Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ಈ ರಾಶಿಯವರು ಇಂದು ಲಾಭದಾಯಕ ಅವಕಾಶಗಳನ್ನು ಕಳೆದುಕೊಳ್ಳಬಹುದು

17 ಮಾರ್ಚ್​​​ 2025: ಸೋಮವಾರದಂದು ತುಲಾ, ವೃಶ್ಚಿಕ, ಧನು, ಮಕರ, ಕುಂಭ, ಮೀನ ರಾಶಿಯವರ ರಾಶಿ ಭವಿಷ್ಯ ಹೇಗಿದೆ? ನೂತನ ವಸ್ತುಗಳನ್ನು ಖರೀದಿಸಿದರೂ ಅದನ್ನು ಉಪಯೋಗಿಸಲು ಆಗದೇ, ಇಂದು ಅದನ್ನು ಬಳಸುವಿರಿ. ಹಾಗಾದರೆ ಮಾರ್ಚ್ 17ರ ದಿನ ಭವಿಷ್ಯ ಮತ್ತು ಪಂಚಾಂಗ ಇಲ್ಲಿದೆ ನೋಡಿ.

Horoscope: ಈ ರಾಶಿಯವರು ಇಂದು ಲಾಭದಾಯಕ ಅವಕಾಶಗಳನ್ನು ಕಳೆದುಕೊಳ್ಳಬಹುದು
ಈ ರಾಶಿಯವರು ಇಂದು ಲಾಭದಾಯಕ ಅವಕಾಶಗಳನ್ನು ಕಳೆದುಕೊಳ್ಳಬಹುದು
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Mar 17, 2025 | 12:12 AM

ಬೆಂಗಳೂರು, ಮಾರ್ಚ್​ 16, ನಿತ್ಯ ಪಂಚಾಗ: ಶಾಲಿವಾಹನ ಶಕೆ ೧೯೪೭ರ ಕ್ರೋಧೀ ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಸೌರ ಮಾಸ : ಕುಂಭ ಮಾಸ, ಮಹಾನಕ್ಷತ್ರ : ಪೂರ್ವಾಭಾದ್ರಾ, ಮಾಸ : ಫಾಲ್ಗುಣ, ಪಕ್ಷ : ಕೃಷ್ಣ, ವಾರ : ಸೋಮ, ತಿಥಿ : ತೃತೀಯಾ, ನಿತ್ಯನಕ್ಷತ್ರ : ಸ್ವಾತಿ, ಯೋಗ : ಧ್ರುವ, ಕರಣ : ವಣಿಜ, ಸೂರ್ಯೋದಯ – 06 – 40 am, ಸೂರ್ಯಾಸ್ತ – 06 – 42 pm, ಇಂದಿನ ಶುಭಾಶುಭಕಾಲ : ರಾಹು ಕಾಲ 08:10 – 09:41, ಯಮಘಂಡ ಕಾಲ 11:11 – 12:41, ಗುಳಿಕ ಕಾಲ 14:11 – 15:42.

ತುಲಾ ರಾಶಿ: ನೀವು ಮೊದಲೇ ಚಿಂತಿಸಿದಂತೆ ಏನೂ ಆಗದಿರುವುದು ನಿಮ್ಮನ್ನು ಕಾಡಬಹುದು. ಕುಟುಂಬದ ಹಿರಿಯರ ಆರೋಗ್ಯದ ಚಿಂತೆ ಇರಲಿದೆ. ಬಂಧುಗಳು ನಿಮ್ಮ ಸಹಾಯವನ್ನು ಕೇಳಿ ಬರಬಹುದು. ನಿಮ್ಮ ವೈಯಕ್ತಿಕ ವಿಚಾರದಲ್ಲಿ ಯಾವುದೇ ಹೊರಗಿನವರನ್ನು ತಲೆ ಹಾಕಲು ಬಿಡಬೇಡಿ.ಯಾವುದೇ ಯೋಜನೆಯನ್ನು ರೂಪಿಸುವ ಮೊದಲು ಮತ್ತೊಮ್ಮೆ ಯೋಚಿಸುವುದು ಅವಶ್ಯಕ. ಆಸ್ತಿಯ ವಿಚಾರವಾಗಿ ನೀವು ಕಾನೂನು ಹೋರಾಟವನ್ನು ಮಾಡುವುದು ಒಳ್ಳೆಯದು. ವಿಳಂಬವಾದರೂ ಮಾರ್ಗ ಸರಿಯಾಗಿರಲಿದೆ. ನಿಮ್ಮ ಮಾತಿನ ಮೇಲೆ‌ ನಂಬಿಕೆ ಕಡಿಮೆ ಆಗುವುದು. ಕಲಾವಿದರು ತಮ್ಮ ಸಾಮರ್ಥ್ಯವನ್ನು ಪ್ರದರ್ಶಿಸುವರು. ನಿಮ್ಮ ಬಗ್ಗೆ ಇನ್ನೊಬ್ಬರ ಅಭಿಪ್ರಾಯವನ್ನು ಪಡೆಯುವಿರಿ. ಬೆನ್ನಿನ ನೋವು ಮತ್ತೆ ಕಾಣಿಕೊಂಡು ಸಂಕಟಪಡಬೇಕಾದೀತು. ಇಂದಿನ ಕಾರ್ಯವು ಪೂರ್ಣವಾಗುವ ತನಕ ನಿಮಗೆ ಮಾನಸಿಕ ವಿಶ್ರಾಂತಿಯು ಇರದು. ನಿಮ್ಮ ಮಾತು ವಿವಾದವನ್ನು ಹುಟ್ಟುಹಾಕಬಹುದು. ಯಾರಿಂದಲಾದರೂ ಪ್ರಭಾವಿತರಾಗುವಿರಿ.

ವೃಶ್ಚಿಕ ರಾಶಿ: ಇಂದು ನಿಮಗೆ ಸಿಗುವ ವ್ಯಕ್ತಿಗಳಿಂದ ಬೇಕಾದುದನ್ನು ಮಾಡಿಸಿಕೊಳ್ಳುವಿರಿ. ಮಕ್ಕಳಿಗೆ ವಿದೇಶದಲ್ಲಿ ವಿದ್ಯಾಭ್ಯಾಸವನ್ನು ಕೊಡುವ ಮನಸ್ಸಿರುವುದು. ವಿವಾಹಿತರ ಜೀವನವು ಆನಂದದಿಂದ ಇರುವುದು. ಕೆಲವು ಜನರು ನಿಮ್ಮ ಸರಳ ಸ್ವಭಾವದ  ಲಾಭವನ್ನು ಪಡೆಯಬಹುದು.  ನೀವು ಕೆಲವು ಲಾಭದಾಯಕ ಅವಕಾಶಗಳನ್ನು ಕಳೆದುಕೊಳ್ಳಬಹುದು. ಪ್ರಸ್ತುತ ಸಮಯ ಯಶಸ್ವಿಯಾಗಬಹುದು. ನಿಮ್ಮ ಆರ್ಥಿಕ ಸ್ಥಿತಿಯು ಸಾಮಾನ್ಯವಾಗಿದ್ದು ಹತಾಶ ಭಾವವಿರುವುದು. ಈ ಸಮಯದಲ್ಲಿ ನೀವು ಉಳಿತಾಯದ ಬಗ್ಗೆ ಹೆಚ್ಚು ಗಮನ ಕೊಡಬೇಕು. ಮಂಗಲ ಕಾರ್ಯಕ್ಕೆ ಸಾಲವನ್ನು ಮಾಡಬೇಕಾಗುವುದು. ಕಛೇರಿಯಲ್ಲಿ ನಿಮ್ಮ ಮಾತು ಮತ್ತು ನಡವಳಿಕೆಯ ಬಗ್ಗೆ ಗಮನವಿರುವುದು. ವ್ಯಾಪಾರಸ್ಥರಿಗೆ ಸಾಮಾನ್ಯವಾಗಿ ಇರುವುದು. ಭೂಮಿಯ ದಾಖಲೆಗಳನ್ನು ಸರಿಯಾಗಿ ಪಡೆದುಕೊಂಡು ವ್ಯವಹರಿಸಿ. ಭವಿಷ್ಯದ ಕುರಿತು ಬಹಳ ಆಲೋಚನೆ ಇರುವುದು. ಸಾಧು, ಸಜ್ಜನರ ಭೇಟಿಯಿಂದ‌ ಮನಸ್ಸು ಆಹ್ಲಾದಕರವಾಗಲಿದೆ.

ಧನು ರಾಶಿ: ಇಂದು ಉತ್ತಮವಾದ ಆದಾಯ ಮೂಲವನ್ನು ಪಡೆಯಲು ನೀವು ಯಶಸ್ವಿಯಾಗುವಿರಿ. ಕಚೇರಿಯಲ್ಲಿ ಉನ್ನತ ಅಧಿಕಾರಿಗಳ ಸಲಹೆಯನ್ನು ನಿರ್ಲಕ್ಷಿಸುವ ತಪ್ಪನ್ನು ಮಾಡುವಿರಿ. ಎಲ್ಲರ ಮಾರ್ಗವನ್ನೇ ನೀವು ಅನುಸರಿಸಲು ಇಷ್ಟಪಡುವುದಿಲ್ಲ. ನಿಮಗೆ ನಿಮ್ಮದೇ ಹಣ ಬರುವ ಸಾಧ್ಯತೆ ಇದೆ. ಉದ್ಯೋಗಸ್ಥ ಮಹಿಳೆಯರು ತಮ್ಮ ಜವಾಬ್ದಾರಿಗಳನ್ನು ಸರಿಯಾಗಿ ಪೂರೈಸಲು ಸಾಧ್ಯವಾಗುತ್ತದೆ. ನಕಾರಾತ್ಮಕ ಚಟುವಟಿಕೆಯ ಕೆಲವು ಜನರು ನಿಮ್ಮನ್ನು ಟೀಕಿಸುತ್ತಾರೆ. ಸಂಗಾತಿಯ ಜೊತೆ ಭಿನ್ನಾಭಿಪ್ರಾಯವು ಹೆಚ್ಚಾಗಬಹುದು. ತಾಳ್ಮೆಯಿಂದ ಪರಿಸ್ಥಿತಿ ನಿಭಾಯಿಸಿ. ಕಷ್ಟಗಳು ನಿಮ್ಮ ಧೈರ್ಯಕ್ಕೆ ಶರಣಾಗಬಹುದು. ಉತ್ತಮ ಅವಕಾಶಗಳು ಸಣ್ಣ ಅಂತರದಲ್ಲಿ ಕೈ ತಪ್ಪಿವುದು.‌ ಆಕಸ್ಮಿಕವಾಗಿ ಉದ್ಯೋಗವು ನಿಮ್ಮ‌ ಪಾಲಿಗೆ ಬರುವುದು.‌ ನೀವೇ ಹಾಕಿಕೊಂಡ ಯೋಜನೆಯಲ್ಲಿ ತಪ್ಪುಗಳು ಕಾಣಲಿದ್ದು, ಅದನ್ನು ಬದಲಾಯಿಸಲೂ ಆಗದ ಸ್ಥಿತಿಯೂ ಬರುವುದು. ವಿನ್ಯಾಸಕಾರರಿಗೆ ಅವಕಾಶಗಳು ಸಿಗಬಹುದು.

ಮಕರ ರಾಶಿ: ಇಂದು ತಂತ್ರಜ್ಞರು ಹೆಚ್ಚು ಕಾರ್ಯವನ್ನು ಮಾಡುವರು. ಸ್ವಂತ ಉದ್ಯಮಿಗಳಿಗೆ ಕಾರ್ಮಿಕರ‌ ಕೊರತೆ ಆಗುವ ಸಾಧ್ಯತೆ ಇದೆ. ಸ್ಥಿರಾಸ್ತಿಯ ಜೊತೆ ಚರಾಸ್ತಿಯೂ ನಿಮ್ಮದಾಗಬಹುದು. ಯಾರನ್ನೂ ಕುರುಡಾಗಿ ನಂಬವುದು ಬೇಡ. ಕುಟುಂಬ ಜೀವನದಲ್ಲಿ ಪರಿಸ್ಥಿತಿಗಳು ಆಹ್ಲಾದಕರವಾಗಿರುತ್ತದೆ. ನಿಮ್ಮ ಆರೋಗ್ಯದ ಬಗ್ಗೆ ಯಾವುದೇ ರೀತಿಯ ನಿರ್ಲಕ್ಷ್ಯವನ್ನು ಮಾಡಬೇಡಿ. ತಾಳ್ಮೆಯನ್ನು ಕಾಪಾಡಿಕೊಳ್ಳಿ. ನೀವು ಕೆಲವು ಆಸ್ತಿಯಿಂದ ಹಣವನ್ನು ಪಡೆಯಬಹುದು. ನಿಮಗೆ ಸ್ನೇಹಿತರಿಂದಲೂ ಬೆಂಬಲ ಸಿಗುತ್ತದೆ. ಬೌದ್ಧಿಕ ಕೆಲಸದಿಂದ ಆದಾಯ ಹೆಚ್ಚಾಗುವ ಸಾಧ್ಯತೆ ಇದೆ. ಅವಕಾಶವು ಮತ್ತೆ ಮತ್ತೆ ನಿಮ್ಮ ಬಳಿ ಬರದು.‌ ಬಂದದ್ದನ್ನು ಬರಮಾಡಿಕೊಳ್ಳಿ. ಉದ್ಯಮಿಗಳಿಗೆ ರಪ್ತು ವ್ಯವಹಾರವು ಬಹಳ ಕಷ್ಟವೆನಿಸಲಿದೆ. ಪಾಲುದಾರಿಕೆಯನ್ನು ಕೈಬಿಡುವುದು ಒಳ್ಳೆಯದು. ಆರೋಗ್ಯವೂ ಅತಿಯಾದ ಒತ್ತಡದಿಂದ ಹಾಳಾಗುವುದು. ಸಲ್ಲದ ಮಾತುಗಳ ಮೇಲೆ ನಿಯಂತ್ರಣದ ಅವಶ್ಯಕತೆ ಇರಲಿದೆ. ನೇರ ಮಾತು ಎಲ್ಲರಿಗೂ ಹಿಡಿಸದು. ಮಕ್ಕಳ ವಿಚಾರದಲ್ಲಿ ಕಾಳಜಿಯ ಅವಶ್ಯಕತೆ ಇರಲಿದೆ. ಕೆಲವು ಸನ್ನಿವೇಶಗಳಿಗೆ ಪ್ರತಿಸ್ಪಂದಿಸುವ ಬಗೆ ಗೊತ್ತಾಗದೇ ಹೋಗಬಹುದು.

ಕುಂಭ ರಾಶಿ: ಪ್ರಯಾಣವನ್ನು ಜಾಗರೂಕತೆಯಿಂದ ಮಾಡಿ. ವಸ್ತುಗಳು ಕಣ್ಮರೆಯಾಗಬಹುದು. ಅಗತ್ಯದ ಕಾರ್ಯವನ್ನು ಇತರರ ಸಹಾಯವನ್ನು ಪಡೆದು ಮುಗಿಸುವಿರಿ. ನಿಮ್ಮ ಉದ್ಯೋಗಸ್ಥರು ಕಚೇರಿಯಲ್ಲಿ ಮೇಲಿನವರಿಂದ ಹೆಚ್ಚಿನ ಬೆಂಬಲವನ್ನು ಪಡೆಯುವರು. ಹಣದ ಪರಿಸ್ಥಿತಿ ಉತ್ತಮವಾಗಿದ್ದರೂ, ಯಥಾಯೋಗ್ಯವಾದ ಖರ್ಚೂ ಇರಲಿದೆ. ಕೆಲಸದಲ್ಲಿ ಅಧಿಕಾರಿಗಳೊಂದಿಗೆ ಸಾಮರಸ್ಯವನ್ನು ಕಾಪಾಡಿಕೊಳ್ಳಿ. ಪ್ರಗತಿಯ ಸಾಧ್ಯತೆಗಳಿವೆ. ಆದರೆ ಸ್ಥಳ ಬದಲಾವಣೆಯೂ ಆಗಬಹುದು. ವ್ಯವಹಾರದಲ್ಲಿ ಯಶಸ್ಸು ಸಿಗುವ ಸಾಧ್ಯತೆಗಳಿವೆ. ಸಂಗಾತಿಯ ಜೊತೆ ಕುಳಿತು ದುಃಖದಿಂದ ಸಮಾಧಾನ ಮಾಡುವಿರಿ. ಆರೋಗ್ಯವಾಗಿರಲು, ನೀವು ಅಸಂಬದ್ಧ ಚಿಂತೆಗಳಿಂದ ದೂರವಿರಬೇಕು. ಕೋಪದಲ್ಲಿ ಏನನ್ನಾದರೂ ಹೇಳಿ ಮನಸ್ಸನ್ನು ವಿಕಾರ ಮಾಡಿಕೊಳ್ಳುವಿರಿ. ತಂದೆಯ ಮಾತು ನಿಮಗೆ ಹಿತವೆನಿಸೀತು. ಧಾರ್ಮಿಕ ಕಾರ್ಯದಲ್ಲಿ ಅಲ್ಪ ಆಸಕ್ತಿಯು ಕಂಡುಬರುವುದು. ಇಂದಿನ ಘಟನೆಯು ನಿಮ್ಮ ಎಲ್ಲ ಆಸಕ್ತಿಯನ್ನು ಕುಗ್ಗಿಸುವುದು. ಕೆಲಸವನ್ನು ಹಂಚಿಕೊಂಡು ಮಾಡಿ.

ಮೀನ ರಾಶಿ: ದೈವಕೃಪೆಯನ್ನು ಪ್ರಾರ್ಥಿಸಿ ಇಂದಿನ ನಿಮ್ಮ ಕಾರ್ಯವನ್ನು ಆರಂಭಿಸಿ. ವಿದ್ಯಾಭ್ಯಾಸದಲ್ಲಿ ಶಿಸ್ತನ್ನು ರೂಢಿಸಿಕೊಳ್ಳುವುದು ಉತ್ತಮ. ಉದ್ಯಮದಲ್ಲಿ ಬರುವ ಸಮಸ್ಯೆಯನ್ನೂ ನಿವಾರಿಸಿಕೊಳ್ಳುವಿರಿ. ಯಾವುದೇ ಕಾರಣಕ್ಕೂ ಧೈರ್ಯಗೆಡದಿರಲು ಕಾರಣ ಪೋಷಕರಿಂದ ನಿಮಗೆ ಬೆಂಬಲ. ಉದ್ಯೋಗ ಕ್ಷೇತ್ರದಲ್ಲಿ ವಿಸ್ತರಣೆ ಕಂಡುಬರಲಿದೆ. ನೀವು ಆರ್ಥಿಕ ಏರಿಳಿತಗಳನ್ನು ಎದುರಿಸಬಹುದು. ನಿಮ್ಮ ಆರ್ಥಿಕ ಸ್ಥಿತಿಯು ಮಧ್ಯಮಕ್ಕಿಂತ ಉತ್ತಮವಾಗಿರುವುದು. ವೈವಾಹಿಕ ಜೀವನದಲ್ಲಿ ಖುಷಿ ಇರುವುದು. ಆರೋಗ್ಯದ ದೃಷ್ಟಿಯಿಂದ ಇಂದು ಅನುಕೂಲವೇ. ನೂತನ ವಸ್ತುಗಳನ್ನು ಖರೀದಿಸಿದರೂ ಅದನ್ನು ಉಪಯೋಗಿಸಲು ಆಗದೇ, ಇಂದು ಅದನ್ನು ಬಳಸುವಿರಿ. ಕಾನೂನಿಗೆ ವಿರುದ್ಧವಾಗಿ ಕಾರ್ಯವನ್ನು ಮಾಡುವ ಆಲೋಚನೆಯನ್ನು ಬಿಡುವುದು ಇದ್ದರೆ, ಅಂತಹ ಸಾಹಸದಲ್ಲಿ ತೊಡಗಿಕೊಳ್ಳುವುದು ಬೇಡ. ಬೇಸರಿಸದೇ ಬಂದ ಕೆಲಸವನ್ನು ಶ್ರದ್ಧೆಯಿಂದ ಮಾಡಿ.‌ ಬಂಧುಗಳ ಜೊತೆ ಇಂದು ವಿನಾಕಾರಣ ವಿವಾದ ಮಾಡಿಕೊಂಡು ಬೇಸರಿಸುವಿರಿ.

ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!
ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ
ತೆರವು ಕಾರ್ಯಾಚರಣೆ ಆರಂಭಿಸುವ ಮೊದಲು ನೋಟೀಸ್ ನೀಡಿಲ್ಲ: ಕುಮಾರಸ್ವಾಮಿ
ತೆರವು ಕಾರ್ಯಾಚರಣೆ ಆರಂಭಿಸುವ ಮೊದಲು ನೋಟೀಸ್ ನೀಡಿಲ್ಲ: ಕುಮಾರಸ್ವಾಮಿ
ನಮಗಾದರೋ ಕುಮಾರಸ್ವಾಮಿ ಎಲ್ಲದಕ್ಕೂ ರಾಜೀನಾಮೆ ಕೇಳುತ್ತಿದ್ದರಲ್ಲ? ಸಚಿವ
ನಮಗಾದರೋ ಕುಮಾರಸ್ವಾಮಿ ಎಲ್ಲದಕ್ಕೂ ರಾಜೀನಾಮೆ ಕೇಳುತ್ತಿದ್ದರಲ್ಲ? ಸಚಿವ
ತೋಟದ ಮನೆ ಸುತ್ತ ಸರ್ಕಾರಿ ಒತ್ತುವರಿ ಭೂಮಿ ತೆರವು: ಎಚ್​ಡಿಕೆ ಹೇಳಿದ್ದಿಷ್ಟು
ತೋಟದ ಮನೆ ಸುತ್ತ ಸರ್ಕಾರಿ ಒತ್ತುವರಿ ಭೂಮಿ ತೆರವು: ಎಚ್​ಡಿಕೆ ಹೇಳಿದ್ದಿಷ್ಟು
ಭಾರತೀಯ ಸಂಸ್ಕೃತಿಯ ರಾಯಭಾರಿ; ಅಂಧ ಯುವತಿಯ ಸ್ಫೂರ್ತಿಯ ಕತೆ ಹೇಳಿದ ಮೋದಿ
ಭಾರತೀಯ ಸಂಸ್ಕೃತಿಯ ರಾಯಭಾರಿ; ಅಂಧ ಯುವತಿಯ ಸ್ಫೂರ್ತಿಯ ಕತೆ ಹೇಳಿದ ಮೋದಿ
RCB ಅನ್​ಬಾಕ್ಸ್ ಕಾರ್ಯಕ್ರಮ ಮಿಸ್ ಮಾಡಿಕೊಂಡಿದ್ದೀರಾ? ಇಲ್ಲಿದೆ ವಿಡಿಯೋ
RCB ಅನ್​ಬಾಕ್ಸ್ ಕಾರ್ಯಕ್ರಮ ಮಿಸ್ ಮಾಡಿಕೊಂಡಿದ್ದೀರಾ? ಇಲ್ಲಿದೆ ವಿಡಿಯೋ
ಎಚ್​ಡಿಕೆ ತೋಟದ ಮನೆ ಸುತ್ತ ಎಷ್ಟು ಎಕರೆ ಒತ್ತುವರಿ?ಸ್ಫೋಟಕ ಮಾಹಿತಿ ಇಲ್ಲಿದೆ
ಎಚ್​ಡಿಕೆ ತೋಟದ ಮನೆ ಸುತ್ತ ಎಷ್ಟು ಎಕರೆ ಒತ್ತುವರಿ?ಸ್ಫೋಟಕ ಮಾಹಿತಿ ಇಲ್ಲಿದೆ
ಕೇಂದ್ರ ಸಚಿವರೊಬ್ಬರ ವಿರುದ್ಧ ಒತ್ತುವರಿ ಕಾರ್ಯಾಚರಣೆ ನಡೆದ ಪ್ರಕರಣಗಳು ವಿರಳ
ಕೇಂದ್ರ ಸಚಿವರೊಬ್ಬರ ವಿರುದ್ಧ ಒತ್ತುವರಿ ಕಾರ್ಯಾಚರಣೆ ನಡೆದ ಪ್ರಕರಣಗಳು ವಿರಳ