AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today 05 September : ಇಂದು ಈ ರಾಶಿಯವರು ಬೇಕಾದವರನ್ನು ಮಾತಿನಿಂದ ವಶಮಾಡಿಕೊಳ್ಳುವರು

ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ವರ್ಷ ಋತುವಿನ ಭಾದ್ರಪದ ಮಾಸ ಶುಕ್ಲ ಪಕ್ಷದ ತ್ರಯೋದಶೀ ತಿಥಿ ಶುಕ್ರವಾರ ಸಹಾಯದ ನಿರೀಕ್ಷೆ, ಅಧಿಕಾರದ ಗತ್ತು, ಅಣಕಿಸುವುದು, ಸಂಗಾತಿಯ ಆಕ್ಷೇಪ, ಸಾಲ ಮಂಜೂರಿ ಇವೆಲ್ಲ ಈ ದಿನದ ವಿಶೇಷ.

Horoscope Today 05 September : ಇಂದು ಈ ರಾಶಿಯವರು ಬೇಕಾದವರನ್ನು ಮಾತಿನಿಂದ ವಶಮಾಡಿಕೊಳ್ಳುವರು
Horoscope
ಲೋಹಿತ ಹೆಬ್ಬಾರ್​, ಇಡುವಾಣಿ
| Updated By: ಸುಷ್ಮಾ ಚಕ್ರೆ|

Updated on: Sep 05, 2025 | 5:26 AM

Share

ನಿತ್ಯ ಪಂಚಾಂಗ: ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ದಕ್ಷಿಣಾಯನ, ಋತು : ವರ್ಷ, ಚಾಂದ್ರ ಮಾಸ : ಭಾದ್ರಪದ, ಸೌರ ಮಾಸ : ಸಿಂಹ, ಮಹಾನಕ್ಷತ್ರ : ಪೂರ್ವಾಫಲ್ಗುಣೀ, ವಾರ : ಶುಕ್ರ, ಪಕ್ಷ : ಶುಕ್ಲ, ತಿಥಿ : ತ್ರಯೋದಶೀ, ನಿತ್ಯನಕ್ಷತ್ರ : ಧನಿಷ್ಠಾ, ಯೋಗ : ಪ್ರೀತಿ, ಕರಣ : ಕೌಲವ, ಸೂರ್ಯೋದಯ – 06 – 22 am, ಸೂರ್ಯಾಸ್ತ – 06 – 40 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ 10:59 – 12:31, ಗುಳಿಕ ಕಾಲ 07:54 – 17:08, ಯಮಗಂಡ ಕಾಲ 15:36 – 17:08

ಮೇಷ ರಾಶಿ :

ಅಪ್ತರ ಕಾರಣದಿಂದ ತಾಳ್ಮೆಯು ಸ್ಫೋಟಗೊಳ್ಳಬಹುದು. ಅದನ್ನು ಕಳೆದುಕೊಳ್ಳದೇ ಇದ್ದರೆ, ನಿಮ್ಮ ಪಾಲಿಗೆ ಬರಬೇಕಾದುದು ಬಂದೇಬರುತ್ತದೆ. ಇಂದು ನೀವು ವಿವಾದಗಳಿಗೆ ಆತಂಕಪಡುವಿರಿ. ಇತರರಿಗೆ ಒಳ್ಳೆಯದನ್ನು ಮಾಡುವ ಕಾರ್ಯಕ್ಕೆ ಪ್ರತಿಫಲವಿದೆ. ಇಂದು ಮನೆಯಲ್ಲಿ ಏನಾದರೂ ತೊಂದರೆ ಕಾಣಿಸಿಕೊಳ್ಳಬಹುದು. ನಿಮ್ಮ ನಿರೀಕ್ಷಿತ ಗುರಿಯನ್ನು ತಲುಪಲು‌ ನೀವು ವಿಳಂಬ ಆಗಬಹುದು. ಸಂತೋಷವು ಇಂದು ಹೆಚ್ಚಾಗಬಹುದು.‌ ಬಂಧುಗಳು ನಿಮ್ಮನ್ನು ಬೇಕೆಂದೇ ತಪ್ಪು ದಾರಿ ತೋರಿಸುವರು. ನಿಮ್ಮ‌ ವಿವೇಚನಾ ಶಕ್ತಿಯು ಕೆಲಸ ಮಾಡಲಿ. ಸಂಗಾತಿಯ ಜೊತೆಗೂಡಿ ಅಪರೂಪಕ್ಕೆ ದೂರ ಪ್ರಯಾಣ ಮಾಡುವಿರಿ. ಗೊತ್ತಿಲ್ಲದೇ ಇರುವ ದಾರಿಯನ್ನು ಕೇಳಿಕೊಂಡು ಸರಿ ಮಾಡಿಕೊಳ್ಳುವುದು ಉತ್ತಮ. ಪರೀಕ್ಷೆಗಳನ್ನು ಎದುರಿಸುವುದು ನಿಮಗೆ ಸಹಜ ಕೆಲಸವಾಗಿದೆ. ಸಣ್ಣ ಕಾರ್ಯವನ್ನು ಮಾಡಲು ನಿಮಗೆ ಬಾರದು.‌ ಕೇಳಿದವರಿಗೆ ನಿಮ್ಮ ಸಹಾಯವು ಸಿಗಲಿದೆ. ಹೆಚ್ಚಿನ ಆದಾಯದ ಬಗದಗೆ ಚಿಂತನೆ ಮಾಡುವಿರಿ. ಕೇಳಿದ್ದಕ್ಕೆ ಮಾತ್ರ ನಿಮ್ಮ ಉತ್ತರವಿರಲಿ.

ವೃಷಭ ರಾಶಿ :

ಅನಿವಾರ್ಯವಾಗಿ ಬಂಧುಗಳ ಸಹಾಯವನ್ನು ಪಡೆಯಬೇಕಾಗಬಹುದು. ದುಡುಕಿ ಮಾತನಾಡಿ ಬರಬೇಕಾದುದನ್ನು ಕಳೆದುಕೊಳ್ಳುವಿರಿ. ಕುಟುಂಬದಲ್ಲಿ ಒಂದು ಮಟ್ಟಿನ ಸೌಖ್ಯವು ಇರಲಿದೆ. ಇಷ್ಟಮಿತ್ರರು ನಿಮ್ಮನ್ನು ಭೇಟಿ ಮಾಡುವರು. ಕ್ಷೇಮಸಮಾಚಾರವನ್ನು ಹಂಚಿಕೊಳ್ಳುವರು. ನಿಮ್ಮ ಕೆಲಸಗಳಿಗೇ ನೀವು ಇಂದು ಹೆಚ್ಚು ಪ್ರಾಮುಖ್ಯ ನೀಡಿ. ಹೂಡಿಕೆಯ ಚಿಂತನೆಯಲ್ಲಿ ನೀವು ಇರುವಿರಿ. ಸಂತಾನದ ಸುಖವನ್ನು ನೀವುಬಪಡೆಯುವಿರಿ. ಸಾಮಾಜಿಕ ಮಾಧ್ಯಮದಲ್ಲಿ ಸಕ್ರಿಯರಾಗುವಿರಿ. ಸಾಹಸ ಮಾಡಲು ಹೋಗುವಾಗ ಎಚ್ಚರವಿರಲಿ. ‌ಮುಖಭಂಗ ಮಾಡಿಕೊಂಡು ಬರಬೇಕಾದೀತು. ಆಪ್ತರಿಂದ ಧನವನ್ನು ನಿರೀಕ್ಷಿಸಿ, ಪಡೆದುಕೊಳ್ಳುವಿರಿ. ವಿದ್ಯಾಭ್ಯಾಸವನ್ನು ನೀವು ಅನ್ಯರ ಒತ್ತಾಯಕ್ಕೆ ಮಾಡುವಿರಿ. ಅನಾರೋಗ್ಯದ ಲಕ್ಷಣವು ನಿಮ್ಮಲ್ಲಿ ಕಾಣಿಸಿಕೊಳ್ಳಬಹುದು. ಅತಿಯಾದ ಮರೆವು ಉಂಟಾಗಲಿದೆ ಇಂದು. ವಾಹನವನ್ನು ಚಲಿಸುವಾಗ ಬಹಳ ಎಚ್ಚರಿಕೆ ಅಗತ್ಯ.

ಮಿಥುನ ರಾಶಿ :

ಯಾರದೋ ಪಾಲಾಗುವ ಭೂಮಿಯನ್ನು ತಡೆಯುವಿರಿ. ಭೂಮಿಯ ವ್ಯವಹಾರವನ್ನು ಯಾವುದೋ ತೊಂದರೆಯಿಲ್ಲದೇ ಮಾಡಲಾಗದು ಎಂಬ ಮನೋಭಾವ ಬದಲಾಗುವುದು. ನಿಮಗೆ ಮಕ್ಕಳ ಮುಂದಿನ ವಿದ್ಯಾಭ್ಯಾಸದ ಚಿಂತೆ ಹೆಚ್ಚಾಗುವುದು. ಸರ್ಕಾರದಲ್ಲಿ ಆಗಬೇಕಾದ ನಿಮ್ಮ ಕೆಲಸವು ಸ್ವಲ್ಪ ವೇಗವನ್ನು ಪಡೆಯವುದು. ಅಧಿಕಾರಿಗಳ ಭೇಟಿಯಿಂದ ನಿಮ್ಮ ಉದ್ಯೋಗದಲ್ಲಿ ಪ್ರಭಾವವು ಹೆಚ್ಚಾಗಬಹುದು. ಅಳಿವು ಉಳಿವಿನ ವಿಚಾರಕ್ಕೆ ತಟಸ್ಥರಾಗುವುದು ಸೂಕ್ತ. ನಿಶ್ಚಿತ ಗುರಿಯನ್ನು ನೀವು ತಲುಪುವ ಕಡೆ ಹೆಜ್ಜೆಹಾಕುವಿರಿ. ಆದಾಯವು ಚಿಂತಿಸಿದ ಮಟ್ಟದಲ್ಲಿದ್ದರೂ ಖರ್ಚು ಅದಕ್ಕಿಂತಲೂ ಹೆಚ್ಚಾಗಲಿದೆ. ಸಂಸಾರದಲ್ಲಿ ಸಣ್ಣ ವಿಚಾರಗಳನ್ನು ದೊಡ್ಡ ಮಾಡಿಕೊಳ್ಳುವುದು ಬೇಡ. ಮನೆಯಲ್ಲಿ ಯಾರಾದರೂ ತಟಸ್ಥರಾದರೆ ಕಲಹವು ಶಾಂತವಾಗಬಹುದು. ಶಾಂತವಾದ ಮನಸ್ಸಿನಿಂದ ನೆಮ್ಮದಿ ಕಾಣುವುದು. ಸ್ವಲ್ಪ ಮಾನಸಿಕ ಆಲಸ್ಯವು ಇರುವುದು. ಗೊಂದಲವನ್ನು ಇನ್ನೊಬ್ಬರ ಬಳಿ ಹೇಳಿ. ಇನ್ನೊಬ್ಬರ ಮೇಲೆ ಬಲಪ್ರಯೋಗ ಬೇಡ.

ಕರ್ಕಾಟಕ ರಾಶಿ :

ಮಾನಸಿಕವಾಗಿ ಹಿಂಸೆಯಾದರೂ ನಿಮ್ಮನ್ನು ಬಿಟ್ಟು ಹೋಗಲಾರರು. ಒಳ್ಳೆಯ ಸಂಬಂಧಗಳು ನಿಮಗೆ ಪಥ್ಯವಾಗದೇ ಇರಬಹುದು. ನಿಮ್ಮ ಕಠಿಣ ಪರಿಶ್ರಮದಿಂದ ಅಂದುಕೊಂಡಿದ್ದನ್ನು ಸಾಧಿಸುವಿರಿ. ಆದರೆ ಅದಕ್ಕೆ ಬೇಕಾದ ಸರಳ ಮಾರ್ಗವನ್ನು ಮರೆಯುವಿರಿ. ಇಂದು ನೀವು ಮಾಡುವ ಕೆಲಸಗಳು ಲಾಭದಾಯಕ ಆಗಿದ್ದರೂ ಪರಿಶ್ರಮವೂ ಹೆಚ್ಚಿರಲಿದೆ. ನಿಮ್ಮನ್ನು ಭಾವನಾತ್ಮಕವಾಗಿ ಬಂಧಿಸುವ ಪ್ರಯತ್ನ ಸಾಗಲಿದೆ. ಚಂಚಲವಾದ ಮನಸ್ಸನ್ನು ನೀವು ನಿಯಂತ್ರಿಸಲು ಬೇಕಾದ ಕ್ರಮವನ್ನು ಅನುಸರಿಸಿ. ನಿಮ್ಮ ಬಂಧುಗಳು ಹಣಕಾಸಿನ ಸಹಾಯಕ್ಕಾಗಿ ನಿಮ್ಮನ್ನು ಕೇಳಿಯಾರು. ಕೊಟ್ಟರೂ ಕೊಡದಿದ್ದರೂ ಮನಸ್ತಾಪ ಏಳಬಹುದು. ಬಂಧುಗಳ ಜೊತೆಗಿನ ಕಲಹವು ನಿಮ್ಮ‌ ಪ್ರತಿಷ್ಠೆಯ ಪ್ರಶ್ನೆಯಾಗಲಿದೆ. ಬೆಳವಣಿಗೆಗೆ ಬೇಕಾದ ಸಾಮರ್ಥ್ಯ ಕೊರತೆ ಇದ್ದು ಅದನ್ನು ಸರಿ‌ಮಾಡಿಲೊಳ್ಳಬೇಕಿದೆ. ಯೋಗ್ಯ ವಿವಾಹಸಂಬಂಧವು ಬರಬಹುದು‌. ನಿಮ್ಮ ಕ್ಷುಲ್ಲಕ ಕಾರಣದಿಂದ ಅದನ್ನು ಬಿಟ್ಟ ಬಿಡುವುದು ಬೇಡ. ಮನಸ್ಸನ್ನು ಸಂಗಾತಿಯ ಜೊತೆ ಹಂಚಿಕೊಳ್ಳಿ.

ಸಿಂಹ ರಾಶಿ :

ನಿಮ್ಮ ಆಯಾಸವನ್ನು ಯಾರೂ ಕೇಳುವ ಸ್ಥಿತಿಯಲ್ಲಿ ಇರಲಾರರು. ಒಳ್ಳೆಯ ವಿಚಾರಗಳನ್ನು ಪ್ರಚಾರ ಮಾಡುವ ಬಗ್ಗೆ ಚಿಂತಿಸಿ. ಇಂದು ನಿಮ್ಮ ಕೆಲಸ ಕಾರ್ಯಗಳಲ್ಲಿ ಕೊಂಚ ಬದಲಾವಣೆಯನ್ನು ಮಾಡಲಿದ್ದೀರಿ. ಅಧಿಕಾರದ ಬಲಾಬಲವನ್ನು ತಿಳಿದುಕೊಳ್ಳ ವಾಗ್ವಾದವು ಅಧಿಕಾರಿಗಳ ನಡುವೆ ನಡೆಯಬಹುದು. ಕುಂಟುತ್ತಿರುವ ಉದ್ಯಮಕ್ಕೆ ವೇಗವನ್ನು ನೀವೇ ಕೊಡಬೇಕು. ಒಬ್ಬರಿಂದ ಆಗದ್ದನ್ನು ಮಾಡಲು ಹೋಗಬೇಡಿ. ಸಾಲ ಪಡೆದವರಿಂದ ಅಲ್ಪ ಹಣವನ್ನು ಹಿಂದಿರುಗಲಿದೆ. ನಿಮ್ಮ ಅಹಂಕಾರವೇ ನಿಮ್ಮನ್ನು ಜನರಿಂದ ದೂರವಿರುವಂತೆ ಮಾಡಬಹುದು. ಸಾಲವನ್ನು ವೇಗವಾಗಿ ತೀರಿಸಲು ನೀವು ಇಂದು ಶ್ರಮ ಪಡುವಿರಿ. ಯಾರದೋ ಮಾತು ನಿಮ್ಮ ಬುದ್ಧಿಯನ್ನು ಹಾಳುಮಾಡೀತು. ನಿಮ್ಮ ಜೊತೆಗೆ ನಿಮ್ಮನ್ನು ದ್ವೇಷಿಸುವವರು ಇರುವರು. ಜಾಗರೂಕರಾಗಿರುವುದು ಉಚಿತ. ಎಲ್ಲವನ್ನೂ ನಂಬಿಕೆಯ ಆಧಾರದ ಮೇಲೆ ಸ್ವೀಕರಿಸಬೇಕಿಲ್ಲ. ಪ್ರೇಮವು ಬುದ್ಧಿಯ ನೇತೃತ್ವದಲ್ಲಿ ನಡೆಯಲಿ.

ಕನ್ಯಾ ರಾಶಿ :

ಕೋಪದ ಸನ್ನಿವೇಶ ಸೃಷ್ಟಿಯಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ನಿಮ್ಮದಾಗಲಿದೆ. ಒಬ್ಬರನ್ನೇ ನಂಬಿ ಕುಳಿತರೆ ನಿಮಗೆ ಆಗಬೇಕಾದುದು ಸಕಾಲಕ್ಕೆ ಆಗದು. ನೀವು ಅಧಿಕಾರವನ್ನು ಪಡೆಯಲು ಮಾರ್ಗವನ್ನು ಬದಲಿಸುವಿರಿ. ಖರ್ಚನ್ನು ನೀವು ನಿಯಂತ್ರಣ ಮಾಡುವ ಅವಶ್ಯಕತೆ ಇಂದು ಬರಬಹುದು. ಮಹಿಳೆಯರು ನಿಮ್ಮಿಂದ ಸಹಾಯವನ್ನು ಪಡೆಯುವರು. ನೀವೇ ನಿರ್ಮಿಸಿಕೊಂಡ ಹಳೆಯ ಮನೆಗೆ ಹೋಗಿ ವಾಸಮಾಡಬೇಕಾದೀತು. ವಿದ್ಯಾಭ್ಯಾಸಕ್ಕೆ ತೊಂದರೆಯಾಗಬಹುದು. ಹವಾಮಾನ ಬದಲಾವಣೆಯಿಂದ ನಿಮ್ಮ ದೇಹದ ಮೇಲೆ ವಿರುದ್ಧ ಪರಿಣಾಮವನ್ನು ಉಂಟುಮಾಡಬಹುದು. ಮನೆಯಲ್ಲಿ ಎತ್ತರದ ದನಿ ಬೇಡ. ನಿಮ್ಮ ಪ್ರಯಾಣವು ಸರಿಯಾದ ಯೋಜನೆಯಿಂದ ಇದ್ದಿರಲಿ. ಬಹಳ ದಿಮಗಳಿಂದ ಮಾಡದೇ ಉಳಿದ ಕಾರ್ಯವನ್ನು ಪೂರ್ಣಮಾಡುವಿರಿ. ಕಲಹವು ಇಂದು ದ್ವೇಷವಾಗಿ ಪರಿವರ್ತನೆ ಆಗಬಹುದು. ಯಾರನ್ನೂ ಅವಲಂಬಿಸಲು ಹೋಗಬೇಡಿ. ನ್ಯಾಯಾಲಯದ ವಿಚಾರದಲ್ಲಿ ನಿಮಗಾದ ಕಹಿ ಅನುಭವವನ್ನು ಸಹಿಸಲಾಗದು.

ತುಲಾ ರಾಶಿ :

ಕೆಟ್ಟ ಅನುಭವಗಳು ಸಣ್ಣ ಪಾಠವಾದರೂ ಆಗಬೇಕು. ನಿಮ್ಮ ತಪ್ಪಿಗೆ ಯಾವುದೋ ಒಂದು ರೀತಿಯಲ್ಲಿ ಪ್ರಾಯಶ್ಚಿತ್ತವಾಗಲಿದೆ. ನಿಮ್ಮ ಪೂರ್ವಯೋಜಿತ ವಿಷಯಗಳಿಂದ ಸಫಲತೆಯನ್ನು ಕಾಣಲಿದ್ದೀರಿ. ದೀರ್ಘಕಾಲದ ನೋವನ್ನು ಕಡಿಮೆ ಮಾಡಿಕೊಳ್ಳಲು ಇಂದು ಪ್ರಯತ್ನಿಸುವಿರಿ. ಪುಣ್ಯಸ್ಥಳದ ಕಡೆಗೆ ನಿಮ್ಮ ಗಮನವಿರುವುದು. ಉದ್ಯಮದಲ್ಲಿ ಹೊಸರೀತಿಯ ಲಾಭಾವನ್ನು ಪಡೆಯಲು ಆಲೋಚಿಸುವಿರಿ. ನಿಮಗೆ ಸದ್ವಸ್ತುವನ್ನು ಕೊಟ್ಟ ಸಾರ್ಥಕತೆ ಬರಲಿದೆ. ಮಾನಸಿಕ ಒತ್ತಡವು ನಿಮ್ಮ ಕೆಲಸಗಳನ್ನು ಹಾಳು ಮಾಡೀತು. ದಾಂಪತ್ಯದಲ್ಲಿ ಸಣ್ಣ ವಿರಸವು ಉಂಟಾಗಬಹುದು. ಮಕ್ಕಳ ವಿಚಾರದಲ್ಲಿ ನಿಮ್ಮ ವರ್ತನೆಯು ಬಾಲಿಶ ಎನಿಸಬಹುದು. ಯಾರನ್ನೋ ಮೆಚ್ಚಿಸಲು ನೀವು ಸಮಯವನ್ನು ಕಳೆಯಬೇಕಿಲ್ಲ. ದೀರ್ಘಕಾಲ ಸ್ನೇಹಿತರು ವಿವಾಹಕ್ಕೆ ಹಿರಿಯರ ಅನುಮತಿಯನ್ನು ಪಡೆಕೊಳ್ಳಿ. ಅನಿರೀಕ್ಷಿತ ಅತಿಥಿಸತ್ಕಾರವು ನಿಮಗೆ ಸಿಗಲಿದೆ. ದಿನದ ಕೆಲವು ಸಮಯದಲ್ಲಿ ನಿಮಗೆ ಉತ್ತಮ ಜೀವನದ ಸೂಚನೆ ಸಿಗಲಿದೆ.

ವೃಶ್ಚಿಕ ರಾಶಿ :

ಹಣದ ನಿರೀಕ್ಷೆ ಇಲ್ಲದೇ ಕೆಲಸವನ್ನು ಮಾಡುವುದು ಖುಷಿ ಕೊಡುವುದು. ವ್ಯವಸ್ಥೆಯನ್ನು ಸರಿ ಮಾಡುವ ಉದ್ದೇಶವೇ ನಿಮ್ಮಲ್ಲಿ ಇರುವುದು. ನಿಮಗೆ ಮಕ್ಕಳ ವಿಚಾರದಲ್ಲಿ ಸಂತೋಷವಿರಲಿದೆ. ಸ್ತ್ರೀ ಪುರುಷರ ನಡವೆ ಪರಸ್ಪರ ದ್ವೇಷಬರಬಹುದು. ಖಾಸಗಿ ಉದ್ಯೋಗಿಗಳಿಗೆ ಒಳ್ಳೆಯ ಸುದ್ದಿ ಸಿಗಬಹುದು. ನಿಮ್ಮ ಗುರಿಗಳು ಬದಲಾದಷ್ಟೂ ನಿಮ್ಮ‌ ಶ್ರಮವೂ ವ್ಯರ್ಥವಾಗಬಹುದು. ಸಂಗಾತಿಯ ಜೊತೆ ಹೆಚ್ಚು ಕಾಲ ಕಳೆಯುವ ಮನಸ್ಸಿದ್ದರೂ ಸಮಯದ ಅಭಾವದಿಂದ ಅದು ಸಾಧ್ಯವಾಗದು. ಇದೇ ನಿಮ್ಮ ನಡುವಿನ ಒಡಕು ಉಂಟಾಗಲು ಕಾರಣವಾಗಬಹುದು. ನಿಮ್ಮ ಕೊರತೆಯನ್ನು ಸಕಾರಾತ್ಮಕವಾಗಿ ತೆಗೆದುಕೊಳ್ಳುವಿರಿ. ಸ್ವಯಾರ್ಜಿತ ಆಸ್ತಿಗೆ ಕಲಹವಾಗಬಹುದು. ಇಟ್ಟುಕೊಳ್ಳಲು ಕೊಟ್ಟ ಹಣವು ಪುನಃ ಬಾರದೇ ಇದ್ದೀತು. ಹಿರಿಯರ ಎದುರು ಮಾತನಾಡಲು ನೀವು ಹೆದರುವಿರಿ. ನಿಮ್ಮ ಅಧ್ಯಯನದಿಂದ ನಿಮ್ಮನ್ನು ವಿಚಲಿತಗೊಳಿಸುವ ಅನಗತ್ಯ ವಾದಗಳನ್ನು ತಪ್ಪಿಸಿ. ಅಂದುಕೊಂಡಂತೆ ಕಾರ್ಯವು ಸಾಗದು ಎಂಬ ಕೊರಗು ಇರುವುದು. ಬೇಡವೆಂದ ಕಾರ್ಯವನ್ನು ಹಠದಿಂದ ಮಾಡುವಿರಿ.

ಧನು ರಾಶಿ :

ಅನಪೇಕ್ಷೆಯಿಂದ ನಿಮ್ಮವರನ್ನು ಕಳೆದುಕೊಂಡು ದುಃಖಿಸುವಿರಿ. ಹಿರಿಯರಿಗೆ ನಿಮ್ಮ‌ ಮೇಲೆ ಸದಭಿಪ್ರಾಯ ಮೂಡದೇ ಇರಬಹುದು. ನಿಮ್ಮ ಸಹೋದರರಿಂದ ನಿಮಗೆ ಆಕಸ್ಮಿಕವಾಗಿ ಸಹಾಯ ಸಿಗಬಹುದು. ಮಕ್ಕಳ‌‌ ಮೇಲೆ ನಿಮಗೆ ಬೇಸರ ಉಂಟಾಗಬಹುದು. ತಾಳ್ಮೆಯನ್ನು ಕಳೆದುಕೊಳ್ಳುವ ಸ್ಥಿತಿಯು ಎದುರಾಗಬಹುದು. ಹೆಚ್ಚಿನ ಆದಾಯಕ್ಕಾಗಿ ಸುಳ್ಳುಹೇಳಬೇಕಾದೀತು ಅಥವಾ ನಷ್ಟವನ್ನು ತುಂಬಿಕೊಳ್ಳಲು ಅನ್ಯಮಾರ್ಗವನ್ನು ಪ್ರವೇಶಮಾಡಬಹುದು. ಮುಂಗಡ ಹಣವನ್ನು ಪಡೆಯದೇ ಕೆಲಸ ಮಸಡಲಾರಿರಿ. ಮನೆಯ ವಾತಾವರಣವು ನಿಮಗೆ ಹಿತವಾಗಲಿದೆ. ಸುಳ್ಳಿನಿಂದ‌ ಇಂದು ನಿಮ್ಮ ವ್ಯಕ್ತಿತ್ವಕ್ಕೆ ತೊಂದರೆ ಆದೀತು. ವಿಶೇಷವಾದ ವಸ್ತುವನ್ನು ಕೊಳ್ಳುವ ವಿಚಾರದಲ್ಲಿ ಮೋಸ ಹೋಗುವಿರಿ. ವಾಹನದಿಂದ ಲಾಭವನ್ನು ಪಡಯುವಿರಿ. ಅತಿಯಾದ ವೇಗ ಬೇಡ. ಯಾರಮೇಲೂ ಒತ್ತಡಬೇಡ. ಭೂಮಿಯ ಬಗ್ಗೆ ಜಾಗರೂಕತೆ ಅವಶ್ಯಕ. ಸಣ್ಣ ಪಾಲು ಕೈತಪ್ಪಬಹುದು. ಸಂಗಾತಿಯ ಮಾತುಗಳು ನಿಮಗೆ ಅನಿರೀಕ್ಷಿತ ಆದೀತು.

ಮಕರ ರಾಶಿ :

ಸಂಸ್ಥೆಯ ಪ್ರತಿನಿಧಿಯಾಗಿ ಭಾಗವಹಿಸುವಿರಿ. ಯಾರದ್ದಾರೂ ಮಾತು ನಿಮಗೆ ಖುಷಿಕೊಡುವುದಾದರೆ ಅಂಥದ್ದನ್ನು ಕೇಳಿ. ಇಂದು ನೀವು ಬೇರೆಯವರ ಕಷ್ಟಕ್ಕೆ ನೆರವಾಗುವಿರಿ. ನೀವು ಇಂದು ನಂಬಿಕೆಯನ್ನು ಸುಳ್ಳು ಮಾಡುವಿರಿ. ನಿಮ್ಮ ಪ್ರಾಬಲ್ಯವೇ ಮೇಲಾದೀತು. ದೈವದತ್ತವಾದ ಆರೋಗ್ಯವನ್ನು ನೀವೇ ಹಾಳುಮಾಡಿಕೊಳ್ಳುವಿರಿ. ಸ್ವಂತ ಉದ್ಯೋಗವಿದ್ದರೆ ಜನರು ವಂಚಿಸಬಹುದು. ನಿಮ್ಮ ಸಂಗಾತಿಯ ಜೊತೆ ಹೆಚ್ಚು ಸಮಯ ಕಳೆಯಲು ಸಾಧ್ಯವಾಗಲಾರದು. ಕೈಯಲ್ಲಿರುವ ಹಣವು ಗೊತ್ತಾಗದಂತೆ ಖಾಲಿಯಾಗುವುದು. ಕೆಲಸಕ್ಕೆ ಸಂಬಂಧಿಸಿದಂತೆ ಕೆಲವು ದಿನಗಳವರೆಗೆ ಮನೆಯಿಂದ ದೂರವಿರಬೇಕಾಗುವುದು. ಕಚೇರಿಯಲ್ಲಿ ನಿಮ್ಮ ಸಾಧನೆಗೆ, ನಿಷ್ಠೆಗೆ ಮೆಚ್ಚುಗೆ ಸಿಗಲಿದೆ. ನಿಮ್ಮ ಕೆಲಸದಲ್ಲಿ ನೀವು ಪ್ರಾಮಾಣಿಕರಾಗಿ ಇರುವಿರಿ. ಸಾಧನೆಯ ರುಚಿ ಇನ್ನಷ್ಟು ಹಂಬಲವನ್ನು ತರಿಸಲಿದೆ. ಇದೇ ನಿಮಗೆ ಇಷ್ಟದ ವಿಚಾರವಾಗಿದೆ. ನೂತನ ವಸ್ತುಗಳ ಖರೀದಿಗೆ ಹಣವು ಖರ್ಚಾದೀತು. ಸ್ನೇಹದಿಂದ ಪ್ರೇಮವು ಉಂಟಾಗಲಿದೆ. ಸಂಬಂಧದ ಮಹತ್ವವನ್ನು ತಿಳಿಯುವುದು. ಕಷ್ಟವೆಂದುಕೊಂಡ ಕಾರ್ಯವು ಗೊತ್ತಾಗದೇ ಮುಗಿದುಹೋದೀತು.

ಕುಂಭ ರಾಶಿ :

ಅನಿರೀಕ್ಷಿತ ಆಕ್ರಮಣವು ನಿಮಗೆ ದಿಗಿಲೆನಿಸುವುದು. ಸಾಲಕೂಪವೂ ದಿನದಿಂದ ದಿನಕ್ಕೆ ಹೆಚ್ಚಾದಂತೆ ತೋರುತ್ತದೆ. ನೀವು ಧಾರ್ಮಿಕ ಕಾರ್ಯಗಳಲ್ಲಿ ತೊಡಗುವ ಆಸಕ್ತಿ ಇರುವುದು. ಅನಿರೀಕ್ಷಿತ ಧನಾಗಮನವು ನಿಮಗೆ ಸಂತಸವನ್ನು ತರಲಿದೆ. ಅನವಶ್ಯಕ ವಸ್ತುಗಳನ್ನು ಖರೀದಿಸುವ ಚಪಲತೆ ಬರುವುದು. ನಿಮ್ಮ ಪ್ರತಿಭೆಯು ನಿರಾಶಾದಾಯಕವಾಗಿರುವುದು. ಮನೆಗೆ ಬಂದರನ್ನು ಬರಿ ಕೈಯಲ್ಲಿ ಏನನ್ನಾದರೂ ಕೊಡಿಸುವುದು ಉಚಿತ. ಮಕ್ಕಳ ಮೇಲಿನ ಮೋಹವು ನಿಮ್ಮನ್ನು ಕುರುಡು ಮಾಡಬಹುದು. ವಿವಾಹದ ಮಾತುಕತೆ ವಿಳಂಬವಾಗಿ‌ ನಿಮಗೆ ಬೇಸರ ತರಿಸಬಹುದು. ಲೆಕ್ಕಪತ್ರ ವಿಷಯದಲ್ಲಿ ನೀವು ಹಿಂದುಳಿಯುವಿರಿ. ಸಭೆಯಲ್ಲಿ ನಿಮ್ಮನ್ನು ಗೌರವಿಸಬಹುದು. ವಾಹನದಲ್ಲಿ ನೀವು ಪ್ರಯಾಣ ಮಾಡಲು ನಿಮಗೆ ಕಷ್ಟವಾದೀತು. ಸಿಗದುದರ ಬಗ್ಗೆ ಬಹಳ ಆಲೋಚನೆ ಬೇಡ. ಯಾರ ಮೆಚ್ಚುಗೆಯೂ ನಿಮಗೆ ಸಮಾಧಾನ ತರದು. ವಿನಾಕಾರಣ ಕಾಲಹರಣ ಮಾಡಲಿದ್ದು ಕಛೇರಿಯ ಕೆಲಸದ ಬಗ್ಗೆಯೇ ಚಿಂತೆ ಇರದು.

ಮೀನ ರಾಶಿ :

ನಿಮಗೆ ಇನ್ನೊಬ್ಬರ ಆಸರೆ ಪಡೆಯುವುದು ಇಷ್ಟವಾಗದು. ಹೇಗಾದರೂ ತಪ್ಪಿಸಿಕೊಳ್ಳುವ ಯೋಚನೆ ಬರಲಿದೆ.‌ ನಿಮ್ಮ ಹಣವು ಒಳ್ಳೆಯ ಕಾರ್ಯಕ್ಕೆ ಉಪಯೋಗವಾದರೆ ಖುಷಿಪಡಿ. ಸಂಕಟಪಟ್ಟುಕೊಂಡು ಬರುವ ಪುಣ್ಯವನ್ನೂ ಕಳೆದುಕೊಳ್ಳಬೇಡಿ. ಇಂದು ನಿಮ್ಮ ಸ್ವಂತ ಕಾರ್ಯದಲ್ಲಿ ಹೆಚ್ಚಿನ ಪ್ರಗತಿ ಇರುವುದು. ನೀವು ಇಂದು ಸಂಪನ್ಮೂಲ‌ ವ್ಯಕ್ತಿಳಾಗಿ ನೀವು ಇರುವಿರಿ. ನಿಮ್ಮ ಗುಣಗಳನ್ನು ಇತರರು ಹೇಳಿಯಾರು. ಸಮಯಕ್ಕೆ ನೀವು ಹೆಚ್ಚು ಮಹತ್ತ್ವವನ್ನು ಕೊಡಬಹುದು. ಗೃಹೋತ್ಪನ್ನಗಳ ಮಾರಟ ಮಾಡಲು ನಿಮಗೆ ದಾರಿ ಸಿಗುವುದು. ವೈವಾಹಿಕ ಸಂಬಂಧವು ಅಂತಿಮವಾಗಿ ನ್ಯಾಯಾಲಯಕ್ಕೆ ಹೋಗಲಿದೆ. ನಿಮ್ಮನ್ನು ಕೆರಳಿಸಲಿ ಯಾರಾದರೂ ಬರಬಹುದು. ನಿಮ್ಮ ಅಹಂಕಾರಕ್ಕೆ ಕಡಿವಾಣ ಹಾಕಿಕೊಳ್ಳಿ. ಸುಖದುಃಖಗಳು ಎರಡೂ ನಿಮಗೆ ಸಮವಾಗಿ ಸಿಗಬಹುದು. ಹೆಚ್ಚು ಶ್ರವಹಿಸಿ ಕೆಲಸ ಮಾಡುವುದನ್ನು ನಿಲ್ಲಿಸಬಹುದು. ಸಹೋದ್ಯೋಗಿಗಳು ತಪ್ಪಿಗೆ ನಿಮ್ಮ ಕಡೆ ಬೊಟ್ಟು ಮಾಡಿ ತೋರಿಸಿಯಾರು‌. ಹಳೆಯ ಕೆಲಸದಲ್ಲಿ ಮಂದಗತಿ ಇರಲಿದೆ.

-ಲೋಹಿತ ಹೆಬ್ಬಾರ್ – 8762924271 (what’s app only)

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ