AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today 14 September : ಇಂದು ಈ ರಾಶಿಯವರಿಗೆ ಹೊಸ ಆದಾಯದ ಮೂಲ ಸೃಷ್ಟಿಯಾಗಲಿದೆ

ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ವರ್ಷ ಋತುವಿನ ಭಾದ್ರಪದ ಮಾಸ ಕೃಷ್ಣ ಪಕ್ಷದ ಸಪ್ತಮೀ ತಿಥಿ ಭಾನುವಾರ ಮೂಲ ಧನ ಸಂಗ್ರಹ, ಮನೆಗೆ ಹೆಚ್ಚು ಸಮಯ, ಹಳೆಯ ವಾಹನ ಖರೀದಿ, ಮೋಹ ವರ್ಧನೆ, ಆದಾಯದ ಮೂಲ ಹೆಚ್ಚಾಗಲಿದೆ, ಸಂಗಾತಿಯ ಮೇಲೆ ಸಂಶಯ, ಸಿಗದೇ ಇರುವುದರ ಬಗ್ಗೆ ಚಿಂತಿಸಿ ಸಮಯ ವ್ಯರ್ಥ, ವ್ಯಾಪಾರಿಗಳಿಗೆ ಇಂದು ಲಾಭ, ಪಿತೃಕಾರ್ಯ ಇವೆಲ್ಲ ಈ ದಿನದ ಭವಿಷ್ಯ.

Horoscope Today 14 September : ಇಂದು ಈ ರಾಶಿಯವರಿಗೆ ಹೊಸ ಆದಾಯದ ಮೂಲ ಸೃಷ್ಟಿಯಾಗಲಿದೆ
ದಿನ ಭವಿಷ್ಯ
ಲೋಹಿತ ಹೆಬ್ಬಾರ್​, ಇಡುವಾಣಿ
| Edited By: |

Updated on: Sep 14, 2025 | 4:59 AM

Share

ನಿತ್ಯ ಪಂಚಾಂಗ: ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ದಕ್ಷಿಣಾಯನ, ಋತು : ವರ್ಷ, ಚಾಂದ್ರ ಮಾಸ : ಭಾದ್ರಪದ, ಸೌರ ಮಾಸ : ಸಿಂಹ, ಮಹಾನಕ್ಷತ್ರ : ಉತ್ತರಾಫಲ್ಗುಣೀ, ವಾರ : ಭಾನು, ಪಕ್ಷ : ಕೃಷ್ಣ, ತಿಥಿ : ಸಪ್ತಮೀ, ನಿತ್ಯನಕ್ಷತ್ರ : ಮೃಗಶಿರಾ, ಯೋಗ : ವೃದ್ಧಿ, ಕರಣ : ವಣಿಜ, ಸೂರ್ಯೋದಯ – 06 – 22 am, ಸೂರ್ಯಾಸ್ತ – 06 – 33 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 17:02- 18:34, ಗುಳಿಕ ಕಾಲ 15:31 – 17:02, ಯಮಗಂಡ ಕಾಲ 12:28 – 13:359

ಮೇಷ ರಾಶಿ :

ದಾನ ಮಾಡುವಾಗ ಮೂಲ ಧನವನ್ನೂ ಪರೀಕ್ಷಿಸಿಕೊಳ್ಳಿ. ನಂಬಿಕೆ ದ್ರೋಹಹವು ನಿಮಗಾಗಲಿದೆ. ಇಷ್ಟಪಟ್ಟವರನ್ನು ದೂರ ಮಾಡಿಕೊಳ್ಳುವಿರಿ. ಅನ್ಯರ ವಿಚಾರದಲ್ಲಿ ನಿಮಗೆ ಆಸಕ್ತಿಯು ಕಡಿಮೆ ಆಗುವುದು. ಸರ್ಕಾರದ ಕೆಲಸಕ್ಕಾಗಿ ಅಧಿಕ ಓಡಾಟವಾಗುವುದು. ಉದ್ಯೋಗದಲ್ಲಿ ಪ್ರಗತಿಯ ಹಾದಿ ಸುಗಮವಾಗಲಿದೆ. ಆದರೆ ಕೆಲಸದ ಸ್ಥಳದಲ್ಲಿ ಬದಲಾವಣೆಯಾಗಬಹುದು. ಹೊಸ ಆದಾಯದ ಮೂಲಗಳು ಸೃಷ್ಟಿಯಾಗಲಿವೆ. ಆರ್ಥಿಕ ನೆರವನ್ನು ಯಾರಿಂದಲಾದರೂ ನೀವು ಬಯಸುವಿರಿ. ಸಮಾಧನ ಚಿತ್ತದಿಂದ ಇರುವಿರಿ. ನಿಮ್ಮ ಸ್ವಭಾವದಿಂದ ದಾಂಪತ್ಯದಲ್ಲಿ ಕೆಲವು ಮಾತುಗಳು ಕೇಳಿಬರಬಹುದು. ಅನಗತ್ಯ ವಿಚಾರವನ್ನು ಪ್ರಸ್ತಾಪಿಸಿ ವಿವಾದ ಮಾಡುವಿರಿ. ಮತ್ತೆ ಮತ್ತೆ ವಿಚಾರಣೆಗೆ ಅಲೆದಾಟ ಮಾಡಬೇಕಾಗುವುದು. ನಿಮ್ಮ ಆದಾಯವು ಅಧಿಕವಾಗಿದ್ದು ನಿಮಗೆ ಸಂತೋಷವನ್ನು ಕೊಡುವ ವಿಚಾರವು ಇದಾಗಿದೆ. ನಿರಂತರ ಪ್ರಯತ್ನದ ಫಲವು ಇಂದು ಸಿಗಬಹುದು.

ವೃಷಭ ರಾಶಿ :

ಆಡಳಿತದಲ್ಲಿ ಸಂಯಮ ಬೇಕಾಗುವುದು. ಚಾಂಚಲ್ಯದ ಮನಸ್ಸಿನಿಂದ ಕೆಲವು ನಿರ್ಧಾರಗಳನ್ನು ಗಟ್ಟಿಯಾಗಿಸಲು ಕಷ್ಟಚಾದೀತು. ನಿಮ್ಮ ಪುಟ್ಟ ಪ್ರಪಂಚದಿಂದ ಹೊರಬರಲು ತಯಾರಾಗುವಿರಿ‌. ಬಂಧುಗಳ ನಕಾರಾತ್ಮಕ ಹೇಳಿಕೆಗಳು ನಿಮಗೆ ಉದ್ವೇಗವನ್ನು ಉಂಟಾಗಲಿದೆ. ಕೆಲಸ ಕಾರ್ಯಗಳಲ್ಲಿ ನೀವು ಆತ್ಮವಿಶ್ವಾಸದ ಕೊರತೆಯನ್ನು ಅನುಭವಿಸಬಹುದು. ಆದರೆ ಮನಸ್ಸಿನಲ್ಲಿ ನಕಾರಾತ್ಮಕ ಆಲೋಚನೆಗಳನ್ನು ದೂರವಿಡಬೇಕು. ಅನಿರೀಕ್ಷಿತವಾಗಿ ಧಾರ್ಮಿಕ ಕಾರ್ಯಕ್ಕೆ ಅನುಕೂಲ ಲಭ್ಯ. ಆಡಿದ ಮಾತಿಗೆ ಕ್ಷಮೆಯನ್ನು ಕೇಳಬೇಕಾದೀತು. ನಿಮ್ಮ‌ ಸುರಕ್ಷತೆಯಲ್ಲಿ ನೀವಿರುವುದು ಉತ್ತಮ. ಪತ್ನಿಯ ಬಗ್ಗೆ ವಿದೇಶದ ಸಂಪರ್ಕದಿಂದ ನಿಮಗೆ ಅನನುಕೂಲವಾಗಲಿದೆ. ನಿಮ್ಮ ಗೌಪ್ಯ ವಿಚಾರವನ್ನು ಮುಚ್ಚಿಡಲು ಪ್ರಯತ್ನಿಸುವಿರಿ. ನಿಮ್ಮ ನಿಲುವು ಕೆಲವರಿಗೆ ಇಷ್ಟವಾಗುವುದು. ನಿಮಗೆ ಅನ್ಯರಿಂದ ಉದ್ವಿಗ್ನತೆ ಬರಬಹುದು. ನಿಮ್ಮಲ್ಲಿ ಭೀತಿಯ ಮನೋಭಾವವು ಇರಲಿದೆ.

ಮಿಥುನ ರಾಶಿ :

ಸಿಗದೇ ಇರುವುದರ ಬಗ್ಗೆ ಚಿಂತಿಸಿ ಸಮಯ ವ್ಯರ್ಥ. ಕಾಲಕ್ಕೆ ಸರಿಯಾಗಿ ನಿಮಗೆ ಸಿಗುವುದು ತಪ್ಪಿಹೋಗದು. ತಾತ್ಕಾಲಿಕವಾಗಿ ನಿಮ್ಮ ಸಮಸ್ಯೆಗಳು ನಿವಾರಣೆಯಾಗಲಿದ್ದು ಸ್ವಲ್ಪ ಉಸಿರಾಡುವುದಕ್ಕೆ ಅನುವುಮಾಡಿಕೊಳ್ಳುವಿರಿ. ಉದ್ಯೋಗದಲ್ಲಿ ಭಡ್ತಿಗಾಗಿ ಕಾಯುತ್ತಿದ್ದು ಇಂದು ಸಿಗಬಹುದು. ಸ್ನೇಹಿರಿಂದ ನಿಮಗೆ ಬಹುಮಾನ ಸಿಗಬಹುದು. ಮಕ್ಕಳ ಯಶಸ್ಸನ್ನು ಕಂಡು ಪೋಷಕರಿಗೆ ಸಂತಸವಾಗಲಿದೆ. ಮನಸ್ಸಿನಲ್ಲಿ ಬೇಸರ ಇರುತ್ತದೆ. ಆತ್ಮವಿಶ್ವಾಸದ ಕೊರತೆ ಇರುತ್ತದೆ. ಶೈಕ್ಷಣಿಕ ಕೆಲಸದಲ್ಲಿ ಯಶಸ್ವಿಯಾಗುವಿರಿ. ಬುದ್ಧಿವಂತಿಕೆಗೆ ಸಂಬಂಧಿಸಿದ ಕಾರ್ಯಗಳಿಂದ ಆದಾಯ ಹೆಚ್ಚಾಗುತ್ತದೆ. ದೂರದ ಊರಿಗೆ‌ ಒಬ್ಬರೇ ವಾಹನ ಚಾಲಾಯಿಸುವಿರಿ. ವ್ಯಾಪರದಲ್ಲಿ‌ ಮಧ್ಯವರ್ತಿಗಳಿಂದ ನಿಮ್ಮ ವ್ಯಾಪಾರವು ಕುಂಠಿತವಾಗುವುದು. ಮೋಸದ ಜಾಲಕ್ಕೆ ಸಿಕ್ಕಬಹುದು, ಸಾಧ್ಯತೆ ಇದೆ. ಸ್ನೇಹ ಹಳೆಯದಾದರೂ ಹೊಂದಾಣಿಕೆಯಲ್ಲಿ ಹೊಸದಾಗಿ ಒರುವುದು. ಆಭರಣ ಖರೀದಿಯಿಂದ ಮುಂದಕ್ಕೆ ಬಳಕೆಯಾಗಬಹುದು. ಉತ್ತಮ‌ ಆಹಾರವನ್ನು ಪಡೆಯಲು ಯತ್ನಿಸಿ.‌ ಪೂಜಾಯೋಗ್ಯರಿಗೆ ಆತಿಥ್ಯವನ್ನು ನೀಡುವಿರಿ. ನಿಮ್ಮ ಬಗ್ಗೆ ಇರುವ ಸುಳ್ಳು ಸುದ್ದಿಯು ಸರಿಉಅಗಬಹುದು.

ಕರ್ಕಾಟಕ ರಾಶಿ :

ಯಾರ ಬಳಿಯೂ ಸಹಾಯ ಹಸ್ತವನ್ನು ಚಾಚದೇ ಸ್ವಂತ ಬಲದ ಮೇಲೆ ಬರುವ ಆಸೆ ಇರಲಿದೆ. ನಿಮ್ಮ ನಿಷ್ಕಾಳಜಿಯಿಂದ ಅನಾಯಾಸವಾಗಿ ಬರುವ ಆದಾಯವು ಸಿಗದೇ ಹೋಗುವುದು. ಸಂಗಾತಿಯಿಂದ ಅವಮಾನವಾಗುವುದು. ಆರ್ಥಿಕಸ್ಥಿತಿಯು ನಿಮಗೆ ಖುಷಿಯನ್ನು ಕೊಟ್ಟರೂ ನೆಮ್ಮದಿ‌ ಮಾತ್ರ ಇರದು. ಸಂಗೀತದ ಕಡೆಗೆ ಒಲವು ಹೆಚ್ಚಾಗಬಹುದು. ವ್ಯಾಪಾರ, ವ್ಯವಹಾರದಲ್ಲಿ ಹೆಚ್ಚಿನ ಜಂಜಾಟವಿರುತ್ತದೆ. ನೀವು ಅಂದುಕೊಂಡಂತೆ ಆಗುತ್ತಿಲ್ಲ ಎಂಬ ಬೇಸರ ಒಂದು ಕಡೆ, ಮನೆಯ ಒತ್ತಡ ಮತ್ತೊಂದು ಕಡೆ. ಕುಟುಂಬದಲ್ಲಿ ಐಕಮತ್ಯದ ಕೊರೆತೆಯು ಕಡಿಮೆ‌ ಆಗಬಹುದು. ವೃತ್ತಿಯಲ್ಲಿ ಬಂದ ಮಾತಿನಿಂದ ನೀವು ಉದ್ವೇಗಗೊಳ್ಳುವ ಅವಶ್ಯಕತೆ ಇರುವುದಿಲ್ಲ. ಕೆಲವರ ವಿಚಾರದಲ್ಲಿ ನಿಮ್ಮ ದೃಷ್ಟಿಯನ್ನು ಬದಲಿಸಿಕೊಳ್ಳುವುದೇ ಯೋಗ್ಯವಾದುದು. ನಿಮ್ಮ ಜೀವನದ ಕುರಿತು ತಂದೆ, ತಾಯಿಯರು ಚಿಂತಿಸುವರು. ನೀವು ಮಾತಿಗೆ ತಪ್ಪಿದವರು ಎಂಬ ಪಟ್ಟಕ್ಕೆ ಸಿಗುವುದು.

ಸಿಂಹ ರಾಶಿ :

ಕರ್ತವ್ಯದಲ್ಲಿ ನಿಷ್ಠೆಯು ಕಡಿಮೆಯಾಗುವುದು. ಅನಿರೀಕ್ಷಿತ ಮಾತುಗಳನ್ನು ಕೇಳಬೇಕಾದ ಸ್ಥಿತಿ‌ಯು ಬರಬಹುದು. ಸಣ್ಣ ಆರೋಗ್ಯದ ತೊಂದರೆಯೂ ನಿಮ್ಮ‌ ಮನಸ್ಸಿಗೆ ಕಿರಿಕಿರಿಯನ್ನು ಉಂಟುಮಾಡುವುದು. ಕಾರ್ಯದಲ್ಲಿ ವೇಗವು ಕುಂಠಿತವಾಗುವುದು. ಸರ್ಕಾರದ ಸೌಲಭ್ಯವು ನಿಮಗೆ ಸಿಗದೇ ಹೋಗಬಹುದು. ನಿಮ್ಮ ತಾಯಿಯಿಂದ ನೀವು ಬೆಂಬಲವನ್ನು ಪಡೆಯುತ್ತೀರಿ. ತಂದೆಯ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ವರ್ಗಾವಣೆಯಿಂದ ನೀವೊಬ್ಬರೇ ಅನ್ಯಸ್ಥಳಕ್ಕೆ ಹೋಗುವಿರಿ. ವ್ಯಾಪಾರಿಗಳಿಗೆ ಇಂದು ಲಾಭವಾಗಲಿದೆ. ಯಶಸ್ಸನ್ನು ಪಡೆಯುವ ಹಂಬಲವಿರಲಿದೆ. ನೀವು ನೋಡಿದ್ದೇ ಸತ್ಯ ಎಂದು ತಿಳಿದುಕೊಳ್ಳುವುದು ಬೇಡ. ಯಾರಿಗೂ ನಿಮ್ಮ ಅವಶ್ಯಕತೆ ಇಲ್ಲದೇ ಹೋಗಬಹುದು. ಸ್ನೇಹಿತರಿಗೆ ಸಾಲವಾಗಿ ಹಣವನ್ನು ಪುನಃ ಬರುವ ನಿರೀಕ್ಷೆ ಇಲ್ಲದೇ ಕೊಡುವಿರಿ. ಸಾಮಾಜಿಕ ತಾಣದಿಂದ ಪ್ರೇಮವು ಉಂಟಾಗಬಹುದು. ಸಹೋದರಿಯು ಹಣಕ್ಕಾಗಿ ನಿಮ್ಮನ್ನು ಕಾಡಬಹುದು. ನಡಿಗೆಯಲ್ಲಿ ವೇಗವನ್ನು ಕಡಿಮೆ ಮಾಡಿಕೊಳ್ಳುವುದು ಉತ್ತಮ.

ಕನ್ಯಾ ರಾಶಿ :

ಶತ್ರುಗಳ ಕಾರಣದಿಂದ ಖರ್ಚುನ್ನು ಮಾಡಬೇಕಾದ ಸ್ಥಿತಿಯು ಬರಲಿದೆ. ಮನಶ್ಶಾಂತಿಗಾಗಿ ಧಾರ್ಮಿಕ ಕಾರ್ಯಗಳನ್ನು ಮಾಡಿಸುವಿರಿ. ಅಕಾಲದಲ್ಲಿ ಸೇವಿಸಿದ ಆಹಾರದಿಂದ ನಿಮಗೆ ಆರೋಗ್ಯವು ಹಾಳಾಗುವುದು. ಮತ್ತೊಬ್ಬರೊಂದಿಗೆ ಮಾತನಾಡುವಾಗ ಮಾತುಗಳ ಮೇಲೆ ಎಚ್ಚರ ಇರಲಿ. ನೀವು ಮಾಡಲಿರುವ ಕೆಲಸವು ಮುಂದೆಹಾಕುವಿರಿ. ವೆಚ್ಚಗಳು ಹೆಚ್ಚಾಗಬಹುದು, ಆದ್ದರಿಂದ ಆದಾಯ ಮತ್ತು ವೆಚ್ಚಗಳ ನಡುವೆ ಸಮತೋಲನ ಕಾಪಾಡಿಕೊಳ್ಳಿ. ಮನೆಯಲ್ಲಿ ನೌಕರರ ಕಾರಣಕ್ಕೆ ಸಿಟ್ಟಾಗುವಿರಿ. ಹೊಸ ಸಂಬಂಧದ ಕಡೆ ನಿಮ್ಮ ಚಿತ್ತವು ಇರಲಿದೆ. ನಿರಂತರ ಕೆಲಸವನ್ನು ಮಾಡುವುದು ಇಷ್ಟವಾಗಲಿದೆ. ಸಂಗಾತಿಯ ಭಾವನೆಗೆ ಬೆಲೆ ಕೊಟ್ಟು ಸಂತೋಷಪಡಿಸುವಿರಿ. ಗೃಹನಿರ್ಮಾಣವು ಕಾರಣಾಂತರಗಳಿಂದ ಮುಂದೆ ಹೋಗುವುದು. ನಿಮಗೆ ಬೇಕಾದ ಅವಕಾಶವು ಸಿಗದೇ ಒದ್ದಾಡುವಿರಿ. ವಿದ್ಯುತ್‌ ಉಪಕರಣದಿಂದ ಅಪಾಯ.

ತುಲಾ ರಾಶಿ :

ಇಂದಿನ ಗೃಹಕೃತ್ಯವು ಅಪೂರ್ಣವಾಗಲಿದೆ. ಸ್ತ್ರೀಯರ ಉಪಸ್ಥಿತಿಯು ನಿಮಗೆ ಬಲವನ್ನು ತಂದುಕೊಡುವುದು. ವಿದೇಶದ ಮಿತ್ರರ ಸಹಾಯದಿಂದ ನೀವು ಉದ್ಯಮವು ವಿಸ್ತಾರವಾಗಬಹುದು. ಅಧಿಕ ಓಡಾಟದಿಂದ ನೀವು ಆಯಾಸಗೊಳ್ಳುವಿರಿ. ಇಂದು ಹಣದ ಹರಿವು ಅಲ್ಪವಾಗಿ ಇರುವುದು. ಆಪ್ತರನ್ನು ಕಳೆದುಕೊಂಡು ಬೇಸರಿಸುವಿರಿ. ಕಲಾವಿದರು ಕಲಾ‌ಪ್ರದರ್ಶನಕ್ಕೆ ದೂರಪ್ರಯಾಣವನ್ನು ಮಾಡುವಿರಿ. ನಿದ್ರೆಯು ಕಡಿಮೆಯಾದ ಕಾರಣ ಕಾರ್ಯದಲ್ಲಿ ಉತ್ಸಾಹ ಕಡಿಮೆ ಇರಲಿದೆ‌. ನಿಮ್ಮ ಬೋಧನೆಗೆ ಅಡ್ಡಿಯಾಗಿದ್ದು ಸಿಟ್ಟು ಬರುವುದು. ಪ್ರೇಮಿಯ ಜೊತೆ ಹರಟೆ ಹೊಡೆಯುತ್ತ ದಿನವನ್ನು ಕಳೆಯುವಿರಿ. ಸ್ತ್ರೀಸಂಬಂಧದ ವಿಷಯದಲ್ಲಿ ಆರೋಪವು ಕೇಳಿಬರಬಹುದು. ನೇರವಾಗಿ ಹೇಳುವ ಸ್ವಭಾವವು ಎಲ್ಲ ಸನ್ನಿವೇಶದಲ್ಲಿಯೂ ಸಾಧುವಾಗದು.

ವೃಶ್ಚಿಕ ರಾಶಿ :

ಭೂಮಿಯನ್ನು ಖರೀದಿಸಲು ನೋಡಿಕೊಳ್ಳುವಿರಿ. ತಂದೆಗೆ ಬೇಕಾದ ಧನಸಹಾಯವನ್ನು ನೀವು ಮಾಡುವಿರಿ. ಬಂದ ಹಣವನ್ನು ಸಂಗ್ರಹಿಸಲು ಪ್ರಯತ್ನಿಸಿ. ಇಲ್ಲವಾದರೆ ಸಂಪತ್ತನ್ನು ಉಳಿಸಿಕೊಳ್ಳುವುದು ಕಷ್ಟವಾದೀತು. ವ್ಯಾಪಾರಕ್ಕಾಗಿ ನೀವು ನಿಮ್ಮ ತಂದೆಯಿಂದ ಹಣವನ್ನು ಪಡೆಯಬಹುದು. ಆದಾಯದ ಮೂಲ ಹೆಚ್ಚಾಗಲಿದೆ. ತಂದೆ ಮತ್ತು ಮಕ್ಕಳ ನಡುವೆ ಪ್ರೀತಿ ಇರುತ್ತದೆ. ಅನ್ಯರಿಂದ ಬರುವ ತೊಂದರೆಗೆ ನೀವೇ ಅನುಭವಿಸುವಿರಿ. ಅಸಾಧ್ಯವನ್ನು ಸಾಧಿಸುವ ಹಠವು ಬೇಡವಾದೀತು. ಉದ್ಯಮದಲ್ಲಿ ಹಿನ್ನಡೆಯಾಗುವುದು ನಿಮಗೆ ಮೊದಲೇ ಗೊತ್ತಿದ್ದೂ ಪ್ರಯತ್ನಿಸುವಿರಿ. ಸಂಸ್ಥೆಯ ಮುಖಗಯಸ್ಥರಾಗಲು ಆಹ್ವಾನವು ಬರಬಹುದು. ಅನಪೇಕ್ಷಿಯ ವಿಚಾರವನ್ನು ಪ್ರಸ್ತಾಪಿಸಿಕೊಂಡು ಕಾಲಹರಣ ಮಾಡುವಿರಿ. ತಾಯಿಯ ವಿಚಾರದಲ್ಲಿ ನೀವು ಇಂದು ಕೋಪಗೊಳ್ಳುವ ಸಾಧ್ಯತೆ ಇದೆ. ಉದ್ಯಮಿಗಳಿಗೆ ಉದ್ಯಮವನ್ನು ವಿಸ್ತರಿಸುವ ಚಿಂತನೆಯಲ್ಲಿ ಇರುವಿರಿ.

ಧನು ರಾಶಿ :

ನಿಮ್ಮ ವೃತ್ತಿಯ ನಿರ್ಧಾರವು ಅನ್ಯರನ್ನು ಆಶ್ರಯಿಸಿದೆ. ನಿಮ್ಮನ್ನು ದುರುಪಯೋಗ ಮಾಡಿಕೊಳ್ಳುವ ಸಂಭವಿದೆ.‌ ನೀವು ಆಯ್ಕೆ ಆಗಿದ್ದು ಯಾವುದಕ್ಕೋ ಕೆಲಸವು ಮತ್ಯಾವುದೋ ಆಗಲಿದೆ. ಅನಾರೋಗ್ಯವು ಚಿಕಿತ್ಸೆಯಾಗಿ ಪರಿಣಮಿಸಬಹುದು. ಉತ್ತಮ ಭೂಮಿಯ ಲಾಭವನ್ನು ಪಡೆಯುವಿರಿ. ಅಪಾಯಯಕ್ಕೆ ಸಿಕ್ಕಿಕೊಳ್ಳುವ ಸಂಭವವಿತ್ತು. ಧನವ್ಯಯವನ್ನು ನಿಮ್ಮ ಜಾಣ್ಮೆಯಿಂದ ತಪ್ಪಿಸಿಕೊಳ್ಳುವಿರಿ‌. ವೃತ್ತಿಪರವಾಗಿ ಉತ್ತಮ ಫಲಿತಾಂಶಗಳನ್ನು ಪಡೆಯುತ್ತಾರೆ. ಆದಾಯ ಸಾಲವೆಂದು ನಿಮ್ಮ ಮನಸ್ಸಿಗೇ ಬರಲಿದೆ. ಸಂಗಾತಿಯ ಜೊತೆ ಸಂಬಂಧವು ಸುಧಾರಿಸುತ್ತದೆ. ವ್ಯಾಪಾರ ವಿಸ್ತರಿಸಬಹುದು. ಅಪರಿಚಿತರಿಗೆ ಇಂದು ಅಲ್ಪ ಧನಸಹಾಯವನ್ನು ಮಾಡಬೇಕಾಗುವುದು. ಕೋಪದ ನಿಯಂತ್ರಣವು ಕಷ್ಟವಾದೀತು. ಸಂಸಾರದಲ್ಲಿ ನಿರಾಸಕ್ತಿಯು ಹೆಚ್ಚಾಗುವುದು. ಸಂಗಾತಿಯ ಜೊತೆ ನಿಮಗೆ ಸಮಯ ಕಳೆಯಲೂ ಕಷ್ಟವಾದೀತು. ಇಷ್ಟದವರನ್ನು ನೀವು ಭೇಟಿಯಾಗುವಿರಿ. ತಪ್ಪಿಗೆ ಯಾರಾದರೂ ಕ್ಷಮೆಯನ್ನು ಕೇಳಬಹುದು. ನಿರಾಕರಿಸುವುದು ಬೇಡ.

ಮಕರ ರಾಶಿ :

ಉನ್ನತ ಸ್ಥಾನಕ್ಕಾಗಿ ಸ್ಪರ್ಧೆ ಏರ್ಪಡಲಿದ್ದು, ಸಣ್ಣ ಅಂತರದಲ್ಲಿ ಹೋಗಲಿದೆ. ಪಾಲುದಾರಿಕೆಯಲ್ಲಿ ನಿಮ್ಮ ಪಾಲೇ ಅಧಿಕವಾಗಿರುವುದು. ಶತ್ರುವಿನ ಮೇಲೆ ಸೇಡು ತೀರಿಸಿಕೊಳ್ಳಲು ಅಧಿಕ ಖರ್ಚನ್ನು ಮಾಡಬೇಕಾದೀತು. ಉದ್ಯಮಿಗಳಿಗೆ ನೌಕರರ ಕಲಹವನ್ನು ಸರಿ ಮಾಡುವುದೇ ಹೆಚ್ಚಾಗುವುದು. ಸ್ನೇಹಿತರ ಸಹಕಾರದಿಂದ ಸ್ಥಿರಾಸ್ತಿಯನ್ನು ಖರೀದಿಸುವಿರಿ. ನಿಮ್ಮ ಹಾಗೂ ಪ್ರೇಮಿಯ ಮನಃಸ್ಥಿತಿಯಲ್ಲಿ ಏರಿಳಿತಗಳು ಇರಬಹುದು. ಪರಿಣತಿ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡು ಮುನ್ನಡೆಯುವಿರಿ. ಪೂರ್ಣ ವಿಶ್ವಾಸ ಇರುತ್ತದೆ. ಕುಟುಂಬದ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ಉದ್ಯಮಕ್ಕೆ ಬೇಕಾದ ವಿವರಗಳನ್ನು ಅನುಭವಿಗಳಿಂದ ಪಡೆಯಿರಿ. ಸ್ನೇಹಿತನ ವಿವಾಹ ಸಮಾರಂಭದಲ್ಲಿ ಪಾಲ್ಗೊಳ್ಳುವಿರಿ. ಪ್ರಭಾವೀ ವ್ಯಕ್ತಿಗಳ ಭೇಟಿಯು ನಿಮ್ಮ ಜೀವನೋತ್ಸಾಹವನ್ನು ಹೆಚ್ಚಿಸುವುದು. ಮಾತನಾಡುವ ವೇಗದಲ್ಲಿ ಏನನ್ನಾದರೂ ಹೇಳಿಬಿಡುವಿರಿ. ನಿಮಗೆ ಇಂದು ಜಯದ ಸಂಭ್ರಮವು ಸಿಹಲಿದೆ. ಕಾರ್ಯದಲ್ಲಿ ಏಕಾಗ್ರತೆ ಇರಲಿದೆ.‌

ಕುಂಭ ರಾಶಿ :

ಹಿರಿಯರ ಅನುಗ್ರಹಕ್ಕೆ ಹೆಚ್ಚು ಭಾಜನರಾಗುವುದು ಉತ್ತಮ. ನಿಮ್ಮ‌ ಸಮ್ಮುಖದಲ್ಲಿ ಕುಟುಂಬದ ಸಮಸ್ಯೆಗಳು ಬಗೆಹರಿಯಬಹುದು. ಬಹಳ ದಿನಗಳ ಅನಂತರ ಸಾರ್ವಜನಿಕ ಕಾರ್ಯಗಳಲ್ಲಿ ತೊಡಗಿಕೊಳ್ಳುವಿರಿ. ಇದು ಉತ್ಸಾಹವನ್ನೂ ಕೊಡುವುದು. ನಿಮ್ಮ ನಿರುದ್ಯೋಗದ ಸ್ಥಿತಿಯು ದಾಯಾದಿಗಳಿಗೆ ಸಂತಸವಗುವುದು. ಅಧಿಕಾರಿಗಳ ಬೆಂಬಲದಿಂದ ನೀವು ಖುಷಿಯಾಗಿರಲಿದ್ದೀರಿ. ಉದ್ಯೋಗದಲ್ಲಿ ಪ್ರಗತಿಯ ಹಾದಿ ಸುಗಮವಾಗಿರುತ್ತದೆ. ಸಕಾರಾತ್ಮಕ ಆಲೋಚನೆಗಳನ್ನು ನೀವು ಆಪ್ತರ ಜೊತೆ ಹಂಚಿಕೊಳ್ಳುವಿರಿ. ನಿಮ್ಮ ಯೋಜನೆಗೆ ಬೆನ್ನೆಲುಬಾಗಿ ನಿಲ್ಲುವವರು ಬೇಕಾಗಿದ್ದರೆ. ತಾಂತ್ರಿಕ ಶಿಕ್ಷಣವನ್ನು ಹಿನ್ನಡೆಯಾಗುವುದು. ಅಧಿಕ ಖರ್ಚನ್ನು ಇಂದು ಮಾಡಬೇಕಾಗುವುದು. ನಿಮ್ಮ ದುರಭ್ಯಾಸವನ್ನು ಇನ್ನೊಬ್ಬರಿಗೂ ಹಿಡಿಸುವ ಸಾಧ್ಯತೆ ಇದೆ. ಭವಿಷ್ಯದ ಆಗುಹೋಗುಗಳ ಬಗ್ಗೆ ಅತಿಯಾದ ಚಿಂತೆ ಇರಲಿದೆ. ಸಿಕ್ಕಿದ್ದನ್ನು ರಕ್ಷಣೆ ಮಾಡಿಕೊಳ್ಳುವ ಜವಾಬ್ದಾರಿಯು ನಿಮ್ಮದಾಗಿದೆ.

ಮೀನ ರಾಶಿ :

ಹೊಸ ಅನುಭವಗಳು ನಿಮ್ಮನ್ನು ಗಟ್ಟಿಯಾಗಿಸುವುವು.‌ ಸಾಲದ ಮರುಪಾವತಿಗೆ ಸೂಕ್ತ ಕ್ರಮದ ಅಗತ್ಯವಿರಲಿದೆ. ಆಲಸ್ಯದಿಂದ ಕಛೇರಿಯ ಕೆಲಸಗಳು ವಿಳಂಬವಾಗುವುದು. ನಿಮ್ಮ ಬಗ್ಗೆ ಪ್ರಶಂಸೆಯ ನುಡಿಗಳು ಕೇಳಿಬರಬಹುದು. ವಿದ್ಯಾರ್ಥಿಗಳಿಗೆ ಓದಲು ಸಮಯವನ್ನು ಇಂದು ಹೊಂದಿಕೆಯಾಗದು. ತಾಯಿಯ ಆರೋಗ್ಯದ ಬಗ್ಗೆ ಕಾಳಜಿ ವಹಿಸದೇ, ನೀವು ಕೆಲಸದಲ್ಲಿ ನಿರತರಾಗಿರಬಹುದು. ಅದು ನಿಮ್ಮ ಜೀವನಶೈಲಿ ಮೇಲೆ ಪರಿಣಾಮ ಬೀರಬಹುದು. ಪೂರಕ ವಾತಾವರಣದಲ್ಲಿ ಕೊರತೆ ಇರುವುದು. ಹೂಡಿಕೆಯ ವಿಚಾರದಲ್ಲಿ ಇಂದು ಸಕಾರಾತ್ಮಕ ಆಲೋಚನೆಯು ಇರದು. ಉದ್ವೇಗದಲ್ಲಿ ಇದ್ದರೂ ಸಮಾಧಾನಿಗಳಂತೆ ತೋರುವಿರಿ.‌ ಪುಣ್ಯದ ಫಲವು ಇಂದು ಸಿಗುವುದು. ಹೊಸ ಕಾರ್ಯಕ್ಕೆ ಅಲ್ಪ ಜಯದಿಂದ ಉತ್ಸಾಹ ಬರುವುದು. ಸಹೋದ್ಯೋಗಿಗಳ ವರ್ತನೆಯು ನಿಮಗೆ ಆಚ್ಚರಿಗೊಳ್ಳುವಿರಿ. ಕೆಲಸವನ್ನು ಬಿಡಬೇಕಾದ ಸಂದರ್ಭ ಬಂದರೂ ಹೇಗೋ ಉಳಿಸಿಕೊಳ್ಳುವಿರಿ. ಮನೋಬಲವು ಯಾರಿಂದಲಾದರೂ ಕುಗ್ಗಬಹುದು.

ಲೋಹಿತ ಶರ್ಮಾ – 8762924271 (what’s app only)

ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ
ನಿದ್ದೆಗಣ್ಣಿನಲ್ಲಿ 10ನೇ ಮಹಡಿಯಿಂದ ಕೆಳಗೆ ಬಿದ್ದ ವ್ಯಕ್ತಿ
ನಿದ್ದೆಗಣ್ಣಿನಲ್ಲಿ 10ನೇ ಮಹಡಿಯಿಂದ ಕೆಳಗೆ ಬಿದ್ದ ವ್ಯಕ್ತಿ
ತೋರು ಬೆರಳಿನ ಆಕಾರದಿಂದ ಮನುಷ್ಯನ ವ್ಯಕ್ತಿತ್ವ ಗೊತ್ತಾಗುತ್ತಾ?
ತೋರು ಬೆರಳಿನ ಆಕಾರದಿಂದ ಮನುಷ್ಯನ ವ್ಯಕ್ತಿತ್ವ ಗೊತ್ತಾಗುತ್ತಾ?
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು