AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today 07 May: ಈ ರಾಶಿಯವರಿಗೆ ಬೇಡ ಅಧಿಕವಾಗಿ, ಪೂರೈಕೆ ಕಷ್ಟವಾಗಲಿದೆ

ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ವಸಂತ ಋತುವಿನ ವೈಶಾಖ ಮಾಸ ಶುಕ್ಲ ಪಕ್ಷದ ದಶಮೀ ತಿಥಿ, ಬುಧವಾರ ಗುರಿಯ ಮೇಲೆ ಗಮನ, ನಿಧಾನ ನಡೆ, ಅತಿಯಾದ ವಿಶ್ರಾಂತಿ ಇವೆಲ್ಲ ಇರಲಿದೆ. ಇಂದಿನ ದಿನ ಭವಿಷ್ಯದಲ್ಲಿ ಯಾವ ರಾಶಿಗೆ ಯಾವ ಫಲ ಎನ್ನುವುದನ್ನು ತಿಳಿದುಕೊಳ್ಳಿ.

Horoscope Today 07 May: ಈ ರಾಶಿಯವರಿಗೆ ಬೇಡ ಅಧಿಕವಾಗಿ, ಪೂರೈಕೆ ಕಷ್ಟವಾಗಲಿದೆ
ಜ್ಯೋತಿಷ್ಯ
Follow us
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ವಿವೇಕ ಬಿರಾದಾರ

Updated on: May 07, 2025 | 1:34 AM

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು: ವಸಂತ, ಸೌರ ಮಾಸ: ಮೇಷ ಮಾಸ, ಮಹಾನಕ್ಷತ್ರ: ಭರಣೀ, ಮಾಸ: ವೈಶಾಖ, ಪಕ್ಷ: ಶುಕ್ಲ, ವಾರ: ಬುಧ, ತಿಥಿ: ದಶಮೀ ನಿತ್ಯನಕ್ಷತ್ರ: ಪೂರ್ವಾಫಲ್ಗುಣೀ, ಯೋಗ: ಧ್ರುವ, ಕರಣ: ಕೌಲವ, ಸೂರ್ಯೋದಯ – 06 : 08 am, ಸೂರ್ಯಾಸ್ತ – 06 : 49 pm, ಇಂದಿನ ಶುಭಾಶುಭಕಾಲ: ರಾಹು ಕಾಲ 12:29 – 14:04, ಯಮಘಂಡ ಕಾಲ 07:44 – 09:19, ಗುಳಿಕ ಕಾಲ 10:54 – 12:29

ಮೇಷ ರಾಶಿ: ಆದಾಯಕ್ಕೆ ಸಂಬಂಧಿಸಿದಂತೆ ಪಾಲುದಾರಿಕೆಯಲ್ಲಿ ಭಿನ್ನಾಭಿಪ್ರಾಯ ಬರುವುದು. ಇಂದು ನಿಮ್ಮ ಜೀವನ ಬಹಳ ಸುಂದರ ಎನಿಸುವುದು. ತೆರೆದರೆ ಬೆಳಕು, ತೆರೆಯದಿದ್ದರೆ ಕತ್ತಲು ಇರುತ್ತದೆ ಎನ್ನುವುದನ್ನು ಅರಿತುಕೊಳ್ಳಿ. ಸಂಗಾತಿಯ ಆಯ್ಕೆಯನ್ನು ನೀವೇ ಮಾಡಿ. ಫಲಾಪೇಕ್ಷೆ ಇಲ್ಲದೇ ಇಂದು ಕಾರ್ಯ ಮಾಡುವಿರಿ. ಸಾಲದಿಂದ ಮುಕ್ತವಾಗುವ ಲಕ್ಷಣಗಳು ಕಂಡುಬರುತ್ತವೆ ಮತ್ತು ಪ್ರಯತ್ನಗಳು ಯಶಸ್ವಿಯಾಗುತ್ತವೆ. ಸಂಜೆ ಸ್ನೇಹಿತರೊಂದಿಗೆ ಸಮಯ ಕಳೆಯಬಹುದು. ಕೆಲಸದಲ್ಲಿ ವೇಗ ಇರುತ್ತದೆ ಮತ್ತು ಯೋಜನೆಗಳು ಯಶಸ್ವಿಯಾಗುತ್ತವೆ. ನಿಮ್ಮ ವಿರೋಧಿಗಳನ್ನು ನಿಮ್ಮ ಕಡೆಗೆ ಸೆಳೆಯಲು ನಿಮಗೆ ಸಾಧ್ಯವಾಗುತ್ತದೆ. ಬದಲಾವಣೆಯೇ ಶಾಶ್ವತ ಎನ್ನುವ ವಾಕ್ಯವನ್ನು ಸ್ಮರಿಸುತ್ತ ಮುಂದಡಿಯಿಡಿ. ಗೊತ್ತಿಲ್ಲದ ವಿಚಾರದ ಬಗ್ಗೆ ಮಾತನಾಡಿ ಅವಮಾನಕ್ಕೆ ಒಳಗಾಗುವಿರಿ. ನೆಮ್ಮದಿ ನಿಮ್ಮೆದುರು ಇರಲಿದೆ. ದೇಹಕ್ಕೆ ವಿಶ್ರಾಂತಿಯ ಅವಶ್ಯಕತೆ ಇದ್ದರೂ ಸಮಯವು ಮಾತ್ರ ಸಿಗದೇಹೋದೀತು. ಹಿತಶತ್ರುಗಳಿಂದ ಸಣ್ಣ ಆಪತ್ತು ಬರಬಹುದು. ಆತುರದಲ್ಲಿ ಯಾವ ನಿರ್ಧಾರವನ್ನೂ ಯೋಚಿಸದೇ ಮಾಡಬೇಡಿ.

ವೃಷಭ ರಾಶಿ: ಶಿಸ್ತಿನಿಂದ ಇರಲು ಬಹಳ ಪ್ರಯತ್ನ ಮಾಡುವಿರಿ. ನಿಮ್ಮ ಗಟ್ಟಿಯಾದ ಸಂಕಲ್ಪವು ಯಶಸ್ಸಿನ ಗುಟ್ಟೂ ಆಗುವುದು. ಹಣವನ್ನು ಗಳಿಸುವ ಆಸೆಯು ತೀರ್ವವಾಗಿದ್ದರೂ ಸಫಲವಾಗುವುದಿಲ್ಲ‌. ಮಾನಸಿಕ ಶಾಂತಿಯನ್ನು ಅನುಭವಿಸುವಿರಿ. ನೀವು ನಿಷ್ಣಾತರಂತೆ ತೋರಿಸಿಕೊಳ್ಳುವಿರಿ. ಖರ್ಚುಗಳ ಮೇಲೆ ನಿಯಂತ್ರಣ, ಸಮಸ್ಯೆಗಳಿಗೆ ಪರಿಹಾರ ಸಾಧ್ಯ. ಕೆಲಸ ವೇಗವನ್ನು ಪಡೆದ ಕಾರಣ ಆದಾಯವು ಹೆಚ್ಚಾಗುತ್ತದೆ. ಸಂಗಾತಿಯು ನಿಮ್ಮ ಮೇಲೆ ಬೇಸರಗೊಂಡಾರು. ವೃತ್ತಿಯಲ್ಲಿ ಕಿರಿಕಿರಿ ಅಧಿಕವಾಗಬಹುದು. ಮೆಚ್ಚುಗೆಯ ಮಾತುಗಳಿಂದ ದೂರವಾದ ಸಂಬಂಧವು ಹತ್ತಿರವಾಯಬಹುದು. ಸರಳ ಮಾರ್ಗದಿಂದ ಕೆಲಸವನ್ನು ಪೂರ್ಣ ಮಾಡಿಕೊಳ್ಳಿ. ಆರೋಗ್ಯದ ಬಗ್ಗೆ ಆತಂಕ ಬೇಡ. ನಿಮಗೆ ಸಿಕ್ಕ ಪ್ರಶಂಸೆಯಿಂದ ಸಹೋದ್ಯೋಗಿಗಳು ತೊಂದರೆಯನ್ನು ಕೊಡಬಹುದು. ವಿನೀತಭಾವವು ನಿಮ್ಮನ್ನು ಇಷ್ಟಪಡುವಂತೆ ಮಾಡಬಹುದು. ಉದ್ಯೋಗದಲ್ಲಿ ನೀವು ಪ್ರಗತಿಯನ್ನು ಸಾಧಿಸುವಿರಿ.

ಮಿಥುನ ರಾಶಿ: ಆಕರ್ಷಣೆಯಿಂದ ಪ್ರೇಮ ಆರಂಭವಾಗಬಹುದು. ಅಪರೂಪಕ್ಕೆ ಸಿಕ್ಕ ಸ್ನೇಹಿತರು ನಿಮ್ಮ ಬಳಿ ಹಣವನ್ನು ಖಾಲಿ‌ಮಾಡಿಸಬಹುದು. ದಾಂಪತ್ಯಜೀವನವು ಜೀವನ್ಮರಣದ ಮಧ್ಯದಲ್ಲಿ ಒದ್ದಾಗುತ್ತಿದ್ದು ಬದುಕಿಸಿಕೊಳ್ಳಿ. ಪ್ರಸಿದ್ಧಿಯ ಆಸೆಯೂ ನಿಮಗೆ ಬರಲಿದೆ. ಹೊಸ ಅವಕಾಶಗಳನ್ನು ಅನ್ವೇಷಣೆ ಮಾಡಲು ನಿಮಗೆ ಧೈರ್ಯ ಮತ್ತು ತಾಳ್ಮೆ ಬೇಕಾಗುತ್ತದೆ. ಹಳೆಯ ಯೋಜನೆಯನ್ನು ಪುನರಾರಂಭಿಸಲು ಅವಕಾಶ ಸಿಗುತ್ತದೆ. ಸರಿಯಾದ ಸಮಯ ಮತ್ತು ಸರಿಯಾದ ನಿರ್ಧಾರಕ್ಕಾಗಿ ಕಾಯಬೇಕು. ನಿಮ್ಮ ನ್ಯೂನತೆಗಳನ್ನು ಇನ್ನೊಬ್ಬರ ಬಾಯಿಗೆ ಸಿಕ್ಕ ರಸಗವಳದಂತೆ ಚಪ್ಪರಿಸಿ ಸೇವಿಸುತ್ತಿರುತ್ತಾರೆ. ಹೊಸ ವಸ್ತುಗಳನ್ನು ಹಾಳುಮಾಡಿಕೊಳ್ಳುವಿರಿ. ದಾಂಪತ್ಯದಲ್ಲಿನ ವಿರಸದಿಂದ ಮಾನಸಿಕ ಆರೋಗ್ಯವನ್ನು ಕೆಡಿಸುವುದು. ಉದ್ಯೋಗವನ್ನು ಬದಲಿಸಿದ ಕಾರಣ ಸಮಯವು ಓಡಾಟದಲ್ಲಿ ವ್ಯರ್ಥವಾಗಬಹುದು. ಸಾಮಾಜಿಕ ಕಾರ್ಯಕ್ಕೆ ನಿಮಗೆ ಪ್ರಶಂಸೆಯು ಸಿಗುವುದು. ಕಛೇರಿಯಲ್ಲಿ ಕೆಲವರ ವರ್ತನೆಯು ಬದಲಾದಂತೆ ತೋರುವುದು.

ಕರ್ಕಾಟಕ ರಾಶಿ: ನಿಮ್ಮ ನಡೆ ಇಂದು ನಿಧಾನವಾಗಲಿದೆ. ನಿಮ್ಮ ಜೊತೆ ಕಲಹಕ್ಕೆ ಸಹೋದ್ಯೋಗಿಗಳು ಕಾಯುವರು. ಇಂದು ಅನವಶ್ಯಕ ಖರ್ಚಿನ ಕಡೆ ಗಮನ ಬೇಕು. ಹೆಚ್ಚು ಕೋಪವನ್ನು ತೋರಿಸಲಿದ್ದೀರಿ‌. ಯಾರ ಒತ್ತಾಯಕ್ಕೋ ಮಣಿದು ನಿಮ್ಮ ನಿರ್ಧಾರಗಳನ್ನು ಬದಲಿಸಿಕೊಳ್ಳಬೇಡಿ. ಈ ದಿನ ಒಳ್ಳೆಯ ಸುದ್ದಿಗಳೊಂದಿಗೆ ಪ್ರಾರಂಭವಾಗುತ್ತದೆ. ನಿಮ್ಮ ಎಲ್ಲಾ ಚಿಂತೆಗಳನ್ನು ಮರೆತು ನೀವು ಸಂತೋಷವಾಗಿರುತ್ತೀರಿ. ಯುವಕರು ತಮ್ಮ ವೃತ್ತಿಜೀವನದ ಬಗ್ಗೆ ತುಂಬಾ ಗಂಭೀರವಾಗಿರುತ್ತಾರೆ. ಸಣ್ಣ ಕೆಟ್ಟ ವಿಷಯಗಳಿಗೆ ಗಮನ ಕೊಡಬೇಡಿ. ಹೂಡಿಕೆಯ ಬಗ್ಗೆ ನಿಮಗೆ ಸರಿಯಾದ ಮಾಹಿತಿಯ ಕೊರತೆ ಇರುವುದು. ಇಂದು ನಿಮ್ಮ ನಕಾರಾತ್ಮಕ ಭಾವನೆಗಳು ಹೆಚ್ಚಿರುವುದು. ಉಸಿರಾಟದ ತೊಂದರೆಯನ್ನು ಗಂಭೀರವಾಗಿ ಪರಿಗಣಿಸಬೇಕಾದೀತು. ನಿಮ್ಮ ಸಂತೋಷವನ್ನು ವ್ಯಕ್ತಪಡಿಸುವ ವಿಧಾನವು ವಿಭಿನ್ನವಾಗಿರಲಿದೆ. ಯಾವ ನೋವನ್ನೂ ನಿರ್ಲಕ್ಷಿಸುವುದು ಬೇಡ. ನಿಮ್ಮಿಂದ ಉಪಕಾರವನ್ನು ಕೇಳಿ ಬರಬಹುದು.

ಸಿಂಹ ರಾಶಿ: ಎಂತಹ ವಿಘ್ನಗಳು ಬಂದರೂ ನಿಮ್ಮ ಪ್ರಯತ್ನ ಹಾಗೂ ದೈವ ಬಲವನ್ನು ಬಿಡದೇ ಮುಂದುವರಿಯುವಿರಿ. ಇಂದು ಹಿತಶತ್ರುಗಳಿಂದ ತೊಂದರೆಯಾಗುವುದು. ಹೊಸ ಉದ್ಯೋಗವನ್ನು ಆರಂಭಿಸುವುದಿದ್ದರೆ ಒಳ್ಳೆಯದು. ಹೆಚ್ಚು ಮಾತನಾಡಿ ನಿಮ್ಮನ್ನು ನೀವೇ ಸಣ್ಣವರನ್ನಾಗಿ ಮಾಡಿಕೊಳ್ಳಬೇಡಿ. ಕೆಲಸದ ಹೊರೆ ಹೆಚ್ಚಿರಬಹುದು ಮತ್ತು ಸ್ವಲ್ಪ ಆಲಸ್ಯವಿರಬಹುದು. ನಿಮ್ಮ ಕುಟುಂಬದಿಂದ ನಿಮಗೆ ಬೆಂಬಲ ಸಿಗುತ್ತದೆ. ನಿಮಗೆ ಪ್ರಯಾಣಿಸಲು ಅವಕಾಶ ಸಿಗುತ್ತದೆ. ಮಾನಸಿಕ ಒತ್ತಡವನ್ನು ನಿಯಂತ್ರಿಸುವುದು ಅವಶ್ಯಕ. ಕಾನೂನಿನ ಕೆಲಸಕ್ಕೆ ಸಂಬಂಧಿಸಿದ ವಿವಾದವನ್ನು ಪರಿಹರಿಸಲು ಇದು ಸರಿಯಾದ ಸಮಯ. ಅಸೂಯೆಪಡಲಿದ್ದಾರೆ. ನಿಮ್ಮ ಸೋಲನ್ನು ಪಾಠವಾಗಿ ಸ್ವೀಕರಿಸಿ. ಸಾಧಿಸುವ ಛಲವಿರುವವಗೆ ಯಾವುದೂ ಅಸಾಧ್ಯವಿಲ್ಲವಾಗುತ್ತದೆ. ನಿಮ್ಮನ್ನು ಮೆಚ್ಚಿಸಿ ಕೆಲಸಗಳನ್ನು ಇಂದು ಮಾಡಿಸಿಕೊಳ್ಳುವರು. ಗುರಿಯನ್ನು ಯಾರಾದರೂ ತಪದಪಿಸಬಹಿದಿ. ಇಷ್ಟ ಪಟ್ಟವರನ್ನು ಮದುವೆಯಾಗುವ ಮಕ್ಕಳ ಸ್ವಾತಂತ್ರ್ಯಕ್ಕೆ ಅಡ್ಡಿಯಾಗುವಿರಿ. ಖರೀದಿಯನ್ನು ನೀವು ಬಹಳ ಉತ್ಸಾಹದಿಂದ ಮಾಡುವಿರಿ.

ಕನ್ಯಾ ರಾಶಿ: ಎಲ್ಲೇ ಇದ್ದರೂ ನಿಮ್ಮ ಉದ್ಯಮದ ಮೇಲೆ ಒಂದು ದೃಷ್ಟಿ ಇರಲಿದೆ. ತುಂಬಾ ದಿನಗಳಿಂದ ಮನೆಗೆ ಅಗತ್ಯವಿರುವ ಹೊಸ ವಸ್ತುಗಳ ಖರೀದಿಯನ್ನು ಮಾಡಲಿದ್ದೀರಿ. ಮನೆಯ ಹಿರಿಯರ ವಿರುದ್ಧ ಮಾತನಾಡುವಿರಿ. ಕುಟುಂಬದಲ್ಲಿ ಸಣ್ಣ ಮಟ್ಟಿನ ಕಲಹವೂ ಆದೀತು. ಹಣದ ಒಳಹರಿವು ಸುಗಮವಾಗಿರುತ್ತದೆ. ಒಳ್ಳೆಯ ಸುದ್ದಿ ಆಕಸ್ಮಿಕವಾಗಿ ಸಿಗುತ್ತದೆ ಮತ್ತು ಕುಟುಂಬದಲ್ಲಿ ಸಂತೋಷವಿರಲಿದೆ. ಶುಭಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಿಮಗೆ ಅವಕಾಶ ಸಿಗುತ್ತದೆ ಮತ್ತು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಸಾಧ್ಯವಾಗುತ್ತದೆ. ಸಂಗಾತಿಯ ಸೌಂದರ್ಯಕ್ಕೆ ಮರುಳಾಗಿ ಹೋಗುವಿರಿ. ವಕೀಲ ವೃತ್ತಿಯಲ್ಲಿ ಇರುವವರಿಗೆ ಜಯವು ಸಿಗಲಿದೆ. ಯಾರದೋ ಮೇಲಿನ ಸಿಟ್ಟನ್ನು ಮನೆಮಂದಿಯ ಮೇಲೆ ತೋರಿಸುವುದು ಸರಿಯಾಗದು. ನೂತನ ಗೃಹ ನಿರ್ಮಾಣದ ಬಗ್ಗೆ ನುರಿತವರ ಜೊತೆ ಚರ್ಚೆಯನ್ನು ನಡೆಸುವು ಯೋಚನೆ ಇರುವುದು. ವಾಹನ ಓಡಾಟದಿಂದ ನಿಮಗೆ ಸುಖವಿರದು. ಕರ್ತವ್ಯಗಳನ್ನು ದೃಢ ಮನಸ್ಸಿನಿಂದ ಮಾಡುವಿರಿ. ಒಡಹುಟ್ಟಿದವರ ಬಗ್ಗೆ ಅಸೂಯೆ ತೋರಿಸುವಿರಿ.

ತುಲಾ ರಾಶಿ: ಸಮಯಕ್ಕಿಂತ ಮೊದಲೇ ಯೋಜನೆಯನ್ನು ಪೂರ್ಣ ಮಾಡಿ ಪ್ರಶಂಸೆ ಪಡೆಯುವಿರಿ. ಇಂದು ನಿಮ್ಮ ಸರ್ಕಾರದ ಕಾರ್ಯಗಳು ನಿಧಾನವಾಗುವುದು. ಮನಸ್ಸು ಅತಿಯಾದ ಗೊಂದಲದಿಂದ ಇರುವುದು. ಕಾರ್ಯದ ನಿಮಿತ್ತ ವ್ಯರ್ಥ ಓಡಾಟವನ್ನು ಮಾಡುವಿರಿ. ಸಾಕಷ್ಟು ತಾಳ್ಮೆ ಮತ್ತು ತಿಳುವಳಿಕೆಯನ್ನು ಹೊಂದಿರುವುದು ಮುಖ್ಯ. ಜೊತೆಗೆ ನೀವು ದಿನವಿಡೀ ತುಂಬಾ ಕಷ್ಟಪಟ್ಟು ಕೆಲಸ ಮಾಡಬೇಕಾಗುತ್ತದೆ. ಪ್ರಮುಖ ನಿರ್ಧಾರಗಳನ್ನು ಪರಿಗಣಿಸುವ ಸಮಯ. ನಿಮ್ಮ ಪರಿಸ್ಥಿತಿ ಮತ್ತು ಕಾರ್ಯಗಳನ್ನು ನೀವು ಕೂಲಂಕಷವಾಗಿ ಪರಿಶೀಲಿಸಬೇಕಾಗುತ್ತದೆ. ಅತಿಯಾದ ಸಿಹಿಯನ್ನು ತಿಂದು ದೇಹವನ್ನು ಕೆಡಿಸಿಕೊಳ್ಳಬೇಡಿ. ವ್ಯಾಪಾರದಲ್ಲಿ ತೊಡಕು ಬರಬಹುದು. ಆದರೆ ಇದನ್ನು ನಿವಾರಿಸಿಕೊಳ್ಳುವ ತಂತ್ರವು ನಿಮಗೆ ಅನುಭವದಿಂದ ಸಿದ್ಧವಾಗಿರುವುದು. ನಿಮ್ಮ ನಿಷ್ಠೆಯನ್ನು ಬದಲಾಯಿಸುವುದು ಬೇಡ. ನಿಮ್ಮ ಇಂದಿನ ಸ್ಥಿತಿಯು ಅಭಿವೃದ್ದಿಗೆ ಹಲವಾರು ದಾರಿಗಳನ್ನು ಹುಡುಕುವಿರಿ. ತಪ್ಪಿದ ಯೋಚನೆಯಿಂದ ನೀವು ಸರಿಯಾಗಬೇಕಾಗುವುದು. ನಿಮಗಿರುವ ಚಂಚಲ ಮನಸ್ಸಿನಿಂದ ನಕಾರಾತ್ಮಕ ಯೋಚನೆ ಬರುವುದು.

ವೃಶ್ಚಿಕ ರಾಶಿ: ನಿಮಗೆ ಮಾನಸಿಕ ಹಿಂಸೆಯನ್ನು ಮೇಲಧಿಕಾರಿಗಳು ನೀಡುವರು. ಆರೋಗ್ಯಕ್ಕೆ ಸಂಬಂಧಿಸಿದಂತೆ ವೈದ್ಯರ ಸಲಹೆಗಳನ್ನು ತಿರಸ್ಕರಿಸಬೇಡಿ. ಇಂದು ನಿಮ್ಮ ಪ್ರತಿಭೆಯ ಪ್ರದರ್ಶನವಾಗಲಿದೆ‌. ಸ್ನೇಹಿತರ ಜೊತೆ ಹೆಚ್ಚು ಕಾಲವನ್ನು ಕಳೆದು ನೋವನ್ನು ಹಂಚಿಕೊಳ್ಳುವರು. ನೀವು ಕೆಲವು ಹಳೆಯ ವಿವಾದದಿಂದ ಪರಿಹಾರ ಪಡೆಯಬಹುದು. ಇದರಿಂದಾಗಿ ಕುಟುಂಬದ ವಾತಾವರಣವು ಹಗುರ ಮತ್ತು ಶಾಂತಿಯುತವಾಗಿರುತ್ತದೆ. ಮಕ್ಕಳಿಗೆ ಹೊಸ ಅಧ್ಯಯನ ಅಥವಾ ಪ್ರಯಾಣಕ್ಕೆ ಸಂಬಂಧಿಸಿದ ಕೆಲವು ಅವಕಾಶಗಳು ಸಿಗಬಹುದು. ಆರ್ಥಿಕಸ್ಥಿತಿಯು ಸುಧಾರಿಸುವುದು. ನಿಮ್ಮ ನೆಚ್ಚಿನ ವ್ಯಕ್ತಿಯನ್ನು ಭೇಟಿ ಮಾಡುವಿರಿ. ಸೋಮಾರಿತನ ಬಿಟ್ಟು ಕೆಲಸಕ್ಕೆ ಪ್ರಯತ್ನಿಸಿ. ನಿಮ್ಮವರ ಆರೋಗ್ಯದ ವ್ಯತ್ಯಾಸದಿಂದ ಹಣವನ್ನು ಖರ್ಚು ಮಾಡಬೇಕಾಗುವುದು. ತೊಂದರೆಗೆ ಸಿಕ್ಕಿಕೊಳ್ಳಲು ನೀವೇ ಕಾರಣ. ಇದೇ ನಿಮಗೆ ಮುಳುವಾಗಬಹುದು. ಇನ್ನೊಬ್ಬರಿಗೆ ನಿಮ್ಮನ್ನು ಹೋಲಿಸಿಕೊಂಡು ಬೇಸರಿಸುವಿರಿ. ಕುಟುಂಬದ ಬಗ್ಗೆ ನಿಮಗೆ ಅಭಿಮಾನದ ಕೊರತೆ ಕಾಣುವುದು. ಸಾಲಗಾರರಿಂದ ಹಿಂಸೆ ಹೆಚ್ಚಾಗುವುದು.

ಧನು ರಾಶಿ: ಸಿಗಬೇಕಾದ ಕಾರ್ಯ ಸಿಗದೇ ಬೇಸರ ಆಗಲಿದೆ. ನಿಮಗಾದ ವಂಚನೆಗೆ ನ್ಯಾಯಯುತವಾಗಿ ಹೋಗುವಿರಿ. ವ್ಯಾಪಾರದಲ್ಲಿ ಅಧಿಕಲಾಭವನ್ನು ಗಳಿಸಲಿದ್ದೀರಿ. ಸರ್ಕಾರಿ ಅಧಿಕಾರಿಗಳು ಸಂಕಷ್ಟದಲ್ಲಿ ಸಿಲುಕಿಕೊಳ್ಳುವರು. ನಿಮಗೆ ಸಂಬಂಧವೇ ಇಲ್ಲದ ವಿಷಯಗಳಲ್ಲಿ ಭಾಗಿಯಾಗುವ ಬದಲು, ನಿಮ್ಮ ಕೆಲಸವನ್ನು ಮಾಡುತ್ತಲೇ ಇರಿ, ಇಲ್ಲದಿದ್ದರೆ ಅದು ನಿಮ್ಮ ಘನತೆಯ ಮೇಲೆ ಕೆಟ್ಟ ಪರಿಣಾಮ ಬೀರಬಹುದು. ಹಣದ ವಿಷಯಗಳಲ್ಲಿ ಯಾರನ್ನೂ ನಂಬಬೇಡಿ, ಕೆಲಸದಲ್ಲಿ ನಿರ್ಲಕ್ಷ್ಯ ಮತ್ತು ಸೋಮಾರಿತನವು ಸಮಸ್ಯೆಗಳನ್ನು ಉಂಟುಮಾಡಬಹುದು. ಯಾವುದೂ ನಿಮ್ಮ ಆಲೋಚನೆಗೆ ಅನುಸಾರವಾಗಿ ನಡೆಯುತ್ತಿಲ್ಲವೆಂಬ ಬೇಸರವೂ ಆಗಬಹುದು. ಬೇರೆಯವರಿಗೆ ನಿಮ್ಮ ಬಗ್ಗೆ ನಕಾರಾತ್ಮಕ ಭಾವವು ಇರಬಹುದು. ಗುರಿಯನ್ನು ಬದಲಿಸದೇ ಮುನ್ನಡೆಯುವಿರಿ. ಮಕ್ಕಳಿಗೆ ಪ್ರೋತ್ಸಾಹವನ್ನು ಕೊಡುವಿರಿ. ನಿಮ್ಮ ಉಳಿಕೆಯ ಹಣದ ಬಗ್ಗೆ ಎಚ್ಚರವಿರಲಿ. ಆಪ್ತರ ಬಗ್ಗೆ ಇರುವ ನಕಾರತ್ಮಕ ಭಾವವನ್ನು ನೀವು ಅವರಿಗೆ ಹೇಳುವಿರಿ. ಭೂಮಿಯ ಉತ್ಪನ್ನದಿಂದ ಲಾಭವು ಸಿಗುವುದು.

ಮಕರ ರಾಶಿ: ಬಂಧುಗಳ ನಡುವೆ ಉಂಟಾದ ಘರ್ಷಣೆಯಿಂದ ಉದ್ಯೋಗದಲ್ಲಿ ತೊಂದರೆ. ಇಂದು ನೀವು ಮಾಡಿದ ಪ್ರಯಾಣದಿಂದ ಸುಖವಿಲ್ಲ‌. ಹತಾಶೆಯಿಂದ ಹೊರಬಂದು ಒಳ್ಳೆಯ ಕಾರ್ಯದವನ್ನು ಮಾಡುವತ್ತ ಗಮನಹರಿಸಿ. ನಕಾರಾತ್ಮಕ ಭಾವನೆಗಳಿಗೆ ದಾರಿ ಮಾಡಿ ಕೊಡಬೇಡಿ. ಯಶಸ್ಸಿನ ಜೊತೆಗೆ ಆರ್ಥಿಕ ಲಾಭವೂ ಇರುತ್ತದೆ. ಗೌರವ ಮತ್ತು ಪ್ರಭಾವ ಹೆಚ್ಚಾಗುತ್ತದೆ. ಉತ್ಸಾಹ ಉಳಿಯುತ್ತದೆ ಮತ್ತು ದೊಡ್ಡ ಯಶಸ್ಸಿನ ಲಕ್ಷಣಗಳು ಕಂಡುಬರುತ್ತವೆ. ಹೊಸ ಆದಾಯದ ಮೂಲಗಳು ಅಭಿವೃದ್ಧಿಗೊಳ್ಳುತ್ತವೆ ಮತ್ತು ಬಾಕಿ ಇರುವ ಹಣವನ್ನು ಪಡೆಯಬಹುದು. ಕುಟುಂಬದವರೊಂದಿಗೆ ನಗುತ್ತಾ ಇರಿ. ಕಾರ್ಯದ ಒತ್ತಡವು ಇಂದು ಅಧಿಕವಾಗಿರಲಿದೆ. ಆರೋಗ್ಯವನ್ನೂ ಗಮನಿಸಿಕೊಳ್ಳಿ. ನಿಮ್ಮ ಯೋಜನೆಯು ಪೂರ್ಣ ವ್ಯತ್ಯಾಸವಾದ ಕಾರಣ ಮನೆಯಲ್ಲಿ ಕಲಹವಾಡುವಿರಿ. ಸೂಕ್ತ ಪರಿಹಾರದ ಕಡೆ ಗಮನವಿರಲಿ. ನಿವೃತ್ತಿಯ ಅಂಚಿನಲ್ಲಿದ್ದು ನಡತೆಯನ್ನು ಸರಿಯಾಗಿ ಇಟ್ಟುಕೊಳ್ಳಿ. ಮನೆಮಂದಿಯವರ ಜೊತೆ ಸಿಟ್ಟಗೊಂಡರೆ ನಿಮಗೇ ತೊಂದರೆಯಾದೀತು. ನಿಮ್ಮ ಇಂದಿನ ಕಾರ್ಯದಿಂದ ಕಛೇರಿಯಲ್ಲಿ ನಿರೀಕ್ಷೆ ಮೀರಿ ಪ್ರಶಂಸೆ ಸಿಗುವುದು.

ಕುಂಭ ರಾಶಿ: ನಿಮ್ಮ ಯಶಸ್ಸು ವಿವಾದಕ್ಕೆ ಸಿಕ್ಕಿಕೊಳ್ಳಲಿದೆ. ನಿಮ್ಮ ಯೋಜನೆಗೆ ಇಂದು ಎಲ್ಲವೂ ವಿರುದ್ಧವಾಗಬಹುದು. ಯಾರ ಮೇಲೂ ದ್ವೇಷವನ್ನು ಸಾಧಿಸುವುದು ಬೇಡ. ಮನಸ್ಸು ಕೆಡುತ್ತದೆಯಷ್ಟೇ. ಆಸ್ತಿ ಖರೀದಿ ಮತ್ತು ಮಾರಾಟಕ್ಕೆ ಸಂಬಂಧಿಸಿದ ಕೆಲವು ಯೋಜನೆಗಳು ಸಹ ಮುಂದುವರಿಯುತ್ತವೆ. ಸ್ವಲ್ಪ ಸಮಯ ಒಳ್ಳೆಯ ಮತ್ತು ಜ್ಞಾನವುಳ್ಳ ಪುಸ್ತಕಗಳನ್ನು ಓದುವುದರಲ್ಲಿಯೂ ಕಳೆಯಿರಿ. ಅಜಾಗರೂಕತೆಯು ನಷ್ಟಕ್ಕೆ ಕಾರಣವಾಗಬಹುದು. ಯಾರೊಂದಿಗೂ ಪ್ರಮುಖ ವಾದಗಳಲ್ಲಿ ತೊಡಗಬೇಡಿ. ಸಂಗಾತಿಯ ಜೊತೆಗಿರುವ ಮನಸ್ತಾಪ ದೂರಾಗುವುದು. ನಿಮ್ಮ ಸಲಹೆಯನ್ನು ಕುಟುಂಬವು ತಿರಸ್ಕರಿಸಬಹುದು. ಇಷ್ಟವಾದ ವಸ್ತುಗಳನ್ನು ಖರೀದಿಸುವಿರಿ. ಉದ್ಯೋಗದ ಕಾರಣಕ್ಕೆ ದೂರಪ್ರಯಾಣವನ್ನು ಮಾಡುವಿರಿ. ಬಂಧುಗಳ ಒಡನಾಟ ನಿಮಗೆ ಸಿಗಲಿದೆ. ಸ್ನೇಹಿತರ ಜಗಳದಲ್ಲಿ ತಲೆ ಹಾಕಿ ಅಪಾಯಕ್ಕೆ ಸಿಕ್ಕಿಕೊಳ್ಳುವಿರಿ. ಹೊಸ ವಿಷಯಗಳತ್ತ ಉತ್ಸಾಹವೇ ಇರಲಿದ್ದು, ಇದು ತಾತ್ಕಾಲಿಕ ಅಷ್ಟೇ. ನೀವು ಖರೀದಿಸುವ ಭೂಮಿಯ ದಾಖಲೆಯನ್ನು ಸಮಾಧಾನಚಿತ್ತದಿಂದ ಕೂಲಂಕಷವಾಗಿ ಪರಿಶೀಲಿಸಿ.

ಮೀನ ರಾಶಿ: ಕಾರ್ಯಕ್ಷೇತ್ರದಲ್ಲಿ ಕಿರಿಕಿರಿ.‌ ಕೋಪದಿಂದ ಅಸಂಬದ್ಧ ಮಾತುಗಳನ್ನು ಆಡುವಿರಿ. ನಿಮಗೆ ಯಾರಾದರೂ ಆಸರೆ ಬೇಕೆನಿಸಬಹುದು. ನಿಮ್ಮ ಬುದ್ಧಿ, ಮನಸ್ಸುಗಳಿಗೆ ಕೆಲಸವನ್ನು ಕೊಡಿ. ಸಂಗಾತಿಯ ಜೊತೆ ವಿವಾದವಾಗುವುದು. ಯಾವುದೇ ವಿವಾದವನ್ನು ಎಳೆದುಕೊಳ್ಳಬೇಡಿ. ಗುರಿಯ ಮೇಲೆ ಮಾತ್ರ ಗಮನಹರಿಸುವ ಸಮಯ. ಅತಿಯಾದ ಖರ್ಚು ಆರ್ಥಿಕ ಬಿಕ್ಕಟ್ಟಿಗೆ ಕಾರಣವಾಗಬಹುದು. ಸ್ವಲ್ಪ ಬುದ್ದಿವಂತರಾಗಿರಿ. ಕೋಪಗೊಳ್ಳುವುದರಿಂದ ನೀವು ಈಗಾಗಲೇ ಮಾಡಿರುವ ಯಾವುದೇ ಕೆಲಸವು ಹಾಳಾಗಬಹುದು. ಆತಂಕ ಮತ್ತು ಉದ್ವೇಗ ಇರುತ್ತದೆ. ಪ್ರವಾಸದಿಂದ ಉತ್ಸಾಹವು ಹೆಚ್ಚಾಗುವುದು. ದುಷ್ಟ ಜನರಿಂದ ದೂರವಿರಿ. ದಾಂಪತ್ಯದ ವಾಗ್ವಾದವು ಅತಿರೇಕಕ್ಕೆ ಹೋಗಬಹುದು. ಮಿತ್ರರು ನಿಮ್ಮಆಸಕ್ತಿಯ ಕ್ಷೇತ್ರವನ್ನು ಬದಲಿಸಬಹುದು. ಇಂದಿನ ಕಾರ್ಯವನ್ನು ಮುಂದೂಡುವುದು ಬೇಡ. ನಿಮ್ಮ ಗುಣಗಳನ್ನು ಇತರರು ಆಡಿಕೊಳ್ಳಬಹುದು. ಪೋಷಕರನ್ನು ಕಡೆಗಣಿಸಿದ್ದು ನಿಮಗೆ ಪಾಪಪ್ರಜ್ಞೆ ಕಾಡಬಹುದು. ಕುಟುಂಬದಲ್ಲಿ ಸಂತಸದ ವಾತಾವರಣವು ಇರುವಂತೆ ಮಾಡುವಿರಿ.

-ಲೋಹಿತ ಹೆಬ್ಬಾರ್ – 8762924271 (what’s app only)

ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ
ಆದಂಪುರ ಏರ್​ಬೇಸ್​​ ಭೇಟಿ ಬಳಿಕ ಮೋದಿ ಮಾತು: ಇಲ್ಲಿದೆ ನೇರಪ್ರಸಾರ
ಆದಂಪುರ ಏರ್​ಬೇಸ್​​ ಭೇಟಿ ಬಳಿಕ ಮೋದಿ ಮಾತು: ಇಲ್ಲಿದೆ ನೇರಪ್ರಸಾರ
ಇಡೀ ವಿಶ್ವವೇ ಭಾರತೀಯ ಸೈನಿಕರ ಕಾರ್ಯವನ್ನು ಕೊಂಡಾಡುತ್ತಿದೆ: ಶಾಸಕ
ಇಡೀ ವಿಶ್ವವೇ ಭಾರತೀಯ ಸೈನಿಕರ ಕಾರ್ಯವನ್ನು ಕೊಂಡಾಡುತ್ತಿದೆ: ಶಾಸಕ
ನಾಗರಿಕರ ಹೆಸರಿನಲ್ಲಿ ರಾಜ್ಯಾದ್ಯಂತ ತಿರಂಗಾ ಯಾತ್ರೆ: ಆರ್ ಅಶೋಕ್
ನಾಗರಿಕರ ಹೆಸರಿನಲ್ಲಿ ರಾಜ್ಯಾದ್ಯಂತ ತಿರಂಗಾ ಯಾತ್ರೆ: ಆರ್ ಅಶೋಕ್
ನಮ್ಮ ಸರ್ಕಾರದ ಸಾಧನೆಗಳ ಬಗ್ಗೆ ಬಿಜೆಪಿ ಮಾತಾಡಲ್ಲ: ಶಿವಲಿಂಗೇಗೌಡ
ನಮ್ಮ ಸರ್ಕಾರದ ಸಾಧನೆಗಳ ಬಗ್ಗೆ ಬಿಜೆಪಿ ಮಾತಾಡಲ್ಲ: ಶಿವಲಿಂಗೇಗೌಡ
ಶೋಪಿಯಾನ್​ನಲ್ಲಿ ಲಷ್ಕರ್​​ನ ಮೋಸ್ಟ್ ವಾಂಟೆಡ್ ಉಗ್ರ ಸೇರಿ ಮೂವರ ಎನ್​ಕೌಂಟರ್
ಶೋಪಿಯಾನ್​ನಲ್ಲಿ ಲಷ್ಕರ್​​ನ ಮೋಸ್ಟ್ ವಾಂಟೆಡ್ ಉಗ್ರ ಸೇರಿ ಮೂವರ ಎನ್​ಕೌಂಟರ್
ಎಲ್ಲ ಸಂದೇಹಗಳನ್ನು ಪ್ರಧಾನಿ ಮೋದಿ ದೂರ ಮಾಡಿದ್ದಾರೆ: ವಿಜಯೇಂದ್ರ
ಎಲ್ಲ ಸಂದೇಹಗಳನ್ನು ಪ್ರಧಾನಿ ಮೋದಿ ದೂರ ಮಾಡಿದ್ದಾರೆ: ವಿಜಯೇಂದ್ರ
ನಿಮಗೆ ಇಂಗ್ಲಿಷ್ ಬರದಿದ್ದರೆ ಸುಮ್ಮನಿರಿ, ಪಾಕ್​ ರಕ್ಷಣಾ ಸಚಿವಗೆ ತರಾಟೆ
ನಿಮಗೆ ಇಂಗ್ಲಿಷ್ ಬರದಿದ್ದರೆ ಸುಮ್ಮನಿರಿ, ಪಾಕ್​ ರಕ್ಷಣಾ ಸಚಿವಗೆ ತರಾಟೆ
ರಾಜ್ಯ ಬಿಜೆಪಿ ನಾಯಕತ್ವದಿಂದ ಅಂತರ ಕಾಯ್ದುಕೊಂಡಿರುವ ಸಿದ್ದೇಶ್ವರ
ರಾಜ್ಯ ಬಿಜೆಪಿ ನಾಯಕತ್ವದಿಂದ ಅಂತರ ಕಾಯ್ದುಕೊಂಡಿರುವ ಸಿದ್ದೇಶ್ವರ