AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today 24 October : ಇಂದು ಈ ರಾಶಿಯವರಿಗೆ ಅದೃಷ್ಟವೆಲ್ಲ ದುರದೃಷ್ಟದ ರೀತಿಯಲ್ಲಿ ಗೋಚರ

ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಶರದ್ ಋತುವಿನ ಕಾರ್ತಿಕ ಮಾಸ ಶುಕ್ಲ ಪಕ್ಷದ ತೃತೀಯಾ ತಿಥಿ ಶುಕ್ರವಾರ ಅಲ್ಪಜ್ಞತೆ, ಅನಪೇಕ್ಷಿತ ಪ್ರವೇಶ, ಮುಂಗಡ ಹಣ, ಪಾಲುದಾರಿಕೆಯಲ್ಲಿ ಮೌನ, ಜನಬೆಂಬಲ, ನಿರ್ವಹಣೆಯಿಂದ ಹಿಂದೇಟು, ಮಕ್ಕಳ ಯೌವನದಿಂದ ಭಯ ಇವೇ ಮೊದಲಾದವು ಇಂದಿನ ಭವಿಷ್ಯ.

Horoscope Today 24 October : ಇಂದು ಈ ರಾಶಿಯವರಿಗೆ ಅದೃಷ್ಟವೆಲ್ಲ ದುರದೃಷ್ಟದ ರೀತಿಯಲ್ಲಿ ಗೋಚರ
Horoscope
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ಸುಷ್ಮಾ ಚಕ್ರೆ|

Updated on: Oct 24, 2025 | 2:57 AM

Share

ನಿತ್ಯ ಪಂಚಾಂಗ: ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ದಕ್ಷಿಣಾಯನ, ಋತು : ಶರದ್, ಚಾಂದ್ರ ಮಾಸ : ಕಾರ್ತಿಕ, ಸೌರ ಮಾಸ : ತುಲಾ, ಮಹಾನಕ್ಷತ್ರ : ಚಿತ್ರಾ, ವಾರ : ಶುಕ್ರ ಪಕ್ಷ : ಶುಕ್ಲ, ತಿಥಿ : ತೃತೀಯಾ, ನಿತ್ಯನಕ್ಷತ್ರ : ಜ್ಯೇಷ್ಠಾ, ಯೋಗ : ಪ್ರೀತಿ, ಕರಣ : ತೈತಿಲ, ಸೂರ್ಯೋದಯ – 06 – 12 am, ಸೂರ್ಯಾಸ್ತ – 05 – 54 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 10:36 – 12:04, ಗುಳಿಕ ಕಾಲ 07:40 – 09:08, ಯಮಗಂಡ ಕಾಲ 14:59 – 16:27

ಮೇಷ ರಾಶಿ :

ಗುರು ಅಥವಾ ದೇವರ ನಾಮಸ್ಮರಣೆಯ‌ನ್ನು ಹೆಚ್ಚು ಮಾಡುವಿರಿ. ನಿಮ್ಮ ಕಾರ್ಯವೇ ಇಂದು ಎಲ್ಲವನ್ನು ಹೇಳುವುದು. ನೀವು ಹಣಕಾಸಿನ ವ್ಯವಹಾರದಲ್ಲಿ ಪಾರದರ್ಶಕತೆಯನ್ನು ಇಟ್ಟುಕೊಳ್ಳಬೇಕಾಗುವುದು. ನಿಮ್ಮ ಕಾರ್ಯವು ಆಗಬೇಕಾದರೆ ತಿರುಗಾಟವನ್ನು ಮಾಡುವುದು ಅನಿವಾರ್ಯ. ಸಂಗಾತಿಗೆ ಯಾವುದಾದರೂ ರೀತಿಯಲ್ಲಿ ಸಂತೋಷವಾಗುವಂತೆ ನೋಡಿಕೊಳ್ಳುವಿರಿ. ಇಬ್ಬರ ನಡುವೆ ವಾಗ್ವಾದವೂ ಆಗಲಿದೆ. ನೀವು ಇಂದು ಯಾವ ವಿಚಾರವನ್ನು ಮಾತನಾಡುವುದಿದ್ದರೂ ಎಚ್ಚರಿಕೆಯಿಂದ ಮಾತನಾಡಿ. ಬಂಧುಗಳ ಜೊತೆ ಹೇಳಬೇಕಾದ ವಿಷಯವನ್ನು ಪ್ರಸ್ತಾಪಿಸಲು ಸಂದರ್ಭ ಕೂಡಿಬರದು. ನಿಮ್ಮ ಮಾತೇ ನಿಮಗೆ ತೊಂದರೆಯನ್ನು ತರುವುದು. ಸಂಗಾತಿಯು ಇತರರನ್ನು ಹೋಲಿಸಿಕೊಂಡು ಮಾತನಾಡುವರು. ಹಿನ್ನಡೆಯನ್ನೂ ಸಕಾರಾತ್ಮಕವಾಗಿ ನೋಡಿಕೊಳ್ಳುವಿರಿ. ನಿಮ್ಮ ಉತ್ಸಾಹವನ್ನು ಭಂಗ ಮಾಡುವ ಮಾತುಗಳು ನಿಮ್ಮ ನಡುವೇ ಬರಬಹುದು. ವಿಜಯದ ಮೆಟ್ಟಿಲು ನಿಮಗೆ ಕಷ್ಟವಾಗದು. ಯಾರನ್ನೂ ಗೆಲ್ಲುವೆನು ಎಂಬ ಹುಂಬುತನ ಬೇಡ.

ವೃಷಭ ರಾಶಿ :

ಬೇಡದೇ ಇರುವ ಕಡೆ ನಿಮ್ಮ ಪ್ರವೇಶ, ಮುಖಭಂಗದಿಂದ ಹಿಂದಿರುಗುವಿರಿ. ಎಲ್ಲವನ್ನೂ ಕಳೆದುಕೊಳ್ಳುವ ಬದಲು ಅಲ್ಪವಾದರೂ ಉಳಿದುಕೊಳ್ಳಲಿ ಎಂಬ ನಿರ್ಧಾರವೇ ಸರಿ. ವೃತ್ತಿಯನ್ನು ಹೊರತುಪಡಿಸಿ ಹೊಸ ಅವಕಾಶಗಳು ನಿಮ್ಮನ್ನು ಹುಡುಕಿಕೊಂಡು ಬರಬಹುದು. ಸಂಕೀರ್ಣತೆಯಿಂದ‌ ಹೊರಬಂದಾಗ ದಾರಿ ಸಿಗುವುದು. ಉತ್ತಮ ಸಮಯದ ನಿರೀಕ್ಷೆಯಲ್ಲಿ ಇದ್ದರೂ ನಿಮಗೆ ಸಮಾಧಾನ ಇರದು. ನಿಮ್ಮಲ್ಲಿ ಇರುವ ವಸ್ತುಗಳನ್ನು ನೀವು ಯಾರಿಗಾದರೂ ನೀಡುವಿರಿ. ಸಿಟ್ಟನ್ನು ಮಾಡಬಾರದು ಎಂದುಕೊಂಡರೂ ಸಂದರ್ಭವು ನಿಮ್ಮ ನಿರ್ಧಾರವನ್ನು ಬದಲಿಸುವುದು. ಮಕ್ಕಳಿಂದ ನೆಮ್ಮದಿಯು ಸಿಗುವುದು.

ಎಲ್ಲವೂ ಗೊತ್ತಿದ್ದರೂ ಹಿರಿಯರನ್ನು ಕೇಳಿ ಮುನ್ನಡೆಯಿರಿ. ಮನಸ್ಸನ್ನು ಶಾಂತವಾಗಿ ಇರಿಸಿಕೊಂಡು, ನಿಮ್ಮನ್ನು ಅಲ್ಪಜ್ಞರೆಂದೇ ಭಾವಿಸಿ. ವ್ಯವಹಾರವನ್ನು ಲಾಭದಾಯಕವನ್ನಾಗಿ ಮಾಡಿಕೊಳ್ಳಲು ನೀವು ಸೋಲಬಹುದು. ನಿಮ್ಮ ಗುರಿಯನ್ನು ತಲುಪಲು ನಿಮಗೆ ವಿಘ್ನಗಳು ಬರಬಹುದು. ಅಂದುಕೊಂಡಿದ್ದನ್ನು ಸಾಧಿಸಲಾಗದು ಎಂಬ ಅಳುಕು ನಿಮ್ಮಲ್ಲಿ ಇರುವುದು.

ಮಿಥುನ ರಾಶಿ :

ಸ್ತ್ರೀಯರಿಗೆ ಪುನಃ ಖಾಯಿಲೆ ಕಾಣಿಸಿಕೊಳ್ಳುವುದು. ನಿಮ್ಮ ಹಸ್ತಕ್ಷೇಪವು ಬೇರೆಯವರಿಗೆ ಹಿಡಿಸದು. ಇಂದು ನಿರುಪಯೋಗಿ ವಸ್ತುಗಳನ್ನು ಅನ್ಯರಿಗೆ ಕೊಡುವಿರಿ. ವೈಯಕ್ತಿಕ‌ ಕೆಲಸಗಳು ಬಹಳಷ್ಟು ಇದ್ದು ಅದನ್ನು ಮಾಡಲು ನಿಮಗೆ ಸಮಯವು ಸಿಗದು. ಮಿತ್ರರ ಸಹಾಯದಿಂದ ನಿಮಗೆ ಉತ್ತಮ‌ ಲಾಭವು ಸಿಗಲಿದೆ. ಎಲ್ಲರೆದುರು ನಿಮಗೆ ಅಪಮಾನವಾಗುವ ಸಂದರ್ಭವು ಬರಬಹುದು. ಇನ್ನೊಬ್ಬರ ನೋವನ್ನು ನೋಡಿ ಸುಮ್ಮನೆ ಇರಲಾಗದು. ನಿಮ್ಮ‌ ಇಂದಿನ‌ ಸಂಪಾದನೆಯು ಮನೆಯ ಬಳಕೆಗೇ ಆಗವುದು. ಯಾವುದೇ ಫಲಾಪೇಕ್ಷೆ ಇಲ್ಲದೇ ಹಣವನ್ನು ಕೊಡುವಿರಿ. ಕುಲದೇವರ ದರ್ಶನವನ್ನು ನೀವು ಮಾಡಲಿದ್ದು ನೆಮ್ಮದಿ ಇರುವುದು.‌ ಗೆಳೆತನದಿಂದ ಸಲ್ಲದ ಮಾತುಗಳು ನಿಮ್ಮ ಬಗ್ಗೆ ಬರಬಹುದು. ನಿಮ್ಮ ಹೇಳಿಕೆಗಳು ಕಾನೂನು ಚೌಕಟ್ಟಿನಲ್ಲಿ ಇರಲಿ. ಯಾರ‌ ಮಾತನ್ನೂ ಕೇಳದೇ ನಿಮ್ಮದೇ ದಾರಿಯಲ್ಲಿ ನಡೆಯುವಿರಿ. ನಿಮ್ಮ ಕಾರ್ಯಕ್ಷೇತ್ರದಲ್ಲಿ ಉತ್ತಮ ಪ್ರಗತಿ ಇರಲಿದೆ. ನಿಮ್ಮ ದಕ್ಷ ಕಾರ್ಯವು ಎಲ್ಲರಿಗೂ ಮಾದರಿಯಾದೀತು.

ಕರ್ಕಾಟಕ ರಾಶಿ :

ಪಾಲುದಾರರಾಗಿದ್ದರೂ ವ್ಯಾಪಾರದ ನಷ್ಟವನ್ನು ಹೇಳದೇ ಮುಚ್ಚಿಟ್ಟಿದ್ದು ರಕ್ತದ ಒತ್ತಡವನ್ನು ಅಧಿಕಗೊಳಿಸುವುದು. ನಿಮ್ಮ ದೈಹಿಕ‌ ಸಮಸ್ಯೆಯನ್ನು ಮುಚ್ಚಿಟ್ಟು ಪ್ರಯೋಜನವಾಗದು. ಅವಿವಾಹಿತರಿಗೆ ಇಂದು ವಿವಾಹಕ್ಕೆ ಯೋಗ್ಯವಾದ ಮಾತುಗಳು ಕೇಳಿಸಬಹುದು. ವಿದ್ಯಾರ್ಥಿಗಳ ಪ್ರತಿಭೆಯನ್ನು ಹೊರ ಹಾಕಲು ಸೂಕ್ತ ಸ್ಥಳವು ಸಿಗಬಹುದು. ನಿಮಗೆ ಇಷ್ಟವಾದ ವಿಚಾರವನ್ನು ಬೇಗ ಗ್ರಹಿಸುವಿರಿ. ಮತ್ತೇನನ್ನೂ ವಿಚಾರಿಸದೇ ಸಿಕ್ಕ ಅವಕಾಶವನ್ನು ಸದ್ಯ ಬಳಸಿಕೊಳ್ಳಿ. ನಿಮ್ಮ‌ನಕಾರಾತ್ಮಕ ಆಲೋಚನೆಗಳಿಂದ ಕುಟುಂಬವನ್ನೂ ಕೆಡಸುವುದು ಬೇಡ. ನಿಮ್ಮ ಸಮಸ್ಯೆಗೆ ಅನಿರೀಕ್ಷಿತ ಪರಿಹಾರವೂ ಸಿಗುವುದು. ಅಪರಿಚಿತರು ನಿಮ್ಮ ಉದ್ಯೋಗಕ್ಕೆ ಸಂಬಂಧಿಸಿದಂತೆ ಸಲಹೆಯನ್ನು ಕೊಡುವರು. ಪ್ರೀತಿಪಾತ್ರರ ಭೇಟಿಯು ನಿಮಗೆ ನೆಮ್ಮದಿಯನ್ನು ನೀಡಬಹುದು. ಉದ್ಯೋಗದ ಕಾರಣ ಓಡಾಟವು ಇರಬಹುದು. ನಿಮಗೆ ಆಯ್ಕೆಗಳನ್ನು ಮಾಡಲು ಗೊಂದಲವಿರಬಹುದು. ನಿಮ್ಮ‌ ಮೇಲಿರುವ ಭಾವನೆಯು ದೂರಾಗಬಹುದು. ಆತುರದಲ್ಲಿ ನಿಮ್ಮ ಎಲ್ಲ ಕಾರ್ಯವೂ ಮೊಟಕುಮಾಡುವಿರಿ.

ಸಿಂಹ ರಾಶಿ :

ಮುಂಗಡ ಹಣವನ್ನು ಪಡೆದು ಕೆಲಸ ಮಾಡಲು ಆಲಸ್ಯ ಮಾಡುವಿರಿ. ನಿಮ್ಮ ಪೂರ್ವನಿರ್ಧಾರಗಳು ಬದಲಾಗಬಹುದು. ನಿಮ್ಮ ಬಂಧುಗಳ ಕಡೆಯಿಂದ ವಿವಾಹವು ಏರ್ಪಡಬಹುದು. ಪರಿಶ್ರಮಕ್ಕೆ ತಕ್ಕ ಫಲವನ್ನೂ ನೀವು ಅಪೇಕ್ಷಿಸುವಿರಿ. ನೀವು ಮಾಡುವ ಕಾರ್ಯದಲ್ಲಿ ಗೊಂದಲವಿದ್ದರೆ ಯಾರನ್ನಾದರೂ ಕೇಳಿ. ನಿಮ್ಮ ಅನುಕೂಲತೆಯನ್ನು ನೋಡಿಯೇ ಹೆಜ್ಜೆ ಇಡುವುದು ಉತ್ತಮ. ಮುಂದೂಡುತ್ತ ಕುಳಿತರೆ ಇನ್ನಷ್ಟು ಗೊಂದಲಗಳು ಹೆಚ್ಚಾದೀತು. ಕಡಿಮೆ ಬಡ್ಡಿಯಲ್ಲಿ ನಿಮಗೆ ಸಾಲ ಸಿಗಲಿದೆ. ಸಂಗಾತಿಯ ವಿಷಯಕ್ಕೆ ನಿಮಗೆ ಬೇಸರವಾಗುವುದು. ನಿಮಗೆ ಬೇಕಾಗಿರುವ ಸಂಪತ್ತನ್ನು ಸ್ನೇಹಿತರಿಂದ ಸಾಲವಾಗಿ ಪಡೆಯುವಿರಿ. ವ್ಯವಹಾರದಲ್ಲಿ ಯಾವುದೇ ದಾಕ್ಷಿಣ್ಯ ತೋರುವುದು ಬೇಡ. ದುರಭ್ಯಾಸಗಳು ಸಹವಾಸದಿಂದ ಬರಬಹುದು. ಮನೆಗೆ ಇಂದು ವಿಳಂಬವಾಗಿ ಹೋಗುವಿರಿ. ದುರ್ಬಲ ದೇಹವನ್ನು ಊರ್ಜಿತ ಮಾಡಲು ಪ್ರಯತ್ನಿಸುವಿರಿ. ಮನೋರಂಜನೆಗೆ ಹಣವನ್ನು ಖರ್ಚು ಮಾಡುವಿರಿ. ಹಣಸಂಪಾದನೆಯ ವಿಚಾರವೇ ತಲೆಯಲ್ಲಿ ಓಡಾಡಲಿದೆ‌. ಇಂದಿನ ದಿನಕ್ಕೆ ನಿಮಗೆ ತಾಳ್ಮೆ ಅವಶ್ಯಕ.

ಕನ್ಯಾ ರಾಶಿ :

ನಿಮ್ಮ ಉಪಸ್ಥಿತಿ ಕೆಲವರಿಗೆ ಭಯವನ್ನು ತರಿಸಬಹುದು. ನಿಮ್ಮ ಉತ್ಸಾಹಕ್ಕೆ ಯಾರಾದರೂ ತಣ್ಣೀರು ಹಾಕಬಹುದು. ಇಂದು ನಿಮ್ಮ ಉದ್ಯಮದಲ್ಲಿ ಆದ ನಷ್ಟದಿಂದ ಮನಸಿನೊಳಗೆ ಸಂಕಟಪಡುವಿರಿ. ಸುಲಭ ಮಾರ್ಗದಲ್ಲಿ ಆದಾಯವನ್ನು ಪಡೆಯುವ ಯೋಜನೆಯು ಯಶಸ್ವಿಯಾಗದು. ಸರ್ಕಾರಿ ಕೆಲಸಗಳು ಒತ್ತಡದಿಂದಾಗಿ ಮುಂದುವರಿಯುವುದು. ನೀವು ಮೌನದಿಂದ ಇದ್ದಷ್ಟು ಎಲ್ಲದಕ್ಕೂ ಒಪ್ಪಿಗೆ ಸೂಚಿಸಿದ್ದೀರಿ ಎಂದಾಗುವುದು. ಸಮಯಕ್ಕೆ ಬೆಲೆ ಕೊಟ್ಟು ಎಲ್ಲವನ್ನೂ ಸಕಾಲಕ್ಕೆ ಮುಗಿಸುವಿರಿ. ಮನೆಯ ಸುತ್ತಲಿನ ಮರಗಳನ್ನು ಮಾರಾಟ ಮಾಡಿ ಹಣವನ್ನು ಸಂಪಾದಿಸುವಿರಿ. ದೇವರ ದರ್ಶನಕ್ಕೆ‌ ನೀವು ಇಂದು ಬಿಡುವು‌ಮಾಡಿಕೊಂಡು ಹೋಗುವಿರಿ. ಇಂದಿನ ನಿಮ್ಮ ಕಾರ್ಯವು ನಿಮಗೆ ತೃಪ್ತಿಕೊಡದು. ವಾಹನಕ್ಕೆ ಸಂಬಂಧಿಸಿದ ವಿಚಾರದಲ್ಲಿ ಜಾಗರೂಕತೆ ಇರಲಿ. ಒಂದು ತೀರ್ಮಾನಕ್ಕೆ ಬರಲು ಹತ್ತು ಬಾರಿ ಯೋಚಿಸಿ. ಮಕ್ಕಳು ನಿಮ್ಮನ್ನು ಪ್ರೀತಿಸುವರು. ಕೃಷಿಯ ಕಾರ್ಯವನ್ನು ಮಾಡಲು ನೀವೇ ನಿಲ್ಲಬೇಕು.

ತುಲಾ ರಾಶಿ :

ಜನಬೆಂಬಲವನ್ನು ಒಪ್ಪಿಕೊಳ್ಳದೇ ವಿಧಿಯಿಲ್ಲ. ಇಂದು ನಿಮಗೆ ಪೂರೈಕೆಯಲ್ಲಿ ಹಿನ್ನಡೆ ಅಥವಾ ಅಧಿಕ ಒತ್ತಡವಾಗಲಿದೆ. ನಿಮ್ಮ ಕಾರ್ಯದಕ್ಷತೆಗೆ ಜವಾಬ್ದಾರಿಗಳು ಬದಲಾಗಲಿವೆ. ಸ್ವಲ್ಪಮಟ್ಟಿಗೆ ಸಾಲವು ಮುಕ್ತಾಯವಾಗಿದ್ದರಿಂದ ಕುಟುಂಬದಲ್ಲಿ ಸೌಖ್ಯವು ಇರಲಿದೆ. ಎಲ್ಲ ಕೆಲಸಗಳೂ ಅಪೂರ್ಣವಾಗಿರುವುದು ನಿಮಗೆ ಕಿರಿಕಿರಿ ಆಗಲಿದೆ. ನಿಮ್ಮ ಕಾರ್ಯದ ಉದ್ದೇಶವು ಭಂಗವಾಗಬಹುದು. ಯಾವುದನ್ನು ಮುಗಿಸಬೇಕು ಎನ್ನುವ ಗೊಂದಲವೂ ಇರುವುದು. ಬಹು ಕಾರ್ಯವಿದ್ದರೂ ವಿರಾಮವನ್ನು ಪಡೆಯಬೇಕಾಗುವುದು. ಇನ್ನೊಬ್ಬರನ್ನು ಕರ್ತವ್ಯಕ್ಕೆ ಚ್ಯುತಿ ಬಾರದಂತೆ ಜೋಡಿಸುವಿರಿ. ಮಾನಸಿಕ ಒತ್ತಡದಿಂದ ತಾಳ್ಮೆಯನ್ನು ಕಳೆದುಕೊಳ್ಳುವುದು ಬೇಡ. ಇಷ್ಟು ದಿನ‌ ಮನೆಯಿಂದಲೇ ಕೆಲಸ ಮಾಡುತ್ತಿದ್ದ ನಿಮಗೆ ಇಂದು ಕಛೇರಿಗೆ ಕರೆಯುವರು. ನಿಮ್ಮ ತುರ್ತು ಕಾರ್ಯಗಳನ್ನು ನೀವು ಬಿಡಬೇಕಾದೀತು. ಹಿರಿಯರ ಮಾತುಗಳೂ ನಿಮಗೆ ಸಿಟ್ಟು ತರಿಸಬಹುದು. ಯಾರ ಕಣ್ಣಿಗೂ ಕುಕ್ಕುವಂತಹ ಕಾರ್ಯವನ್ನು ನೀವು ಮಾಡಬೇಡಿ. ಮಕ್ಕಳ‌ ವಿಚಾರವಾಗಿ ಅನವಶ್ಯಕ ಖರ್ಚು ಮಾಡುವುದು ಬೇಡ.

ವೃಶ್ಚಿಕ ರಾಶಿ :

ಸಂಸ್ಥೆಯ ವ್ಯವಸ್ಥೆಯನ್ನು ನಿರ್ವಹಿಸಲಾಗದೇ ಸೋಲುವಿರಿ. ನಿಮ್ಮ ಇಂದಿನ ವಾದಕ್ಕೆ ಕೊನೆಮೊದಲಿಲ್ಲದೇ ಹೋಗಬಹುದು. ನಿಮಗೆ ಸಿಗುವ ಸಾಮಾಜಿಕವಾಗಿ ಮನ್ನಣೆಯು ಅಧಿಕ ಕಾರ್ಯವನ್ನು ಮಾಡುವಂತೆ ಮಾಡೀತು. ಇಂದಿನ‌‌ ಎಲ್ಲ‌ ಕಾರ್ಯವನ್ನೂ ಒತ್ತಡದಿಂದಲೇ ಮಾಡಬೇಕಾದೀತು. ನೀವು ಏನಾದರೂ ಬದಲಾವಣೆಯನ್ನು ನಿಮ್ಮವರಿಂದ ನಿರೀಕ್ಷಿಸುವಿರಿ. ದೇಹ ಪೀಡೆಯು ಹೆಚ್ಚಾಗಲಿದ್ದು ಕಛೇರಿಗೆ ಹೋಗುವವರು ವಿರಾಮವನ್ನು ತೆಗೆದುಕೊಳ್ಳುವುದು ಉತ್ತಮ. ಯಾರನ್ನೋ ದ್ವೇಷ‌ ಮಾಡುವುದು ಸರಿ ಕಾಣದು. ಸ್ಪರ್ಧಾತ್ಮಕ ಪರೀಕ್ಷೆಗೆ ಇನ್ನೂ ಹೆಚ್ಚಿನ ಶ್ರಮವು ಬೇಕಾಗುತ್ತದೆ. ತಪ್ಪು ಮಾಹಿತಿಯನ್ನೇ ನಂಬಿರುವಿರಿ. ಎಂದೋ ಕಾಣೆಯಾದ ವಸ್ತುವನ್ನು ಇಂದು ನೀವು ಹುಡುಕಿದರೆ ಲಭ್ಯವಾಗದು. ಮೌಕಿಕವಾಗಿ ನೀವು ಗೆಲ್ಲಬಹುದು, ಪ್ರಾಯೋಗಿಕವಾಗಿ ಇದು ಸುಲಭವಲ್ಲ. ನಿಮ್ಮ‌ ಸಾಮರ್ಥ್ಯಕ್ಕೆ ಕೊಟ್ಟ ಜವಾಬ್ದಾರಿಯು ಸಣ್ಣದಾಗಿರುವುದು. ನಿಮ್ಮ ಬಂಧುಗಳ ಸಹಾಯದಿಂದ ವಿವಾಹದ ಮಾತುಕತೆಯು ಘಟಿಸುವುದು.

ಧನು ರಾಶಿ :

ಸಹನೆ ಮೀರುವ ಕಾರಣ ಕೊಟ್ಟ ಹಣವನ್ನು ವಾಪಾಸು ಪಡೆಯಲು ರೇಗಾಡುವಿರಿ. ಯಾರಾದರೂ ತುರ್ತಾಗಿ ನಿಮ್ಮ ಬಳಿ‌ ಸಾಲವನ್ನು ಕೇಳಿಬರಬಹುದು. ಅನುಕಂಪದಿಂದ‌ ಕೊಡುವ ಯೋಚನೆಯನ್ನು ಮಾಡುವಿರಿ. ಆದರೆ ಅವರಿಂದ ಪಡೆಯಬೇಕಾದುದನ್ನು ಪಡೆಯಿರಿ. ಇಂದು ನಿಮ್ಮ ದಾಂಪತ್ಯದ ಬಿರುಕು ನ್ಯಾಯಾಲಯದ ಮೆಟ್ಟಿಲೇರಿಸುವುದು. ಸ್ಪರ್ಧೆಯಲ್ಲಿ ಗೆಲುವಿಗಾಗಿ ನಿಮ್ಮ ಶ್ರಮವು ವ್ಯರ್ಥವಾದೀತು. ಆಸ್ತಿಯ ವಿಚಾರಕ್ಕೆ ನೆರಮನೆಯವರ ಜೊತೆ ಕಲಹವಾಗಬಹುದು. ನಿಮ್ಮ ನೋವಿಗೆ ಸ್ಪಂದಿಸುವವರಿಲ್ಲ ಎನ್ನುವ ಕೊರಗು ಬರಬಹುದು. ಸಂಗಾತಿಯಿಂದ ನಿಮಗೆ ಬೆಂಬಲವು ಪೂರ್ಣವಾಗಿ ಸಿಗದೇ ಇರಬಹುದು. ಆಹಾರದಿಂದ ದೇಹದ ಧಾತುಗಳು ಪ್ರಕೋಪವಾಗುವುವು. ಧಾರ್ಮಿಕ ವಿಷಯದಲ್ಲಿ ನಿಮಗೆ ಆಸಕ್ತಿಯು ಕಡಿಮೆ ಇರುವುದು. ನಿಮ್ಮ ಗೌರವಕ್ಕೆ ತೊಂದರೆಯಾಗುವ ಕಡೆ ನೀವು ಹೀಗುವುದು ಬೇಡ.‌ ಜನಸಾಮಾನ್ಯರ ಜೊತೆ ಬೆರೆಯುವುದು ನಿಮಗೆ‌ ಆಗದು. ವಂಚಿಸುವ ಯೋಚನೆ ಮಾಡಿದ್ದರೆ ಅದನ್ನು ಮರೆತುಬಿಡಿ. ಪತ್ರವ್ಯವಹಾರವನ್ನು ಸರಿಯಾಗಿ ಇಟ್ಟುಕೊಳ್ಳಿ.

ಮಕರ ರಾಶಿ :

ಯೌವನಾವಸ್ಥೆಯ ಮಕ್ಕಳ ಮೇಲೆ ಭಯ. ಒಂಟಿಯಾಗಿ ಬಿಡಲೂ ಬಿಡದೇ ಇರಲೂ ಆಗದು. ಎಲ್ಲವೂ ಸರಿ ಇದ್ದರೂ ಏನೂ ಇಲ್ಲವೆಂಬ ಕೊರಗು ಮನವನ್ನು ಚುಚ್ಚುವುದು. ನಿಮ್ಮ ಬೆನ್ನನ್ನೇ ನೀವು ತಟ್ಟಿಕೊಳ್ಳುವುದು ಔಚಿತ್ಯವಿಲ್ಲ. ಬೇಕಾದ ವಸ್ತುಗಳನ್ನು ಖರೀದಿಸುವ ಉತ್ಸಾಹದಲ್ಲಿ ಅನಗತ್ಯ ವಸ್ತುಗಳನ್ನು ಖರೀದಿಸುವಿರಿ. ಕಲಾವಿದರು ಹೆಚ್ಚಿನ ಪ್ರಶಂಸೆಗೆ ಪಾತ್ರರಾಗುವರು. ಯಾರೋ‌ ಮಾಡಬೇಕಾದ ಕೆಲಸವನ್ನು ನೀವು ಮಾಡುವಿರಿ. ನಿಮ್ಮ ಬೆನ್ನನ್ನು ನೋಡಲಾಗದಿದ್ದರೂ ಕಲ್ಪಿಸಿಕೊಳ್ಳಬಹುದು. ನಿಮಗೆ ಇಷ್ಟವಾದ ಚಟುವಟಿಕೆಯನ್ನು ಮನೆಯಲ್ಲಿಯೇ ಮಾಡುವಿರಿ. ಹಣವಿದ್ದರೂ ಸಮಯಕ್ಕೆ ಸರಿಯಾಗಿ ಸಿಗದ ಕಾರಣ ತಾತ್ಕಾಲಿಕವಾಗಿ ಸಾಲವನ್ನು ಮಾಡಬೇಕಾಗಬಹುದು. ಸ್ನೇಹಿತರ ಜೊತೆ ಹೆಚ್ಚಿನ ಸಮಯವನ್ನು ಕಳೆಯುವಿರಿ. ಕೆಲಸದ ಒತ್ತಡದಿಂದ ನಿಮಗೆ ಇಂದು ಆಯಾಸವಾಗಬಹುದು. ನಿಮ್ಮ ಖಾಸಗಿ ತನಕ್ಕೆ ತೊಂದರೆಯಾಗಲಿದೆ. ವಂಚನೆಯ ಸುಳಿವನ್ನು ಮೊದಲೇ ಪಡೆಯುವಿರಿ. ಸಾಮಾಜಿಕ ಕ್ಷೇತ್ರದಲ್ಲಿ ಮನ್ನಣೆಯನ್ನು ಪಡೆಯುವಿರಿ.

ಕುಂಭ ರಾಶಿ :

ದುಡಿಮೆಯಲ್ಲಿ ಕಡಿಮೆ ಹಣ ಸಂಪಾದನೆ ಆಯಿತೆಂದು ನಿರಾಸೆ ಬೇಡ. ನಿಮ್ಮ ಭಾವನೆಗೇ ಇಂದು ನೇರವಾಗಿ ಪೆಟ್ಟುಬೀಳುವ ಸಾಧ್ಯತೆ ಇದೆ. ಅದನ್ನು ಆ ಸಮಯದಲ್ಲಿ ನಿಭಾಯಿಸುವ ಜಾಣ್ಮೆ ಇರಲಿ. ಸಜ್ಜನರ ಭೇಟಿಯಾಗುವ ಸಾಧ್ಯತೆ ಇದೆ. ಹೇಳಬೇಕಾದ‌ ವಿಚಾರವನ್ನು ನೀವು ಸರಿಯಾಗಿ ಹೇಳಿ.‌ ಬೇರೆಯವರನ್ನು ಗೊಂದಲಕ್ಕೆ ನೀವು ಸಿಕ್ಕಿಹಾಕಿಸುವುದು ಬೇಡ. ನಿಮ್ಮ ಕಾರ್ಯದಲ್ಲಿ ಮಗ್ನತೆಯು ಎಲ್ಲಿರಿಗೂ ಇಷ್ಟವಾಗುವುದು. ನೀವು ಹೋದಕಡೆ ನಿಮಗೆ ಬೇಕಾದ ವಾತಾವರಣವನ್ನು ಸೃಷ್ಟಿಸಿಕೊಳ್ಳುವಿರಿ. ಎಲ್ಲ ಹಿನ್ನಡೆಗೂ ಕಾರಣವೊಂದು ಇರುತ್ತದೆ ಎಂಬುದನ್ನು ಇತರರಿಂದ ಮನದಟ್ಟು ಮಾಡಿಕೊಳ್ಳುವಿರಿ. ಕೇಳಿ ಬಂದವರಿಗೆ ನೀವು ಇಂದು ಧನ ಸಹಾಯವನ್ನು ಮಾಡುವಿರಿ. ಸರಳವಾದ ಕೆಲಸಗಳನ್ನು ಮಾಡುವಿರಿ. ವಿರೋಧಿಗಳ ಮನಸ್ಸನ್ನು ವಶದಲ್ಲಿ ತಂದುಕೊಳ್ಳುವಿರಿ. ಆದಾಯಕ್ಕೆ ನಾನಾ ಮೂಲವನ್ನು ಆಯ್ಕೆ ಮಾಡಿಕೊಳ್ಳುವಿರಿ. ಮಾರಾಟದ ವಿಷಯದಲ್ಲಿ ಹಿನ್ನಡೆಯಾಗಲಿದೆ.

ಮೀನ ರಾಶಿ :

ಸ್ವಾರ್ಥದ‌ ಕಾರಣದಿಂದ ನಿಮ್ಮನ್ನು ಹಿರಿಯರು ನಿಂದಿಸುವರು. ಇಂದು ನಿಮ್ಮ ಕಾರ್ಯದ ಒತ್ತಡದಿಂದ ಬೇರೆ ಏನನ್ನೂ ಆಲೋಚಿಸಲಾಗದು. ನೌಕರರ ಬಗ್ಗೆ ನಿಮಗೆ ಕಾಳಜಿ‌ ಇರುವುದು. ವ್ಯಾಪಾರವನ್ನು ಅಚ್ಚುಕಟ್ಟಾಗಿ ಮಾಡುವ ಕೌಶಲವು ನಿಮ್ಮದಾಗಲಿದೆ. ರಪ್ತು ವ್ಯವಹಾರವು ನಿಮಗೆ ಲಾಭದಾಯಕವಾಗಲಿದೆ. ಉದ್ಯಮಕ್ಕಾಗಿ ಅನುಭವಿ ಉದ್ಯಮಿಗಳನ್ನು ಇಂದು ಭೇಟಿಯಾಗಿ. ಭೂಮಿಯ ಖರೀದಿಗೆ ಸೂಕ್ತ ಸಮಯವು ಇದಾಗಿದೆ. ಸಂಗಾತಿಯ ವಿಚಾರಕ್ಕೆ ನೀವು ನೆಮ್ಮದಿಯನ್ನು ಕಳೆದುಕೊಳ್ಳುವಿರಿ. ಸಹೋದ್ಯೋಗಿಗಳ ಅಸಹಕಾರದಿಂದ‌ ನಿಮ್ಮ ನೆಮ್ಮದಿ‌ ಸ್ವಲ್ಪ ಹೊತ್ತು ಹಾಳಾಗುವುದು. ಮನಸ್ಸಿನ ಚಾಂಚಲ್ಯವನ್ನು ನೀವು ನಿಗ್ರಹಿಸುವ ವಿಧಾನವನ್ನು ಕಂಡಿಲುಕೊಂಡಿರುವಿರಿ. ಅಧಿಕೃತ ಮೂಲದಿಂದ‌ ಬಂದ ವಿಚಾರಗಳನ್ನು ಮಾತ್ರ ನಂಬಿ. ನಿಮ್ಮ ಬಗ್ಗೆ ಅತಿಯಾದ ಆತ್ಮವಿಶ್ವಾಸವು ಇರಲಿದ್ದು ಕೆಲವು ಕೆಲಸಗಳಿಗೆ ಇದು ತೊಡಕನ್ನು ತಂದೀತು. ಜೀವನದ ಹಾದಿಯಲ್ಲಿ ಹೆಚ್ಚು ಏರಿಳಿತಗಳು ಇರದೇ ಆರಾಮಾಗಿ ಹೋಗುವಿರಿ. ಜಾಣ್ಮೆಯಿಂದ ಸವಾಲನ್ನು ಎದುರಿಸಬೇಕಾಗಬಹುದು.

– ಲೋಹಿತ ಹೆಬ್ಬಾರ್ – 8762924271 (what’s app only)

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ