನು ತಿಳಿಯಿರಿ. ದ್ವಾದಶ ರಾಶಿಗಳಾದ ಮೇಷದಿಂದ ಮೀನದವರೆಗಿನ ಪ್ರತಿಯೊಂದು ರಾಶಿಯ ಪ್ರೀತಿ, ವೃತ್ತಿ, ಹಣಕಾಸು, ಆರೋಗ್ಯ ಮತ್ತು ಸಂಬಂಧಗಳ ಕುರಿತಾದ ನಿಖರ ಜ್ಯೋತಿಷ್ಯ ಫಲಗಳನ್ನು ಇಲ್ಲಿ ನೀಡಲಾಗಿದೆ. ನಿಮ್ಮ ದಿನವನ್ನು ಯೋಜಿಸಲು ಮತ್ತು ಸವಾಲುಗಳನ್ನು ಎದುರಿಸಲು ಈ ದೈನಂದಿನ ರಾಶಿ ಭವಿಷ್ಯ ನಿಮಗೆ ಸಹಾಯ ಮಾಡುತ್ತದೆ. ಗ್ರಹಗಳ ಬದಲಾವಣೆಗಳು ನಿಮ್ಮ ಜೀವನದ ಮೇಲೆ ಹೇಗೆ ಪ್ರಭಾವ ಬೀರುತ್ತವೆ ಎಂದು ತಿಳಿಯಿರಿ.

ನಿತ್ಯ ಭವಿಷ್ಯ : ಇಂದು ಈ ರಾಶಿಯವರು ಮಾತಿಗೆ ಬೆಲೆ ಕೊಡಬೇಕೆಂದು ಬಯಸುವರು
ಸಾಂದರ್ಭಿಕ ಚಿತ್ರ
Image Credit source: pinterest
Edited By:

Updated on: May 26, 2026 | 1:36 AM

ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ಗ್ರೀಷ್ಮ ಋತುವಿನ ಅಧಿಕ ಜ್ಯೇಷ್ಠ ಮಾಸದ ಶುಕ್ಲ ಪಕ್ಷದ ದಶಮೀ ತಿಥಿಯ ಮಂಗಳವಾರದಂದು ಹಣವಿಲ್ಲದೇ ಹಗುರ, ಕೋಪದಿಂದ‌ ಮನಸ್ತಾಪ, ಯಶಸ್ಸಿನಿಂದ ಅಭಿಮಾನ, ಪ್ರೀತಿಯ ಕಾಳಜಿ, ವಿರೋಧಿಗಳಿಗೆ ಮಿತ್ರರ ಸಹಾಯ ಎಲ್ಲವೂ ಈ ದಿನದ ವಿಶೇಷ.

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ಗ್ರೀಷ್ಮ, ಚಾಂದ್ರಮಾಸ : ಅಧಿಕ ಜ್ಯೇಷ್ಠ, ಸೌರ ಮಾಸ : ವೃಷಭ, ಮಹಾನಕ್ಷತ್ರ : ಕೃತ್ತಿಕಾ, ವಾರ : ಮಂಗಳ, ಪಕ್ಷ : ಶುಕ್ಲ, ತಿಥಿ : ದಶಮೀ, ನಿತ್ಯನಕ್ಷತ್ರ : ಹಸ್ತಾ, ಯೋಗ : ಹರ್ಷಣ, ಕರಣ : ವಣಿಜ, ಸೂರ್ಯೋದಯ – 05 – 56 am, ಸೂರ್ಯಾಸ್ತ – 06 – 46 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 15:34 – 17:10, ಯಮಗಂಡ ಕಾಲ 09:09 – 10:45, ಗುಳಿಕ ಕಾಲ 12:22 – 13:58

ಮೇಷ ರಾಶಿ :

ಅತ್ಯಂತ ಶ್ರಮವಹಿಸಿ ಕಾರ್ಯವನ್ನು ಮಾಡಲಿದ್ದೀರಿ. ಸ್ನೇಹಿತರ ಸಹಾಯವೂ ದೊರೆಯಲಿದೆ. ದಾಂಪತ್ಯದಲ್ಲಿ ಪರಸ್ಪರ ಮನಸ್ತಾಪವೆದ್ದು ತಣ್ಣಗಾಗಲಿದೆ. ಮಾತಮಾಡುವಿದೇ ಸಾಧನೆಯೆಂದುಕೊಳ್ಳುವುದು ಬೇಡ. ನಾಚಿಕೆಯನ್ನು ಬಿಟ್ಟು ಕೇಳಿದರೆ ನಿಮಗೆ ಬೇಕಾದ ವಸ್ತುಗಳು ಸಿಗಬಹುದು.‌ ಯಾರ ಮೇಲಿರುವ ಬೇಸರವನ್ನು ಮತ್ಯಾರದೋ ಮೇಲೆ ತೋರಿಸಿ ನಿಮ್ಮವರ ದ್ವೇಷಕ್ಕೆ ಕಾರಣವಾಗಬೇಡಿ. ನೀವು ಇಂದು ಅಸಹಾಯಕರಂತೆ ತೋರುವಿರಿ. ಆರ್ಥಿಕವಾಗಿ ಸಬಲರಾಗಲು ವಿವಿಧ ಆರ್ಥಿಕ ಮೂಲವನ್ನು ಅನ್ವೇಷಿಸಬೇಕಾದೀತು.

ವೃಷಭ ರಾಶಿ :

ಇಂದು ನಿಮ್ಮ ಮಾತು ಎಲ್ಲರಿಗೂ ಪ್ರಿಯವಾದುದು. ಅಚಾತುರ್ಯದಿಂದ ಅನಾಹುತ ಮಾಡಿಕೊಳ್ಳುವಿರಿ. ಆಲಸ್ಯದಿಂದ ಮೇಲೆಳಬೇಕಾದ ಸ್ಥಿತಿ ಇದೆ. ನಿಮ್ಮ ಪ್ರತಿಭೆಯ ಅನಾವರಣಕ್ಕೆ ಸಕಾಲವಾಗಿದೆ. ನಿಮ್ಮವರನ್ನು ಬಂಧಿಸಿಡುವ ಕೆಲಸಕ್ಕೆ ಹೋಗಬೇಡಿ. ಪ್ರೀತಿಯಿಂದ ಕೊಟ್ಟ ಉಡುಗೊರೆಯನ್ನು ಸ್ವೀಕರಿಸುವಿರಿ. ನಿಮ್ಮ ಸಹಕಾರದ ಗುಣವು ಎಲ್ಲರಿಗೂ ಮೆಚ್ಚುಗೆಯಾಗುವುದು. ಒಂದೇ ವಿಚಾರವನ್ನು ಮನನ‌ ಮಾಡುವಿರಿ. ಸಂಗಾತಿಯ ನಡುವೆ ಭಿನ್ನಾಭಿಪ್ರಾಯ ಬರಲಿದೆ.

ಮಿಥುನ ರಾಶಿ :

ಆಪ್ತರು ನಿಮಗೆ ಒದಗುವ ಸಂಕಟದಲ್ಲಿ ಜೊತೆಯಾಗುವರು. ಧೈರ್ಯದಿಂದ ನೀವು ಇರಬಹುದು. ತಂತ್ರಜ್ಞರಿಗೆ ಉತ್ತಮ ಕೆಲಸ ಸಿಗಲಿದೆ ಅಥವಾ ಈಗಾಗಲೇ ಕೆಲಸ ಮಾಡುತ್ತಿದ್ದರೆ ಬಡ್ತಿ ಸಿಗಲಿದೆ. ಹೊಸದಾದ ವಾಹನವನ್ನು ಖರೀದಿ ಮಾಡಲಿದ್ದೀರಿ. ಸಾಲದ ಹೊರೆಯನ್ನು ಕಂಡು ಚಿಂತೆಗೆ ಒಳಗಾಗಬೇಕಾಗಬಹುದು. ಇಂದು ಒಂದೇ ಕೆಲಸದಿಂದ ಎರಡು ಪ್ರಯೋಜನವನ್ನು ಪಡೆಯುವಿರಿ. ಭೂಮಿಯ ವ್ಯವಹಾರವು ಸುಲಭಕ್ಕೆ ಕೈ ಹಿಡಿಯದು. ವೇತನವನ್ನು ಹೆಚ್ಚಿಸಿಕೊಳ್ಳಲು ಅನ್ಯ ಮಾರ್ಗವನ್ನು ಹುಡುಕುವ ಅವಶ್ಯಕತೆ ಬರಬಹುದು.

ಕರ್ಕಾಟಕ ರಾಶಿ :

ಉದ್ಯೋಗದ ಸ್ಥಳದಿಂದ ನಿಮ್ಮನ್ನು ಕೈ ಬಿಡವ ಸಾಧ್ಯತೆ ಇದೆ. ನಿರಾಸೆಯು ಮೂಡಲಿದೆ. ಸರ್ಕಾರದ ಉದ್ಯೋಗ ಗಗನ‌ ಕುಸಿಮದಂತೆ ಆಗಬಹುದು. ವ್ಯಾಪರವು ಅಧೋಗತಿಗೆ ಹೋಗಲಿದೆ. ಶತ್ರುಗಳ ಪಿತೂರಿಯ ಕುರಿತು ನಿಮಗೆ ಶಂಕೆ ಉಂಟಾಗಲಿದೆ. ವಿದ್ಯಾರ್ಥಿಗಳಿಗೆ ತಮ್ಮ ಭವಿಷ್ಯದ ಕುರಿತು ಆತಂಕವಿರಬಹುದು. ನಿಮ್ಮರನ್ನು ನೀವು ಕಳೆದುಕೊಳ್ಳುವ ಭೀತಿಯು ಇರುವುದು. ಆಲಸ್ಯದಿಂದ ನಿಮ್ಮ ಅನೇಕ ಕಾರ್ಯಗಳು ಹಿಂದುಳಿಯಬಹುದು.

ಸಿಂಹ ರಾಶಿ :

ಯಾರದೋ ಅದೃಷ್ಟ ನಿಮಗೆ ದುರದೃಷ್ಟಕರವೆನಿಸಬಹುದು. ಖರ್ಚನ್ನು ನಿಯಂತ್ರಿಸುವುದಕ್ಕಾಗಿ ನಿಮ್ಮ ಅವಶ್ಯಕತೆಗಳನ್ನು ಸದ್ಯ ನಿಲ್ಲಿಸುವಿರಿ. ಕ್ರೀಡೆಯಲ್ಲಿ ಮನಸ್ಸು ಇಡುವಿರಿ. ಓಡಾಟದ ಸುಸ್ತು ನಿಮಗೆ ಅನಾರೋಗ್ಯವಾಗಲಿದೆ. ವಿಶ್ರಾಂತಿಯನ್ನು ಪಡೆಯುವುದು ಉತ್ತಮ. ಇದು ನಿಮಗೆ ಇಂದಿನ ಅಚ್ಚರಿಯ ವಿಚಾರವೇ ಆಗಲಿದೆ. ನಿಮ್ಮ ಮನಸ್ಸಿಗೆ ಹಿತವಾದುದನ್ನು ಮಾತ್ರ ಮಾಡುವಿರಿ. ಒತ್ತಡಕ್ಕೆ ಮಣಿದು ನಿಮ್ಮ ಕೆಲಸ ಹಾಗೂ ನಿರ್ಧಾರವನ್ನು ಬದಲಿಸುವಿರಿ.

ಕನ್ಯಾ ರಾಶಿ :

ಇಂದಿನ ಅತಿಯಾದ ಸಂತೋಷ ದುಃಖಕ್ಕೂ ಕಾರಣವಾಗಬಹುದು. ಯಂತ್ರೋಪಕರಣದ ಮಾರಾಟಗಾರಿಗೆ ಲಾಭವು ಆಗುವುದು. ಶಿಕ್ಷಕರು ತಮ್ಮ ವೃತ್ತಿಯಲ್ಲಿ ಕೀರ್ತಿಯನ್ನು ಗಳಿಸುವರು. ನಿಮಗೆ ಅಪಮಾನವಾಗುವ ಕೆಲಸವು ನಡೆಯಬಹುದು. ಸ್ತ್ರೀಸಂಬಂಧವಾದ ಅಪವಾದಗಳು ಬರಬಹುದು. ಮಾನಸಿಕ ಕಿರುಕುಳವನ್ನು ಅನ್ಯರಿಂದ ಅನುಭವಿಸುವಿರಿ. ಇಂದಿನ ನಿಮ್ಮ ಮಾರಾಟದಿಂದ ಅಧಿಕಲಾಭವೂ ಆಗದು.

ತುಲಾ ರಾಶಿ :

ಇಂದು ಇಷ್ಟು ದಿನ ನಂಬಿ ಬಂದಿದ್ದ ಆಸ್ತಿಯು ಕೈ ತಪ್ಪುವ ಸಾಧ್ಯತೆ ಇದೆ. ಸಹನೆಯನ್ನು ಕಳೆದುಕೊಳ್ಳುವ ಸಂದರ್ಭದಲ್ಲಿ ನಿಮಗೆ ಎಚ್ಚರಿಕೆ ಇರಲಿ. ಸರ್ಕಾರಿ ಕಾರ್ಯಗಳು ಹಿಂದೆ ಬೀಳಲಿವೆ. ಅನಿವಾರ್ಯವಾಗಿ ಮಾಡಿದ ಸಣ್ಣ ಸಾಲವು ಇಂದು ದೊಡ್ಡದಾಗಿದೆ. ಇನ್ನೂ ಸಾಲಕ್ಕೆಂದು ಇನ್ನೊಬ್ಬರ ಬಳಿ ಕೈ ಚಾಚ ಬೇಕಾಗಬಹುದು.‌ ಮನೋಬಲವನ್ನು ಹೆಚ್ಚಿಸಿಕೊಳ್ಳಲು ಬೇಕಾದ ಕ್ರಮಗಳನ್ನು ಇಟ್ಟುಕೊಳ್ಳಿ. ಸ್ನೇಹಿತರ ಜೊತೆ ಪ್ರವಾಸಕ್ಕೆ ಹೋಗಬೇಕು ಎಂದು ಅನ್ನಿಸುವುದು. ಹವ್ಯಾಸಗಳು ನಿಮಗೆ ಪ್ರಯೋಜನವನ್ನು ಕೊಡುತ್ತದೆ.

ವೃಶ್ಚಿಕ ರಾಶಿ :

ನಿಮ್ಮ ಮಕ್ಕಳ ಬಗ್ಗೆ ನೀವು ಸರಿಯಾಗಿ ತಿಳಿದುಕೊಳ್ಳಿ. ಈಗಿರುವ ಕೆಲಸವನ್ನು ಬಿಟ್ಟು ಸ್ವಂತ ಉದ್ಯೋಗಕ್ಕೆ ತೊಡಗಬಹುದು. ಸಂತೋಷವಾಗಿರಲು ಬೇಕಾದಂತೆ ನಿಮ್ಮ ಶ್ರಮವನ್ನು ಇಟ್ಟುಕೊಳ್ಳಿ.‌ ಬಂಧುಗಳ ಭೇಟಿ ಸ್ವಲ್ಪ ಕಿರಿಕಿರಿ ಎನಿಸಿದರೂ ಅನಿವಾರ್ಯವಾಗಿ ಸುಮ್ಮನಿರುವಿರಿ. ಮನಸ್ಸಿಗೆ ಬುದ್ಧಿಗೆ ಕೆಲಸವನ್ನು ಕೊಡಬೇಡಿ. ಧನಾಗಮನದ ವಾರ್ತೆಯು ಇರಲಿದೆ. ಮರಗೆಲಸದವರಿಗೆ ಉತ್ತಮ ಕೆಲಸಗಳು ಸಿಗಲಿವೆ. ವೈಯಕ್ತಿಕ ವಿಚಾರಕ್ಕೆ ಯಾರನ್ನೂ ಸೇರಿಸಿಕೊಳ್ಳಲು ಬಯಸುವುದಿಲ್ಲ.

ಧನು ರಾಶಿ :

ಇಂದು ನೀವು ಮಾಡಲೇಬೇಕಾದ ಕೆಲಸವನ್ನು ಮಾಡದೇ ಆಲಸ್ಯದಿಂದ ಕಳೆಯುವಿರಿ. ಆಸ್ತಿಯ ವಿಚಾರದಲ್ಲಿ ನಿಮಗೆ ಅಕ್ಕಪಕ್ಕದವರ ಜೊತೆ ಅಸಮಾಧಾನ ವ್ಯಕ್ತವಾಗುವುದು. ಪ್ರಾಣಿಗಳ ಜೊತೆ ಸಮಯವನ್ನು ಕಳೆಯುವ ಮನಸ್ಸು ಮಾಡುವಿರಿ. ಊರಿನ ಉತ್ಸವದಲ್ಲಿ ಭಾಗಿಯಾಗುವಿರಿ. ರಾಜಕೀಯ ವ್ಯಕ್ತಿಗಳಾಗಿದ್ದರೆ ಇಂದು ಜನಸೇವೆಯನ್ನು ಮಾಡುವಿರಿ. ವಾಹನವನ್ನು ಚಾಲಾಯಿಸುವಾಗ ಅನೇಕ ಸಕಾರಾತ್ಮಕ ಯೋಚನೆಗಳು ಇರಲಿ. ಸಂಗಾತಿಯ ಆಯ್ಕೆಯಲ್ಲಿ ನಿಮಗೆ ಅನೇಕ ಗೊಂದಲಗಳು ಬರುವುದು.

ಮಕರ ರಾಶಿ :

ಇಂದು ಕುಟುಂಬದವರ ಮಾತಿನ ಅಲಕ್ಷ್ಯದಿಂದ ತೊಂದರೆಯಾದಂತೆ ಅನ್ನಿಸುವುದು. ಹಿರಿಯರಿಗೆ ತೊಂದರೆಯನ್ನು ಕೊಡಲು ಹೋಗಬೇಡಿ. ಯಶಸ್ಸು ನಿಮಗೆ ಬೇಡವೆಂದೆನಿಸಬಹುದು. ಯಾರ ಜೊತೆಗೂ ಇರಲು ನೀವು ಇಷ್ಟಪಡುವುದಿಲ್ಲ. ನಿದ್ರೆಯಲ್ಲಿ‌ ಬಿದ್ದ ದುಶಸ್ವಪ್ನವು ನಿಮ್ಮನ್ನು ಚಿಂತೆಗೆ ತಳ್ಳುವುದು. ಅನವಶ್ಯಕವಾಗಿ ಚಿಂತನೆಯಿಂದ ನಿಮ್ಮ ಆತ್ಮವಿಶ್ವಾಸವನ್ನು ನೀವೇ ಹಾಳುಮಾಡಿಕೊಳ್ಳುವಿರಿ. ಇಂದು ನೀವು ನಿರೀಕ್ಷಿಸಿದಷ್ಟು ಸಂಪತ್ತು ಸಿಗದೇ ಹೋದೀತು.

ಕುಂಭ ರಾಶಿ :

ಇಂದು ನಿಮ್ಮ ಅಧಿಕವಾದ ಮಾತು ಕೇಳುವವರಿಗೆ ಹಿಂಸೆ ಕೊಡುವುದು. ಆಪ್ತರ ಜೊತೆ ಮಾತುಕತೆಗಳು ಆಗಬಹುದು. ಮನಸ್ಸಿಗೆ ಹಿತವಾದ ಕೆಲಸವನ್ನು ಮಾಡಿ. ಇಲ್ಲವಾದರೆ ಕೊರಗಬೇಕಾದೀತು. ಉತ್ತಮ ಆಹಾರವನ್ನು ಸೇವಸಲಿದ್ದೀರಿ. ಅಹಿತಕರವಾದ ಘಟನೆಯು ನಿಮ್ಮನ್ನು ಸ್ತಬ್ಧಗೊಳಿಸಬಹುದು. ಯಾವುದೇ ಪ್ರಭಾವಕ್ಕೆ ಒಳಗಾಗದೆ ಸ್ವಂತ ನಿರ್ಧಾರಕ್ಕೆ ಬದ್ಧರಾಗುವಿರಿ. ಭೂ ವ್ಯವಹಾರದಲ್ಲಿ ಉತ್ತಮ ಲಾಭ ದೊರೆಯಲಿದೆ. ಚರಾಸ್ತಿಯನ್ನು ಮಾರಾಟ ಮಾಡಿ ಹಣ ಸಿಗುವುದು.

ಇದನ್ನೂ ಓದಿ: ಉದ್ಯೋಗ ಭವಿಷ್ಯ: ಈ ವಾರ ಬಾಸ್‌ನಿಂದ ಮೆಚ್ಚುಗೆಯೋ ಅಥವಾ ಕೆಲಸದಲ್ಲಿ ಕಿರಿಕಿರಿಯೋ?: ಕೆರಿಯರ್ ಗ್ರಹಗತಿಯಲ್ಲಿ ಮಹತ್ವದ ಬದಲಾವಣೆ

ಮೀನ ರಾಶಿ :

ಕಡಿಮೆ ವೆಚ್ಚದಲ್ಲಿ ಹೆಚ್ಚು ಸಂಪಾದಿಸುವ ಯೋಜನೆಯನ್ನು ಹಾಕಿಕೊಳ್ಳುವುದಕ್ಕೆ ಎಲ್ಲಿಂದಲಾದರೂ ನಿಮಗೆ ಐಡಿಯಾ ಸಿಗಬಹುದು. ತಂದೆಯ ಜೊತೆ ವಿವಾದ ಮಾಡಿಕೊಳ್ಳುವಿರಿ. ಹಿರಿಯರ ಹಾರೈಕೆ ನಿಮಗೆ ಸಿಗಲಿದೆ. ಕಛೇರಿಯ ಕೆಲಸಕ್ಕೂ ಸಮಯ ಸಿಗದೇ ಒತ್ತಡದಲ್ಲಿ ಇರುವಿರಿ. ಕಲಹವಾಗಿ ಸಂಗಾತಿಯಿಂದ ದೂರವಿರಬೇಕಾದೀತು. ಮಕ್ಕಳ ಆರೋಗ್ಯದಲ್ಲಿ ವ್ಯತ್ಯಸಾವಾಗಲಿದೆ. ಪ್ರೀತಿಪಾತ್ರರಿಗೆ ಸಮಯ ವ್ಯರ್ಥ ಮಾಡುವಿರಿ. ಪ್ರೇಮವು ಯಾರಿಂದಲೋ ಬಹಿರಂಗವಾಗುವುದು.

-ಲೋಹಿತ ಹೆಬ್ಬಾರ್-8762924271 (what’s app only)

ಜ್ಯೋತಿಷ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Lohitha Hebbar

ವಿದ್ವಾನ್​ ಲೋಹಿತ ಶರ್ಮಾ. ಸಾಗರ ಮೂಲದ ಇಡುವಾಣಿ ಗ್ರಾಮ. ವೇದ ಹಾಗೂ ಸಂಸ್ಕೃತ ಅಧ್ಯಯನ, ಜ್ಯೋತಿಷ್ಯದಲ್ಲಿ ವಿದ್ವತ್ತನ್ನು ಸಂಪಾದಿಸಿರುತ್ತಾರೆ. ಹಸ್ತಪ್ರತಿಶಾಸ್ತ್ರದಲ್ಲಿ ಡಿಪ್ಲೋಮಾ ಮಾಡಿರುತ್ತಾರೆ. ಜ್ಞಾನ-ವಿಜ್ಞಾನ ಅಧ್ಯಯನ ಕೇಂದ್ರ ಬೆಂಗಳೂರಿನಲ್ಲಿ ಸಂಶೋಧಕರಾಗಿ ಮೌಲ್ಯಶಿಕ್ಷಣ ಎನ್ನುವ ಪಠ್ಯವನ್ನು ಒಂದರಿಂದ ಹತ್ತನೇ ತರಗತಿಯ ಮಕ್ಕಳಿಗೆ ರಚಿಸಿದ್ದಾರೆ. ಧರ್ಮಭಾರತೀ, ತ್ರಿವಿಕ್ರಮ ಮುಂತಾದ ಮಾಸಪತ್ರಿಕೆಯಲ್ಲಿ ಸಂಪಾದಕನಾಗಿ ಕಾರ್ಯ ಮಾಡಿರುತ್ತಾರೆ. ಹಿತೋಪದೇಶ, ಸಂತಗೋರಕ್ಷನಾಥ, ಮಹರ್ಷಿ ಶಂಖಲಿಖಿತ ಗ್ರಂಥಗಳನ್ನು ಬರೆದಿದ್ದಾರೆ. ಅನೇಕ ಲೇಖನಗಳು, ಕಥೆಗಳು ದಿನಪತ್ರಿಕೆಗಳಲ್ಲಿ ಪ್ರಕಟವಾಗಿದೆ. ಆಸಕ್ತಿಯ ವಿಷಯ ಸಂಗೀತ, ನಾಟಕ, ಓದು, ಬರಹ, ಚಾರಣ, ಡಿಜಿಟಲ್ ವಿನ್ಯಾಸ. ಸದ್ಯ ಶಿಕ್ಷಕನಾಗಿ ಕಾರ್ಯ.

Read More
Follow Us