
ನಿತ್ಯ ಪಂಚಾಂಗ: ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ದಕ್ಷಿಣಾಯನ, ಋತು : ಶರದ್, ಚಾಂದ್ರ ಮಾಸ : ಆಶ್ವಯುಜ, ಸೌರ ಮಾಸ : ಕನ್ಯಾ, ಮಹಾನಕ್ಷತ್ರ : ಉತ್ತರಾಫಲ್ಗುಣೀ, ವಾರ : ಶನಿ, ಪಕ್ಷ : ಶುಕ್ಲ, ತಿಥಿ : ಪಂಚಮೀ, ನಿತ್ಯನಕ್ಷತ್ರ : ಜ್ಯೇಷ್ಠಾ, ಯೋಗ : ಶುಕ್ಲ, ಕರಣ : ತೈತಿಲ, ಸೂರ್ಯೋದಯ – 06 – 09 am, ಸೂರ್ಯಾಸ್ತ – 06 – 11 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 09:10 – 10:40, ಗುಳಿಕ ಕಾಲ 06:10 – 07:40 ಯಮಗಂಡ ಕಾಲ 13:41 – 15:11
ಮೇಷ ರಾಶಿ :
ಸತ್ಯವನ್ನೇ ಹೇಳಿ, ಅನಂತರ ಸಿಕ್ಕಿಬಿದ್ದು ಅಪಮಾನವನ್ನೂ ಎದುರಿಸಬೇಕಾಗುವುದು. ಇಂದು ನಿಮಗೆ ಶುಭಾಶುಭ ಸೂಚನೆಯು ಸಿಗಲಿದ್ದು ಅದೇ ಪ್ರಕಾರವಾಗಿ ನೀವು ಮುನ್ನಡೆಯುವಿರಿ. ನಿಮಗೆ ಸಾಧ್ಯವಿರುವ ಕಾರ್ಯಗಳನ್ನು ಮಾತ್ರ ಮಾಡಿ. ಪಾಲುದಾರಿಕೆಯಲ್ಲಿ ಉಂಟಾದ ಗೊದಲ್ಲವನ್ನು ಬಗೆಹರಿಸಿಕೊಂಡು ಮೈತ್ರಿ ಮಾಡಿಕೊಂಡರೆ ಇಬ್ಬರಿಗೂ ಅನುಕೂಲವಾಗುವುದು. ನಿಮ್ಮ ಸ್ಥಿರಾಸ್ತಿ ಪರಿಶೀಲನೆಯನ್ನು ಮಾಡಿಕೊಳ್ಳುವುದು ಉತ್ತಮ. ಬೋಧನೆಯ ಕೌಶಲಕ್ಕೆ ಪ್ರಶಂಸೆ. ರಕ್ತಸಂಬಂಧಗಳು ನಿಮ್ಮಮನಸ್ಸನ್ನು ಕಡಿಸುವುವು. ನಿಮ್ಮ ಕಷ್ಟವನ್ನು ಸ್ನೇಹಿತರ ಜೊತೆ ಹಂಚಿಕೊಳ್ಳಿ. ನಿಮಗೆ ಕೊಟ್ಟ ಜವಾಬ್ದಾರಿಯನ್ನು ಅತ್ಯಂತ ಕಾಳಜಿಯಿಂದ ಮಾಡುವಿರಿ. ನಿಮ್ಮ ಯಶಸ್ಸು ನಿಮಗೆ ಮುಳುವಾಗಬಹುದು. ಬೇಡದ್ದನ್ನು ಹೊರಹಾಕಿ, ನಿಶ್ಚಿಂತರಾಗಿ. ಹಿರಿಯರ ಮಾರ್ಗದರ್ಶನವನ್ನು ಪಡೆಯುವ ಅವಶ್ಯಕತೆ ಇರಲಿದೆ. ಸೌಲಭ್ಯಗಳ ದುರ್ಬಳಕೆಯಾಗದಂತೆ ನೋಡಿಕೊಳ್ಳಿ. ನಿಮ್ಮ ಚರ ಸ್ವತ್ತನ್ನು ರಕ್ಷಣೆ ಮಾಡಿಕೊಳ್ಳುವ ಅನಿವಾರ್ಯತೆ ಬರಬಹುದು.
ವೃಷಭ ರಾಶಿ :
ಕುಟುಂಬದ ಜೊತೆ ಇಲ್ಲದೇ ನಿಮಗೆ ಅನಾಥ ಭಾವ ಕಾಡುವುದು. ನ್ಯಾಯಸಮ್ಮತವಾದ ದಾರಿಯಲ್ಲಿ ಇದ್ದರೂ ನಿಮಗೆ ನೋವು ತಪ್ಪದು. ಇಂದು ನಿಮ್ಮ ಬಗ್ಗೆ ತಿಳಿಯದೇ ಸುಮ್ಮನೇ ಕುಖ್ಯಾತಿ ಬರುವುದು. ಆಸ್ತಿಯ ವಿಚಾರಕ್ಕೆ ಕುಟುಂಬದಲ್ಲಿ ಪರಸ್ಪರ ಜಗಳವಾಗುವ ಸಾಧ್ಯತೆ ಇದೆ. ಕಾನೂನಾತ್ಮಕ ವಿಷಯವನ್ನು ಚರ್ಚಿಸಿ ಮಾಡುವುದು ಉತ್ತಮ. ಕಡಿಮೆ ಖರ್ಚಿನಲ್ಲಿ ನಿಮ್ಮ ಕೆಲಸವು ಮುಗಿಯುವಂತೆ ನೋಡಿಕೊಳ್ಳುವಿರಿ. ಆರೋಗ್ಯದ ಸುಧಾರಣೆಗೆ ಶುದ್ಧ ವಾತಾವರಣಕ್ಕೆ ಹೋಗಬೇಕಾಗುವುದು. ಏನಾದರೂ ಹೊಸತನ್ನು ಮಾಡುವ ಹಂಬಲವಿರುವುದು. ಉತ್ಸಾಹ ಹಾಗೂ ಸಿದ್ಧತೆಯಲ್ಲಿರುವ ನಿಮಗೆ ಮನೆಯವರ ಮಾತು ಉತ್ಸಾಹಕ್ಕೆ ಭಂಗವನ್ನು ಮಾಡಿಸಬಹುದು. ಮಾತನಾಡಿ ಸಿಕ್ಕಿಬೀಳುವ ಸಾಧ್ಯತೆ ಇದೆ. ಪ್ರಶಂಸೆಯಿಂದ ನೀವು ದೂರವಿರುವಿರಿ. ಅಪರಿಚಿಯ ಸ್ಥಳಗಳ ಬಗ್ಗೆ ಮಾಹಿತಿಯನ್ನು ಪಡೆದು ಮುನ್ನಡೆಯುವುದು ಶ್ರೇಯಸ್ಕರ. ಹಣವಿದ್ದ ಮಾತ್ರಕ್ಕೆ ಎಲ್ಲವೂ ಸಾಧ್ಯವಾಗದು ಎಂಬ ಸತ್ಯವು ಗೊತ್ತಾಗುವುದು. ಯಾರ ಮಾತನ್ನೂ ನಿರ್ಲಕ್ಷ್ಯ ಮಾಡಬೇಡಿ.
ಮಿಥುನ ರಾಶಿ :
ಅಪರೂಪಕ್ಕಾದರೂ ಎಲ್ಲ ಬಂಧಗಳನ್ನು ಕಳಚಿಡುವ ದಿಟ್ಟ ಮನಸ್ಸು ಬರುವುದು. ಯಾರನ್ನಾದರೂ ಹಿಡಿದುಕೊಂಡು ನಿಮಗೆ ಆಗಬೇಕಾದ ಕೆಲಸವನ್ನು ಮಾಡುವಿರಿ. ನಿಮಗೆ ಇಂದು ತುರ್ತು ಆರ್ಥಿಕ ಸ್ಥಿತಿಯನ್ನು ಎದರಿಸಲು ಕಷ್ಟವಾಗುವುದು. ನಿಮಗೆ ನಿಮ್ಮವರ ಮಾತಿನಿಂದ ಇರುಸು ಮುರುಸಾದೀತು. ರಾಜಕೀಯ ವ್ಯಕ್ತಿಗಳಿಂದ ಕೆಲಸವಾಗಲು ಅವರಿಗೆ ಹಣವನ್ನು ಕೊಡುವಿರಿ. ಸ್ನೇಹಿತ ಸಹವಾಸದಿಂದ ದುರಭ್ಯಾಸವನ್ನು ಕಲಿಯುವ ಸಾಧ್ಯತೆ ಇದೆ. ಎಲ್ಲರ ಎದುರೂ ನಿಮ್ಮ ಆತುರವನ್ನು ತೋರಿಸುವುದು ಬೇಡ. ನಿಮ್ಮ ಯೋಜನೆಗಳು ಹೆಚ್ಚು ಇಷ್ಟವಾಗಲಿದೆ. ನಿಮ್ಮ ಮೇಲೆ ಬರುವ ನಕಾರಾತ್ಮಕ ಮಾತುಗಳನ್ನು ನೀವು ಅಲ್ಲಗಳೆಯುವಿರಿ. ನಿಮ್ಮನ್ನು ಅಳೆಯಬಹುದು. ಉದ್ಯಮವನ್ನು ನಡೆಸಲು ಇನ್ನೊಬ್ಬರ ಜೊತೆ ಸೇರಿಕೊಳ್ಳುವಿರಿ. ಆಪ್ತರ ಅಗಲಿಕೆಯಿಂದ ನೋವಾಗುವುದು. ದಾಂಪತ್ಯ ಜೀವನದಲ್ಲಿ ನಿಮ್ಮ ಸ್ಥಾನವು ಮುಖ್ಯವಾದಂತೆ ತೋರುವುದು.
ಕರ್ಕಾಟಕ ರಾಶಿ :
ಓದಿನ ಪ್ರೀತಿಯನ್ನು ಬೆಳೆಸಿಕೊಂಡು ಚಿತ್ತದ ಬಾಧೆಯನ್ನು ಉಪಶಮನ ಮಾಡಿಕೊಳ್ಳಬಹುದು. ನಿಮ್ಮ ಮೇಲೆ ಯಾರಾದರೂ ಅಪವಾದವನ್ನು ಹಾಕಬಹುದು. ಇಂದು ಸಾಲಬಾಧೆಯು ನಿಮಗೆ ಅತಿಯಾದಂತೆ ಭಾಸವಾಗುವುದು. ದೂರದ ಬಂಧುಗಳ ಭೇಟಿಯಾಗಲಿದೆ. ಅವರ ಜೊತೆ ಹೆಚ್ಚು ಸಮಯವನ್ನು ಕಳೆಯುವಿರಿ. ನಿಮ್ಮ ನಡವಳಿಕೆಯು ಅಹಂಕಾರದಂತೆ ತೋರೀತು. ವರ್ತನೆಯನ್ನು ಆದಷ್ಟು ಸಂದರ್ಭಕ್ಕೆ ತಕ್ಕಂತೆ ಇಟ್ಟುಕೊಳ್ಳುವುದು ಉತ್ತಮ. ಯಾರನ್ನೂ ದೈಹಿಕವಾಗಿ ದಂಡಿಸದೇ ಶಿಕ್ಷೆ ನೀಡುವಿರಿ. ಉದ್ಯೋಗದಲ್ಲಿ ಭಡ್ತಿಯನ್ನು ಕೇಳುವಿರಿ. ಕೆಲವರ ಮಾತುಗಳು ನಿಮಗೆ ನೋವನ್ನು ತಂದೀತು. ಹೇಳಿಕೊಳ್ಳದೇ ಒಳಗೇ ಇಟ್ಟುಕೊಳ್ಳುವಿರಿ. ಉದ್ಯೋಗದಲ್ಲಿ ಬದಲಾವಣೆಯನ್ನು ಮಾಡಿಕೊಳ್ಳಬೇಕಾದೀತು. ದಿನಗೂಲಿಯವರಿಗೆ ಕಷ್ಟವು ಬರುವುದು. ಹಣಕಾಸಿನ ವಿಚಾರದಲ್ಲಿ ಜಾಗರೂಕತೆ ಮುಖ್ಯವಾದೀತು. ಮಾಡುತ್ತಿರುವ ಉದ್ಯೋಗವು ನಿಮಗೆ ಸರಿಯೆನಿಸದು. ನಿಮ್ಮ ಭವಿಷ್ಯದ ಕನಸನ್ನು ಮಿತ್ರರ ಜೊತೆ ಹಂಚಿಕೊಳ್ಳುವಿರಿ. ದುರಭ್ಯಾಸವನ್ನು ಬೆಳೆಸಿಕೊಳ್ಳುವ ಸಾಧ್ಯತೆ ಇದೆ.
ಸಿಂಹ ರಾಶಿ :
ಅಪಾಯವನ್ನು ಎದುರಿಸಲಾಗದೇ ಇದ್ದರೇ ಅಂತಹ ಕೃತ್ಯಕ್ಕೆ ಕೈ ಹಾಕುವುದು ಬೇಡ. ಸಾಲವನ್ನು ತೀರಿಸಲು ನಿಮ್ಮ ಯೋಜನೆ ಕಾರ್ಯರೂಪಕ್ಕೆ ಬರುವುದು. ಇಂದು ಉದ್ಯೋಗವನ್ನು ಅರಸುತ್ತ ಇದ್ದರೆ ಇಂದು ಉತ್ತಮ ಉದ್ಯೋಗವು ಸುಳಿವು ಸಿಗಲಿದೆ. ಸ್ವಂತ ಆರೋಗ್ಯದ ಸುಧಾರಣೆಗೆ ಖರ್ಚು ಮಾಡುವಿರಿ. ಅಸಭ್ಯ ಮಾತುಗಳು ನಿಮಗೆ ಶೋಭೆಯನ್ನು ತರದು. ಎಲ್ಲರ ಜೊತೆ ಬೆರೆತು ಮಾತನಾಡುವುದನ್ನು ಇಷ್ಟಪಡುವಿರಿ. ಇಂದು ಯಾರ ಹೊಣೆಕಾರಿಕೆಯಲ್ಲಿಯೂ ನಿಮ್ಮ ಕಾರ್ಯವನ್ನು ಬಿಡುವುದು ಬೇಡ. ವಾಸಕ್ಕಾಗಿ ನೀವು ನೂತನ ಗೃಹವನ್ನು ಖರೀದಿಸಲಿದ್ದೀರಿ. ನಿಮಗೆ ಸಿಕ್ಕ ಅವಕಾಶಗಳನ್ನು ದುರುಪಯೋಗ ಮಾಡಿಕೊಳ್ಳುವ ಆಲೋಚನೆ ಒಳ್ಳೆಯದಲ್ಲ. ಮಾನಸಿಕ ಒತ್ತಡದಿಂದ ಇಂದಿನ ಕೆಲಸವು ಬೇಗನೆ ಸಾಕೆನಿಸಬಹುದು. ನೀವು ಎಲ್ಲದರಲ್ಲಿಯೂ ಪ್ರತ್ಯೇಕತೆಯನ್ನು ಬಯಸುವಿರಿ. ಉದ್ಯೋಗದ ಸ್ಥಳವು ಇಂದು ನಿಮಗೆ ಖುಷಿಯ ಸ್ಥಳ.
ಕನ್ಯಾ ರಾಶಿ :
ಹಳೆಯ ವಾಹನವು ದುರಸ್ತಿಗೆ ಬರಲಿದೆ. ಕಾಲವನ್ನು ನಿಂದಿಸುವುದಕ್ಕಿಂತ ಕಾಲಕಾಲಕ್ಕೆ ಸರಿಯಾದುದನ್ನು ಮಾಡಿ. ಸಂಘರ್ಷಗಳಿಗೆ ಸುಖಾಂತ್ಯವನ್ನು ಮಾಡಿದ್ದರೆ ಮತ್ತೇನಾದರೂ ಆದೀತು. ಇಂದು ಹಲವಾರು ದಿನಗಳ ವಾಹನ ಖರೀದಿಯ ಆಸೆಯು ಪೂರ್ಣಗೊಳ್ಳುವುದು. ಹೊರಗಿನಿಂದ ಆಮದು ಮಾಡಿಕೊಳ್ಳುವ ವ್ಯವಹಾರದವರಿಗೆ ಸಂಕಷ್ಟ ಬರಬಹುದು. ಭೂಮಿಯನ್ನು ವಿಸ್ತರಿಸುವ ಯೋಜನೆ ಮಾಡುವಿರಿ. ಉದ್ಯೋಗದಲ್ಲಿ ಇರಬೇಕಾದ ಚಾಣಾಕ್ಷತನ ಹಾಗೂ ಮೂಲಭೂತವಾದ ದಾಖಲೆಗಳನ್ನು ಸರಿಯಾಗಿ ಇರಿಕೊಳ್ಳುವುದು ಒಳ್ಳೆಯದು. ಇಂದು ಆಹಾರದಲ್ಲಿ ಮಿತಿಯನ್ನು ಇಟ್ಟುಕೊಳ್ಳಲಾಗದು. ಅದೃಷ್ಟದಿಂದ ಬಂದಿದ್ದು ಅದು ಹೋದಮೇಲೆ ಹೋಗುವುದು. ಸಮಯವನ್ನು ಹಾಳುಮಾಡದೇ ಕೆಲಸದ ಕಡೆ ಗಮನ ಹೆಚ್ಚಿರಲಿದೆ. ನಿಮ್ಮ ಮನಸ್ಸಿಗೆ ತೋಚಿದ್ದನ್ನು ಇಂದು ನೀವು ಮಾಡುವಿರಿ. ಹಿರಿಯರಿಂದ ಬೈಗುಳವು ಸಿಗುವುದು. ತಪ್ಪನ್ನು ತಿದ್ದಿಕೊಂಡು ಮುಂದೆ ಸರಿಯಾಗಲು ಬಯಸುವಿರಿ. ನೆಮ್ಮದಿಯನ್ನು ಬಹಳ ಶ್ರಮದಿಂದ ಪಡೆಯಬೇಕಾಗುವುದು. ವಾಹನದಲ್ಲಿ ಓಡಾಟವನ್ನು ಕಡಿಮೆಗೊಳಿಸಿ. ತೆಗೆದುಕೊಂಡ ನಿರ್ಧಾರಗಳು ಕಾರ್ಯಗತಗೊಳ್ಳುವ ಸಾಧ್ಯತೆ ಇದೆ.
ತುಲಾ ರಾಶಿ :
ಗೆಲುವಿಗೆ ಸಂತಸಪಡುವವರು ನಿಮ್ಮವರಾರೂ ಇರರು. ಇಂದಿನ ಕೆಲವು ಘಟನೆಗಳನ್ನು ಪ್ರತಿಕೂಲವಾಗಿ ತೆಗೆದುಕೊಂಡರೆ ಕಷ್ಟ. ಇಂದು ನಿಮಗೆ ಕಾರ್ಯದಿಂದ ತೃಪ್ತಿ ಸಿಗಲಿದೆ. ವಿದ್ಯಾರ್ಥಿಗಳಿಗೆ ಅಭ್ಯಾಸದ ಬಗ್ಗೆ ಆತಂಕ ಇರಲಿದೆ. ಪರೀಕ್ಷೆಯ ಭಯವು ನಿಮ್ಮ ಅಧ್ಯಯನ ದಿಕ್ಕನ್ನೇ ತಪ್ಪಿಸಬಹುದು. ಭೂಮಿಯ ವ್ಯವಹಾರದಲ್ಲಿ ಲಾಭವಿರದೇ ಕೇಲವ ಓಡಾಟ, ಮಾತು ಕತೆಗಳಲ್ಲಿಯೇ ಮುಕ್ತಾಯವಾಗಲಿದೆ. ಜವಾಬ್ದಾರಿ ಇಲ್ಲದ ಕಡೆ ನೀವು ಹೋಗುವುದು ಬೇಡ. ಕೆಲವು ಅಂಶವಾದರೂ ಸಹಾಯ ಮಾಡುವ ಗುಣವಿದ್ದರೆ ಒಳ್ಳೆಯದು. ಮಾತನಾಡವೇಕಾದ ಸಂಧರ್ಭದಲ್ಲಿ ಮೌನ ವಹಿಸುವಿರಿ. ಕಾಲ್ಪನಿಕ ಜಗತ್ತಿನಿಂದ ಹೊರಬರುವ ದಾರಿಯನ್ನು ಕಂಡುಕೊಳ್ಳಿ. ಹಣದ ಹಿಂದೆ ಎಷ್ಟೇ ಬಿದ್ದರೂ ಸಿಕ್ಕಬೇಕಾದುದು ಮಾತ್ರ ಸಿಗಲಿದೆ. ದಕ್ಕುವುದು ಮಾತ್ರ ಸಿಕ್ಕುತ್ತದೆ. ನಿರುಪಯುಕ್ತ ವಸ್ತುಗಳನ್ನು ಮಾತ್ರ ನೀವು ದಾನ ಮಾಡುವಿರಿ. ನಿಮಗೆ ಬೇಕಾದುದು ಇದ್ದಲ್ಲಿಗೆ ಬರುವುದು. ನಿಮ್ಮಿಂದ ಪಾಲಕರಿಗೆ ತೊಂದರೆಯಾಗುವುದು.
ವೃಶ್ಚಿಕ ರಾಶಿ :
ಪರಿಚಿತರ ವಿವಾಹದ ಜವಾಬ್ದಾರಿಯನ್ನು ನೀವು ನಿರ್ವಹಿಸಬೇಕಾಗುವುದು. ಸಮಯಕ್ಕೆ ಸರಿಯಾಗಿ ನಿಮ್ಮ ಬುದ್ಧಿಯು ಸ್ಫುರಿಸುವುದು. ಇಂದು ನಿಮ್ಮ ಬಲವಂತದ ಪ್ರೇಮ ತಪ್ಪಿಹೋಗುವುದು. ಉದ್ಯೋಗದ ಸ್ಥಳವು ನಿಮಗೆ ಖುಷಿಯ ಸ್ಥಾನವಾಗಲಿದೆ. ಹಳೆಯ ವಸ್ತುಗಳನ್ನು ನೀವು ಮಾರಾಟ ಮಾಡಲಿದ್ದೀರಿ. ಆರ್ಥಿಕತೆಯ ಸಂದರ್ಭಕ್ಕೆ ತಕ್ಕಂತೆ ವರ್ತಿಸುವ ಸಂಗಾತಿಯನ್ನು ನೀವು ಇಷ್ಟಪಡಲಾರಿರಿ. ಅಸಮಯದಲ್ಲಿ ಭೂಮಿಯ ಮಾರಾಟದಿಂದ ನೆಲೆ ಸಿಗುವುದು ಕಷ್ಟ. ಹೊರಗಿನ ವಸ್ತುವನ್ನು ಹೆಚ್ಚು ಸೇವಿಸುವಿರಿ. ನಿಮ್ಮ ಪ್ರಯತ್ನವು ಸಫಲತೆಯನ್ನು ಕಾಣುವುದು. ಸಂತೋಷವನ್ನು ಯಾರ ಜೊತೆಗಾದರೂ ಹಂಚಿಕೊಳ್ಳುವಿರಿ. ಗುರಿಯನ್ನು ಸೇರುವ ಮಾರ್ಗದ ಬಗ್ಗೆ ಸ್ಪಷ್ಟತೆ ಇರಲಿ. ಉತ್ತಮ ದಿನಗಳ ನಿರೀಕ್ಷೆಯಲ್ಲಿ ನೀವು ಇರುವಿರಿ. ನೂತನ ಉದ್ಯೋಗವನ್ನು ಆರಂಭಿಸಲು ಭಯವಿರುವುದು. ಇನ್ನೊಬ್ಬರನ್ನು ದೂರುವುದರಿಂದ ನೀವು ಸಜ್ಜನರಾಗಲಾರಿರಿ. ಅಸಭ್ಯ ಮಾತುಗಳು ನಿಮಗೆ ಸರಿಯಾಗದು.
ಧನು ರಾಶಿ :
ನಿಮ್ಮ ಭಾವನೆಗೆ ತಕ್ಕಂತೆ ಫಲವಿರುವ ಕಾರಣ ಸದ್ಭಾವ ಇರಲಿ ಸಾಮಾಜಿಕ ಕಾರ್ಯದಲ್ಲಿ ತೊಡಗುವುದಷ್ಟೇ ಅಲ್ಲ, ಆರ್ಥಿಕ ಸಹಾಯವನ್ನೂ ನೀವು ಮಾಡಬೇಕಾಗುವುದು. ಇಂದು ವಿದ್ಯಾರ್ಥಿಗಳಿಗೆ ತಾಯಿಯಿಂದ ತಮ್ಮ ಕಾರ್ಯವನ್ನು ಮಾಡಿಸಿಕೊಳ್ಳುವರು. ಗಂಡಾಂತರದಿಂದ ಪಾರಾಗಿ ನೆಮ್ಮದಿಯ ನಿಟ್ಟುಸಿರು ಬಿಡುವಿರಿ. ಮನೆಗೆ ಬೇಕಾದ ಉಪಕರಣಗಳನ್ನು ಖರೀದಿಸುವಿರಿ. ಆಗಬೇಕಾದ ಕೆಲಸಗಳ ಬಗ್ಗೆ ನಿಮಗೆ ಹೆಚ್ಚಿನ ಆತಂಕ ಇರಲಿದೆ. ಹಲವು ದಿನಗಳ ವಿರಾಮದ ಕಾರಣ ನಿಮ್ಮ ಸ್ಥಾನವನ್ನು ಅನ್ಯರು ತುಂಬುವರು. ದೊಡ್ಡ ವ್ಯವಹಾರಸ್ಥರ ಜೊತೆ ಸಂವಾದ ಮಾಡುವ ಸನ್ನಿವೇಶ ಬರುವುದು. ಕಳೆದುಕೊಂಡದ್ದರೆ ಬಗ್ಗೆ ಹೆಚ್ಚು ಮೋಹ ಉಂಟಾಗುವುದು. ಗೊಂದಲವನ್ನು ಮಾಡಿಕೊಳ್ಳದೇ ಸರಳವಾಗಿ ಕೆಲಸಗಳನ್ನು ಮಾಡುವುದು ಒಳ್ಳೆಯದು. ಅಲ್ಪ ಹೂಡಿಯತ್ತ ಗಮನವಿರಲಿದೆ. ಒಂದಕ್ಕಿಂತ ಹೆಚ್ಚು ಕೆಲಸವನ್ನು ಒಟ್ಟಿಗೇ ಮಾಡಲು ಹೋಗುವಿರಿ. ದಾನ ಮಾಡಲು ಮನಸ್ಸು ಹಿಂಜರಿಯಲಿದೆ. ಮಾನಸಿಕ ಅಸಮತೋಲನವು ನಿಮ್ಮನ್ನು ಭ್ರಾಂತಗೊಳಿಸುವುದು.
ಮಕರ ರಾಶಿ :
ಹಲವು ಬಗೆಯ ಉಪಯೋಗಕ್ಕೆ ಬರುವ ವಸ್ತುಗಳು ನೋಡಿ ಖರೀದಿಸಿ. ನಿಮ್ಮಿಂದ ಕುಟುಂಬದಲ್ಲಿ ಸಲ್ಲದ ಮಾತುಗಳು ಬರಬಹುದು. ಅದನ್ನು ತೆಗೆದುಕೊಂಡು ಹೋಗುವುದು ನಿಮ್ಮದೇ ಕಾರ್ಯವಾಗಬಹುದು. ಇಂದು ನೀವು ಸಲ್ಲದ ಯೋಚನೆಗಳಿಂದ ಮನಸ್ಸು ಹಾಳಾಗುವುದು. ಹೊಸ ಉದ್ಯಮವನ್ನು ಆರಂಭಿಸಲು ಧೈರ್ಯವು ಸಾಲದು. ಇನ್ನೊಬ್ಬರ ಜೊತೆ ಸೇರಿ ಮುಂದುವರಿಸುವುದು ನಿಮ್ಮ ಉತ್ತಮ ಆಯ್ಕೆ ಆಗಬಹುದು. ಮಕ್ಕಳಿಂದ ನಿಮ್ಮ ಉದ್ಯಮಕ್ಕೆ ಸಹಾಯವು ಸಿಗಬಹುದು. ನಿಮ್ಮ ಮೌನವು ಭಯ ತರಿಸುವುದು. ಅಂದುಕೊಂಡ ಮಾತ್ರಕ್ಕೆ ಎಲ್ಲವೂ ಆಗುತ್ತದೆ ಎಂಬುದಿಲ್ಲ. ದಾಂಪತ್ಯ ಜೀವನದಲ್ಲಿ ನಿಮ್ಮ ಸ್ಥಾನವು ಮುಖ್ಯವಾಗಿ ಇರಲಿದೆ. ಹೊಂದಾಣಿಕೆಯ ಮನೋಭಾವವು ಮುಖ್ಯವಾಗುವುದು. ಹಣವನ್ನು ಉಳಿಸಿಕೊಳ್ಳಲು ನಾನಾ ಪ್ರಯತ್ನಗಳನ್ನು ಮಾಡುವಿರಿ. ಇಂದಿನ ನಿಮ್ಮ ವರ್ತನೆಯು ಗಾಂಭೀರ್ಯದಿಂದ ಇರಲಿದೆ. ಸಂಗಾತಿಯ ಮಾತು ಸಂಕಟವನ್ನು ತರಬಹುದು.
ಕುಂಭ ರಾಶಿ :
ಭಯದಿಂದ ಆಗದ ಕಾರ್ಯವನ್ನು ಆಮಿಷದಿಂದ ಮಾಡಿಸಿಕೊಳ್ಳಬಹುದು. ನಿಮ್ಮ ಕಾರ್ಯದ ಅನುಭವದ ಮೇಲೆ ಉತ್ತಮ ಸ್ಥಾನವು ಪ್ರಾಪ್ತವಾಗುವುದು. ಮನೆಯಿಂದ ದೂರವಿರುವ ನಿಮಗೆ ಕುಟುಂಬದವರ ನೆನಪಾಗುವುದು. ನೋವನ್ನು ನುಂಗಿ ಬದುಕುವ ಕಲೆಯನ್ನು ನೀವು ಅರ್ಥಮಾಡಿಕೊಂಡಿರುವಿರಿ. ಸ್ವಂತ ಉದ್ಯಮವನ್ನು ನಡೆಸುವವರು ಪ್ರಸಾರದ ಕಡೆಗೆ ಗಮನ ಕೊಡುವಿರಿ. ಯಾರನ್ನೂ ನೋಯಿಸುವುದು ನಿಮಗೆ ಇಷ್ಟವಾಗದು. ನೂತನ ವಸ್ತುಗಳನ್ನು ಪಡೆಯಲಿದ್ದೀರಿ. ಮನೋರಂಜನೆಯಲ್ಲಿ ನಿಮ್ಮ ಹೆಚ್ಚಿನ ಸಮಯವು ಇಂದು ಕಳೆಯಲಿದೆ. ಕುಟುಂಬದ ಜೊತೆ ಹೆಚ್ಚು ಸಮಯವನ್ನು ಕಳೆಯುವಿರಿ. ಕಛೇರಿಯ ಕೆಲಸವನ್ನು ಕಾರಣಾಂತರಗಳಿಂದ ಮುಂದು ಹಾಕಲಿದ್ದೀರಿ. ನಿಮ್ಮ ಸ್ವಭಾವವನ್ನು ಸರಿ ಮಾಡಿಕೊಳ್ಳಬೇಕು ಎಂದನಿಸಬಹುದು. ಬಲವಂತದಿಂದ ನೀವು ಯಾರಬಳಿಯೂ ಕೆಲಸವನ್ನು ಮಾಡಿಸಲು ಹೋಗಬೇಡಿ, ಅದು ಆಗದು. ಕೆಲವು ಅವಕಾಶಗಳನ್ನು ನೀವೇ ಬಿಟ್ಟು ಹಾಳು ಮಾಡಿಕೊಳ್ಳುವಿರಿ.
ಮೀನ ರಾಶಿ :
ಮಾತಿಗೆ ಮಾತು ಬೆಳೆದು ಸ್ನೇಹದಲ್ಲಿ ಬಿರುಕು. ವ್ಯಾವಹಾರಿಕ ಅಂತ್ಯವೂ ನಿಮ್ಮ ಉದ್ಯಮಕ್ಕೆ ಮನೆಯಿಂದ ಪ್ರೋತ್ಸಾಹ ಸಹಾಯಗಳು ಸಿಗದಿದ್ದರೂ ಬಂಧುಗಳಿಂದ ಸಿಗುವುದು. ಇಂದು ನಿಮಗೆ ಎಲ್ಲ ಕಾರ್ಯದಲ್ಲಿಯೂ ಉತ್ಸಾಹವು ಕಡಿಮೆ ಇರುವುದು. ನಿಮ್ಮ ಚರ ಸಂಪತ್ತನ್ನು ಜೋಪಾನ ಮಾಡಿಕೊಳ್ಳಿ. ಸ್ನೇಹಿತರಿಂದ ಲಾಭವು ನಿಮಗೆ ಸಿಗಲಿದೆ. ನಿಮ್ಮ ಕೆಲಸಕ್ಕೆ ಮೆಚ್ಚುಗೆ ಸಿಗಬಹುದು. ವಿದ್ಯಾಭ್ಯಾಸ ಕ್ಷೇತ್ರವನ್ನು ಬದಲಿಸಿಕೊಳ್ಳಬಹುದು. ಆರಾಮಾಗಿ ಇರಲು ಹೆಚ್ಚು ಇಷ್ಟಪಡುವಿರಿ. ಅತಿಯಾದ ಆಯಾಸವನ್ನು ಮಾಡಿಕೊಳ್ಳಲು ಹೋಗುವುದು ಬೇಡ. ಕಛೇರಿಯಲ್ಲಿ ಸಹೋದ್ಯೋಗಿಗಳ ಸಹಾನುಭೂತಿಯು ಸಿಗಲಿದೆ. ವೃತ್ತಿಯನ್ನು ನೀವು ಆನಂದಿಸುತ್ತ ಮಾಡುವಿರಿ. ಸಂಬಂಧಗಳನ್ನು ಬಳಸಿಕೊಂಡು ಇಂದಿನ ಕೆಲಸವನ್ನು ಮಾಡುವಿರಿ. ಆರ್ಥಿಕತೆಯ ವಿಚಾರವು ನಿಮಗೆ ಪೂರ್ಣವಾಗಿ ತಿಳಿಯದು. ನಿಮ್ಮ ಅಜ್ಞಾನವನ್ನು ಪ್ರದರ್ಶಿಸುವುದು ಬೇಡ.
– ಲೋಹಿತ ಹೆಬ್ಬಾರ್ – 8762924271 (what’s app only)