Horoscope Today 07 November: ಈ ರಾಶಿಯವರು ತೆರೆಮರೆಯಲ್ಲಿ ನಿಂತು ತಮ್ಮ ಕೆಲಸ ಸಾಧಿಸಿಕೊಳ್ಳುವರು

ದಿನ ಭವಿಷ್ಯ: ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಶರದ್ ಋತುವಿನ ಕಾರ್ತಿಕ ಮಾಸ ಕೃಷ್ಣ ಪಕ್ಷದ ದ್ವಿತೀಯಾ ತಿಥಿ, ತುಲಾ ಸೌರ ಮಾಸ, ಸ್ವಾತಿ ಮಹಾನಕ್ಷತ್ರ, ಶುಕ್ರವಾರ ಅನುಕರಣೆ, ನಿಶ್ಚಿಂತೆ, ಹಣಸಂಗ್ರಹ, ಸಾಲದಿಂದ ಹಿಂಸೆ, ಅಮೂಲ್ಯ ಸಮಯ, ವೇತನದ ಸಂಭ್ರಮ ಇವೆಲ್ಲ ಇಂದಿನ ಭವಿಷ್ಯ.

Horoscope Today 07 November: ಈ ರಾಶಿಯವರು ತೆರೆಮರೆಯಲ್ಲಿ ನಿಂತು ತಮ್ಮ ಕೆಲಸ ಸಾಧಿಸಿಕೊಳ್ಳುವರು
Horoscope
Updated By: ಗಂಗಾಧರ​ ಬ. ಸಾಬೋಜಿ

Updated on: Nov 07, 2025 | 12:02 AM

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ದಕ್ಷಿಣಾಯನ, ಋತು : ಶರದ್, ಚಾಂದ್ರ ಮಾಸ : ಕಾರ್ತಿಕ, ಸೌರ ಮಾಸ : ತುಲಾ, ಮಹಾನಕ್ಷತ್ರ : ಸ್ವಾತಿ, ವಾರ : ಶುಕ್ರ, ಪಕ್ಷ : ಕೃಷ್ಣ, ತಿಥಿ : ದ್ವಿತೀಯಾ, ನಿತ್ಯನಕ್ಷತ್ರ : ರೋಹಿಣೀ, ಯೋಗ : ವರಿಯಾನ್, ಕರಣ : ಬವ, ಸೂರ್ಯೋದಯ – 06 – 16 am, ಸೂರ್ಯಾಸ್ತ – 05 – 50 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 10:36 – 12:03, ಗುಳಿಕ ಕಾಲ 07:43 – 09:10, ಯಮಗಂಡ ಕಾಲ 14:57 – 16:23.

ಮೇಷ ರಾಶಿ: ದೈನಂದಿನ ಕಾರ್ಯದಲ್ಲಿರುವ ನಿಮಗೆ ತುರ್ತು ಸ್ಥಿತಿಯ ಕಾರಣ ಬಿಡುವ ಹಾಗಾಗಾಲಿದೆ. ಹಣಕಾಸಿನ ಮುಲಾಜಿಗೆ ಸಿಕ್ಕಿಕೊಳ್ಳುವ ಸಾಧ್ಯತೆ ಇದೆ. ಇನ್ಮೊಬ್ಬರ ಮಾತಿಗೆ ನೋವಿಗೆ ಸ್ಪಂದಿಸುವ ಗುಣ ಒಳ್ಳೆಯದು. ಗೆಳತಿಯೊಬ್ಬಳಿಂದ ನಿಮ್ಮಆಸಕ್ತಿಯ ಕ್ಷೇತ್ರವು ಬದಲಾಗುವುದು.‌ ಇಂದಿನ ಕಾರ್ಯವನ್ನು ಮುಂದೂಡುವುದು ಬೇಡ. ಇನ್ನೊಬ್ಬರನ್ನು ಅನುಕರಣೆ ಮಾಡುವುದಿಕ್ಕಿಂತ ನಿಮ್ಮದಾದ ಮಾರ್ಗವೇ ಇರಲಿ. ಕುಟುಂಬದಲ್ಲಿ ಸಂತಸದ ವಾತಾವರಣವಿರುವಂತೆ ಮಾಡುವಿರಿ. ವಾಹನವನ್ನು ಚಲಾಯಿಸುವಾಗ ಸ್ವಲ್ಪ ಎಚ್ಚರವಿರಲಿ. ಹೊಸ ವ್ಯಾಪಾರದಲ್ಲಿಯೂ ನಿಮಗೆ ಮನಸ್ಸಾಗಬಹುದು. ಪರರ ಆಪತ್ತಿಗೆ ಸ್ವಲ್ಪವಾದರೂ ಸಹಾಯಮಾಡುವಿರಿ. ಸ್ಪರ್ಧೆಗೆ ತಯಾರಿ ವೇಗವಾಗಿ ಸಾಗುವುದು. ಸಂದರ್ಭಕ್ಕೆ ತಕ್ಕುದಾದ ಪಾಠವನ್ನು ನೀವು ಕಲಿಯುವಿರಿ. ನಿಮ್ಮ ಉತ್ತರವು ಸಮಾಧಾನಕರವಾಗಿರದು. ಆಸ್ತಿಯ ದಾಖಲೆಯನ್ನು ನೀವು ಊರ್ಜಿತಗೊಳಿಸಿ. ಹಂಚಿಕೆಯ ಬಗ್ಗೆಯೂ ಸರಿಯಾದ ಆಲೋಚನೆ ಮಾಡುವಿರಿ.

ವೃಷಭ ರಾಶಿ: ಗೆಲ್ಲುವ ಆಸೆ ಇದ್ದರೂ ಉದ್ವೇಗಕ್ಕೆ ಒಳಗಾಗದೇ ಇರುವುದು ಮುಖ್ಯ. ವೃತ್ತಿಯ ಸಂಕಟವನ್ನು ಹೇಳಲಾಗದು. ಯಾರದೋ ಜಗಳದಲ್ಲಿ ತಲೆ ಹಾಕಿ ಅಪಾಯಕ್ಕೆ ಸಿಕ್ಕಿಕೊಳ್ಳಬೇಕಾದೀತು. ಹೊಸ ವಿಷಯಗಳತ್ತ ಉತ್ಸಾಹವೇ ಇರಲಿದ್ದು, ಇದು ತಾತ್ಕಾಲಿಕ ಅಷ್ಟೇ. ದಾಂಪತ್ಯದಲ್ಲಿನ ವಿರಸದಿಂದ ಮಾನಸಿಕ ಆರೋಗ್ಯವನ್ನು ಕೆಡಿಸುವುದು. ಬಹಳ ಶ್ರಮದಿಂದ ಇಂದು ನ್ಯಾಯಾಲಯದಲ್ಲಿ ಗೆಲುವನ್ನು ಸಾಧಿಸುವಿರಿ. ನಿಮ್ಮಲ್ಲಿ ಅನಾರೋಗ್ಯದ ಭಯವು ಇರುವುದು. ಹಿರಿಯರಿಂದ ನಿಮ್ಮ ಜೀವನಕ್ಕೆ ಮಾರ್ಗದರ್ಶನ ಸಿಗಲಿದೆ. ಕೃತಕ ಮಾತುಗಳು ನಿಮ್ಮೊಳಗೆ ಯಾವ ಪರಿವರ್ತನೆಯನ್ನೂ ತರದು. ಉದ್ಯೋಗದ ಕಾರಣಕ್ಕೆ ಇಂದು ನೀವು ಪ್ರಯಾಣವನ್ನು ಮಾಡಬೇಕಾಗುವುದು. ನಿಶ್ಚಿಂತೆಯಿಂದ ಇರಬೇಕೆಂದುಕೊಂಡರೂ ಕೆಲಸಗಳು ಬರುವುದು. ಕಲಿಕೆಯ ಹಂಬಲ ದೂರಾಗುವುದು ಸಾಧ್ಯತೆ ಇದೆ. ಅತಿಯಾದ ಮರೆವು ಉಂಟಾಗಲಿದೆ ಇಂದು. ಪರಿಚಯವಿಲ್ಲದ ಜನರಿಂದ ನಿಮ್ಮನ್ನು ಸಮೀಪಿಸಬಹುದು. ನಿಮ್ಮ ಕಾರ್ಯಗಳಲ್ಲಿ ಸಾವಧಾನತೆ ಇರಲಿದೆ.

ಮಿಥುನ ರಾಶಿ: ಅನುಭವಿಗಳ ಮುಂದೆ ನಿಮ್ಮ ಮಾತು ನಗಣ್ಯವಾಗಲಿದೆ. ಆತ್ಮರಕ್ಷಣೆಯ ವಿಷಯದಲ್ಲಿ ಹಿನ್ನಡೆ ಆಗಬಹುದು. ಸ್ತ್ರೀಯರಿಗೆ ಈ ದಿನ ಒತ್ತಡ ಹೆಚ್ಚಾಗುವುದು. ಅತಿಯಾದ ಮರೆವಿನ ಸಮಸ್ಯೆಯಿಂದ ವಿದ್ಯಾಭ್ಯಾಸದ ಮೇಲೆ ದುಷ್ಪರಿಣಾಮವನ್ನು ಬೀರುವುದು. ನಿವೃತ್ತಿಯ ಅಂಚಿನಲ್ಲಿದ್ದು ನಡತೆಯನ್ನು ಸರಿಯಾಗಿ ಇಟ್ಟುಕೊಳ್ಳಿ. ಮನೆಮಂದಿಯವರ ಜೊತೆ ಸಿಟ್ಟಗೊಂಡರೆ ನಿಮಗೇ ತೊಂದರೆಯಾದೀತು. ಅನಾರೋಗ್ಯದ ಭೀತಿಯಿಂದ ದಿನವನ್ನು ಕಳೆಯುವಿರಿ. ನಿಮ್ಮ ಇಂದಿನ ಕಾರ್ಯದಿಂದ‌ ಕಛೇರಿಯಲ್ಲಿ ನಿರೀಕ್ಷೆ ಮೀರಿ ಪ್ರಶಂಸೆ ಸಿಗುವುದು. ನಿಮ್ಮವರೇ ನಿಮ್ಮ‌ ಯಶಸ್ಸನ್ನು ಸಹಿಸದೇ ತೊಂದರೆ ಕೊಡುವರು. ಹಣವನ್ನು ಸರಿಯಾಗಿ ಸಂಗ್ರಹಿಸಿ, ಕೂಡಿಡಿ. ಸಾಲದಿಂದ ನೀವು ಬೇಗ ಮುಕ್ತರಾಗುವಿರಿ. ನಿಮ್ಮ ಆತ್ಮವಿಶ್ವಾಸವು ಇತರರಿಗೆ ಸೊಕ್ಕಿನಂತೆ ತೋರುವುದು. ನಿಮ್ಮ ಇಂದಿನ ಸ್ಥಾನವು ಬಹಳ ಪರಿಶ್ರಮದ ಫಲವಾಗಿದೆ. ಸ್ನೇಹಿತರ ಜೊತೆ ಸಂಬಂಧದಲ್ಲಿ ನಡೆಯುತ್ತಿರುವ ಭಿನ್ನಾಭಿಪ್ರಾಯವು ಪರಿಹರಿಸಲ್ಪಡುತ್ತದೆ.

ಕರ್ಕಾಟಕ ರಾಶಿ: ಪೂರ್ವನಿಶ್ಚಿತ ಕಾರ್ಯವು ಮುನ್ನಡೆಯುವುದು. ಕಷ್ಟವಾದರೂ ಇಷ್ಟಪಡುವುದು ಅನಿವಾರ್ಯವಾಗುವುದು. ಸತತವಾದ ಸೋಲಿನಿಂದ ಉತ್ಸಾಹವೂ ಕುಗ್ಗಿದೆ. ಬೇರೆಯವರಿಗೆ ನಿಮ್ಮ ಬಗ್ಗೆ ನಕಾರಾತ್ಮ ಭಾವಗಳು ಇರಬಹುದು. ಗುರಿಯನ್ನು ಬದಲಿಸದೇ ಮುನ್ನುಗ್ಗಿ. ಮಕ್ಕಳಿಗೆ ಪ್ರೋತ್ಸಾಹವನ್ನು ಕೊಡುವಿರಿ. ನಿಮ್ಮ ಉಳಿಕೆಯ ಹಣದ ಬಗ್ಗೆ ಎಚ್ಚರವಿರಲಿ. ನಿಮ್ಮ ಅನುಪಸ್ಥಿತಿಯು ಬೇರೆ ಸೂಚನೆಯನ್ನು ನೀಡಬಹುದು. ಕುಟುಂಬದಲ್ಲಿ ಬಂದ ಭಿನ್ನಾಭಿಪ್ರಾಯವನ್ನು ನೀವು ಸರಿ ಮಾಡಲು ನೀವು ಸಮರ್ಥರಾಗುವಿರಿ. ಕರಗತವಾದ ವಿಷಯವನ್ನು ಮರೆಯುವ ಸಾಧ್ಯತೆ ಇದೆ. ಪ್ರತಿಯೊಬ್ಬರದ್ದೂ ಜೀವನವು ಭಿನ್ನವಾಗಿದ್ದು ಹೋಲಿಕೆ ಬೇಡ. ಆರೋಗ್ಯದ ನಿರ್ಲಕ್ಷ್ಯವು ಮತ್ತೊಂದು ಪರಿಣಾಮವನ್ನು ಬೀರುವುದು. ನಿಮಗೆ ಗೌರವ ಸಿಗದೆ ಕಡೆ ಹೋಗುವುದಿಲ್ಲ. ನೌಕರರ ವಿಚಾರದಲ್ಲಿ ಒಂದು ಕಣ್ಣಿರಲಿ. ನಿಮ್ಮ ವೃತ್ತಿಜೀವನಕ್ಕೆ ಮುಖ್ಯವಾದ ಜನರು ಇಂದು ನಿಮಗೆ ಸ್ವಲ್ಪ ತೊಂದರೆ ನೀಡಬಹುದು. ಎಲ್ಲವುದನ್ನೂ ತಾನೇ ಮಾಡುವುದು ಎಂಬ ಮನೋಭಾವ ಬರಲಿದೆ.

ಸಿಂಹ ರಾಶಿ: ಇಂದಿನ ಆಹಾರ ನಾನಾ ತೊಂದರೆಯನ್ನು ತರುವುದು. ಪರರ ದೋಷವನ್ನು ಹೇಳುವ ಮೊದಲು ಗುಣಗಳ‌ನ್ನು ಹೇಳಿ. ಸಮಯ ಕಳೆದ ಅನಂತರ ಸಹವಾಸವು ದೋಷ ಎನಿಸಬಹುದು. ತೊಂದರೆಗೆ ಸಿಕ್ಕಿಕೊಳ್ಳಲು ನಿಮ್ಮ ಮೊಂಡುತನವೇ ಕಾರಣ. ಇದೇ ನಿಮಗೆ ಮುಳುವಾಗಬಹುದು. ಕುಟುಂಬದ ಬಗ್ಗೆ ನಿಮಗೆ ಅಭಿಮಾನದ ಕೊರತೆ ಕಾಣುವುದು. ಸಾಲಗಾರರಿಂದ ಹಿಂಸೆ ಹೆಚ್ಚಾಗುವುದು. ನಿಷ್ಪಕ್ಷಪಾತದ ನಿರ್ಧಾರದಿಂದ ನೀವು ದೊಡ್ಡವರಾಗಬಹುದು. ಹಣಕಾಸಿನ ವ್ಯವಹಾರದಲ್ಲಿ ಅಪರಿಚಿತರ ಆಗಮನವಾಗಬಹುದು. ನಿಮ್ಮನ್ನು ಕೆಲಸದಿಂದ ತೆಗೆಯುತ್ತಾರೆ ಎಂಬ ಭಯವು ಇರಲಿದೆ. ಸುಲಭದ ತುತ್ತನ್ನು ಕಷ್ಟದಿಂದ ನುಂಗಬೇಕಾಗುವುದು. ತೆರೆಮರೆಯಲ್ಲಿ ನಿಂತು ಕೆಲಸವನ್ನು ಸಾಧಿಸಿಕೊಳ್ಳುವಿರಿ.‌ ಸ್ನೇಹಿತ ಭೇಟಿಯನ್ನು ನೀವು ಅಲ್ಲಗಳೆಯುವಿರಿ. ಹಣಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ಗೊಂದಲ ಸೃಷ್ಟಿಯಾಗಬಹುದು. ನೀವು ಇಂದು ಕಾನೂನಿಗೆ ಸಂಬಂಧಿಸಿದ ವಿಷಯಗಳಲ್ಲಿ ಸಿಕ್ಕಿಹಾಕಿಕೊಳ್ಳಬಹುದು. ನಿಮಗೆ ಯಾರದ್ದಾದರೂ ಮಾತು ಅಧಿಕಾರದಂತೆ ತೋರೀತು.

ಕನ್ಯಾ ರಾಶಿ: ಯಾವುದೇ ರೀತಿಯಲ್ಲಿಯೂ ಲಾಭವಿಲ್ಲದ ಕಾರ್ಯವನ್ನು ಮಾಡಬೇಕಾಗುವುದು. ಜೀವನದ ಹೊಸ ಅಧ್ಯಾಯಕ್ಕೆ ಒಳ್ಳೆ ಹೆಜ್ಜೆ ಇರಲಿ. ಹೊಸತನಕ್ಕೆ ನೀವು ಒಗ್ಗುವುದು ಕಷ್ಟವಾದೀತು. ಇಂದು ನೀವು ಅನ್ಯಸ್ಥಳದಲ್ಲಿ ಆಕಸ್ಮಿಕವಾಗಿ ವಾಸಮಾಡುವಿರಿ. ನಿಮ್ಮ ಇಂದಿನ ಸ್ಥಿತಿಯು ಅಭಿವೃದ್ದಿಗೆ ಹಲವಾರು ದಾರಿಗಳನ್ನು ಹುಡುಕುವಿರಿ. ನಿಮಗಿರುವ ಚಂಚಲ ಮನಸ್ಸಿನಿಂದ ನಕಾರಾತ್ಮಕ ಯೋಚನೇಗಳೇ ಕಾಣಿಸಬಹುದು. ನಿಮ್ಮ ಸ್ಥಿರಾಸ್ತಿಯನ್ನು ಮಾರಾಟಮಾಡುವಿರಿ. ಇಂದು ನೀವು ಕುಟುಂಬದ ಜೊತೆ ಹೆಚ್ಚು ಸಮಯವನ್ನು ಕಳೆಯಲು ಇಚ್ಛಿಸುವಿರಿ. ವೃತ್ತಿಯ ಸ್ಥಳದಲ್ಲಿ ಪ್ರೇಮವು ಅಂಕುರಿಸುವುದು. ಒಂಡಿತನವನ್ನು ಬಹಳವಾಗಿ ಇಷ್ಟಪಡುವಿರಿ. ಆತುರತೆಯು ನಿಮ್ಮ ಮನಸ್ಸನ್ನು ಕೆಡಿಸೀತು. ನಿಮ್ಮ ಸ್ವಂತ ಕೆಲಸಗಳಿಗೆ ಇನ್ನೊಬ್ಬರ ಸಹಾಯವನ್ನು ನೀವು ಬಯಸುವುದಿಲ್ಲ. ಕಠಿಣ ಪರಿಶ್ರಮಕ್ಕೆ ಸರಿಯಾಗಿ ಯಶಸ್ಸು ಸಿಗುತ್ತದೆ. ನೀವು ಕೈಗೊಳ್ಳುವ ಯಾವುದೇ ಕೆಲಸದಲ್ಲಿ ನೀವು ಅಗತ್ಯ ಸಹಾಯವನ್ನು ಪಡೆಯುತ್ತೀರಿ.

ತುಲಾ ರಾಶಿ: ಪ್ರಯೋಜನವಿಲ್ಲದೇ ಇದ್ದರೂ ಕೆಲವರ ಒಡನಾಟ ಅನಿವಾರ್ಯವಾಗಲಿದೆ. ಹಳೆಯ ಘಟನೆಗಳನ್ನು ಸ್ಮರಿಸಿ ದುಃಖಿಸುವಿರಿ. ಬೇರೆಯವರು ತಪ್ಪು ಮಾಡಿದ್ದಾರೆ ಎಂದು ನೀವೂ ಮಾಡಲು ಹೋದರೆ ಸಿಕ್ಕಿಬೀಳುವಿರಿ. ಯಾರದೋ ಮೇಲಿನ ಸಿಟ್ಟನ್ನು ಮನೆಮಂದಿಯ ಮೇಲೆ ತೋರಿಸುವಿರಿ. ನಿಮ್ಮ ಸಂಕಟಕ್ಕೆ ಪರರನ್ನು ಜರಿದು ಪ್ರಯೋಜನವಾಗದು. ವಾಹನ ಓಡಾಡವು ಸುಖಕರವಲ್ಲ. ತಾಯಿಗೆ ಕೊಡುವ ಗೌರವವು ಕಡಿಮೆ ಆದೀತು. ಕರ್ತವ್ಯಗಳನ್ನು ದೃಢ ಮನಸ್ಸಿನಿಂದ ಮಾಡುವಿರಿ. ಇಂದು ವಾಸದ ಮನೆಯನ್ನು ಬದಲಿಸುವಿರಿ. ಆರ್ಥಿಕ ಮೂಲವನ್ನು ಅಲ್ಪಾಪ್ತರೂ ಕೇಳುವರು. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ ಕಾಣುವುದು. ನಿಮ್ಮ ಬಗ್ಗೆ ಸಹೋದ್ಯೋಗಿಗಳು ಆಡುಕೊಳ್ಳುವರು. ಅನಿಸಿದ್ದನ್ನು ಪಡೆಯುವವರೆಗೂ ಮರಳಿ ಯತ್ನವ ಮಾಡುವಿರಿ. ಮನಸ್ಸುನ್ನು ಅಚಲವಾಗಿಸಿಕೊಳ್ಳಿ. ಭವಿಷ್ಯವನ್ನು ಕಟ್ಟಿಕೊಳ್ಳುವ ಕುರಿತು ಚಿಂತೆ ಬರಬಹುದು. ಪ್ರಣಯ ಜೀವನದಲ್ಲಿ ಸಕಾರಾತ್ಮಕ ಬದಲಾವಣೆಗಳು ಕಂಡುಬರುತ್ತವೆ.

ವೃಶ್ಚಿಕ ರಾಶಿ: ನಿಮ್ಮ ಸುರಕ್ಷತೆಯನ್ನು ಮನಸ್ಸಿನಲ್ಲಿ ಇಟ್ಟುಕೊಂಡು ವ್ಯವಹಾರ ಮಾಡಿ. ದೈವಬಲದಿಂದ ಯಶಸ್ಸು ಸಿಗುವುದು. ಹೊಸ ಮನೆಯಲ್ಲಿ ನಿಮಗೆ ಬೇಕಾದ ಅನುಕೂಲತೆಗಳ ಮನೆಯವರಲ್ಲಿ ಹೇಳುವಿರಿ. ನೀವು ಸ್ಪರ್ಧಾತ್ಮಕ ಪರೀಕ್ಷೆಯನ್ನು ಎದುರಿಸಬೇಕಾದೀತು. ಹಣ ಕೊಟ್ಟರೂ ಸಿಗದ ಸಂಪತ್ತನ್ನು ಗಳಿಸುವಿರಿ. ಗುರಿಯ ಕಡಗೆ ಮಾತ್ರ ನಿಮ್ಮ ಗಮನವಿರಲಿ. ಇಷ್ಟ ಪಟ್ಟವರನ್ನು ಮದುವೆಯಾಗುವ ಮಕ್ಕಳ ಸ್ವಾತಂತ್ರ್ಯಕ್ಕೆ ಅಡ್ಡಿಯಾಗುವಿರಿ. ಆರೋಪಕ್ಕೆ ಮತ್ತೊಂದು ಆರೋಪ ಮಾಡುವ ಬದಲು ಸ್ಪಷ್ಟನೆ ಕೊಟ್ಟು ಸುಮ್ಮನಾಗಿ. ಅಮೂಲ್ಯ ವಸ್ತುಗಳನ್ನು ಕಳೆದುಕೊಂಡು ಸಂಕಟಪಡಬೇಕಾದೀತು. ಹಳೆಯ ಖಾಯಿಲೆಗಳು ಕಾಣಿಸಿಕೊಳ್ಳಬಹುದು. ಏಕಾಂತದಲ್ಲಿ ಹೆಚ್ಚಿನ ಸಮಯವನ್ನು ಕಳೆಯುವಿರಿ. ಹಳೆಯ ನಿಮ್ಮ ಸ್ನೇಹಿತವು ದೂರಾಗುವುದು.‌ ಹೊಸ ಮನೆಯ ನಿರ್ಮಾಣದ ಬಗ್ಗೆ ದೊಡ್ಡ ಕನಸು ಕಾಣುವಿರಿ. ಆತ್ಮವಿಶ್ವಾಸವು ಇದ್ದರೂ ಅದನ್ನು ಸರಿಯಾಗಿ ಬಳಸಿಕೊಳ್ಳಲು ಆಗದು. ಯಾರೊಂದಿಗಾದರೂ ಸಲುಗೆಯು ಅತಿಯಾಗಬಹುದು.

ಧನು ರಾಶಿ: ಮಕ್ಕಳು ಮಾತನ್ನು ಧಿಕ್ಕರಿಸುವ ಸಂದರ್ಭ ಬರಲಿದ್ದು ಸಿಟ್ಟಿನಿಂದ ವ್ಯತಿರಿಕ್ತ ಪರಿಣಾಮ ಉಂಟಾಗುವುದು. ಬೆಂಬಲಿಗರಿಗೆ ಸಂತೋಷವನ್ನು ಕೊಡುವಿರಿ. ಸರಳ ಎಂದುಕೊಂಡ ಕೆಲಸವೇ ಇಂದು ಕಷ್ಟವಾಗುವುದು. ಯಾರ ಮೇಲೋ ಹಠಸಾಧಿಸುವುದು ಬೇಡ. ನಿಮ್ಮ ಸಂಬಂಧಗಳ ಬಗ್ಗೆ ಇಂದು ಹೆಚ್ಚು ಆಲೋಚಿಸುವಿರಿ.‌ ಸದ್ಭಾವದಿಂದ‌ ಮಾಡುವ ಕಾರ್ಯವು ಸತ್ಫಲವನ್ನೇ ಕೊಡುವುದು. ಇಂದು ನಿಮ್ಮ ನಕಾರಾತ್ಮಕ ಭಾವನೆಗಳು ಹೆಚ್ಚಿರುವುದು. ನಿಮ್ಮ ಸ್ವಭಾವದಂತೆ ಎಲ್ಲರನ್ನು ನಂಬುವಿರಿ. ಎಲ್ಲ ಜವಾಬ್ದಾರಿಯನ್ನೂ ಮಕ್ಕಳಿಗೆ ವಹಿಸಿ ನೀವು ನಿಶ್ಚಿಂತರಾಗುವಿರಿ. ನಿಮ್ಮ ಕೆಲಸವು ಪೂರ್ಣವಾಗದೇ ಹೇಳಿಸಿಕೊಳ್ಳುವಿರಿ. ಸಾಮಾಜಿಕ ಕಾರ್ಯಕ್ಕೆ ನಿಮ್ಮಂದ ಹಣ ಪಡೆಯುವರು. ನೆಮ್ಮದಿಯನ್ನು ಪಡೆಯಲು ನಿಮಗೆ ಸಮಯ ಬೇಕಾದೀತು. ನಿಗದಿತ ಸಮಯಕ್ಕೆ ನಿಮ್ಮ ಕಾರ್ಯವನ್ನು ಮುಗಿಸಿ. ಅಪ್ರಾಮಾಣಿಕರಂತೆ ನಿಮಗೇ ಅನ್ನಿಸಬಹುದು. ಕಟ್ಟಿಕೊಂಡ ಬುತ್ತಿ ಎಲ್ಲಿಯವರಗೆ ಬರಲು ಸಾಧ್ಯ? ಅತಿಯಾದ ವೇಗ ಬೇಡ. ಹಣಕಾಸಿಗೆ ಸಂಬಂಧಿಸಿದ ವೃತ್ತಿಯಲ್ಲಿ ಒತ್ತಡ ಕಾಣಿಸುವುದು.

ಮಕರ ರಾಶಿ: ಗ್ರಾಹಕರು ನಿಮಗೆ ಅನುಪಯುಕ್ತ ಎನಿಸಿದ ಸಲಹೆಯನ್ನು ಕೊಡುವರು. ವಿವಾಹದ ಮಾತುಕತೆಗೆ ನಿಮ್ಮ ಒಪ್ಪಿಗೆ ಇರದು. ನಾಚಿಕೆಯ ಸ್ವಭಾವವು ಯಸರ ಜೊತೆಯೂ ಬೆರೆಯಲಾಗದು. ಸ್ತ್ರೀಯರಲ್ಲಿ ಸಹಾಯವನ್ನು ಕೇಳಲು ಹಿಂಜರಿಕೆ ಆಗುವುದು. ನಿಮಗೆ ಇಷ್ಟವಾದದನ್ನು ಪಡೆಯುವ ಕಡೆಗೆ ನಿಮ್ಮ ಗಮನ ಇರಲಿ. ನಿಮ್ಮ ಕೆಲಸವನ್ನು ಬೇರೆಯವರ ಮೂಲಕ ಮಾಡಿಸಿಕೊಳ್ಳುಬಿರಿ. ಇಂದು ನಿಮಗೆ ಅವ್ಯಕ್ತ ಭಯವು ಇರಲಿದೆ. ಸಹೋದರರು ನಿಮಗೆ ಧನ ಸಹಾಯವನ್ನು ಕೇಳಿದರೆ ಮಾಡಬಹುದು. ಮಂದಮತಿಯರ ಜೊತೆ ನಿಮ್ಮ ವೇಗವೂ ಕುಂಠಿತವಾಗುವುದು. ಉದ್ಯೋಗದಲ್ಲಿ ವೇತನವನ್ನು ಹೆಚ್ಚಿಸಿಕೊಳ್ಳಲು ಮೇಲಧಿಕಾರಿಗಳ ಜೊತೆ ಮಾತನಾಡುವಿರಿ. ನಿಮ್ಮ ಸಾಮರ್ಥ್ಯವನ್ನು ಇತರರಿಗೆ ನೀವೇ ತಿಳಿಸಬೇಕಾಗುವುದು. ಇಂದು ಅಲಂಕಾರಕ್ಕೆ ಹೆಚ್ಚು ಸಮಯವನ್ನು ತೆಗೆದಿಡುವಿರಿ. ಸಂದರ್ಭ ಬಂದಾಗ ಮಾತ್ರ ನಿಮ್ಮನ್ನು ನೆನೆಸುವರು. ನಿಮ್ಮ ಸಂತೋಷವನ್ನು ಕಸಿದುಕೊಳ್ಳಲು ಯಾರಾದರೂ ಇರುತ್ತಾರೆ. ನೀವು ಇಂದು ಅನಿರೀಕ್ಷಿತವಾಗಿ ಆರ್ಥಿಕ ಲಾಭವನ್ನು ಪಡೆಯಬಹುದು.

ಕುಂಭ ರಾಶಿ: ಯಾರನ್ನಾದರೂ ಶಿಫಾರಸ್ಸು ಮಾಡಲು ಇಚ್ಛೆ ಇದ್ದರೆ ಬಂಧುಗಳನ್ನು ಮಾಡಲಾರಿರಿ. ಸಾಹಸಕ್ಕೆ ಮೆಚ್ಚುಗೆ ಸಿಗಬಹುದು. ಬಂಧುಗಳ ಬಗ್ಗೆ ನಿಮಗೆ ಒಳ್ಳೆಯ ಅಭಿಪ್ರಾಯ ಬರದು. ಇಂದು ನಿಮಗೆ ಆತ್ಮೀಯರ‌ ಒಡನಾಡ ಅಧಿಕವಾಗಲಿದೆ. ನಿಮ್ಮ ಸ್ವಭಾವದಿಂದ ನಿಮಗೆ ಕಿರಿಕಿರಿಯಾಗಬಹುದು. ನಿಮ್ಮ ಕೆಲಸವನ್ನು ಮಾಡಿಸಿಕೊಳ್ಳಲು ಹಣವನ್ನು ನೀಡಬೇಕಾಗುವುದು. ಇನ್ನೊಬ್ಬರ ಮಾತುಗಳನ್ನು ನೀವು ಸಹಿಸುವುದು ಕಷ್ಟವಾದೀತು. ಮಕ್ಕಳಿಂದ ಇಂದು ಹೆಚ್ಚು ನಿರೀಕ್ಷಿಸುವಿರಿ.‌ ಮನೆಯ ದುರಸ್ತಿ ಕಾರ್ಯವನ್ನು ನೀವೇ ಮಾಡಿಕೊಳ್ಳುವಿರಿ. ಹೊಸ ಉದ್ಯೋಗದಲ್ಲಿ ಉತ್ಸಾಹವು ಇರಲಿದೆ. ಆತ್ಮವಿಶ್ವಾಸದ ಕೊರತೆಯನ್ನು ನಿಮ್ಮ ಪ್ರಾಮಾಣಿಕ ಪ್ರಯತ್ನವು ಸಾಧಿಸಬಹುದು. ಒಂಟಿ ಜನರು ಇಂದು ಆಸಕ್ತಿದಾಯಕ ವ್ಯಕ್ತಿಯನ್ನು ಭೇಟಿಯಾಗುತ್ತಾರೆ. ನಿಮ್ಮ ಆದಾಯದ ಜೊತೆಗೆ ನಿಮ್ಮ ಖರ್ಚುಗಳೂ ಹೆಚ್ಚಾಗುತ್ತವೆ. ಸರಿಯಾದುದನ್ನು ಸರಿ ಎನ್ನಲು ಹಿಂದೇಟು ಬೇಡ. ನಿಮ್ಮ ತಿಳಿವಳಿಕೆಯನ್ನು ತೋರ್ಪಡಿಸಿ. ಸಾಮಾಜಿಕ ಕಳಕಳಿಯನ್ನು ತೋರಿಸುವಿರಿ. ವೃತ್ತಿಯಲ್ಲಿ ಸರಳತೆಯನ್ನು ಹುಡುಕುವಿರಿ. ಆಪ್ತರ ಮೇಲೆ‌ ಕಿಡಿಕಾರುವುದು ಬೇಡ.

ಮೀನ ರಾಶಿ: ಮರೆವು ನಿಮ್ಮನ್ನು ಹಲವು ಸ್ಥಾನಗಳಿಂದ ವಿಮುಖರನ್ನಾಗಿ ಮಾಡುವುದು. ನಿಮ್ಮನ್ನು ಎಲ್ಲ ಕಡೆಯಿಂದ ನಿಯಂತ್ರಿಸುವ ಕಾರ್ಯವನ್ನು ಮಾಡುವರು. ಸೋಲು ಗೆಲುವನ್ನು ನೀವು ಸಮಾನವಾಗಿ ಸ್ವೀಕರಿಸುವುದು ಮುಖ್ಯ. ಸಾಮಾಜಿಕ ಜಾಲತಾಣದಿಂದ ಸಮಸ್ಯೆಗೆ ಸಿಕ್ಕಿಕೊಳ್ಳುವಿರಿ. ಕೆಡಕು ಮಾಡುವ ಮನಸ್ಸು ನಿಮಗೆ ಶೋಭೆಯಲ್ಕ. ಕರ್ತವ್ಯಕ್ಕೆ ನಿಮ್ಮ ಮನಸ್ಸನ್ನು ಕೊಟ್ಟುಕೊಳ್ಳುವಿರಿ. ಸಂಗಾತಿಯ ಬಗ್ಗೆ ಸಂಶಯ ಬೇಡ. ಕೆಟ್ಟ ಸುದ್ದಿಯಿಂದ ವಿಚಲಿತರಾಗದಿರಿ. ಯಾರ ಮಾತನ್ನೂ ಅಲ್ಲಗಳೆಯಲು ಹೋಗಲಾರಿರಿ. ಸುಮ್ಮನೇ ಆಯಾಸದ ಅನುಭವವಾದರೆ ವೈದ್ಯರನ್ನು ಸಂಪರ್ಕಿಸುವುದು ಒಳ್ಳೆಯದು. ಪಾಲುದಾರಿಕೆಯಲ್ಲಿ ನಿಮಗೆ ಆಸಕ್ತಿಯು ಕಡಿಮೆಯಾಗಬಹುದು. ಮಕ್ಕಳಿಂದ ನಿಮಗೆ ಧನಪ್ರಾಪ್ತಿಯ ಸಂಭವವಿದೆ. ನಿಮ್ಮ ನಡವಳಿಕೆಯಿಂದ ಅನುಮಾನ ಬರಬಹುದು. ಹಳೆಯ ವಸ್ತುಗಳ ಮಾರಾಟದಿಂದ ಲಾಭವಿದೆ. ಏರುದನಿಯಲ್ಲಿ ಮಾತನಾಡುವುದು ಬೇಡ. ಆದಾಯದ ಮೂಲವನ್ನು ಸರಿಯಾಗಿ ಇಟ್ಟುಕೊಳ್ಳಿ. ಇಂದು ನಿಮ್ಮ ಭಾವನೆಗಳನ್ನು ನಿಮ್ಮ ಪ್ರೇಮಿಗೆ ಮುಕ್ತವಾಗಿ ವ್ಯಕ್ತಪಡಿಸಿ.

ಲೋಹಿತ ಹೆಬ್ಬಾರ್-8762924271 (what’s app only)