
ಶಾಲಿವಾಹನ ಶಕೆ 1948ರ ವಿಶ್ವಾವಸು ಸಂವತ್ಸರದ ದಕ್ಷಿಣಾಯನ, ಋತು : ಶರದ್, ಚಾಂದ್ರ ಮಾಸ : ಆಶ್ವಯುಜ, ಸೌರ ಮಾಸ : ಕನ್ಯಾ, ಮಹಾನಕ್ಷತ್ರ : ಹಸ್ತ, ವಾರ : ಶನಿ, ಪಕ್ಷ : ಶುಕ್ಲ, ತಿಥಿ : ದ್ವಾದಶೀ, ನಿತ್ಯನಕ್ಷತ್ರ : ಪೂರ್ವಾಭಾದ್ರ, ಯೋಗ : ಸೌಭಾಗ್ಯ, ಕರಣ : ಕೌಲವ, ಸೂರ್ಯೋದಯ – 06 – 10 am, ಸೂರ್ಯಾಸ್ತ – 06 – 06 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 09:09 – 10:39, ಗುಳಿಕ ಕಾಲ 06:10 – 07:40, ಯಮಗಂಡ ಕಾಲ 13:38 – 15:07
ಮೇಷ ರಾಶಿ: ಸಂಗಾತಿಯಾಗುವವಳ ಪ್ರಥಮ ದರ್ಶನದ ಅಭಿಪ್ರಾಯವೇ ಸತ್ಯವಾಗುವುದು. ನೀವು ತೊಡಗಿಕೊಳ್ಳುವ ವ್ಯವಹಾರದಲ್ಲಿ ಅನುಭವ ಅಥವಾ ಅನುಭವಿಗಳ ಮಾರ್ಗದರ್ಶನ ಇರಲಿ. ವೈವಾಹಿಕ ಜೀವನಕ್ಕೆ ಯಾರಿಂದಲೂ ಪೂರ್ಣ ಒಪ್ಪಿಗೆ ಸಿಗದು. ಸ್ಥಿರಾಸ್ತಿಯ ಉಳಿಸಿಕೊಳ್ಳಲು ನೀವು ಬಹಳ ಹೋರಾಟವನ್ನು ಮಾಡಬೇಕಾದೀತು. ಬಂಧುಗಳ ಬಳಿ ನೀವು ಸಾಲಕ್ಕೆ ಕೈ ಚಾಚಬೇಕಾಗಬಹುದು. ನಿಮ್ಮ ಕೆಲಸವನ್ನು ಬೇರೆಯವರು ಮಾಡಿ ಮುಗಿಸುವರು. ನೀರಿ ಪ್ರದೇಶದಲ್ಲಿ ಆಟವಾಡುವಾಗ ಮುಂಜಾಗರೂಕತೆ ಬೇಕು. ಇಂದು ಹೇಗಾದರೂ ಮಾಡಿ ಕಲಿತ ವಿಚಾರವನ್ನು ಪ್ರಯೋಗಕ್ಕೆ ತರುವಿರಿ. ಮಾತನ್ನು ನೀವು ಸಾವಧಾನವಾಗಿ ಹೇಳುವಿರಿ. ಉದ್ವೇಗಕ್ಕೆ ಒಳಗಾಗದೇ ಸಮಾಧಾನದಿಂದ ಇರಿ. ದುರಭ್ಯಾಸದಿಂದ ಆರೋಗ್ಯವು ಕೆಡಬಹುದು. ಹಾಳಾದ ವಸ್ತುವನ್ನು ಪುನಃ ಎಂದಿನಂತೆ ಇಡಲಾಗದು ಹೆಚ್ಚು ಲಾಭವನ್ನು ಗಳಿಸುವ ತುಡಿತವು ಅಧಿಕವಾಗುವುದು. ಭೂಮಿಯ ಉತ್ಪನ್ನದಿಂದ ಕೃಷಿಯ ಉತ್ಪಾದನೆಯಿಂದ ಲಾಭ ಸಿಗಲಿದೆ. ನಿಮ್ಮ ನಿರಂತರ ಕಾರ್ಯಕ್ಕೆ ಸಮ್ಮಾನ ಸಿಗುವುದು.
ವೃಷಭ ರಾಶಿ: ಹೊಸ ದಿರಿಸಿನಿಂದ ಸುಂದರವಾಗಿ ಕಾಣುವಿರಿ. ಇಂದು ಅಸ್ಥಿರತೆಯು ನಿಮ್ಮನ್ನು ಅಧಿಕವಾಗಿ ಕಾಡಬಹುದು. ನಿಮ್ಮ ಭಾವನೆಗೆ ಸರಿ ಹೊಂದುವವರ ಜೊತೆ ನಿಮ್ಮ ಮಾತುಕತೆ ಇರಲಿದೆ. ಬಂಧುಗಳಿಗೆ ಆರ್ಥಿಕವಾಗಿ ಸಹಾಯವನ್ನು ಮಾಡುವಿರಿ. ಕಳೆದುಕೊಂಡಿದ್ದನ್ನು ಮರೆಯುವುದು ಉತ್ತಮ. ಅಭಿವೃದ್ಧಿಯ ಕೆಲಸಗಳು ನಿಧಾನವಾಗಿ ಸಾಗುವುದು. ಪ್ರಯಾಣದಲ್ಲಿ ನೀವು ತೊಂದರೆಯನ್ನು ಅನುಭವಿಸುವಿರಿ. ಹುಟ್ಟಿದ ಸಂಭ್ರಮಕ್ಕೆ ಮನೆಯಲ್ಲಿ ಹಬ್ಬದ ವಾತಾವರಣ. ಇಂದು ನಿಮ್ಮ ಆತುರದ ತೀರ್ಮಾನಗಳು ಹಲವು ಗೊಂದಲೆಗಳಿಗೆ ಕಾರಣವಾಗುವುದು. ಸ್ಥಿರಾಸ್ತಿಯ ಬಗ್ಗೆ ನಿಮಗೆ ಸರಿಯಾದ ಮಾಹಿತಿ ಇರಲಿ. ನಿಮ್ಮ ಸಾಲವು ಮರಳಿಬರಬಹುದು. ನಿಮ್ಮ ಮನೋಗತವನ್ನು ನೀವು ಆಪ್ತರ ಜೊತೆ ಹಂಚಿಕೊಳ್ಳುವಿರಿ. ಆಭರಣವನ್ನು ಸುರಕ್ಷಿತ ಸ್ಥಳದಲ್ಲಿ ಇರಿಸುವಿರಿ. ಅನಗತ್ಯ ಖರ್ಚನ್ನು ಕಡಿಮೆ ಮಾಡಲು ಸಂಗಾತಿಗೆ ಸೂಚಿಸುವಿರಿ. ನಕಾರಾತ್ಮಕ ಧೋರಣೆಗಳು ಅಧಿಕವಾಗಿ ಇರಬಹುದು.
ಮಿಥುನ ರಾಶಿ: ಖಾರವಾದ ಆಹಾರದ ಸೇವನೆ ಮಾಡುವಿರಿ. ವ್ಯವಹಾರದ ಮಧ್ಯದಲ್ಲಿ ನೀವು ಕಳೆದುಹೋಗಬಹುದು. ನಿಮ್ಮನ್ನು ನೀವು ಏನೋ ಅಂದುಕೊಳ್ಳುವುದು ಬೇಡ. ಆರ್ಥಿಕತೆಯು ಅಭಿವೃದ್ಧಿಯ ಕಡೆಗೆ ಸಾಗುವುದು ನಿಮಗೆ ಸಂತೋಷವನ್ನು ಕೊಡಲಿದೆ. ಕುಟುಂಬದಿಂದ ನಿಮಗೆ ಶುಭ ವಾರ್ತೆಯು ಬರಬಹುದು. ಜಾಣತನವೂ ನಿಮಗೆ ಮುಳುವಾಗುವ ಸಾಧ್ಯತೆ ಇದೆ. ಸಹೋದರನ ವಿವಾಹದ ಚಿಂತೆ ಮತ್ತೆ ಮತ್ತೆ ಬರುವುದು. ನಿಮ್ಮ ಸಹೋದರನಿಂದ ಹೊಸ ಉದ್ಯೋಗಕ್ಕೆ ಸೇರಿಕೊಳ್ಳಲು ಸಹಾಯವಾಗುವುದು. ಮಕ್ಕಳ ವಿದ್ಯಾಭ್ಯಾಸಕ್ಕೆ ಇಟ್ಟ ಹಣವು ಸಾಕಾಗದು. ಇಂದು ನೀವು ಅಂದುಕೊಂಡಷ್ಟು ಕೆಕಸವು ಆಗುವತನಕ ನಿಮ್ಮ ಹಠವು ಇರಲಿದೆ. ಯಾರ ಬಗ್ಗೆಯೂ ತೀರ್ಮಾನ ಕೊಡುವ ಹಂತಕ್ಕೆ ಹೋಗಬೇಡಿ. ದೈವವನ್ನು ನಂಬಿ ನಿಮ್ಮ ಕಾರ್ಯವನ್ನು ಮುನ್ನಡಸುವಿರಿ. ಚಿತ್ರಕಾರರಿಗೆ ಉತ್ತಮ ಅವಕಾಶಗಳು ಸಿಗಬಹುದು. ಭವಿಷ್ಯದ ಬಗ್ಗೆ ನಿಮಗೆ ಹತ್ತಾರು ಕನಸುಗಳನ್ನು ಇಟ್ಟುಕೊಳ್ಳುವಿರಿ.
ಕರ್ಕಾಟಕ ರಾಶಿ: ವಿದೇಶದ ಉದ್ಯೋಗವು ಇದ್ದಲ್ಲಿಯೇ ದಕ್ಕಲಿದೆ. ಹೂಡಿಕೆಯಿಂದ ಆದ ಲಾಭವನ್ನು ಪರೀಕ್ಷಿಸಿಕೊಂಡು ಮುಂದುವರಿಯುವುದು ಒಳ್ಳೆಯದು. ನಿಮ್ಮ ಉದ್ಯಮಕ್ಕೆ ಯಾರಾದರೂ ಬೆನ್ನೆಲುಬಾಗಿ ಬರಬಹುದು. ವಿಳಂಬವಾಗಿಯಾದರೂ ವಿವಾಹವು ನಡೆಯಲಿದ್ದು, ನಿಮಗೆ ಸಂತೋಷವಾಗಲಿದೆ. ಮಕ್ಕಳ ವಿವಾಹಕ್ಕಾಗಿ ಓಡಾಟ ಮಾಡುವಿರಿ. ಯಾವುದು ಎಷ್ಟು ಪ್ರಾಮುಖ್ಯ ಎಂಬ ತಿಳಿವಳಿಕೆಯ ಕೊರತೆ ಕಾಣಿಸುವುದು. ಪಾರಮಾರ್ಥಿಕ ಚಿಂತನೆಗಳು ಹೆಚ್ಚು ಹೆಚ್ಚು ಬರಲಿವೆ. ನಾಚಿಕೆಯ ಸ್ವಭಾವದಿಂದ ನೀವು ಹಲವು ವಿಚಾರವನ್ನು ಕಳೆದುಕೊಳ್ಳುವಿರಿ. ಕೆಲವರ ಮಾತುಗಳನ್ನು ನೀವು ವಿರೋಧಿಸುವಿರಿ. ನಿಮಗೆ ಆಗದವರ ಬಗ್ಗೆ ನಿಮ್ಮ ನಿಲುವು ಹಾಗೆಯೇ ಇರಲಿದೆ. ಸಾಮಾಜಿಕ ಗೌರವವನ್ನು ನೀವು ಬಯಸುವಿರಿ. ಸಂಗಾತಿಯ ಇಂಗಿತವನ್ನು ಅರಿಯಲು ಅಸಮರ್ಥರಾಗಬಹುದು. ಬ್ಯಾಂಕ್ ನಲ್ಲಿ ಹಣಕಾಸಿಗೆ ಜಗಳವಾಡಬೇಕಾಗಬಹುದು. ಹಳೆಯ ಪ್ರೇಮವು ನಿಮಗೆ ತೊಂದರೆಯನ್ನು ಕೊಡಲಿದೆ. ಚಾಲಕವೃತ್ತಿಯರಿಗೆ ಶುಭ ಸುದ್ದಿಯು ಇರಲಿದೆ. ಅನಗತ್ಯ ವಸ್ತುಗಳನ್ನು ಕಳೆದುಕೊಳ್ಳುವಿರಿ.
ಸಿಂಹ ರಾಶಿ: ನಿಮ್ಮ ಬಳಿ ನಾಚಿಕೆ ಬಿಟ್ಟು ಪರಿಚಿತರು ಹಣ ಕೇಳುವರು. ರಾಜಕಾರಣದ ದಿಕ್ಕು ನಿಮಗೆ ಅರ್ಥವಾಗುವುದು ಕಷ್ಟ. ಇಂದು ನೀವು ಯಾರ ಮಾತನ್ನೂ ಕೇಳದೇ ನಿಮ್ಮಷ್ಟಕ್ಕೆ ನಿರ್ಧಾರಕ್ಕೆ ಬರುವಿರಿ. ನಿಮ್ಮ ಅಸಹಜ ವರ್ತನೆಯು ನಿಮ್ಮರಿಗೆ ಸಿಟ್ಟನ್ನು ತರಿಸಬಹುದು. ಎಲ್ಲರನ್ನೂ ನೀವು ಸಮಾನಭಾವದಿಂದ ಕಾಣಬೇಕಾಗುವುದು. ಮಹಿಳೆಯರನ್ನು ಸಿಕ್ಕ ಗೌರವವನ್ನು ಅತಿಯಾಗಿ ಭಾವಿಸುವುದು ಬೇಡ. ಪ್ರಯಾಣದಲ್ಲಿ ಸುಖವಿರಲಿದೆ. ನಿಮಗೆ ಇಂದು ನೇರವಾಗಿ ಕೆಲಸಗಳನ್ನು ಮಾಡಲು ಕಷ್ಟವಾದೀತು. ನಿವೇಶನ ಖರೀದಿಯಿಂದ ಒಂದು ಚಿಂತೆ ದೂರಾಗಲಿದೆ. ಇನ್ನೊಬ್ಬರ ಮೂಲಕ ಎಲ್ಲ ಕೆಲಸಗಳನ್ನು ಮಾಡಿಸುವಿರಿ. ಅಪರಿಚಿತರ ಸಂಪರ್ಕದಿಂದ ನಿಮ್ಮ ಸ್ನೇಹಿತರ ನಡುವಿನ ಆತ್ಮೀಯತೆ ದೂರಾಗುವುದು. ಬೇರೆಯವರ ಜೊತೆ ನಿಮ್ಮ ವರ್ತನೆಯು ಸರಿಯಾಗಿರಲಿ. ಯಾರ ಮೇಲೂ ಅತಿಯಾಗಿ ಸಿಟ್ಟಾಗುವುದು ಬೇಡ. ಶುದ್ಧ ವಸ್ತ್ರಕ್ಕೆ ಸಣ್ಣ ಚುಕ್ಕೆಯೂ ದೊಡ್ಡದೇ. ನಿಮ್ಮ ಗೆಳತಿಯ ಜೊತೆ ಅಸಭ್ಯವಾಗಿ ನಡೆದುಕೊಂಡು ಅವರಿಂದ ದೂರವೂ ಆಗಬಹುದು. ವಾಹನ ಖರೀದಿಸಲು ನಿಮಗೆ ಯಾರಾದರೂ ಒತ್ತಾಯಮಾಡಬಹುದು.
ಕನ್ಯಾ ರಾಶಿ: ಮನೆಯವರ ತಾಪತ್ರಯದಿಂದ ಪೂರ್ವನಿರ್ಧಾರಗಳು ಬದಲಾಗುವುದು. ಸ್ನೇಹಿತರ ಜೊತೆ ಸಂತೋಷದ ಕೂಟದಲ್ಲಿ ಭಾಗಿಯಾಗುವಿರಿ. ವಿನ್ಯಾಸಕಾರರಿಗೆ ಪೂರಕವಾದ ಕಾರ್ಯವು ಸಿಗುವುದು. ನಿಮ್ಮ ಶಿಸ್ತಿನ ಜೀವನವನ್ನು ಯಾರೂ ಪ್ರಶ್ನಿಸಲಾರರು. ಹಣದ ವ್ಯವಹಾರವನ್ನು ಒಬ್ಬರೇ ಮಾಡುವುದು ಬೇಡ. ನಂಬಿಕಸ್ಥರನ್ನು ನಿಮ್ಮ ಜೊತೆ ಇಟ್ಟುಕೊಳ್ಳಿ. ಇನ್ನೊಬ್ಬರನ್ನು ಹಗುರಾಗಿ ಕಾಣುವುದು ನಿಮಗೆ ಅಭ್ಯಾಸವಾಗಿದ್ದು, ಅದನ್ನು ಬಿಡುವುದು ಒಳ್ಳೆಯದು. ಬಿಡುವು ಮಾಡಿಕೊಂಡು ಲೆಕ್ಕಪತ್ರದ ದಾಖಲೆಯನ್ನು ಪರಿಷ್ಕರಿಸಿ. ನಿಮ್ಮ ಆರ್ಥಿಕ ಸ್ಥಿತಿಯನ್ನು ಕಂಡು ಯಾರೂ ಸಾಲವನ್ನು ಕೊಡಲಾರರು. ನಿಮ್ಮ ಮಾತುಗಳು ಕುಟುಂಬದ ಗೌರವವನ್ನು ಕಡಿಮೆ ಮಾಡೀತು. ಭೂಮಿಯ ವ್ಯವಹಾರವನ್ನು ಮಾಡಲು ನಿಮಗೆ ಮನಸ್ಸು ಇಲ್ಲವಾಗಬಹುದು. ಇಂದಿನ ದೂರಪ್ರಯಾಣವು ನಿರಾಶಾದಾಯಕವಾಗಿದ್ದು ಎಲ್ಲರನ್ನೂ ಹೀಗಳೆಯುವಿರಿ. ಯಾವುದಾದರೂ ಕಲೆಯು ನಿಮ್ಮನ್ನು ಸೆಳೆಯಬಹುದು. ವಿದೇಶದಲ್ಲಿ ಉನ್ನತ ಅಭ್ಯಾಸಕ್ಕೆ ಅವಕಾಶ ಸಿಗುವುದು.
ತುಲಾ ರಾಶಿ: ಕೋಪದಲ್ಲಿ ಆಡಿದ ಮಾತಿಗೆ ದಂಡವನ್ನು ಹೇಗಾದರೂ ನೀಡಲೇಬೇಕಾಗುವುದು. ನಿಮ್ಮ ಪದಾಧಿಕಾರವು ತಪ್ಪುವ ಸಾಧ್ಯತೆ ಇದೆ. ನೀವು ನಿರೀಕ್ಷಿಸುತ್ತಿರುವ ಸಮಯವು ಇನ್ನೂ ಬಾರದೆಂದು ನಿಮಗೆ ಸಂಕಟವಾಗಬಹುದು. ಸತ್ಯವನ್ನು ನೀವು ಬಿಡುವ ಸಾಧ್ಯತೆ ಇದೆ. ಬೇಕಾದಷ್ಟು ಸಂಪತ್ತಿದ್ದರೂ ನಿಮಗೆ ನೆಮ್ಮದಿಯ ಕೊರತೆ ಅಧಿಕವಾಗಿ ಇರಿಲಿದೆ. ನೀವು ಕೃತಜ್ಞತೆಯನ್ನು ಮರೆತುವಿರಿ. ಕೈಲಾದ ಸಹಾಯವನ್ನು ಮಾಡಿ. ಸಂಬಂಧಗಳ ಮಹತ್ತ್ವವನ್ನು ನೀವು ಕಳೆದುಕೊಳ್ಳಬಹುದು. ವಿಶ್ವಾಸಕ್ಕೆ ಯೋಗ್ಯವಾದ ಕಾರ್ಯವನ್ನು ಮಾಡಲಾಗದು. ಅಧಿಕಾರವರ್ಗದಿಂದ ನಿಮಗೆ ಮಾನಸಿಕ ಕಿರಿಕಿರಿ ಆಗಬಹುದು. ಉಚ್ಚ ಸ್ವರದಲ್ಲಿ ಮಾತನಾಡಿದ ಮಾತ್ರಕ್ಕೆ ಗೆಲುವು ನಿಮ್ಮದಾಗದು. ಉಡುಗೊರೆಯನ್ನು ನೀವು ಆಪ್ತರಿಂದ ದಾಕ್ಷಿಣ್ಯದಿಂದ ಪಡೆಯುವಿರಿ. ನಿಮ್ಮ ಬಗ್ಗೆ ಸರಿಯಾದ ಪರಿಚಯವನ್ನು ಇತರರಿಗೆ ಕೊಡಿ. ನಿಮ್ಮ ಮಾತುಗಳನ್ನು ನಿರ್ಲಕ್ಷ್ಯ ಮಾಡಬಹುದು. ನಿಮ್ಮ ವಿವಾಹವು ದೈವದ ಇಚ್ಛೆಯಂತೆ ಆಗಿದ್ದು ಅದನ್ನು ನಂಬಿ ನಡೆಯಿರಿ. ಆರ್ಥಿಕ ವಹಿವಾಟಿಗೆ ಬೇಕಾದ ವ್ಯವಸ್ಥೆಯನ್ನು ಮಾಡಿಕೊಳ್ಳುವಿರಿ.
ವೃಶ್ಚಿಕ ರಾಶಿ: ಪರೀಕ್ಷೆಯ ಸಿದ್ಧತೆಯು ನಿಮ್ಮನ್ನು ಗಟ್ಟಿಯನ್ನಾಗಿಯೂ ಮಾಡುತ್ತವೆ. ನೋವಾಗುವಂತೆ ಇಂದು ಮಾತನಾಡಿ ಅನಂತರ ಕ್ಷಮೆಯನ್ನು ಕೇಳುವ ನಟನೆ ಮಾಡುವಿರಿ. ದುಸ್ಸಾಹಸಗಳು ನಿಮ್ಮ ಧೈರ್ಯವನ್ನು ಕೆಡಿಸಬಹುದು. ಎಷ್ಟೇ ಪ್ರಯತ್ನಪಟ್ಟರೂ ನೀವು ಮಕ್ಕಳನ್ನು ಸರಿಮಾಡಲು ಆಗಲು ಎಂಬ ಹಂತಕ್ಕೆ ಬರುವಿರಿ. ಆರ್ಥಿಕ ವ್ಯವಹಾರದವರಿಗೆ ಅಲ್ಪ ಬಿಡುವು ಸಿಗಬಹುದು. ಉದ್ಯೋಗದ ಕಾರಣಕ್ಕೆ ನೀವು ಯಾರಿಗೋ ಕಾದು ಸಮಯವನ್ನು ವ್ಯರ್ಥ ಮಾಡಿಕೊಳ್ಳುವಿರಿ. ಅನ್ಯರ ರಹಸ್ಯದ ಬಗ್ಗೆ ಅತ್ಯಾಸಕ್ತಿ. ನೀವು ಮಾತನ್ನು ಕಡಿಮೆ ಮಾಡುವುದು ಒಳ್ಳೆಯದು. ಯಾವ ಕಾರ್ಯವನ್ನೂ ನೀವು ನೀರಸವಾಗಿ ಮಾಡುವುದು ಬೇಡ. ಕೂಡಿಬರುವ ವಿವಾಹಭಾಗ್ಯವನ್ನು ನೀವು ನಿರಾಕರಿಸುವುದು ಬೇಡ. ಆತುರದಿಂದ ಏನಾದರೂ ಅಚಾತುರ್ಯವನ್ನು ಮಾಡಿಕೊಳ್ಳಬಹುದು. ಅಂದಾಜಿನ ವ್ಯವಹಾರದಲ್ಲಿ ಸೋಲಾಗುವುದು. ವೃತ್ತಿಯಲ್ಲಿ ಕಾರ್ಯವು ಸರಿಯಾಗದೇ ಸಂಕಷ್ಟಕ್ಕೆ ಬೀಳುವಿರಿ.
ಧನು ರಾಶಿ: ಅವಧಿ ಮೀರಿ ಉದ್ಯೋಗವನ್ನು ಈ ದಿನ ಮಾಡಬೇಕಾಗುವುದು. ಯೋಜಿತವಾದ ಪ್ರಯಾಣವನ್ನು ಮುಂದೂಡುವುದು ಉಚಿತ. ದುರಭ್ಯಾಸವಿಲ್ಲದೇ ಇರುವುದೇ ದೊಡ್ಡ ಯೋಗ್ಯತೆ. ಅವರನ್ನು ಕಳೆದುಕೊಳ್ಳುವುದು ಬೇಡ. ಎಲ್ಲರಿಂದ ಹೊಗಳಿಸಿಕೊಳ್ಳಬೇಕು ಎನಿಸಬಹುದು. ಕೆಲಸದಲ್ಲಿ ನಿಮಗೆ ಬೆಂಬಲವು ಕಡಿಮೆ ಸಿಗಬಹುದು. ನಿಮ್ಮ ದುರಾಲೋಚನೆಗೆ ನೀವೇ ಪೂರ್ಣ ವಿರಾಮವನ್ನು ಹಾಕಿಕೊಳ್ಳಬಹುದು. ಅಸಭ್ಯ ಮಾತುಗಳು ನಿಮ್ಮ ನಡವಳಿಕೆಯನ್ನು ಹೇಳೀತು. ಅಧಿಕಾರವು ಬರುವ ಹಾಗೆ ಇದ್ದರೂ ಅದನ್ನು ತಪ್ಪಿಸಬಹುದು. ಸರಿಯಾದ ಆಲೋಚನೆಯನ್ನು ಮಾಡದೇ ಕೆಲಸವನ್ನು ಮಾಡಿದ ಕಾರಣ ತೊಂದರೆಗಳು ಬರಬಹುದು. ವರ್ಷದ ಆಧಾರದ ಮೇಲೆ ಸಾಲ ತೀರಿಸುವುದು ಉತ್ತಮ. ನಿಮ್ಮನ್ನು ಹೊಗಳಿಕೊಳ್ಳುವುದು ಸರಿ ಕಾಣಿಸದು. ಮೇಲ್ನೋಟಕ್ಕೇ ನಿಮ್ಮ ಸ್ವಭಾವದ ಅರಿವಾಗಬಹುದು. ತಾಳ್ಮೆಯನ್ನು ನೀವು ಪ್ರಯತ್ನಪೂರ್ವಕವಾಗಿ ತಂದುಕೊಳ್ಳಬೇಕಾದೀತು. ಸಂಗಾತಿಯ ಮನೋಭಾವವನ್ನು ಅರ್ಥವಾಗುವುದು ಕಷ್ಟವಾದೀತು.
ಮಕರ ರಾಶಿ: ವೈದ್ಯಕೀಯ ಪರೀಕ್ಷೆಯನ್ನು ಮಾಡಿಸಿಕೊಂಡು ದೇಹದ ಬಲಾಬಲದ ಬಗ್ಗೆ ತಿಳಿಯಿರಿ. ವಿದ್ಯಾರ್ಥಿಗಳ ಸಾಧನೆಗೆ ಪ್ರಶಂಸೆ ಸಿಗಲಿದೆ. ನಿಮ್ಮದಾದ ಪ್ರಖರವಾದ ಯೋಚನೆಯನ್ನು ಪ್ರಸ್ತುತ ಪಡಿಸುವಿರಿ. ನಿಮ್ಮ ಕೆಲಸಕ್ಕೆ ಎಲ್ಲರಿಂದ ಪ್ರಶಂಸೆ ಸಿಗಲಿದೆ. ವಿದ್ಯಾರ್ಥಿಗಳು ತಮ್ಮ ಅಸ್ತಿತ್ವವನ್ನು ತೋರಿಸುವರು. ಸಾಮಾಜಿಕ ಕಾರ್ಯಗಳನ್ನು ಮಾಡಲು ನೀವು ಬಹಳ ಉತ್ಸಾಹದಿಂದ ಇರುವಿರಿ. ಮನಸ್ಸಿನಲ್ಲಿ ಒಂದಿಲ್ಲೊಂದು ಭೀತಿಯು ಕಾಡಬಹುದು. ಅತಿಯಾದೆ ಆಸೆಯಿಂದ ನಿಮಗೆ ದುಃಖವು ಬರಬಹುದು. ನಿಮ್ಮ ಆದಾಯವನ್ನು ಯಾರಿಗೂ ಬಿಟ್ಟುಕೊಡಲಾರಿರಿ. ನಿಮ್ಮ ಬಗ್ಗೆ ನೀವು ಅವಲೋಕನ ಮಾಡಿಕೊಳ್ಳುವ ಅಗತ್ಯ ಇರಲಿದೆ. ಎಲ್ಲವನ್ನೂ ನೀವು ಅತಿಯಾಗಿ ವೈಭವೀಕರಿಸುವಿರಿ. ಗೊತ್ತಿದ್ದರೂ ಗೊತ್ತಿಲ್ಲದಂತೆ ಮೌನವಹಿಸಿದರೆ ಶ್ರೇಷ್ಠ. ಅದರಷ್ಟಕ್ಕೆ ಬಿಡುವುದು ಒಳ್ಳೆಯದು. ವ್ಯಕ್ತಿಗತವಾದ ಭಾವವನ್ನು ಇಟ್ಟುಕೊಳ್ಳುವುದು ಬೇಡ. ಯಾರೋ ಮಾಡಿದ ತಪ್ಪಿಗೆ ನೀವು ಕಷ್ಟವನ್ನು ಅನುಭವಿಸಬೇಕಾದೀತು. ಓಡಾಟದಲ್ಲಿ ಕೆಲವು ಅಡೆತಡೆಗಳ ಬರಬಹುದು.
ಕುಂಭ ರಾಶಿ: ಹಲವು ಮೂಲಗಳಿಂದ ಬರುವ ಏಕಾಭಿಪ್ರಾಯಕ್ಕೆ ಬೆಲೆ ಕೊಡಿ. ಒಬ್ಬರ ಮಾತನ್ನೇ ನಂಬಿರುವುದು ಬೇಡ. ಆಹಾರವನ್ನು ಕೇಳಿದರಿಗೆ ಏನು ಕೊಟ್ಟರೂ ಆಗುತ್ತದೆ ಎಂದು ಏನಾದರೂ ಕೊಟ್ಟುಬಿಡಬೇಡಿ. ಇಂದು ಉದ್ಯೋಗದಲ್ಲಿ ಒತ್ತಡವು ಅಧಿಕವಾಗುವುದು. ಅಸಂತೋಷದಿಂದ ನೀವು ಹೆಚ್ಚು ದಿನವನ್ನು ಕಳೆಯುವಿರಿ. ಬಂಧುಗಳ ಮಾತಿನಿಂದ ನಿಮಗೆ ಬೇಸರವಾಗಬಹುದು. ಸಂಗಾತಿಯ ಜೊತೆ ವಾದಕ್ಕೆ ಇಳಿಯುವಿರಿ. ಕಛೇರಿಯಲ್ಲಿ ಆದ ಜಗಳವು ಉದ್ಯೋಗವನ್ನು ಕಳೆದುಕೊಳ್ಳುವ ಹಂತಕ್ಕೆ ಹೋಗಬಹುದು. ಸಂಗಾತಿಯನ್ನು ನೀವು ಹಳೆಯ ಘಟನೆಗಳ ಜೊತೆಗೆ ಟೀಕಿಸಬಹುದು. ನಿಮ್ಮ ಲೆಕ್ಕಾಚಾರಗಳು ಪೂರ್ಣ ಸರಿಯಾಗದು. ನಿಮಗೆ ಪ್ರೀತಿಯ ಕೊರತೆ ಕಾಣಿಸುವುದು. ಜೀವನೋಪಾಯಕ್ಕಾಗಿ ಹೆಚ್ಚು ದುಡಿಮೆಯನ್ನು ಮಾಡಬೇಕಾದೀತು. ಇಷ್ಟವಿಲ್ಲದ ಕಾರ್ಯವನ್ನು ಮಾಡಲು ನೀವು ಹಿಂಜರಿಯುವಿರಿ. ತಾಯಿಯ ಜೊತೆ ಎಲ್ಲವನ್ನೂ ಹೇಳಬೇಕು ಎನಿಸಬಹುದು. ವ್ಯವಹಾರಕ್ಕೆ ಬೇಕಾದ ಬಂಡವಾಳವನ್ನು ಇಟ್ಟುಕೊಂಡೇ ಹೊರಡಿ.
ಮೀನ ರಾಶಿ: ಹಣಕಾಸಿಗೆ ಒತ್ತಡ ಬಂದಾಗ ಹೆಚ್ಚಿನ ಬಡ್ಡಿಯಾದರೂ ಪಡೆಯಬೇಕಾಗುವುದು. ಹಲವು ದಿನಗಳ ಹೋರಾಟದ ಫಲವಾಗಿ ನಿಮ್ಮ ಸ್ಥಳವನ್ನು ಪುನಃ ಪಡೆದುಕೊಳ್ಳುವಿರಿ. ಇಂದು ನಿಮ್ಮ ಜ್ಞಾನದ ಜೊತೆ ನಿಮ್ಮ ಪ್ರಯತ್ನವೂ ಇದ್ದರೆ ಬಯಸಿದ ಯಶಸ್ಸನ್ನು ಪಡೆಯಬಹುದು. ಏಕಾಂಗಿಯಾಗಿ ಇರಲು ನೀವು ಬಯಸಬಹುದು. ವಿದ್ಯಾಭ್ಯಾಸದಿಂದ ಸ್ವಲ್ಪ ಬಿಡುಗಡೆಯನ್ನು ಬಯಸುವಿರಿ. ಬಯಸಿದ್ದನ್ನು ಪಡೆಯಲು ಹೆಚ್ಚು ಪ್ರಯತ್ನ ಪಡಬೇಕಾದೀತು. ಮಧ್ಯದಲ್ಲಿ ಹಣ ಸಿಗುಂತಹ ಹೂಡಿಕೆಯನ್ನೋ ವಿಮೆಯನ್ನೋ ಮಾಡಿಸಿಕೊಳ್ಳುವಿರಿ. ಉದ್ಯೋಗದಲ್ಲಿ ಉತ್ತಮ ಅವಕಾಶಗಳು ಸಿಗಬಹುದು. ಮೋಜಿಗಾಗಿ ಹಣವನ್ನು ವ್ಯಯಿಸುವಿರಿ. ಪುಣ್ಯಸ್ಥಳಗಳಿಗೆ ಹೋಗುವ ಮನಸ್ಸಿದ್ದರೂ ಕಾರ್ಯದ ಒತ್ತಡಕ್ಕೆ ಹೋಗಲಾಗದು. ಕಳೆದುಕೊಂಡಿದ್ದನ್ನು ಪಡೆದುಕೊಳ್ಳಲು ನೀವು ಬೇರೆ ಮಾರ್ಗಗಳನ್ನು ಅನುಸರಿಸುವಿರಿ. ಮಕ್ಕಳಿಂದ ನಿಮಗೆ ಸಂತೋಷವು ಸಿಗುವುದು. ಸಿಕ್ಕ ಸಂಪತ್ತನ್ನು ಜೋಪಾನ ಮಾಡಿಕೊಳ್ಳಿ. ತಾಯಿಯು ನಿಮ್ಮನ್ನು ಬೆಂಬಲಿಸುವಳು. ಸ್ಥಿರಾಸ್ತಿಯ ಉಳಿವಿಗೆ ಹೋರಾಟವನ್ನೇ ಮಾಡಬೇಕಾದೀತು.
– ಲೋಹಿತ ಹೆಬ್ಬಾರ್ – 8762924271 (what’s app only)