AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today 06 May: ಈ ರಾಶಿಯವರು ತಾವು ನಿಶ್ಚಿಂತರಲ್ಲ, ಪರರನ್ನೂ ಬಿಡರು

ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ವಸಂತ ಋತುವಿನ ವೈಶಾಖ ಮಾಸ ಶುಕ್ಲ ಪಕ್ಷದ ನವಮೀ ತಿಥಿ, ಮಂಗಳವಾರ ಪರರ ಮೇಲೆ‌ ಅಸಹನೆ, ಕಪೋಲಕಲ್ಪಿತ ಸುದ್ದಿ, ಯಾವುದೋ ಆಲೋಚನೆಯಲ್ಲಿ ನಿಮ್ಮ ಮನಸ್ಸು ಇರುವುದು. ಇಂದಿನ ದಿನ ಭವಿಷ್ಯದಲ್ಲಿ ಯಾವ ರಾಶಿಗೆ ಯಾವ ಫಲ ಎನ್ನುವುದನ್ನು ತಿಳಿದುಕೊಳ್ಳಿ.

Horoscope Today 06 May: ಈ ರಾಶಿಯವರು ತಾವು ನಿಶ್ಚಿಂತರಲ್ಲ, ಪರರನ್ನೂ ಬಿಡರು
ಭವಿಷ್ಯ
Follow us
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ಗಂಗಾಧರ​ ಬ. ಸಾಬೋಜಿ

Updated on: May 06, 2025 | 6:31 AM

ಬೆಂಗಳೂರು, ಮೇ 06, ನಿತ್ಯಪಂಚಾಗ: ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು : ವಸಂತ, ಸೌರ ಮಾಸ : ಮೇಷ ಮಾಸ, ಮಹಾನಕ್ಷತ್ರ : ಭರಣೀ, ಮಾಸ : ವೈಶಾಖ, ಪಕ್ಷ : ಶುಕ್ಲ, ವಾರ : ಮಂಗಳ, ತಿಥಿ : ನವಮೀ ನಿತ್ಯನಕ್ಷತ್ರ : ಮಘಾ, ಯೋಗ : ವೃದ್ಧಿ, ಕರಣ : ಬವ, ಸೂರ್ಯೋದಯ – 06 – 09 am, ಸೂರ್ಯಾಸ್ತ – 06 – 49 pm, ಇಂದಿನ ಶುಭಾಶುಭಕಾಲ : ರಾಹು ಕಾಲ 15:39 – 17:14, ಯಮಘಂಡ ಕಾಲ 09:19 – 10:54, ಗುಳಿಕ ಕಾಲ 12:29 – 14:04

ಮೇಷ ರಾಶಿ: ಅನವಶ್ಯಕ ಯೋಚನೆಯಿಂದ ಧನ ನಷ್ಟ. ವಿವಾದಗಳಿಂದ ನೀವು ಆತಂಕದಲ್ಲಿ ಇರುವಿರಿ. ಇತರರಿಗೆ ಒಳ್ಳೆಯದನ್ನು ಮಾಡುವ ಕಾರ್ಯಕ್ಕೆ ಪ್ರತಿಫಲವಿದೆ. ಸಂಗಾತಿಗೆ ಮಕ್ಕಳ ಆರೋಗ್ಯದ ವಿಷಯದಲ್ಲಿ ಗಮನವಿರಲಿ. ಪಾಲುದಾರರ ಕೈಜೋಡಿಸುವ ಮುನ್ನ ಯೋಚಿಸಿ. ಮಕ್ಕಳಿಂದ ನಿಮಗೆ ಬೆಂಬಲ ಮತ್ತು ಸಂತೋಷ ಸಿಗುತ್ತದೆ. ಮಾಡುವ ಕಾರ್ಯದ ಉದ್ದೇಶ ನಿಮಗೆ ಅರಿವಿಲ್ಲದೇ ಬದಲಾಗುವುದು. ಉತ್ತಮ‌ ಆದಾಯವನ್ನು ಉಳಿಸಿಕೊಳ್ಳಿ. ಅದೃಷ್ಟ ನಿಮ್ಮ ಕಡೆ ಇರುತ್ತದೆ ಮತ್ತು ಕೆಲಸದಲ್ಲಿ ಸುಧಾರಣೆ ಇರುತ್ತದೆ. ಆಧ್ಯಾತ್ಮಿಕ ಕಾರ್ಯಗಳಲ್ಲಿ ಆಸಕ್ತಿ ಮೂಡಲಿದೆ. ಯಾವುದೋ ಆಲೋಚನೆಯಲ್ಲಿ ನಿಮ್ಮ ಮನಸ್ಸು ಇರುವುದು. ಹೆಚ್ಚಿನ ಸೌಕರ್ಯದಿಂದ ನೀವು ಸೋಮಾರಿಯಾಗುವಿರಿ. ಎಷ್ಟೇ ತೊಂದರೆಯಾದರೂ ಇನ್ನೊಬ್ಬರಿಗೆ ನೋವನ್ನು ಕೊಡುವುದು ಇಷ್ಟವಾಗದು. ಕೇಳಿದವರಿಗೆ ನಿಮ್ಮ ಸಹಾಯವು ಸಿಗಲಿದೆ. ನೀವು ಇಂದು ಮಕ್ಕಳ ಜೊತೆ ಹೆಚ್ಚಿನ ಸಮಯವನ್ನು ಕಳೆಯುವಿರಿ.

ವೃಷಭ ರಾಶಿ: ವಿವೇಚನೆಯ ಮಾತಿಗೆ ಪ್ರಶಂಸೆ. ಆಪ್ತರ ಜೊತೆ ಹೊಸ ಉದ್ಯೋಗವನ್ನು ಆರಂಭಿಸುವ ಪ್ರಯತ್ನದಲ್ಲಿ ಇರುವಿರಿ. ಗೃಹ ಕೃತ್ಯಗಳನ್ನು ಪೂರೈಸಲು ಇಂದು ಅನುಕೂಲ ದಿನ. ಮಕ್ಕಳಿಗೆ ಯೋಗ್ಯವಾದ ಮಾರ್ಗದರ್ಶನದ ಸಾಧ್ಯತೆ. ನಿಮ್ಮ ಸಾಮರ್ಥ್ಯವನ್ನು ವ್ಯಕ್ತಪಡಿಸಲು ಸಕಾಲ. ಅಹಂಕಾರದಿಂದ ವರ್ತಿಸಿ ಮನೆಯವರಿಂದ ನಿಂದನೆ. ನೀವು ಸಾಲವಾಗಿ ನೀಡಿದ ಹಣವನ್ನು ಮರಳಿ ಪಡೆಯುವ ಮೂಲಕ ನಿಮ್ಮ ಹಣದ ಸಮಸ್ಯೆ ಬಗೆಹರಿಯುತ್ತದೆ. ಅಪರಿಚಿತರಿಂದ ಸ್ವಲ್ಪ ಅಂತರ ಕಾಯ್ದುಕೊಳ್ಳಿ. ಸಮಾಜಮುಖಿಯಾಗಿ ನಿಮ್ಮ ಕಾರ್ಯಗಳು ಹೆಚ್ಚು ಪ್ರಬಲವಾಗಬಹುದು. ಉದ್ಯೋಗದಲ್ಲಿ ಆಗುವ ಬದಲಾವಣೆಗಳನ್ನು ನೀವು ಸಹಿಸುವುದು ಕಷ್ಟವಾದೀತು. ಕಾನೂನಾತ್ಮಕ ವಿಚಾರದಲ್ಲಿ ಹಿನ್ನಡೆಯಾಗುವುದು. ಚಿಕಿತ್ಸೆ ಮಾಡುವಾಗ ಉದ್ವೇಗ ಹೆಚ್ಚಾಗುವುದು. ಮಿತ್ರರ ಕೋಪಕ್ಕೆ ಕ್ಷಮೆಯನ್ನು ಕೇಳುವಿರಿ. ವಿವಾಹಕ್ಕೆ ಸಂಬಂಧಿಸಿದ ದೋಷಗಳನ್ನು ದೈವಜ್ಞರ ಬಳಿ ಕೇಳಿ ಸರಿಪಡಿಸಿಕೊಳ್ಳಿ. ಊಹಾಪೋಹಗಳಿಗೆ ಕಿವಿಗೊಡದೇ ನಿಮ್ಮ ಕಾರ್ಯದಲ್ಲಿ ಮುಂದುವರಿಯಿರಿ.

ಮಿಥುನ ರಾಶಿ: ಪರರ ಯಶಸ್ಸನ್ನು ಸಂಭ್ರಮಿಸಲಾರಿರಿ. ನಿಮಗೆ ಮಕ್ಕಳ ವಿದ್ಯಾಭ್ಯಾಸದ ಚಿಂತೆ ಹೆಚ್ಚಾಗುವುದು. ಸರ್ಕಾರಿ ಅಧಿಕಾರಿಗಳಿಗೆ ಹೆಚ್ಚಿನ ಆದಾಯ ಸಿಗಲಿದೆ. ಸಂಗಾತಿಯ ಜೊತೆ ತಾಳ್ಮೆಂದಿರಿ. ಆರ್ಥಿಕ ವಿಚಾರದಲ್ಲಿ ನಿಮ್ಮ ಗಟ್ಟಿತನವೇ ನಿಮಗೆ ಧೈರ್ಯ ಕೊಡಲಿದೆ. ಇಂದು ಅತಿಯಾದ ಪ್ರಶಂಸೆ ನಿಮ್ಮನ್ನು ಹಾಳುಮಾಡುವುದು. ಅತಿಥಿಗಳ ಆಗಮನದಿಂದ ಮನೆಯ ವಾತಾವರಣ ಆಹ್ಲಾದಕರವಾಗಿರುತ್ತದೆ. ಮೊದಲು ವಾದ ಮಾಡಿ ಅನಂತರ ಭಯಗೊಳ್ಳುವಿರಿ. ವಿರೋಧಿಗಳು ಸಕ್ರಿಯರಾಗಿರುತ್ತಾರೆ. ವಿವಾದಾತ್ಮಕ ವಿಷಯಗಳಲ್ಲಿ ಸಿಕ್ಕಿಹಾಕಿಕೊಳ್ಳಬಹುದು. ಆದಾಯ ಹೆಚ್ಚಾಗುತ್ತದೆ ಮತ್ತು ಯೋಜನೆಗಳು ಯಶಸ್ವಿಯಾಗುತ್ತವೆ. ಕ್ರೀಡೆಯಲ್ಲಿ ಜಯಗಳಿಸುವ ಸಾಧ್ಯತೆ. ಸ್ವತಂತ್ರವಾಗಿ ಇರಲು ಬಿಡಿ. ಭೂಮಿಯ ಖರೀದಿಯಲ್ಲಿ ಎಡವುವಿರಿ. ಯಂತ್ರಜ್ಞರು ಇಂದು ಬಹಳ ಒತ್ತಡದಿಂದ ಇರುವರು. ಸ್ವಲ್ಪ ಮಾನಸಿಕ ಆಲಸ್ಯವು ಇರುವುದು. ಗೊಂದಲವನ್ನು ಇನ್ನೊಬ್ಬರ ಬಳಿ ಹೇಳಿ. ನಿಮ್ಮ ಮಾತನ್ನು ಸಂಗಾತಿಯು ತೆಗೆದು ಹಾಕಿದ್ದರಿಂದ ಬೇಸರ.

ಕರ್ಕಾಟಕ ರಾಶಿ: ಸೌಜನ್ಯದಿಂದ ವರ್ತಿಸಿದಷ್ಟು ನಿಮ್ಮ ಜೊತೆ ಸಮಾಧಾನದಿಂದ ಮಾತನಾಡುವರು. ದ್ವಿಚಕ್ರ ಸವಾರರು ಜಾಗರೂಕತೆಯಿಂದ ಇರಬೇಕು. ಉದ್ಯೋಗದಲ್ಲಿ ಸ್ವಲ್ಪ ಏರಳಿತಗಳನ್ನು ಎದುರಿಸಬೇಕಾದೀತು. ಪ್ರಯತ್ನಗಳು ಇಂದು ಉತ್ತಮ ಫಲಿತಾಂಶಗಳನ್ನು ನೀಡುತ್ತವೆ. ನೀವು ಸಾಲವಾಗಿ ನೀಡಿದ ಅಥವಾ ಸಿಲುಕಿಕೊಂಡಿದ್ದ ಹಣವನ್ನು ಮರಳಿ ಪಡೆಯಬಹುದು. ವಿವಾಹಕ್ಕೆ ಒತ್ತಡ ಅಧಿಕವಾಗಲಿದೆ. ಹೆಚ್ಚು ಒತ್ತಡ ತೆಗೆದುಕೊಂಡು ಓಡಾಡುವುದು ಆರೋಗ್ಯಕ್ಕೆ ಒಳ್ಳೆಯದಲ್ಲ. ನಿಮ್ಮ ಕೆಲಸವನ್ನು ಸುಲಭವಾಗಿ ಮಾಡಿ. ಪ್ರವಾಸಕ್ಕೆ ಹೋಗುವ ಸಾಧ್ಯತೆ ಇದೆ. ಕೃಷಿ ಕ್ಷೇತ್ರದಲ್ಲಿ ಕೊಂಚ ನಷ್ಟ ಅನುಭವಿಸಬೇಕಾದೀತು. ದಾಂಪತ್ಯ ಜೀವನದಲ್ಲಿ ಬಿಸಿಲು ನೆರಳಿನ ವಾತಾವರಣವಿರುತ್ತದೆ. ಸಂಗಾತಿಯ ಬಂಧುಗಳು ಮನೆಗೆ ಆಗಮಿಸಬಹುದು. ಹೊಸ ಯೋಜನೆಯನ್ನು ನಿಮ್ಮದಾಗಿಸಿಕೊಳ್ಳುವಿರಿ. ಶುಭ ಕಾರ್ಯದಲ್ಲಿ ನೀವು ಭಾಗವಹಿಸುವಿರಿ. ಹೊಸ ಜನ, ಹೊಸ ಸ್ಥಳ ಹಾಗೂ ಹೊಸ ವಿಚಾರದ ಕಡೆ ಗಮನವು ಬೇಕೆನಿಸುವುದು. ನಿಮ್ಮ ಯಶಸ್ಸನ್ನು ಮನೆಯವರು ಸಂಭ್ರಮಿಸಬಹುದು.

ಸಿಂಹ ರಾಶಿ: ದೂರ ಪ್ರಯಾಣಕ್ಕೆ ವಾಹನ ಸಿಗದೇ ಪರದಾಟ. ಇಂದು ನಿಮ್ಮ ಕೆಲಸ ಕಾರ್ಯಗಳಲ್ಲಿ ಕೊಂಚ ಬದಲಾವಣೆಯನ್ನು ಮಾಡಲಿದ್ದೀರಿ. ಫಲಾ ಅಪೇಕ್ಷೆ ಇಲ್ಲದೆ ಕೆಲಸ ಮಾಡಿದರೆ ಒಳ್ಳೆಯದು. ಅದರಿಂದ ಹೆಚ್ಚಿನ ಲಾಭವು ಸಿಗಲಿದೆ. ಅಪರಿಚಿತ ಸ್ಥಳದಲ್ಲಿ ವಾಸ ಮಾಡಿ ಭಯವಾಗಬಹುದು‌. ನಿಮ್ಮ ಕನಸುಗಳನ್ನು ನನಸಾಗಿಸುವ ಸಮಯ ಬಂದಿದೆ. ಕೆಲಸವನ್ನು ಸರಿಯಾಗಿ ಮಾಡುವುದು ನಿಮ್ಮನ್ನು ಯಶಸ್ವಿಯಾಗಿಸುತ್ತದೆ. ಭವಿಷ್ಯದ ಬಗ್ಗೆ ಯುವಕರ ಪ್ರಯತ್ನಗಳು ಅಫಲವಾಗುವುದು. ನೀವು ಅಂದುಕೊಂಡಿದ್ದನ್ನೇ ಮಾಡುವ ಛಾತಿ ಇರುವುದು. ವಿದ್ಯಾರ್ಥಿಗಳು ಅಹಂಕಾರದ ವರ್ತನೆಯನ್ನು ತೋರಿಸಬಹುದು. ಇಂದಿನ ಓಡಾಟದ ದಣಿವು ನಿಮ್ಮ ಉತ್ಸಾಹವನ್ನು ಕುಗ್ಗಿಸೀತು. ಅಪವಾದದಿಂದ ನಿಮಗೆ ಭಯವಾಗಲಿದೆ. ತಿಳಿವಳಿಕೆಯನ್ನು ಹೇಳಬೇಕಾದೀತು. ಎಲ್ಲವನ್ನೂ ನಂಬಿಕೆಯ ಆಧಾರದ ಮೇಲೆ ಸ್ವೀಕರಿಸಬೇಕಿಲ್ಲ. ಸರ್ಕಾರಿ ಉದ್ಯೋಗಿಗಳಿಗೆ ನಿಮ್ಮ ಚಾತುರ್ಯದ ಕಾರಣದಿಂದ ಹೆಚ್ಚಿನ ಅಧಿಕಾರವು ಪ್ರಾಪ್ತವಾಗುವುದು.

ಕನ್ಯಾ ರಾಶಿ: ಅನ್ಯ ಸ್ತ್ರೀಯರಿಂದ ಸಂಸಾರ ಕೆಡಬಹುದು. ನೀವು ಅಧಿಕಾರವನ್ನು ಪಡೆಯಲು ಬೇರೆ ರೀತಿಯಲ್ಲಿ ಶ್ರಮಿಸುವಿರಿ. ತಪ್ಪು ತಿಳುವಳಿಕೆಯಿಂದ ಸಂಬಂಧ ಕೊನೆಗೊಳ್ಳುವ ಸಾಧ್ಯತೆ ಇದೆ. ಸಂಗಾತಿಯ ಜೊತೆ ಕಾಲ ಕಳೆದು ಖುಷಿಕೊಡುವಿರಿ. ನೀವು ದೇಹಕ್ಕೆ ಪರಿಮಳ ದ್ರವ್ಯಗಳನ್ನು ಲೇಪಿಸಿಕೊಳ್ಳುವಿರಿ ಹಾಗೂ ಅನೇಕ ವಸ್ತುಗಳನ್ನು ಖರೀದಿಸುವಿರಿ. ಕೆಲಸವನ್ನು ಮಾಡುವ ಮೊದಲು, ಅದರ ಪ್ರತಿಯೊಂದು ಅಂಶದ ಬಗ್ಗೆ ಎಚ್ಚರಿಕೆಯಿಂದ ಯೋಚಿಸಿ. ಇದು ಪ್ರಗತಿಯ ಹೊಸ ಹಾದಿಗಳನ್ನು ತೆರೆಯುತ್ತದೆ. ನಿಮ್ಮ ಆತ್ಮವಿಶ್ವಾಸ ಹೆಚ್ಚಾಗುತ್ತದೆ. ಮಕ್ಕಳ ಮೇಲೆ ಕೋಪಗೊಳ್ಳುವ ಬದಲು, ಅವರನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸಿ. ಮನೆಯಲ್ಲಿ ಇಂದು ಸಹಜ ವಾತಾವರಣ ಇರುತ್ತದೆ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ಎಲ್ಲದಕ್ಕೂ ನೀವು ಉತ್ತರಿಸಬೇಕಾದ ಅವಶ್ಯಕತೆ ಇಲ್ಲ. ವಾಹನವನ್ನು ಚಲಾಯಿಸುವಾಗ ಸಾವಧಾನತೆ ಇರಲಿ. ಬಂಧುಗಳು ನಿಮ್ಮವರ ಬಗ್ಗೆ ಆಡಿಕೊಳ್ಳುವಾಗ ನಿಮಗೆ ಸಹಿಸಲಾಗದು. ನಿಮ್ಮ ಶ್ರಮದ‌ ಸಾಧನೆಯನ್ನು ಇತರರ ಜೊತೆ ಹಂಚಿಕೊಳ್ಳುವಿರಿ. ವಿರಾಮವನ್ನು ಪಡೆದು ಸುತ್ತಾಡಲು ಹೋಗುವಿರಿ.

ತುಲಾ ರಾಶಿ: ಹಿತಶತ್ರುಗಳು ನಿಮ್ಮನ್ನು ಚಂಚಲ ಮಾಡಬಹುದು. ನೀವು ಇಂದು ಪೂರ್ವಯೋಜಿತ ವಿಷಯಗಳಿಂದ ಸಫಲತೆಯನ್ನು ಕಾಣಲಿದ್ದೀರಿ. ದಾಂಪತ್ಯದಲ್ಲಿ ಸುಖವು ಇರಲಿದೆ. ಚರ್ಚೆಗಳಿಗೆ ಆಸ್ಪದ ನೀಡದಿರಿ. ಪರರಿಗೆ ಕೊಡುವ ಧನವು ನಿಮ್ಮ ಕೈ ಸೇರುವುದು. ಸರಳ ಸ್ವಭಾವವು ನಿಮ್ಮ ವ್ಯಕ್ತಿತ್ವವನ್ನು ಮತ್ತಷ್ಟು ಸುಧಾರಿಸುತ್ತದೆ. ಇಂದು ನೀವು ನಿಮ್ಮ ಗುರಿಯ ಮೇಲೆ ಪೂರ್ಣ ಗಮನ ಹರಿಸಿ ಮುಂದುವರಿಯುತ್ತೀರಿ ಮತ್ತು ಯಶಸ್ಸು ಸಿಗುತ್ತದೆ. ಸೂಕ್ಷ್ಮ ವಿಚಾರಗಳನ್ನು ತಾಳ್ಮೆಯಿಂದ ನಿರ್ವಹಿಸುವುದು ಒಳ್ಳೆಯದು. ಮನೆಯ ನಿರ್ಮಾಣವು ಅಪೂರ್ಣವಾಗಿ ನಿಲ್ಲುವುದು. ಮಕ್ಕಳ ನಿಮಿತ್ತ ಹೆಚ್ಚಿದ ಜವಾಬ್ದಾರಿಯನ್ನು ವಹಿಸಬೇಕಾದೀತು. ಭೂಮಿಗೆ ಸಂಬಂಧಿಸಿದ ವ್ಯವಹಾರಗಳಲ್ಲಿ ಪ್ರಗತಿಯು ಆಗಲಿದೆ. ನಿಮ್ಮ ಉತ್ಪನ್ನಗಳನ್ನು ಮಾರಾಟ ಮಾಡಿ ಧನವನ್ನು ಸಂಪಾದಿಸುವಿರಿ. ಮಂಗಲಕಾರ್ಯದಲ್ಲಿ ಇಂದು ನೀವು ಸಂತೋಷದಿಂದ ಪಾಲ್ಗೊಳ್ಳುವಿರಿ. ಜೀವನಕ್ಕೆ ಸಂಬಂಧಿಸಿದ ವಿಚಾರದಲ್ಲಿ ಗಟ್ಟಿಯಾದ ತೀರ್ಮಾನವನ್ನು ಪಡೆಯುವುದು ಕಷ್ಟವಾಗುವುದು.

ವೃಶ್ಚಿಕ ರಾಶಿ: ನಿಮ್ಮ ನಿರ್ಧಾರದಿಂದ ಹಿರಿಯರು ಸಂತಸಗೊಳ್ಳುವರು. ಸ್ತ್ರೀಯರು ಪುರುಷರನ್ನೂ ಪುರುಷರು ಸ್ತ್ರೀಯರನ್ನು ದ್ವೇಷಿಸುವರು. ಪಾಲುದಾರಿಕೆಯ ವ್ಯವಹಾರಗಳಲ್ಲಿ ಸಂಯಮವಿರಲಿ. ತಪ್ಪು ಕಲ್ಪನೆ ಹೊಂದಿರುವ ಜನರಿಂದ ದೂರವಿರಿ, ದೇವರಲ್ಲಿ ಭಕ್ತಿ ಹೆಚ್ಚಾಗುವುದು. ಅವರ ತಪ್ಪು ಸಲಹೆಯು ನಿಮ್ಮ ಗುರಿಯಿಂದ ನಿಮ್ಮನ್ನು ಬೇರೆಡೆಗೆ ಸೆಳೆಯಬಹುದು. ಯಾವುದೇ ಪ್ರಮುಖ ನಿರ್ಧಾರ ತೆಗೆದುಕೊಳ್ಳುವ ಮೊದಲು ಚಿಂತನಶೀಲವಾಗಿ ಹೆಜ್ಜೆಗಳನ್ನು ಇರಿಸಿ. ಕೆಲಸ ವೇಗಗೊಳ್ಳುತ್ತದೆ ಮತ್ತು ಆದಾಯವೂ ಹೆಚ್ಚಾಗುತ್ತದೆ. ಗುರು ಹಿರಿಯರೊಂದಿಗೆ ಸಮಾಲೋಚನೆಯನ್ನು ಮಾಡಲಿದ್ದೀರಿ. ಪಾರದರ್ಶಕತೆಗೆ ಆದ್ಯತೆ ನೀಡುವವರು ನೀವು. ಉದ್ಯೋಗದಲ್ಲಿ ಮೇಲಧಿಕಾರಿಗಳಿಂದ ಪ್ರೋತ್ಸಾಹ ಸಿಗಲಿದೆ. ಅವಿವಾಹಿತರಿಗೆ ವಿವಾಹ ಯೋಗವು ಬರಲಿದೆ. ಮಾತುಗಾರರಿಗೆ ಒಳ್ಳೆಯ ಅವಕಾಶಗಳು ಸಿಗಲಿದೆ. ದಾಂಪತ್ಯದಲ್ಲಿ ಪರಸ್ಪರ ನೋವು ಹಂಚಿಕೊಂಡು ಸಮಾಧಾನವಾಗುವಿರಿ. ಮನೆಯ ನಿರ್ಮಾಣ ಕಾರ್ಯವು ಬಹಳ ವಿಳಂಬದಂತೆ ಅನ್ನಿಸುವುದು. ನಿಮ್ಮ ನಡವಳಿಕೆಗೆ ಬಂಧುಗಳಿಂದ ಪ್ರಶಂಸೆಯು ಸಿಗಲಿದೆ.

ಧನು ರಾಶಿ: ದುರಾಲೋಚನೆಗಳು ನಿಮ್ಮ ಬುಡಕ್ಕೇ ಬರಲಿವೆ. ನಿಮ್ಮ ಸಹೋದರರಿಂದ ನಿಮಗೆ ಸಹಾಯ ಸಿಗಬಹುದು. ವೃತ್ತಿಯಲ್ಲಿ ನಿಮ್ಮ ಕೆಲಸವನ್ನು ನೀವು ನಿಯಮಬದ್ಧವಾಗಿ ಮಾಡುವುದು ಉತ್ತಮ. ಆರ್ಥಿಕ ಸ್ಥಿತಿಯಲ್ಲಿ ಸುಧಾರಣೆಗೊಳ್ಳುತ್ತದೆ. ಮನಸ್ತಾಪವನ್ನು ಮುಂದುವರಿಸದೇ ಅರ್ಧಕ್ಕೆ ನಿಲ್ಲಿಸಿ. ಹೆಚ್ಚಿನ ಕೆಲಸದ ಹೊರೆ ಇರುತ್ತದೆ. ಆದರೆ ಬೆಂಬಲ ಸಿಗಲಿದೆ. ಎದುರಾಳಿಗಳ ಮೇಲೆ ಪ್ರಾಬಲ್ಯ ಸಾಧಿಸುವಿರಿ. ಮಧ್ಯಾಹ್ನದ ಸಮಯವು ಅತ್ಯುತ್ತಮವಾಗಿರುತ್ತದೆ. ಆದಾಯ ಹೆಚ್ಚಾಗಬಹುದು ಮತ್ತು ಸಾಕಷ್ಟು ಹಣ ಸಿಗಬಹುದು. ಪ್ರಯಾಣದ ಸಾಧ್ಯತೆ ಇದೆ. ಹೆಚ್ಚಿನವಾದ ವಾದ ವಿವಾದಗಳನ್ನು ಮಾಡುವುದು ಖಂಡಿತ ಬೇಡ. ದೇವಿ ಸರಸ್ವತಿಯನ್ನು ಸ್ಮರಿಸಿ. ರಾಜಕೀಯವಾಗಿ ನೀವು ಹಿಂದುಳಿದಂತೆ ಅನ್ನಿಸಬಹುದು. ಕಚೇರಿಯಲ್ಲಿ ನಿಮ್ಮ ಕೆಲಸದ ಮೇಲೆ ಹೆಚ್ಚು ಗಮನ ಹರಿಸಿ. ಭೂವ್ಯವಹಾರ ನಿರ್ಧಾರಗಳನ್ನು ತೆಗೆದುಕೊಳ್ಳಲು ದಿನವು ಸೂಕ್ತವಾಗಿದೆ. ನಿಮ್ಮ ಹಠದ ಸ್ವಭಾವವು ಜೊತೆಗಾರರಿಗೆ ಕಷ್ಟವಾದೀತು. ಯಾರಮೇಲೂ ಒತ್ತಡಬೇಡ. ಸಂಗಾತಿಯ ಮಾತುಗಳು ನಿಮಗೆ ಅನಿರೀಕ್ಷಿತ ಆದೀತು.

ಮಕರ ರಾಶಿ: ಆದಾಯ ಕಡಿಮೆಯಿಂದ ಮನೆಯಲ್ಲಿ ಕಲಹವಾಗಬಹುದು. ಇಂದು ನೀವು ಬೇರೆಯವರ ಕಷ್ಟಕ್ಕೆ ಯಾವುದಾದರೊಂದು ರೀತಿಯಲ್ಲಿ ನೆರವಾಗುವಿರಿ. ಯಾರೋ ಮಾಡಿದ ತಪ್ಪನ್ನು ನಿಮ್ಮ ಮೇಲೆ ಹಾಕಲು ಪ್ರಯತ್ನಿಸಬಹುದು. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಹೆಚ್ಚಿನ ಆಸಕ್ತಿ ತೋರಿಸುವಿರಿ. ನೀವಾಡುವ ಮಾತಿನ ಮೇಲೆ ನಂಬಿಕೆ ವಾರದು. ಕೆಲವು ಸಮಯದಿಂದ ಅಡೆತಡೆಗಳನ್ನು ಎದುರಿಸುತ್ತಿದ್ದ ಕೆಲಸಗಳು ಇಂದು ಸುಲಭವಾಗಿ ಪೂರ್ಣಗೊಳ್ಳುತ್ತವೆ. ಕೆಲವು ತೊಂದರೆಗಳು ಉದ್ಭವಿಸಿದರೂ, ನೀವು ಯೋಜನೆ ಮೂಲಕ ಪರಿಸ್ಥಿತಿಯನ್ನು ನಿಮ್ಮ ಪರವಾಗಿ ತಿರುಗಿಸಿಕೊಳ್ಳುವಿರಿ. ಅದೃಷ್ಟ ನಿಮ್ಮ ಕಡೆ ಇರುತ್ತದೆ. ಕೋಪದಿಂದ ಯಾವ ಕಾರ್ಯ ಸಾಧನೆಗಳು ನಿಮ್ಮಿಂದ ಆಗದು. ಎಲೆಕ್ಟ್ರಾನಿಕ್ ಸಂವಹನ ಕ್ಷೇತ್ರದಲ್ಲಿರುವವರಿಗೆ ಬೇಡಿಕೆ ಹೆಚ್ಚುತ್ತದೆ. ದೂರ ಪ್ರಯಾಣವನ್ನು ಮಾಡಬೇಕಾಗಬಹುದು. ಸ್ಥಿರಾಸ್ತಿಗಾಗಿ ಹೆಚ್ಚು ಓಡಾಡುವಿರಿ. ವಿದೇಶ ಪ್ರಯಾಣವು ನಿಮಗೆ ಇಷ್ಟವಿಲ್ಲದಿದ್ದರೂ ಮಾಡುವುದು ಅನಿವಾರ್ಯವಾದೀತು. ಬೇಕಾದಷ್ಟು ಕೆಲಸಗಳಿದ್ದರೂ ಯಾರ ಬಳಿಯೂ ಹೇಳಿಕೊಳ್ಳುವುದಿಲ್ಲ.

ಕುಂಭ ರಾಶಿ: ಪಾಲುದಾರರ ಜೊತೆ ಕಲಹವಾಗಲಿದೆ. ಇಂದು ನೀವು ದೇವತಾ ಕಾರ್ಯಗಳಲ್ಲಿ ತೊಡಗುವಿರಿ. ಬಹಳ ದಿನಗಳ ಅನಂತರ ಹಿರಿಯರ ಭೇಟಿಯಿಂದ ಖುಷಿಯಾಗುವುದು. ಮಿತ್ರರು ನಿಮ್ಮನ್ನು ರೇಗಿಸಬಹುದಿ. ಆರೋಗ್ಯದಲ್ಲಿ ಸ್ವಲ್ಪಮಟ್ಟಿಗೆ ವ್ಯತ್ಯಾಸವಾಗಬಹುದು. ಹಸ್ತಕ್ಷೇಪ ಮಾಡಬೇಡಿ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ತಪ್ಪು ಕೆಲಸಗಳನ್ನು ಮಾಡಬೇಡಿ. ನಿಮ್ಮ ಕೆಲಸವನ್ನು ಸುಲಭವಾಗಿ ಪೂರ್ಣಗೊಳಿಸುವುದನ್ನು ಮುಂದುವರಿಸಿ. ಕುಟುಂಬದಲ್ಲಿ ಸಾಮರಸ್ಯ ಮತ್ತು ಸಮನ್ವಯ ಇರುತ್ತದೆ. ಶಾಂತ ನಡವಳಿಕೆಯು ನಿಮಗೆ ಗೌರವವನ್ನು ಗಳಿಸುತ್ತದೆ. ಅಧಿಕ ಓಡಾಟ ಹೆಚ್ಚು ಆಯಾಸವನ್ನು ತರಿಸಬಹುದು. ಸರ್ಕಾರಿ ಕಛೇರಿಯ ಕೆಲಸ ಕಾರ್ಯಗಳು ಸರಾಗವಾಗಿ ನಡೆಯುತ್ತವೆ. ಮನೆಯಲ್ಲಿ ನಡೆಯುವ ಶುಭ ಕಾರ್ಯಗಳಿಗೆ ಮಕ್ಕಳ ಸಹಕಾರವಿರುವುದು. ಸರ್ಕಾರದ ಕಡೆಯಿಂದ ಆಗಬೇಕಾದ ನಿಮ್ಮ ಕೆಲಸವು ಬೇಗನೆ ಮುಗಿಯುವುದು.

ಮೀನ ರಾಶಿ: ಅತಿಯಾದ ಒಳ್ಳೆತನದಿಂದ ಬೇಸರದ ಸನ್ನಿವೇಶ ಬರಬಹುದು. ಇಂದು ನೀವು ಸ್ವಂತ ಕಾರ್ಯದಲ್ಲಿ ಉತ್ತಮ ಪ್ರಗತಿಯನ್ನು ಕಾಣುವಿರಿ. ವ್ಯವಹಾರಿಕ ನಷ್ಟವು ನಿಮ್ಮ ಗಮನಕ್ಕೆ ಬಾರದೇ ಇರುವುದು. ಬೇಜವಾಬ್ದಾರಿಯ ಉತ್ತರವನ್ನು ಕೊಡುವುದು ಬೇಡ. ಆಲೋಚಿಸದೇ ಯಾವುದೇ ಸಾಹಸದ ಕಾರ್ಯದಲ್ಲಿ ತೊಡಗುವುದು ಬೇಡ. ಸಮಯವನ್ನು ವ್ಯರ್ಥ ಮಾಡದೆ ನಿಮ್ಮ ಗುರಿಯ ಕಡೆ ಮುಖ ಮಾಡಲಿದ್ದೀರಿ. ಆದಾಯ ಉತ್ತಮವಾಗಿರುತ್ತದೆ ಮತ್ತು ಬೆಂಬಲವೂ ಸಿಗುತ್ತದೆ. ಕೆಲಸವು ಸಮಯಕ್ಕೆ ಸರಿಯಾಗಿ ಪೂರ್ಣಗೊಳ್ಳುತ್ತದೆ. ಸ್ನೇಹಿತರನ್ನು ಭೇಟಿಯಾಗುವುದು ಮತ್ತು ಕಾನೂನು ವಿಷಯಗಳಲ್ಲಿ ನೀವು ಯಶಸ್ಸನ್ನು ಪಡೆಯುತ್ತೀರಿ. ಮಧ್ಯಾಹ್ನ ಮನೆಯ ವಿಷಯಗಳಲ್ಲಿ ಸಮಯ ಕಳೆಯುವಿರಿ. ತಂದೆಯಿಂದ ಬೆಂಬಲ ಸಿಗಲಿದೆ. ಉದ್ಯೋಗಸ್ಥ ಮಹಿಳೆಯರು ವರ್ಗಾವಣೆಗೆ ಪ್ರಯತ್ನಿಸುವಿರಿ. ಆಪ್ತರ ಜೊತೆಗಿನ ಮಾತುಕತೆಯು ನಿಮಗೆ ಆಹ್ಲಾದವನ್ನು ಉಂಟುಮಾಡುವುದು. ಭೂಮಿಯ ಮೇಲೆ ಸಾಲವನ್ನು ಮಾಡಬೇಕಾದೀತು. ಸಹೋದ್ಯೋಗಿಗಳು ನಿಮ್ಮನ್ನು ಎಲ್ಲದಕ್ಕೂ ಬೊಟ್ಟು ಮಾಡಿ ತೋರಿಸಿಯಾರು‌.

-ಲೋಹಿತ ಹೆಬ್ಬಾರ್ – 8762924271 (what’s app only)

ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ನೆಲೆಮಂಗಲ: ಮನೆ ಮುಂದೆ ಕಟ್ಟಿದ್ದ ಹಸುಗಳನ್ನ ಕದ್ದು ಪರಾರಿ, ರೈತ ಕಂಗಾಲು
ನೆಲೆಮಂಗಲ: ಮನೆ ಮುಂದೆ ಕಟ್ಟಿದ್ದ ಹಸುಗಳನ್ನ ಕದ್ದು ಪರಾರಿ, ರೈತ ಕಂಗಾಲು
ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್