AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮಯಕ್ಕಿಂತ ಮೊದಲೇ ಯೋಜನೆಯನ್ನು ಪೂರ್ಣ ಮಾಡಿ ಪ್ರಶಂಸೆ ಪಡೆಯುವಿರಿ

ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ವಸಂತ ಋತುವಿನ ವೈಶಾಖ ಮಾಸ ಶುಕ್ಲ ಪಕ್ಷದ ದಶಮೀ ತಿಥಿ, ಬುಧವಾರ ಗುರಿಯ ಮೇಲೆ ಗಮನ, ನಿಧಾನ ನಡೆ, ಅತಿಯಾದ ವಿಶ್ರಾಂತಿ ಇವೆಲ್ಲ ಇರಲಿದೆ. ಇಂದಿನ ದಿನ ಭವಿಷ್ಯದಲ್ಲಿ ಯಾವ ರಾಶಿಗೆ ಯಾವ ಫಲ ಎನ್ನುವುದನ್ನು ತಿಳಿದುಕೊಳ್ಳಿ.

ಸಮಯಕ್ಕಿಂತ ಮೊದಲೇ ಯೋಜನೆಯನ್ನು ಪೂರ್ಣ ಮಾಡಿ ಪ್ರಶಂಸೆ ಪಡೆಯುವಿರಿ
ದಿನ ಭವಿಷ್ಯ
Follow us
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ವಿವೇಕ ಬಿರಾದಾರ

Updated on: May 07, 2025 | 1:42 AM

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು: ವಸಂತ, ಸೌರ ಮಾಸ: ಮೇಷ ಮಾಸ, ಮಹಾನಕ್ಷತ್ರ: ಭರಣೀ, ಮಾಸ: ವೈಶಾಖ, ಪಕ್ಷ: ಶುಕ್ಲ, ವಾರ: ಬುಧ, ತಿಥಿ: ದಶಮೀ ನಿತ್ಯನಕ್ಷತ್ರ: ಪೂರ್ವಾಫಲ್ಗುಣೀ, ಯೋಗ : ಧ್ರುವ, ಕರಣ: ಕೌಲವ, ಸೂರ್ಯೋದಯ – 06 : 08 am, ಸೂರ್ಯಾಸ್ತ – 06 : 49 pm, ಇಂದಿನ ಶುಭಾಶುಭಕಾಲ: ರಾಹು ಕಾಲ 12:29 – 14:04, ಯಮಘಂಡ ಕಾಲ 07:44 – 09:19, ಗುಳಿಕ ಕಾಲ 10:54 – 12:29

ತುಲಾ ರಾಶಿ: ಸಮಯಕ್ಕಿಂತ ಮೊದಲೇ ಯೋಜನೆಯನ್ನು ಪೂರ್ಣ ಮಾಡಿ ಪ್ರಶಂಸೆ ಪಡೆಯುವಿರಿ. ಇಂದು ನಿಮ್ಮ ಸರ್ಕಾರದ ಕಾರ್ಯಗಳು ನಿಧಾನವಾಗುವುದು. ಮನಸ್ಸು ಅತಿಯಾದ ಗೊಂದಲದಿಂದ ಇರುವುದು. ಕಾರ್ಯದ ನಿಮಿತ್ತ ವ್ಯರ್ಥ ಓಡಾಟವನ್ನು ಮಾಡುವಿರಿ. ಸಾಕಷ್ಟು ತಾಳ್ಮೆ ಮತ್ತು ತಿಳುವಳಿಕೆಯನ್ನು ಹೊಂದಿರುವುದು ಮುಖ್ಯ. ಜೊತೆಗೆ ನೀವು ದಿನವಿಡೀ ತುಂಬಾ ಕಷ್ಟಪಟ್ಟು ಕೆಲಸ ಮಾಡಬೇಕಾಗುತ್ತದೆ. ಪ್ರಮುಖ ನಿರ್ಧಾರಗಳನ್ನು ಪರಿಗಣಿಸುವ ಸಮಯ. ನಿಮ್ಮ ಪರಿಸ್ಥಿತಿ ಮತ್ತು ಕಾರ್ಯಗಳನ್ನು ನೀವು ಕೂಲಂಕಷವಾಗಿ ಪರಿಶೀಲಿಸಬೇಕಾಗುತ್ತದೆ. ಅತಿಯಾದ ಸಿಹಿಯನ್ನು ತಿಂದು ದೇಹವನ್ನು ಕೆಡಿಸಿಕೊಳ್ಳಬೇಡಿ. ವ್ಯಾಪಾರದಲ್ಲಿ ತೊಡಕು ಬರಬಹುದು. ಆದರೆ ಇದನ್ನು ನಿವಾರಿಸಿಕೊಳ್ಳುವ ತಂತ್ರವು ನಿಮಗೆ ಅನುಭವದಿಂದ ಸಿದ್ಧವಾಗಿರುವುದು. ನಿಮ್ಮ ನಿಷ್ಠೆಯನ್ನು ಬದಲಾಯಿಸುವುದು ಬೇಡ. ನಿಮ್ಮ ಇಂದಿನ ಸ್ಥಿತಿಯು ಅಭಿವೃದ್ದಿಗೆ ಹಲವಾರು ದಾರಿಗಳನ್ನು ಹುಡುಕುವಿರಿ. ತಪ್ಪಿದ ಯೋಚನೆಯಿಂದ ನೀವು ಸರಿಯಾಗಬೇಕಾಗುವುದು. ನಿಮಗಿರುವ ಚಂಚಲ ಮನಸ್ಸಿನಿಂದ ನಕಾರಾತ್ಮಕ ಯೋಚನೆ ಬರುವುದು.

ವೃಶ್ಚಿಕ ರಾಶಿ: ನಿಮಗೆ ಮಾನಸಿಕ ಹಿಂಸೆಯನ್ನು ಮೇಲಧಿಕಾರಿಗಳು ನೀಡುವರು. ಆರೋಗ್ಯಕ್ಕೆ ಸಂಬಂಧಿಸಿದಂತೆ ವೈದ್ಯರ ಸಲಹೆಗಳನ್ನು ತಿರಸ್ಕರಿಸಬೇಡಿ. ಇಂದು ನಿಮ್ಮ ಪ್ರತಿಭೆಯ ಪ್ರದರ್ಶನವಾಗಲಿದೆ‌. ಸ್ನೇಹಿತರ ಜೊತೆ ಹೆಚ್ಚು ಕಾಲವನ್ನು ಕಳೆದು ನೋವನ್ನು ಹಂಚಿಕೊಳ್ಳುವರು. ನೀವು ಕೆಲವು ಹಳೆಯ ವಿವಾದದಿಂದ ಪರಿಹಾರ ಪಡೆಯಬಹುದು. ಇದರಿಂದಾಗಿ ಕುಟುಂಬದ ವಾತಾವರಣವು ಹಗುರ ಮತ್ತು ಶಾಂತಿಯುತವಾಗಿರುತ್ತದೆ. ಮಕ್ಕಳಿಗೆ ಹೊಸ ಅಧ್ಯಯನ ಅಥವಾ ಪ್ರಯಾಣಕ್ಕೆ ಸಂಬಂಧಿಸಿದ ಕೆಲವು ಅವಕಾಶಗಳು ಸಿಗಬಹುದು. ಆರ್ಥಿಕಸ್ಥಿತಿಯು ಸುಧಾರಿಸುವುದು. ನಿಮ್ಮ ನೆಚ್ಚಿನ ವ್ಯಕ್ತಿಯನ್ನು ಭೇಟಿ ಮಾಡುವಿರಿ. ಸೋಮಾರಿತನ ಬಿಟ್ಟು ಕೆಲಸಕ್ಕೆ ಪ್ರಯತ್ನಿಸಿ. ನಿಮ್ಮವರ ಆರೋಗ್ಯದ ವ್ಯತ್ಯಾಸದಿಂದ ಹಣವನ್ನು ಖರ್ಚು ಮಾಡಬೇಕಾಗುವುದು. ತೊಂದರೆಗೆ ಸಿಕ್ಕಿಕೊಳ್ಳಲು ನೀವೇ ಕಾರಣ. ಇದೇ ನಿಮಗೆ ಮುಳುವಾಗಬಹುದು. ಇನ್ನೊಬ್ಬರಿಗೆ ನಿಮ್ಮನ್ನು ಹೋಲಿಸಿಕೊಂಡು ಬೇಸರಿಸುವಿರಿ. ಕುಟುಂಬದ ಬಗ್ಗೆ ನಿಮಗೆ ಅಭಿಮಾನದ ಕೊರತೆ ಕಾಣುವುದು. ಸಾಲಗಾರರಿಂದ ಹಿಂಸೆ ಹೆಚ್ಚಾಗುವುದು.

ಧನು ರಾಶಿ: ಸಿಗಬೇಕಾದ ಕಾರ್ಯ ಸಿಗದೇ ಬೇಸರ ಆಗಲಿದೆ. ನಿಮಗಾದ ವಂಚನೆಗೆ ನ್ಯಾಯಯುತವಾಗಿ ಹೋಗುವಿರಿ. ವ್ಯಾಪಾರದಲ್ಲಿ ಅಧಿಕಲಾಭವನ್ನು ಗಳಿಸಲಿದ್ದೀರಿ. ಸರ್ಕಾರಿ ಅಧಿಕಾರಿಗಳು ಸಂಕಷ್ಟದಲ್ಲಿ ಸಿಲುಕಿಕೊಳ್ಳುವರು. ನಿಮಗೆ ಸಂಬಂಧವೇ ಇಲ್ಲದ ವಿಷಯಗಳಲ್ಲಿ ಭಾಗಿಯಾಗುವ ಬದಲು, ನಿಮ್ಮ ಕೆಲಸವನ್ನು ಮಾಡುತ್ತಲೇ ಇರಿ, ಇಲ್ಲದಿದ್ದರೆ ಅದು ನಿಮ್ಮ ಘನತೆಯ ಮೇಲೆ ಕೆಟ್ಟ ಪರಿಣಾಮ ಬೀರಬಹುದು. ಹಣದ ವಿಷಯಗಳಲ್ಲಿ ಯಾರನ್ನೂ ನಂಬಬೇಡಿ, ಕೆಲಸದಲ್ಲಿ ನಿರ್ಲಕ್ಷ್ಯ ಮತ್ತು ಸೋಮಾರಿತನವು ಸಮಸ್ಯೆಗಳನ್ನು ಉಂಟುಮಾಡಬಹುದು. ಯಾವುದೂ ನಿಮ್ಮ ಆಲೋಚನೆಗೆ ಅನುಸಾರವಾಗಿ ನಡೆಯುತ್ತಿಲ್ಲವೆಂಬ ಬೇಸರವೂ ಆಗಬಹುದು. ಬೇರೆಯವರಿಗೆ ನಿಮ್ಮ ಬಗ್ಗೆ ನಕಾರಾತ್ಮಕ ಭಾವವು ಇರಬಹುದು. ಗುರಿಯನ್ನು ಬದಲಿಸದೇ ಮುನ್ನಡೆಯುವಿರಿ. ಮಕ್ಕಳಿಗೆ ಪ್ರೋತ್ಸಾಹವನ್ನು ಕೊಡುವಿರಿ. ನಿಮ್ಮ ಉಳಿಕೆಯ ಹಣದ ಬಗ್ಗೆ ಎಚ್ಚರವಿರಲಿ. ಆಪ್ತರ ಬಗ್ಗೆ ಇರುವ ನಕಾರತ್ಮಕ ಭಾವವನ್ನು ನೀವು ಅವರಿಗೆ ಹೇಳುವಿರಿ. ಭೂಮಿಯ ಉತ್ಪನ್ನದಿಂದ ಲಾಭವು ಸಿಗುವುದು.

ಮಕರ ರಾಶಿ: ಬಂಧುಗಳ ನಡುವೆ ಉಂಟಾದ ಘರ್ಷಣೆಯಿಂದ ಉದ್ಯೋಗದಲ್ಲಿ ತೊಂದರೆ. ಇಂದು ನೀವು ಮಾಡಿದ ಪ್ರಯಾಣದಿಂದ ಸುಖವಿಲ್ಲ‌. ಹತಾಶೆಯಿಂದ ಹೊರಬಂದು ಒಳ್ಳೆಯ ಕಾರ್ಯದವನ್ನು ಮಾಡುವತ್ತ ಗಮನಹರಿಸಿ. ನಕಾರಾತ್ಮಕ ಭಾವನೆಗಳಿಗೆ ದಾರಿ ಮಾಡಿ ಕೊಡಬೇಡಿ. ಯಶಸ್ಸಿನ ಜೊತೆಗೆ ಆರ್ಥಿಕ ಲಾಭವೂ ಇರುತ್ತದೆ. ಗೌರವ ಮತ್ತು ಪ್ರಭಾವ ಹೆಚ್ಚಾಗುತ್ತದೆ. ಉತ್ಸಾಹ ಉಳಿಯುತ್ತದೆ ಮತ್ತು ದೊಡ್ಡ ಯಶಸ್ಸಿನ ಲಕ್ಷಣಗಳು ಕಂಡುಬರುತ್ತವೆ. ಹೊಸ ಆದಾಯದ ಮೂಲಗಳು ಅಭಿವೃದ್ಧಿಗೊಳ್ಳುತ್ತವೆ ಮತ್ತು ಬಾಕಿ ಇರುವ ಹಣವನ್ನು ಪಡೆಯಬಹುದು. ಕುಟುಂಬದವರೊಂದಿಗೆ ನಗುತ್ತಾ ಇರಿ. ಕಾರ್ಯದ ಒತ್ತಡವು ಇಂದು ಅಧಿಕವಾಗಿರಲಿದೆ. ಆರೋಗ್ಯವನ್ನೂ ಗಮನಿಸಿಕೊಳ್ಳಿ. ನಿಮ್ಮ ಯೋಜನೆಯು ಪೂರ್ಣ ವ್ಯತ್ಯಾಸವಾದ ಕಾರಣ ಮನೆಯಲ್ಲಿ ಕಲಹವಾಡುವಿರಿ. ಸೂಕ್ತ ಪರಿಹಾರದ ಕಡೆ ಗಮನವಿರಲಿ. ನಿವೃತ್ತಿಯ ಅಂಚಿನಲ್ಲಿದ್ದು ನಡತೆಯನ್ನು ಸರಿಯಾಗಿ ಇಟ್ಟುಕೊಳ್ಳಿ. ಮನೆಮಂದಿಯವರ ಜೊತೆ ಸಿಟ್ಟಗೊಂಡರೆ ನಿಮಗೇ ತೊಂದರೆಯಾದೀತು. ನಿಮ್ಮ ಇಂದಿನ ಕಾರ್ಯದಿಂದ ಕಛೇರಿಯಲ್ಲಿ ನಿರೀಕ್ಷೆ ಮೀರಿ ಪ್ರಶಂಸೆ ಸಿಗುವುದು.

ಕುಂಭ ರಾಶಿ: ನಿಮ್ಮ ಯಶಸ್ಸು ವಿವಾದಕ್ಕೆ ಸಿಕ್ಕಿಕೊಳ್ಳಲಿದೆ. ನಿಮ್ಮ ಯೋಜನೆಗೆ ಇಂದು ಎಲ್ಲವೂ ವಿರುದ್ಧವಾಗಬಹುದು. ಯಾರ ಮೇಲೂ ದ್ವೇಷವನ್ನು ಸಾಧಿಸುವುದು ಬೇಡ. ಮನಸ್ಸು ಕೆಡುತ್ತದೆಯಷ್ಟೇ. ಆಸ್ತಿ ಖರೀದಿ ಮತ್ತು ಮಾರಾಟಕ್ಕೆ ಸಂಬಂಧಿಸಿದ ಕೆಲವು ಯೋಜನೆಗಳು ಸಹ ಮುಂದುವರಿಯುತ್ತವೆ. ಸ್ವಲ್ಪ ಸಮಯ ಒಳ್ಳೆಯ ಮತ್ತು ಜ್ಞಾನವುಳ್ಳ ಪುಸ್ತಕಗಳನ್ನು ಓದುವುದರಲ್ಲಿಯೂ ಕಳೆಯಿರಿ. ಅಜಾಗರೂಕತೆಯು ನಷ್ಟಕ್ಕೆ ಕಾರಣವಾಗಬಹುದು. ಯಾರೊಂದಿಗೂ ಪ್ರಮುಖ ವಾದಗಳಲ್ಲಿ ತೊಡಗಬೇಡಿ. ಸಂಗಾತಿಯ ಜೊತೆಗಿರುವ ಮನಸ್ತಾಪ ದೂರಾಗುವುದು. ನಿಮ್ಮ ಸಲಹೆಯನ್ನು ಕುಟುಂಬವು ತಿರಸ್ಕರಿಸಬಹುದು. ಇಷ್ಟವಾದ ವಸ್ತುಗಳನ್ನು ಖರೀದಿಸುವಿರಿ. ಉದ್ಯೋಗದ ಕಾರಣಕ್ಕೆ ದೂರಪ್ರಯಾಣವನ್ನು ಮಾಡುವಿರಿ. ಬಂಧುಗಳ ಒಡನಾಟ ನಿಮಗೆ ಸಿಗಲಿದೆ. ಸ್ನೇಹಿತರ ಜಗಳದಲ್ಲಿ ತಲೆ ಹಾಕಿ ಅಪಾಯಕ್ಕೆ ಸಿಕ್ಕಿಕೊಳ್ಳುವಿರಿ. ಹೊಸ ವಿಷಯಗಳತ್ತ ಉತ್ಸಾಹವೇ ಇರಲಿದ್ದು, ಇದು ತಾತ್ಕಾಲಿಕ ಅಷ್ಟೇ. ನೀವು ಖರೀದಿಸುವ ಭೂಮಿಯ ದಾಖಲೆಯನ್ನು ಸಮಾಧಾನಚಿತ್ತದಿಂದ ಕೂಲಂಕಷವಾಗಿ ಪರಿಶೀಲಿಸಿ.

ಮೀನ ರಾಶಿ: ಕಾರ್ಯಕ್ಷೇತ್ರದಲ್ಲಿ ಕಿರಿಕಿರಿ.‌ ಕೋಪದಿಂದ ಅಸಂಬದ್ಧ ಮಾತುಗಳನ್ನು ಆಡುವಿರಿ. ನಿಮಗೆ ಯಾರಾದರೂ ಆಸರೆ ಬೇಕೆನಿಸಬಹುದು. ನಿಮ್ಮ ಬುದ್ಧಿ, ಮನಸ್ಸುಗಳಿಗೆ ಕೆಲಸವನ್ನು ಕೊಡಿ. ಸಂಗಾತಿಯ ಜೊತೆ ವಿವಾದವಾಗುವುದು. ಯಾವುದೇ ವಿವಾದವನ್ನು ಎಳೆದುಕೊಳ್ಳಬೇಡಿ. ಗುರಿಯ ಮೇಲೆ ಮಾತ್ರ ಗಮನಹರಿಸುವ ಸಮಯ. ಅತಿಯಾದ ಖರ್ಚು ಆರ್ಥಿಕ ಬಿಕ್ಕಟ್ಟಿಗೆ ಕಾರಣವಾಗಬಹುದು. ಸ್ವಲ್ಪ ಬುದ್ದಿವಂತರಾಗಿರಿ. ಕೋಪಗೊಳ್ಳುವುದರಿಂದ ನೀವು ಈಗಾಗಲೇ ಮಾಡಿರುವ ಯಾವುದೇ ಕೆಲಸವು ಹಾಳಾಗಬಹುದು. ಆತಂಕ ಮತ್ತು ಉದ್ವೇಗ ಇರುತ್ತದೆ. ಪ್ರವಾಸದಿಂದ ಉತ್ಸಾಹವು ಹೆಚ್ಚಾಗುವುದು. ದುಷ್ಟ ಜನರಿಂದ ದೂರವಿರಿ. ದಾಂಪತ್ಯದ ವಾಗ್ವಾದವು ಅತಿರೇಕಕ್ಕೆ ಹೋಗಬಹುದು. ಮಿತ್ರರು ನಿಮ್ಮಆಸಕ್ತಿಯ ಕ್ಷೇತ್ರವನ್ನು ಬದಲಿಸಬಹುದು. ಇಂದಿನ ಕಾರ್ಯವನ್ನು ಮುಂದೂಡುವುದು ಬೇಡ. ನಿಮ್ಮ ಗುಣಗಳನ್ನು ಇತರರು ಆಡಿಕೊಳ್ಳಬಹುದು. ಪೋಷಕರನ್ನು ಕಡೆಗಣಿಸಿದ್ದು ನಿಮಗೆ ಪಾಪಪ್ರಜ್ಞೆ ಕಾಡಬಹುದು. ಕುಟುಂಬದಲ್ಲಿ ಸಂತಸದ ವಾತಾವರಣವು ಇರುವಂತೆ ಮಾಡುವಿರಿ.

ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ
ಆದಂಪುರ ಏರ್​ಬೇಸ್​​ ಭೇಟಿ ಬಳಿಕ ಮೋದಿ ಮಾತು: ಇಲ್ಲಿದೆ ನೇರಪ್ರಸಾರ
ಆದಂಪುರ ಏರ್​ಬೇಸ್​​ ಭೇಟಿ ಬಳಿಕ ಮೋದಿ ಮಾತು: ಇಲ್ಲಿದೆ ನೇರಪ್ರಸಾರ
ಇಡೀ ವಿಶ್ವವೇ ಭಾರತೀಯ ಸೈನಿಕರ ಕಾರ್ಯವನ್ನು ಕೊಂಡಾಡುತ್ತಿದೆ: ಶಾಸಕ
ಇಡೀ ವಿಶ್ವವೇ ಭಾರತೀಯ ಸೈನಿಕರ ಕಾರ್ಯವನ್ನು ಕೊಂಡಾಡುತ್ತಿದೆ: ಶಾಸಕ