AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope: ಕುಟುಂಬಕ್ಕೆ ಧಕ್ಕೆಯಾಗದಂತೆ ನೀವು ನೋಡಿಕೊಳ್ಳ ಬೇಕಾಗಬಹುದು

ಅಕ್ಟೋಬರ್ 01,​ 2024ರ​​ ಪುಣ್ಯ ಪ್ರದೇಶದ ಸಂಚಾರದಿಂದಲೇ ನಿಮ್ಮ ನಕಾರಾತ್ಮಕ ಅಂಶಗಳು ದೂರಾಗುವುವು. ನಿಮ್ಮ ಆತುರವು ಕೆಲಸವನ್ನು ಹಾಳುಮಾಡಿಕೊಳ್ಳಲು ಸಾಕು. ನಿಮ್ಮ ವ್ಯವಹಾರದಲ್ಲಿ ಹಸ್ತಕ್ಷೇಪವನ್ನು ಮಾಡುವುದು ಇಷ್ಟವಾಗದು. ಹಾಗಾದರೆ ಅಕ್ಟೋಬರ್ 01ರ ದಿನ ಭವಿಷ್ಯ ಮತ್ತು ಪಂಚಾಂಗ ಇಲ್ಲಿದೆ ನೋಡಿ.

Horoscope: ಕುಟುಂಬಕ್ಕೆ ಧಕ್ಕೆಯಾಗದಂತೆ ನೀವು ನೋಡಿಕೊಳ್ಳ ಬೇಕಾಗಬಹುದು
ಕುಟುಂಬಕ್ಕೆ ಧಕ್ಕೆಯಾಗದಂತೆ ನೀವು ನೋಡಿಕೊಳ್ಳ ಬೇಕಾಗಬಹುದು
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Oct 01, 2024 | 12:05 AM

Share

ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಕನ್ಯಾ ಮಾಸ, ಮಹಾನಕ್ಷತ್ರ: ಹಸ್ತಾ, ಮಾಸ: ಭಾದ್ರಪದ, ಪಕ್ಷ: ಕೃಷ್ಣ, ವಾರ: ಮಂಗಳ, ತಿಥಿ: ಚತುರ್ದಶೀ, ನಿತ್ಯನಕ್ಷತ್ರ: ಉತ್ತರಾಫಲ್ಗುಣೀ, ಯೋಗ: ಶುಕ್ಲ, ಕರಣ: ಭದ್ರ, ಸೂರ್ಯೋದಯ ಬೆಳಗ್ಗೆ 06 ಗಂಟೆ 23 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 20 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 03:21 ರಿಂದ ಸಂಜೆ 04:51, ಯಮಘಂಡ ಕಾಲ ಬೆಳಿಗ್ಗೆ 09:23ರಿಂದ 10:52ರ ವರೆಗೆ, ಗುಳಿಕ ಕಾಲ ಮಧ್ಯಾಹ್ನ 12:22 ರಿಂದ 01:52 ರವರೆಗೆ.

ಮೇಷ ರಾಶಿ: ನೋವಿಗೆ ನೋವು ಕೊಡುವುದು ಸರಿಯಲ್ಲ. ನೀವು ಆಡಿದ ಮಾತುಗಳು ಎಲ್ಲವೂ ಸತ್ಯವಾಗುವಂತೆ ನಿಮಗೆ ಅನ್ನಿಸುವುದು.‌ ಕುಟುಂಬಕ್ಕೆ ಧಕ್ಕೆಯಾಗದಂತೆ ನೀವು ನೋಡಿಕೊಳ್ಳ ಬೇಕಾಗಬಹುದು. ಪ್ರೇಮಜೀವನಕ್ಕೆ ನೀವು ಒಗ್ಗಿಕೊಳ್ಳುವುದು ಕಷ್ಟವಾದೀತು. ಸಂಗಾತಿಯ ಸಲಹೆಯನ್ನು ನೀವು ಪಡೆದುಕೊಳ್ಳಲಿದ್ದೀರಿ. ಮಕ್ಕಳ ಸಂತೋಷದಲ್ಲಿ ನೀವು ಭಾಗಿಯಾಗುವಿರಿ. ನಿಮ್ಮ ಸಂತೋಷವನ್ನು ಕೆಲವರಿಗೆ ಸಹಿಸುವುದು ಕಷ್ಟವಾದೀತು. ಎಷ್ಟೋ ವರ್ಷದ ಹಳೆಯ ಗೆಳೆಯರು ಒಂದಾಗುವ ಸಾಧ್ಯತೆ ಇದೆ. ಕಳೆದುಕೊಂಡಿದ್ದರ ಬಗ್ಗೆ ಲೆಕ್ಕ ಹಾಕುವುದು ಬೇಡ. ಮಾರಾಟದಲ್ಲಿ ಏನಾದರೂ ಹೊಸ ಯೋಚನೆಗಳು ಹುಟ್ಟಿಕೊಳ್ಳುವುದು. ಆತ್ಮವಿಶ್ವಾಸ ಕೊರತೆ ಎದ್ದು ಕಾಣಬಹುದು. ಸುಲಭವಾಗಿ ಸಿಕ್ಕುವುದನ್ನು ನೀವು ಕಷ್ಟದಿಂದ ಪಡೆದುಕೊಳ್ಳಲಿದ್ದೀರಿ. ನೆನಪಿನ ಶಕ್ತಿಯು ಕಡಿಮೆ ಆಗಲಿದೆ. ಮಾನಸಿಕ ಒತ್ತಡವನ್ನು ನಿಯಂತ್ರಣಕ್ಕೆ ತಂದುಕೊಳ್ಳುವುದು ಉತ್ತಮ.

ವೃಷಭ ರಾಶಿ: ಒಮ್ಮೊಮ್ಮೆ ನಿಮಗೇ ದಾರಿ ತಪ್ಪಿದಹಾಗೆ ಅನ್ನಿಸುವುದು. ಇಂದು ಬಹಳ ಸುಖವಾಗಿರುವ ದಿನ. ನೀವೇ ಶ್ರೇಷ್ಠ ಎಂಬ ಭಾವನೆ ನಿಮಗೆ ಬರಲಿದೆ. ಕಾಲದಿಂದ ನೀವು ಮುಕ್ತರಾಗಿ ಸಂತೋಷಪಡುವಿರಿ. ಮನೆಯಲ್ಲಿ ಮಂಗಲಕಾರ್ಯಕ್ಕೆ ಆಸಕ್ತಿಯನ್ನು ತೋರುವಿರಿ. ಅಪರಿಚಿತರು ನಿಮಗೆ ಸಮಸ್ಯೆಯನ್ನು ತರುವರು. ನಿಮ್ಮನ್ನು ನಾಯಕರನ್ನಾಗಿ ಆಯ್ಕೆ ಮಾಡುವರು. ಪಾಲುದಾರಿಕೆಯನ್ನು ಸುಲಭಕ್ಕೆ ಬಿಟ್ಟುಕೊಡಲಾರಿರಿ. ಕಛೇರಿಯ ಕೆಲಸಗಳನ್ನು ನೀವು ಅನಾಯಾಸವಾಗಿ ಮಾಡುವಿರಿ. ಅನಾರೋಗ್ಯದ ಕಾರಣದಿಂದ ನೀವು ಹಣವನ್ನು ಖರ್ಚು ಮಾಡಬೇಕಾಗಬಹುದು. ವಿಶ್ರಾಂತಿಯಿಂದ ಇಂದಿನ ಕಾರ್ಯವು ಪೂರ್ಣವಾಗದು. ಸಮಯಕ್ಕೆ ಸರಿಯಾಗಿ ನಿಮ್ಮ ಕೆಲಸಕ್ಕೆ ಯಾರಾದರೂ ಸಿಕ್ಕಾರು. ನಿಮ್ಮ ಮೌನವನ್ನು ಮುರಿದು ನಿಮ್ಮ ಅಭಿಪ್ರಾಯವನ್ನು ತಿಳಿಸುವುದು ಉತ್ತಮ. ಸ್ಥಾನಕ್ಕೆ ಚ್ಯುತಿ ಬಾರದಂತೆ ನಡೆದುಕೊಳ್ಳುವುದು ಉತ್ತಮ. ಇಂದಿನ‌ ಸ್ನೇಹಿತರ ಭೇಟಿಯಿಂದ ನಿಮ್ಮಲ್ಲಿ‌ ಉತ್ಸಾಹವನ್ನು ಜಾಗರೂಕಗೊಳಿಸುವುದು.

ಮಿಥುನ ರಾಶಿ: ನಿಮಗೆ ಖರೀದಿಯಲ್ಲಿ ಮೋಸವಾಗಲಿದೆ. ನೀವು ಇಂದು ಹೊಸ ಪಾಲುದಾರಿಕೆಯಲ್ಲಿ ಕೆಲಸವನ್ನು ಆರಂಭಿಸಲು ಯೋಚಿಸುವಿರಿ. ಸಂಗಾತಿಗಳ ನಡುವೆ ಸ್ವಪ್ರತಿಷ್ಠೆ ಹೆಚ್ಚಾಗಿ ಕಾಣಿಸಿಕೊಳ್ಳಬಹುದು. ಬಂಧುಗಳು ನಿಮ್ಮ ಸಂಕಷ್ಟಕ್ಕೆ ನೆರವಾಗಬಹುದು. ನಿಮ್ಮ‌ ಪ್ರಯಾಣವನ್ನು ಮುಂದಕ್ಕೆ ಹಾಕಲಿದ್ದೀರಿ. ಹೊಸ ಪರಿಚಯದ ನಡುವೆ ಆತ್ಮೀಯತೆ ಬೆಳೆಯಬಹುದು. ನೇರ ಮಾತುಗಳು ನಿಮಗೇ ಮುಜುಗರ ತರಬಹುದು. ಸ್ತ್ರೀಯರ ಜೊತೆ ಮಾತನಾಡುವುದು ನಿಮಗೆ ಇಷ್ಟವಾದೀತು. ನಿಮ್ಮ ಸ್ವಭಾವದಲ್ಲಿ ಬದಲಾವಣೆ ಕಾಣಿಸಿಕೊಳ್ಳುವುದು. ಯಾರ ಜೊತೆಗೂ ಮಾತನಾಡಲು ನಿಮಗೆ ಇಷ್ಟವಾಗದು. ಇಂದಿನ‌ ಕೆಲಸಗಳು ವಿಳಂಬವಾಗಬಹುದು. ಕೇಳಿದಷ್ಟು ಹಣವನ್ನು ಕೊಟ್ಟು ಹೊಸ ವಸ್ತುವನ್ನು ಖರೀದಿಸುವಿರಿ. ಶ್ರಮದಿಂದ ದೇಹ ಮನಸ್ಸುಗಳು ಭಾರವಾಗುವುವು. ಏಕಾಂತವಾಗಿ ನಿಮ್ಮ ಕೆಲಸವನ್ನು ಸಾಧಿಸಿಕೊಳ್ಳುವಿರಿ. ಉದ್ಯೋಗದ ಕಾರಣದಿಂದ ಬೇರೆ ಕಡೆ ಇದ್ದರೂ ಮನೆಯ ನೆನಪು ಬರಬಹುದು.

ಕರ್ಕಾಟಕ ರಾಶಿ: ಪುಣ್ಯ ಪ್ರದೇಶದ ಸಂಚಾರದಿಂದಲೇ ನಿಮ್ಮ ನಕಾರಾತ್ಮಕ ಅಂಶಗಳು ದೂರಾಗುವುವು. ನಿಮ್ಮ ಆತುರವು ಕೆಲಸವನ್ನು ಹಾಳುಮಾಡಿಕೊಳ್ಳಲು ಸಾಕು. ನಿಮ್ಮ ವ್ಯವಹಾರದಲ್ಲಿ ಹಸ್ತಕ್ಷೇಪವನ್ನು ಮಾಡುವುದು ಇಷ್ಟವಾಗದು. ಹಳೆಯ ನೆನಪುಗಳು ನಿಮ್ಮ ಕಾಡಬಹುದು. ಎಲ್ಲ ರೀತಿಯಿಂದ ಹೊಂದಿಕೆ ಆಗುವವರ ಜೊತೆ ಸ್ನೇಹವನ್ನು ಮಾಡುವಿರಿ. ಕೃಷಿಯ ಕೆಲಸದಲ್ಲಿ ನಿಮಗೆ ಉತ್ಸಾಹ ಕಡಿಮೆ ಆಗಬಹುದು. ಸಾಲವನ್ನು ಮಾಡವ ಸ್ಥಿತಿ ಬರಬಹುದು. ಕುಶಲ ಕರ್ಮಗಳನ್ನು ಮಾಡಲು ಕಲಿಯುವಿರಿ. ಸಂಶೋಧನೆಗೆ ಹೆಚ್ಚಿನ‌ ಒತ್ತು ಸಿಗಬಹುದು. ಕೆಲವರು ನಿಮ್ಮ ನಂಬಿಕೆಗೆ ಘಾಸಿಯನ್ನು ಉಂಟುಮಾಡಬಹುದು. ಮಿತ್ರರಂತೆ ಇರುವವರನ್ನು ನೀವು ತಿಳಿದುಕೊಳ್ಳುವಿರಿ. ಒತ್ತಡದಿಂದ ನಿಮಗೆ ಯಾವುದೇ ಕ್ರಿಯಾತ್ಮಕ ವಿಚಾರಗಳು ಸೂಚಿಸದೇ ಹೋಗಬಹುದು. ಸಮಯೋಚಿತ ನಿರ್ಧಾರವನ್ನು ತೆಗೆದುಕೊಳ್ಳುವಿರಿ. ಪ್ರಭಾವೀ ವ್ಯಕ್ತಿಗಳಿಂದ ಕೆಲಸವನ್ನು ಮಾಡಿಸಿಕೊಳ್ಳುವಿರಿ. ಕೆಟ್ಟವರ ಸಹವಾಸವು ನಿಮಗೆ ಗೊತ್ತಿಲ್ಲದೇ ಆಗುತ್ತದೆ.

ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?