ಯಾರಿಂದಲೂ ಯಾವ ಸಹಾಯವನ್ನು ಬಯಸಲು ಮನಸ್ಸಾಗದು
ಶಾಲಿವಾಹನ ಶಕವರ್ಷ 1948ರ ಉತ್ತರಾಯಣ, ವಸಂತ ಋತುವಿನ ವೈಶಾಖ ಮಾಸ ಶುಕ್ಲ ಪಕ್ಷದ ಅಷ್ಟಮೀ ತಿಥಿ, ಸೋಮವಾರ ವಾಗ್ದಾಳಿಗೆ ಪ್ರತಿ ದಾಳಿ, ಬಂಧುಗಳ ಆಗಮನ, ಹಿರಿಯರ ಆಶೀರ್ವಾದ, ಧಾರ್ಮಿಕ ಕಾರ್ಯದಲ್ಲಿ ಭಾಗಿ ಇದೆಲ್ಲ ಇರುವುದು. ಇಂದಿನ ದಿನ ಭವಿಷ್ಯದಲ್ಲಿ ಯಾವ ರಾಶಿಗೆ ಯಾವ ಫಲ ಎನ್ನುವುದನ್ನು ತಿಳಿದುಕೊಳ್ಳಿ.

ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಋತು: ವಸಂತ, ಸೌರ ಮಾಸ: ಮೇಷ ಮಾಸ, ಮಹಾನಕ್ಷತ್ರ: ಭರಣೀ, ಮಾಸ: ವೈಶಾಖ, ಪಕ್ಷ: ಶುಕ್ಲ, ವಾರ: ಸೋಮ, ತಿಥಿ : ಅಷ್ಟಮೀ ನಿತ್ಯನಕ್ಷತ್ರ : ಆಶ್ಲೇಷಾ, ಯೋಗ: ಗಂಡ, ಕರಣ: ವಣಿಜ, ಸೂರ್ಯೋದಯ – 06 : 09 am, ಸೂರ್ಯಾಸ್ತ – 06 : 49 pm, ಇಂದಿನ ಶುಭಾಶುಭಕಾಲ: ರಾಹು ಕಾಲ 07:45 – 09:19, ಯಮಘಂಡ ಕಾಲ 10:54 – 12:29, ಗುಳಿಕ ಕಾಲ 14:04 – 15:39
ತುಲಾ ರಾಶಿ: ಆದಾಯದ ಆಸೆಯಿಂದ ಹೂಡಿಕೆ ಮಾಡುವಿರಿ. ನಿಮ್ಮ ವಿವಾಹಕ್ಕೆ ಸಂಬಂಧಿಸಿದಂತೆ ಮಾತುಕತೆಗಳು ನಡೆಯುವುದು. ಗೌರವ ಹಾಗೂ ಸಮ್ಮಾನಗಳು ನಿಮಗೆ ಸಿಗಲಿವೆ. ಕಛೇರಿಯಲ್ಲಿ ನೀವು ಸಿದ್ಧಪಡಿಸಿರುವ ಯೋಜನೆಗಳಿಗೆ ಪ್ರಶಂಸೆ ಸಿಗುವುದು. ಒತ್ತಡಗಳನ್ನು ನಿವಾರಿಸುವ ವಿದ್ಯೆಯು ಕರಗತವಾಗಿದ್ದು ಅನಾಯಾಸದಿಂದ ಕಾರ್ಯಗಳನ್ನು ಮಾಡಿ ಮುಗಿಸುವಿರಿ. ಮಾತುಗಾರಿಕೆಯಿಂದ ಆಗದ ಕೆಲಸವನ್ನೂ ಆಗಿಸಿಕೊಳ್ಳುವಿರಿ. ಹೊಸ ಕೆಲಸವನ್ನು ಆರಂಭಿಸುವವರು ಆರಂಭಿಸಲು ಯೋಗ್ಯವಾದ ಸಮಯವಾಗಿದೆ. ಯಾರಿಂದಲೋ ಪ್ರೇರಿತರಾಗಿ ಆಸ್ತಿಯನ್ನು ಪಡೆಯುವ ಹುನ್ನಾರ ನಡೆಸುವಿರಿ. ರಾಜಕೀಯದಲ್ಲಿ ವಿವಾದಸ್ಪದ ಮಾತುಗಳು ಆಡಿ ಎಲ್ಲರ ಕೆಂಗಣ್ಣಿಗೆ ಸಿಲುಕುವಿರಿ. ಮುಖಂಡರ ಜೊತೆ ಗುರುತಿಸಿಕೊಳ್ಳಲು ಇಷ್ಟಪಡುವಿರಿ. ಭೂವಿವಾದಿಂದ ನಿಮ್ಮ ಪರಿಚಯಾದೀತು. ಅಮೂಲ್ಯವಾದ ವಸ್ತುಗಳು ಪಡೆದುಕೊಳ್ಳುವಿರಿ. ಇಂದು ನಿಮ್ಮ ಮಾತಿನ ಆರಂಭವೇ ನೀವು ಎಂತಹವರು ಎನ್ನುವುದನ್ನು ತಿಳಿಸುತ್ತದೆ. ಕೆಲಸಗಳಲ್ಲಿ ನೀವು ಜಯವನ್ನು ಸಾಧಿಸಬಹುದು.
ವೃಶ್ಚಿಕ ರಾಶಿ: ರಾಜಕೀಯ ಮುಖಂಡರ ಭೇಟಿಯಿಂದ ನಿಮ್ಮ ಕಾರ್ಯ ವೇಗವನ್ನು ಪಡೆಯುವುದು. ಇಂದು ಹಿಡಿದ ಕೆಲಸವನ್ನು ಬಿಡದೇ ಮುಗಿಸುವ ಸ್ವಭಾವವಿರಲಿದೆ. ನೀವು ಬಹಳ ದಿನಗಳಿಂದ ಮಾಡುತ್ತಿರುವ ಕಾರ್ಯಗಳು ಮುಂದೆ ಹೋಗುತ್ತಿದ್ದು ಇಂದು ಅದನ್ನು ಪೂರೈಸುವಿರಿ. ಇಂದು ಮನಸ್ಸು ನಿರಾಳವಾಗಿ ಯಾವದೇ ಒತ್ತಡಕ್ಕೆ ಸಿಲುಕದೇ ಇರುವುದು. ನಿಮ್ಮ ಯಾರಾದರೂ ಕೆಣಕಬಹುದು. ಸರ್ಕಾರದ ಕಾರ್ಯದಲ್ಲಿ ಸರಿಯಾದ ಮಾಹಿತಿ ಕೊರತೆ. ದುರಭ್ಯಾಸವು ಮನೆಯವರಿಗೆ ಗೊತ್ತಾಗಲಿದೆ. ಉದ್ವೇಗಕ್ಕೆ ಒಳಗಾಗಿ ಸ್ನೇಹಿತರ ಅಪಹಾಸ್ಯಕ್ಕೆ ಸಿಲುಕಬೇಡಿ. ಆಯಾಸದ ಪ್ರಯಾಣವನ್ನು ಮಾಡುವಿರಿ. ಅತಿಯಾದ ಭಾರವನ್ನು ಎತ್ತುವ ಕೆಲಸಕ್ಕೆ ಹೋಗಬೇಡಿ. ನಿಮ್ಮ ಇಂದಿನ ಗಂಭೀರ ಮೌನಕ್ಕೂ ಅರ್ಥವು ಇರಲಿದೆ. ಮಕ್ಕಳ ಜೊತೆ ಅನ್ಯೋನ್ಯ ಸಂಬಂಧವು ಕಾಣಿಸಿಕೊಂಡೀತು. ನೀವು ಹೇಳಿದ ಕೆಲಸವೂ ವೇಗವಾಗಿ ಮುಗಿಯದು. ಸ್ನೇಹಿತರಿಗೆ ಬೇಸರವಾಗಬಾರದೆಂದು ಅವರ ಜೊತೆ ಸಮಸ್ಯೆ ಕಳೆಯುವಿರಿ. ಆರ್ಥಿಕ ಅಧಿಕಾರಿಗಳು ನಿಮಗೆ ತೊಂದರೆ ಕೊಡಬಹುದು.
ಧನು ರಾಶಿ: ಇನ್ನೊಬ್ಬರಿಂದ ಬೇಡದ ವಿಚಾರಕ್ಕೆ ಪ್ರೇರಣೆ. ಆರೋಗ್ಯದಲ್ಲಿ ವ್ಯತ್ಯಾಸವಾಗಿ ತುರ್ತು ಚಿಕಿತ್ಸೆಯನ್ನೂ ಪಡೆಯಬೇಕಾಗುವುದು. ಆರ್ಥಿಕವಾಗಿ ಸಬಲರಾದವರು ಖರ್ಚನ್ನು ಹೆಚ್ಚು ಮಾಡುವರು. ಅನಗತ್ಯ ಕಾರ್ಯಹಳ ಪಟ್ಟಿಯೇ ದೊಡ್ಡದಾಗುವುದು. ಅವಶ್ಯಕತೆಗಳನ್ನು ಮಾತ್ರ ನೀಗಿಸಿಕೊಳ್ಳುವ ಪ್ರಯತ್ನವನ್ನು ಮಾಡಿ. ಯಾವುದೇ ಸಾಹಸಕ್ಕೆ ಕೈ ಹಾಕಲು ಹೋಗುವುದು ಬೇಡ. ವಿದೇಶದ ವಿದ್ಯಾಭ್ಯಾಸಕ್ಕೆ ಅವಕಾಶ ಸಿಗಲಿದೆ. ನಿಮಗೆ ಭವಿಷ್ಯದ ಚಿಂತೆ ಇರಲಿದೆ. ನೀರಿನ ಪ್ರದೇಶಗಳಿಗೆ ಹೋಗುವ ಮನಸ್ಸು ನಿಮ್ಮದಾಗಲಿದೆ. ದೂರದ ಊರಿಗೆ ಪ್ರಯಾಣ ಹೋಗುವಿರಿ. ಕುಳಿತಲ್ಲೇ ಕುಳಿತು ದೇಹ ಮತ್ತು ಮನಸ್ಸು ಜಡವಾಗಿದೆ ಎಂದು ಅನ್ನಿಸಲಿದೆ. ಮಕ್ಕಳ ಜೊತೆ ಕೆಲವು ಸಮಯವನ್ನು ಕಳೆಯುವಿರಿ. ವೈದ್ಯಕೀಯ ವೃತ್ತಿಯಲ್ಲಿ ತುರ್ತು ಕಾರ್ಯಗಳು ಬರುವುದು. ಪ್ರೇಮಕ್ಕಾಗಿ ಹೆಚ್ಚು ಖರ್ಚನ್ನು ಮಾಡಬೇಕಾದೀತು. ಹಿತಶತ್ರುಗಳ ಬಗ್ಗೆ ನಿಮ್ಮ ಊಹೆಯು ಸುಳ್ಳಾಗಬಹುದು. ಆರೋಗ್ಯವು ಬಡವಾದಂತೆ ತೋರುವುದು.
ಮಕರ ರಾಶಿ: ಆಕಸ್ಮಿಕವಾಗಿ ಹಳೆಯ ಮಿತ್ರರ ಭೇಟಿ. ಇಂದು ಅನ್ಯ ಮಾರ್ಗವಿಲ್ಲದೆ ಉದ್ಯೋಗವನ್ನೇ ನಂಬಿದವರಿಗೆ ಸ್ವಲ್ಪ ಆರ್ಥಿಕವಾಗಿ ಹಿನ್ನಡೆಯಾಗಲಿದೆ. ಕಛೇರಿಯಲ್ಲಿ ನಿಮ್ಮನ್ನು ಹಿಮ್ಮೆಟ್ಟಲು ಕಾಯುತ್ತಿರುವರು. ಅವರಿಗೆ ನೀವು ಆಹಾರವಾಗಲಿದ್ದೀರಿ. ಇಂದು ನಿಮ್ಮ ಆತ್ಮಸಾಕ್ಷಿಯಂತೆ ನಡೆದುಕೊಳ್ಳುವಿರಿ. ಎದೆಗುಂದುವ ಸ್ಥಿತಿ ಇಂದು ಬರಬಹುದು. ನಿಮ್ಮ ಅನಂತರ ಕೆಲಸ ಮಾಡುವವರಿಂದ ನಿಮಗೆ ಕೆಲವು ಮಾತುಗಳು ಸಿಗಬಹುದು. ಮಾತಿನ ಮೇಲೆ ಹಿಡಿತವನ್ನು ಇಟ್ಟು, ಆಲೋಚಿಸಿ ಮಾತನಾಡಿ. ಯಾವುದೇ ನಿರ್ಧಾರಗಳನ್ನು ಆ ಕ್ಷಣದಲ್ಲಿಯೇ ತೆಗೆದುಕೊಂಡು ಆಮೇಲೆ ಚಿಂತೆಗೆ ಒಳಗಾಗುವಂತೆ ಮಾಡಿಕೊಳ್ಳಬೇಡಿ. ಸಾಮಾಜಿಕವಾದ ನಿಮ್ಮ ಕಾರ್ಯಗಳು ಪ್ರಶಂಸೆಯನ್ನು ಪಡೆಯುತ್ತವೆ. ಯಾವ ಬಲವನ್ನು ನಂಬದೇ ಸ್ವಪ್ರಯತ್ನದಿಂದ ಎಲ್ಲವನ್ನೂ ಮಾಡಲು ಬಯಸುವಿರಿ. ಮುರಿದ ಸಂಬಂಧಗಳು ಎಷ್ಟೇ ಆದರೂ ಸರಿಯಾಗಿ ಕೂಡಿಕೊಳ್ಳುವುದು ಕಷ್ಟವಾದೀತು. ಇಂದಿನ ಕಾರ್ಯಗಳಲ್ಲಿ ತೊಂದರೆಗಳು ಎದ್ದು ಕಾಣಿಸುವುದು. ಜಾಣ್ಮೆಯನ್ನು ಪ್ರದರ್ಶಿಸಲು ಹೋಗಿ ಮುಗ್ಗರಿಸುವಿರಿ.
ಕುಂಭ ರಾಶಿ: ಸಾಮಾಜಿಕ ಕಾರ್ಯಗಳಿಂದ ಗೌರವ ಸಾಧ್ಯತೆ. ನಿಮ್ಮ ಮೇಲೆ ಇಂದು ಎಂದೂ ಮಾಡದ ಕೆಲಸಕ್ಕೆ ಅಪವಾದಗಳು ಬರಲಿವೆ. ಅದನ್ನು ನ್ಯಾಯಸಮ್ಮತವಾಗಿ ದೃಷ್ಟಾಂತ ಸಹಿತ ಅಲ್ಲಗಳೆಯುವಿರಿ. ನಿಮಗೆ ಸಿಗಬೇಕಾದ ಜವಾಬ್ದಾರಿ ಮತ್ತೊಬ್ಬರಿಗೆ ಸಿಗಲಿದೆ. ದೂರದ ಊರಿಗೆ ವೈಯಕ್ತಿಕ ಕಾರ್ಯದ ನಿಮಿತ್ತ ಪ್ರಯಾಣ ಮಾಡಲಿದ್ದೀರಿ. ಸ್ನೇಹಿತ ಮಾತುಗಳು ನಿಮಗೆ ಕಸಿವಿಸಿ ವಾತಾವರಣವನ್ನು ಉಂಟುಮಾಡಲಿದೆ. ಉನ್ನತ ವಿದ್ಯಾಭ್ಯಾಸವನ್ನು ಮಾಡುವವರಿಗೆ ವಿದೇಶಗಳಲ್ಲಿ ಅವಕಾಶವು ದೊರೆಯಲಿದೆ. ಇನ್ನೊಬ್ಬರಿಗೆ ತೊಂದರೆ ಕೊಡುವ ಕಾರ್ಯದಲ್ಲಿ ಹಿಂದೇಟು ಹಾಕುವಿರಿ. ಸಾಲವನ್ನು ಮಾಡುವುದಿದ್ದರೆ ಅವಶ್ಯಕತೆಗೆ ತಕ್ಕಂತೆ ಮಾಡಬಹುದು. ಅಪರಿಚಿತರ ಜೊತೆ ವೃಥಾ ಕಲಹವಾಗಬಹುದು. ನಿಮ್ಮ ಇಂದಿನ ನಡೆಯು ಅನೂಹ್ಯವಾಗಿರುವುದು. ರಾಜಕೀಯದಲ್ಲಿ ಬದಲಾವಣೆಯನ್ನು ತರಿಸುವುದು. ಮಕ್ಕಳ ವಿದ್ಯಾಭ್ಯಾಸದ ಚಿಂತೆ ಇರಲಿದೆ. ಕೆಲವು ಗೊಂದಲವು ಪರಿಹಾರವಾಗದೇ ಹಾಗೆಯೇ ಇರುವುದು.
ಮೀನ ರಾಶಿ: ಯಾರಿಂದಲೂ ಯಾವ ಸಹಾಯವನ್ನು ಬಯಸಲು ಮನಸ್ಸಾಗದು. ಇಂದು ಗುರುತು ಪರಿಚಯವಿಲ್ಲದ ವ್ಯಕ್ತಿಗಳಿಂದ ಜೀವನಕ್ಕೆ ಬೇಕಾದ ಉಪದೇಶವು ಸಿಗಲಿವೆ. ಜೀವನ ನಿರ್ವಹಣೆ ನಿಮಗೆ ಇಂದು ಕಷ್ಟವಾಗುವುದು. ಖುಷಿಯಾಗಿರಲು ಕೆಲವು ಸಂಗತಿಗಳು ನಿಮ್ಮ ಪಾಲಿಗೆ ಇರಲಿವೆ. ವಿನಾಕಾರಣ ಸಂಗಾತಿಯ ನಡುವೆ ಸಣ್ಣ ಕಲಹಗಳು ಹುಟ್ಟಿಕೊಳ್ಳಬಹುದು. ಅನಿವಾರ್ಯವಾಗಿ ಹೊರಗಿನ ತಿಂಡಿಯನ್ನು ತಿನ್ನಬೇಕಾದೀತು. ಉದರಕ್ಕೆ ಸಂಬಂಧಿಸಿದ ರೋಗವು ಬಂದು ಆರೋಗ್ಯವು ಕೆಡುವುದು. ನಿಮಗೆ ಕೆಲವು ಶುಭ ಶಕುನಗಳು ಕಾಣಿಸಿಕೊಳ್ಳಲಿದ್ದು ಅದರಂತೆ ನಿಮ್ಮ ನಡಿಗೆ ಇರಲಿ. ಸಹನೆಯ ಪರೀಕ್ಷೆಯಲ್ಲಿ ನೀವು ಗೆಲ್ಲುವಿರಿ. ವಿನಾಕಾರಣ ನೆಮ್ಮದಿಯನ್ನು ಹಾಳುಮಾಡಿಕೊಳ್ಳುವ ಪ್ರಯತ್ನವನ್ನು ಮಾಡುವಿರಿ. ನಿಮ್ಮನ್ನು ನಗಿಸುವ ಪ್ರಯತ್ನ ಮಾಡಿದರೂ ನೀವು ಯಾವುದೋ ಆಲೋಚನೆಯಲ್ಲಿಯೇ ಇರುವಿರಿ. ನಿಮ್ಮ ಇಂದಿನ ಶ್ರಮಕ್ಕೆ ತಕ್ಕುದಾದ ಫಲವು ಸಿಗಬಹುದು. ಭೂಮಿಯ ವ್ಯಾಪಾರದಲ್ಲಿ ಜಯವಾಗಲಿದೆ. ಎಲ್ಲರ ಮಾತನ್ನು ಧಿಕ್ಕರಿಸುವ ಉದ್ಧಟತನ ಬೇಡ.