Horoscope Today 17 September : ಇಂದು ಈ ರಾಶಿಯವರ ಚಿಂತೆ ಊಹಾತೀತವಾಗಿರಲಿದೆ
ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ವರ್ಷ ಋತುವಿನ ಭಾದ್ರಪದ ಮಾಸ ಕೃಷ್ಣ ಪಕ್ಷದ ದಶಮೀ ತಿಥಿ ಬುಧವಾರ ಬಲ ಪ್ರದರ್ಶನ, ಪ್ರೇಯಸಿಯ ಭೇಟಿ, ಉದ್ಯೋಗದಲ್ಲಿ ಸ್ಥಿರತೆ, ಸ್ಥಾನ ಬದಲಾವಣೆ, ಅಧಿಕ ಚಿಂತೆ, ದ್ವೇಷಸಾಧನೆ, ಹಣ ವಾಪಾಸು, ಹಿರಿಯರ ಸೇವೆ ಇವೆಲ್ಲ ಇಂದಿನ ವಿಶೇಷ.

ನಿತ್ಯ ಪಂಚಾಂಗ: ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ದಕ್ಷಿಣಾಯನ, ಋತು : ವರ್ಷ, ಚಾಂದ್ರ ಮಾಸ : ಭಾದ್ರಪದ, ಸೌರ ಮಾಸ : ಸಿಂಹ, ಮಹಾನಕ್ಷತ್ರ : ಉತ್ತರಾಫಲ್ಗುಣೀ, ವಾರ : ಬುಧ, ಪಕ್ಷ : ಕೃಷ್ಣ, ತಿಥಿ : ದಶಮೀ, ನಿತ್ಯನಕ್ಷತ್ರ : ಪುಷ್ಯ, ಯೋಗ : ಹರ್ಷಣ, ಕರಣ : ತೈತಿಲ, ಸೂರ್ಯೋದಯ – 06 – 09 am, ಸೂರ್ಯಾಸ್ತ – 06 – 18 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 12:14 – 13:45, ಗುಳಿಕ ಕಾಲ 10:43 – 12:14, ಯಮಗಂಡ ಕಾಲ 07:41 – 09:12
ಮೇಷ ರಾಶಿ :
ಹಲವು ದೃಷ್ಟಿಕೋನದಿಂದ ನೋಡಿದಾಗ ವ್ಯಕ್ತಿಯ ಪೂರ್ಣಭಾಗ ಗೊತ್ತಾಗುವುದು. ಅತಿಯಾದ ವಿಶ್ವಾಸವೇ ನಿಮಗೆ ತೊಂದರೆ ಕೊಡಬಹುದು. ನಿಮ್ಮ ಸಹೋದ್ಯೋಗಿಗಳು ನಿಮಗೆ ಅನಿವಾರ್ಯವಾಗಿ ಬಂದ ಸಂಕಟಕ್ಕೆ ಧನಸಹಾಯ ಮಾಡುವರು. ಕಾನೂನಿಗೆ ವಿರುದ್ಧವಾಗಿ ಯಾವುದಾದರೂ ಕಾರ್ಯವನ್ನು ಮಾಡುವ ಆಲೋಚನೆ ಇದ್ದರೆ, ಅಂತಹ ಸಾಹಸದಲ್ಲಿ ತೊಡಗಿಕೊಳ್ಳುವುದು ಬೇಡ. ಉಪಾಯದಿಂದ ಮಾಡುವ ಕೆಲಸಕ್ಕೆ ಶಕ್ತಿಯ ಅವಶ್ಯಕತೆ ಇರದು. ನಿಮಗೆ ಪ್ರಭಾವಿಗಳಿಂದ ಉತ್ತಮ ಬಿರುದುಗಳು ಬರಬಹುದು. ಮಕ್ಕಳಿಂದ ಕೆಲಸಕ್ಕೆ ಅಡ್ಡಿಯಾಗಲಿದೆ. ಬಂಧುಗಳ ಜೊತೆ ಇಂದು ವಿನಾಕಾರಣ ವಿವಾದವನ್ನು ಮಾಡಿ ಬೇಸರ ತರಿಸುವಿರಿ. ವಿದ್ಯಾರ್ಥಿಗಳಿಗೆ ಪರೀಕ್ಷೆಯ ಫಲಿತಾಂಶವು ಸಂತೋಷವನ್ನು ತರುವುದು. ಅಪರಿಚಿತರನ್ನು ನಂಬಿ ಹಣವನ್ನು ಕಳೆದುಕೊಳ್ಳುವಿರಿ. ಯಾರಾದರೂ ನಿಮ್ಮವರು ಅಪಾಯಕ್ಕೆ ಸಿಲುಕಿದ ಸೂಚನೆ ತಾನಾಗಿಯೇ ಗೊತ್ತಾಗುವುದು. ನಿಮ್ಮ ವೈವಾಹಿಕ ಜೀವನದ ಕೆಲವು ಹಳೆಯ ನೆನಪುಗಳು ಖುಷಿಯನ್ನು ಕೊಡುವುದು. ನಿಮ್ಮ ವಸ್ತುವನ್ನು ಇನ್ನೊಬ್ಬರಿಗೆ ಕೊಡಲು ಇಚ್ಛಿಸುವಿರಿ.
ವೃಷಭ ರಾಶಿ :
ಇಂದು ನಿಮ್ಮ ಜೀವನದ ಅವಲೋಕನವನ್ನು ಮನೆಯವರು ಮಾಡಿಕೊಡುವರು. ಸಂಗಾತಿಯ ಜೊತೆಗಿನ ವೈಮನಸ್ಯವನ್ನು ಹೇಗಾದರೂ ಮಾಡಿ ದೂರ ಮಾಡಿಕೊಳ್ಳಬೇಕು. ಇಂದು ನೀವು ವಹಿಸಿಕೊಂಡ ಕೆಲಸವನ್ನು ಸಮಯಕ್ಕೆ ಸರಿಯಾಗಿ ಮಾಡಲು ಸಾಧ್ಯವಾಗುವುದು. ಕೋಪದಲ್ಲಿ ಏನನ್ನಾದರೂ ಹೇಳಿ ಮನಸ್ಸನ್ನು ವಿಕಾರಗೊಳಿಸಿಕೊಳ್ಳುವಿರಿ. ನಿಮಗೆ ಬೇಕಾದಾಗ ಬೇಕಾದವರು ಸಿಗದೇಹೋಗಬಹುದು. ಸಂಗಾತಿಯ ಮಾರ್ಗದರ್ಶನದಲ್ಲಿ ನೀವು ಕೆಲವು ಬದಲಾವಣೆಯನ್ನು ಮಾಡಿಕೊಳ್ಳುವಿರಿ. ನಿಮಗೆ ಗೊತ್ತಾಗದಂತೆ ನೀವು ಪ್ರಸಿದ್ಧಿಯನ್ನು ಪಡೆಯುವಿರಿ. ಧಾರ್ಮಿಕ ಅಲ್ಪ ಆಸಕ್ತಿಯು ಇರಲಿದೆ. ಇಂದಿನ ಘಟನೆಯು ನಿಸ್ಪೃಹತೆಯನ್ನು ಹೆಚ್ಚಿಸುವುದು. ಅಭಾವವೈರಾಗ್ಯವು ನಿಮ್ಮಲ್ಲಿ ಉಂಟಾಗಬಹುದು. ಇಂದಿನ ನಿಮ್ಮ ಕೆಲಸವನ್ನು ಹಂಚಿಕೊಂಡು ಮಾಡಿ. ಇದು ಕಾರ್ಯಕ್ಕೆ ವೇಗವನ್ನು ತಂದುಕೊಡುವುದು. ಯಾರನ್ನೂ ಅವಲಂಬಿಸದೇ ಸ್ವಂತ ಶ್ರಮದಿಂದ ನೀವು ಆಗುವಷ್ಟು ಕೆಲಸವನ್ನು ಮಾಡಿ. ನಿಮ್ಮ ಸಕಾರಾತ್ಮಕ ನಿಲುವು ಹಲವರಿಗೆ ಇಷ್ಟವಾಗುವುದು.
ಮಿಥುನ ರಾಶಿ :
ಅಪರಿಚಿತರಿಂದ ಕೆಲಸಕ್ಕೆ ಆಹ್ವಾನ ಬರಲಿದ್ದು, ಪೂರ್ಣ ವಿವರವನ್ನು ಕಲೆಹಾಕಿ ಮುನ್ನಡೆಯಿರಿ. ನೀವಾಗಿಯೇ ಸೃಷ್ಟಿಸಿಕೊಂಡಿದ್ದನ್ನು ಬಿಡುವುದು ಒಳ್ಳೆಯದು. ನಿಮ್ಮ ಜೀವನದಲ್ಲಿ ತಪ್ಪು ತಿಳುವಳಿಕೆಗಳೇ ಹೆಚ್ಚು ತೋರುವುದು. ಉದ್ಯಮಿಗಳಿಗೆ ರಪ್ತು ವ್ಯವಹಾರವು ಬಹಳ ಕಷ್ಟವೆನಿಸಲಿದೆ. ಪಾಲುದಾರಿಕೆಯನ್ನು ಕೈಬಿಡುವುದು ಒಳ್ಳೆಯದು. ನಿಮ್ಮವರನ್ನು ನೀವು ಬಿಟ್ಟುಕೊಡಲಾರಿರಿ. ಸಲ್ಲದ ಮಾತುಗಳ ಮೇಲೆ ನಿಯಂತ್ರಣದ ಅವಶ್ಯಕತೆ ಇರಲಿದೆ. ಭೋಗ್ಯಕ್ಕೆ ಮನೆಯನ್ನು ಪಡೆಯುವಿರಿ. ನೇರ ಮಾತು ಎಲ್ಲರಿಗೂ ಹಿಡಿಸದು. ಮಕ್ಕಳ ವಿಚಾರದಲ್ಲಿ ಕಾಳಜಿಯ ಅವಶ್ಯಕತೆ ಇರಲಿದೆ. ನಿಮ್ಮ ಹಳೆಯ ವಸ್ತುಗಳನ್ನು ಯಾರಿಗಾದರೂ ಕೊಡುವಿರಿ. ಅಸ್ಥಿರವಾದ ಮನಃಸ್ಥಿತಿಯು ಕಾರ್ಯವನ್ನು ಹಾಳುಮಾಡುವುದು. ಪ್ರಯಾಣ ಮಾಡುವ ಅನಿವಾರ್ಯತೆ ಸೃಷ್ಟಿಯಾಗಬಹುದು. ಎಷ್ಟು ಸಮಯವಾದರೂ ನಿಮ್ಮ ಆಸೆ ನೆರವೇರುತ್ತಿಲ್ಲ ಎಂಬ ಆತಂಕವೂ ಇರಲಿದೆ. ಯಾವ ವಸ್ತುವನ್ನು ಖರೀದಿಸುವ ಯೋಚನೆಯನ್ನು ಮಾಡಬೇಡಿ.
ಕರ್ಕಾಟಕ ರಾಶಿ :
ಯಾವುದೋ ಕಾರಣಕ್ಕೆ ಆರಂಭವಾದ ಕಾಮಗಾರಿ ದಿಕ್ಕುತಪ್ಪುವುದು. ಅಪ್ರಬುದ್ಧ ಆಲೋಚನೆಗಳಿಂದ ನಿಮ್ಮ ವ್ಯಕ್ತಿತ್ವ ಗೊತ್ತಾಗುವುದು. ಅವಕಾಶಗಳು ಸಣ್ಣ ಅಂತರದಲ್ಲಿ ಕೈ ತಪ್ಪಿ ಹೋಗುವುದು. ನೀವೇ ಹಾಕಿಕೊಂಡ ಯೋಜನೆಯಲ್ಲಿ ತಪ್ಪುಗಳು ಕಾಣಲಿದ್ದು, ಅದನ್ನು ಬದಲಾಯಿಸಲೂ ಆಗದ ಸ್ಥಿತಿಯು ಬರಲಿದೆ. ಇಂದಿನ ನಿಮ್ಮ ಉತ್ಸಾಹವು ಬಹಳ ಸಂತೋಷದಿಂದ ಭಾಗವಿಸುವಂತೆ ಮಾಡುವುದು. ಹೊಸ ವೃತ್ತಿಯನ್ನು ಹುಡುಕುತ್ತಿದ್ದರೆ ಉತ್ತಮ ವೃತ್ತಿಯು ಸಿಗಬಹುದು. ಗೊತ್ತಿಲ್ಲದೇ ಅಧಿಕಾರಿಗಳ ಜೊತೆ ಅಸಭ್ಯ ವರ್ತನೆ ಮಾಡಿ ಮುಜುಗರಪಡುವಿರಿ. ನಿಮ್ಮ ಬಗ್ಗೆ ನಕಾರಾತ್ಮಕ ಸುದ್ದಿಗಳು ವಿಳಂಬವಾಗಿ ಗೊತ್ತಾಗುವುದಿ. ಸ್ವಂತ ವ್ಯವಹಾರವನ್ನು ಲಾಭದಾಯಕವಾಗಿ ಪರಿವರ್ತಿಸುವಿರಿ. ಕಛೇರಿಯ ವಾತಾವರಣವು ನಿಮಗೆ ಮುಜುಗರವನ್ನು ತಂದೀತು. ಧನ ಸಂಪಾದನೆಯಲ್ಲಿ ಹೆಚ್ಚು ಆಸಕ್ತಿಯನ್ನು ತೋರಿಸುವಿರಿ. ಮನೆಯ ಬಗ್ಗೆ ಪ್ರೀತಿ ಹೆಚ್ಚಾಗಬಹುದು. ಧಾರ್ಮಿಕ ಕಾರ್ಯದಲ್ಲಿ ಶ್ರದ್ಧೆಯನ್ನು ಬಲದಿಂದ ತಂದುಕೊಳ್ಳಬೇಕು.
ಸಿಂಹ ರಾಶಿ :
ನಿಮ್ಮನ್ನು ವಸ್ತುವಿಗೆ ಹೋಲಿಸಿದ್ದು ಬಹಳ ಬೇಸರ ತರಿಸಬಹುದು. ಇಂದು ಯಾರ ಪ್ರಶಂಸೆಯನ್ನೂ ಪೂರ್ಣವಾಗಿ ಒಪ್ಪಿಕೊಳ್ಳಲಾರಿರಿ. ಇಂದು ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುವ ವಿದ್ಯಾರ್ಥಿಗಳ ಶ್ರಮ ಸಫಲವಾಗದು. ನೀವು ಇಂದು ಕಾರ್ಯದಲ್ಲಿ ಅನಿರೀಕ್ಷಿತ ಜಯವನ್ನು ಗಳಿಸುವಿರಿ. ಭೂಮಿಯ ದಾಖಲೆಗಳನ್ನು ಸರಿಯಾಗಿ ಪಡೆದುಕೊಂಡು ವ್ಯವಹಾರವನ್ನು ಮುಂದುವಿರಿಸಿ. ವಾಹನ ಚಾಲನೆಗೆ ಪರಿಮಿತಿ ಇಲ್ಲದೇ ಓಡಾಡಿಸಿ, ತೊಂದರೆ ಕೊಡುವಿರಿ. ಸುಳ್ಳಿನ ಮಾತಿನಿಂದ ನಿಮಗೆ ಅತಿಯಾದ ಕೋಪಬರುವುದು. ನಿಮ್ಮ ನಡವಳಿಕೆಯು ಕೆಲವರಿಗೆ ಇಷ್ಟವಾಗದೇ ಇರುವುದು. ಮಕ್ಕಳು ನಿಮ್ಮ ಮಾತನ್ನೇ ನಿಮಗೆ ಹೇಳುವರು. ನಿಂತಲ್ಲೇ ನಿಲ್ಲುವುದಕ್ಕಿಂತ ನಿಧಾನವಾಗಿಯಾದರೂ ಚಲಿಸುವುದು ಮುಖ್ಯ. ನಿಮ್ಮವರ ಕೆಲವು ಸ್ವಭಾವವು ನಿಮಗೆ ಮೆಚ್ಚುಗೆಯಾಗದು. ನಿಮಗೆ ಸಿಕ್ಕ ಅನಾದರದಿಂದ ಬೇಸರವಾಗಬಹುದು. ಮಕ್ಕಳ ಉದ್ಯಮಕ್ಕೆ ನೀವು ಸಹಾಯ ಮಾಡುವಿರಿ. ದ್ವೇಷದಿಂದ ನಿಮ್ಮ ಜೀವನವು ಮಾರ್ಗಭ್ರಷ್ಟವೂ ಆಗಬಹುದು.
ಕನ್ಯಾ ರಾಶಿ :
ಎಲ್ಲೋ ಇಟ್ಟ ವಸ್ತುವನ್ನು ಮರೆಯುವಿರಿ. ಇಂದು ಯಾರ ವಿಶ್ವಾಸವನ್ನೂ ವಿಶೇಷವಾಗಿ ಗಳಿಸಲು ಇಷ್ಟವಾಗದು. ಇಂದು ಅಪರಿಚಿತರು ಮಾರಾಟದ ವಿಚಾರದಲ್ಲಿ ಮೋಸ ಮಾಡುವರು. ಬಂಧುಗಳು ನಿಮ್ಮ ಸಹಾಯವನ್ನು ಬಯಸುವರು. ಆಸ್ತಿಯ ವಿಚಾರವಾಗಿ ನೀವು ಕಾನೂನು ಹೋರಾಟವನ್ನು ಮಾಡಲಿದ್ದೀರಿ. ತಾಯಿಯ ಪ್ರೀತಿ ಕಡಿಮೆಯಾದ ಅನುಭವ ನಿಜವಾದ ಮಕ್ಕಳಿಗೆ ಗೊತ್ತಾಗುವುದು. ಕಲಾವಿದರು ತಮ್ಮ ಸಾಮರ್ಥ್ಯವನ್ನು ಪ್ರದರ್ಶಿಸಲಿದ್ದಾರೆ. ನಿಮ್ಮ ಮಾತುಗಳು ತಪ್ಪಾಗಿ ಪ್ರಸಾರವಾಗಬಹುದು. ವಿವಾದವಾಗುವ ಹೇಳಿಕೆಯನ್ನು ನೀಡಬೇಡಿ. ನಿತ್ಯ ಬಳಕೆಯ ವಸ್ತುವಿನ ವ್ಯಾಪಾರದಿಂದ ಲಾಭವಾದೀತು. ಸಂಗಾತಿಯ ಬಯಕೆಯನ್ನು ಈಡೇರಿಸಿ ಸಂತೋಷಪಡಿಸುವಿರಿ. ನಿಮ್ಮ ಬೆಳವಣಿಗೆಯನ್ನು ಬಂಧುಗಳು ಕಂಡು ಇಷ್ಟಪಡುವರು. ಎಲ್ಲದಕ್ಕೂ ಇನ್ನೊಬ್ಬರ ಮೇಲೆ ಗೂಬೆ ಕೂರಿಸುತ್ತ ಯಾವ ಕಾರ್ಯವನ್ನೂ ಸಫಲ ಮಾಡಲಾಗದು. ನಿಮ್ಮ ಕೆಲಸದ ಬಗ್ಗೆ ಕಚೇರಿಯಲ್ಲಿ ಉನ್ನತ ಅಧಿಕಾರಿಗಳ ಸಹಕಾರ ಲಭ್ಯ.
ತುಲಾ ರಾಶಿ :
ವಾಸಸ್ಥಾನದಿಂದ ಮಾತ್ರವಲ್ಲ, ಎಲ್ಲರ ಬಾಂಧವ್ಯದಿಂದಲೂ ದೂರಾಗುವಿರಿ. ಸರ್ಕಾರಿ ಉದ್ಯೋಗಿಗಳು ಸವಲತ್ತುಗಳನ್ನು ಕೇಳಿ ಪಡೆಯುವರು. ಸಾಂಸಾರಿಕ ಬದುಕಿನಲ್ಲಿ ಇಂದು ಸಣ್ಣಪುಟ್ಟ ಕಲಹಗಳಿದ್ದರೂ ತೂಗಿಸಿಕೊಂಡು ಹೋಗುವ ಸಾಮರ್ಥ್ಯ ಇರುವುದು. ದಾಯಾದಿ ಕಲಹವು ತಾರಕಕ್ಕೆ ಹೋಗಲಿದೆ. ನಿಮಗೆ ಬೆಂಬಲವು ಕಡಿಮೆ ಆಗಲಿದೆ. ಕಛೇರಿಯಲ್ಲಿ ನಿಮ್ಮ ಕೆಲಸವು ಮಂದಗತಿಯಲ್ಲಿ ಸಾಗಲಿದ್ದು ಸಹೋದ್ಯೋಗಿಗಳಿಂದ ದೂರು ಸಿಗಬಹುದು. ಯಾವ ವಿಚಾರದಲ್ಲಿಯೂ ನಿರೀಕ್ಷಿತ ಗುರಿ ತಲುಪಲಾಗದು. ಧಾರ್ಮಿಕ ಆಚರಣೆಗಳಲ್ಲಿ ನಿರಾಸಕ್ತಿ ಇರಲಿದೆ. ಎಂದೋ ಮಾಡಿದ ಸಾಮಾಜಿಕ ಕೆಲಸಗಳಿಂದ ಗೌರವ ಸಿಗುವ ಸಂಭವವಿದೆ. ಅಜಾಗರೂಕತೆಯಿಂದ ಮಕ್ಕಳನ್ನು ಕಳೆದುಕೊಳ್ಳಬೇಕಾಗಬಹುದು. ಹಠದ ಸ್ವಭಾವವನ್ನು ಬಿಟ್ಟರೆ ಸಂತೋಷದ ಸಂಗತಿಗಳನ್ನು ನೀವು ಪಡೆಯುವಿರಿ. ನಿಮ್ಮ ಪ್ರಯತ್ನವು ಫಲಿಸುವ ತನಕ ಸಹನೆ ಅತ್ಯವಶ್ಯಕ. ಪುಣ್ಯಕ್ಷೇತ್ರಕ್ಕೆ ಕುಟುಂಬ ಜೊತೆ ಹೋಗಲಿದ್ದೀರಿ. ನಡೆದಾಡುವಾಗ ಜಾಗರೂಕತೆ ಇರಲಿ.
ವೃಶ್ಚಿಕ ರಾಶಿ :
ನಿಮ್ಮ ಸ್ಥಾನಕ್ಕಿಂತ ಎದರಿನ ವ್ಯಕ್ತಿ ಹಿರಿಯನಿದ್ದು, ಗೌರವಕ್ಕೆ ಅರ್ಹನಾಗಿರುವನು. ಆದಾಯ ಮತ್ತು ಖರ್ಚನ್ನು ಸಮವಾಗಿ ತೂಗಿಸಿಕೊಂಡರೆ ಸ್ವಲ್ಪಮಟ್ಟಿನ ಚಿಂತೆ ದೂರಾಗುವುದು. ಎಂತಹ ಆಪ್ತರಾದರೂ ಸಹಕಾರವನ್ನು ಕೇಳುವಾಗ ಹಿಂದೇಟು ಹಾಕುವಿರಿ. ನಿಮ್ಮ ಆಸೆಯನ್ನು ಪ್ರಕಟಪಡಿಸಲು ಹಿಂಜರಿಯಬಹುದು. ಸಂಗಾತಿಗೆ ಸಿಟ್ಟು ಬರುವಂತೆ ನೀವು ಉದ್ದೇಶಪೂರ್ವಕವಾಗಿ ವರ್ತಿಸುವಿರಿ. ಒಮ್ಮೆಲೇ ಎರಡೆರಡು ಪರಿವರ್ತನೆಯಿಂದ ಗೊಂದಲ ಹೆಚ್ಚಾಗುವುದು. ವಿದ್ಯೆಯನ್ನು ಇನ್ನಷ್ಟು ಪಡೆಯುವ ಆಸೆ ಇರುವುದು. ದ್ವೇಷವು ನಿಮ್ಮ ಜೀವನವನ್ನು ಮಾರ್ಗಭ್ರಷ್ಟ ಮಾಡಬಹುದು. ಧನಾತ್ಮಕ ಚಿಂತನೆಯಿಂದ ಉತ್ಸಾಹವೂ ಇರಲಿದೆ. ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗಿ, ಸಂತೋಷ ವಿನಿಮಯ. ಧೈರ್ಯದ ಕೊರತೆಯು ಕಾಣಿಸುವುದು. ಮುಖಂಡರ ಜೊತೆ ನೀವು ಸಾಮಾಜಿಕ ಕಾರ್ಯಗಳ ಬಗ್ಗೆ ಚರ್ಚಿಸುವಿರಿ. ಭೂಮಿಗೆ ಸಂಬಂಧಿಸಿದಂತೆ ಕೆಲವು ಮಾರ್ಪಾಡಿನಿಂದ ಅನುಕೂಲವಾಗಲಿದೆ. ಕಛೇರಿಯಲ್ಲಿ ನಿಮ್ಮ ಮಾತು ಮತ್ತು ನಡವಳಿಕೆಯ ಬಗ್ಗೆ ಗಮನವಿರುವುದು.
ಧನು ರಾಶಿ :
ಕುಟುಂಬವು ಮಾನಸಿಕವಾಗಿ ಇಬ್ಬಾಗವಾಗಲಿದ್ದು, ಇಂದು ಹಿರಿಯರು ಅದನ್ನು ಸೇರಿಸುವ ಪ್ರಯತ್ನ ಮಾಡುವರು. ಅನಿರ್ದಿಷ್ಟ ಅವಧಿಯವರೆಗೆ ಉದ್ಯೋಗದ ಕಾರಣಕ್ಕೆ ಓಡಾಟ ಮಾಡುವಿರಿ. ಇಂದು ನಿಮಗೆ ಹಳೆಯ ಘಟನೆಗಳಿಂದ ಪಾಪಪ್ರಜ್ಞೆ ಕಾಡಬಹುದು. ಪ್ರೇಮದ ವಿಚಾರದಲ್ಲಿ ನೀವು ಎಚ್ಚರಿಕೆಯಿಂದ ಮುಂದುವರಿಯುವುದು ಉತ್ತಮ. ಶತ್ರುಗಳಿಂದ ತೊಂದರೆಯಾಗಬಹುದು. ಹೆಚ್ಚು ಪ್ರಯತ್ನದಿಂದ ಸ್ವಲ್ಪ ಫಲವನ್ನು ಪಡೆಯುವಿರಿ. ಅವಕಾಶದ ಕೊರತೆಯಿಂದ ದುಃಖಿಸುವಿರಿ. ನಿಮ್ಮ ಧೈರ್ಯವು ಕ್ಷಣಿಕದ್ದು ಮಾತ್ರ. ಆಕ್ರಮಣಕಾರಿಯಾದ ಮಾತುಗಳಿಂದ ಎದುರಾಳಿಯನ್ನು ಸುಮ್ಮನಿರಿಸುವಿರಿ. ನಿಮ್ಮ ಕಲ್ಪನೆಯಂತೆ ಎಲ್ಲವೂ ಆಗದು. ಯೋಜನೆಯನ್ನು ಮಾಡುವಾಗ ಸರಿಯಾಗಿ ಇರಲಿ. ಉದ್ವೇಗದಿಂದ ಏನನ್ನಾದರೂ ಹೇಳುವಿರಿ. ಒತ್ತಡಕ್ಕೆ ಅವಕಾಶವನ್ನು ಕೊಡದೇ ನೀವು ನೆಮ್ಮದಿಯಿಂದ ಇರುವಿರಿ. ನಿಮ್ಮನ್ನು ನೀವು ಸುಧಾರಿಸಿಕೊಳ್ಳಬೇಕು ಎಂದು ಅನ್ನಿಸಬಹುದು. ನೀವೇ ನಿಮ್ಮವರನ್ನು ಮೂದಲಿಸುವಿರಿ. ವರ್ಗಾವಣೆಯ ಕಿರಿಕಿರಿ ನಿಮ್ಮ ತಲೆಯಲ್ಲಿ ಇರಲಿದೆ. ಸಂಗಾತಿಯ ಜೊತೆ ಭಿನ್ನಾಭಿಪ್ರಾಯವು ಹೆಚ್ಚಾಗಬಹುದು.
ಮಕರ ರಾಶಿ :
ಯಾವ ಆದೇಶವನ್ನು ಹಗುರವಾಗಿ ತೆಗೆದುಕೊಳ್ಳದೇ ಶ್ರದ್ಧೆಯಿಂದ ಪ್ರಾಮಾಣಿಕವಾಗಿ ನಿರ್ವಹಿಸುವಿರಿ. ಮನೆ ಹಾಗೂ ಉದ್ಯೋಗದ ನಡುವೆ ಸರಿಯಾದ ಹೊಂದಾಣಿಕೆ ಕಷ್ಟ. ಇಂದು ನಿಮ್ಮ ಆಸ್ತಿಯ ಮಾರಾಟಕ್ಕೆ ಸಂಬಂಧಿಸಿದಂತೆ ಅಂತಿಮ ನಿರ್ಧಾರಕ್ಕೆ ಬರುವ ಸಾಧ್ಯತೆ ಇದೆ. ನಿಮ್ಮ ಕಾರ್ಯವನ್ನು ಪರಿಶೀಲಿಸಲು ಉನ್ನತ ಅಧಿಕಾರಿಗಳು ಬರಲಿದ್ದಾರೆ. ಪ್ರಶಂಸೆಯೂ ಸಿಗುವ ಸಾಧ್ಯತೆ ಇದೆ. ತಾಯಿಗೆ ಏನಾದರೂ ಒಳ್ಳೆಯದನ್ನು ಮಾಡಬೇಕು ಎನ್ನುವ ಸದ್ಭಾವ ಬರುವುದು. ಒತ್ತಡದಿಂದ ಸ್ವಲ್ಪ ದೂರ ಬರುವಿರಿ. ಮನಸ್ಸಿಗೆ ಹಗುರಾಗುವುದು. ನಿಮ್ಮ ಮೇಲೂ ನಿಮ್ಮವರ ಮೇಲೆ ನಂಬಿಕೆ ಇರಲಿ. ನಿಮ್ಮ ಪಾಲಿಗೆ ಬಂದಿದ್ದನ್ನು ಖುಷಿಯಿಂದ ಸ್ವೀಕರಿಸುವಿರಿ. ಭೂಮಿಯ ವ್ಯವಹಾರದಲ್ಲಿ ಗೊಂದಲವನ್ನು ಮಾಡಿಕೊಂಡು ಹಣವನ್ನು ಕಳೆದುಕೊಳ್ಳುವಿರಿ. ನೀವು ಉನ್ನತ ಸ್ಥಾನದ ಆಕಾಂಕ್ಷಿಗಳೂ ಆಗಿರುವಿರಿ. ಗುಪ್ತವಾದ ಧನವನ್ನು ಮತ್ತಷ್ಟು ಜೋಪಾನ ಮಾಡುವಿರಿ. ಸ್ವಂತ ಉದ್ಯಮಿಗಳಿಗೆ ಕಾರ್ಮಿಕರ ಕೊರತೆ ಆಗುವ ಸಾಧ್ಯತೆ ಇದೆ.
ಕುಂಭ ರಾಶಿ :
ನಿಮ್ಮ ವಾಹನ ಚಾಲಕರ ಚಲನವಲನದ ಬಗ್ಗೆ ಸಣ್ಣ ಗಮನ ಅವಶ್ಯಕ. ಚರಾಸ್ತಿಯನ್ನು ನೀವು ಬಿಡಬೇಕಾಗುತ್ತದೆ. ಇಂದು ನಿಮ್ಮ ಮನಸ್ಸು ಅನೇಕರ ಸಲಹೆಗಳ ಕಾರಣದಿಂದ ಬಹಳ ಚಂಚಲವಾಗಿರಲಿದೆ. ನಿಮ್ಮ ಉದ್ಯೋಗದ ಕನಸು ನನಸಾಗಲಿದೆ. ಅಶಿಸ್ತಿನ ವ್ಯವಸ್ಥೆಯು ನಿಮಗೆ ಬೇಸರ ತರಿಸಬಹುದು. ವಿದೇಶದ ಕನಸು ಅಂಕುರಿಸಬಹುದು. ಸಹೋದರಿಯರಿಗೆ ಏನನ್ನಾದರೂ ನೀಡುವಿರಿ. ನಿಮ್ಮ ಸಲಾರಾತ್ಮಕ ನಿಲುವು ಇಷ್ಟವಾಗುವುದು. ಇನ್ನೊಬ್ಬರಂತೆ ಹೆಸರು ಮಾಡುವ ಹಂಬಲ ನಿಮ್ಮ ತಲೆಗೆ ಬರುವುದು. ಕೆಲಸದಲ್ಲಿ ನಿಮ್ಮ ಪಾರದರ್ಶಕತೆಯನ್ನು ಇಷ್ಟಪಡುವರು. ಇಂದು ಎಂದಿಗಿಂತ ಹೆಚ್ಚು ಕಾರ್ಯವಾಗಲಿದೆ. ವ್ಯಾಪಾರವನ್ನು ವಿನಮ್ರತೆಯಿಂದ ಮಾಡಿ. ಆದಾಯವು ಹೆಚ್ಚಾಗಬಹುದು. ನಿಮಗೆ ಇಷ್ಟವಾದ ಕೊಡುಗೆಯು ಲಭ್ಯವಾಗಲಿದೆ. ಪ್ರಭಾವೀ ಪದವಿಯಲ್ಲಿ ಇರುವವರನ್ನು ನೀವು ಭೇಟಿಯಾಗುವಿರಿ. ಆರೋಗ್ಯವಾಗಿರಲು, ನೀವು ಅಸಂಬದ್ಧ ಚಿಂತೆಗಳಿಂದಲೂ ದೂರವಿರಬೇಕು. ಹೆಸರು ಮಾಡುವ ಭ್ರಮೆಯು ತಲೆಗೆ ಬರುವುದು.
ಮೀನ ರಾಶಿ :
ಹೊಸ ಉದ್ಯೋಗಕ್ಕೆ ಇಂದಿನಿಂದ ತೆರಳುವಿರಿ. ರಾಜಕೀಯ ಬಲದಿಂದ ಇಂದು ಕಾರ್ಯಗಳು ಸಿದ್ಧಿಸುವುದು. ವಿದ್ಯಾರ್ಥಿಗಳಿಗೆ ಉನ್ನತ ವಿದ್ಯಾಭ್ಯಾಸಕ್ಕೆ ಸಹಕಾರ ಸಿಗಲಿದೆ. ನಿಮ್ಮ ಪ್ರಯತ್ನಕ್ಕೆ ಅದೃಷ್ಟವೂ ಜೊತೆಯಾಗುವುದು. ನಿಮ್ಮ ವಸ್ತುವನ್ನು ಇನ್ನೊಬ್ಬರಿಗೆ ಕೊಡಲು ಇಚ್ಛಿಸುವಿರಿ. ನಿಮ್ಮ ಶತ್ರುಗಳಿಂದ ಕೆಲವು ಅವಕಾಶಗಳು ತಪ್ಪುವುದು. ವಿವಾಹಕ್ಕೆ ಬೇಕಾದ ತಯಾರಿಯನ್ನು ನೀವು ಮಾಡಿಕೊಳ್ಳುವಿರಿ. ನಿಮ್ಮ ವೇತನವನ್ನು ಇತರರ ಜೊತೆ ಹಂಚಿಕೊಳ್ಳುವಿರಿ. ವಿರೋಧಿಗಳು ನಿಮ್ಮ ಬಗ್ಗೆ ಮಾತನಾಡಿಕೊಳ್ಳಬಹುದು. ಮಕ್ಕಳ ವಿಚಾರದಲ್ಲಿ ಎಚ್ಚರಿಕೆ ಅಗತ್ಯ. ನಿಮ್ಮನ್ನು ಅರ್ಥಮಾಡಿಕೊಳ್ಳುವವರ ಬಗ್ಗೆ ನಿಮಗೆ ಒಲವು ಹೆಚ್ಚಾಗಲಿದೆ. ಕಛೇರಿಯಲ್ಲಿ ಉಂಟಾದ ಒತ್ತಡವನ್ನು ಕಡಿಮೆ ಮಾಡಿಕೊಳ್ಳಲು ನೀವು ಯತ್ನಿಸಬಹುದು. ನ್ಯಾಯಪರತೆಯಿಂದ ಇರುವುದನ್ನು ಇಷ್ಟಪಡುವರು. ನಿಮ್ಮ ಆಲೋಚನೆಗಳು ಸರಿಯಾದ ದಿಕ್ಕಿನಲ್ಲಿ ಇರಲಿ. ಕಾನೂನಿಗೆ ವಿರುದ್ಧವಾಗಿ ಕಾರ್ಯವನ್ನು ಮಾಡುವ ಆಲೋಚನೆಯನ್ನು ಮಾಡುವುದಿದ್ದರೆ ಅಂತಹ ಸಾಹಸದಲ್ಲಿ ತೊಡಗಿಕೊಳ್ಳುವುದು ಬೇಡ.
-ಲೋಹಿತ ಹೆಬ್ಬಾರ್-8762924271 (what’s app only)
Published On - 5:37 am, Wed, 17 September 25




