AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today 25 Oct: ಇಂದು ಈ ರಾಶಿಯವರ ಪ್ರಯತ್ನ ಫಲಿಸುವುದು, ಅದೃಷ್ಟಕ್ಕೆ ಕಾಯಬೇಕಿಲ್ಲ

ದಿನ ಭವಿಷ್ಯ: ಶಾಲಿವಾಹನ ಶಕವರ್ಷ 1948ರ ದಕ್ಷಿಣಾಯನ, ಶರದ್ ಋತುವಿನ ಕಾರ್ತಿಕ ಮಾಸ ಶುಕ್ಲ ಪಕ್ಷದ ಚತುರ್ಥೀ ತಿಥಿ ಶನಿವಾರ ಬಲಾತ್ಕಾರದಿಂದ ವಶ, ಸಹವರ್ತಿಗಳ ಒತ್ತಡ, ಅತಿಥಿಗಳಿಗೆ ನಿರಾಸೆ, ಪ್ರೀತಿಪಾತ್ರರಿಂ ಭಾರ, ಒಳಗಿನಿಂದ ಸ್ವಚ್ಛತೆ, ಸಾಮಾಜಿಕ ಪ್ರತಿಷ್ಠೆ ಇವೆಲ್ಲ ಇಂದಿನ ಭವಿಷ್ಯ.

Horoscope Today 25 Oct: ಇಂದು ಈ ರಾಶಿಯವರ ಪ್ರಯತ್ನ ಫಲಿಸುವುದು, ಅದೃಷ್ಟಕ್ಕೆ ಕಾಯಬೇಕಿಲ್ಲ
ಭವಿಷ್ಯ
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ಗಂಗಾಧರ​ ಬ. ಸಾಬೋಜಿ|

Updated on: Oct 25, 2025 | 12:02 AM

Share

ಬೆಂಗಳೂರು, ನಿತ್ಯ ಪಂಚಾಗ, ಅಕ್ಟೋಬರ್ 25:​ ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ದಕ್ಷಿಣಾಯನ, ಋತು : ಶರದ್, ಚಾಂದ್ರ ಮಾಸ : ಕಾರ್ತಿಕ, ಸೌರ ಮಾಸ : ತುಲಾ, ಮಹಾನಕ್ಷತ್ರ : ಚಿತ್ರಾ, ವಾರ : ಶನಿ, ಪಕ್ಷ : ಶುಕ್ಲ, ತಿಥಿ : ಚತುರ್ಥೀ, ನಿತ್ಯನಕ್ಷತ್ರ : ಮೂಲಾ, ಯೋಗ : ಆಯುಷ್ಮಾನ್, ಕರಣ : ವಣಿಜ, ಸೂರ್ಯೋದಯ – 06 – 12 am, ಸೂರ್ಯಾಸ್ತ – 05 – 54 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 09:08 – 10:36, ಗುಳಿಕ ಕಾಲ 06:13 – 07:40, ಯಮಗಂಡ ಕಾಲ 13:31 – 14:59.

ಮೇಷ ರಾಶಿ: ಸಹವರ್ತಿಗಳ ಒತ್ತಾಯಕ್ಕೆ ಅತಿಯಾದ ಓಡಾಟ, ಭಕ್ಷಣ, ಪಾನ ಎಲ್ಲವೂ ಅಪಾಯಕಾರಿ. ಸ್ಪರ್ಧಾತ್ಮಕ ಚಟುವಟಿಕೆಯಲ್ಲಿ ಸೋಲಾಗಬಹುದು. ಇಂದು ನಿಮಗೆ ಗೊತ್ತಿಲ್ಲದೇ ಪುಣ್ಯವು ನಿಮ್ಮನ್ನು ಸೇರಿಸುವ ಸ್ಥಳಕ್ಕೆ ತಂದುಬಿಡುವುದು. ಶತ್ರುಗಳ ಬಗ್ಗೆ ನೀವು ಸರಿಯಾದ ಮಾಹಿತಿಯನ್ನು ಪಡೆಯುವಿರಿ. ಅನಿರೀಕ್ಷಿತ ವಾರ್ತೆಗಳು ನಿಮ್ಮ ಮನಸ್ಸನ್ನು ಖಿನ್ನಗೊಳಿಸುವುದು. ಬಂಧುಗಳ ಪ್ರೀತಿಯು ನಿಮಗೆ ಸಿಗಲಿದೆ. ನಿಮ್ಮ ಪ್ರಾಮಾಣಿಕತೆಯನ್ನು ಬಿಡುವುದು ಬೇಡ. ಅತಿಯಾದ ಕೋಪ ಬಂದರೂ ಸ್ಥಾನದ ದೃಷ್ಟಯಿಂದ ತಾಳ್ಮೆ ಬಿಡಲಾಗದು. ಸಂಗಾತಿಯ ಆರೋಗ್ಯವು ಚಿಂತೆಗೀಡುಮಾಡೀತು. ನಿಮ್ಮ ಕೊಟ್ಟ ಜವಾಬ್ದಾರಿಯನ್ನು ಸಕಾಲಕ್ಕೆ ಪೂರ್ಣಗೊಳಿಸಿಯೇ ಸಿದ್ಧ‌ ತಾಯಿಯ ಕಡೆಯ ಬಂಧುಗಳಿಂದ ನಿಮಗೆ ಸಹಾಯವು ಸಿಗಲಿದೆ. ಸುಳ್ಳು ಹೇಳವ ಸಂದರ್ಭವೂ ಬರಬಹುದು. ಉದ್ವೇಗಕ್ಕೆ ಸಿಲುಕಿ ಏನನ್ನಾದರೂ ಮಾಡಲು ಹೋಗುವಿರಿ. ಸಮೂಹದ ಜೊತೆ ನಿಮ್ಮ ಕೆಲಸವು ಆಗುವುದು. ಸುಲಭವಾದ ಕಾರ್ಯವನ್ನು ಮೊದಲು ಮಾಡಿ ಮುಗಿಸಿ. ಒತ್ತಡದಿಂದ ಒಳ್ಳೆಯ ಕಾರ್ಯವೂ ಹಾಳಾಗುವುದು.

ವೃಷಭ ರಾಶಿ: ಬರುವ ಅಪರೂಪದ ಅವಕಾಶಗಳಿಗೆ ಕಾರಣ ಕೊಟ್ಟು ದೂರ ಕಳುಹಿಸುವಿರಿ. ಆದರೆ ಇಂದು ಬರುವ ಸಂದರ್ಭವನ್ನು ಬಳಿಸಿದರೆ ಉತ್ತಮ ಮಾರ್ಗವು ನಿಮಗೆ ತೆರೆದುಕೊಳ್ಳುವುದು. ಮನಸ್ಸಿನ ನಿಯಂತ್ರಣದಿಂದ ಇಂದಿನ ಎಲ್ಲ ಒತ್ತಡವನ್ನೂ ಸರಿಮಾಡಿಕೊಳ್ಳುವಿರಿ. ಬಂಧುಗಳ ನಿಮ್ಮ ಬಗ್ಗೆ ಆಡಿಕೊಳ್ಳಬಹುದು. ಯಾರ ಮೇಲಾದರೂ ನಿಮ್ಮ ತಪ್ಪನ್ನು ಹಾಕುವಿರಿ. ಬರುವ ಆದಾಯಕ್ಕೆ ಅಡೆತಡೆಗಳು ಬರಬಹುದು. ಸ್ನೇಹವು ಶಿಥಿಲವಾಗುವುದು. ನಿಮಗೆ ಬೇಕಾದುದನ್ನು ಮಾತ್ರ ಇಟ್ಟುಕೊಂಡು ಬೇಡದ್ದನ್ನು ಕೊಡಿ. ಬಹಳ ದಿನಗಳಿಂದ ನಿಮ್ಮ ಕೆಲಸವು ವೇಗವಾಗಿ ಸಾಗುತ್ತಿದ್ದು ಅನಿರೀಕ್ಷತವಾಗಿ ಮಂದಗತಿಯಲ್ಲಿ ಸಾಗುವುದು. ಇದಕ್ಕಾಗಿ ನಿಮ್ಮೊಳಗೆ ಒತ್ತಡ ನಿರ್ಮಾಣವಾಗಿ ಸಿಟ್ಟಾಗುವ ಸಂದರ್ಭವೂ ಬರುವುದು. ಎಲ್ಲರ ಜೊತೆ ತಾಳ್ಮೆಯಿಂದ ಮಾತನ್ನಾಡಿ. ಆರಂಭಿಸುವ ಕೆಲಸದ ಬಗ್ಗೆ ಪೂರ್ಣ ಮಾಹಿತಿ ಇರಲಿ. ಮಕ್ಕಳಿಗೆ ಬೇಕಾದ ವಸ್ತುಗಳನ್ನು ಕೊಡಿಸುವಿರಿ. ಅಧಿಕ ಓಡಾಟದಿಂದ ದಣಿವಾಗಲಿದೆ. ಸಾಹಸ ಮಾಡಲು ಹೋಗಿ‌ ಮುಗ್ಗರಿಸುವಿರಿ.

ಮಿಥುನ ರಾಶಿ: ಮನೆಯ ಬಾಗಿಲಿಗೆ ಬಂದವರಿಗೆ ನಿರಾಸೆ ಮಾಡದೇ ಒಳ್ಳೆಯ ಮಾತುಗಳಿಂದ ಕಳುಹಿಸಿಕೊಡಿ. ಭರವಸೆಯ ಮಾತುಗಳೇ ನಿಮಗೆ ಧೈರ್ಯವನ್ನು ಕೊಡಬಹುದು. ಉದ್ಯೋಗದಲ್ಲಿ ಆಗದ ಸಣ್ಣ ತಪ್ಪಿನಿಂದ ನಷ್ಟವಾಗಲಿದ್ದು ಅದು ನಿಮ್ಮ ಮೇಲೆ ಬರಬಹುದು.‌ ಭೂಮಿಯ ವ್ಯವಹಾರದಲ್ಲಿ ಲಾಭವಾಗದೇ ಕೇವಲ ಓಡಾಟವನ್ನು ಮಾಡಬೇಕಾಗಬಹುದು. ತುರ್ತು ಹಣವು ಬೇಕಾಗಿದ್ದು ಸಾಲವನ್ನು ಮಾಡಲು ನಿಮಗೆ ಹೆದರಿಕೆ ಆಗಬಹುದು. ನಿಮ್ಮ ಸ್ವಂತ ಕೆಲಸಕ್ಕಾಗಿ ವಿರಾಮವನ್ನು ತೆಗೆದುಕೊಳ್ಳುವಿರಿ. ಅನಿರೀಕ್ಷಿತವಾಗಿ ಪ್ರಸಿದ್ಧ ವ್ಯಕ್ತಿಗಳ ಭೇಟಿಯಾಗುವುದು. ಸರಿಯಾದ ಕಡೆ ಹೂಡಿಕೆ ಮಾಡದೇ ಹಣವನ್ನು ಕಳೆದುಕೊಳ್ಳಬಹುದು. ಹಣಕಾಸಿನ ವಿಚಾರದಲ್ಲಿ ಯಾರನ್ನೂ ನಂಬುವುದು ಕಷ್ಟವಾದೀತು. ಯಾವ ಕಾರಣಕ್ಕೂ ಸಾಲವನ್ನು ಮಾಡಲು ಹೋಗುವುದು ಬೇಡ. ನಿಮ್ಮ ಕೌಶಲವನ್ನು ಪ್ರದರ್ಶಿಸಲು ಅವಕಾಶವಿದೆ. ನೀವು ಕಾರ್ಯದಲ್ಲಿ ಮಗ್ನರಾಗಿದ್ದು ಯಾವ ವಿಷಯಕ್ಕೂ ಭಾಗಿಯಾಗಲಾರಿರಿ.

ಕರ್ಕಾಟಕ ರಾಶಿ: ಸೇವಾ ಮನೋಭಾವದಿಂದ ಮಾಡಿದ ಕಾರ್ಯ ನಿಮಗೆ ಪಾಠವೂ ಆಗುವುದು. ಸ್ವಂತಿಕೆಗೆ ಅಧಿಕ ಬಲ ಬರುವುದು. ದುರಸ್ತಿ ಕಾರ್ಯಗಳಿಗೆ ಸಂಪತ್ತನ್ನು ಖಾಲಿಮಾಡಬೇಡಿ. ಅವಶ್ಯಕತೆಯನ್ನು ನೋಡಿ ಮುಂದುವರಿಯಿರಿ. ಇಂದು ನೀವು ಬಹಳ ದಿನಗಳ ಅನಂತರ ಸಂಗಾತಿಯ ಜೊತೆ ದೂರದ ಊರಿಗೆ‌ ಪ್ರಯಾಣ ಮಾಡುವಿರಿ. ಹಠದ ಸ್ವಭಾವದಿಂದ ಪ್ರೀತಿಯನ್ನು ಕಳೆದುಕೊಳ್ಳುವಿರಿ. ಇಂದು ವ್ಯವಹಾರವನ್ನು ಮಾಡಲು ನಿಮಗೆ ಧೈರ್ಯವು ಸಾಕಾಗದು. ವಾಹನದಿಂದ ಇಂದು ಆದಾಯವು ಬರಬಹುದು. ವಿವಾಹಕ್ಕೆ ಸಂಬಂಧಿಸಿದಂತೆ ನಿಮ್ಮ ನಿರ್ಧಾರವನ್ನು ಸ್ಪಷ್ಟವಾಗಿ ಹೇಳಿ.‌ ನಿಮ್ಮ ಇಷ್ಟವಾದ ವಸ್ತುವನ್ನು ಕಳೆದುಕೊಳ್ಳುವಿರಿ. ವಿದೇಶೀಯ ಹೂಡಿಕೆಗೆ ನಿಮಗೆ ಧೈರ್ಯ ಸಾಲದು. ಬಂಧುಗಳು ನಿಮ್ಮನ್ನು ಅಳೆಯುವರು. ಉನ್ನತ ಅಭ್ಯಾಸವನ್ನು ಮಾಡುವ ಅಪೇಕ್ಷೆ ಇರಲಿದೆ. ಇದಕ್ಕಾಗಿ ಆರ್ಥಿಕ ಸಹಾಯವನ್ನು ಇನ್ನೊಬ್ಬರಿಂದ ಕೇಳುವಿರಿ. ಹೂಡಿಕೆಯಿಂದ ಹಿಂಜರಿಯುವ ಸಾಧ್ಯತೆ ಇದೆ. ಆಪ್ತರ ಮಾತಿನಿಂದ ನಿಮಗೆ ಬೇಸರವಾಗಲಿದೆ. ಕುಟುಂಬ ಮೇಲೆ ಬೇಸರ ಬರಬಹುದು. ನಿಮ್ಮ ಭಾವವನ್ನು ಬಂಧಿಸಿಟ್ಟರೂ ಅದು ಗೊತ್ತಾಗುವುದು.

ಸಿಂಹ ರಾಶಿ: ಪ್ರೀತಿಪಾತ್ರರ ಭಾರವನ್ನೂ ಇಂದು ಹೊರಬೇಕಾಗುವುದು. ಅಧಿಕಾರಿಗಳಿಗೆ ಸಮಸ್ಯೆ ಎದುರಾಗುವುದು. ಇಂದು ಸಿಕ್ಕಿದ್ದರಲ್ಲಿ ಸಂತೃಪ್ತಿಯಿಂದ ಅನುಭವಿಸುವುದು ಅವಶ್ಯಕ. ಗೃಹ ಬಳಕೆಗೆ ಬೇಕಾದ ಸಾಮಾನುಗಳನ್ನು ನೀವು ಖರೀದಿಸುವ ಭರದಲ್ಲಿ ಖರ್ಚಿನ ಬಗ್ಗೆಯೂ ಸೂಕ್ತ ಆಲೋಚನೆಯನ್ನು ಮಾಡಿ. ಶತ್ರುಗಳ ವಿರುದ್ಧ ಸಮರಸಾರದೇ ತಾಳ್ಮೆಯಿಂದ ನಿರ್ವಹಿಸುವಿರಿ. ಮೇಲಧಿಕಾರಿಗಳ ಜೊತೆ ನಿಮ್ಮ ಒಡನಾಟವು ಚೆನ್ನಾಗಿರುವುದು. ಸಂಗಾತಿಯು ನಿಮ್ಮ ಕೆಲಸದ ಪೂರ್ವಾಪರಗಳನ್ನು ವಿಚಾರಿಸಬಹುದು, ಸಿಟ್ಟಾಗದೇ ಉತ್ತರಿಸಿ. ನಿಮ್ಮ ಗುರಿಯ ಬಗ್ಗೆ ಕೆಲವರು ಆಡಿಕೊಂಡಾರು. ಅದನ್ನು ಕೇಳಿಸಿಕೊಳ್ಳದೇ ಮುಂದಡಿಯಿಡಬೇಕಾಗುವುದು. ಕೆಲವು ರಾಜಕೀಯ ವ್ಯಕ್ತಿಗಳ ಪ್ರೇರಣೆಯಿಂದ ನೀವೂ ರಾಜಕೀಯಕ್ಕೆ ಬರುವ ಸಾಧ್ಯತೆ ಇದೆ. ನಿಮ್ಮದೇ ಕೆಲಸವಾದರೂ ಸಂಪೂರ್ಣ ಯಶಸ್ಸನ್ನು ನೀವು ಪಡೆಯಲಾರಿರಿ. ಬೇಡವೆನಿಸಿದ್ದನ್ನು ಒತ್ತಾಯಪೂರ್ವಕ ಪಡೆಯುವುದು ಬೇಡ. ಸಂಗಾತಿಯ ವಿಷಯದಲ್ಲಿ ವಾಗ್ವಾದ ನಡೆಯಲಿದೆ. ಕೆಲವು ತೊಂದರೆಗಳನ್ನು ನೀವು ತೆಗೆದುಕೊಳ್ಳುವುದು ಅನಿವಾರ್ಯ.

ಕನ್ಯಾ ರಾಶಿ: ಸಾಮಾಜಿಕ ಪ್ರತಿಷ್ಠೆಯನ್ನು ತಂತ್ರಗಾರಿಕೆಯ ಮೂಲಕ ತಂದುಕೊಳ್ಳುವಿರಿ, ಸಹಜವಾಗಿ ಅಲ್ಲ. ಕಾರ್ಯದಲ್ಲಿ ಇಂದು ನಿಮ್ಮಿಂದಲೇ ತಪ್ಪಾಗುವುದು. ಇದರಿಂದ ಉತ್ತಮ ಕಲಿಕೆಯೂ ನಿಮಗೇ ಆಗುವುದು. ಇಂದು ನಿಮ್ಮ ವ್ಯವಹಾರದಲ್ಲಿ ಕೆಲವು ಬದಲಾವಣೆಗಳು ಬೇಕು ಎಂದು ಅನ್ನಿಸಬಹುದು. ಉದ್ಯಮದಲ್ಲಿ ಆಗುವ ಒತ್ತಡವನ್ನು ನಿವಾರಿಸಿಕೊಳ್ಳಲು ಅನ್ಯ ಮಾರ್ಗವನ್ನು ಕಂಡುಕೊಳ್ಳಿ.‌ ಮರೆವು ನಿಮಗೆ ಉತ್ತಮ ಎನಿಸಬಹುದು. ನಿಮ್ಮ ವಿರುದ್ಧ ನಡೆಸುವ ತಂತ್ರಗಾರಿಕೆಯು ನಿಲ್ಲದು. ಹಿರಿಯರ ಜೊತೆ ಕಳೆದ ಸಮಯವು ನಿಮಗೆ ಉತ್ಸಾಹವನ್ನು ಕೊಡುವುದು. ನಿಮ್ಮ ಆರ್ಥಿಕ ವ್ಯವಸ್ಥೆಯನ್ನು ಸರಿ‌ಮಾಡಿಕೊಳ್ಳಿ. ಲೆಕ್ಕಪತ್ರದ ವಿಷಯದಲ್ಲಿ ನಿಮಗೆ ಯಾವುದೇ ಅಡ್ಡ ದಾರಿಯನ್ನು ಹಿಡಿಯುವುದು ಬೇಡ. ನಿಮ್ಮ ಸ್ವಾಭಿಮಾನಕ್ಕೆ ತೊಂದರೆಯಾಗಬಹುದು. ವಿದೇಶಿ ಕಂಪನಿಗಳ ಜೊತೆ ಒಪ್ಪಂದ ಸಾಧ್ಯವಾಗದು. ಸಂಬಂಧಗಳನ್ನು ಬೆಳೆಸಿಕೊಂಡಾಗಲಷ್ಟೇ ಬಾಂಧವ್ಯ ಬೆಳೆಡಯುವುದು. ಯಾರ ಮಾತನ್ನೂ ಕೇಳುವ ಸಹನೆ ಇಲ್ಲವಾದೀತು. ಪ್ರೀತಿಯಿಂದ ಆಡಿದ ಮಾತು ಇಂದು ಉಪಯೋಗಕ್ಕೆ ಬರುವುದು.

ತುಲಾ ರಾಶಿ: ಸ್ವಚ್ಛತೆಯು ನಿಮ್ಮಳಗಿನಿಂದ ಆರಂಭವಾದರೆ ಎಲ್ಲ ಕಡೆಗಳಲ್ಲಿ ಅದು ಸಾಧ್ಯವಾಗುವುದು. ಮಾನಸಿಕವಾದ ನೋವನ್ನು ಕಳೆದುಕೊಳ್ಳುವ ಪ್ರಯತ್ನ ಮಾಡುವಿರಿ. ಇಂದು ನಿಮ್ಮ ಮಾತುಗಳು ಕೆಲವರಿಗೆ ವಿರೋಧದಂತೆ ಭಾಸವಾಗಬಹುದು. ಕೆಲವು ವಿಚಾರದಲ್ಲಿ ನಿಮಗೆ ಸೂಕ್ಷ್ಮತೆಯ ಕೊರತೆಯು ಕಾಣುವುದು. ನಿಮ್ಮದೇ ಆದ ದಾರಿಯಲ್ಲಿ ನೀವು ಸಾಗುವಿರಿ. ವಿದ್ಯಾರ್ಥಿಗಳು ಓದಿನ ಬಗ್ಗೆ ಗಮನವನ್ನು ಹೆಚ್ಚುಕೊಡಬೇಕಾದೀತು. ಪ್ರಯೋಜನವಿಲ್ಲದೆ ಯಾವ ಕಾರ್ಯವನ್ನೂ ಮಾಡಲು ಇಷ್ಟಪಡುವುದಿಲ್ಲ. ಜನರ ಜೊತೆ ಬೆರೆಯುವುದು ಕಷ್ಟವಾದೀತು.‌ ವಿದೇಶೀ ವ್ಯಾಪಾರದಿಂದ ನಷ್ಟವಾಗಬಹುದು. ಉದ್ಯೋಗದಲ್ಲಿ ನಿಮ್ಮ ಮನಃಸ್ಥಿತಿಯು ಖಿನ್ನವಾಗಲಿದೆ. ಮಾತಿಗಿಳಿಯುವ ಮೊದಲು ಎದುರಿನವರು ಯಾರು ಎಂಬ ಕಲ್ಪನೆ ಇರಲಿ. ನಿಮಗೆ ಹಣವನ್ನು ಉಳಿಸಿಕೊಳ್ಳುವುದು ಸಮಸ್ಯೆಯೇ ಆಗಬಹುದು. ದೂರದ ಊರಿಗೆ ಹೋಗಬೇಕಾಗುವುದು. ನಿಮಗೆ ಸಿಗಬೇಕಾದ ಗೌರವವು ಗೊಂದಲದಲ್ಲಿ ಇದ್ದು ಕೊನೆಗೂ ನಿಮಗೇ ಸಿಗಲಿದೆ. ತಾಳ್ಮೆಯನ್ನು ಕಳೆದುಕೊಳ್ಳದೇ ಎಲ್ಲರ ಜೊತೆ ವ್ಯವಹರಿಸಿ.

ವೃಶ್ಚಿಕ ರಾಶಿ: ಕೃಷಿಯಲ್ಲಿ ಹೂಡಿಕೆ ಮಾಡಿದ್ದರಿಂದ ಆರ್ಥಿಕವಾದ ಅನೇಕ ಲಾಭಗಳನ್ನು ಪಡೆಯುವಿರಿ. ನಿಮ್ಮ ಸ್ಥಗಿತಗೊಂಡ ಕಾರ್ಯಗಳಿಗೆ ಅನ್ಯರಿಂದ ಪ್ರೇರಣೆ ಸಿಗುವುದು. ಮಕ್ಕಳ ಪ್ರೀತಿಯಲ್ಲಿ ನೀವು ಕಳೆದುಹೋಗುವಿರಿ. ನಿಮ್ಮ ಇಂದಿನ ದೀರ್ಘ ಪ್ರಯಾಣವು ಹಲವು ತೊಡಕುಗಳಿಂದ ಇರಬಹುದು. ವಾಹನ ವಿಚಾರವಾಗಿ ಮನೆಯಲ್ಲಿ ಕಲಹವಾಗಬಹುದು.‌ ಸಂಗಾತಿಯ ಮಾತಿಗೆ ನಿಮ್ಮ ಪ್ರತಿಕ್ರಿಯೆಯು ಇಲ್ಲದಿರುವುದು ಬೇಸರವನ್ನು ತರಿಸಬಹುದು. ಮಹಿಳಾ ಉದ್ಯೋಗಿಗಳಿಗೆ ಭಡ್ತಿ ಸಾಧ್ಯತೆ ಇದೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ. ಕಚ್ಚಾ ವಸ್ತುಗಳ ನಿರ್ವಹಣೆಯ, ಮಾರಾಟ, ಸಂಗ್ರಹವೇ ಮುಖ್ಯ ಕಾರ್ಯವಾಗಬಹುದು. ಪಿತ್ತಸಂಬಂಧಿ ರೋಗವು ಕಾಣಿಸಿಕೊಳ್ಳಬಹುದು. ಇತಿಹಾಸಕ್ಕೆ ವಿಚಾರದಲ್ಲಿ ಶೋಧನೆಯನ್ನು ಮಾಡುವಿರಿ. ನಿಮ್ಮ ಕೆಲಸಗಳನ್ನು ಇನ್ನೊಬ್ಬರಿಗೆ ಕೊಟ್ಟುಬಿಡುವಿರಿ. ನಿಮ್ಮದಲ್ಲದ ವಸ್ತುಗಳನ್ನು ಜೋಪಾನ ಮಾಡುವುದು ಅನಿವಾರ್ಯ. ಸಮಯದ ಬೆಲೆಯನ್ನು ಅನ್ಯರಿಂದ ಪಡೆಯುವಿರಿ. ವ್ಯಾಪಾರದ ಗೌಪ್ಯತೆಯನ್ನು ಕಾಪಾಡಿಕೊಳ್ಳಬೇಕು.

ಧನು ರಾಶಿ: ಪ್ರಾಯೋಗಿಕ ಅನುಭವವೇ ನಿಮಗೆ ಆಗುವ ಕಾರಣ ಯಾವುದರಲ್ಲಿ ಹೇಗೆ ಮುಂದುವರಿಯಬೇಕು ಎನ್ನುವ ಸ್ಪಷ್ಟತೆ ಸಿಗಲಿದೆ. ಒಳ್ಳೆಯ ಸುದ್ದಿಯನ್ನು ನಾಲ್ಕು ಜನರ ಜೊತೆ ಹಂಚಿಕೊಳ್ಳುವಿರಿ. ಇಂದು ಕಛೇರಿಯಲ್ಲಾಗಲಿ ನಿಮ್ಮ ಮಾತನ್ನು ಬೆಂಬಲಿಸತ್ತಾರೆ. ವಿವಾಹ ಯೋಗವು ಬಂದಿದ್ದು ಅದಕ್ಕೆ ಬೇಕಾದ ತಯಾರಿಯನ್ನು ಮಾಡಿಕೊಳ್ಳಿ.‌ ನಿಮ್ಮ‌ ಮಾತು ಯಾರನ್ನಾದರೂ ಘಾಸಿ ಮಾಡೀತು. ಜಲಮೂಲದ ವ್ಯಾಪಾರದಿಂದ ಲಾಭವನ್ನು ಕಾಣಬಹುದು. ಆದರೆ ಕಡಿಮೆ ವೆಚ್ಚದಲ್ಲಿ ಹೆಚ್ಚು ಲಾಭವನ್ನು ನಿರೀಕ್ಷಿಸುವಿರಿ. ಯಾರಿಗಾದರೂ ಹಣವನ್ನು ಕೊಡುವ ಸಂದರ್ಭವು ಬರಬಹುದು. ಮನೆಯ ನಿರ್ಮಾಣದಲ್ಲಿ ಹಿನ್ನಡೆಯಾಗುವುದು. ಮನಸ್ಸಿಗೆ ಆದ ಘಾಸಿಯನ್ನು ಹೇಳಿಕೊಳ್ಳಲಾರಿರಿ. ಬಂಧುಗಳ ಪ್ರೀತಿಗೆ ಪಾತ್ರರಾಗುವಿರಿ. ವ್ಯವಹಾರದಲ್ಲಿ ಶುದ್ಧತೆ ಇರಲಿ. ಭವಿಷ್ಯದ ಬಗ್ಗೆ ಬಹಳ ಆಲೋಚನೆಯನ್ನು ಮಾಡುವಿರಿ. ಕಾನೂನಿಗೆ ವಿರುದ್ಧವಾದ ನಡೆಯು ನಿಮಗೆ ಅಪಾಯಕಾರಿ. ದೂರದ ಬಂಧುಗಳು ಹತ್ತಿರವಾಗುವರು. ನೀವು ಮಾಡುವ ನಿರ್ಧಾರಗಳು ಮುಜುಗರ ಉಂಟುಮಾಡಲಿದೆ. ನಿಮಗೆ ಪ್ರಶಂಸೆಯು ಬಲವನ್ನು ಕೊಡುವುದು.

ಮಕರ ರಾಶಿ: ಭಡ್ತಿಗಾಗಿ ಸಲ್ಲಿಸಿದ ಮನವಿಯನ್ನು ತಳ್ಳಿಹಾಕಬಹುದು. ನಿಮ್ಮ ವೈಯಕ್ತಿಕ ತೊಂದರೆಯನ್ನು ಎಲ್ಲಿಯೂ ಹೇಳಿಕೊಳ್ಳುವ ಮನಸ್ಸಾಗದು. ಇಂದು ನಿಮಗೆ ಸೇವೆಯಲ್ಲಿ ಸಂತೋಷ ಸಿಗಲಿದೆ. ನೀವು ಇಂದು ಕಾರ್ಯದಲ್ಲಿ ಮಗ್ನರಾಗಿದ್ದು ಯಾವ ವಿಷಯಕ್ಕೂ ನೀವು ಭಾಗಿಯಾಗಲಾರಿರಿ. ಸಂಬಂಧಿಕರನ್ನೇ ಪಾಲುದಾರಿಕೆಯಲ್ಲಿ ಇಟ್ಟಕೊಳ್ಳುವಿರಿ. ಸರ್ಕಾರದ‌‌‌ ಕೆಲಸಕ್ಕೆ ಹೆಚ್ಚು ಓಡಾಟ ಮಾಡಬೇಕಾದೀತು. ಭೂಮಿಯ ವ್ಯವಹಾರವು ಲಾಭದಾಯಕವಲ್ಲದಿದ್ದರೂ ಅದನ್ನೇ‌ ನಡೆಸಲು ಬಯಸುವಿರಿ. ನಿಮ್ಮ ಅತಿಯಾದ ಮಾತು ಯಾರಿಗೂ ಸುಖ ಕೊಡದು. ನಿರ್ಲಕ್ಷ್ಯದ‌ ಮನೋಭಾವವು ನಿಮಗೆ ಹಿಡಿಸಿದ್ದಲ್ಲ. ನಿಮಗೆ ಆಗಬೇಕಾದ ಕಾರ್ಯಕ್ಕೆ ಯಾರನ್ನೋ ಎತ್ತಿಕಟ್ಟುವಿರಿ. ಪಾಲುದಾರಿಕೆಯು ಬಳಕೆ ಇಲ್ಲದೇ ತಪ್ಪಿಹೋಗುವುದು. ಉದ್ಯೋಗದಲ್ಲಿ ನಿಮ್ಮ ಕಣ್ತಪ್ಪಿನಿಂದ ಆದ ತಪ್ಪಿಗೆ ನೀವೇ ಜವಾಬ್ದಾರಿ ಆಗಿರುವಿರಿ. ಯಾರ ಸರಿ ತಪ್ಪುಗಳ ಬಗ್ಗೆ ನಿಮ್ಮ ವಿಮರ್ಶೆ ಬೇಡ.

ಕುಂಭ ರಾಶಿ: ಸಾಮಾಜಿಕ ತಾಣಗಳ ಮೂಲಕ ಪ್ರತಿಭಟನೆಗೆ ಬೆಂಬಲ. ಕೆಲವು ಕ್ಷಣಗಳನ್ನು ನೀವು ಕಳೆದುಕೊಳ್ಳುವ ಬೇಸರವಿರುವುದು. ಆತುರದಲ್ಲಿ ಏನಾದರೂ ನಿರ್ಧಾರವನ್ನು ತೆಗದುಕೊಳ್ಳಬೇಡಿ. ವಿಪರೀತ ಓಡಾಟದಿಂದ‌ ನಿಮಗೆ ದಣಿವಾಗಲಿದೆ. ಹೆಚ್ಚಿನ ಸುಖಸಂಪತ್ತನ್ನು ನಿರೀಕ್ಷಿಸುವಿರಿ. ತಾಯಿಯ ಕಡೆಯಿಂದ ನಿಮಗೆ ಪ್ರೋತ್ಸಾಹವು ಸಿಗಲಿದೆ. ಮುಖವಾಡವನ್ನು ಹಾಕಿಕೊಂಡು ವರ್ತಿಸುವ ಜನರ ಜೊತೆ ಮೈಯೆಲ್ಲ ಕಣ್ಣಾಗಿ ಇರಬೇಕಾಗುವುದು. ಅಪರಿಚಿತರ ಸಹವಾಸವನ್ನು ಮಾಡುವಿರಿ. ಓಡಾಡುವಾಗ ಎಚ್ಚರ ಇರಲಿ. ಎಲ್ಲವನ್ನೂ ಒಬ್ಬರೇ ಮಾಡಿ ಮುಗಿಸಬೇಕು ಎನ್ನುವ ಉತ್ಸಾಹವು ಇದ್ದರೂ ಇನ್ನೊಬ್ಬರನ್ನು ನಿಮ್ಮ ಜೊತೆಗೆ ಜೋಡಿಸಿ ಕೊಂಡು ಕಾರ್ಯವನ್ನು ಯಶಸ್ವಿಯಾಗಿಸಿ. ಗ್ರಾಹಕರ ಬೇಡಿಕೆಗೆ ಸ್ಪಂದನೆ‌ ಕೊಡುವಿರಿ. ಇರುವುದನ್ನು ಇದ್ದಂತೆ ಹೇಳುವುದರಿಂದ ನಿಮಗೆ ತೊಂದರೆಯಾದೀತು. ಇಂದಿನ ಒಂದು ಸಂದರ್ಭ ನಿಮ್ಮನ್ನು ಅಪಾಯದಿಂದ ತಪ್ಪಿಸುವುದು. ಅಪಹಾಸ್ಯಕ್ಕೆ ಸಿಕ್ಕಿಕೊಳ್ಳುವ ಸಾಧ್ಯತೆ ಇದೆ.

ಮೀನ ರಾಶಿ: ಯಾರಿಂದಲೂ ಕಸಿದುಕೊಳ್ಳುವ ಪ್ರಯತ್ನ ಬೇಡ. ಕೊಟ್ಟರೆ ಪ್ರೀತಿಯಿಂದ ಪಡೆಯಿರಿ. ನೆಮ್ಮದಿ ಬೇಕಾದರೆ ಕೆಲವನ್ನು ಬಿಡುವುದು ಅನಿವಾರ್ಯವಾಗಬಹುದು. ಇಂದು ನಿಮಗೆ ಧಾರ್ಮಿಕ ಕಾರ್ಯಗಳಿಂದ ನಿಮ್ಮ ಹಣದ‌ ಸಂಪಾದನೆಯಾಗಲಿದೆ. ಅತಿಥಿಗಳ ಸತ್ಕಾರವನ್ನು ಮನೆಯಲ್ಲಿ ಮಾಡುವಿರಿ. ಸಂಗಾತಿಯ ಜೊತೆ ಸರಸದಿಂದ ಹರಟೆ ಹೊಡೆಯುವಿರಿ. ಮಕ್ಕಳ‌ ಕಾರ್ಯವು ನಿಮಗೆ ಹೆಮ್ಮೆ ಎನಿಸುವುದು. ನಿಮಗೆ ಉತ್ಸಾಹವನ್ನು ತುಂಬುವ ಜನರ ಅವಶ್ಯಕತೆ ಇರಲಿದೆ. ಬೇಕೆಂದೇ ನಿಮ್ಮ ಮೇಲೆ ಯಾರಾದರೂ ಎರಗಿ ಬರಬಹುದು. ಪ್ರತಿಕ್ರಯಿಸುವಾಗ ಎಚ್ಚರವಿರಲಿ. ನಿರ್ಮಾಣ ಕಾರ್ಯ ಪುನಃ ಆರಂಭವಾಗಲಿದೆ. ಯಾವುದನ್ನೂ ತೋರಿಕೆಗೆ ಮಾಡುವುದು ಬೇಡ. ನಿಮ್ಮ ಶುದ್ಧ ಮನಸ್ಸಿನಿಂದ ಎಲ್ಲರಿಗೂ ಶುಭವನ್ನೇ ಹಾರೈಸಿ. ಕಳೆದ ವ್ಯರ್ಥ ಕಾಲವನ್ನು ಮತ್ತೆ ಸೇರಿಸಲಗಾದು ಎಂದು ವ್ಯಥೆಪಡುವಿರಿ. ಉತ್ತಮ ಅವಕಾಶಗಳನ್ನು ವೈರಾಗ್ಯ ಬುದ್ಧಿಯಿಂದ ಬಿಟ್ಟು ಕೊಡುವಿರಿ. ಕುಟುಂಬದಲ್ಲಿ ಐಕಮತ್ಯದ ಕೊರತೆಯು ಕಾಣಿಸುವುದು. ವಸ್ತುಗಳು ಕಾಣೆಯಾಗಬಹುದು. ಎಲ್ಲವನ್ನೂ ನಿಮ್ಮ ಮೇಲೆ‌ ಹೇರಬಹುದು.

ಲೋಹಿತ ಹೆಬ್ಬಾರ್ – 8762924271 (what’s app only)

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ