AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಂಬಾ ದಿನಗಳಿಂದ ಮನೆಗೆ ಅಗತ್ಯವಿರುವ ಹೊಸ ವಸ್ತುಗಳನ್ನು ಖರೀದಿ ಮಾಡುವಿರಿ

ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ವಸಂತ ಋತುವಿನ ವೈಶಾಖ ಮಾಸ ಶುಕ್ಲ ಪಕ್ಷದ ದಶಮೀ ತಿಥಿ, ಬುಧವಾರ ಗುರಿಯ ಮೇಲೆ ಗಮನ, ನಿಧಾನ ನಡೆ, ಅತಿಯಾದ ವಿಶ್ರಾಂತಿ ಇವೆಲ್ಲ ಇರಲಿದೆ. ಇಂದಿನ ದಿನ ಭವಿಷ್ಯದಲ್ಲಿ ಯಾವ ರಾಶಿಗೆ ಯಾವ ಫಲ ಎನ್ನುವುದನ್ನು ತಿಳಿದುಕೊಳ್ಳಿ.

ತುಂಬಾ ದಿನಗಳಿಂದ ಮನೆಗೆ ಅಗತ್ಯವಿರುವ ಹೊಸ ವಸ್ತುಗಳನ್ನು ಖರೀದಿ ಮಾಡುವಿರಿ
ಜ್ಯೋತಿಷ್ಯ
Follow us
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ವಿವೇಕ ಬಿರಾದಾರ

Updated on: May 07, 2025 | 1:23 AM

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು: ವಸಂತ, ಸೌರ ಮಾಸ: ಮೇಷ ಮಾಸ, ಮಹಾನಕ್ಷತ್ರ: ಭರಣೀ, ಮಾಸ: ವೈಶಾಖ, ಪಕ್ಷ: ಶುಕ್ಲ, ವಾರ: ಬುಧ, ತಿಥಿ: ದಶಮೀ ನಿತ್ಯನಕ್ಷತ್ರ: ಪೂರ್ವಾಫಲ್ಗುಣೀ, ಯೋಗ : ಧ್ರುವ, ಕರಣ: ಕೌಲವ, ಸೂರ್ಯೋದಯ – 06 : 08 am, ಸೂರ್ಯಾಸ್ತ – 06 : 49 pm, ಇಂದಿನ ಶುಭಾಶುಭಕಾಲ: ರಾಹು ಕಾಲ 12:29 – 14:04, ಯಮಘಂಡ ಕಾಲ 07:44 – 09:19, ಗುಳಿಕ ಕಾಲ 10:54 – 12:29

ಮೇಷ ರಾಶಿ: ಆದಾಯಕ್ಕೆ ಸಂಬಂಧಿಸಿದಂತೆ ಪಾಲುದಾರಿಕೆಯಲ್ಲಿ ಭಿನ್ನಾಭಿಪ್ರಾಯ ಬರುವುದು. ಇಂದು ನಿಮ್ಮ ಜೀವನ ಬಹಳ ಸುಂದರ ಎನಿಸುವುದು. ತೆರೆದರೆ ಬೆಳಕು, ತೆರೆಯದಿದ್ದರೆ ಕತ್ತಲು ಇರುತ್ತದೆ ಎನ್ನುವುದನ್ನು ಅರಿತುಕೊಳ್ಳಿ. ಸಂಗಾತಿಯ ಆಯ್ಕೆಯನ್ನು ನೀವೇ ಮಾಡಿ. ಫಲಾಪೇಕ್ಷೆ ಇಲ್ಲದೇ ಇಂದು ಕಾರ್ಯ ಮಾಡುವಿರಿ. ಸಾಲದಿಂದ ಮುಕ್ತವಾಗುವ ಲಕ್ಷಣಗಳು ಕಂಡುಬರುತ್ತವೆ ಮತ್ತು ಪ್ರಯತ್ನಗಳು ಯಶಸ್ವಿಯಾಗುತ್ತವೆ. ಸಂಜೆ ಸ್ನೇಹಿತರೊಂದಿಗೆ ಸಮಯ ಕಳೆಯಬಹುದು. ಕೆಲಸದಲ್ಲಿ ವೇಗ ಇರುತ್ತದೆ ಮತ್ತು ಯೋಜನೆಗಳು ಯಶಸ್ವಿಯಾಗುತ್ತವೆ. ನಿಮ್ಮ ವಿರೋಧಿಗಳನ್ನು ನಿಮ್ಮ ಕಡೆಗೆ ಸೆಳೆಯಲು ನಿಮಗೆ ಸಾಧ್ಯವಾಗುತ್ತದೆ. ಬದಲಾವಣೆಯೇ ಶಾಶ್ವತ ಎನ್ನುವ ವಾಕ್ಯವನ್ನು ಸ್ಮರಿಸುತ್ತ ಮುಂದಡಿಯಿಡಿ. ಗೊತ್ತಿಲ್ಲದ ವಿಚಾರದ ಬಗ್ಗೆ ಮಾತನಾಡಿ ಅವಮಾನಕ್ಕೆ ಒಳಗಾಗುವಿರಿ. ನೆಮ್ಮದಿ ನಿಮ್ಮೆದುರು ಇರಲಿದೆ. ದೇಹಕ್ಕೆ ವಿಶ್ರಾಂತಿಯ ಅವಶ್ಯಕತೆ ಇದ್ದರೂ ಸಮಯವು ಮಾತ್ರ ಸಿಗದೇಹೋದೀತು. ಹಿತಶತ್ರುಗಳಿಂದ ಸಣ್ಣ ಆಪತ್ತು ಬರಬಹುದು. ಆತುರದಲ್ಲಿ ಯಾವ ನಿರ್ಧಾರವನ್ನೂ ಯೋಚಿಸದೇ ಮಾಡಬೇಡಿ.

ವೃಷಭ ರಾಶಿ: ಶಿಸ್ತಿನಿಂದ ಇರಲು ಬಹಳ ಪ್ರಯತ್ನ ಮಾಡುವಿರಿ. ನಿಮ್ಮ ಗಟ್ಟಿಯಾದ ಸಂಕಲ್ಪವು ಯಶಸ್ಸಿನ ಗುಟ್ಟೂ ಆಗುವುದು. ಹಣವನ್ನು ಗಳಿಸುವ ಆಸೆಯು ತೀರ್ವವಾಗಿದ್ದರೂ ಸಫಲವಾಗುವುದಿಲ್ಲ‌. ಮಾನಸಿಕ ಶಾಂತಿಯನ್ನು ಅನುಭವಿಸುವಿರಿ. ನೀವು ನಿಷ್ಣಾತರಂತೆ ತೋರಿಸಿಕೊಳ್ಳುವಿರಿ. ಖರ್ಚುಗಳ ಮೇಲೆ ನಿಯಂತ್ರಣ, ಸಮಸ್ಯೆಗಳಿಗೆ ಪರಿಹಾರ ಸಾಧ್ಯ. ಕೆಲಸ ವೇಗವನ್ನು ಪಡೆದ ಕಾರಣ ಆದಾಯವು ಹೆಚ್ಚಾಗುತ್ತದೆ. ಸಂಗಾತಿಯು ನಿಮ್ಮ ಮೇಲೆ ಬೇಸರಗೊಂಡಾರು. ವೃತ್ತಿಯಲ್ಲಿ ಕಿರಿಕಿರಿ ಅಧಿಕವಾಗಬಹುದು. ಮೆಚ್ಚುಗೆಯ ಮಾತುಗಳಿಂದ ದೂರವಾದ ಸಂಬಂಧವು ಹತ್ತಿರವಾಯಬಹುದು. ಸರಳ ಮಾರ್ಗದಿಂದ ಕೆಲಸವನ್ನು ಪೂರ್ಣ ಮಾಡಿಕೊಳ್ಳಿ. ಆರೋಗ್ಯದ ಬಗ್ಗೆ ಆತಂಕ ಬೇಡ. ನಿಮಗೆ ಸಿಕ್ಕ ಪ್ರಶಂಸೆಯಿಂದ ಸಹೋದ್ಯೋಗಿಗಳು ತೊಂದರೆಯನ್ನು ಕೊಡಬಹುದು. ವಿನೀತಭಾವವು ನಿಮ್ಮನ್ನು ಇಷ್ಟಪಡುವಂತೆ ಮಾಡಬಹುದು. ಉದ್ಯೋಗದಲ್ಲಿ ನೀವು ಪ್ರಗತಿಯನ್ನು ಸಾಧಿಸುವಿರಿ.

ಮಿಥುನ ರಾಶಿ: ಆಕರ್ಷಣೆಯಿಂದ ಪ್ರೇಮ ಆರಂಭವಾಗಬಹುದು. ಅಪರೂಪಕ್ಕೆ ಸಿಕ್ಕ ಸ್ನೇಹಿತರು ನಿಮ್ಮ ಬಳಿ ಹಣವನ್ನು ಖಾಲಿ‌ಮಾಡಿಸಬಹುದು. ದಾಂಪತ್ಯಜೀವನವು ಜೀವನ್ಮರಣದ ಮಧ್ಯದಲ್ಲಿ ಒದ್ದಾಗುತ್ತಿದ್ದು ಬದುಕಿಸಿಕೊಳ್ಳಿ. ಪ್ರಸಿದ್ಧಿಯ ಆಸೆಯೂ ನಿಮಗೆ ಬರಲಿದೆ. ಹೊಸ ಅವಕಾಶಗಳನ್ನು ಅನ್ವೇಷಣೆ ಮಾಡಲು ನಿಮಗೆ ಧೈರ್ಯ ಮತ್ತು ತಾಳ್ಮೆ ಬೇಕಾಗುತ್ತದೆ. ಹಳೆಯ ಯೋಜನೆಯನ್ನು ಪುನರಾರಂಭಿಸಲು ಅವಕಾಶ ಸಿಗುತ್ತದೆ. ಸರಿಯಾದ ಸಮಯ ಮತ್ತು ಸರಿಯಾದ ನಿರ್ಧಾರಕ್ಕಾಗಿ ಕಾಯಬೇಕು. ನಿಮ್ಮ ನ್ಯೂನತೆಗಳನ್ನು ಇನ್ನೊಬ್ಬರ ಬಾಯಿಗೆ ಸಿಕ್ಕ ರಸಗವಳದಂತೆ ಚಪ್ಪರಿಸಿ ಸೇವಿಸುತ್ತಿರುತ್ತಾರೆ. ಹೊಸ ವಸ್ತುಗಳನ್ನು ಹಾಳುಮಾಡಿಕೊಳ್ಳುವಿರಿ. ದಾಂಪತ್ಯದಲ್ಲಿನ ವಿರಸದಿಂದ ಮಾನಸಿಕ ಆರೋಗ್ಯವನ್ನು ಕೆಡಿಸುವುದು. ಉದ್ಯೋಗವನ್ನು ಬದಲಿಸಿದ ಕಾರಣ ಸಮಯವು ಓಡಾಟದಲ್ಲಿ ವ್ಯರ್ಥವಾಗಬಹುದು. ಸಾಮಾಜಿಕ ಕಾರ್ಯಕ್ಕೆ ನಿಮಗೆ ಪ್ರಶಂಸೆಯು ಸಿಗುವುದು. ಕಛೇರಿಯಲ್ಲಿ ಕೆಲವರ ವರ್ತನೆಯು ಬದಲಾದಂತೆ ತೋರುವುದು.

ಕರ್ಕಾಟಕ ರಾಶಿ: ನಿಮ್ಮ ನಡೆ ಇಂದು ನಿಧಾನವಾಗಲಿದೆ. ನಿಮ್ಮ ಜೊತೆ ಕಲಹಕ್ಕೆ ಸಹೋದ್ಯೋಗಿಗಳು ಕಾಯುವರು. ಇಂದು ಅನವಶ್ಯಕ ಖರ್ಚಿನ ಕಡೆ ಗಮನ ಬೇಕು. ಹೆಚ್ಚು ಕೋಪವನ್ನು ತೋರಿಸಲಿದ್ದೀರಿ‌. ಯಾರ ಒತ್ತಾಯಕ್ಕೋ ಮಣಿದು ನಿಮ್ಮ ನಿರ್ಧಾರಗಳನ್ನು ಬದಲಿಸಿಕೊಳ್ಳಬೇಡಿ. ಈ ದಿನ ಒಳ್ಳೆಯ ಸುದ್ದಿಗಳೊಂದಿಗೆ ಪ್ರಾರಂಭವಾಗುತ್ತದೆ. ನಿಮ್ಮ ಎಲ್ಲಾ ಚಿಂತೆಗಳನ್ನು ಮರೆತು ನೀವು ಸಂತೋಷವಾಗಿರುತ್ತೀರಿ. ಯುವಕರು ತಮ್ಮ ವೃತ್ತಿಜೀವನದ ಬಗ್ಗೆ ತುಂಬಾ ಗಂಭೀರವಾಗಿರುತ್ತಾರೆ. ಸಣ್ಣ ಕೆಟ್ಟ ವಿಷಯಗಳಿಗೆ ಗಮನ ಕೊಡಬೇಡಿ. ಹೂಡಿಕೆಯ ಬಗ್ಗೆ ನಿಮಗೆ ಸರಿಯಾದ ಮಾಹಿತಿಯ ಕೊರತೆ ಇರುವುದು. ಇಂದು ನಿಮ್ಮ ನಕಾರಾತ್ಮಕ ಭಾವನೆಗಳು ಹೆಚ್ಚಿರುವುದು. ಉಸಿರಾಟದ ತೊಂದರೆಯನ್ನು ಗಂಭೀರವಾಗಿ ಪರಿಗಣಿಸಬೇಕಾದೀತು. ನಿಮ್ಮ ಸಂತೋಷವನ್ನು ವ್ಯಕ್ತಪಡಿಸುವ ವಿಧಾನವು ವಿಭಿನ್ನವಾಗಿರಲಿದೆ. ಯಾವ ನೋವನ್ನೂ ನಿರ್ಲಕ್ಷಿಸುವುದು ಬೇಡ. ನಿಮ್ಮಿಂದ ಉಪಕಾರವನ್ನು ಕೇಳಿ ಬರಬಹುದು.

ಸಿಂಹ ರಾಶಿ: ಎಂತಹ ವಿಘ್ನಗಳು ಬಂದರೂ ನಿಮ್ಮ ಪ್ರಯತ್ನ ಹಾಗೂ ದೈವ ಬಲವನ್ನು ಬಿಡದೇ ಮುಂದುವರಿಯುವಿರಿ. ಇಂದು ಹಿತಶತ್ರುಗಳಿಂದ ತೊಂದರೆಯಾಗುವುದು. ಹೊಸ ಉದ್ಯೋಗವನ್ನು ಆರಂಭಿಸುವುದಿದ್ದರೆ ಒಳ್ಳೆಯದು. ಹೆಚ್ಚು ಮಾತನಾಡಿ ನಿಮ್ಮನ್ನು ನೀವೇ ಸಣ್ಣವರನ್ನಾಗಿ ಮಾಡಿಕೊಳ್ಳಬೇಡಿ. ಕೆಲಸದ ಹೊರೆ ಹೆಚ್ಚಿರಬಹುದು ಮತ್ತು ಸ್ವಲ್ಪ ಆಲಸ್ಯವಿರಬಹುದು. ನಿಮ್ಮ ಕುಟುಂಬದಿಂದ ನಿಮಗೆ ಬೆಂಬಲ ಸಿಗುತ್ತದೆ. ನಿಮಗೆ ಪ್ರಯಾಣಿಸಲು ಅವಕಾಶ ಸಿಗುತ್ತದೆ. ಮಾನಸಿಕ ಒತ್ತಡವನ್ನು ನಿಯಂತ್ರಿಸುವುದು ಅವಶ್ಯಕ. ಕಾನೂನಿನ ಕೆಲಸಕ್ಕೆ ಸಂಬಂಧಿಸಿದ ವಿವಾದವನ್ನು ಪರಿಹರಿಸಲು ಇದು ಸರಿಯಾದ ಸಮಯ. ಅಸೂಯೆಪಡಲಿದ್ದಾರೆ. ನಿಮ್ಮ ಸೋಲನ್ನು ಪಾಠವಾಗಿ ಸ್ವೀಕರಿಸಿ. ಸಾಧಿಸುವ ಛಲವಿರುವವಗೆ ಯಾವುದೂ ಅಸಾಧ್ಯವಿಲ್ಲವಾಗುತ್ತದೆ. ನಿಮ್ಮನ್ನು ಮೆಚ್ಚಿಸಿ ಕೆಲಸಗಳನ್ನು ಇಂದು ಮಾಡಿಸಿಕೊಳ್ಳುವರು. ಗುರಿಯನ್ನು ಯಾರಾದರೂ ತಪದಪಿಸಬಹಿದಿ. ಇಷ್ಟ ಪಟ್ಟವರನ್ನು ಮದುವೆಯಾಗುವ ಮಕ್ಕಳ ಸ್ವಾತಂತ್ರ್ಯಕ್ಕೆ ಅಡ್ಡಿಯಾಗುವಿರಿ. ಖರೀದಿಯನ್ನು ನೀವು ಬಹಳ ಉತ್ಸಾಹದಿಂದ ಮಾಡುವಿರಿ.

ಕನ್ಯಾ ರಾಶಿ: ಎಲ್ಲೇ ಇದ್ದರೂ ನಿಮ್ಮ ಉದ್ಯಮದ ಮೇಲೆ ಒಂದು ದೃಷ್ಟಿ ಇರಲಿದೆ. ತುಂಬಾ ದಿನಗಳಿಂದ ಮನೆಗೆ ಅಗತ್ಯವಿರುವ ಹೊಸ ವಸ್ತುಗಳ ಖರೀದಿಯನ್ನು ಮಾಡಲಿದ್ದೀರಿ. ಮನೆಯ ಹಿರಿಯರ ವಿರುದ್ಧ ಮಾತನಾಡುವಿರಿ. ಕುಟುಂಬದಲ್ಲಿ ಸಣ್ಣ ಮಟ್ಟಿನ ಕಲಹವೂ ಆದೀತು. ಹಣದ ಒಳಹರಿವು ಸುಗಮವಾಗಿರುತ್ತದೆ. ಒಳ್ಳೆಯ ಸುದ್ದಿ ಆಕಸ್ಮಿಕವಾಗಿ ಸಿಗುತ್ತದೆ ಮತ್ತು ಕುಟುಂಬದಲ್ಲಿ ಸಂತೋಷವಿರಲಿದೆ. ಶುಭಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಿಮಗೆ ಅವಕಾಶ ಸಿಗುತ್ತದೆ ಮತ್ತು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಸಾಧ್ಯವಾಗುತ್ತದೆ. ಸಂಗಾತಿಯ ಸೌಂದರ್ಯಕ್ಕೆ ಮರುಳಾಗಿ ಹೋಗುವಿರಿ. ವಕೀಲ ವೃತ್ತಿಯಲ್ಲಿ ಇರುವವರಿಗೆ ಜಯವು ಸಿಗಲಿದೆ. ಯಾರದೋ ಮೇಲಿನ ಸಿಟ್ಟನ್ನು ಮನೆಮಂದಿಯ ಮೇಲೆ ತೋರಿಸುವುದು ಸರಿಯಾಗದು. ನೂತನ ಗೃಹ ನಿರ್ಮಾಣದ ಬಗ್ಗೆ ನುರಿತವರ ಜೊತೆ ಚರ್ಚೆಯನ್ನು ನಡೆಸುವು ಯೋಚನೆ ಇರುವುದು. ವಾಹನ ಓಡಾಟದಿಂದ ನಿಮಗೆ ಸುಖವಿರದು. ಕರ್ತವ್ಯಗಳನ್ನು ದೃಢ ಮನಸ್ಸಿನಿಂದ ಮಾಡುವಿರಿ. ಒಡಹುಟ್ಟಿದವರ ಬಗ್ಗೆ ಅಸೂಯೆ ತೋರಿಸುವಿರಿ.

ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ನೆಲೆಮಂಗಲ: ಮನೆ ಮುಂದೆ ಕಟ್ಟಿದ್ದ ಹಸುಗಳನ್ನ ಕದ್ದು ಪರಾರಿ, ರೈತ ಕಂಗಾಲು
ನೆಲೆಮಂಗಲ: ಮನೆ ಮುಂದೆ ಕಟ್ಟಿದ್ದ ಹಸುಗಳನ್ನ ಕದ್ದು ಪರಾರಿ, ರೈತ ಕಂಗಾಲು
ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್